ಒಟ್ಟು 2197 ಕಡೆಗಳಲ್ಲಿ , 114 ದಾಸರು , 1773 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರುತಿಯ ಶಿರಗಳನೀಗ ಸೂಚಿಪೆ ಸ್ವಾಮಿವಿತತವಾಗಿಹ ವಿಶ್ವಕ್ಕೊಡೆಯ ನೀ ಗ್ರಹಿಸು ಪಆದಿ ಮಧ್ಯಾಂತಗಳಿಲ್ಲದನಾದಿಯಾದಾ ನಿರ್ಗುಣಬ್ರಹ್ಮ ನಿಜರೂಪವೆಂದುಸಾಧಿಸಿ ಬೋಧಿಸಿ ಸರ್ವೋಪಾಧಿಯನುಭೇದಿಸಿ ಬಿಡುತಿಹ ಬಹು ಸಿದ್ಧವಾದ 1ಮಾಯೆಯ ರೂಪದಿ ಮಾಡಿ ವಿಶ್ವವನುಆಯದಿಂದಾಧಾರವಾಗಿಯೂ ತಾನುನೋಯದೆ ನೋಡುತ್ತ ನಿಂದ ಸಾಕ್ಷಿಕನುಈಯಂಡದೊಳು ಪೂರ್ಣನಾಗಿಹನೆಂಬ 2ಹರಹುತ ಲೋಕವ ಹೊಂದಿಸು ತಿಂತುಇರುವನು ನಿತ್ಯದಲೀ ದೇವನೆಂದುಅರುಹುತಲಿದೆ ಶ್ರುತಿಶಿರವಿದು ಕೇಳುತಿರುಪತಿ ವೆಂಕಟಗಿರಿನಾಥ ಕೃಷ್ಣ 3ಓಂ ಶುಕವಾಗಮೃತಾಬ್ಧೀಂದವೇ ನಮಃ
--------------
ತಿಮ್ಮಪ್ಪದಾಸರು
ಸಕಲಕಾರ್ಯಾಂತರ್ಗತನಾಗಿ ಹರಿ ಭಕುತರ ಹೃದಯದಲಿ ನೆಲಸಿ ಭಕುತರ ಮನ ಬಂದಂತೆ ಕುಣಿಸೆ ಅವರನು ಹರಿ ಸಕಲಕಾಲದಲ್ಲೂ ಕಾದು ಕೊಂಡಿದ್ದು ಸಲಹುವ ಶ್ರೀ ಶ್ರೀನಿವಾಸ ಪ. ಯಾವಾಗ ಬರುವನೋ ಭಕ್ತರೆಡೆಗೆ ಹರಿ ಹರಿ ಆವಾಗಲಾಗಮಿಸುವುದೇ ಪರ್ವಕಾಲ ಹರಿಯ ಆವಾಗಲೇ ನೆನದು ಮಿಂದು ಧ್ಯಾನಿಸೆ ಆವಾಗಲೇ ಸಂಧ್ಯಾಸಕಲ ಕರ್ಮವ ನಡೆಸೆ ಯಾವಾಗಲೂ ಹರಿ ತಾ ತನ್ನ ಭಕ್ತರ ಕೈ ಬಿಡ ಯಾವ ಕಾಲದಲ್ಲೂ ಶ್ರೀ ಶ್ರೀನಿವಾಸ 1 ನಾನು ದೊಡ್ಡವ ನೀನು ದೊಡ್ಡವನೆಂದು ಹೊಡೆದಾಡದೇ ನಿಮಗೂ ನಮಗೂ ಮತ್ತೊಬ್ಬನಿಹನು ಹರಿ ನಿಮಗ್ಯಾತಕೀ ಛಲದ ವಾದ ಮನುಜರೇ ಅನುದಿನವೂ ನೆನೆಯಿರಿ ಶ್ರೀಹರಿ ಶ್ರೀ ಶ್ರೀನಿವಾಸನ್ನ ಸಕಲರಿಗೂ ದೊಡ್ಡವನವನೇ ಕೇಳಿ ಸಜ್ಜನರೇ 2 ಕಾಲ ಆ ಕಾಲವೆಂದಿಲ್ಲ ಹರಿಗೆ ತನ್ನ ಭಕ್ತರ ಸಾಕಲು ಈ ಸಮಯ ಆ ಸಮಯವೆಂದು ನೋಡನು ಹರಿ ಇಂಥಾ ಈ ಕರುಣದೊರೆಯೆಲ್ಲಾದರುಂಟೆ ಜಗದಿ ಈ ತನುವಿರುವ ತನಕ ಈ ಪರಮ ಪುರುಷನನು ಬೇಕಾದ ಕಾಲದಲಿ ಈ ಮನುಜ ಜಪಿಸುತಿರೆ ಕಮಲನಾಭ ಶ್ರೀ ಶ್ರೀನಿವಾಸ ಸಲಹದಿರನೇ ನಿನ್ನ ಆಪತ್ತಿಗಾಹ ಶ್ರೀಶ ಶ್ರೀ ವೆಂಕಟೇಶಾ 3 ಜಾಗರದಲೂ ಹರಿ ಕಾವ ನಿದ್ರೆಯಲೂ ಹರಿಕಾವ ಜಾಗರ ಸುಷುಪ್ತಿಯಲಿ ಹರಿ ಜಾಗರಮೂರುತಿ ನಿನ್ನ ಕಾವ ಜಾಗು ಮಾಡದೆ ಭಜಿಸು ಜಾನಕಿರಮಣ ಶ್ರೀ ರಾಮಚಂದ್ರನ್ನ ನಿತ್ಯ ಶ್ರೀ ಶ್ರೀನಿವಾಸನ್ನ ಮನವೆ 4 ಬುದ್ಧಿ ಬಂದಿದ್ದು ಅವನಿಂದ ಬುದ್ಧಿ ಅರಿವುದು ಅವನಿಂದ ಅಪ್ರಬುದ್ಧನಾಗದೇ ಬುದ್ಧಿ ಪೂರ್ವಕ ನೀ ನೆನೆದರೆ ಹರಿ ಬದ್ಧಕಂಕಣ ತೊಟ್ಟಿಹನು ಭಕ್ತರ ಕಾಯೆ ಆ ಶ್ರೀ ಶ್ರೀನಿವಾಸನ ಶುದ್ಧ ಮನದಿ ನೆನೆಮನವೆ 5 ವೈರಿ ಗೆಲ್ಲು ಮೊದಲು ನೀನವರ ವಶವಾಗದೆ ನಿನ್ನ ಮನ ಶುದ್ಧಮಾಡಿಕೊ ಮೊದಲು ನಿನ್ನ ಮನಸಿನಶ್ವಕ್ಕೆ ಬುದ್ಧಿಲಗಾಮು ಹಾಕು ನಿನ್ನ ಬುದ್ಧಿಯಲಿ ಮೊದಲನೆ ಕಾರ್ಯವಿದು ಎಂದರಿ ಈ ಮೊದಲು ನನಿಕಾರ್ಯ ನೋಡಿ ಶ್ರೀ ಶ್ರೀನಿವಾಸ ಒಲಿವ ನಿನಗೆಂದೆಂದು ಮನವೆ6 ಈ ತನವು ಈ ನುಡಿ ಈ ಕಾರ್ಯ ಈ ವಾರ್ತೆ ಈ ಕೃಪೆಯು ಶ್ರೀ ಶ್ರೀನಿವಾಸಗಲದೆ ಅನ್ಯತ್ರವಿಲ್ಲ ಹರಿ ಭಕ್ತರ ಸುಳಾದಿ ಭಕ್ತವತ್ಸಲ ಶ್ರೀ ಶ್ರೀನಿವಾಸಗರ್ಪಿತವೆಂದು ತಿಳಿ ಮನವೆ 7
--------------
ಸರಸ್ವತಿ ಬಾಯಿ
ಸಕಲಾಗಮ ಪೂಜಿತ ಏಕೋ ದೇವನೀತ ಏಕಾಕ್ಷರ ಬ್ರಹ್ಮೀತ ಹಂಸನಾಥ 1 ರವಿಕೋಟಿ ತೇಜನೀತ ಸಂವಿತ ಸುಖ ಸಾಕ್ಷಾತ ಪವಿತ್ರ ಪ್ರಣವನೀತ ಹಂಸನಾಥ 2 ಯತಿ ಮುನಿವಂದಿತ ಪಿತಾಮಹನ ಪಿತ ಅತಿಶಯಾನಂದನೀತ ಹಂಸನಾಥ 3 ಸನ್ಮಾತ್ರ ಸದೋದಿತ ಉನ್ಮನ ವಿರಹಿತ ಚಿನ್ಮಯನಹುದೀತ ಹಂಸನಾಥ 4 ಅನುದಿನ ಸಾಕ್ಷಾತ ಘನಗುರು ಶ್ರೀಕಾಂತ ಹಂಸನಾಥ 5 ವಿಶ್ವ ವ್ಯಾಪಕನೀತ ವಿಶ್ವರೂಪ ನಿರ್ಮಿತ ವಿಶ್ವಾತ್ಮನಹುದೀತ ಹಂಸನಾಥ 6 ಇಡದು ತುಂಬಿಹನೀತ ಮೂಢಮಹಿಪತಿ ದಾತ ಒಡಿಯನಹುದೀತ ಹಂಸನಾಥ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ
ಸಖಿ ಬಾರೆ ಬಾರೆ ಬೆಡಗತೋರೆ ನಡೆದು ಬಾರೆಲೆ ಸುಖದ ಸುಗ್ಗಿಯಿದೆಂದು ಸಾರೆ ಭ್ರಮರಕುಂತಲೆ ಪ. ಜಲಜಮುಖಿಯೆ ನಲಿದುಬಾರೆ ಕೋಲವಾಡುವ ಕಲಕೀರಕಂಠದಿಂದ ನಾವು ನಲಿದು ಪಾಡುವ 1 ಇಳೆಯ ಸುಖದ ಗೆಳೆಯ ಬಂದ ಬಳಿರೆ ಬಾಪುರೆ ಬೆಳಗುತಿರ್ಪ ದೀಪಾವಳಿಯೆ ಬಲಿಯ ಕೀರ್ತಿಯೆ 2 ವಿಜಯಯಾತ್ರೆಗೆಂದು ಹರಕೆಯೆತ್ತಿ ಭರದಲಿ ಅಜಸುರಾರ್ಚಿತಾಂಘ್ರಿಯುಗನ ಭಜಿಸಿಮುದದಲಿ 3 ನೀರನೆಮಗೆ ಮಾರತಾತನೆಂದು ಸಾರುವಾ ಶಾರದಾಗಮ ಸಮಯವಿದನು ಸಾರಿಯಾಡುವಾ 4 ಶೇಷಶೈಲಶಿಖರ ಧಾಮನೆಮ್ಮ ಮೆಚ್ಚುವೋಲ್ ಮೀಸಲೆತ್ತಿಯೊಸಗೆ ಪೇಳಿ ಪೊಸತಿದೆನ್ನುವೋಲ್ 5
--------------
ನಂಜನಗೂಡು ತಿರುಮಲಾಂಬಾ
ಸಖಿಯೆ ಬರುವದೀಗಲೆ ಪ ಕರಿದಂತ ರಚಿತ ಚರಣ ವರಮೌಕ್ತಿಕ ವಿಲಾಸ ಪರಿಶೋಭಿತ ಪರಿಯಂಕಕೆ ಬರುವದೀಗಲೆ1 ಮಂದರಧರ ಸಮೀರ ವಂದಿತನಂದ ಕುವರÀ ಕಂದರ್ಪ ಪಿತನ ಸುಖ ಶಯನಕೆ ಬರುವದೀಗಲೆ 2 ಏಣಾಂಕ ಬಿಂಬವದÀನೆ ಸುಶ್ರೋಣಿ ಮಂದಗಮನೆ ಶ್ರೀ ನಾರಸಿಂಹನ ವರಮಂಚಕೆ ಬರುವದೀಗಲೆ3
--------------
ಕಾರ್ಪರ ನರಹರಿದಾಸರು
ಸಖ್ಯವ್ಯಾಕೆ ಮುಖ್ಯ ಸ್ವಹಿತ ಹೇಳದನಕ |ಮಕ್ಕಳು ಯಾಕೆ ಪಿತೃಗಳ ಆಜ್ಞೆಯ ನಡೆಸದನಕ ಪ ದಾತನ್ಯಾಕೆ ಬಯಕೆ ಪೂರ್ಣ ಮಾಡದನಕ | ಬರಿ |ಮಾತು ಯಾಕೆ ಸ್ಥಿತಿಯ ಲೇಶ ಇಲ್ಲದನಕ 1 ಸಂತನ್ಯಾಕೆ ಶಾಂತಿ ನೆರಳು ಹಿಡಿಯದನಕ | ತನು |ಕಂಥೆಯಾಕೆ ಶಿವಪದಕ್ಕೆರಗೋ ತನಕ 2 ನೇಮವ್ಯಾಕೆ ಹೃದಯ ಶುದ್ಧವಾಗದ ತನಕ | ಶಿವನ |ನಾಮವ್ಯಾಕೆ ನಾಮರೂಪ ಅಳಿಯದ ತನಕ 3 ತುಂಬಿ ತುಳುಕದ ತನಕ 4 ಜಾಣನ್ಯಾಕೆ ಸಮಯ ಉಚಿತ ಅರಿಯದ ತನಕ | ಬರಿಗಾನವ್ಯಾಕೆ ಸ್ವರದ ಲಯವ ಧರಿಸದ ತನಕ 5 ಧರ್ಮವ್ಯಾಕೆ ಸಮಯ ಕಾಲಕ ಒದಗದ ತನಕ | ಸ- |ತ್ಕರ್ಮವ್ಯಾಕೆ ದಂಭತನವು ದಹಿಸದನಕ 6 ಧನ ವಿದ್ದ್ಯಾತಕೆ ಶರಣರಡಿಗೆ ತರದನ್ನಕ | ಈಮನ ವಿದ್ದ್ಯಾಕೆ ತನ್ನ ಉಗಮ ಸೇರದನ್ನಕ7 ಶಿಷ್ಯನ್ಯಾತಕೆ ಗುರುಗಳ ಹೃದಯ ತಿಳಿಯದನ್ನಕ | ಸರಸಭಾಷ್ಯವ್ಯಾತಕೆ ಶ್ರುತಿಯ ಗರ್ಭ ಉಸುರದನ್ನಕ 8 ಜ್ಞಾನವ್ಯಾಕೆ ಜ್ಞೇಯಗುರಿತವರಿಯದನಕ | ಬರಿ |ಧ್ಯಾನವ್ಯಾಕೆ ಚಿತ್ತವೃತ್ತಿ ಮರೆಯ ದನಕ 9 ಆರಾಮವ್ಯಾಕೆ ದುಃಖಸೀಮಿ ದಾಂಟದನಕ | ಶಿ- |ವರಾಮನ್ಯಾಕೆ ಪೂರ್ಣ ಸುಖದೊಳಾಡದ ತನಕ 10
--------------
ಶಿವರಾಮರು
ಸಂಗಮಾಡೆಲೋ ಶ್ರೀಹರಿ ದಾಸರಾ ಹಿಂಗಿ ಹೋಹುದು ತಾಭವದಾಸರಾ ಮಂಗಳ ಮಂಗಳಾತ್ಮಕ ಕೈಗೂಡಿ ಬಾಹನು ಅಂಗಜ ಜನಕ ಸಚತುರ್ಬಾಹನು 1 ಅವರ ವಾಕ್ಯ ಸುಧಾರಸ ಪಾನವಾ ಶ್ರವಣದಿಂದಲಿ ಮಾಡೆಲೊ ಪಾನವಾ ಭವದ ಜನ್ಮ ಜರಾಲಯ ಜಾರುವೀ ತವಕದಿಂದ ಚಿತ್ಸುಖ ಸೇರುವಿ 2 ಹಲವು ಸಾಧನಭರಿಗೆ ಬೀಳದೇ ಕಲಿತ ವಿದ್ಯತ್ವ ಗರ್ವವ ತಾಳದೇ ಬಲಿದು ಭಕ್ತಿಯ ಹೋಗದೆ ಸಿಂತರಾ ನೆಲಿಯ ಕೇಳೆಲೋಭಾವದಿ ಸಂತರಾ 3 ಮರಹು ಕತ್ತಲಿವೆಂಬುದು ಹಾರಿಸೀ ಅರಿಗಳಾರರೆ ಸಂಕಟ ಹಾರಿಸೀ ಅರಹು ಭಾಸ್ಕರ ತೋರುವ ಬೋಧಿಸಿ ಹೊರವ ಸಜ್ಜನ ಸಂಗವ ಸಾಧಿಸಿ 4 ನೆಲಿಯ ಹೊಂದುವ ಪರಿಯನಿಲ್ಲದೇ ಸುಲಭಸಾಧನ ತೋರಿಪರಲ್ಲದೇ ಬಳಲುವಾಬಾಹಳ ಸಾಪೇಳರು ಬಲಿದು ಪಾಯವ ಸಂತರ ಕೇಳರು 5 ಹರಿಕಥಾ ಮೃತಸಾರಸ ಪೇಳುತಾ ದುರಿತ ದುಷ್ಕøತ ತರುಗಳ ಶೀಳುತಾ ಪರಮ ಭಕ್ತಿಯ ಭಾಗ್ಯವ ಕುಡುವರು ಅರಿತು ಸಂತರ ಸಂಗವ ಬಿಡುವರು 6 ಏಳು ಭೂಮಿಕಿ ಮಾರ್ಗವ ತೋರಿಸಿ ಮಾಲ ಚಿತ್ಸುಖ ಮಂದಿರ ಸೇರಿಸಿ ಕಾಲಕರ್ಮದ ಕೋಟಲೆ ವಾರಿಸೀ ಪಾಲಿಸುವರು ಭವದಿಂತಾರಿಸಿ 7 ಸಂಗದಿಂ ಚಂದನಾಹದು ಪಾಮರಾ ಜಂಗಮೊತ್ತಮನಾಗನೇಪಾಮರಾ ಅಂಗದಿಂಮಾಡು ಸಂತರ ವಂದನಾ ಇಂಗಿಥೇಳಿದ ಮಹಿಪತಿ ನಂದನಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತತ ಹರಿಯ ನಾಮವನ್ನು ಯತುನದಿಂದ ನುಡಿವ ನರನು ಪ ಅತಿತ್ವರೆಯಲಿ ಸರ್ವಕಾರ್ಯ ಸಿದ್ಧಿಪೊಂದುವ ಅ.ಪ ದುರ್ಗಮಾರ್ಗ ಪಿಡಿದು ಕುರುಕ್ಷೇತ್ರ ಪಯಣವೇಕೆ ಜಿಹ್ವ ಯಗ್ರದಲ್ಲಿ ಹರಿಯನಾಮವಿರುವ ನರನಿಗೆ 1 ಮೂರು ಲೋಕಗಳಲಿ ಇರುವ ಹೇರು ಪುಣ್ಯಲಾಭ ಒಂದು ಸಾರಿ ಹರಿಯನಾಮದಿಂದ ಸಾಧ್ಯವಿರುವುದು 2 ಉಚ್ಚರಿಸಲು ಹರಿ ಎಂದೆರಡು ಅಕ್ಷರಗಳ ನರನು ಕ್ಷಣದಿ ಮೋಕ್ಷ ಪಾಥೇಯವನ್ನು ಸಿದ್ಧಗೊಳಿಸುವ 3 ಹರಿಯನಾಮ ಒಂದೇ ಎನಗೆ ಸರ್ವವಿಧದ ಜೀವನವು ಹರಿಯನಾಮ ಹೊರತು ಕಲಿಯೊಳರಿಯೆ ಗತಿಯನು 4 ಹರಿಯೇ ಗಂಗಾ ಹರಿಯೇ ಗಯಾ ಹರಿಯೇ ಕಾಶಿ ಸೇತು ಪುಷ್ಕರ ಹರಿಯ ನಾಮ ಜಿಹ್ವೆಯಲ್ಲಿ ಇರುವ ನರನಿಗೆ 5 ನೂಕಿ ಕಾಮಕ್ರೋಧಗಳನು ಏಕವಾರ ಹರಿಯೆಂದೆನಲು ನಾಕುವೇದಗಳನು ಓದಲೇಕೆ ಮನುಜನು 6 ಅಶ್ವಮೇಧ ಪುರುಷಮೇಧ ಯಜ್ಞಫಲವು ಲಬ್ಧವಿಹುದು ವಿಶ್ವಾಸದಿ ಹರಿಯನಾಮ ನುಡಿದ ನರನಿಗೆ 7 ಕೋಟಿ ಶತ ಗೋದಾನ ಕನ್ಯಾಭೂಮಿ ದಶಶತಕಗಳ ದಾನ ಸಾಟಿ ಹರಿಯನಾಮ ನುಡಿಯು ಭಕ್ತಜನರಿಗೆ 8 ಸಪ್ತ ಕೋಟಿ ಮಹಾಮಂತ್ರ ಚಿತ್ತ ವಿಭ್ರಮ ಕಾರಕಗಳು ಯುಕ್ತಿಯೊಂದೇ ಹರಿಯನಾಮದಕ್ಷರದ್ವಯ 9 ಮುನ್ನ ವರ ಪ್ರಹ್ಲಾದ ನುಡಿದ ಘನ್ನನಾಮ ಪಠನದಿಂದ ಪ್ರ ಸನ್ನ ಹರಿಯು ತನ್ನ ಪದವನೀವ ಮುದದಲಿ 10
--------------
ವಿದ್ಯಾಪ್ರಸನ್ನತೀರ್ಥರು
ಸಂತರನ ಸ್ಮರಿಸಿ ಜನರು ಸಂತರನ ಸ್ಮರಿಸಿ ಜನ ನಿಂತಲ್ಲಿ ಕುಳಿತಲ್ಲಿ ಇಂತೆಂತು ಸದ್ಧರ್ಮ ಚರಿಸುವ ಕಾಲಕ್ಕೆ ಅಂತರಂಗದಲಿದ್ದು ಚಿಂತೆಯನು ಬಿಟ್ಟು ಸಿರಿ ಕುಂತುಪಿತನೊಲಿಮೆಯಿಂದ ಪ ವ್ಯಾಸ ಶಿಷ್ಯರಾದ ಗುರುಮಧ್ವ ಮುನಿರಾಯ ಮಾಧವ ಮು ನೇಶ ಅಕ್ಷೋಭ್ಯ ಜಯರಾಯ ವಿದ್ಯಾಧಿರಾಜ ಪೋಷಿತ ಕವೇಂದ್ರತೀರ್ಥರಾ ನ್ಯಾಶಿ ವಾಗೀಶ ಯತಿ ರಾಮಚಂದ್ರ ನಂದ ವ್ಯಾಸ ವಿದ್ಯಾಧೀಶರೂ 1 ವೇದಮುನಿ ಸತ್ಯವ್ರತ ಸತ್ಯನಿಧಿ ರಾಯ ಬೋಧ ಮೂರುತಿ ಸತ್ಯನಾಥ ಸತ್ಯಾಭಿನವ ಕ್ರೋಧ ಜಯ ಸತ್ಯಪೂರ್ಣ ಸತ್ಯ ವಿಜಯ ವಿ ನೋದ ಸತ್ಯಪ್ರಿಯರೂ ಭೇದಾರ್ಥ ಬಲ್ಲ ವಿಭುಧೇಂದ್ರ ರಘುತನಯ ಸ ಮ್ಮೋದ ಜಿತಾಮಿತ್ರ ತೀರ್ಥ ಮುನಿಪ ಸುರೇಂದ್ರ ವಾದಿ ಎದೆ ಶೂಲ ವಿಜಯೀಂದ್ರ ಸುಧಿಯೀಂದ್ರ ಹ ಲ್ಲಾದ ರಾಘವೇಂದ್ರರು 2 ಯೋಗೆಂದ್ರ ಭೂಸುರೇಂದ್ರ ಸುಮತೀಂದ್ರ ಉಪೇಂದ್ರ ಯೋಗಿ ಶ್ರೀಪಾದರಾಯರ ಪೀ ಳಿಗೆಯ ಅತಿ ಸಾಧನವು ವ್ಯಾಸರಾಯರ ಪಾರಂಪರಿಯವ ಲೇ ಸಾಗಿ ಎಣಿಸಿ ಕೊಂಡಾಡಿ ಆಗಮನುಕೂಲ ಮಧ್ವ ಶಾಸ್ತ್ರವನುಸರಿಸಿ ವೇಗದಿಂದಲಿ ಮಹಸಂತರಿಗೆ ಶಿರ ನಿತ್ಯ 3 ಕ್ಷೇತ್ರ ಸರೋವರ ನದಿ ಮಿಗಿಲಾದ ದೇಶದಲಿ ಗಾತ್ರ್ರದಂಡಿಸಿ ಮಾಡಿ ಹರಿಯ ಮೆಚ್ಚಿಸುವ ಪಾ ರತ್ರಯವನೇ ಬಯಸುವ ಪುತ್ರ ಪೌತ್ರರ ಕೂಡಿ ಜ್ಞಾನದಲಿ ಇಪ್ಪ ಚ ರಿತ್ರಾರಾ ಮಹಿಮೆ ಕೊಂಡಾಡಿದವರ ವಿ ಚಿತ್ರವನು ಪೊಗಳುವ ದಾಸದಾಸಿಯರ ಪದ ಸ್ತೋತ್ರ ಮಾಡಿರೋ ಆವಾಗ 4 ಉದಯಕಾಲದಲೆದ್ದು ಸಂತನ ಮಾಲಿಕೆಯನ್ನು ಮೃದು ಪಂಚರತ್ನದಲಿ ನಿರ್ಮಿತವಾಗಿದೆ ಸದಮಲರು ಪೇಳಿ ಸಂತೋಷದಲಿ ಕೇಳಿ ಕೊರಲೊಳಗೆ ಪದರೂಪದಲ್ಲಿ ಧರಿಸಿ ಮದ ಮತ್ಸರವು ಪೋಗಿ ವೈರಾಗ್ಯದಲಿ ಸಾರ ಹೃದಯರ ಬಳಿ ಸೇರಿ ಜ್ಞಾನ ಸಂಪಾದಿಸಿ ಪದೋಪದಿಗೆ ವಿಜಯವಿಠ್ಠಲನ ನಾಮಾಮೃತವ ವದನದಿಂದಲಿ ಸವಿದುಂಬ 5
--------------
ವಿಜಯದಾಸ
ಸಂತರೆನ ಬಹುದೈಯ್ಯಾ ಇಂಥವರಿಗೇ | ಅಂತರಂಗದ ಹರಿ ಏಕಾಂತ ಭಕುತರೀಗೇ ಪ ಸುಖಕ ಮೈಯ್ಯವ ಮರಿಯಾ | ದುಃಖಗಳಿದಿಂದೇ ನೋಯ | ಚಕಿತನಾಗನು ಕುಮತಿ ವಿಕಳ ನುಡಿಗೆ | ಪ್ರಕಟ ಸೌಖ್ಯಕ ಹಿಗ್ಗ | ಸಕಲರೊಳು ಹರಿಯೇ ವ್ಯಾಪಕ ವರಿದು ನಿರ | ಹಂಕೃತಿಯನುಳ್ಳರಿಗೇ 1 ಪರಮ ಭಾಗವತೆನಿಸಿ | ಪರರ ಮನಿಗಳಿಗ್ಹೋಗಿ | ಪಿರಿದು ವಿದ್ಯವ ತೋರಿ ಪೊರೆಯ ನೋಡಲಾ | ಪರಧನಕ ಕರವಿಕಲ | ಪರಸತಿಯರಿಗೆ ಕುರುಡ | ಪರರ ನಿಂದೆಗೆ ಮೂಕ ಪರವಶ್ಯಾದರಿಗೆ 2 ವೇಷಡಂಭಕವಿಲ್ಲಾ | ಕ್ಲೇಶ ಕರ್ಮಗಳಿಲ್ಲಾ | ಈ ಸಿರಿಯ ಸುಖದ ಮನದಾಶೆಯಿಲ್ಲಾ | ವಾಸುದೇವನ ಪದ | ಧ್ಯಾಸದನುಭವದಿ ನಟ | ಪರಿ ಸಂಸಾರ ಲೇಶ ದೋರ್ವರಿಗೆ 3 ಹರಿಯ ನಾಮವ ನೆನೆದು | ಹರಿಯ ಕೀರ್ತನೆಯಲ್ಲಿ | ಹರುಷಗುಡಿಗಟ್ಟಿ ತನು ಮರದು ನಿಂದು | ಬರುವ ಪ್ರೇಮಾಂಜಲಿಯ | ಭರಿತಲೋಚನನಾಗಿ | ತರಿಸಿ ತಾರಿಸುವ ಘನಕರುಣವಂತರಿಗೆ 4 ಇಂತು ದುರ್ಗಮವಿರಲು | ಸಂತರಾವು ನೀವೆಂದು | ಸಿಂತರವ ಹೋಗಿ ಜನ ಸಿಂತರಿಸುವಾ | ಭ್ರಾಂತ ಮೆಚ್ಚುವನಲ್ಲಾ | ಶಾತಗುರು ಮಹಿಪತಿ ಸ್ವಂತನುಜಗೆಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ತವರಿಗೆ ನೀನಳುತಲಿರುಮೆನ್ನೂಮತ್ತನಾಗಿ ಮಂದಜೀವಾ ಪಮೃತ್ಯುವೆಂಬರಿಪು ಕುತ್ತಿಕೆಡಹಿದಾಗಮತ್ತಾರಿಗಳುವೆಯೊ ಜೀವಾ ಅ.ಪನೆತ್ತಿಯ ಬಡುಕೊಂಬೆ ಜೀವಾಕತ್ತೆಯಂತೊದರದೆ ಬಿಡದೆ ಕಾಂತೆಯ ಬೆನ್ನಹತ್ತಿ ಹೋಗುತ್ತಿಹೆ ಜೀವಾ 1ಕತ್ತಲೆಯಂತಿಹ ನಿನ್ನ ವಿದ್ಯೆಯನುತೊತ್ತಳದುಳಿವರೆ ಜೀವಾಉತ್ತಮ ಜನ ಸಂಗವ ಮಾಡು ನಿನ್ನನೀನೆತ್ತಿಕೊ ಭವಕೂಪದಿಂದಾ 2ಏಳು ಶ್ರವಣ ಮನನವ ಮಾಡು ನೀನಿಂತುಘೋಳಿಟ್ಟರೆ ಫಲವೇನೂಬೀಳು ಗುರುವಿನ ಚರಣ ಕಮಲಗಳಲ್ಲಿನಾಳೆ ಮುಕ್ತಿ ಸುಖವುಂಟೂ 3ತಾಳು ಶೀತೋಷ್ಣಾದಿ ದೇಹಧರ್ಮಗಳನುಮೂಳ ಸುಮ್ಮನೆ ಕೆಡಬೇಡಾನಾಳೆ ನಾಡಿದ್ದು ಸಾಧಿಸುವೆನೆಂದೆನುತಲೆಹಾಳಾಗಬೇಡೆಲೊ ಜೀವಾ 4ಇತ್ತಲತ್ತ ಹಿಂದೆಮುಂದೆ ಕೆಳಗೆ ಮೇಲೆಉತ್ತಮ ಬೊಮ್ಮವೆಂದೆನುತಾಸತ್ಯವೆಂದು ಶೃತಿಬ್ರಹ್ಮಪುರಸ್ತಾದೆನುತ್ತ ಸಾರುತ್ತಿದೆ ಜೀವಾ 5ಮನೆಮಾರು ಧನ ನಿನ್ನತನು ಮೊದಲಾದವುಇನಿತು ನಿತ್ಯವಲ್ಲ ಜೀವಾಘನ ವಿರತಿಯ ಮಾಡು ಮನದಲ್ಲಿ ಧ್ಯಾನಿಸುವಿನುತ ಚೈತನ್ಯವ ಜೀವಾ 6ಅನುದಿನ ನಿನ್ನ ನಿಜವ ನೀತಿಳಿದರೆಳ್ಳನಿತುಶೋಕಮೋಹವಿಲ್ಲ ಜೀವಾಸನುಮತಿುಂದ ಗೋಪಾಲಾರ್ಯನ ಸೇರಿಚಿನುಮಯನಾಗೆಲೊ ಜೀವಾ 7
--------------
ಗೋಪಾಲಾರ್ಯರು
ಸತ್ತು ಚಿತ್ತಾನಂದ ಭಕ್ತಜನಬೆಂಬಲನೆ ಸತ್ಯಾತ್ಮ ಸರ್ವೋತ್ತಮ ಪ ಮೃತ್ಯುಸಂಹರ ಸರ್ಗಮತ್ರ್ಯಪಾತಾಳತ್ರಯ ಶೌರಿ ಅ.ಪ ಬದ್ಧಕುಲಹರಣ ಗೋವರ್ಧನೋದ್ಧಾರ ಕ್ಷೀ ರಾಬ್ಧಿ ಕನ್ನಿಕಾರಮಣ ಬದ್ಧಸಂಸಾರದೊಳಗೆ ಬಿದ್ದು ಬಳಲುವ ಎನ್ನ ನುದ್ಧರಿಸು ದಯಭೂಷಣ ಬಿದ್ದೆ ನಿಮ್ಮಯಪದಕೆ ಮಧ್ವಮುನಿಪ್ರಿಯನೆ ಪರಿ ಶುದ್ಧನೆಂದೆನಿಸೆನ್ನ ಶುದ್ಧಪದ್ಧತಿಗಳನು ತಿದ್ದು ಎನ್ನೊಳಗಿದ್ದು ಶುದ್ಧಚೈತನ್ಯರೂಪ ಭೂಪ 1 ಕಪಟಬುದ್ಧಿಯ ಕಳೆದು ಅಪರೂಪ ನಿಜಜ್ಞಾನ ಕೃಪೆಮಾಡು ಭಕ್ತಲೋಲ ಅಪರೋಕ್ಷಮತಿ ನೀಡಿ ಅಪಮೃತ್ಯು ಪರಿಹರಿಸು ಅಪರಿಮಿತ ಮಹಿಮ ಜಾಲ ಸುಫಲದಾಯಕ ನಿಮ್ಮ ಜಪವೆನ್ನ ಜಿಹ್ವೆಯೊಳು ಸ್ಥಾಪಿಸೈ ಭಜಕಜನಪಾಲ ಕಪಿವರದ ವನಮಾಲ ಕಪಟಗಳಕುಲಕಾಲ ಕೃಪಾದೃಷ್ಟಿನೀಡೆನ್ನೊಳು ಕೇಳು 2 ಭ್ರಷ್ಟನು ಇವನೆಂದು ಬಿಟ್ಟಿ ಬೇಸರ ಬೇಡ ಮುಟ್ಟಿಭಜಿಪೆ ತವಪಾದವ ಎಷ್ಟು ತಪ್ಪಿರ್ದರು ಸುಟ್ಟು ಸಫಲೆನಿಸೆನ್ನ ಕೆಟ್ಟ ಬವಣೆ ಕಳಿಯಭವ ಹುಟ್ಟಿ ಸಾಯುವ ಮಹಕೆಟ್ಟ ಕಷ್ಟದ ಹಾದಿ ಕಟ್ಟುಮಾಡು ಹೇ ಮಾಧವ ದಿಟ್ಟ ಶ್ರೀರಾಮ ಎನ್ನ ಇಷ್ಟದೇವರು ನೀನೆ ಶಿಷ್ಟ ಸಜ್ಜನರ ಪ್ರೇಮಿ ಸ್ವಾಮಿ 3
--------------
ರಾಮದಾಸರು
ಸತ್ಯ ಭಕ್ತೇಶ | ನತೋಸ್ಮ್ಯಹಂ | ಸತತಂ ಪ ಪ್ರತ್ಯುಹರರ್ಥಿತ ಸಜ್ಜನ ನಿವಹಂಸ್ತುತ್ಯ ಸದ್ವೈಷ್ಣವ ಸನ್ಮತ ಪ್ರಚುರಂ |ದೈತ್ಯಹರಂ | ಪೃಥೆ ಕುವರಂ || ಆರ್ತಿದ ಮಾಯ್ಮತ ಧ್ವಂಸಕರಂಪ್ರಾರ್ಥಿತ ಫಲ್ಗುಣ ರಥ ಸ್ಥಿತಂ | ಭೋ ಸುಮತಿ ಜ್ಞಂ ಅ.ಪ. ಭವ ಭಯ ನಿರ್ಗಮೋಪಾಯಂ |ಕರ್ಗಳು ಶೀರ್ಷ ಸಮಗ್ರೋಪಾಂಗ ನಿ |ರರ್ಗಳ ವ್ಯಾಪ್ತ ಶ್ರೀ ಹರಿ ರೂಪಂ ||ವಿತತ ಸಂದರ್ಶನ ಸಚ್ಚಿತ್ಸುಖಮಯ ದೇಹಂ | ನಮಾಮಿ ಧರ್ಮಂ 1 ಹಸ್ತಿ ಭವಾರ್ಣವ ಊರ್ಜಿತ ಸ್ವಜನಗರ್ಜನೆ ಮಿಶ್ರರ ಲಿಂಗಪಸರಣಂ |ಕಲಿವಪು ಹರಣಂ | ಭೋಪ್ರಥಮಾಂಗಂ 2 ರಜತ ಪೀಠ ಪುರವರ ದಾಸಂ |ಹೃತ್ಸರೋಜದೃತ ವೇದವ್ಯಾಸಂ |ತತ್ವ ? ವಿಚಾರೆ ಅಸದೃಶ ಮಹಿಮಂ |ಭಕ್ತಾಭಯ ಪ್ರದ ವಿತತ ತ್ರೈಭುವಂ |ಕರ್ಮೆಂದೀಂದ್ರಂ | ಮುಕ್ತ ಸುಸೇವ್ಯಂ ದೋಷ ರಹಿತ ಹರಿ ತೋಷಿತ ಹೃದಯಂ | ಸದ್ಗುಣಾರ್ಣವಂ |ವಿತತಾತಥ್ಯ ಸಚಾದ್ಧ ಜೈನ | ದುರ್ಮತನಿವಹ ವಿಧ್ವಂಸನ ಶೀಲಂ |ಆಸ್ತಿಕ ಹರಿಮತ ಸುಸ್ಥಿರ ಸ್ಥಾಪಿಸುವ್ಯಕ್ತ ಭಕ್ತ ಹೃತ್ಸರಸಿಜ ಪೀಠ ವಿನ್ಯಸ್ತ | ಸುರೂಪ |ಗುರು ಗೋವಿಂದ ವಿಠಲಜ | ಮಹಿಮಾ ಗಾಧಂ | ಸ್ತೋತ್ರಾ ಸೌಧ್ಯಂ 3
--------------
ಗುರುಗೋವಿಂದವಿಠಲರು