ಒಟ್ಟು 11400 ಕಡೆಗಳಲ್ಲಿ , 137 ದಾಸರು , 6177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಸರಿ ಪಕರುಣತೊರಿಸು ಕೇಶವಾ ದುರಿತಪಾಶ ಬಿಡಿಸುವಾಸಿರಿರಾಮಕೋಟಿ ನಾಮವಾ ಸ್ಮರಣೆಕೊಟ್ಟೆ ಮಾಧವಾ 1ಭಯನಿವಾರಣಮಾಡಿಸಿ ಪ್ರಜಗಳೆಲ್ಲರಪೋಸಿಜಯಪ್ರದವಹೊಂದಿಸಿ ಜಗತ್ಕೀರ್ತಿನಿಲ್ಲಿಸಿ2ಸಂಘದಿಂದಧ್ಯಾನವಾ ಸಮರಸಸುಜ್ಞಾನವಾಇಂಗಿತಾರ್ಥಾಚರಣವಾ 'ೀಗೆ ನಿಲ್ಲಿಸು ರಾಘವಾ 3ರಾಮಕೋಟಿಸೇವೆಗೆ ರಮ್ಯಜನರು ಕೂಡಿಕೆ ಸಂಭ್ರÀಮದಿಭಜನ ಮಾಡಲಿಕೆ ಸತ್ಯಾಮೃತವನು ಕೊಡಲಿಕೆ 4ಗುರುವು ತುಲಸಿರಾಮನಾ ಪರಮಕೃಪಾಪಾತ್ರನಾಗಿರುವ ರಂಗಸ್ವಾ'ುದಾಸಾರ್ಚಿತ ಶ್ರೀನಾರಾಯಣ 5
--------------
ಮಳಿಗೆ ರಂಗಸ್ವಾಮಿದಾಸರು
ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೇಳವ್ವ ತಂಗಿ ಕೇಳವ್ವ ಕೇಳಿ ತಿಳಿದು ನೀ ಬಾಳವ್ವ ಪ ನೀಲವರ್ಣನ ಕೃಪೆಯ ಪಡೆಯಲಿಕ್ಕೆ ನಾಳೆಂದರೆ ಮನೆಹಾಳವ್ವ ಅ.ಪ ಅಂಬುಜಾಕ್ಷನ ಪಾದಪಕಮಲವ್ವ ನೀ ನಂಬಿದ್ದಿ ಬಿಡಬೇಡ ಸಂಗವ್ವ ನಂಬಿದ ಭಕ್ತರ ಬೆಂಬಲಿಸಾತನು ಇಂಬುಗೊಟ್ಟು ಕಾಯ್ವ ಸಂಭ್ರಮ ಕೀರ್ತೆವ್ವ 1 ಒಂದೆ ಮನಸಿನ ಬಾಗವ್ವ ಗೋ ವಿಂದನ ವರಪಡಿ ಚೆಂದವ್ವ ಮಂದರಧರನ ಹೊಂದಿಕೊಳ್ಳಲಿಕ್ಕೆ ಹಿಂದು ಮುಂದು ನೋಡಬೇಡ ಮುಕ್ತ್ಯವ್ಯ 2 ಒಂದಿನ ಹೋಗ್ವುದು ಸತ್ಯವ್ವ ತಂಗಿ ಸಂದೇಹ್ಯ ಪಡಬೇಡ ಹುಚ್ಚವ್ವ ತಂದೆ ಶ್ರೀರಾಮ ಗತಿಯೆಂದು ನಂಬಲು ನಿನಗೆ ಬಂಧನವೆಲ್ಲ ಬೈಲವ್ವ 3
--------------
ರಾಮದಾಸರು
ಕೇಳಿ ನಗಬಹುದು ಮಜಾತ್ಮರು | ಕೇಳಿ ನಗಬಹುದು | ಹೋಲಿಕೀಲ್ಯಾಡುವ ಜನದ ಜ್ಞಾನದ ನುಡಿ ಪ ದಂಭಮಾನದಲಿ | ಮನಸಿನ | ಹಂಬಲ ಘನವಿರಲಿ | ಥಂಬಿಸಿ ಕರ್ಮವ | ಸರ್ವಂ ಬ್ರಹ್ಮಮಯ | ವೆಂಬುದು ತೋರುವರಾ ನುಡಿಗಳಾ 1 ಆಶಾಪಾಶಗಳು | ವಿಷಯದಿ | ಲೇಸಿಗೆ ಬಿಗಿದಿರಲು | ನಾಶಿವ ನಾ ಬ್ರಹ್ಮನೆಂ | ದೊದರುತ ನಾನಾ | ವೇಷವ ಧರಿಸುವರಾ | ನುಡಿಗಳು 2 ಚಿನುಮಯ ನಿಜ ಸುಖವಾ | ಕಂಗಳ ಕೊನಿಯಲಿ ದೋರಿಸುವಾ | ಘನ ಗುರು ಮಹಿಪತಿ ಪ್ರಭು ಕರುಣಾನಂದ | ಅನುಭವಿಸಿದ ಲ್ಯಾಡುವ ನುಡಿಗಳಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿಕೊ ಗುರುಬುದ್ಧಿ ಮನವೆ ಕೇಳಿಕೊ ಗುರುಬುದ್ಧಿ ಕೇಳಿ ನಡೆಯದಿದ್ದರೆ ನೀನು ಜನ್ಮಕ ಜಾರಿಬಿದ್ದಿ ಮನವೆ ಧ್ರುವ ವೇದಕ ನಿಲುಕದ ಹಾದಿಯದೋರುವ ಸದ್ಗರುವಿನ ಸುಬುದ್ಧಿ ಸಾಧಿಸಿ ನೋಡಲು ತನ್ನೊಳಗ ತಾ ಎದುರಿಡುವುದು ಸುಶುದ್ಧಿ ಭೆದಿಸದಲ್ಲದೆ ತಿಳಿಯದು ಎಂದಿಗೆ ಆದಿ ತತ್ವದ ನಿಜ ಶುದ್ಧಿ ಸುಬೋಧದಲಿ ಗೆದ್ದಿ 1 ತರಣೋಪಾಯಕೆ ಸಾಧನವೇ ಮುಖ್ಯ ಗುರುಬುದ್ಧಿಯ ವಿಶೇಷ ಪರಗತಿ ಸಾಧನ ಪಡೆದೇನಂದರೆ ಗುರು ಮಾತ ಉಪದೇಶ ದೋರುದು ತಾ ಹರುಷ ಭವ ಬಂಧಪಾಶ 2 ಗುರು ಘನಸೌಖ್ಯ ಸುರಮುನಿ ಜನರಿಗೆ ಬಲು ಅಗಮ್ಯದೋರುವದೆ ಆಠಕ್ಯ ತರಳ ಮಹಿಪತಿ ಮನವೆÀ ಕೇಳು ಗುರುರಾಯನ ಸುವಾಕ್ಯ ಪರ ಗೆಲಿಸುವದು ನಿಜಮುಖ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ. ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1 ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2 ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3 ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4 ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5 ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6 ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7
--------------
ಇಂದಿರೇಶರು
ಕೇಳಿರಿ ಕೌತುಕ ಪೇಳುವೆನೀಗ ಶೀಲ ಶ್ರೀ ಗುರುಗಳ ಕರುಣದಲಿ ಪ. ವ್ಯಾಳಶಯನ ರಂಗ ತಾಳಿ ಕರುಣಿಸಿದ ಮೇಲು ಮೇಲು ಭಕ್ತಿಯ ನೀಡುತಲಿ ಅ.ಪ. ಅರಿಯದ ದೇಶದಿ ಅರಿಯದ ಕಾಲದಿ ಅರಿಯದವಸ್ಥೆಯ ಅನುಭವವು ಸಿರಿಯರಸನ ವ್ಯಾಪಾರವಿದಲ್ಲದಡೆ ನರರಿಗೆ ಸಾಧ್ಯವೆ ನಾಡಿನೊಳು 1 ಸಂಭÀ್ರಮದಲಿ ಸಮಾರಂಭವು ಕಲೆತಿರೆ ಬೆಂಬಿಡದಲೆ ರಕ್ಷಿಸುತಿರಲು ಕುಂಭಿಣಿಯೊಳು ಸ್ಥಿರವಾದ ಪದವಿಗೆ ಅಂಬುಜನಾಭನ ಕರುಣವಿದು 2 ಅಗ್ನಿಗಳೆರಡು ಕಲೆತು ಶಾಂತವಾಗಿ ಭಗ್ನವಿಲ್ಲದ ಆನಂದ ತೋರೆ ವಿಘ್ನವಾಗದ ಕಾಲಗಳೊದಗುತ ಮಗ್ನಗೈಸಿತಾನಂದದಲಿ 3 ಚಲಿಸದ ವಸ್ತುಗಳ್ ಚಲಿಸಿತು ಮತ್ತೆ ಚಲನೆಯಿಲ್ಲದೆ ಸುಸ್ಥಿರವಾಯ್ತು ಬಲು ವಿಚಿತ್ರವು ಭೂತಲದೊಳಗಿದು ನಳಿನನಾಭನ ಸಮ್ಮತವು4 ಬಿಂಬನಾಗಿ ಹೃದಂಬರ ಮಧ್ಯದಿ ಸಂಭ್ರಮಗೊಳಿಸೆಲೊ ಶ್ರೀ ವರನೆ ನಿತ್ಯ ಇಂಬುಗೊಟ್ಟು ಕಾಯೊ ಬಿಂಬ ಶ್ರೀ ಗೋಪಾಲಕೃಷ್ಣವಿಠ್ಠಲ 5
--------------
ಅಂಬಾಬಾಯಿ
ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು ಪ ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿರೈಅ ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗಬೇರೊಂದು ಲಿಂಗ ಬೆಲೆ ಮಾಡಿ ತಂದುತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿಯಾರ ಮನಕೊಪ್ಪಿಸುವರೀ ಶೀಲವಂತರು 1 ಲಿಂಗವೊಂದು ತನ್ನೊಳು ಲೀನವಾಗಿರುವಾಗಅಂಗಭವಿಗಳು ಕೂಡಿ ಆಡಿಕೊಂಬರುಅಂಗದನುಭವದರ್ಥವನರಿಯದ ಇಂತಹಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ 2 ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲುಆಗಮಿಸಿದ ಲಿಂಗವ ಬೆದಕಲೇತಕ್ಕೆಕಾಗಿನೆಲೆಯಾದಿಕೇಶವನೆ ನಾಗಶಯನನಾಗಿರಲು ಬೇರೊಂದನರಸಲೇತಕ್ಕೆ 3
--------------
ಕನಕದಾಸ
ಕೇಳಿಸಲೊಲ್ಲದೇನೋ ಕೃಷ್ಣಾ ಕೇಳಿಕೇಳದಂತಿರುವಿಯೇನೋ ಪ ಬಾಳುವೆಯೊಲು ಕೀಳಾದೆನಾನಿಂತುಏಳಿಸೆನ್ನನು ಎಂದು ಕೇಳಿಕೊಳ್ಳುವದಿನ್ನು ಅ.ಪ ಯಾವತ್ತೂ ತಿಳಿದವನು ಎಂಬರು ಎನ್ನನೋವು ತಿಳಿಯದಾಯ್ತೇನುಸಾವಿರ ವಿಥಿಗಳಿದ್ದೆನ್ನಯ ಪಾಲಿಗೆದೇವಾ ಅವಲ್ಲವು ಕಿವುಡಾದವೇನೋ 1 ತುಂಬಿ ನಿಂತಿಹನೆಂಬೀಭಾವಕೆ ನೀನೆಂಬಿ ಆವಾವಜೀವರ ಭಾವವರಿತು ನೀಕಾವುದೆಂತೆಂಬೊ ಈ ವಚನವು ನಿನಗೆ 2 ಭೇದಭಾವವು ಇಲ್ಲೆಂದೂ ಸಾಧಿಸುವವುವೇದಗಳೆಲ್ಲ ಎಂದುಬಾಧೆಯ ಬಿಡಿಸೆಂದು ಬೇಡಿಕೊಳ್ಳುವೆಗದುಗಿನ ಆಧಾರಿ ದೇವನೆ ವೀರನಾರಾಯಣ 3
--------------
ವೀರನಾರಾಯಣ
ಕೇಳು ಒಳ್ಳೆವರ ಕೂಡಾ ನಿನ್ನ ಹಿತವ ಪ್ರಾಣೀ | ತಾಳಿ ನರದೇಹದಿಂದ ಮಾಡುವರೇ ಹಾನಿ ಪ ಮುತ್ತಿನಂಥಾ ದಿನವಿದು | ಸಿಕ್ಕದಣ್ಣಾ ಮುಂದ | ಚಿತ್ತ ಸ್ಥಿರವಾ ಮಾಡಿ ಹರಿಯ ನೆನೆಯಬೇಕು ಇಂದ 1 ಬಾಲನಾಗಿ ಕೆಲವು | ದಿನದಿಂದ ಯೌವನದಿ | ಮ್ಯಾಲ ಯೆಚ್ಚರವ ಬಿಟ್ಟು | ಹರಿಗೆ ವಿಮುಖನಾದಿ 2 ಜರೆಯು ಬಂದ ಕಾಲದಲ್ಲಿ | ತನುವು ತನ್ನದಲ್ಲಾ | ಸರಕು ಮನೆಯೊಳಿಲ್ಲಾ 3 ಈಗಳವೆ ಯಚ್ಚರಿತು | ಹರಿಯಾ ಬಲಗೊಂಡು | ಹಿಂಡು 4 ಶರಣು ಹೋಗುವಾ | ಭಾವಭಕ್ತಿಯಲ್ಲಿ ದಾವಪ್ರೇಮಿ | ತಾರಿಸುವಾ ಗುರು ಮಹಿಪತಿಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಕಂಡ್ಯಾ ಒಂದು ಮನವೇ | ಕೇಳು ಕಂಡ್ಯಾ ಪ ಕೇಳು ಕಂಡ್ಯಾ ವಂದ | ಪ್ರೇಮ ಭಾವದಿಂದ ಬಾಳು ದೀಪರಿಂದ ನಿನಗೆ ಬಂದಕೀದೆ ಛಂದ 1 ವಿಡಿದು ಗುರುಪಾದಾ ಪಡಿಯೋ ನಿಜಬೋಧಾ | ಕಡಿದು ಕಾಮ ಕ್ರೋಧ | ನೀಗು ವ್ಯವಾಧಾ 2 ಅನ್ಯ ಮಾರ್ಗ ನೋಡಾದಿರುವ ಬಲಿದೃಢಾ | ಘನಗುರು ಗೂಢಾ | ವಿದ್ಯೆ ಸಾಧಿಸೆಲೋ ಮೂಢ 3 ದೊಡ್ಡವ ನಾನೆಂಬ ದೋರದೆÉ ನೀಡಂಭ | ಜಡ್ಡಾಗದೇ ಗುಂಭಿ | ನಿಜ ನೋಡಿ ನಿರಾಲಂಬ 4 ಮಹಿಪತಿ ಜನಸೊಲ್ಲ ಹಾದಿಯಂತಿದಲ್ಲ ಮಹಿಮನೇ ಬಲ್ಲನಿದರ ಸವಿಸುಖವೆಲ್ಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳು ಕಲ್ಮಷಹಾರಿ ಕರುಣಾವಾರುಧಿ ಶೌರಿ ತಾಳು ಕ್ಷಮೆಯ ಕೃಪೆದೋರಿ ಕೇಳು ಸಂಸೃತಿ ದುಃಖ ತಾಳಲಾರೆನು ಮಾತ ನಾಲಿಸು ಮಲ್ಲಕಂಸಾರಿ ಪ. ಮೂರೊಂದು ಎಂಬತ್ತು ಲಕ್ಷ ಯೋನಿಗಳನ್ನು ಸಾರಿ ಕಡೆಗೆ ಮಾನುಷ್ಯವನು ಸೇರಿದೆನಿದಿರಲಿ ಷಡ್ವೈರಿ ಗಣವೆನ್ನ ಗಾರು ಮಾಡುವುದನೇನೆಂಬೆ 1 ದೂರಾಪುರದ ಕಾಮ ವಾರುಧಿವಳಗೀಸ ಲಾರದೆ ಬಾಯಬಿಟ್ಟೊರವೆ ಕ್ಷೀರಾಬ್ಧಿಶಯನ ಥಟ್ಟನೆ ಬಂದು ಸಲಹೊ ಮು- ರಾರಿ ನೀನ್ಯಾಕೆನ್ನ ಮರೆವೆ 2 ಬುದ್ಧಿ ಬರುವ ಮೊದಲಿದ್ದ ಪರಿಯು ಮಣ್ಣ ಮುದ್ದೆಯಂತಾಯ್ತನಂತರದಿ ಹದ್ದಿನಂದದಿ ಹಂಗಿನನ್ನವ ಕಾಯುತ್ತ ಇದ್ದೆನು ಪರರ ಮಂದಿರದಿ 3 ಮಧ್ಯವಯಸ್ಸಿನೊಳ್ ಮದನನ ¨ಲೆಯೊಳು ಬಿದ್ದು ಹೊರಳಿ ಬಹು ಬಳಲಿ ಮಧ್ವವಲ್ಲಭ ನಿನ್ನ ಮರೆತೆನು ಮುಂದಾದ- ರುದ್ಧರಿಸೆನ್ನ ಬೇಗದಲಿ 4 ನೇಮವ್ರತಗಳನೊಂದಾದರು ಮಾಡದೆ ಕಾಮಲಾಲಸನಾದೆ ಬರಿದೆ ವ್ಯಾಮೋಹ ಕಡಲಿಗೆ ಕೊನೆಗಾಣೆ ಕಾರುಣ್ಯ ಧಾಮನ ಬಿಡೆ ನಿನ್ನ ಸ್ಮರಣೆ 5 ಸಾಮಜೋದ್ಧಾರ ಸಕಲಸುರವೈರಿ ನಿ- ರ್ನಾಮವತಾರ ಭೂಧಾರ ನಿತ್ಯ ಸವಿದು ಬಾಳುವ ಮುಖ್ಯ ಕಾಮಿತಾರ್ಥವ ನೀಡು ವರದಾ 6 ಸುರಮುನಿ ಪಿತೃಋಣ ಭರವ ನೀಗುವ ಮೂರು ಕಾಲ ಕಳೆದೆ ವರ ದೇವಾಲಯ ಕೂಪಾ ರಾಮಯಜ್ಞಾದಿ ಸ- ತ್ಕರಗಳ ವಾರ್ತೆಯ ತೊರೆದೆ 7 ಗುರು ಹಿರಿಯರ ಸೇವೆ ಮರೆತು ಮನಸಿನಲ್ಲಿ ಸರಿಯಲ್ಲ ಎನಗೆಂದು ತಿಳಿದೆ ಮರಿಯಾದೆ ಗೆಟ್ಟು ಮಾಯಾತಂತು ಬಂಧದೊ- ಳಿರುವೆ ಈ ಪರಿಯಿನ್ನು ಥರವೆ 8 ಲೋಕನಾಯಕ ನಿನ್ನ ಸ್ಮರಣೆ ಒಂದಿದ್ದರೆ ಸಾಕೆಂಬ ಶ್ರುತಿ ಪುರಾಣಗಳು ವಾಕಾನುವಾಕುಗಳು ಸುರಿದ ಸರ್ವಜ್ಞ ಶ್ರೀಕರ ಪಾದದ ಮತವ 9 ಸ್ವೀಕರಿಸುತ ನಿನ್ನ ಸೇವೆ ಮಾಡಲು ಬ್ಯಾರಿ- ನ್ಯಾಕಿನ್ನು ಡಾಂಭಿಕರ ವ್ಯಾಕುಲವ ಬಿಡಿಸಿ ವೆಂಕಟನಾಥ ಕರುಣಿಸ ಬೇಕು ಶ್ರೀವರ ನಿನ್ನ ಪಥವಾ 10
--------------
ತುಪಾಕಿ ವೆಂಕಟರಮಣಾಚಾರ್ಯ