ಒಟ್ಟು 3475 ಕಡೆಗಳಲ್ಲಿ , 128 ದಾಸರು , 2419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತನಲ್ಲವೇ ನಾನು ಹರಿ ಪ ಭಕ್ತನಾದ ಬಳಿಕ ವಿಷಯಸಕ್ತನಾಗೋದುಚಿತವೇ ಅ.ಪ. ಶಕ್ತಿಹೀನನಾದ ಮನವು ಬಯಸುತಿಪ್ಪ ಬಯಕೆ ಪೂರೈಸು ಗುರುವೇ 1 ಪರ ಕಾಮಿನಿಯಳ ನೆನೆವೆ ಕೇಳೋಬಿನ್ನಪ ಕಾಮಹರನೆ 2 ರಾಮನಾಮ ಸುಖದ ಸವಿಯು ಮರೆತೆನೊ ಶಾಮಕಂಧರ ತಂದೆವರದಗೋಪಾಲವಿಠ್ಠಲನಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಭಕ್ತವತ್ಸಲ ಹರಿ ಎಂಬ ಬಿರುದು ನಿನ ಗಿತ್ತವರ್ಯಾರಯ್ಯಾ ಹೇ ಜೀಯಾ ಪ ತತ್ತರಿಸುತಲಿಹರು ಈ ಜಗದೊಳು ಅ.ಪ ಪರಿಪರಿಯಲಿ ನಿನ್ನ ಮೊರೆಯ ಹೊಕ್ಕಿರುವ ಪರಮ ಸುಜನರುಗಳು ಈ ಧರೆಯೊಳು ಒರಳಿಗೊಡ್ಡಿರುವ ಶಿರಗಳುಳ್ಳವರಂತೆ ದುರುಳರ ಭಯದಿಂದ ನರಳುತಿರೆ 1 ವಾಸಕೆ ಗೃಹವಿಲ್ಲ ಲೇಶ ಸುಖಕೆ ಅವ ಕಾಶ ಇವರಿಗಿಲ್ಲ ಈ ಭುವಿಯೊಳು ಶ್ರೀಶನಾಗಿರೆ ನಿನ್ನ ದಾಸರೊಳಗೆ ಪರಿ ಹಾಸ ಮಾಡುತಲಿಹೆಯೋ ಜಗದೀಶ 2 ಪರಿ ಘನ್ನಬಿರುದುಗಳು ಇನ್ನು ಉಳಿವುದೆಂತೋ ನಾ ಕಾಣೆ ಸನ್ನುತಿಸುವವರಿಗೆ ಇನ್ನಾದರು ಸುಖ ವನ್ನು ನೀ ದಯಮಾಡೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು
ಭಜನೆಯೊಂದೇ ಸಾಲದೇ ರಂಗಯ್ಯನ ಭಜನೆಯೊಂದೇ ಸಾಲದೇ ಪ ಅನುದಿನ ಸ್ಮರಿಸಲು ಭಜಕರ ದುರಿತವ ತರಿಯುವ ಪರಿಯ ಅ.ಪ. ಹಿಂದೆ ನೋಡಜಮಿಳ ತರಳ ಪ್ರಲ್ಹಾದರ ಚಂದದಿ ಮೆರೆದ ಗೋಪಾಲ ಬಾಲಕರ ವೃಂದಾವನದೊಳಿದ್ದ ಗೋಪಸೇವಕರ 1 ಕೋಮಲೆ ದ್ರೌಪದಿ ಸಭೆಯೊಳು ಸ್ಮರಿಸಲು ಭಾಮೆಗಕ್ಷಯವಿತ್ತ ಕ್ರೂರ ರಕ್ಷಕನ ಪ್ರೇಮದಿ ಅಹÀಲ್ಯೇ ಶಿಲೆಯೊಳು ಭಜಿಸಲು ಸ್ವಾಮಿ ತಾನೊಲಿದು ಮುಕ್ತಿಯ ಕೊಟ್ಟ ಹರಿಯ 2 ದಶರಥನಲಿ ಬಂದು ದಶಕಂಠನನು ಕೊಂದು ವಸುಮತಿಯನು ಪೊರೆದ ಶ್ರೀ ಹರಿಯ ಪಶÀುಪತಿ ಸಖನಾದ ಪನ್ನಗಶಯನನಅಸುರರ ತರಿದ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಭಜಿಸಿ ಧನ್ಯನಾದೆ ನಾನು ಭುಜಗಶಯನನಂಘ್ರಿಯನ್ನು ಪ ಕುಸುಮ ತರಲು ಸರಸಿಧುಮುಕಿ ಮೊಸಳೆಬಾಯಿಗೆ ಸಿಲುಕಿ ಕರಿಯು ಕಂಟಕ ಗೆಲಿದು ಅಸಮಸೌಖ್ಯ ಪೊಂದಿದ್ದು ಕೇಳಿ 1 ಪಾಪಿ ಕುರುಪನೋಲಗದಲ್ಲಿ ದ್ರೌಪದಿಗೊದಗಿಬರಲು ಭಂಗ ಆಪತ್ತು ಗೆಲಿದಳೆಂಬುದ ಕೇಳಿ 2 ಇಳೆಯೊಳ್ಪತಿಯ ಶಾಪದಿಂದ ಶಿಲೆಯ ರೂಪದಿ ಬಿದ್ದ ಯುವತಿ ಗೊಲಿದು ಪಾವನಾಂಗಿಯೆನಿಸಿ ಕುಲಕೆ ತಂದ ಸುದ್ದಿ ಕೇಳಿ 3 ತ್ಯಜಿಸಿ ತನ್ನ ಬ್ರಹ್ಮಕುಲವ ಕುಜಕುಲದ ನಾರಿಗೆ ಕೆಟ್ಟ ಅಜಮಿಳನ ಅಂತ್ಯಕ್ಕೆ ಒದಗಿ ನಿಜಪದವಿ ನೀಡಿದ್ದು ಕೇಳಿ 4 ಅಂಬುಧಿನಿಲಯ ಅಸಮ ಮಹಿಮ ಕಂಬುಕಂಧರಮಿತ್ರ ಭಕುತ ಬೆಂಬಲ ಶ್ರೀರಾಮ ಪ್ರಭುವೆ ನಿನ್ನ ನಂಬಿದವರ ಸಂಭ್ರಮ ಕೇಳಿ 5
--------------
ರಾಮದಾಸರು
ಭಜಿಸೋ ಮೂಢ ಭಜಿಸದರಿಬೇಡಾ ತ್ರಿಜಗ ವಂದಿತನಾದ ಶ್ರೀಹರಿ ಗಾಢಾ ಪ ಛಂದದಿ ಧ್ಯಾನಾದಿಂದ ಉಲ್ಹಾಸಾ 1 ಗೋಪಿಯಕಂದಾ ಗೋಕುಲಾನಂದಾ ಭೂಪ ಗೋವಿಂದ ಯೆಂದೀಪರಿಯಿಂದಾ 2 ಸುಂದರ ಮೂರುತಿ ಸುಗುಣಾ ಪ್ರಖ್ಯಾತಿ ಮಂದರಗಿರಿ ಪೊತ್ತ ಪಾವನ ಕೀರುತಿ 3 ಮಂಗಳದಾಯಕಾ ಮನ್ಮಥ ಜನಕಾ ಗಂಗೆಯ ಪಡೆದಾ ಕರುಣಾನನೇ ಕಾ 4 ನಿಗಮಗೋಚರನಾ ನೀರಜನಾಭನಾ ಅಗಣಿತ ಮಹಿಮಾನಂತ ಅವತಾರನಾ 5 ಭಕುತ ವತ್ಸಲನ ಮುಕುತಿದಾಯಕನಾ ಅನುದಿನ ನಿಜ ಮುಕ್ಕುಂದನಾ 6 ಇಂದು ಬಿಡದೆ 'ಹೊನ್ನವಿಠ್ಠಲ' ಶ್ರೀ ಕೃಷ್ಣನಾ 7
--------------
ಹೆನ್ನೆರಂಗದಾಸರು
ಭಂಡನಾದೆ ಸಂಸಾರಕೊಂಡದೊಳಗೆ ಬಿದ್ದು ಕಂಡುಕಾಣದಂತಿರುವರೇ ಪುಂಡರೀಕನಯನ ಪ ಅಶÀನ ವಸನಕ್ಕಾಗಿ ದೆಸೆಗೆಟ್ಟು ಬಾಯ್ಬಿಡುತ ಅಸುವ ಕರದೊಳ್ಪಿಡಿದು ವಸುಧೆಯ ಜನರ ಬಸವಳಿದು ಬೇಡಲು ಕಣ್ಣೆಸಿದು ಬೈಯಲು ತಲೆಬಾ ಗಿಸಿಕೊಂಡು ನಿಂದೆ ಹರಿ ಉಸುರಲಳವಲ್ಲ 1 ರೊಕ್ಕದ ಆಸೆಗಾಗಿಕ್ಕೆಲದ ಜನರನ್ನು ತರ್ಕಿಸದೆ ದೈನ್ಯದಿಂ ಚಿಕ್ಕಮಗ ನಾ ಎನುತ ಫಕ್ಕನೆ ಕೈತಾಳನಿಕ್ಕುವರು ನಗಲು ಮಹ ದು:ಖದಿಂ ತಿರುಗಿದೆನು ಬಿಕ್ಕಿಬಿಕ್ಕಳುತ 2 ಯರ ಮೋಹಿಸಿ ದಂಡಿಸಿದೆ ಮನೆಸತಿಯ ಕಂಡವರು ತಿದ್ದಿದರು ಚಂಡಿತನವಿಡದೆ ಕಂಡವರ ಅರ್ಥವನು ಮನೆಸೇರಿಸಿ ಬಂಡೆದ್ದು ಜನರೊಳಗೆ ಮಂಡೆಯೆತ್ತದೆಹೋದೆ 3 ತಪದಿಂದ ಹರಿಪಾದ ಜಪಿಸುವುದ ಮರೆದು ನಾ ಕೃಪಣತ್ವಜನಸೇವೆ ಅಪರೂಪಗೈದೆ ಚಪಲತ್ವತನದಿಂದ ಅಪಹರಿಸಿ ಪರರರ್ಥ ಸುಪಥಕ್ಕೆ ದೂರಾಗಿ ಅಪರಾಧಿಯಾದೆ4 ಕದ್ದು ತಿಂದೆ ನೆರಹೊರೆಯ ಬಿದ್ದೆ ದುರ್ಬವಣೆಯೊಳು ಬದ್ಧನಾಗಿ ಧರೆಮೇಲೆ ಹದ್ದಿನಂತೆ ಬಾಳ್ದೆ ತಿದ್ದಿ ನೀ ಎನ್ನ ತಪ್ಪುಬುದ್ಧಿಯನು ಕಲಿಸೆನ್ನೊ ಳಿದ್ದು ಪೊರೆ ದಯದಿಂದ ಮುದ್ದು ಶ್ರೀರಾಮ 5
--------------
ರಾಮದಾಸರು
ಭದ್ರ ಮೂಜಗದಂತರ್ಯಾಮಿ ಪ ಸಾರ ಸಾಕ್ಷಿಯರೆಲ್ಲಾ ಮುದ್ದು ಸೀತೆ ಸಹಿತ ಹುವ್ವಿನ ಮಂಚದಿ ಮಲಗಿ ಅ.ಪ ಪೋಗಿ ನಿಮ್ಮಯ ಸದನಗಳಿಗೇ | ಉದಯ ವಾಗೋದು ಬನ್ನಿ ಸನ್ನಿಧಿಗೇ ಯೋಗೀ ಜಾಣರು ಪರಮ ಭಾಗವತೋತ್ತಮರು ಸಾಗಿ ಪೋದರು ನಿಜಾಶ್ರಮಗಳಿಗೆಲ್ಲರು 1 ತುಂಬುರಾ ನಾರದಾದಿಗಳು | ವೀಣೆ ತಂಬೂರಿ ದಿವ್ಯನಾದದೊಳು ಗಂಭೀರಾ ಸ್ವರದಿಂದಾಗಾಯನಗಳ ಮಾಡೆ ಸಂಭ್ರಮದಲಿ ಇತರ ಹಂಬಲ ಮರೆತೀಗ 2 ಹದಿನಾಲ್ಕು ಲೋಕಾವನಾಳಿ | ತಾದ- ಣಿದೆನೆಂದು ಜನರಿಗೆ ಪೇಳಿ ಸದಮಲಾತ್ಮಕ ಶ್ರೀ ಗುರುರಾಮ ವಿಠಲ ನಂ-ಬಿದವರಿಗಭಯವ ಕೊಡುವ ಇಚ್ಛೆಯಿಂದ 3
--------------
ಗುರುರಾಮವಿಠಲ
ಭದ್ರಾಮೂರುತಿ ನಿರ್ವಾತಾಂಹ್ವ ಪ ಹೃದ್ರೋಗ ಕಳೆದು ಜ್ಞಾನಾದ್ರ್ರ ಸ್ವಾಂತನ ಮಾಡು ಪದ್ರಾ ಸಾಮಗಾಘ ಸಮುದ್ರ ದಾಟಿಸಿ ಬೇಗ ಅ ಏಸೇಸು ಕಲ್ಪಗಳಲ್ಲಿ ನಿನ್ನಾ ದಾಸನೆಂದು ಎನ್ನ ಬಲ್ಲೀ ಈಶ ನೀನೆಂಬುದು ಲೇಶವರಿಯೆ ಕ್ಲೇಶನಾಶನ ಪ್ರಭುವೆ ವಾರಾಶಿಜೆ ವಲ್ಲಭ ವಾಸವಾನುಜ ವನಧಿಶಯನ ಮ ಹೇಶವಂದಿತ ವರದ ಹೇ ಕರು ಣಾ ಸಮುದ್ರ ಕರಾಳವದನನೆ ನೀ ಸಲಹದಿರೆ ಕಾಣೆ ಕಾಯ್ವರ 1 ಹೇಮ ಕಶ್ಯಪು ತನ್ನ ಸುತನಾ ನೋಯಿಸೆ ಶ್ರೀ ಮನೋಹರನೇ ಆನತನಾ ವ್ಯೋಮ ಪರ್ವತಾಂಬುಧಿ ಧಾಮದೊಳುಳುಹಿದ ಭೂಮ ಸನ್ಮುನಿ ಗಣಸ್ತೋಮ ವಂದಿತ ಪಾದ ಸಾಮಜೇಂದ್ರನನರಸಿಯೊಳು ಸು ತ್ರಾಮನಂದನನಾ ರಣದಿ ಕುರು ಭೂಮಿಪತಿ ಸಭೆಯೊಳಗೆ ದ್ರೌಪದಿ ಯಾ ಮಹಾತ್ಮರ ಕಾಯ್ದ ಕರುಣಿ 2 ವೇದಗಮ್ಯನೆ ವೇದ ವ್ಯಾಸ ಕಪಿಲ ಯಾದವೇಶ ಮಹಿದಾಸ ಶ್ರೀದ ಶ್ರೀಶ ಅ ನ್ನಾದಾ ಕಲ್ಕಿ ಧನ್ವಂತ್ರಿ ಮೇಧಾವಿ ಪತಿಯ ಏವ ಷಾದರೋಗಂಗಳನಳಿದು ಮಹ ದಾದಿದೇವ ಜಗನ್ನಾಥ ವಿಠ್ಠಲ ಆದರದಿ ಪ್ರಹ್ಲಾದವರ 3
--------------
ಜಗನ್ನಾಥದಾಸರು
ಭಯಕೃದ್ಭಯನಾಶನ ಮಾಯಾರಮಣ ಭವಭಯಹರಣ ಪ ಜೀಯ ಕಾಯುವುದಯ್ಯ ಪರಿಹರಿಸಯ್ಯ ತಾಪ- ತ್ರಯ ದಯೆತೋರಯ್ಯ ಎನ್ನೊಡೆಯಾ ಅ.ಪ ನಾನರಿಯೆ ನಿನ್ನಯ ಗುಣಗಣಾದಿಗಳ ಅನುದಿನದಿನಾ ಅನುಭವಿಸಿ ಭವಚಕ್ರದಾಟಗಳ ಜನುಮ ಜನುಮಾಂತರದಿ ಬಂದ ವಾಸನಾದಿಗಳ ದೀನವತ್ಸಲ ದೂರ ನೋಡುವೆಯ ನೀನರಿಯ ಎನ್ನನು ಉಳುಹುವ ಪರಿಯ ಎನಗ್ಯಾರಿಹರೊ ನಿನ್ಹೊರತು ಪೂರೆವರಯ್ಯ ವನಜಸಂಭವನಯ್ಯ ಜೀಯ 1 ಕರಿ ಮಕರಿ ಪಿಡಿಯಲು ಬಂದ ಪರಿಯೇನು ನಿಖಿಳಖಳಕುಲವೈರಿ ಶ್ರೀಹರಿ ಸಿರಿಗೆ ಹೇಳದ್ದೇನು ಭಕುತನಾರ್ತಧ್ವನಿಯ ಕೇಳಿ ಬಂದೆಯಾ ಏನು ನಾನು ಆಸಾಧನವನರಿಯೇನು ಘನ್ನಮಹಿಮ ನಿನ್ನಯ ಕೀರ್ತಿಯನು ಕೇಳಿ ಬಂದೆನು ಇನ್ನೇನು ನಿನಗೆ ಏನು ತೋರಿದಂತೆ ಮಾಡಿನ್ನು ಎನ್ನೊಡೆಯ ನೀನೆಂದಡಿಗೆ ಬಿದ್ದಿಹೆನೊ ಇನ್ನು 2 ಈಸಲಾರೆನು ಸಾರಿ ಈ ಭವಸಾಗರದೊಳಗೆ ಶ್ರೀಶ ನಿನಗತಿಶಯವೆ ಕರುಣವಿಲಾಸ ತೋರೆನಗೆ ದಾಸದಾಸದಾಸರದಾಸ್ಯ ಕೊಡಿಸೆನಗೆ ಶ್ರೀಶ ಎನ್ನಯ ಮನದ ಕ್ಲೇಶವನೂ ನಾಶವಗೈಸು-ನಿರಾಶ್ರಯನಾಗಿಹೆನು ಏಸುಬಲ್ಲೆನು ಕಾಸಿನವನು ಬೇಸರಿಸದಿರು ಇನ್ನೂ-ಮುನ್ನೂ 3 ತಾಪತ್ರಯಗಳಿಂದನುದಿನದಿ ನಾ ನೊಂದೆ ಶ್ರೀಪತಿಯೆ ಹೃತ್ತಾಪಕಳೆದು ಪೊರೆಯಬೇಕೆಂದೆ ಗೋಪನಿನ್ನಯ ಶ್ರೀಪಾದದೊಳು ಮನವ ನೀಡೆಂದೆ ಕುಪಿತವೇ ನಿನ್ನವನು ನಾನೆಂದೆ ಭೂಪ ಆಪತ್ತೋದ್ಧಾರಕನೆಂದೆ ಪಾಪಿಮಾನವಜನುಮದಲಿ ಬಂದೆ ಕಾಪಾಡುವುದು ಎಂದೇ-ತಂದೇ 4 ಭೂಸ್ಥಳದಿ ನಿಂತ ಶ್ರೀ ವೇಂಕಟೇಶ ಹರೇ ತ್ರಿಸ್ಥಳದೊಳು ಈ ಸ್ಥಳವೆ ವೈಕುಂಠ ದೊರೆಯೆ ವಿಸ್ತರದಿ ಮಹಿಮೆಯ ಪಾಡಿ ಪೊಗಳಲು ನಾವು ಶಕ್ತರೆ ಸ್ವಸ್ಥಚಿತ್ತವಿಲ್ಲ ಶ್ರೀಹರೇ ಈ ಸ್ಥಿತಿಯಲ್ಲಿ ಎನ್ನ ನೋಡುವರೆ ದುಸ್ಥಿತಿಯಬಡವನಕೈಯ ಬಿಡುವರೆ-ಶೌರೆ5
--------------
ಉರಗಾದ್ರಿವಾಸವಿಠಲದಾಸರು
ಭರ್ತø ಭವನದಿ ಮಗಳೆ ಚಿರಕಾಲ ಸುಖಿಸೌ ಕರ್ತ ಶ್ರೀಹರಿ ಪದವನರ್ಥಿಯಿಂ ಭಜಿಸೌ ಪ ಪತಿಯೆ ಸಿರಿವರನೆಂದು ಅತಿಶಯದಿ ಭಾವಿಸುತ ಸತತ ಸೇವೆಯ ಮಾಡಿ ಗತಿಯೆ ನೀನೆನುತ ಸತಿಶಿರೋಮಣಿಯಾಗಿ ಮಿಗಿಲು ಮೋದವ ಪಡೆದು ಕ್ಷಿತಿಯೊಳಗೆ ನೀ ಬಾಳು ಮತಿವಂತೆಯಾಗಿ1 ಅತ್ತೆಮಾವಂದಿರನು ತಾಯಿತಂದೆಗಳಂತೆ ಅತ್ತಿಗೆ ನಾದಿನಿಯ ಅಕ್ಕತಂಗಿಯರೋಲ್ ಉತ್ತಮಳೆ ಭಾವನಂ ಮೈದುನನ ಸಹಜರೆಂ ದರ್ಥಿಯಿಂದರಿಯುತ್ತ ಉಪಚರಿಸುತಿರು ನೀಂ 2 ಬಂಧುಗಳ ನೀ ಬಹಳ ಪ್ರೇಮದಿಂ ಕಾಣುತ್ತ ವಂದಿಸುವುದೌ ಪರಮಭಾಗವತರಡಿಗೇ ಇಂದಿರಾದೇವಿಯೆಂದೈದೆಯ ಪೂಜಿಸೌ ಸುಂದರ ವಿದ್ವರ ಸುತರಕೂಡ 3 ಸರ್ವತ್ರದಲಿನೀನು ಹಿತವಚನ ಮಾಡುತ್ತ ನಿತ್ಯ ಪಡೆಯುತ್ತ ಗರ್ವವರ್ಜಿತೆಯಾಗಿ ಗುಣಮುಖಿಯು ಎಂದೆನಿಸಿ ಸರ್ವಕಾಲವು ಗೌರವ ಕೀರ್ತಿಯನು ಬೀರೌ 4 ಜಾಜಿಕೇಶವ ನಿನ್ನ ಸೌಭಾಗ್ಯವತಿಯಾಗಿ ಸಾಜದಿಂ ಸಲಹುವನು ಸುಜನವಂದಿತನು ಪೂಜಿಪರ ಮರೆಯದಿಹ ಶ್ರೀಹರಿಯ ಕರುಣದಿಂ ಈ ಜಗದಿ ರಾಜಿಸೌ ಪರಮಮಂಗಳೆಯೇ 5
--------------
ಶಾಮಶರ್ಮರು
ಭವ ಎನಗೆ ಹರಿುತುಸದಯ ಗೋಪಾಲಾರ್ಯನ ಪದ ಕರುಣವಾಯ್ತೆನಗೆ ಪಮೊದಲು ಬಹು ಜನ್ಮಂಗಳಲ್ಲಿ ಮಾಡಿದ ಪುಣ್ಯಒದಗಿತೀ ಸಮಯದಲಿ ಧನ್ಯನಾದೆಸದಸದ್ವಿವೇಕ ಸಂಪತ್ತಿ ಮುಂತಾದ ಸತ್ವದ ಸಾಧನಂಗಳೊದಗಿದವೀಗಲೆನಗೆ 1ದೇವ ಋ ಪಿತೃ ಋಣಂಗಳು ತಿದ್ದಿದವು ಶುದ್ಧಭಾವನಾದೆನು ಕುಲ ಪವಿತ್ರವಾುತೆನ್ನಾಪಾವನತೆಯಾಗಿ ಜನನೀ ಜನಕರಿಗೆ ದೇವದೇವ ಪದವಾುತು ಕೃತಕತ್ಯ ನಾನಾದೆ 2ಸಕಲ ಸಂದೇಹಗಳಳಿದು ದೇಹಾತ್ಮ ಮತಿವಿಕಲವಾದುದು ನಿತ್ಯ ತೃಪ್ತಿಯಾುತುಪ್ರಕಟ ಗೋಪಾಲಾರ್ಯ ಪದವ ಸಾಕ್ಷಾತ್ಕರಿಸಿಸುಕರ ಸತ್ಯಾನಂದ ರೂಪ ನಾನಾದೆ 3
--------------
ಗೋಪಾಲಾರ್ಯರು
ಭವ ಎನಗೆ ಹಿಂಗಿತು ಪ ಪದುಮನಾಭನ ಪಾದದೊಲುಮೆ ಎನಗಾಯಿತು ಅ ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು 1 ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ 2 ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ 3
--------------
ಕನಕದಾಸ
ಭವ ಪಾಶದಲಿ ನಾನು ಹರಿಯೆ ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ಪ ಕೆಲರ ಮಾತಿಗೆ ಪೋಗಿ ಬಲವಾಗಿ ಅವರ ಕೆಲಸ ಮಾಡುವೆ ನಿಜ ಕೆಲಸವ ಮರೆದೆ ನಾ 1 ಧರಣಿಯ ಪತಿಯೇವೆ ಶರಣೆಂದು ತಿಳಿದು ಪಾದ ಸಿರಿಯ ರಮಣನೆ2 ಉದರಗೋಸುವಾಗಿ ಮರೆದವರ ವಶದಿ ಹದನವ ಕಳಕೊಂಡು ಮದಡ ನಾನಾದೆನೊ 3 ಉಣವೆನೊ ಪರರನ್ನ ದಣಿವೆನೊ ಅದಕ್ಕೆ ಕುಣಿವೆನೊ ಅವರಂತೆ ಗುಣವೇನು ಎನಗೆ 4 ಈಸು ಪರಿಯಲೆನ್ನ ಶ್ರೀಶ ದಾಸರ ವಶದಿ ವಾಸವಿತ್ತು ಬದುಕಿಸೊ ವಾಸುದೇವವಿಠಲ 5
--------------
ವ್ಯಾಸತತ್ವಜ್ಞದಾಸರು
ಭವ ಭಯದಾ ಕೊಳೆ ತೊಳೆÉದಾನಂದವೀವ ಸಾರಂಸಂಸಾರ ಸಾರಂ ಪ. ಸುಳಿದು ಯಮಭಟರೆಳೆಯುವ ಕಾಲದಿ ಪರಿ ಸಾರ ಮನುಜರು ಅ.ಪ. ಅಳಿದವರಾರು ಝಳಝಳ ಮನದಿಂ ಕಳೆಗೊಟ್ಟಿಹ ಪುರುಷನಾರುಂ ಸಲೆ ನಾರದರಲ್ಲದೆ ಯಿದನಂ ಸೆಳೆದುರೆ ಭಕ್ತಿಯೊಳ್ ಹರಿಯಂ ಅಳವಲ್ಲದಾನಂದದಿಂ ಹರಿ ಸುಳಿವ ಪೊಳೆವ ಮನದೊಳಗಿಹನೆನುತಂ ಸಾರಿ ಹರಿದನಂ ಸಾರಂ ಸಂಸಾರಂ 1 ಅರ್ಣವದೊಳು ಭವಾರ್ಣ ನಿರ್ಮಾಣನ ಕರ್ನದೊಳಾಲಿಸಿ ಧ್ವನಿಮಾಡಿ ನಿರ್ಣಯದಲಿ ಸ್ವರ್ಣರೂಪನ ಜೀರ್ಣಿಪ ವೀಣಾನಾದದೀ ಸಾರಂ ಕರ್ಣಾನಂದದಿ ಹಾಡಿದನಾರುಂ ವರ್ಣಾಶ್ರಮ ಧರ್ಮ ಮರ್ಮವರಿತು ಚರ್ಮಸುಖವಳಿದು ಪೂರ್ಣಜ್ಞಾನದ ಪುರಂದರದಾಸರಲ್ಲಿದೆ ಈ ಸಾರಂ ಸಂಸಾರಂ 2 ತರಲಾನಂದದಿಂ ಸರಿಗಮ ಪದನಿಸ ಸನಿದಪ ಮಗರಿಸ ಶೋಡಷಕ್ಷರದಿಂ ತರಲಾ ಸಂಗೀತಕೆ ಸರಳಾಗಿಹ ಹರಿ ನಾಮಾಮೃತವಂ ಧರಿಶಿದ ಪುರಂದರರಂ ಶರಣ ಭರಣ ಕರುಣ ಪಡೆವುದು ನಿರುತ ಹರಿ ಶರಣರೆನುತ ಅರುಹಿದ ಸಂಗೀತವೀ ಸಾರಂ ಸಂಸಾರಂ 3 ಈ ತೆರ ಭಜಿಸಿದಗ್ಯಾತರ ಭಯ ಪಾತಕಹರ ಜಗದೀಶ ಮಾನಸ ದಾತುರದೊಳು ಹರಿ ದಾತನೆಂದರಿತು ನೀತಾಚಾರದಿ ಯಾವಾತ ಸ್ತುತಿಸಲು ಜ್ಯೋತಿ ಪ್ರಕಾಶದಿ ತನುಜಾತನಾಗಿ ಬಹ ಪ್ರೀತಿಗೊಡುತ ಖ್ಯಾತ ಭಕ್ತ ಪಾರಿಜಾತನೆಂದು ತಿಳಿದಾತಗೆ ಇದು ಸಾರಂ ಸಂಸಾರಂ 4 ಭಗವಂತನ ಧ್ಯಾನಿಪನ ಪುಡುಕುತ ಮಿಗೆ ಸಂಚರಿಸುತಲಿಹರೀಗಲು ಭಾಗವತರಿದು ಸತ್ಯಂ ಜಗಕೆ ಜಗದೀಶ ಶ್ರೀ ಶ್ರೀನಿವಾಸನೆಂದು ಮಿಗೆ ಜಗದಾನಂದ ಪುಳಕಿತ ತನುವಿನ ಜೀವರ ಸೊಗವಿಲಿ ನಾಲ್ಮೊಗನೈಯ್ಯನು ಸಿಗುವ ಪರಿಯಗೊಡುತಗಣಿತ ಮಹಿಮರು ಕರುಣಿಸಿದೀ ಸಾರಂ ಸಂಸಾರಂ 5
--------------
ಸರಸ್ವತಿ ಬಾಯಿ