ಒಟ್ಟು 4310 ಕಡೆಗಳಲ್ಲಿ , 119 ದಾಸರು , 2738 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಪಿಯ ನೋಡೆ ಬಡಿಸುವ ಪಾಪಿಯ ನೋಡೆಪಾಪಿಯ ನೋಡೆ ಪಾಪದ ಪಿಶಾಚಿಪಾಪಿಯ ಮೋರೆಯ ನೋಡಬಾರದಕ್ಕೆ ಪ ಅನ್ನವನೀಗ ಇಷ್ಟಿಷ್ಟು ಹಾಕುವಳು ಅತ್ತಲಾಗಿ ಇಡುವಳುಏನು ಇಷ್ಟೆಂದು ಕೇಳಲು ಅರಿಯಿರಿ ಹೊಟ್ಟೆಯೆಂದು ಎದುರಿಗೆ ನಿಂತೆ ಮುಸಿ ಮುಸಿ ನಗುವಳು 1 ಆಜ್ಯವ ಹಾಕೆನೆ ಅಲ್ಲಾಡುತಲಿ ಅರಿಯಿರಿ ಬೇಸಗೆ ಸೆಖೆ ಎಂತೆಂಬಳುಮಜ್ಜಿಗೆ ಹಾಕೆನೆ ಮಂದಮತಿಗಳ ಮಹಾಶೈತ್ಯವು ಬೇಡವು ಎಂತೆಂಬಳು 2 ಉತ್ತಮರೆಂದರೆ ಒಳ್ಳೆಯದಿಕ್ಕಳು ಉಬ್ಬಿಸಹೋದರೆ ಉಬ್ಬದಿಹಳುನಿತ್ಯ ಚಿದಾನಂದ ಸತ್ಪುರುಷರಿಗೆ ನಿಶ್ಚಯವಾಗಿ ಉಣಬಡಿಸುವಳು 3
--------------
ಚಿದಾನಂದ ಅವಧೂತರು
ಪಾರ್ಥನರಸಿಯರು ಪ್ರಾರ್ಥಿಸಿ ಕೈಮುಗಿಯೆ ತೀರ್ಥಯಾತ್ರೆಗಳೆಲ್ಲಾ ಕ್ಷೇತ್ರ ಮೂರ್ತಿಗಳು ಗೆಲಿಸಲಿ ಪ. ರಾಮೇಶ್ವರ ಕಂಚಿ ಪ್ರೇಮದಿ ಕುಂಭಕೋಣಸ್ವಾಮಿ ಶ್ರೀ ರಂಗ ತೋತಾದ್ರಿಸ್ವಾಮಿ ಶ್ರೀ ರಂಗ ತೋತಾದ್ರಿಬೇಲೂರು ಚೆನ್ನನ ಮೊದಲೆ ಬಲಗೊಂಬೆ 1 ಅಹೋಬಲ ಮೊದಲಾದ ಆ ವೆಂಕಟಾದ್ರಿ ಅಲ್ಲಿರೊ ಅನಂತ ಅಳಗಿರಿಅಲ್ಲಿರೊ ಅನಂತ ಅಳಗಿರಿ ದರ್ಭಶಯನದೇವರ ಮೊದಲೆ ಬಲಗೊಂಬೆ 2 ದೇವ ಜನಾರ್ಧನ ಕಾಯೊ ಸಾರಂಗಪಾಣಿಭಾವ ಭಕ್ತಿಲೆ ನಮಿಸೇವ ಭಾವ ಭಕ್ತಿಯಲೆ ನಮಿಸೇವ ಚಕ್ರಪಾಣಿ ಬೇಗ ಗೆಲಿಸೆಂದು 3 ಅಕ್ಕ ಶ್ರೀಮುಷ್ಣಿವಾಸ ಮುಖ್ಯಚಲುವರಾಯದೇವಕ್ಕಳಿಗೆ ವರವ ಕೊಡುವೋಳುದೇವಕ್ಕಳಿಗೆ ವರವ ಕೊಡುವೋಳು ಕನ್ಯಾಕುಮಾರಿ ಮುಖ್ಯಳ ಮೊದಲೆ ಬಲಗೊಂಬೆ4 ಛಾಯಾಭಗವತಿ ನಮ್ಮ ಕಾಯೆ ಕರುಣಾಂಬುಧೆಸಹಾಯವಾಗಮ್ಮ ಕಾಲಕಾಲಸಹಾಯವಾಗಮ್ಮ ಕಾಲಕಾಲಕೆಬ್ರಮ್ಹನ ತಾಯ ಗೆದ್ದು ಬರಬೇಕು 5 ಸುಬ್ರಹ್ಮಣ್ಯ ಸಾಸಿ ಒಬ್ಬ ಶ್ರೀ ಕೃಷ್ಣರಾಯ ನಿರ್ಭಯದಿ ಸ್ವಾದಿ ನಿಲಯನೆನಿರ್ಭಯದಿ ಸ್ವಾದಿ ನಿಲಯನೆ ತನುಮನಉಬ್ಬಿ ವಂದಿಸುವೆ ಕರುಣಿಸು6 ಹಂಪಿವಿರೂಪಾಕ್ಷದಿ ನಿಂತು ಪೂಜೆಯಗೊಂಬಯಂತ್ರೋದ್ದಾರಕಗೆ ಒಲಿದವನೆಯಂತ್ರೋದ್ದಾರಕಗೆ ಒಲಿದ ರಾಮೇಶನಕಾಂತೆಯರ ಗೆದ್ದು ಬರಬೇಕು 7
--------------
ಗಲಗಲಿಅವ್ವನವರು
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪಾರ್ವತೀ - ಶರ್ವನ ಜಾಯೆ - ಪಾರ್ವತೀ ಪ ದಿವಿಜ ಧ್ವಂಸ | ಶರ್ವಾದಿ ದಿವಿಜೇಡ್ಯಸಾರ್ವಭೌಮನ ಸ್ಮøತಿ | ಸಾರ್ವಕಾಲದಲೀಯೆ ಅ.ಪ. ಪತಿ ಮಾರ ಜನನಿ ತಾಯೇ 1 ಸುರಪ ಗಣಪರ ಮಾತೆ ಶರ್ವೇ | ನಿನ್ನವರ್ಣಿಸಿ ಪೊಗಳಲೆನ್ನಳವೇ | ನೀನೆಕರುಣದಿ ಪೇಳಿಸೆ ಬರೆವೇ | ಎನ್ನಉರುತರ ಅಜ್ಞಾನವ ಬಲ್ಲೆ | ಆಹಕರಣಗಳೊಳು ನಿಂತು | ನಿರುತ ಪ್ರೇರಕಳಾಗಿಹರಿಗುಣ ದ್ಯೋತಕ | ಸ್ಮರಣೆ ಸುಖವ ನೀಯೆ 2 ಮೃಡನಂತರಂಗಳೆ ತಾಯೇ | ಎನ್ನಕಡು ಕರುಣದಿಂದಲಿ ಕಾಯೇ | ಇನ್ನುಧೃಡ ಹರಿ ಭಕುತಿಯ ನೀಯೆ | ಅನ್ಯಬೇಡೆನು ನಾ ಪಾರ್ವತೀಯೇ | ಆಹಮೃಡವಂದ್ಯ ಗುರು ಗೋ | ವಿಂದ ವಿಠ್ಠಲನನಡು ಹೃದಯದಿ ನೋಳ್ಪ | ಧೃಡಮತಿಯನು ಕೊಡೆ 3
--------------
ಗುರುಗೋವಿಂದವಿಠಲರು
ಪಾಲನುತ ಶ್ರೀಶೈಲಮಂದಿರ ಮಲ್ಲಿಕಾರ್ಜುನ ರಕ್ಷಿಸು ಪ ಏಳುಕೊಳ್ಳಗಳೇಳು ನೆಲೆಗಳ ಮೇಲೆ ತೋರ್ಪ ಲಿಂಗನೆ ಕಾಲಕಾಲದಿ ಬಾಲನೆಂದೆನ್ನ ಮಲ್ಲಿಕಾರ್ಜುನ ರಕ್ಷಿಸು 1 ಶೀಲ ಭಕುತರ ಪಾಲಿಸಲು ಪಾತಾಳಗಂಗೆಯ ನಿರ್ಮಿಸಿ ಪಾಲಿಸಿದಿ ಬುವಿ ಪಾಲಿಸಿ ವರ ಮಲ್ಲಿಕಾರ್ಜುನ ರಕ್ಷಿಸು 2 ಸಾರಸೌಖ್ಯ ನೀಡುದ್ಧಾರ ಮಾಡಿದ ಮಲ್ಲಿಕಾರ್ಜುನ ರಕ್ಷಿಸು 3 ಅಂಗಜಹರ ಗಂಗಾಧರ ಗುರುಲಿಂಗಜಂಗಮಾತ್ಮಕ ಭವ ಮಲ್ಲಿಕಾರ್ಜುನ ರಕ್ಷಿಸು 4 ಕಾಲಕಾಲ ಕಾಲಕೇಶ್ವರ ಶೂಲಪಾಣಿಯೆ ನಂಬಿದೆ ಕಾಲನ ಮಹದಾಳಿ ಗೆಲಿಸೆನ್ನ ಮಲ್ಲಿಕಾರ್ಜುನ ರಕ್ಷಿಸು 5 ಕಳೆದೆ ದಿನಗಳ ಇಳೆಯ ಸುಖಮೆಚ್ಚಿ ತಿಳಿಯದೆ ತವಮಹಿಮೆಯ ಒಲಿದು ಕ್ಷಮಿಸೆನ್ನ ಬಾಲನೆಂದೆತ್ತಿ ಮಲ್ಲಿಕಾರ್ಜುನ ರಕ್ಷಿಸು 6 ಅಷ್ಟವರ್ಣ ವಿಶಿಷ್ಟಭಕ್ತಿಯ ಕೊಟ್ಟು ಕುರಣಾದೃಷ್ಟಿಯಿಂ ಅನುದಿನ ಮಲ್ಲಿಕಾರ್ಜುನ ರಕ್ಷಿಸು 7 ದುಷ್ಟಭವಕಿನ್ನು ಹುಟ್ಟಿಬರುವಂಥ ಕೆಟ್ಟ ಬವಣೆಯ ತಪ್ಪಿಸು ಇಷ್ಟದಾಯಕ ಮುಟ್ಟಿಪೂಜಿಪೆ ಮಲ್ಲಿಕಾರ್ಜುನ ರಕ್ಷಿಸು 8 ಪರಕೆ ಪರತರ ಪರಮಪ್ರಕಾಶ ವರದ ಶ್ರೀರಾಮಮಿತ್ರನೆ ಮರೆಯ ಬಿದ್ದೆನು ಕರುಣಿಸಿ ಮುಕ್ತಿ ಮಲ್ಲಿಕಾರ್ಜುನ ರಕ್ಷಿಸು 9
--------------
ರಾಮದಾಸರು
ಪಾಲಯ ಕೃಪ ಆಲಯ ಬಾಲಗೋ ಪಾಲ ಬೇಗ ಪಾಲಿಸು ಪಿಡಿದೆನ್ನ ಪ ನಿತ್ಯನಿರ್ಮಲ ಸತ್ಯಚರಿತ ದೇವ ಸತ್ಯಭಾಮೆಯ ಪ್ರಿಯನಾಥ ಸ್ವಾಮಿ ನಿತ್ಯನಿಗಮ ವೇದವಿನುತ ಜಗ ಕರ್ತು ಕಾರುಣ್ಯರಸಭರಿತ ಆಹ ಭಕ್ತಾಂತರ್ಗತ ಕಾಲಮೃತ್ಯುಸಂಹರ ಸ ಚ್ಚಿತ್ತಾನಂದ ಹರಿ ಸತ್ಯ ಸರ್ವೋತ್ತಮ 1 ದಿನಮಣಿಕೋಟಿಪ್ರಭಾಕರನುತ ವನಜಸಂಭವ ಸುರನಿಕರ ದಿವ್ಯಗುಣ ಘನನಿಧಿಗಂಭೀರ ಜೀಯ ಅನುಪಮ ಭೂಗಿರಿವರ ಆಹ ಮನಸಿಜಪಿತ ಮನುಮುನಿಮನಮಂದಿರ ತನುತ್ರಯದಲಿ ನಿನ್ನ ನೆನಹನು ಪಾಲಿಸು 2 ಶ್ಯಾಮಸುಂದರ ಕೋಮಲಾಂಗ ಭಕ್ತ ಕಾಮಿತಫಲಪ್ರದಪುಂಗ ದುಷ್ಟ ಸೋಮಕಸುರಮದಭಂಗ ಪುಣ್ಯ ನಾಮಕ ಸುಜನತರಂಗ ಆಹ ತಾಮಸ ಪರಿಹರ ಭೂಮಿಜನಕ ಜಯ ಕ್ಷೇಮ ಕರುಣಿಸು ಮಮಸ್ವಾಮಿ ಶ್ರೀರಾಮಯ್ಯ3
--------------
ರಾಮದಾಸರು
ಪಾಲಯಮಾಂ ಪಾರ್ವತಿಯೆ ಪಾಪ ವಿನಾಶಿನಿ ತಾಯೆ ಶೀಲ ಮೂರುತಿ ಶಿವೆ ಈ ಜಾಲ ಸಂಸಾರದಿ ಪ. ತ್ರಿಜಗ ಪೂಜಿತೆ ನಿನ್ನ ಭಜಿಸೂವಾಮನವಿತ್ತು ಸುಜನರಾಪ್ತೆಯೆ ಎನ್ನಾ 1 ರಾಗ ರಾಗದಿ ನಿನ್ನ ಅನುರಾಗದಿಂ ಪೂಜಿಪೆ ಭಾಗ್ಯವನು ಕೊಟ್ಟು ನೀ ವೈರಾಗ್ಯ ಭಕ್ತಿಯನು 2 ಅರಿಶಿಣ ಕುಂಕುಮವನ್ನು ವರ ಮಾಂಗಲ್ಯದಾ ಭಾಗ್ಯ ನಿರುತದಿ ನೀಡುತ ಪೊರೆಯೆ ಶ್ರೀ ಶ್ರೀನಿವಾಸ ಸಹೋದರಿಯೆ3
--------------
ಸರಸ್ವತಿ ಬಾಯಿ
ಪಾಲಯಮಾಂ ಸುಶೀಲೇಂದ್ರ ಸನ್ಮಹಿಮ ಶಾಲಿ ಶ್ರೀವರದ ಕೂಲ ನಿವಾಸ ಪ ಅನಿಲಮತಾಂಬುಧಿ | ಅನಿಮಿಷಧೀರ ಅನುಪಮ ಚರಿತ ಸದ್ಗುಣ ಗಂಭೀರ ಮುನಿ ಸುವೃತೀಂದ್ರ ಸನ್ಮಾನಸ ನಿಲಯ 1 ಕರುಣ ಭರಿತ ಶರಣು ಸುಪ್ರೀತ ಪರಮ ಪುರುಷ ಸುವೃತೀಂದ್ರ ಕುಮಾರ ಕುಲಿಶ ಸುಧೀರ 2 ಕೋವಿದರೊಡೆಯ ಪಾವನಕಾಯ ಭೂವಿಭುದಾವಳಿ ಸೇವಿತ ಸದಯ ಶ್ರೀವರ ಶಾಮಸುಂದರಗತಿ ಪ್ರೀಯ 3
--------------
ಶಾಮಸುಂದರ ವಿಠಲ
ಪಾಲಿಸಯ್ಯ ಪೂರ್ಣ ಲೋಲ ಲಕ್ಷುಮಿರಮಣ ಧ್ರುವ ಮುನಿವರ ಪಾಲಕ ಘನ ಸುಖದಾಯಕ ಕನಕಾಂಬರಧರ ಕಸ್ತೂರಿ ತಿಲಕ ಅನಾಥ ಬಂಧು ಅರ್ತ ರಕ್ಷಕ 1 ಸಮಸ್ತಕೆ ನೀ ದಾತ ವಿಮಳ ವಿರಾಜಿತ ಕಮಲ ಸಂಭವಸುತ ಸೋಮಜು ವರಪ್ರಿಯ ಕಾಮಪೂರಿತ 2 ಅನಂಗಜನಕ ಅಣುರೇಣುವ್ಯಾಪಕ ದೀನ ಮಹಿಪತಿಗೆ ನೀ ಬೀರೊ ಸ್ವಾನಂದಸುಖ ಅನಂತಕೋಟಿ ಬ್ರಹ್ಮಾಂಡನಾಯಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಲಿಸು ಅವಾಂತರೇಶಾ ಪಾವನ ಕೋಶಾ ಪಾಲಾಬ್ದಿ ಶಯನನ ದಾಸಾ ಕಾಲ ಜನಕ ವಿಶಾಲಮಹಿಮಾರೈಯಿ ಲೋಲಾ ಜೀವೋತ್ತಮ ಕಾಲಕಾಲಕೆ ಎನ್ನ ಪ ಪುಣ್ಯಗಾತುರ ಮಾರುತಾ ಪುಂಜಿತ ಜೀವಾ ಗಣ್ಯರಹಿತ ಗುಣಜಾತಾ ಮನ್ಯುದಾನವ ಕುಲಘಾತಾ ಮಹಾತತ್ವ ದಾತಾ ಸನ್ನ್ಯಾಯಮಣಿ ಶ್ರುತಿಗೀತಾ ಧನ್ಯನ ಮಾಡೊ ಅನ್ಯನೇನೊ ನಾನು ಕಾ ರುಣ್ಯದಿ ದುರಿತಾರಣ್ಯ ಮನ್ಮಥ ಲಾ ಗುಣ್ಯ ಮನದಾ ಕಾರ್ಪಣ್ಯವ ಓಡಿಸಿ 1 ದ್ವಿತೀಯ ನಿರ್ಜರವರೇಣ್ಯ ದೀನನುಗಣ್ಯ ದಿತಿಜಾವಳಿಗೆ ಕಾಠಿಣ್ಯ ಸತತ ಅಪ್ರತಿರಾಜ್ಯನ್ಯಾಸ ಚರಾಚರಮಾನ್ಯಾ ತುತಿಸುವೆ ಕೇಳು ದೈನ್ಯ ಗತಿ ನೀನೆ ಕ್ಷಿತಿಯೊಳಗಿತರರ ಕಾಣೆನೊ ಸತಿಪತಿ ಮಿಗಿಲಾದ ತುತುವೇಶ ತತಿಗಳ ಜಿತ ಸದ್ಗುರು ಭಾರಿತ ಪ್ರತಿಪಾದ್ಯ ಮಾರುತಿ ಮತಿಯಲಿ ನಿನ್ನ ಮತದಲಿ ಪೊಂದಿಸಿ 2 ವಿಕಸಿತ ಸದನಾ ಜ್ಞಾನ ವಿಶೇಷ ಧ್ಯಾನಾ ಅಖಿಳ ವಿಚಾರ ನಿದಾನಾ ಅಕಳಂಕವಾದ ಬಹುಮಾನಾ ಅಮೃತಪ್ರಾಣಾ ಸಕಲಕ್ಕು ನೀನೇ ಪವಮಾನಾ ಸುಖಸಾಗರ ಸುರನಿಕರವಿನುತ ಮಹಾ ಭಕುತ ಭವಾಬ್ಧಿತಾರಕ ವಿಷಭಂಜನ ಲಕುಮಿವಲ್ಲಭ ನಮ್ಮ ವಿಜಯವಿಠ್ಠಲನ್ನ ನಖ ಕೊನೆ ಪೊಗಳುವ ಉಕುತಿ ನೀಡಿಂದು 3
--------------
ವಿಜಯದಾಸ
ಪಾಲಿಸು ಪರಮಾತ್ಮನೆ ಪಾವನ ಗುಣ- ಶೀಲ ಸದ್ಗುಣಧಾಮನೆ ಪ ಶ್ರೀಲಕುಮಿಯ ಪ್ರಿಯ ಶ್ರೀಶಸರ್ವೋತ್ತಮ ವಾಸವವಂದಿತ ವಾಸುದೇವನೆ ಹರಿ ಅ.ಪ ಕೇಶವ ನಾರಾಯಣ ಮಾಧವ ಗೋವಿಂದ ವಿಷ್ಣುವೆ ನಮಿಪೆ ಮಧುಸೂದನ ತ್ರಿವಿಕ್ರಮ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭನೆ ಪೊರೆ ದಾರಿ ಕಾಣೆ ದಾಮೋದರ ಸಂ_ ವಾಸುದೇವ ಪ್ರದ್ಯುಮ್ನನನಿ- ರುದ್ಧ ಪುರುಷೋತ್ತಮ ಅಧೋಕ್ಷಜ ನಾರಾಸಿಂಹ ಅಚ್ಚುತ ಜನಾರ್ದನ ಉ- ಪೇಂದ್ರ ಹರಿ ಶ್ರೀ ಕೃಷ್ಣ ಶೌರಿ1 ವಾರಿ ವಿಹಾರದಲಿ ಬೆನ್ನಿಲಿ ಗಿರಿ ಭಾರವನ್ನೆ ತಾಳಿ ಕೋರೆ ತೋರುತ ಕರುಳ್ಹಾರವ ಮಾಡಿದ ಮೂರಡಿ ಭೂಮಿಯ ಬೇಡಿ ಭೂಪಾಲನ ಕಾಡಿ ಕೆಡಹುತ ಕೂಡಿ ಕಪಿಗಳ ಬೇಡಿ ಪಾಲ್ಮೊಸರ್ಬೆಣ್ಣೆ ಬುದ್ಧನೀ- ನಾಗಿ ಖಡ್ಗವಧರಿಸಿ ಕುದುರೆಯ- ನೇರಿ ಮೆರೆಯುವ ಶ್ರೀ ರಮಾಪತೆ 2 ಶಾಂತೀಶ ಅನಿರುದ್ಧನೆ ಶರಣೆಂಬೆ ನಿನ್ನ ಕೃತಿಪತಿ ಪ್ರದ್ಯುಮ್ನನೆ ಜಗದೀಶ ಜಯಾಪತಿ ಜಯ ಸಂಕರ್ಷಣ ದೇವ ನಮಿಪೆ ಮಾಯಾಪತಿ ವಾಸುದೇವನೆ ನಿನ್ನ ಪಂಕಜ ತೋರು ಲಕ್ಷ್ಮೀ- ರಮಣ ನಾರಾಯಣ ನಮೋ ಗರಡು ಗಮನನೆ ಕಮಲನಾಭ ವಿ-ಠ್ಠಲನೆ ಶ್ರೀಹರಿ ಪರಮ ಕರುಣಿಯೆ 3
--------------
ನಿಡಗುರುಕಿ ಜೀವೂಬಾಯಿ
ಪಾಲಿಸು ಪಾಲಿಸು ಪಾಲಿಸು ಸುಮನಾ ಪಾರ್ವತಿ ತಾಯೇ ಪ. ಪಾಲಿಸು ಶ್ರೀ ರಜತಾದ್ರಿನಿವಾಸಿ ಶೀಲಮೂರುತಿ ಶಿವಶಂಕರಿ ದೇಹಿಮೆ ಅ.ಪ. ಮನಕಭಿಮಾನಿ ಮಾನುನಿರನ್ನೆ ಸರ್ವ ತನುಮನನಿನಗರ್ಪಿಸಿಹೆನೆ ತಾಯೆ ಕಾಯೆ ಅನುದಿನ ನಿನ್ನಯ ಚರಣವ ಪೂಜಿಪ ಮನವಿತ್ತು ಕರುಣದಿ ನಿನ್ನ ತನುಜರಿಗೇ ನೀಡೆ 1 ಪಂಕಜಗಂಧಿನಿ ಪಂಕಜಾಕ್ಷಿಯೆ ಶಿವ ನಂಕದಿ ಅಲಂಕೃತ ಮಾತೆ ಸುಗೀತೆ ತಾಯೆ ಅಂಕುರವಾಗುವ ತೆರ ನಿನನಾಮವ ಕಿಂಕರರಿಗೆ ನೀಡಿ ದಯಮಾಡೆ ತಾಯೆ 2 ಶ್ರೀಶ ಶ್ರೀ ಶ್ರೀನಿವಾಸ ಸಹೋದರಿ ಈಶನೈಯ್ಯನೈಯ್ಯನೊಲಿಸುವ ಮರೆಯ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಪಾಲಿಸೆ ಪದುಮಾಲಯೆ, ನೀನೇ ಗತಿ ಪ ಬಾಲಕನು ತಾನಾಗಿ ಗೋಪಿಗೆ ಲೀಲೆಯಿಂದಲಿ ನಂದ ಗೋಕುಲ- ಬಾಲೆಯರ ಮೋಹಿಸುತ ಅಸುರರ ಕಾಲನೆನಿಸಿದ ಬಾಲಕನ ಪ್ರಿಯೆ ಅಪ ಅನ್ಯರ ನೆನೆಯಲೊಲ್ಲೆ ನಿನ್ನಯ ಪಾದ- ವನ್ನು ನಂಬಿದೆ ನೀ ಬಲ್ಲೆ ತಡಮಾಡದೆ ಚಿಣ್ಣ ಕರೆಯಲು ಘನ್ನ ಮಹಿಮನು ಉನ್ನತದ ರೂಪಿನಲಿ ಗುಣಸಂ ಪನ್ನ ರಕ್ಕಸನನ್ನು ಸೀಳಿದ ಪನ್ನಗಾದ್ರಿ ನಿವಾಸೆ ಹರಿಪ್ರಿಯೆ 1 ಅರಿಯದ ತರಳನೆಂದು ಶ್ರೀಪತಿ ಸತಿ ಕರುಣದಿ ಸಲಹೆ ಬಂದು ಕರುಣಾಸಿಂಧು ಸರಸಿಜಾಸನ ರುದ್ರರೀರ್ವರ ವರದಿ ಮೂರ್ಖನು ಸುರರ ಬಾಧಿಸೆ ಹರಿವರರ ದಂಡೆತ್ತಿ ಬಹುಮುಖ ದುರುಳನ ಶಿರ ತರಿದವನ ಪ್ರಿಯೆ 2 ಅಜ ಮನಸಿಜ ಜನನಿ ಅಂಬುಜಪಾಣಿ ನಿತ್ಯ ಕಲ್ಯಾಣಿ ಕುಜನಮದರ್Àನ ವಿಜಯವಿಠ್ಠಲ ಭಜಿಸಿ ಪಾಡುವ ಭಕ್ತಕೂಟವ ನಿಜದಿ ಸಲಹುವೆನೆಂಬ ಬಿರುದುಳ್ಳವಿಜಯಸಾರಥಿ ವಿಶ್ವಂಭರ ಪ್ರಿಯೆ 3
--------------
ವಿಜಯದಾಸ
ಪಾಲಿಸೆನಗೀ ಜ್ಞಾನ ಪಾಲಸಾಗರಶಾಯಿ ಶ್ರೀ ಲೋಲ ನೀ ನಿತ್ಯದಿ ಪ. ಶೀಲಗುಣ ನಿನ್ನ ಏನು ಬೇಡುವುದಿಲ್ಲೊ ಕಾಲರೂಪನೆ ನಿನ್ನನು | ಇನ್ನು ಅ.ಪ. ಒಂದು ಅಸ್ವತಂತ್ರ ಒಂದು ಸರ್ವಸ್ವತಂತ್ರ ಒಂದು ಮನೆಯೊಳಗೆ ಇದ್ದು ಒಂದೆರಡು ಲೋಕಕ್ಕೆ ಒಂದೆ ದೈವನು ಎನಿಸಿ ಒಂದೊಂದರಲಿ ಇರುವ ಒಂದು ಅಪೇಕ್ಷಿಸದೆ ಒಂದೆರಡು ಗುಣದಿಂದ ಒಂದೆರಡು ಮಾಳ್ಪ ಜಗವ ಇಂದಿರೇಶನೆ ನಿನ್ನ ಈ ವಿಧದ ವ್ಯಾಪಾರ ಒಂದೊಂದು ಮನಕೆ ತೋರೋ | ಸ್ವಾಮಿ 1 ಎರಡು ಮಾರ್ಗಗಳಿಹವು ಎರಡು ಕರ್ಮಗಳಿಂದ ಎರಡು ವಿಧ ಸಮ ತಿಳಿದರೆ ಎರಡು ರೂಪಗಳನು ಒಂದಾಗಿ ಭಾವಿಸುತ ಎರಡೊಂದು ಜೀವ ತಿಳಿದು ಎರಡು ಫಲ ಅನುಭವಿಸಿ ಎರಡು ಹರಿಗರ್ಪಿಸುತ ಎರಡು ವಿಧ ಕರ್ತನೆಂದು ಎರಡು ಎಪ್ಪತ್ತು ಸಹಸ್ರನಾಡಿಗಳಲ್ಲಿ ಎರಡು ರೂಪದಲಿರುವ ಪೊರೆವ 2 ಮೂರು ಅವಸ್ಥೆಯಲಿ ಮೂರು ತಾಪವ ಸಹಿಸಿ ಮೂರು ಮಾರ್ಗದಲಿ ನಡೆದು ಮೂರೆಂಟು ಇಂದ್ರಿಯವ ಮೂಲರೂಪದಿ ಲಯಸಿ ಮೂರಾರು ವಿಧ ಭಕ್ತಿಯಲಿ ಮೂರೈದು ನುಗ್ಗೊತ್ತಿ ಮೂರು ಮೂರು ಅರಿಯ ಮೂರು ಶುದ್ಧಿಯಲಿ ಗೆದ್ದು ಮೂರಾರು ಎರಡೊಂದು ಖೋಡಿ ಮತಗಳ ಮುರಿಸಿ ಮಾರುತಿಯ ಮತದಿ ನೆಲಸಿ | ತಿಳಿಸಿ 3 ವಿೂನ ಕೂರ್ಮನೆ ವರಹ ಶ್ರೀ ನಾರಸಿಂಹನೆ ದಾನಯಾಚಕ ಭಾರ್ಗವ ವಾನರರಿಗೊಲಿದನೆ ವೇಣುಹಸ್ತರೂಪಿ ಮಾನವಿಲ್ಲದ ಕಲ್ಕಿಯೆ ಶ್ರೀನಿವಾಸನೆ ನಿನ್ನ ನಾನಾವಿಧ ರೂಪಗಳು ನಾನು ವರ್ಣಿಸಲು ಅಳವೆ ಮಾನಾಭಿಮಾನದೊಡೆಯನೆ ಕೃಷ್ಣ ಕೈಪಿಡಿಯೊ ಭಾನುಪ್ರಕಾಶ ಹರಿಯೆ | ಸಿರಿಯೆ 4 ಶಿರದಲ್ಲಿ ಕಿರೀಟ ಫಣೆಯಲ್ಲಿ ತಿಲುಕವು ಮೆರೆವ ಕುಂಡಲದ ಕದಪು ಕಿರುನಗೆಯ ಪಲ್ಗಳು ಕೊರಳಲ್ಲಿ ಹಾರಗಳು ಕರದಲ್ಲಿ ಆಯುಧಗಳು ಸಿರಿ ಭೂಮಿ ಎಡಬಲದಿ ಸುರನದಿಯ ಪೆತ್ತಪಾದ ಸಿರಿರಮಣ ಗೋಪಾಲಕೃಷ್ಣವಿಠ್ಠಲ ಎನಗೆ ಪರಿ ಪರಿಯ ರೂಪ ತೋರೊ ಸ್ವಾಮಿ 5
--------------
ಅಂಬಾಬಾಯಿ