ಒಟ್ಟು 5292 ಕಡೆಗಳಲ್ಲಿ , 123 ದಾಸರು , 3484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗೇನು ಕಡಿಮೆ ಪೇಳೈ ಎನಗೆಲೊ ರಂಗಾ ಪ ಕ್ಷೀರಾಬ್ಧಿ ನಿನ್ನದು ಸಂಸಾರಾಬ್ಧಿ ಎನ್ನದಯ್ಯ ಮೂರೇಳವತಾರ ನಿನಗೆ ನೂರೆಂಟು ಎನಗೇ1 ನಿನಗೆ ಸುರಮುನಿಗಣ ಎನಗೆ ಭೂಸುರಗಣ ನಿನಗೆ ಸತ್ವದ ಗುಣ ಎನಗಾಸೆ ದ್ವಿಗುಣ2 ಜಗವು ಉದರವೆಂದು ಬಗೆದು ಪೋಪೆನೀ ಜಗದ ಸರ್ವಾರ್ಥವ ಮಿಗೆ ಬಯಸುವೆನಾ 3 ನಿನಗೆ ಭಕ್ತರೆ ಪ್ರಿಯ ಎನಗೆ ಮುಕ್ತಿಯೆ ದೈವ ನಿನಗೆ ರಕ್ಷಣೆನಾಮಾ ಎನಗೆ ಭಕ್ಷಣೆ ಕಾರ್ಯಾ 4 ವರಷಡ್ಗುಣವು ನಿನಗೆ ಅರಿಷಡ್ವರ್ಗವು ಯನಗೆ ದುರಿತ ತೃಪ್ತತೆ ಯೆನಗೆ 5 ನಿನಗೆ ನಾನೆಂಬುದಿಲ್ಲ ಎನಗೆ ನಾನೆಂಬುದುಂಟು ರಂಗನಾಥ ಶ್ರೀಶ ತುಂಗವಿಕ್ರಮ ನೀ 6 ಕ್ಷಮಿಸೆನ್ನಪರಾಧವ ವಿಮಲಾಂಗ ಮಾಧವ ಕಮಲಾಕ್ಷ ಪೊರೆದೇವ ರಾಮದಾಸನುತಾ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ಉನ್ನತ ಮಹಿಮೆಯನ್ನು ಬಣ್ಣಿಪ ಶಕ್ತಿ ಎನಗೆಂತು ಕರುಣಾರ್ಣವ ಪ ಅನ್ಯಕುಲದಲಿ ಜನಿಸಿ ಅನ್ಯ ಆಹಾರಗಳುಂಡು ಕುನ್ನಿಯಂತೆ ಕಳೆವೆ ದಿನವ ಅಭವ ಅ.ಪ ಶೋಧಿಸಿಶಾಸ್ತ್ರಪದ ಛೇದಿಸಿ ಬಣ್ಣಿಸಲೆ ಓದು ನಾ ಕಲಿತಿಲ್ಲವೋ ವೇದಪೂರ್ವಕಮಾಗಿ ಸಾಧನದಿ ಬಣ್ಣಿಸಲೆ ವೇದ ಎನಗೊಳುಪಿಲ್ಲವೋ ಸಾಧುವರ್ತನದ ಮಹಾದಾದಿಯಿಂ ಬಣ್ಣಿಸಲೆ ಸಾಧುಪಥ ಗುರ್ತಿಲ್ಲವೋ ಆದಿಮೂರುತಿ ನಿನ್ನ ಪಾದಪೊಗಳಲು ಒಂದು ಹಾದಿಗೊತ್ತೆನಗಿಲ್ಲವೋ 1 ದೃಢಮಾಗಿ ನಿನ್ನ ಸಮದೃಢ ಮಹಿಮೆ ಬಣ್ಣಿಸಲೆ ದೃಢಭಕ್ತಿಯೆನಗಿಲ್ಲವೋ ಎಡಬಿಡದೆ ಬಣ್ಣಿಸಲೆ ಪೊಡವಿಯೋಳ್ನಿನ್ನವರ ಒಡನಾಟ ಎನಗಿಲ್ಲವೋ ಕಡು ಗೂಢವಾಗಿ ನಿನ್ನಡಿಗಳನು ಬಣ್ಣಿಸಲೆ ಜಡಮತಿ ನಾ ಬಣ್ಣಿಪೆನೆ ಕಡೆಯಿಲ್ಲದ ತವಮಹಿಮೆ ಮೃಡ ಅಜರಿಗಸದಳವೋ ತಿಳಿವೋ 2 ಸುಗುಣಗುಣಾಂತ ನಿನ್ನ ಸುಗುಣಗಳ ಬಣ್ಣಿಸಲು ಸುಗುಣಗುಣ ಎನಗಿಲ್ಲವೋ ನಿಗಮಾತೀತನೆ ನಿನ್ನ ಗುಟ್ಟು ಬಣ್ಣಿಸಲೆ ನಿಗಮವ ನಾನರಿತಿಲ್ಲವೋ ಅಗಣಿತಮಹಿಮ ನಿನ್ನ ಹಗರಣದ ಮಹಿಮೆಯ ಬಗೆಬಲ್ಲವ ನಾನಲ್ಲವೋ ಪೊಗಳುವೆನು ಮಿಗಿಲೆನ್ನುತ ಸತತ3
--------------
ರಾಮದಾಸರು
ನಿನ್ನ ಕರುಣಕೆಯ ಕಾಣೆನಾ | ವಿಠಲರಾಯಮನ್ನುಜನ್ನ ರೂಪ ಧರಿಪನಾಅನ್ನ ವಸನವಿತ್ತು ಪಿತಗೆ | ಚನ್ನ ಸೇವೆ ಮಾಳ್ಪದೇವೆಘನ್ನ ಸಾಧ್ಯ ಸಾಧನವೆಂದು | ಮನ್ನಣೆಯ ತೋರ್ದೆ ಜಗಕೆ ಅ.ಪ. ಪಂಥ ಜನರ ಸಂದಣೀಯಲಿ | ಮೆರೆಯುತ್ತಿದ್ದಪಂಢರಪುರದ ಸುಪ್ರದೇಶದಿಪುಂಡರೀಕ ನಯನ ಭಕ್ತ | ಬಂಡುಣೀಯ ಮನವ ನೋಡೆಅಂಡಾ ನಂತಕೀಶ ಮನುಜ | ದಿಂಡು ಧರಿಸಿ ಬಂದು ನಿಂತ 1 ಇಂದು ಭಾಗ ಸರಿತು ತೀರದಿ | ಪುಂಡಲೀಕತಂದೆ ಪಾದಸೇವೆ ಭರದಲಿ |ಬಂದ ಮನುಜ ವೇಷ ಹರಿಗೆ | ನಿಂದಿರೆಂದು ಪ್ರಾರ್ಥಿಸುತ್ತಅಂದ ಅನ್ಯ ಪೀಠವಿರದೆ | ಒಂದು ಇಟ್ಟಗಿ ಪೀಠವಿತ್ತ2 ಸಿಂಧು | ಸುಷ್ಠು ಒತ್ತಿಪ ದಯಾಸಿಂಧು3 ಶಾಸ್ತ್ರ ಬಹಳ ಶೃತನು ಎನುತಲೂ | ಶುದ್ಧಮೇಧ ಶಕ್ತಿ ಬಹಳ ಯುತನು ಎನುತಲೂ | ಯುಕ್ತಿಗಾಗ್ಯ ವಲಿವನಲ್ಲ | ಮುಕ್ತಿದಾತ ಲಕ್ಷ್ಮೀನಲ್ಲಭಕ್ತಿ ಮುಡುಪು ಯಿತ್ತು ತುತಿಪ | ಭಕ್ತ ಜನರ ಬಿಡದೆ ಪಾಲಿಪ4 ಭಾವ ದ್ರವ್ಯ ಕ್ರಿಯವು ಎಂಬುದಾ | ಮಹತು ಎನಿಪಈ ವಿಧ ದ್ವೈತತ್ರಯಗಳಾ |ಭಾವದಲ್ಲಿ ಚರಿಸುವಂಥ | ಭಾವವಿತ್ತು ಸಲಹೊ ಗುರುಗೋವಿಂದ ವಿಠಲ ಭಕ್ತಿಪಂಥ | ದೇವನೆಂದು ಮೆರೆವ ವಿಠಲ 5
--------------
ಗುರುಗೋವಿಂದವಿಠಲರು
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ದಯಾ ದೃಷ್ಟಿಯು ಎನ್ನ ಮೇಲಿರಬೇಕು ಪನ್ನಂಗಶಯನ ಭಕ್ತ ವಿಜಯವಿಠಲಯ್ಯ ಪ ಮುನ್ನ ಭಕ್ತನಿಗೊಲಿದು ಭಿನ್ನವಿಲ್ಲದೆ ಬಂದು ಮಣ್ಣಿನ್ಹೆಂಟೆಯ ಮೇಲೆ ಇನ್ನು ನಿಂತುದನು ಕಣ್ಣಿನಿಂದ ನಾ ಕಂಡು ಧನ್ಯನಾದೆನು ಜಗದಿ ಇನ್ಯಾಕೆ ಭವದಂಜು ತನು ನಿನ್ನದಯ್ಯ1 ಹೆತ್ತಮಕ್ಕಳ ತೆರದಿ ಅತ್ಯಧಿಕ ಪ್ರೀತಿಯಿಂ ಭಕ್ತರನು ಬಿಗಿದಪ್ಪಿ ಮುಕ್ತಿ ಸೋಪಾನ ಹತ್ತಿಸಿದ ನಿನ್ನಡಿ ಭಕ್ತಿಯಿಂ ಕಂಡೆ ಮತ್ತು ಮೃತ್ಯುವಿನ ಭೀತ್ಯಾಕೆ ಮನ ನಿನ್ನದಯ್ಯ 2 ಕಡಲನಿಲಯನೆ ನಿನ್ನ ಅಡಿ ನಂಬಿ ಮರೆಹೊಕ್ಕೆ ದೃಢಭಕುತಿ ನೀಡೆನ್ನ ನುಡಿಯೊಳಗೆ ನೆಲಸು ಎಡರು ತೊಡರನು ಕಡಿದು ದೃಢಕರನು ಬಿಡದಾಳ್ವ ಒಡೆಯ ಶ್ರೀರಾಮಯ್ಯ ಧನ ನಿನ್ನದಯ್ಯ 3
--------------
ರಾಮದಾಸರು
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ನಂಬಿದೆ ಶಾರದೇ | ಭಕ್ತಿಗೆ ಮತಿ- | ಯನ್ನು ಪಾಲಿಸ ಬಾರದೇ ಪ ನಿನ್ನ ನಂಬಿದೆ ನಾನು | ಎನ್ನ ಜಿಹ್ವೆಯೊಳ್ ನೀನು | ಖಿನ್ನತ್ವಗೊಳ್ಳದೆ | ಸನ್ನುತೆ ನೆಲಸವ್ವ ಅ.ಪ ಜಡಮತಿಯನು ತ್ಯಜಿಸಿ | ನೀ ದಯದಿಂದ | ದೃಢಮತಿಯನು ಪಾಲಿಸಿ || ಕಡಲ ಶಯನ ಸೊಸೆ | ಪೊಡವಿಗಧಿಕವಾದ | ಮೃಡನ ಸ್ಮರಿಪ ಜ್ಞಾನ | ತಡೆಯದೆ ಕರುಣಿಸು 1 ತ್ವತ್ಸಂಗವನು ಪಾಲಿಸಿ | ನೀ ದಯದಿಂದ | ದುಸ್ಸಂಗವನು ಛೇದಿಸಿ || ಸತ್ಸಂಗವೆನಗಿತ್ತು | ಮತ್ಸಂಗ ನೀನಾಂತು | ತ್ವತ್ಸುಗುಣ ನುಡಿಗಳ | ಹೃತ್ಸರೋಜದೊಳಿರಿಸೆ 2 ಸನುಮತ ಪಥಗಾಣಿಸಿ | ಕಏತೆಗಳ | ಮನದಲ್ಲಿ ಸ್ಥಿರಗೊಳಿಸಿ || ಜನನ ಮರಣವೆಂಬ | (ವನ) ದೊಳಗೆನ್ನನು | ವಿನಯದಿ (ಂದಲಿ) ಪಾರ | ಗಾಣಿಸೆ ಶಾರದೆ 3 ದಾಸನೆಂದೆನಿಸೆಯೆನ್ನ | ಕೀತಿ9ಗಹಿತ | ದೋಷವ ತ್ಯಜಿಸೆ ಮುನ್ನ || ಕ್ಲೇಶಗೈವರ ಮನ | ಲೇಸಿನೊಳ್ ವಂಚಿಸಿ | ವಾಸವ ಕರುಣಿಸೆ 4 ಚಿನುಮಯಾತ್ಮಕನಿರುವ | ವೈಕುಂಠದ | ಘನತರ (ಸತ್) ಪದವಿಯ || ಪತಿ | ಪಿತ ಶ್ರೀನಿವಾಸನ | (ಅನುಯಾಯಿ) ಸೇವೆಗ | ಳೆನಗಿತ್ತು ಪಾಲಿಸೆ 5
--------------
ಸದಾನಂದರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿನ್ನ ನಾನೇನೆಂದೆನೊ - ರಂಗಯ್ಯ ರಂಗನಿನ್ನ ನಾನೇಂದೆನೊ ಪ ನಿನ್ನ ನಾನೇನೆಂದೆ ನಿಗಮಗೋಚರ ಸ್ವಾಮಿಪನ್ನಗಶಯನ ಪಾಲ್ಗಡಲೊಡೆಯನೆ ರಂಗ ಅ ಧೀರ ಸೋಮಕ ವೇದಚೋರ ಖಳನನು ಸೀಳಿವಾರಿಧಿಗಿಳಿದು ಪರ್ವತವನೆತ್ತಿಧಾರಿಣಿಯನು ಕದ್ದ ದನುಜದಲ್ಲಣನಾದನಾರಸಿಂಹ ನಿನಗೆ ನಮೊ ಎಂದೆನಲ್ಲದೆನೀರ ಪೊಕ್ಕವನೆಂದೆನೆ - ಬೆನ್ನಲಿ ಘನ್ನಭಾರ ಪೊತ್ತವನೆಂದೆನೆ - ಮಣ್ಣನಗೆದುಬೇರ ಮೆದ್ದವನೆಂದೆನೆ - ರಕ್ಕಸನೊಳುಹೋರಿ ಹೊಯ್ದನೆಂದು ಹೊಗಳಿದೆನಲ್ಲದೆ 1 ಪಾಷಾಣ ಪತಿ ಶರಣೆಂದೆನಲ್ಲದೆತಿರುಕ ಹಾರುವನೆಂದೆನೆ - ಹೆತ್ತ ತಾಯಶಿರವ ತರಿದನೆಂದೆನೆ - ವನವಾಸಕೆಭರದಿ ಚರಿಸಿದನೆಂದೆನೆ - ಪೂತನಿಯನುಸರಕು ಮಾಡದೆ ಕೊಂದ ಹರಿಯೆಂದೆನಲ್ಲದೆ 2 ಚಿತ್ತಜಕೋಟಿ ಲಾವಣ್ಯ ಮುಪ್ಪುರದಉತ್ತಮಸ್ತ್ರೀಯರ ವ್ರತವಳಿದುಮತ್ತೆ ಕಲ್ಕಿಯಾಗಿ ಮಧುಪರ ಮಡುಹಿದಹತ್ತವತಾರದ ಹರಿಯೆಂದೆನಲ್ಲದೆಬತ್ತಲೆ ನಿಂತವನೆಂದೆನೆ - ತೇಜಿಯನೇರಿಒತ್ತಿ ನಡೆದವನೆಂದೆನೆ - ಬಾರಿಬಾರಿಗೆಸತ್ತು ಹುಟ್ಟುವನೆಂದೆನೆ - ಆದಿಕೇಶವಭಕ್ತವತ್ಸಲನೆಂದು ಪೊಗಳಿದೆನಲ್ಲದೆ 3
--------------
ಕನಕದಾಸ
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ನೆನೆಯುವುದೆ ಭಾಗ್ಯ ನಿನ್ನ ನೋಡುವುದೇ ಕಂಗಳಿಗೆ ಹಬ್ಬ ನಿನ್ನ ಬಳಿ ನಲಿದಾಡುವುದೇ ಭಕ್ತರಿಗಿಷ್ಟ ನಿನ್ನಗಲಿ ಇಹದೊಂದು ಘಳಿಗೆಯೂ ಅವರ ಮನಸಿನಲಿ ಅಖಿಳ ದೇವೇಶ ನಿನ್ಹೊರತು ಗತಿಯಮಗಾರೆಂಬರೊ ನಿನ್ನ ಭಕ್ತರು ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿನ್ನ ನೋಡಿ ಧನ್ಯನಾದೆನೋ | ಶ್ರೀವೇದ ವ್ಯಾಸನಿನ್ನ ನೋಡಿ ಧನ್ಯನಾದೆನೋ ಪ ನಿನ್ನ ನೋಡಿ ಧನ್ಯನಾದೆ | ಯಜ್ಞಕುಂಡ ದೇಶದಲ್ಲಿಘನ್ನ ಮಹಿಮ ಪೂರ್ಣ ಸಂ | ಪನ್ನ ಮೂರುತಿ ಬಾದರಾಯಣ ಅ.ಪ. ಪಾದ ಭಜಿಸಿ ಅರ್ಚಿಸಿರುವ 1 ನವಸುಮೂರ್ತಿಗಳಲಿ ನಿನ್ನ | ನವ ಸುಭಕ್ತಿಗಳನು ಬೇಡೆನವ ಸುಮಹಿಮೆ ತೋರೆ ಕರಗ |ಳವಲಂಬನದಿ ದಯವ ತೋರ್ದ 2 ಅಷ್ಟು ಮೂರ್ತಿಗಳಲಿ ತಮ್ಮ | ಇಷ್ಟ ಮೂರ್ತಿಯನ್ನೆ ಇರಿಸಿಅಷ್ಟದಿಗಿಭದಂತೆ ಮೆರೆದ | ಅಷ್ಟ ಶಿಷ್ಟರಿಗಿತ್ತ ಮುನಿಯು 3 ನಿರ್ಜರ ಅಂಘೇರಿ ಮಣೂರ 4 ವಿನುತ | ವಕ್ರ ಮನದ ಜನಕೆ ಅಮಿತ್ರ 5 ಯೋಗ ಪಟ್ಟಕ ವಸನ ಚೆಲ್ವ | ಯೋಗದಾಸನ ಕೂರ್ಮದುಪರಿನಾಗನಂತೆ ಪೋಲ್ವ ಜಟಾ | ಸೋಗಿನಿಂದ ಮೆರೆವ ದೇವ 6 ಮೂರ್ತಿ ಭೋಕ್ತ ತ್ರಯ ಸುಮೂರ್ತಿಯಜ್ಞ ಗುರು ಗೋವಿಂದ ವಿಠಲ | ಭಗ್ನ ಗೈಸೊ ಮಾಯ ಪಟಲ 7
--------------
ಗುರುಗೋವಿಂದವಿಠಲರು
ನಿನ್ನ ಪದ ಧ್ಯಾನಿಪರು ಪಗಲಿರುಳು ನಿನ್ನ ಭಕ್ತರು ಹರಿ ನಿನ್ನ ರೂಪ ನೆನೆನೆನೆದು ಸ್ಮರಿಸಿ ಮನದಲಿ ನಿಲಿಸಿ ಸ್ತುತಿಸಿ ಪಾದ ಧೂಳು ಶಿರದಲ್ಲಿ ಧರಿಸುವರು ಭಕ್ತರು ನಿನ್ನ ರೂಹವ ಮನಸಿನ ಜಗಲಿಯಲಿ ನಿಲಿಸುವರು ಭಕ್ತರು ನಿನ್ನ ನಂಬಿ ಸಕÀಲಕಾರ್ಯ ನಿರ್ವಹಿಸುವರು ಭಕ್ತರು ಹರಿ ನಿನ್ಹೊರತು ಅನ್ಯರನು ನೆನೆಯರೊ ಪನ್ನಗಾದ್ರಿನಿವಾಸ ಶ್ರೀ ಶ್ರೀನಿವಾಸ ನಿನ್ನ ಭಕ್ತರ ಸಂಗಕೊಡೊ ಎನಗೆ ಸರ್ವೇಶ
--------------
ಸರಸ್ವತಿ ಬಾಯಿ
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ