ಒಟ್ಟು 4153 ಕಡೆಗಳಲ್ಲಿ , 125 ದಾಸರು , 2858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪನ್ನಗಾಚಲವಾಸ-ಪ್ರಪÀನ್ನರ ಪಾಲಕ ಶ್ರೀಶಾ-ಸರ್ವೇಶಾ ಕನಕ ರತುನಮಯ ಮುಕುಟಾಧಾರ ಘನ ನವಮಣಿಮಯ ಕುಂಡಲಧರ ಇನಕೋಟಿಪ್ರಭಕೌಸ್ತುಭಹಾರ ಮನಸಿಜಧನುಸಮ ಭ್ರೂಸಮಾಕಾರ ಘನ ಚಂಪಕಗೆಣೆ ನಾಸ ಗಂಭೀರ ವನಜದಳಾಯತೇಕ್ಷಣಾಕಾರ ವನರುಹಾ ಘನ ಸ್ಮಿತ ಸುಗಂಭೀರ ಮುನಿಮಾನಸಮಂದಿರ ಸುವಿಹಾರ ಅಪ್ರಾಕೃತ ಶರೀರ ತನುಮನ ವಚನದಿ ಅನವರತದಿ ಕಿನ್ನರ ಸುರಮುನಿಗಣ ತನುಸದನದಿ ಹೃದ್ವನಜದಿ ಘನಪದ ವನರುಹ ಧೇನಿಸಿ ದೃಢಸ್ನೇಹದಿಂದಿರುವ ಕರ್ಮ ಒಪ್ಪಿಸುವ ಘನಮೋದದಿಂದಲಿರುವಾ ನುತಿಸುವಾ ಬೇಡುವಾ ಜನುಮ ಸ್ಥಿತಿ ಮೃತಿಗೆ ಬೆದರದಿರುವಾ ನಿನ್ನವರೊಳು ತನ್ನಿರವ ತೋರಿಸುಹ ಘನ್ನಪಾತಕವ ಕಳೆದುನ್ನತ ಸಾಧನವನ್ನೆ ಕೊಟ್ಟು ನನ್ನಿಯಿಂದಲೆ ಪೊರೆವಾ ತನ್ನಧಾಮದಿ ಕಾಪಿಡುವಾ 1 ಉತ್ತಮ ಮೌಕ್ತಿಕ ಸರಿಗೆ ನ್ಯಾವಳ ಒತ್ತೊತ್ತಾಗಿಹ ತ್ರಿವಳಿಯ ಮಾಲಾ ರತುನ ಪದಕದಾ ಸರದ ವಿಹಾರ ಅತಿಮನೋಹರ ಹೃದಯ ವಿಶಾಲ ಸಲೆಸಿರಿವತ್ಸ ವಕ್ಷದಿ ಲೋಲ ಸುತ್ತಿದ ಭಾಪುರಿ ಭುಜದ ವಿಸ್ತಾರ ಸಿತಾನಿಸಿತ ಉಪವೀತದಿ ಲೊಲ ದಾತಾಪಿತ ತವನಾಭಿಯ ಕಮಲ ಉತ್ತಮಕಮಲ ಕಲ್ಹಾರದ ಮಾಲ ಹಸ್ತಾಭರಣದಿ ಮೆರೆಯುತ ಪೊತ್ತಿಹ ಚಕ್ರಾಧ್ಯಾಯುಧನೆತ್ತಿ ದುರುಳೊನ್ಮತ್ತರ ಸದೆದು ತ್ವದ್ಭಕ್ತರ ಮನೋರಥ ಪೂರ್ತಿಗೈವ ಪುರುಷೋತ್ತಮ ಭವಭಯಹಾರೀ ನಿತ್ಯನೂತನವಿಹಾರೀ-ಪ್ರಣವಸ್ತನೆ ನೀ ಕಂಸಾರೀ ಪೃಥಕ್ ಪೃಥಕ್ ತದಾಕಾರೀ-ನರಹರೀ-ಶ್ರೀಹರೀ ಹೃತ್ಪುಷ್ಕರದಳ ವಿಹಾರೀ ಭಕ್ತವತ್ಸಲ ಅವ್ಯಕ್ತನೆ ಜಗದುತ್ಪತ್ತಿ ಸ್ಥಿತಿಲಯ ಕರ್ತ ವ್ಯಾಪ್ತ ನಿರ್ಲಿಪ್ತ ಸತ್ಯಸು- ಹೃತ್ತಮ ನೀನೆ ಮುರಾರೀ ಉತ್ತಮ ಸಮರಹಿತ ಶೌರೀ 2 ಪಕ್ಷಿಧ್ವಜ ಸುಖಭರಿತ ವಿಹಾರ ಕುಕ್ಷಿಯೊಳು ಅಬ್ಜಾಂಡಕೋಟಿಗಾಧಾರ ತ್ರಕ್ಷಾದ್ಯಮರನುತ ಗುಣಾಧಾರ ಸಾಕ್ಷಿಮೂರುತಿ ಸರ್ವಕಾಲಾಧಾರ ವಕ್ಷದೊಳು ಶ್ರೀವತ್ಸ ಗಂಭೀರಾ ಮು- ಮುಕ್ಷುಗಳೊಡೆಯನೆ ವೈಕುಂಠಾಗಾರ ಅಕ್ಷರಕ್ಷರರವಿಲಕ್ಷಣಧೀರ ರಕ್ಷಕ ಭಕುತಜನರುದ್ಧಾರ ದಕ್ಷಿಣಾಕ್ಷಿಕಂಠ ಹೃದಯವಿಹಾರ ರಕ್ಷಕ ತ್ರಿಜಗದಾಧ್ಯಕ್ಷ ಕರುಣಕಟಾಕ್ಷದಿ ಈ ಜಗ ವೃಕ್ಷದೊಳು ನಿರಪೇಕ್ಷನಾಗಿ ಫÀಲಭಕ್ಷಿಪ ಜೀವರ ಲಕ್ಷಕೋಟಿ ನೀ ಸಾಕ್ಷಿಯಾಗಿಹೆ ನೀ ರಕ್ಷ ಕಮಲಾಕ್ಷ ಪಕ್ಷಿವಾಹನನೆ ನಿನ್ನ ಪರೋಕ್ಷಾಪೇಕ್ಷಿಗಳಿಗೆ ನಿನ್ನ ಕ- ಟಾಕ್ಷವೀಕ್ಷಣದಿಂದ ಪ್ರತ್ಯಕ್ಷ ರಿಪುಶಿಕ್ಷ ಅಧ್ಯಕ್ಷ ಸಾಕ್ಷಿಯಾಗಿಹೆ ನೀ ರಕ್ಷಾ ಮೋಕ್ಷ ಜೀವರಿಗಪರೋಕ್ಷವನಿತ್ತು ನಿ- ಷ್ಪಕ್ಷನಾಗಿ ಜಗರಕ್ಷಿಸುತ್ತ ಸುರಪ ದಕ್ಷ ಚತು- ರಾಕ್ಷರಸ್ಥ-ನರಹರ್ಯಕ್ಷ ಶರಣಜನರ ಕಲ್ಪವೃಕ್ಷ3 ಪಟುತರಾಂಗ ಸುಕಟಿಯ ವಿಸ್ತಾರ ತೊಟ್ಟಿಹÀರತುನದ ಪಟ್ಟವಿಹಾರ ಉಟ್ಟಿಹ ಪಟ್ಟೆ ಪೀತಾಂಬರ ಧಾರಾ ಬಟ್ಟ ಜಾನುದ್ವಯ ಜಂಘಾಶೂರ ಇಟ್ಟಿಹ ಸಾಲಿಗ್ರಾಮದ ಹಾರ ದಟ್ಟವಾಗಿಹ ಕಾಲಂದಿಗೆಯ ವಿಹಾರ ಇಟ್ಟಿಹ ಬೆರಳಲಿ ರತ್ನದುಂಗುರ ಶ್ರೇಷ್ಟಪದದಿ ಧ್ವಜಚಿಹ್ನಾಕಾರ ದಿಟ್ಟಿ ನಖಾಗ್ರದಿ ತಟಿತ ಪ್ರಭಾಕರ ಪಟುತರ ಕರಪಾದ ಚಟುಲರೂಪ ಮನ- ತಟದಿ ಇಟ್ಟು ಲವತೃಟಿಯು ಬಿಡದೆ ಸುರ- ನಿತ್ಯ ಕರಪುಟದಿ ನಮಿಸಿ ಉತ್ಕಟದಿ ಗುಣಗಳ ಪಠಣದಿಂದಿರೆ ಮುದದಿ ಪಟುತರ ಭಕುತಿಯ ಭರದೀ ನಟಿಸುತ ತನು ಮರೆದಾತುರದಿ ಉ- ತ್ಕಟದಲಿ ನುತಿಸುತ ಭರದೀ ನಟಿಸುವಾ ಸ್ಮರಿಸುವಾ ಭಕುತಜನರ ಕಂಟಕವಾ ಆ ಧಿಟರು ನೀತ ಭಟರಂದು ನಿಜ ಜಠರಾಲಯದಿ ಇಂ- ಬಿಟ್ಟು ಭಕುತರ ಕಟಕಪೊರೆದು ಭವಾಬ್ಧಿಯ ಕಂಟಕ ಜಗಶಿಕ್ಷಾ 4 ಸ್ವಗತಭೇದವಿವರ್ಜಿತಶೂನ್ಯ ನಿಗಮಾತೀತ ದೇವವರೇಣ್ಯ ಬಗೆಬಗೆ ಸ್ವರ ಶಬ್ದವಾಚ್ಯವರೇಣ್ಯ ಅಗಣಿತಗುಣಗಣಪೂರ್ಣ ಸಂಪೂರ್ಣ ಯೋಗಿಗಳ್ ಪೊಗಳುವ ಸವಿತೃವರೇಣ್ಯ ಬಗೆಗಾಣರೊ ಸಾಕಲ್ಯದಿ ನಿನ್ನ ತ್ರಿಗುಣ ವಿರಹಿತನಾಗಿಹನ್ನ ನಗಜಾಧವ ಪಿಕನುತಪಾವನ್ನ ದುರ್ಗಾ ಶ್ರೀ ಭೂದೇವಿಯರಮಣ ಯುಗ ಯುಗದೊಳು ಜಗಕಾರ್ಯದಿ ಧರ್ಮ ಪ್ರಘಟ- ನೆಗೋಸುಗ ಸ್ವಗತರೂಪ ತಾ ನೆರಹಿ ಕ್ರೂರ ಪಾ- ಪೌಘರ ಮಡುಹಿ ಜಗದೇಕ ವೀರ ಮಿಗೆ ಜನಿಸಿದೆ ಜಗದೀಶಾ ಸುಗುಣ ಸಾಕಾರ ಸರ್ವೋತ್ತಮ ಶ್ರೀಶಾ ಜಗಜ್ಜಾಲ ಲೀಲಾವಿಲಾಸ ಜಗವೆಲ್ಲಾ ಈಶಾವಾಸ್ಯ ಸೃಜಿಸಿ ನೆಲೆಸೀ ಸ್ವಪ್ರಯೋಜನ ರಹಿತನೆನಿಸೀ ಖಗವರೂಥÀ ಶ್ರೀ ವೇಂಕಟೇಶ ಪನ್ನಗಗಿರಿಯೊಳು ನೆಲೆಸಿ ಜೀವರ ಯೋಗ್ಯಸಾಧನೆ ಇತ್ತು ಮನೋಭೀ-ಷ್ಟವನ್ನೆ ಸಲಿಸಿ ಉರಗಾದ್ರಿವಾಸವಿಠಲನೆನಿಸೀ 5
--------------
ಉರಗಾದ್ರಿವಾಸವಿಠಲದಾಸರು
ಪಯಸಾಗರ ಶಯನನೆ ಭಜಿಪೆನು ನಿನ್ನ ಭವಸಾಗರದಾಟಿಸು ಶ್ರೀಹರಿ ಎನ್ನ ಪ. ಹಿಂದೆ ಮುಂದೆ ಗತಿ ನೀನೆಂದು ನಂಬಿರುವೆ ಇಂದಿರೆಯರಸನೆ ಎಂದಿಗಾದರು ಕಾಯೊ ತಂದೆ ಬಂದು ಎನ್ನ ಬಂಧನ ಬಿಡಿಸೊ 1 ಕರುಣಾಸಾಗರ ವರದಮೂರುತಿ ನಿನ್ನ ಸ್ಮರಣೆಯೆನಗೆ ನೀ ನಿರುತದಿ ನುಡಿಸು ಪರಮಪಾಮರನಿಗೆ ನಿನ್ನ ಚರಣವ ತೋರೊ 2 ಪುಟ್ಟಿಸಿದವನೀ ಕಷ್ಟ ಪಡಿಸುವುದು ಇಷ್ಟವೆ ನಿನಗದು ಕೃಷ್ಣಮೂರುತಿ ಸೃಷ್ಟೀಶ ಶ್ರೀ ಶ್ರೀನಿವಾಸ ದೊರೆಯೆ 3
--------------
ಸರಸ್ವತಿ ಬಾಯಿ
ಪರಮ ಕರುಣ ರಮೆಯ ರಮಣ ಉರಗಭೂಷಣಾ ಪ ದುರಿತಹರಣ ಶರಣಾವರಣ | ವರದ ಕಂಕಣಾ ಅ.ಪ ಶ್ರುತಿಗಳೆಲ್ಲ ನುಡಿವುದಲ್ಲ | ಪಿತನೆಂಬ ಸೊಲ್ಲ ಪತಿತರ ನೀ ಪೊರೆದೆಯೆಲ್ಲ | ಹಿತವೇಕೆನ್ನೊಳಿಲ್ಲಾ 1 ಅಸ್ತಿಪಂಜರವೆಂಬೀ ಮಂದಿರ | ವಸ್ತಿರಾಂಬರ ವ್ಯಸ್ತ ಪಂಚಭೂತದಾಕಾರಾ ಗ್ರಸ್ತ ನಶ್ವರಾ 2 ಜನನ ಮರಣ ದುರಿತಗಡಣ | ಮನುಜ ಭವಿ ಶರಣ ಮನಕೆ ಶೋಕಾನೇಕ ಕಾರಣ | ದನುಜ ವಿದಾರಣಾ 3 ಧರೆಯೊಳುದಿಪ ಸೆರೆಯ ಬಿಡಿಸೋ | ವರವ ಕರುಣಿಸೋ ಹರಿಯೆ ರಾಮ ವಿಠಲ ಪಾಲಿಸೋ | ನಿರುತ ನಿರುಕಿಸೋ4 ಕಾವರನ್ಯರಿಲ್ಲವೆನ್ನ | ಶ್ರೀವನಿತಾರನ್ನ ಮಾವಿನಕೆರೆಯರಸ ಮುನ್ನ | ನೋವ ಬಿಡಿಸೆನ್ನ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಮದಯಾಕರೆ ಪೊರೆಯೆನ್ನನು ಜನನಿ ಪ. ಪಂಕಜಾಕ್ಷಿ ಪಂಕಜಾಸ್ಯೆ ಪಂಕಜಾಶ್ರಯೆ ಪಂಕಜೋದ್ಭವಾದಿಜನನಿ ಪಂಕಜಾಲಯೇ 1 ಪಾಕಶಾಸನಾದಿವಿನುತೆ ಲೋಕವಿಶ್ರುತೇ ಶೋಕಹರಣೆ ಸಾಕುಯೆಮ್ಮ ಕೋಕಿಲರವೇ 2 ಇಂದು ಸೋದರಿ ಮಂದಹಾಸಿನಿ ಕುಂದರದನೆ ವಂದಿಸುವೆನು ಮಂದಗಾಮಿನೀ 3 ಪೊಡವಿಯಣುಗಿ ಪೊಡಮಡುವೆ ನಿನ್ನಡಿಯೊಳೀಪರಿ ಕಡುನೇಹದೆ ಪಿಡಿದುಕರವ ಬಿಡದಿರೌ ಸಿರಿ4 ದೋಷರಹಿತ ಶೇಷಗಿರಿಯ ವಾಸನರಸಿಯೆ ಶೇಷಭೂಷಣ ನಮಿತಚರಣೆ ಪೋಷಿಸೌ ಜಯೆ5
--------------
ನಂಜನಗೂಡು ತಿರುಮಲಾಂಬಾ
ಪರಮಪುರುಷ ನಿನಗೆ ಪ ಅನಾದ್ಯನಂತ ಕಾರಣ ಸರ್ವತ್ರ ತುಂಬಿರುವಗೆ ಅ.ಪ ಬಲಿಯ ದಾನವ ಬೇಡುವ ಕಾಲದಿ ನೆಲನಯೀರಡಿಯ ಗೈದು ತಳತಳಿಸುವ ದಿವ್ಯ ಪದದಿ ಚೆಲುವ ಗಂಗೆಯ ಪಡೆದವನಿಗೆ 1 ಅನೇಕ ಪಾದಗಳೆಂದು ನಿನ್ನ ಅನುತಿಹವು ಶ್ರುತಿ ತತಿಗಳು ಅವಧಿಕಾರಿಯಾದ ಮೂಢ ನಾನು ಅಲ್ಪಮತಿಯು ಸ್ವಾಮಿಯೇ 2 ಮೌನಿ ಸತಿಯಳ ಶಾಪ ಬಿಡಿಸಿದ ಪಾದಕ್ಕೆ ವನಜದಳವ ಪೋಲ್ವ ಚೆಲುವ ಪಾದಕ್ಕೆ ದನುಜರಿಪು ಗುರುರಾಮ ವಿಠಲ ಪಾದಕ್ಕೆ 3
--------------
ಗುರುರಾಮವಿಠಲ
ಪರಮಾತ್ಮ ದಿವ್ಯಚರಣಾ ಭಜಿಸುವೆವು ಜ್ಞಾನ ಪೂರ್ಣ ನೀ ತೋರ್ಪುದಯ್ಯ ಕರುಣಾ ತಾಪ ಹರಣಾ ಆನಂದ ರೂಪ ತಾಣಾ ನಾರಾಯಣಾತ್ಮಪೂರ್ಣ ನಿನ್ನಿರವೇ ಜಗವಿದೆಲ್ಲ ನಿನ್ನರಿವೇ ಜೀವರೆಲ್ಲಾ ನಿನ್ನಿಂದೆ ಸುಖವಿದೆಲ್ಲಾ ನೀನೆ ಇದೆಲ್ಲಾ ದೇವಾ ನೀ ಸತ್ಯ ನಿರ್ವಿಕಾರ ನೀನಾತ್ಮರೂಪಸಾರಾ ನೀ ಪರಮ ಮೋಕ್ಷತಾಣಾ ಮರೆತಿರಲು ಜೀವ ನಿನ್ನ ದೊರೆಯುವುದೆ ಶಾಂತಿ ನಿನ್ನ ಪರಿತಾ¥ಬಿಡುತ ಮುನ್ನಾ ತಿರುಗುವನೋ ಜನ್ಮ ಜನ್ಮ ಗುರು ಶಂಕರಾರ್ಯ ನಿನ್ನ ಶರಣುಹುದೆ ಶಾಂತಿತಾಣ ನೀ ಸರ್ವರಾತ್ಮಪೂರ್ಣ
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಸುಖದಿರವನು ಕರುಣಿಸು ಎನಗೆ ಪರಮಪಾವನ ತವಚರಣಸೇವೆಯೆಂಬ ಪ ಅರಿಷಡ್ವರ್ಗದ ಉರುಬಾಧೆ ತಪ್ಪಿಸಿ ಮೆರೆವೆಂಟುಕೋಣಗಳು ಶಿರತರಿದ್ಹಾರಿಸಿ ಜರೆಮರಣೆಂದೆಂಬ ಉರುಲನು ಜೈಸಿದ ಹರಿಶರಣರ ಮಹ ಕರುಣಕಟಾಕ್ಷವೆಂಬ 1 ಹತ್ತು ಇಂದ್ರಿಯಗಳು ಒತ್ತಿ ಮುರಿದು ನೂಕಿ ಸುತ್ತಿಸುಳಿವ ಕಪಿನ್ಹತ್ತಿರ ಬಂಧಿಸಿ ಭವ ಕತ್ತರಿಸೊಗೆದ ಚಿತ್ತಜತಾತನ ಭೃತ್ಯಂ ನಡೆಯೆಂಬ 2 ಹರಣಪೋದರು ನಿನ್ನ ಚರಣಸ್ಮರಣೆಯನ್ನು ನೆರೆನಂಬಿ ಬಿಡದಂಥ ಪರಮದಟವ ನೀಡೋ ಶಿರದಿ ಹಸ್ತವನಿತ್ತು ವರದ ಶ್ರೀರಾಮ3
--------------
ರಾಮದಾಸರು
ಪರಾಕು ಪ ಕಾಮಿತ ಫಲವೀವ ಕರುಣಾಂಬುಧಿ ಎಂದು ನಾ ಮೊರೆಹೊಕ್ಕೆನಲ್ಲೋ ರಾಮರಾಮಾ ಪ್ರಫುಲ್ಲ ಅ.ಪ. ಎಡವಿದ್ದ ಮಾತ್ರದಿ ಪೆಣ್ಣಾದ ಗೌತಮಮಡದಿಯು ನಿನ್ನವಳೇನೋಕಡುಪ್ರೀತಿಯಿಂದ ಕಾಯಿದಿ ಕರಿರಾಜನು ನಿನ್ನಒಡಲಲ್ಲಿ ಜನಿಸಿದನೇನೋನಡುಗುತ ಮಗನ ನಾರಗನೆನ್ನಲುನುಡಿ ಕೇಳಿ ಪೊರೆದೆಲ್ಲೊ ರಾಮರಾಮಾ1 ಹಿಂದ್ವೈರಿ ದೆಸೆಯಿಂದ ಬಂದ ವಿಭೀಷಣನುತಂದೆಯ ಕಡೆಯವನೇನೋಕಂದು ಕುಂದೆಣಿಸದೆ ಕಾಯಿದಿ ಘಂಟಾಕರ್ಣಾಎಂದಾ ಮಾತಿನ ಬಗೆಯೇನೋಬಂದು ಕಂಬದಿ ಶಿಶುವ ಬಾಧೆಯ ಬಿಡಿಸಿದಿ ಆಪದ್ಬಾಂಧವ ನೀನಲ್ಲೋ ರಾಮರಾಮಾ 2 ಉಲ್ಲಾಸದಿಂದ ಶಬರಿ ಉಂಡೆಂಜಲಿಗೊಡ್ಡಿದವಲ್ಲಭ ನೀನಲ್ಲವೇನೋಎಲ್ಲಿಯ ಬಲ್ಲಿದ ಪಿಡಿಯವಲಕ್ಕಿಗೆ ನೀ ಪೋಗಿವಲ್ಲ್ಯೊಡ್ಡಿದ್ದು ಮರೆತ್ಯೇನೋಎಲ್ಲಿಯ ಮಾತಿದು ಪೇಳಲಂಜುವೆ ರಂಗ ವಿ-ಠಲ ನೀನಲ್ಲೋ ರಾಮರಾಮಾ 3
--------------
ಶ್ರೀಪಾದರಾಜರು
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪರಿ ಪಾಲಿಸಿವಳಾ ಪ ಪರಿ ಪರಿಯ ವಿಧದಿಂದ | ಹರಿ ದಾಸ್ಯ ಬೇಡ್ವಾ ಅ.ಪ. ಪರಿ ಪರಿ ಪಾಲಿಸಿವಳಾ 1 ಪಥ | ಹಂಸಾಖ್ಯ ತೋರೋ 2 ಆಶೆಪಾಶವ ಕಿತ್ತು | ಶ್ರೀಶನುತ್ಕರ್ಷಗಳಲೇಸಾಗಿ ಭಜಿಪಂಥ | ಮೀಸಲದ ಮನವಾ |ಮೇಶ ಗುರು ಗೋವಿಂದ | ವಿಠಲ ನೀ ನಿತ್ತಿವಳಪೋಷಿಸುವುದು ಬಿಡದೆ | ವಾಸುದೇವಾಖ್ಯಾ3
--------------
ಗುರುಗೋವಿಂದವಿಠಲರು
ಪರಿ ಬಹಳ ನಿಷ್ಠುರದ ವಚನಗಳನಾಡುವರು ಜನರು ಪ ಎಷ್ಟು ತಪವನೆ ಮಾಡಿ ಪಡೆದೆನೊ ನಾನಿನ್ನ ಕಷ್ಟವಾಯಿತು ನಿಂದೆ ನುಡಿಯ ಕೇಳುವುದು ಅ.ಪ ಕೊಂಡು ಪೋಗಲಿ ಬೆಣ್ಣೆ ಪಾಲು ಧದಿ ಭಾಂಡಗಳ ದುಂಡು ನಗುಮೊಗ ಚೆಲುವ ನಿನ್ನ ಮಗನು ಕಂಡರೆಮ್ಮನು ಮೋರೆ ತಿರುಗಲೇಕೆ ಇಂಥಾ ಪುಂಡು ಹುಡುಗನೆ ನಿನ್ನ ಮಗನೆಂದು ದೂರುವರು 1 ಮುರಳಿ ನಾದವ ಕೇಳಿ ಮರೆತು ಮೇವನು ಎಮ್ಮ ತುರುಕರುಗಳೆಲ್ಲ ಬಲು ಕೃಶವಾದವಮ್ಮ ಹರಿವ ಯಮುನಾಜಲದೊಳ್ ಆದ ಅವಿವೇಕವನು ಅರುಹಲೆಮ್ಮಯ ಮನವು ಜರಿವುದೆಂದಾಡುವರು 2 ಸಂಸಾರ ಮೋಹವನು ತೊರೆದು ಎನ್ನಲಿ ಮನದ ಸಂಶಯವ ಬಿಡಿ ಬಿಡಿ ಪ್ರಸನ್ನರಾಗಿರಿ ಎಂದ ಧ್ವಂಸವಾಯಿತು ಎಮ್ಮ ಅಭಿಮಾನ ಇವ ಚಂದ್ರ ವಂಶಕೆಂತಹ ಕೀರ್ತಿ ತಂದನೆಂದಾಡುವರು 3
--------------
ವಿದ್ಯಾಪ್ರಸನ್ನತೀರ್ಥರು
ಪರಿ ನಡಿಯುತ ಪುಣ್ಯವಂತರಾದ ಪ ಹರುಷಾದಿ ಆಚರಿಸುತಾ ಪಾದ ಬಿಡದೆ ನಿಜಭಕ್ತಿಯಲಿರುವಂಥ 1 ಪರಿಪರಿ ಶೋಧಿಸಿ ಮಹಿಮೆ ಸ್ಥಿರವಾಗಿ ಮನದಲ್ಲಿ ತಿಳಿದು ಸಿದ್ಧಿಸಿದಂಥಾ 2 ಇಷ್ಟದಿಂದ ಅತಿಯೋಗ್ಯರ ಕೂಡಿ ಶ್ರೇಷ್ಠ ಜ್ಞಾನಾಧಿಕ ನಿಷ್ಠಾರು ಎನಿಸಿದ ಶಿಷ್ಟ ಮಾನವ ಸಾಧು ಸಜ್ಜನರಾದಂಥ 3 ಮಾನವನಾಗುವದೇ ಘನಸಾರವನೆ ಗ್ರಹಿಸಿ ಮಾನಿತರೆನಿಸೀದ ಮಹಿಮರಾದಂಥಾ 4 ಭೂಮಿಪಾಲಕನಾದ `ಹೆನ್ನೆವಿಠ್ಠಲನ’ ಪ್ರೇಮದಿ ಹೇದಯಾದಿ ಪ್ರಣಿತಾರ್ಥವು ಹಿಡದು ಸ್ವಾಮಿ ನೀನೇಗತಿ ಸಕಲಾವು ನೀನೆಯೆಂಬೊ5
--------------
ಹೆನ್ನೆರಂಗದಾಸರು