ಒಟ್ಟು 1912 ಕಡೆಗಳಲ್ಲಿ , 117 ದಾಸರು , 1558 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯ ನೆನೆವಲ್ಲಿ ಮನವೆ ನೀ ಪ ಅರಿವು ತಿಳಿವಲ್ಲಿ ಹರಿದುಹೋಗುವ ದುರುಳ ಸಂಸಾರಕೆ ಮರುಳನಾಗಿ ನೀ ನರಕಕ್ಹೋಗುವಿಯಲ್ಲೋ ಅ.ಪ ಖೊಟ್ಟಿಗುಣಳಿವಲ್ಲಿ ಮನಸಿನ ಭ್ರಷ್ಟತ್ವ ಕಳಿವಲ್ಲಿ ಶಿಷ್ಟರಲ್ಲಿ ಮನವಿಟ್ಟು ಉಳಿಯದೆ ನೀ ಕಷ್ಟದೊಳಗೆ ಬಿದ್ದು ಕೆಟ್ಟು ಹೋಗುವಿಯಲ್ಲೋ 1 ಮರವೆ ಮಾಯವನ್ನು ಮರುಳೆ ನೀ ತರಿಯವಲ್ಲಿ ಇನ್ನು ಪರಿ ವಿಚಾರಿಸದೆ ದುರಿತದೊಳಗೆ ಬಿದ್ದು ಮರುಗುವಿಯಲ್ಲೋ 2 ಅಸೆ ನೀಗುವಲ್ಲಿ ಸಂಸಾರ ದ್ವಾಸನೆ ಕಡಿವಲ್ಲಿ ದಾಸರ ನಡೆನುಡಿ ಸೋಸಿಲಿಂ ತಿಳಿಯದೆ ನಾಶನಾಗುವಿ ಯಮಪಾಶದೊಳಗೆ ಬಿದ್ದು 3 ಸತಿಸುತರ ಮಾಯಮೋಹದಿ ಗತಿಸಿ ಪೋಗ್ವುದು ವಯ ಕೃತ್ರಿಮನೆ ಅತಿ ಮಂದಮತಿಯೊಳು ಬಿದ್ದು ಘನ ವ್ಯಥೆಯ ಬಡುವಿ ಮಹಗತಿಮೋಕ್ಷ ಪಡೆಯದೆ 4 ಮಂದಿ ಮಕ್ಕಳ್ಯಾರು ನಿನಗೀ ಬಂಧು ಬಳಗ ಯಾರು ಕುಂದುವ ಜಗಮಾಯದಂದ ತಿಳಿದು ಮಮ ತಂದೆ ಶ್ರೀರಾಮನ ಹೊಂದಿಕೊಳ್ಳವಲ್ಲಿ 5
--------------
ರಾಮದಾಸರು
ಹರಿಯ ಮರೆದುದಕಿಂತ ಪಾಪವಿಲ್ಲಾ | ಹರಿ ಸ್ಮರಣೆಯಿಂದಧಿಕ ಪುಣ್ಯ ಮತ್ತೊಂದಿಲ್ಲಾ ಪ ಗೋಹತ್ಯ ಸುರಾಪಾನ ಕನಕತಸ್ಕರ ಸುಜನ- | ಕಪಟ ವ್ಯಸನ || ಬಾಹಿರವಾಗ್ ದ್ವೇಷ ಪರದಾರಗಮನ ವಿ- | ವಾಹಗಳ ಮಾಣಿಸುವ ಪಾಪಕಿಂತಲಿ ಮೇಲು 1 ಗಂಗಾನದಿಯಲ್ಲಿ ಸ್ನಾನ ಪ್ರಣವ ಆಚಮನ | ಹಿಂಗದಲೆ ಗಾಯತ್ರಿ ಮಂತ್ರ ಮೌನ || ಕರುಂಗ ದಾನ-ಧರ್ಮ ವೃತ್ತಿ ಕ್ಷೇತ್ರ ರತುನ | ಬಂಗಾರಯಿತ್ತಧಿಕ ಬಹಳ ಪುಣ್ಯ ಮೇಲು 2 ಹಾಸ್ಯ ವಿರೋಧ ಮದ ಮತ್ಸರ ಪರಕಾರ್ಯ | ದಾಸ್ಯದಲಿ ಕೆಡಿಸುವ ಶಠನ ಲೋಭಿ || ವೈಶ್ವ ದೇವಾಹಿತ ಅತಿಥಿಗಳ ನಿಂದ್ಯರ- | ಹಸ್ಯ ದೂರುವ ಬಲು ಪಾಪಕಿಂತಲು ಮೇಲು 3 ಭಾಗವತ ಪುರಾಣ | ಸಾರ್ಥತ್ಯವಾದ ಪ್ರವಚನ ಶಾಸ್ತ್ರ || ಸಾರ ಪ್ರಬಂಧ | ಅರ್ಥ ಪೇಳುವ ಬಲು ಪುಣ್ಯಕಿಂತಲಿ ಮೇಲು4 ಮಿತ್ರಘ್ನ್ಯಗರಳ ಪ್ರಯೋಗ ಗರ್ಭಿಣಿವಧ | ಗೋತ್ರಸಂಸರ್ಗ ಬಲು ಪ್ರಾಣಹಿಂಸಾ || ಕ್ಷೇತ್ರ ಅಪಹಾರ ಕ್ಷುದ್ರವಾಣಿ ನಿಜಕ- | ಳತ್ರದಿ ದ್ರೋಹ ಬಲು ಪಾಪಕಿಂತಲಿ ಮೇಲು 5 ಕರ್ಮ ಸರ್ವದಲ್ಲಿ ಗಯಾ ಶ್ರಾದ್ಧ | ಭೂಧರ ಸಮಾಗಮ ಸತ್ ಶ್ರªಣಾ || ಆದಿತ್ಯ ಚಂದ್ರ ಉಪರಾಗ ಪರ್ವಣಿ ನಾನಾ | ರಾಧನೆಯರೆ ಬಲು ಪುಣ್ಯಕಿಂತಲು ಮೇಲು 6 ಆವಾವ ಪಾಪ-ಪುಣ್ಯಗಳದವರ ಕಿಂಕರವು | ದೇವನ ನೆನಸಿದಂಥ ನೆನೆಯದಂಥ || ಜೀವರೊಳಗೊಬ್ಬ ಮುಕ್ತನು ಒಬ್ಬ ತಮಯೋಗ್ಯ | ಕೈವಲ್ಯಪತಿ ನಮ್ಮ ವಿಜಯವಿಠ್ಠಲ ಪ್ರೇರಕ7
--------------
ವಿಜಯದಾಸ
ಹರಿಯೆ ನಿನಗನ್ಯ ದೈವರು ಸರಿಯೆ ಮೂರ್ಲೋಕ ದೊರೆಯೆ ಪ. ಭೂತಿದೇವತಿಯು ನಿನ್ನರಸಿಯು ಮೂರ್ಲೋಕದೊಳು ಖ್ಯಾತೆಯಾಗಿರುವ ಭಾರತಿ ಸೊಸೆಯು ಸುತೆ ಭಾಗೀರಥಿಯು ಭೂತೇಶನ ಪಡೆದವನಣುಗನು ಪುರು ಹೂತ ಮುಖ್ಯರು ಸಕಲೋತ್ತಮನೆಂಬರು 1 ನಿನ್ನ ಪೋಲುವ ಕರುಣಾಳುಗಳನ ಕಾಣೆನು ಮೋಹವ ಅನ್ಯಾಯ ಘಟಿತ ಕರ್ಮಗಳನ್ನ ಮಾಡುವ ಎನ್ನನ್ನ ಮನ್ನಿಸಿ ಪಾವನ ಮಾಡುವದನ್ನ ಅನ್ಯರು ತಿಳಿವರೆ ಸುರಗಣ ಮಾನ್ಯ 2 ಪಾತಕ ಬಂಧ ನಿರ್ಮೋಕಗೈವ ವಿತತಾಚಿದಾನಂದ ಮುಕುಂದ ಪಾಲಿಸು ಕೃಪೆಯಿಂದ ಕ್ಷಿತಿವರಗತ ಬಹು ಮತಿಯನು ಕರುಣಿಪ ಹಿತ ಶೇಷಾಚಲಪತಿ ಗೋವಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೇ ಧೊರೆಯೇ ಪ ಕಂದನ ನುಡಿಕೇಳಿ ಕಂಬದಿಂದ ಬಂದೆ ಅಂದು ಅಹಲ್ಯೆಯ | ಬಂಧನ ಬಿಡಿಸಿದೆ ಕರಿಮೊರೆಯಿಡಲಾಕ್ಷಣ ಬಂದು ನೀ ನಕ್ರನ್ನ ಸೀಳಿದ ಚಕ್ರಧರನೆ ನೀನು 1 ತರಳ ಧೃವನ್ನಾ ತೊಡೆಯಿಂದ ನೂಕಲು ಕಡುಭಯದಿಂದ ವನದಲ್ಲಿ ಚರಿಸುತ್ತ ಘನತಪಗೈಯಲು ಧೃಡ ಭಕುತಿಗೆ ಮೆಚ್ಚಿ ಒಡನೆ ಓಡಿ ಬಂದು ಘನತರ ಸಂಪದವತ್ತೆ 2 ಪರಮ ಪುರುಷೋತ್ತಮ ನೀನಲ್ಲವೆ ಮೊರೆಹೊಕ್ಕೆನು ನಿನ್ನ ಕರುಣಿಗಳರಸನ್ನ ತ್ವರಿತದಿಂದಲಿ ಕಾಯೊ ವೆಂಕಟವಿಠಲಾ 3
--------------
ರಾಧಾಬಾಯಿ
ಹರಿಯೇ ಪೊರೆಯದಿಹುದು ಸರಿಯೆ | ಎನ್ನ ಮರೆತೆ ಯಾತಕೊ ನಾನರಿಯೆ ಪ ಸೂಕರ ಯೋನಿಯಲಿ ಬಂದು | ನಾನು ಮನುಜನಾಗಿ ನಿಂದಿಹೆನಿಂದು ನಿನ ಬೇಡಿಕೊಂಬೆ ದಯಸಿಂಧು | ಎನ್ನ ಪುನಹ ಪುಟ್ಟಿಸಬೇಡವೆಂದು 1 ಮನಸು ವಚನ ಕಾಯಗಳಿಂದ | ನಿನ್ನ ಅನುಚರನಾಗಿಹೆ ಮುದದಿಂದ ದನುಜಾರಿ ಬಿಡಿಸೆನ್ನ ಬಂಧ | ಭವ- ಜನಿತವಾಗಿಹ ಜಾಲದಿಂದ 2 ಹಲವು ಮಾತೇಕೊ ಮಾಲೋಲ | ಮೌನಿ ಅಲವ ಬೋಧಾರ್ಚಿತ ಗೋಪಾಲ ಕಲುಷ ರಾಸಿಗಳನೆಲ್ಲ ಕಳೆದು ಸಲಹೈಯ್ಯಾ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಹರಿವಾಸರದ ಮಹಿಮೆಯೆನು ಅರಿತಷ್ಟು ಪೇಳುವೆನು ತರಳರಾಡುವ ನುಡಿಯೆಂದು ಗುರುಜನರು ಮನ್ನಿಸಿರಿನ್ನು ಪ. ಹಿಂದೆ ತಾನಜಾಮಿಳನು ಮಂದಮತಿಯಾಗಿ ಜಗದಿ ನಿಂದಿತಾಚಾರದಲಿ ಮನವಿರಿಸಿ ನಲಿದು ಬಂಧುಮಿತ್ರರ ನುಡಿಗೊಂದಿಷ್ಟು ಕಿವಿಗೊಡದೆ ಮನ ಬಂದಂತೆ ಚರಿಸಿದರನು ಮದಮೋಹದಿಂದ 1 ಮಂದಿರವ ನೊಳಪುಗಲು ಗಂಗೆಯಂತು ದಂದುಗದಿನೊಂದು ಮಡದಿ ಮಕ್ಕಳಿಗಾಗಿ ನಿಂದಂತೆ ತಾನುಪವಾಸ ಜಾಗರದಿ ಕಳೆದು ಮರುದಿನ ದ್ವಾದಶೀ2 ಮರಣದಾಹದಿ ಹರಿವ ನೀರ ಕುಡಿಯೇ ಹರಿಗರ್ಪಿಸಿದ ತುಳಸಿದಳವೊಂದದರೊಳಿರೆ ದುರಿತಕೋಟಿಗಳೆಲ್ಲ ದೂರಸಾರೆ 3 ಅಂತ್ಯಕಾಲದೊಳೈತಂದ ಅಂತಕನದೂತರಂ ಕಂಡು ಇಂದಿರೇಶನಾಣತಿಯಂತೆ ಕಿಂಕರರು 4 ಅರಿಯದಾಚರಿಸಿದೊಡಂ ಹರಿವಾಸರದ ಮಹಿಮೆ ಪರಮಪದನಾಥನೇ ವಶನಪ್ಪನಯ್ಯಾ 5 ಹರಿಭಕ್ತ ರುಕ್ಮಾಂಗದನ ಪರಿಭವಿಸೆ ಬರೆ ಮೋಹಿನಿ ತರಳ ಧರ್ಮಾಂಗದನ ಶಿರವತೆಗೆಯೆಂದೆನಲು ವರಧರ್ಮದೇವನೇ ಕರವಿಡಿದು ಪೊರೆದಂ6 ದಶಮಿ ದ್ವಾದಶೀ ದಿನದಲ್ಲಿ ಅಶನವೊಂದೇಸಾರಿ ಏಕಾ ಕುಸುಮನಾಭನಾ ಶೇಷಗಿರಿವಾಸ ಕೈಬಿಡನೊ 7
--------------
ನಂಜನಗೂಡು ತಿರುಮಲಾಂಬಾ
ಹರಿವಾಸುದೇವನೆ ಬ್ಯಾಸರಿಲ್ಲದೆ ದಾಸನ ಮೊರೆ ಕೇಳು ಜಗದೀಶ ನನ್ನ ಸಮಾನ ಕರುಣಾಭೂಪರುಂಟೆ ಪೇಳು ಪ. ಕಾಲಕಾಲಕೆ ಪೇಳಲಂಜುವೆ ಶ್ರೀಲಲಾಮ ಹರಿಯೆ ಆದರೆ ಬೀಳಗೊಳಿಸುವ ದೇಹಬಾಧೆಯು ತಾಳಲಾಪ ಹೊರೆಯೆ ಎರಡೇಳು ಭಕ್ತಿಯ ಮ್ಯಾಳವರಿಯದೆ ಹಾಳು ಮೋಹ ತೆರೆಯೆ ಮುಳಿಗೇಳಲಾರೆನು ಮಾಧವನೆ ಕರುಣಾಳು ಕಾಯೊ ದೊರೆಯೆ 1 ಯಾರ ಧನವಿನ್ಯಾರ ಭೂಮಿಯು ಯಾರ ವಸ್ತುಗಳಿವು ಕುಂಬಾರ ಭಾಂಡಗಳಂತೆ ನಶ್ವರ ತೋರಲ್ಯಾಕೆ ಫಲವು ಲಘು ನೀರಗುಳ್ಳೆಯ ಪೋಲ್ವ ದೇಹಕೆ ಸೇರಿದ ಸನ್ನಹವು ಬಿಳಿ ಭಾರ ಪೊತ್ತ ಥರವು 2 ಅದರಿಂದ ವೆಂಕಟಮಂದಿರನೆ ನಿನ್ನಿಂದ ಮಾತ್ರ ತಿಳಿಸು ಮೂರ್ತಿ ತಾಪಗಳಿಂದ ಬ್ಯಾರೆಗೊಳಿಸು ದ್ವಿಜ ವೃಂದ ರಕ್ಷಕನೆಂಬ ಬಿರುದನು ಎಂದೆಂದಿಗು ಘಳಿಸು ಭವ ಬಂಧ ಮೋಚಕ ನಿನ್ನ ಸೇವಾನಂದವಾರ್ಧಿಗಿಳಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಹರೀ ಎನ್ನ ದೋಷವಳಿಯೊ ಪ ಕರಿವರದ ಕೃಪೆಮಾಡು ನಿತ್ಯಮಿತ್ರನೆ ಕೃಷ್ಣ ಅ.ಪ. ಬೇಲಿ ಎದ್ದು ಹೊಲವ ಮೆದ್ದರೆ ಬ್ಯಾರಿನ್ನು ಪಾಲಿಪರು ಯಾರೆಯ್ಯ ಶೀಲರೊಡೆಯ ಫಾಲಾಕ್ಷಸಖ ನಿನ್ನ ಅಚುಂಬಿತ ಕಾರುಣ್ಯ ಶ್ರೀಲಕ್ಷ್ಮೀ ಶ್ರುತಿ ರಾಸಿ ವರ್ಣಿಪರೊ ಗುಣನಿಧಿಯೆ 1 ಯಾತನೆಲ್ಹಣ್ಣಾದೆ ಪೂತನಿಯ ಅಸುಹರನೆ ಪಾತಕಕೆ ಕೊನೆಗಾಣೆ ಪಾರ್ಥಸೂತ ಆತ್ಮಬಂಧುವೆ ಇನ್ನು ತಡಮಾಡೆ ತಡಿಲಾರೆ ಪೂತನ ಮಾಡೆನ್ನ ಪ್ರಾಣೇಶ ಪ್ರಿಯಬಂಧು 2 ದೋಷಪುಂಜನು ನಾನು ಶೇಷಶಯನನೆ ಬಲ್ಲ ಪೋಷಕನು ನೀನೆಂದು ವೇದರಾಸಿ ಘೋಷಿಪವು ಅನವರತ ಕಾಪಾಡು ಶ್ರುತಿವಾಕು ದೋಷಕರ ಜಯೇಶವಿಠಲನೆ ಮೈದೋರು 3
--------------
ಜಯೇಶವಿಠಲ
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಹಾಕುವೆ ಸುಮಾಲಾ ಸುಶೀಲಾ ಜೀವದೊಡೆಯ ಪರದೇವತೆ ನೀನೆಂಬೊ ಭಾವಕುಸುಮ ಭಕ್ತಿ ಸೂತ್ರದಿ ಬಂಧಿಸಿ 1 ಸರಸಿಜನಾಭನೆ ಸುರದೊಡೆಯನೆ ನೀ ವಿರಚಿಸಿದಂಥ ಪರಿಮಳ ಹಾರುವ ಸರುವ ಹಾರವ ತಂದು ಕೊರಳಿಗೆ ಹಾಕುವೆ 2 ಶಾಮಸುಂದರ ನಿಮ್ಮ ನೇಮದಿ ನಡೆವೆ ನಾ ಭಾಮೆಯನಗಲದೆ ಪ್ರೇಮದಿ ಪೊರೆಯೆಂದು 3
--------------
ಶಾಮಸುಂದರ ವಿಠಲ
ಹಾಕುವೆ ಸುಮಾಲಾ ಸುಶೀಲಾ ಸ್ವೀಕರಿಸೈ ಕರುಣಾಕರ ಕಂಠದಿ ಪ ಅರಳಿದ ಮಲ್ಲಿಗೆ ಸುರಸು ಶಾವಂತಿಗೆ ಪರಿಮಳ ಪುಷ್ಪದ ಸರವನು ಶಾವಂತಿಗೆ ಪರಿಮಳ ಪುಷ್ಪದ ಸರವನು ವಿರಚಿಸಿ 1 ಜೀವದೊಡೆಯ ಪರದೇವತೆ ನೀನೆಂಬೊ ಭಾವಕುಸುಮ ಭಕ್ತಿ ಸೂತ್ರದಿ ಬಂಧಿಸಿ 2 ಶಾಮಸುಂದರ ನಿನ್ನ ನೇಮದಿ ನೆನೆವೆನು ಭಾಮೆಯನಗಲದೆ ಪ್ರೇಮದಿ ಪೊರೆ ಎಂದು 3
--------------
ಶಾಮಸುಂದರ ವಿಠಲ
ಹಾರುವಗೆ | ಮರದ ಮೇಲಿರುವಗೆ | ಮುದ್ರಿಕೆಯ ತೋರುವಗೆ | ವನ ಕೀರ್ತಿ ತೋರುವವಗೆ | ಹೀರುವವಗಾಕ್ಷಣದಿ | ಚೀರುವಗೆ ಅರ್ಭಟಿಸಿ | ಶುಭ ಮಂಗಳಂ 1 ವೃಕೋದರ ಭೀಮಗೆ | ಅಶೋಕದೊಡೆಯಗೆ | ಬಕಜರಾಸಂಧ ಕೀಚಕವಧನಿಗೆ | ಸಕಲ ದಳದೊಳಗೆ | ನಾಯಕನೆನೆಸಿ ಕಲಿಯ | ಬಂಧಕ ಶಕುತಿಗೆದ್ದ ಲೌಕಿಕ ಚರಿತಗೆ | ನಿತ್ಯ ಶುಭಮಂಗಳಂ2 ಒಂದೆ ಅಕ್ಷರದಿಂದ ಆನಂದ ಕೊಡುವವನಿಗೆ | ಒಂದೆರಡು ಈರೈದು ಮುರಿದವನಿಗೆ | ನಿತ್ಯ ಶುಭಮಂಗಳಂ3
--------------
ವಿಜಯದಾಸ
ಹಿಂದೂ ದಾಸ ಇಂದೂ ದಾಸ ಮುಂದೆ ಎಂದೆಂದಿಗೂ ಅರ- ವಿಂದನಾಭ ವಿಠಲನೆ ಗತಿಯೋ ನೀ ಅವನ ದಾಸ ಪ ಬಂಧನದಿ ಬಳಲಿದಿ ಬಂದ ದುಃಖವ ನಾಶಿಸಿ ಹೊಂದಿದಿ ಶ್ರೀ ಹರಿಪಾದ ದಾಸ್ಯವಾ ಮಂದಿರವನ್ನಗಲಿದಿ ಮೂತಿ ಯಾಕೋ ಭವದ ಭೀತಿ1 ಹುಟ್ಟಿದಿ ಹರಿಮತದಿ ಇಟ್ಟ ಹರಿಚಿನ್ಹೆಫಾಲದಿ ಮುಟ್ಟಿ ಭಜಿಸೆಲೋ ದಿಟ್ಟ ಕೃಷ್ಣನ್ನಾ ಇಟ್ಟ ಕಲ್ಲಮೇಲೆ ಪಾದವಿಟ್ಟ ವಿಠ್ಠಲನು ಪೊರೆವಾ 2 ಶಿರಿವರ ನರಸಿಂಹವಿಠ್ಠಲ ಕರುಣದಿ ಪೇಳಿದಾ ನಿನಗೆ ಮರೆಯದೆ ಸೇವಿಸೋ ಹರಿಮೂರ್ತಿಯಾ ಮೂರ್ತಿ ನಿರುತ ಸೇವೆಯ ಕೈಕೊಳ್ಳುವಾ 3
--------------
ನರಸಿಂಹವಿಠಲರು
ಹಿಂದೂ ಮುಂದೂ ಎಂದೆಂದಿಗೂ ಗೋವಿಂದನೆ ಎನಗೆ ಬಂಧು ಪ. ಮನೆಯೆಂಬೋದೆ ಸುಮ್ಮನೆ ಮಕ್ಕಳೆಂಬೋದೆ ದಂಧನೆಹಣವೆಂಬೋದೆ ಬಲುಬೇನೆ ಹಾರಿಹೋಗುವದು ತಾನೆ 1 ಮಂದಗಮನೆಯರ ಕೂಡಿ ಮದವೆಲ್ಲ ಹೋಗಲಾಡಿಮುಂದೆ ತೋರದಂತೆ ಬಾಡಿ ಮೋಸಹೋಗಲಾಡಬೇಡಿ2 ಪರಧನ ಪರಸತಿ ಪರಕ್ಕೆಬಾರದಿದು ಘಾಸಸಿರಿಹಯವದನನ ಚರಣ ಭಜಿಸಿ ಪಡೆಯೆಲೊ ಕರುಣ3
--------------
ವಾದಿರಾಜ