ಒಟ್ಟು 6439 ಕಡೆಗಳಲ್ಲಿ , 132 ದಾಸರು , 3726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆನೊ ನೀರೇರು ಹಾಕ್ಷ ನಿನ್ನ ನಂಬಿದೆನೊ ನಿನ್ನ ನಂಬಿದೆ ಯನ್ನ ಸಲಹುವದಿನ್ನು ಮನ್ನಿಸೊ ಹೆನ್ನೆ ವಿಠ್ಠಲ ಪ ಸಿಂಧು ಗಂಭೀರ ಶ್ರೀ ವೇಣುನಾದ ಮಂದರಾದ್ರಿಧರ ನಂದನಂದನ ಕುಂದರದನ ಗೋವಿಂದ ಪರಮಾ- ನಂದ ವಿಗ್ರಹ 1 ಜಾನಕೀರಮಣ ಸರ್ವೇಶ ಈಶವಿನುತ ಚರಣ ದೀನಬಾಂಧವ ದೇವರದೇವ ಪುರಾಣಪುರುಷ ಮಹಾನುಭಾವ ಹರಿ 2 ಬಾಲಗೋಪಾಲ ಭಾಸುರ ಗುಣಶೀಲ ಶ್ರೀಲೋಲ ನೀಲವರ್ಣ ಹೆನ್ನೆಪುರೀಶ ಕುಚೇಲವರದ ಮಾಧವ 3
--------------
ಹೆನ್ನೆರಂಗದಾಸರು
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಂಬಿದೇ ನರಹರಿಯೆ ನಾ ಪ ನಂಬಿದೆನೊ ಬ್ರಹ್ಮಾದಿ ವಂದಿತ ಪೂರ್ಣ ಸುಗುಣ ಕಂದಂಬ ನಿರುಪಮ ನಿತ್ಯಮುಕ್ತಾಮುಕ್ತ ಜೀವದ ವಿಶ್ವ ಭಾಸಕ ಮುಕ್ತಿದನೇಕನೆಂಬುದಾ ಅ.ಪ ನೊಂದು ನೊಂದೆನೊ ಭವದಿ ಹಿಂದುಮುಂದನು ಕಾಣೆ ಬಂಧ ನೀಡುವ ನೀನೆ ಬಂಧಾ ಬಿಡಿಸಲುಬೇಕೊ ಸ್ವಾಮಿ ಸಂಶಯವೆಂದು ಪೊಗಳುವೆ ಪೂರ್ಣ ಪೂರ್ಣಾನಂದ ಸಜ್ಜನನಂದ ಕಾಮದ ಸಾಮ ಪೂರ್ಣಚಂದ್ರ ಸುತೇಜಭವಹರ 1 ಕರ್ಮ ಅಡ್ಡಿಯಾಗಿದೆ ಸುಖಕೆ ವಡ್ಡುವೆ ಸರ್ವಸ್ವನಿನಗೆ ದೊಡ್ಡವನು ನೀವಲಿಯೆ ಎನ್ನಯ ದಡ್ಡತನ ನಿನ್ನೇನುಮಾಳ್ಪದು ಸಡ್ಡೆಮಾಡದೆ ದೋಷರಾಶಿಯ ಮಮತೆ ತೊಲಗಿಸಿ ಗುಡ್ಡಹೊತ್ತ ಮಹಾಂತರೊಡೆಯನೇ 2 ಸಿರಿ “ಕೃಷ್ಣವಿಠಲ”ನೆ ನಿನ್ನಾಕರುಣವೆ ತಾರಕ ಇನ್ನುಮುನ್ನು ನಿನ್ನ ನಂಬಿಹೆ ಜ್ಞಾನಮಾನವ ನೀಡ್ವದಾತನೆ ಸಣ್ಣವನ ಪಿಡಿದಿನ್ನು ನೀ ಪ್ರಸನ್ನನಾಗೆಲೊ ದೇವದೇವನೆ ನಿನ್ನದಾಸರ ಭಾಗ್ಯವೊಂದೇ ಸಾಕು ಸಾಕೈಯೆಂದು ಬೇಡುವೆ ಅನ್ಯರೊಳ್‍ರತಿ ಇಲ್ಲದಿರಲೈ ಮಾನ್ಯ ಮಧ್ವರ ಮತದಿ ನಿಲಿಸು 3
--------------
ಕೃಷ್ಣವಿಠಲದಾಸರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಂಬು ನಂಬು ನಾರಾಯಣನ ಈಮಿಕ್ಕ ದೈವಗಳು ಕಾಯಬಲ್ಲವೆ ಪ. ಅಂಬರದಿ ಧ್ರುವನ್ನ ನೋಡು ಈ ಭಕ್ತಿಮೌಳಿಯೆಂಬೊ ಪ್ರಹ್ಲಾದನ್ನ ನೋಡುಕುಂಭಿಣಿಯೊಳು ವಿಭೀಷಣಗೆ ಶ್ರೀರಾಮ ಕೊಟ್ಟತುಂಬಿದ ಭಾಗ್ಯವ ನೋಡಯ್ಯ 1 ಹಿರಣ್ಯಾಕ್ಷನೆಂಬೊ ದೈತ್ಯನ ಆ ಸಿರಿಯೆಲ್ಲಕರಗಿ ಹೋದದ್ದು ನೋಡಯ್ಯದುರುಳರಾವಣ ಏನಾದ ಆ ದುಃಖವನ್ನುಪಾರಂಪರ್ಯದಿಂದ ಕೇಳಯ್ಯ 2 ನ್ಯಾಯಕ್ಕಾಗಿ ಮನೆಗೆ ಬಂದ ಶ್ರೀಕೃಷ್ಣನ[ಕಟ್ಟೆಂದ] ಖಳನೇನಾದಹಯವದನನ್ನ ನಂಬಿದ ನಮ್ಮ ಧರ್ಮ-ರಾಯನ ಭಾಗ್ಯ ನೋಡಯ್ಯ3
--------------
ವಾದಿರಾಜ
ನಂಬು ನಂಬೆಲೆ ಮನ ಗಿರಿಧರನ ನಿನ ಗಿಂಬುಗೊಡುವ ಭಕ್ತ ಸಂಜೀವನ ಪ ಕತ್ತೆಯಂತೆ ಕೂಗಿ ಕೆಡಬೇಡ ಪರ ಮಾರ್ಥತತ್ತ್ವದ ಹಾದಿ ತಿಳಿ ಮೂಢ ಸತ್ಯರ ಪಾದದಿ ಮನನೀಡೋ ನಿತ್ಯ ಉತ್ತಮರೊಳಗಾಡಿ ನಿಜ ನೋಡೋ 1 ಕೋತಿಯಂತೆ ಕುಣಿಯಲುಬೇಡೋ ಮಹ ನೀತಿವಚನ ಮೀರಿ ನಡಿಬೇಡೋ ಮಾತುಮಾತಿನ ಸಂಶಯಬೇಡೋ ಮುಂದೆ ಪಾತಕದೊಳು ಬಿದ್ದು ಕೆಡಬೇಡೋ 2 ಸಾರಸಂಸಾರ ಮಿಥ್ಯವೆಂದು ತಿಳಕೋ ನೀನು ಧೀರ ಶ್ರೀರಾಮನ ಅಡಿಗ್ಹೊಂದಿಕೋ ಗಂ ಭೀರ ಮೋಕ್ಷಪದವನೆ ಪಡಕೋ 3
--------------
ರಾಮದಾಸರು
ನಂಬುವುದು ತಾನು ಎಂತು ಸತಿಯು ಸುತರು ಮಗಳನುನಂಬಿ ಕಡೆ ಹಾಯ್ದುದುಂಟೆ ಹಾದಿಕಾರರನು ಪ ದಾರಿಕಾರರಿಗೆ ವಸತಿ ಮಳಿಗೆ ಭೇಟಿಯಲ್ಲೇದಾರಿ ಹಿಡಿದ ಬಳಿಕ ತಿರುಗಿ ಭೇಟಿಯಾಗೋದೆಲ್ಲಿದಾರ ಸುತರ ಭೇಟಿಯಿದೇ ದೇಹದೊಳಗೆ ಎಂದರಿಯೋಶರೀರವು ಬಿದ್ದ ಬಳಿಕ ಭೇಟಿ ಮುಂದೆ ಮರೆಯೋ1 ಕನಸಿನವರ ತಾನು ಈಗ ನೆನಸಲಿಕ್ಕೆ ಬಹರೆಕನಸಿನಂತೆ ತೋರುವರು ನೀನು ನಚ್ಚುವರೆಮನೆಯ ಬದುಕುಭಾಗ್ಯವೆಲ್ಲ ಮನದಿ ಜರೆದು ಬಿಡುನಿನಗೆ ಗತಿಯು ಏನು ಎಂದು ನೀನು ತಿಳಿದು ನೋಡು 2 ಹೆಗ್ಗಣವು ಜಾಗಿನೊಳಗೆ ಬಿದ್ದು ಮಿಡುಕಿದಂತೆವೆಗ್ಗಳಾಗಿ ಸಂಸಾರಕೆ ಮಾಡಿವೆಯೋ ಚಿಂತೆನುಗ್ಗು ಆದೆ ಬಯಲಭ್ರಾಂತಿ ನಿನಗೆ ವ್ಯಾಪಕಾಗಿಮುಗ್ಗುವೆ ನೀನೊಣನ ತೆರದಿ ನರಕದಲ್ಲಿ ಹೋಗಿ3 ನನ್ನ ಸಂಸಾರವೆನ್ನಬೇಡ ನೀನು ಇದನು ಈಗನನ್ನ ನನ್ನದೆಂದೆ ಹೋದ ನಿಮ್ಮಪ್ಪ ಮುಕ್ತನುಇನ್ನು ನಾಶವಿದು ಒಬ್ಬರಿಲ್ಲ ಸತ್ಯನಿನ್ನದಾರೆಂದು ಮರೆಯದಡೆ ನಿತ್ಯಾ4 ಇಂದ್ರಜಾಲ ನೋಡಲಿಕ್ಕೆ ಖರೆಯದಾಗಿ ಇಹುದುಅಂದದಾ ಪರಿಯು ಸಂಸಾರವೆ ನಿತ್ಯವಿಹುದುಬಂಧನವು ನಿನಗೆ ಇಹುದು ಗುರುವಿನ ಪಾದವಹೊಂದು ಮುಂದೆ ಚಿದಾನಂದನಹೆ ನೀನೀಗ ಎಂದು 5
--------------
ಚಿದಾನಂದ ಅವಧೂತರು
ನಂಬೂ ವಿಷ್ಣು ಪಾದಧ್ಯಾನಾ ನರನೆ ಪಾಮರನೆ ಇನ್ನು ಕುಂಭಿಣಿ ಪಾತಕಗಳೆಂಬವು ಬಾಧಿಸಾವು ಜನ್ಮ ಜನ್ಮದಿ ಪ ಅಜಾಮಿಳಾ ವ್ಯಾಸಾಂಬರೀಷ ಶಂಭುಶಂಕರ ರಾಣಿಗ್ಹೇಳಿದ ಶ್ರೀರಾಮಮಂತ್ರವನೇ ಕೂಡಾ 1 ಕಾಯಿದದ್ದು ನೋಡು ಸುಧೆನುಣಿಬಡಿಸಿದ ನೋಡು ಭಾಗ್ಯವು ಕೊಟ್ಟದ್ದು ನೋಡು ಅರಿಮುಖಲಿ ಚಕ್ರವೆತ್ತಿದಗೆ ಇತ್ತ ಐಶ್ವರ್ಯವು ನೋಡು 2 ಮೂಲ `ಹೊನ್ನೆವಿಠ್ಠಲ’ ಭಗವಂತಾನಾ ನಂಬಿದವ ಕಲದ----ಅಕಾಲ ಸುಖ ಸಂಭ್ರಮ ಪಡೆದು ಕಡೆಗೆ ಕಾಣೋ ನೋಡಾ 3
--------------
ಹೆನ್ನೆರಂಗದಾಸರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಗ್ಯಾಕೀ ಸಂಸಾರ ಚಿಂತೆ ಕ್ರಮವಾಗಿ ಧರ್ಮದೊಳಿದ್ದರೆ ಪ ಕ್ಷಮೆಬಾರದು ಇದರಲ್ಲಿ ಅ.ಪ ಜವನವರು ಎಳೆಯುವರು ಯಾರು ಬರರು | ಸಂಗಡ 1 ಅನುಸಾರಿಗಳಲ್ಲ ಮನಸೇ ಜಿತವಿಲ್ಲ ಕೊನೆಗೆ ದಿಕ್ಕಿಲ್ಲ ಸಿರಿನಲ್ಲ ಕಾಯಬೇಕಲ್ಲ | ನಿಜವು 2 ಮಾಯ ಬರಿದೆ ಜೀವಗೆಲ್ಲದೆ | ಶಾಸ್ತ್ರದಿ 3 ದ್ವಾಸುಪರ್ಣವೆಂಬೊವಾಶೃತಿ ನೋಡಲು ಈಶನಾಧೀನ ಸಕಲ ಜೀವನ ಯಾತಕ್ಕಭಿಮಾನ | ಅಜ್ಞಾನ 4 ಗುರುರಾಮವಿಠಲ ಹೊರವೊಳಗಿದ್ದೆಲ್ಲ ಕರುಣಿಸುವನು ಸರ್ವಾಧಾರನು ತನ್ನವರನು ಭಯವೇನು 5
--------------
ಗುರುರಾಮವಿಠಲ
ನಮಿಸಿರೊ ನಾರಾಯಣನಂಘ್ರಿಗೆ ಭವಕ್ರಮವಿನ್ನು ಸಾಕು ಮುಕ್ತಿಸುಖವೆ ಬೇಕೆಂಬುವರು ಪ. ಮೂರುಬಾರಿ ಪೊಡವಡಿರೊ ಮ-ತ್ತಾರು ಬಾರಿ ಪೊಡವಡಿ ಪುರುಷೋತ್ತಮಗೆಆರೆರಡಕೂಡಿ ಪೊಡವಡಿ ಪುರುಷೋತ್ತಮಗೆರ ಇಪ್ಪತ್ತಮೂರಕ್ಕೊಂದ ಕೂಡಿ ಪೊಡವಡಿರೊ 1 ಶಕ್ತಿಯಿದ್ದರೆ ನಾಲ್ವತ್ತೆಂಟು ಸಾರಿ ಹರಿ-ಗರ್ತಿಯಿಂದಲಿ ಪೊಡವಡಿರೊಆರ್ತಬಂಧು ಸಿರಿರಮಣಗೆ ಅಷ್ಟಾಂಗಯುಕ್ತವಾಗಿ ದಂಡದಂತೆ ಭೂತಳದಲಿ 2 ತುಂಬಿ 3 ಸಂಧ್ಯಾಂ ದೃಷ್ಟ್ವಾಗುರುಂ ಸಾಧ್ಯಂ ಗುರು ಸ್ವಗುರು ಮೇವಚಾದ್ವಿಚತುರ್ವಿಂಶತ್ತದರ್ಧಂ ನಾತದರ್ಧಮಥವಾನಮೇ ನಮೋತದರ್ಥಯಥವಾತದರ್ಧಂ ಸರ್ವದಾ ಮಮೇ 4 ಆರೋಗಣೆಯ ಮಾಡಲಾಗ ವಂದಿಸಬೇಡಗುರು ಹಿರಿಯರ ಸಂಗದೊಳೆರಗಬೇಡಸಿರಿ ಹಯವದನನಗ್ರಪೃಷ್ಟಾತ (?)ಪುರ ವಾಮಭಾಗ ಮಜ್ಜನಕಾಲಂಗಳ ಬಿಟ್ಟು5
--------------
ವಾದಿರಾಜ
ನಮಿಸುವೆನು ನಮಿಸುವೆನು | ವಿಜಯದಾಸರಿಗೇ ಪ ಅಮಮ ಮಹಿಮೆಗಳ್ನಿಮ್ಮ | ವರ್ಣಿಸಲು ಅಳವೇ ಅ.ಪ. ಕವಚ ವಿಜಯವ ಪಠಿಸಿ | ಅವನಿಯೊಳು ಸಜ್ಜನರುಬವಣೆಗಳ ಕಳಕೊಂಡು | ಸುಖದಿಂದ ಜೀವಿಪರೋ |ಅವರನುಗ್ರಹದಿಂದ | ಭವಣೆ ಎನೆ ಮದ್ಭಯವುಸವೆದು ಪೋಗುತ ಗ್ರಂಥ | ಮುದ್ರಣವ ಮುಂಬರಿಸಿದೆ 1 ಹಯಾಸ್ಯ ನಂಘ್ರಿಯಲಿಕಾರ್ಯಮುಂಬರಿಸಿರುವ | ಮಹ ಕಾರುಣ್ಯ ಮೂರ್ತೇ 2 ಹರಿಗುರು ಗೋವಿಂದ | ವಿಠಲ ಚರಣಬ್ಜವನುಪರಿಪರಿಯಲಿಂದತುತಿಸಿ | ಮರಳಿ ಕಾಂಬುವ ಸುಹವನಾವರ ವಿಜಯ ದಾಸಾರ್ಯಾ | ಕರುಣಿಸೆನೆ ಬಿನ್ನಪವಕರಗತವ ಮಾಡುವುದು | ಉರುಕರುಣ ಸಂಪನ್ನಾ 3
--------------
ಗುರುಗೋವಿಂದವಿಠಲರು
ನಮಿಸುವೆನು ವ್ಯಾಸಾರ್ಯ | ಸುಮನಸರಿಗತಿ ಪ್ರೀಯ ವಿಮಲಕೀರ್ತಿ ಸುಶಯ್ಯ ಯತಿವರಾರ್ಯ ಪ ಅಮಮ ನಿಮ್ಮಯ ಕೀರ್ತಿ ಪೊಗಳಲಳವೇ ಎನಗೆಸುಮನಸ ಮುನಿಯನುಗ್ರಹೀತಾ - ಖ್ಯಾತಾ ಅ.ಪ. ಕನಕ ಕಶ್ಯಿಪು ಸುತನೆ | ಧನಕನಕ ತೃಣಗಣನೆಅಣು ಘನನ ಶ್ರೀ ಚರಣ | ವನಜ ಭ್ರಮರಾ |ಮನುಜಮೃಗ ವೇಷ | ಶ್ರೀ ನರಹರಿಯ ಮೂರ್ತಿಯನುಘನವಾದ ಸ್ತಂಭದೊಳು | ಕರೆದು ತೋರಿಸಿದೇ 1 ಮತ್ತೆ ನೀ ತ್ರೇತೆಯಲಿ | ಹತ್ತು ತಲೆ ರಾವಣನಭ್ರಾತೃವಾಗವತರಿಸಿ | ಕೀರ್ತಿಯಲಿ ಮೆರೆದೇ |ಭೃತ್ಯ ಭಾವದಿ ನಮಿಸಿ | ಸತ್ಯಾತ್ಮ ಶ್ರೀಹರಿಯವಿಸ್ತರದ ಕೀರ್ತಿಯಲಿ | ಲಂಕ ಪತ್ತನವಾಳ್ದ 2 ನರಪ ಪ್ರತೀಪನಾ | ಪರಸೂನು ವೆಂದೆನಿಸಿ ಕುರುಪತಿಯ ಋಣಸೇವೆ | ಸರಿಯಾಗಿ ಸಲಿಸೀ |ಮರುತಾತ್ಮ ಭೀಮನಿಂ | ವರವನೇ ಪಡೆಯುತ್ತವರ ಕಲೀಯಲಿಯತಿ | ವರನೆನಿಸಿ ಮೆರೆದೇ 3 ಬ್ರಹ್ಮಣ್ಯಯತಿ ಕರಜ | ಬ್ರಹ್ಮ ಬ್ರಾಹ್ಮಣ ಪ್ರೀಯಬ್ರಹ್ಮಣ್ಯ ಪ್ರೀಯ ಸು | ಬ್ರಹ್ಮಣ್ಯನಾವೇಶನೇ |ಬ್ರಹ್ಮಾಸ್ಮಿ ಎಂದೆನಿಪ | ಬ್ರಹ್ಮದ್ವೇಷಿಯ ನಿಕರಬ್ರಹ್ಮಾಂಡದಲಿ ತರಿದೇ | ಬ್ರಾಹ್ಮಣರ ಪೊರೆದೇ 4 ಭಾಗವತ ಪ್ರೀಯ 5
--------------
ಗುರುಗೋವಿಂದವಿಠಲರು
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ. ಅಮೋಘ ಶಮದಮಾದಿಗುಣ ಸಮೂಹ ಗತವಿಮೋಹ ಸದಾ ಅ.ಪ. ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವ ಮಾರಜ ಭ್ರಮೆಯ ದೂರಗೈದ ಸುವಿ- ಚಾರಧೀರ ಸುರವಾರವಿನುತ ಪದ 1 ವೃಂದಾರಕೇಂದ್ರ ತವಚರಣಕೆ ವಂದಿಸುವೆ ವೃಂದಾರ ಮಂದಾರ ಚಂದನಚರ್ಚಿತ ಚಂದ್ರಚೂಡ ಮನೋನಂದ ಮೂರುತಿಯೆ 2 ಸುಜನ ಮುಮುಕ್ಷುಜನಪ್ರಿಯ ಸುಕ್ಷೇಮದ ಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ- ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಕಮಲಾಲಯೆ ಸರ್ವೋ ತ್ತುಮ ನಾರಾಯಣನಂಕದ್ವಯ ಸಮುಪಸ್ಥಿತೆ ಸುಂದರ ಮದಗಜ ಗಮನೆ ಗುಣಪೂರ್ಣೆ ಶೋಭಾನೆ ಪ ಕಂಗಳ ಕುಡಿನೋಟದಿ ಕಂಜಜ ಗಂಗಾಧರ ಸುರಮುಖ ಸುಜನರ ಇಂಗಿತ ಫಲ ಪೂರೈಸಿಕೊಡುವ ಮಂಗಳ ಸುಚರಿತ್ರೆ ಭೃಂಗಾಳಿಗಳಂದದಿ ಸೊಗಯಿಪ ಮುಂಗುರುಳಿಂದೊಪ್ಪುವ ನಿಜಪತಿ ಸಂಗಡ ಬಾ ಹಸಿಯ ಜಗಲೀಗೆ 1 ಜಲಜಾಕ್ಷನ ವಿಮಲಾಂಗದಿ ಪ್ರತಿ ಫಲಿಸಿದ ರೂಪಗಳನೆ ನೋಡುತ ಪುಳಕೋತ್ಸವದಿಂದಲಿ ಪಾಡುತ ಹೊಲಬು ಗಾಣದಲೆ ತಲೆದೂಗುತ ಮಿಗೆ ಸಂತೋಷದಿ ಗಳರವದಿಂ ಪಾಡುತ ಶ್ರೀ ಭೂಲಲನೆ ಬಾ ಹಸಿಯ ಜಗಲೀಗೆ 2 ಪ್ರತಿಫಲಿಸಿಹ ರೂಪಗಳೆನ್ನವು ಕತಿಪಯರೂಪಗಳೆನಗಿಂದಲಿ ಅತಿಶಯವೆ ತೋರುತಲಿಪ್ಪವು ಪ್ರತಿ ಪ್ರತಿಕ್ಷಣದಿ ಶ್ರುತಿ ಪ್ರತೀಕನು ದಯದಿಂದೆನ ಗ್ಹಿತದಿಂದಲಿ ತೋರಿದನೆನುತಲಿ ನತಿಸುತ ನಗುತಿಪ್ಪ ಲಕ್ಷ್ಮೀ ಹಸಿಗೇಳು 3 ಆ ಬ್ರಹ್ಮಾಂಡಗಳೊಳ ಹೊರ ಗುಪಮರು ನಿನಗಿಲ್ಲವಾಗಲು ಅಪರಾಜಿತನಮಲ ಸುರೂಪ ಗಳಪರೋಕ್ಷಣದಿ ಕಾಂಬ ಚಪಲಾಂಬಕ ಕೃಪಣರ ಸಲಹಲು ಸ್ವಪತಿಯ ಶಿಪಿವರನಂಸಗೆ ಸುಫಲದೆ ಬಾಹಸಿಯ ಜಗುಲೀಗೆ 4 ವೀತಭಯನ ವಕ್ಷಸ್ಥಳವೆ ಪು ರಾತನ ಮನೆಯೆನಿಪುದು ಅವಿನಾ ಭುತರು ನೀವಿರ್ವರು ಅಮೃತಾ ಜಾತರು ಎಂದೆಂದೂ ಭೌತಿಕ ಮಂದಿರದೊಳು ನೆಲೆಸಿ ಪು ನೀತರ ಮಾಳ್ಪುದೆಮ್ಮ ಜಗ ನ್ನಾಥ ವಿಠಲನರ್ಧಾಂಗಿ ಜಗ ನ್ಮಾತೆ ವಿಖ್ಯಾತೆ ಬಾಹಸಿಯ ಜಗುಲೀಗೆ 5
--------------
ಜಗನ್ನಾಥದಾಸರು