ಒಟ್ಟು 1734 ಕಡೆಗಳಲ್ಲಿ , 106 ದಾಸರು , 1498 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ನೀನೇ ಪಾಲಿಸೋ ನಿನ್ನ ಪೆರತುಂಟೆ ಕರುಣಿಪರು ಪ ಶಿರವರನೆ ತವ ಕರುಣಪಾಂಗವು ಉರುತರದ ಶುಭಕರವು ಶರಣಗೇ ಸ್ಮರಿಪ ಮಾತ್ರದಿ ಶರಣ ಪ್ರಲ್ಹಾದ ನಿರುಪಮದ ಪದ ಭರದಿಯೈದಿದ 1 ಮಾರಮಣ ನಿನ್ನ ಶೇರಿ ನೆನೆವರ ಘೋರ ಸಂಕಟ ದೂರಗೈವುದು ಕರಿ ಬಾರೆನುತ ಹರಿಪಾರ ಮಾಡಿದಿ ನೀರಜಾಕ್ಷನೆ 2 ಪತಿತ ಪಾವನ ನುತಿಪನ ಘನಂ ತತಿಯುಡಗಿ ಶತವ್ಯಯನೆ ಎನಿಸುವಾ ಗತಿಕೊಡಲು ನರಸಿಂಹವಿಠ್ಠಲ ಸ್ಮøತಿಸಿದಜಮಿಳ ಗತಿಮುದಪ್ರದ 3
--------------
ನರಸಿಂಹವಿಠಲರು
ಹರಿಯೆ ಯನ್ನ ಧೊರೆಯೆ ನಿನ್ನಮರೆಯ ಹೊಕ್ಕೆನೊ ಸಿರಿಯರಮಣ ಪ ಸಕಲ ಲೋಕಗಳನುನೀನೇ ಸೃಜಿಸುವಾತನು ಸುಖದಿ ಪ್ರಾಣಿಗಳನು ನೀನೆ ಸಲಹುವಾತಾನು ಪ್ರಕಟವಾದ ಜಗವ ನೀನೆ-ಪ್ರಳಯಗೈವನು ನಿಖಿಲ ಜೀವಸಾಕ್ಷಿಯಾಗಿ ನಿತ್ಯನೀನೆನಿಯಮಿಸುವನು 1 ಸ್ಥೂಲಸೂಕ್ಷ್ಮರೂಪನೀನೆ ಮೂಲಪುರುಷನು ಲೀಲೆಯನ್ನು ಪ್ರಕಟಗೈವ ಕಾಲರುಪನು ನೀಲ ಲೋಹಿತಾದಿ ವಿಬುಧಜಾಲ ವಂದ್ಯನು ಪಾಲಿತಾಖಿಲಾಂಡ ರಮಾಲೋಲ ಸುಗುಣಜಾಲ ಶ್ರೀ 2 ಪರಮ ಪುರುಷ ಪಂಕಜಾಕ್ಷ-ಪತಿತ ಪಾವನ ಶರಧಿಶಯನ ಸಕಲಲೋಕ ಸಂವಿಭಾವನ ವಿಶ್ವ ಮೋಹನ ದುರಿತ ಗಜಮೃಗಾಧಿರಾಜವರದ ವಿಠಲ ವಿಹಗಯಾನ 3
--------------
ಸರಗೂರು ವೆಂಕಟವರದಾರ್ಯರು
ಹರಿಯೆ ಸ್ವತಂತ್ರ ಚತುರದಶ ಭುವನಕೆ | ಪರಮೇಷ್ಠಿ ಶಿವಾದ್ಯರಾತಗೆ ದಾಸರೆನ್ನು ಪ ಹರಿಹರರ ಒಂದೇ ಸ್ಥಾನದಲಿ ಕಾಣುವೆನೆಂದು | ಪರಮ ಭಕುತಿಯಿಂದ ಕ್ರೋಧಮುನಿಪ || ಧರಣಿಯೆಲ್ಲ ತಿರುಗಿ ಶುಕ್ಲವತೀ ತೀರಕೆ ಬರಲು | ವಸಂತ ಕಾಲದಂತೆ ಪೊಳಿಯೇ1 ತಪಸಿ ತಪವನೆ ಮಾಡುತಿರಲು ಖರಾಟಖಳ | ಉಪಹತಿ ಕೊಡುತಿಪ್ಪ ವರಬಲದಿ || ವಿಪುಳದೊಳಗಿವಗೆಲ್ಲಿ ಎದುರಾರು ಇಲ್ಲದಿರೆ | ಸುಪರ್ಣಾದಿ ಮೊರೆ ಇಡಲು ಬೊಮ್ಮಗೆ2 ಪರಮೇಷ್ಠಿ ಹರಿಯ ಬಳಿಗೆ ಬಂದು | ಖಳನ ಕೋಲಾಹಲವ ಬಿನ್ನೈಸಲು || ಪುಲಿತೊಗಲಾಂಬರನ ಸಹಿತ ಸರ್ವೋತ್ತಮನ | ಒಲಿಮೆಯಿಂದ ಬಂದು ಸುಳಿದರಾಗಂದು 3 ದಾನವನ ಕೊಂದು ದೇವತೆಗಳ ಸುಖಬಡಿಸಿ | ಜ್ಞಾನಕ್ರೋಢಮುನಿ ಮನಕೆ ಪೊಳೆದು || ಆನಂದದಿಂದಲಿ ನಿಂದು ಮೆರೆದ ಲೀಲೆ | ಏನೆಂಬೆನಯ್ಯ ಹರಿಹರ ವಿಚಿತ್ರಾ 4 ಪ್ರವಿಷ್ಠ ಕೇ| ಶವನು ತಾನೆ ಕಾಣೊ ಸ್ವಾತಂತ್ರನು || ಇವರು ಶಂಕರನಾರಾಯಣನೆಂಬೊ ಪೆಸರಿನಲಿ | ಅವನಿಯೊಳು ಪ್ರಖ್ಯಾತರಾಗಿ ನಿಂದಿಹರೋ 5 ಎರಡು ಮೂರುತಿಗಳು ನೋಳ್ಪರಿಗೆ | ಶ್ರೀ ನಾರಾಯಣಗೆ ಈಶ ಸಮನೇ 6 ಚಕ್ರ ಶಂಖ ಗದೆ ಪದುಮ ಹರಿಗೆ ನೋಡು | ಮುಕ್ಕಣ್ಣಗೆ ಡಮರುಗ ತ್ರಿಶೂಲವು || ಮುಖ್ಯ ದೇವತಿ ಹರಿ ಅವಾಂತರ ಶಿವನು | ಶಕ್ರಾದ್ಯರೊಲಿದು ಭೇದವನು ಪೇಳುವರು 7 ಸತ್ಯಂ ವದವೆಂಬ ಶ್ರುತಿವರದು ಪೇಳುತಿದೆ | ಭೃತ್ಯ ರುದ್ರನು ಕಾಣೊ ಲಕುಮಿವರಗೆ || ಸತ್ಯದಲಿ ಸಿದ್ಧವಯ್ಯ ಎಂದು ತಿಳಿದು | ಸ್ತೌತ್ಯ ಮಾಡಿದವಗೆ ವೈಕುಂಠ ಪದವಿ 8 ಕ್ರೋಢ ಪರ್ವತವಿದೆ ತೀರ್ಥ ಪಾವನಕರ | ನಾಡೊಳಗೆ ಕ್ಷೇತ್ರ ಉತ್ತಮ ಮಾನವಾ || ಪಾಡಿದರೆ ವಿಜಯವಿಠ್ಠಲರೇಯ ಒಲಿದು |ಕೂಡಾಡುವನು ದೃಢ ಭಕುತಿಯಿತ್ತು ಅನುದಿನಾ 9
--------------
ವಿಜಯದಾಸ
ಹರಿಯೇ ನಿನ್ನಯ ಭಕ್ತಿಯದರವೊಂದುಳಿದು ನಾ ಸಿರಿಯರಸನೆ ನಿನ್ನೊಳನ್ಯ ಕೇಳೆನು ರಂಗಾ ಪ ಪತಿ ಬೇಡ ಸುತೆ ಬೇಡ ಸತತ ಶ್ರೀ ಹರಿ ನಿನ್ನ ದ್ಯಾನವ ಕೊಡಲೋ 1 ಭವ ಬೇಡ ಪತಿತ ಪಾವನ ನಿನ್ನ ಸ್ತೋತ್ರವ ಕಲಿಸೋ 2 ಕರಿ ಬೇಡ ಹಣ ಬೇಡ ಮನೆ ಬೇಡ ಸಿರಿ ಚೆನ್ನಕೇಶವನ ಮಹಿಮೆಯ ತಿಳಿಸೋ 3
--------------
ಕರ್ಕಿ ಕೇಶವದಾಸ
ಹರಿಯೇ ನೀನೇ ಗತಿ ಕೇಶವನೇ ಹರಿಯೇ ನೀನೇ ಗತಿ ಪ ಸುರನರ ವಂದ್ಯನೆ ಪರಮ ಪಾವನನೇ ಗಿರಿಪುರವಾಸನೇ ವಸುಮತಿ ಪತಿಯೇ 1 ಅಂಬುಜಲೋಚನ ವಸುದೇವ ಸುತನೇ ತುಂಬೂರ ನಾರದ ಗಾನ ಸೇವಿತನೇ 2 ವಾಸುಕಿಶಯನನೇ ಚನ್ನ ಕೇಶವನೇ 3
--------------
ಕರ್ಕಿ ಕೇಶವದಾಸ
ಹರಿಸಿರಿ ರಮಣಿಯೆ ಕರಗಳ ಮುಗಿಯುವೆ ವರಮತಿ ನೀಡೆನಗೆ ಪ ಸರಸಿಜಾಕ್ಷನ ವಕ್ಷಸ್ಥಳದಿ ನಿವಾಸಿಯೆ ನಿರುತದಿ ಹರಿಪಾದ ಸ್ಮರಣೆ ಎನಗೆ ಕೊಡು ಅ.ಪ ಮಂದರೋದ್ಧರ ಗೋವಿಂದ ಗುಣಗಳಾ- ನಂದದಿ ಸ್ತುತಿಸಿ ಹಿಗ್ಗುವ ಜನನಿ ಇಂದಿರೆ ರಮೆ ಭಾರ್ಗವಿಯೆ ನಿನ್ನಯ ಪಾದ ದ್ವಂದ್ವಕೆ ನಮಿಪೆ ಸುಗಂಧಿ ಸುಂದರಿಯೆ 1 ಪರಮಪುರುಷ ಪುರುಷೋತ್ತಮನರಸಿಯೆ ಪಾವನಿ ಜನನಿ ಸುರರು ಕಿನ್ನರರು ಕಿಂಪುರುಷರು ಸ್ತುತಿಪರು ವರ ಮಹಾಲಕ್ಷ್ಮಿ ಸುಂದರಿ ಜಯ ಜಯ ಎಂದು 2 ಗಂಗಾಜನಕ ಪಾಂಡುರಂಗ ನಿಜ ಸತಿ ಭೃಂಗಕುಂತಳೆ ಭಾಗ್ಯದ ಖಣಿಯೆ ಅಂಗಜಜನಕ ವಿಹಂಗವಾಹನನ ಪಾ- ದಂಗಳ ಸ್ಮರಣೆಲಿ ನಲಿವ ಮನವ ಕೊಡು 3 ಪಕ್ಷಿವಾಹನ ಕಮಲಾಕ್ಷನ ಮಹಿಮೆಯ ವೀಕ್ಷಿಸಿ ಮನದಿ ಹಿಗ್ಗುವ ಜನನಿ ರಾಕ್ಷಸನಾಮ ವತ್ಸರದಲಿ ಭಕುತರ ಮೋಕ್ಷದಾತನು ಸಲಹುವ ಸುಜನರನು4 ಕಮಲಸಂಭವ ಕಮಲಾಲಯೆ ಹರಿಪಾದ ಕಮಲಭೃಂಗಳೆ ಹಿರಣ್ಯಹರಿಣಿ ಕಮಲನಾಭ ವಿಠ್ಠಲನೊಡಗೂಡಿ ಹೃ- ತ್ಕಮಲದಿ ಶೋಭಿಸು ಎನುತ ಸ್ತುತಿಸುವೆನು 5
--------------
ನಿಡಗುರುಕಿ ಜೀವೂಬಾಯಿ
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಹಸ್ತ ಪ್ರಕ್ಷಾಲ್ಯೆಂಬುದು ಇದೆ ನೋಡಿ ನಿತ್ಯಾನಿತ್ಯ ವಿಚಾರಮಾಡಿ ಧ್ರುವ ವಿವೇಕವೆಂಬುದೆ ಉದಕ ಪವಿತ್ರಮಾಡಿತು ಮೂರು ಲೋಕ ಭವದೆಂಜಲ ಹೋಯಿತು ನಿಸ್ತುಕ ಪಾವನಗೈಸಿತು ಸ್ವಸುಖ 1 ಹೋಯಿತು ಭ್ರಾಂತಿ ವಿಕಳ ಶ್ರಯದೋರಿತು ಸಾಯೋಜ್ಯ ಢಾಳ 2 ಭವ ಅಂಜಿಕ್ಯಾರಿಸಿತು ಗುರುಜ್ಞಾನ ಮಹಿಪತಿಗಿದೆ ಭೂಷಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಾವಿಗೆಯ ಮಹಾಪೂಜೆ ನೋಡಿ ಪಾಪಾಖ್ಯ ನಿತ್ಯ ಹಾಡಿ ಪ ಮನುಜನ್ನ ಭೋಕ್ತರಿಕಾಯೈದಿ ಧನದಾತ ಸವಸನ ಭೂಷಣ ವಿದ್ಯಾ ಕನಕ ವಿನಯದಿಂದಲಿ ಇಲ್ಲಿ ತನಕ ಬಂದು ಘನವಾಗಿ ಬೇಡುವರು ಮುಕ್ತಿ ಅಹಿಕಾ 1 ಪಾದ ಕರ್ಮ ಭೂ ಮಿವಾಸ ಮಾಳ್ಪೆನೆಂದಲ್ಲಿಂದ ಇಳಿದು ಪಾವಮಾನಿ ಮತ ಪೊಕ್ಕು ಸುಳಿದು 2 ಒಂದೊಂದು ಪರಿಯಲ್ಲಿ ಸಾಗಿ ಸಾರಿ ನಿಂದಿರದೆ ಇಪ್ಪದು ಕಾವ ಲೇಸಾಗಿ ಅಂದದಿಂದಲಿ ಮೌಳಿ ತೂಗಿ ವೇಗ ಕುಂದನಿಷ್ಟವಾಯಿತು ತಾನೆ ಪೋಗಿ3 ಬೇಕಾದರ್ಥವ ಕೊಡುವದು ವಾಕುವರ ಸಿದ್ಧಿ ಲೋಕ ತುಂಬಿದೆ ಇದೆ ಸುಧಿಕೀರ್ತಿ ತಾ ಕೊಂಡಾಡಿದರಾಗೆ ಬಲು ಚಿತ್ತ ಶುದ್ಧಿ 4 ಸತ್ಯಾಗಿ ಸತ್ಯಬೋಧಯತಿ ಕೈಯ ಗುರು ಸತ್ಯಪ್ರೀಯ ಸ್ತೌತ್ಯರಾಮನ್ನ ಹಾವಿಗೆಯ ನಂಬೆ ಭೃತ್ಯವತ್ಸಲ ವಿಜಯವಿಠ್ಠಲ ಸಹಾಯ5
--------------
ವಿಜಯದಾಸ
ಹಿತವಾವುದದೆ ಪಥದಿ ಸತತದೆನ್ನಿರಿಸೊ ಮತಿಹೀನನ್ಹಿತದ ಪಥವರಿಯೆ ಹರಿಯೆ ಪ ಅರಿವಿಗರಿವು ನೀನು ಮರೆಯಮಾನವ ನಾನು ಹರಿದಾಸರರಸ ನೀ ಚರಣದಾಸನು ನಾನು ದುರಿತ ಪರಿಹರ ನೀನು ದುರಿತಕಾರಿಯು ನಾನು ದುರಿತ ಪರಿಹರಿಸೆನ್ನ ಪೊರೆಯೊ ಸಿರಿದೊರೆಯೆ 1 ಜೀವಜೀವೇಶ ನೀ ಜೀವನಾಧಾರ ನೀ ಪಾವನೇಶ್ವರ ನೀ ಭಾವಿ ಭಕ್ತನು ನಾ ಭವರೋಗದ್ವೈದ್ಯ ನೀ ಭವದ ರೋಗಿಯು ನಾನು ಭವರೋಗ ಪರಿಹರಿಸಿ ಪಾವನನೆನಿಸಭವ 2 ನಾಶರಹಿತನು ನೀನು ನಾಶಕಾರಿಯು ನಾನು ನಾಶನದಿಂದುಳಿಸೆನ್ನ ಪೋಷಿಸಲಿ ಬೇಕೊ ಅನುದಿನ ಮೀಸಲಮನದಿಂದ ಶ್ರೀಶ ಶ್ರೀರಾಮ ನಿಮ್ಮ ದಾಸನೈ ನಾನು 3
--------------
ರಾಮದಾಸರು
ಹಿರಿಯ ಮಗಳಿಂದ ಶ್ರೀಕರನಪದ ಸೇರೊ ಬರಿದೆ ಯೋಚನೆಯಿಂದ ಬೇಸರಗೊಳದಿರು ಪ. ಕಾಮಕ್ರೋಧಗಳನ್ನು ಭೌಮಿಯಲಿ ದೂಡುವಳು ವ್ಯಾಮೋಹ ಮದಲೋಭ ಮತ್ಸರಗಳಿಂ ಸೀಮೆಯಿಂಧೊರಗ್ಹಾಕಿ ಡಂಭಹಿಂಸಾನೃತದ ನಾಮವಡಗಿಸಿ ಪೂರ್ಣ ಕಾಮನನು ತೊರೆವ 1 ಭಾವ ಶುದ್ಧಿ ವಿವೇಕ ಬಾಲಕರನೆತ್ತುವಳು ಪಾವನತ್ವವ ಮಾಡಿ ತೂಗುತಿಹಳು ದಾವ ಕುಲಕು ದಶೇಂದ್ರಿಯ ದುಷ್ಟ ತುರಗಗಳ ಭಾವ ಕೆಡದಂದದಲಿ ಕಾವ ಕಮಲಾನನದ 2 ತನುವೆಂಬ ಮನೆಯ ಶುದ್ಧಿಯ ಗೈದು ಸುಜ್ಞಾನ ವೆನಿಸುತಿಹ ದೀವಿಗೆಯ ತೋರುತಿಹಳು ಮೂರ್ತಿ ಮನದೊಳಗೆ ನೆಲೆತೋರ್ಪ ವಿನಯ ವೆಂಕಟಪತಿಯ ನೆನವೆನಿಪ ಹರಿಭಕ್ತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೀನ ಬುದ್ಧಿಯ ಹಿಂದೆ ದೂಡುವ ಪ ಕಲಿಮಲಾಪಹನೆಂದು ಪಾಡುವ ಕಲುಷರಾಶಿಯ ಕಳೆದುಕೊಳ್ಳುವ ಹಲವು ಭವದಲಿ ಬಳಲದಂದದಿ ನಳಿನನಾಭನ ನಂಬಿಕೊಳ್ಳುವ 1 ದೇಹ ಗೇಹ ವ್ಯಾಮೋಹ ಭಾರದಿ ಚೋದಗೊಂಡರೆ ಚಕ್ರಿವೊಲಿವನೆ ನಾಹಮೀಶ್ವರೊ ಎಂದು ತಿಳಿದು ದಾ- ಸೋಹಮೆಂಬ ಸನ್ನಾಹಗೊಳ್ಳುವ 2 ಪಂಕಜಾಪತೇ ಪತಿತ ಪಾವನ ವೆಂಕಟೇಶದಾಸೌಘ ಜೀವನ ಕಿಂಕರಾರ್ತಿಹ ಕರುಣದಿಂದಲಾ- ತಂಕವಿಲ್ಲದೆ ಸ್ವಾಂಕ ಕೊಡುವನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ ಮೂರು ಕಾಲದ ಸಾಕ್ಷಿ ಪರಮಾತ್ಮನೇ ಅವನೇ ಜಗದಾಧಿವಾಸ ಪ ಆಕಾರದೊರ ಏಕಾಂತಪೂರ ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ ಮನೋವಾಣಿಗೆದೂರ ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ ಹೃದಯಾಧಿವಾಸ 1 ಮನವೆಲ್ಲ ಉಡುಗಿ ಅನಿಸಿಕೆಯಡಗಿ ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ ತಾನೇ ತಾನಾಗಿರ್ದ ಚಿನ್ಮಾತ್ರನೆ ಅವನೆ ಆನಂದರೂಪ ಹೃದಯಾಧಿವಾಸ 2 ಅವನೇ ನಾನೆಂದು ತಿಳಿ ಈಗ ನಿಂದು ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ ಇವನೇ ಗುರುಶಂಕರೇಶ ಹೃದಯಾಧಿವಾಸ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಹೆಣ್ಣೆನವರ ಹೆಮ್ಮೆ ನೋಡಿರೀ ಜನರೆ ನೀವು ಪ ಕಣ್ಣು ಸನ್ನೆ ಮಾಡಿ ಮಾಡಿ ಕಾರ್ಯವನ್ನು ತೂಗಿಸುವರು ಅ.ಪ ಅರ ಪಾವು ರವೆಯು ಶಾವಿಗೆ ಮಾಡಿ ಭಾವದಲ್ಲಿ ಹಿಗ್ಗಿಗ್ಗಿ ತಾವು ಪ್ರಸ್ತಮಾಡುತಿಹರು 1 ಭಕ್ಷ್ಯ ಭೋಜ್ಯವೆಂಬುದದು ಲಕ್ಷ್ಯವಿಲ್ಲ ಮಾತಿನಲ್ಲಿ ಕುಕ್ಷಿತುಂಬ ಭೋಜನವಿಲ್ಲ ದಕ್ಷಿಣೆಯು ದ್ವಿಜರಿಗೆ ಕಾಣೆ 2 ವರಗೆ ಕೊಟ್ಟ ವಸ್ತ್ರ ಪಾತ್ರೆ ವರ್ಣಿಸಲೊಂದು ಬಾಯಿ ಸಾಲದು ಗುರುರಾಮ ವಿಠಲನೆ ಬಲ್ಲ 3
--------------
ಗುರುರಾಮವಿಠಲ
ಹೇ ಪಾಪಿ ಮನಸೇ ನೀ ನಾರಾಯಣೆನೆಲೋ ಅಪಾರ ಮಹಿಮನ ಮಹಿಮೆ ತಿಳಿದು ನೋಡೋ ಪ ‘ನಾ’ ಎಂಬೋ ಮಹದಾದಿಬೀಜದಕ್ಷರ ತುದಿ ನಾಲಿಗೆಯಿಂದ್ಹೊರಡುವನಿತರೊ ಳ್ಹಿಂದಿನ ನಾನಾಜನುಮದ ಪಾಪ ಪರ್ವತವೆಲ್ಲವು ನಿವೃತ್ತಿಯಾಗಿ ಮಹ ಪಾವನನೆನಿಪುದು 1 ‘ರಾ’ ಎಂದು ಮುಖದಿಂದ ಹೊರಟ ಕೂಡಲೆ ಸರ್ವ ರವರವನರಕದ ಯಾತನಳಿದು ಭವ ರೋಗವೆಲ್ಲನು ನೀಗಿ ಕಾಯಕರ್ಮವ ಕಡಿದು ರಾಜಿಪ ಪರಲೋಕ ಸದರವೆನಿಸುವುದೆಲೊ 2 ‘ಯ’ ಎಂದು ನುಡಿಯುತಲೆ ಜನುಮ ಸಫಲವಾಗಿ ಎಷ್ಟೋ ಕೋಟ್ಯಜ್ಞದ ಪುಣ್ಯ ಫಲವು ದೊರಕಿ ಯಮನ ಭೀತಿಯ ಗೆಲಿಸಿ ದಾಸರೊಲುಮೆ ಲಭಿಸಿ ಎಸೆವ ತ್ರಿಕಾಲಜ್ಞಾನ ಸ್ಥಿರವಾಹುದೆಲೊ 3 ‘ಣ’ ಎಂದು ಸಂಪೂರ್ಣ ಉಚ್ಚರಿಸಿದ ಮಾತ್ರವೆ ಕರತಲ ಮಾಗಿ ನಿತ್ಯ ನಿರ್ಗುಣನಂಘ್ರಿ ಕಂಗಳೊಳ್ಹೊಳೆಯುತ ನಿತ್ಯಾನಂದದ ಪದವಿ ಕೈವಶವಹದೆಲೊ 4 ನಿರಾಮಯ ಶ್ರೀರಾಮ ನಿಗಮಗೋಚರ ನಿರಂಜನ ನಿಜಗುಣನನುಪಮಮಹಿಮೆ ನಿಜಮತಿಯಿಂದರಿತು ನಿರ್ಮಲ ಮನಸಿನಿಂ ನೆನೆಯಲು ಘನಮುಕ್ತಿ ಸಾಮ್ರಾಜ್ಯ ಪಡೆಯುವಿ 5
--------------
ರಾಮದಾಸರು