ಒಟ್ಟು 56123 ಕಡೆಗಳಲ್ಲಿ , 139 ದಾಸರು , 12212 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಗುರುವಿನ ಕರುಣದಿ ವೈರಾಗ್ಯ ಭಾವವು ಗುರುವಿನ ಕರುಣದಿ ತತ್ವ ಸಾಧನೆಗಳು ಗುರುವಿನ ಕರುಣದಿ ಆತ್ಮ ವಿವೇಕಗಳು ಅಪರೋಕ್ಷ ಪುಟ್ಟಲು ಗರುವಿಕೆಯನೆ ಬಿಡಿಸಿ ಕರೆದು ಕೊಡುವ ಮುಕ್ತಿ
--------------
ಅಂಬಾಬಾಯಿ
ಉಗಾಭೋಗ ಚಿಕ್ಕ ಮಗುವಾದ ಪ್ರಹ್ಲಾದ ದೇವನನು ರಕ್ಕಸನು ಪಿಡಿದತಿ ಹಿಂಸೆಪಡಿಸುವದ ನೋಡಿ ಉಕ್ಕಿಬರುತಿಹ ಕೋಪದಿಂ ಕಿಡಿಕಿಡಿಯಾಗಿ ಉಕ್ಕಿನ ಕಂಬದಿಂ ಉರಿಯ ಕಾರುತ ಬಂದು ಪಕ್ಕಿದೇರನು ಹಿರಣ್ಯಕಶಿಪನ ಪಿಡಿದು ತಾ ಉರ ಬಗೆದು ಕರುಳ ಮಾಲೆಯ ಗಕ್ಕನೆ ಗಳಕಿಕ್ಕಿಕೊಂಡು ಆರ್ಭಟಿಸಿದಂದು ಲಕ್ಕುಮಿಯಾದಿಯಾಗಿ ಮುಕ್ಕೋಟಿ ದೇವತೆಗಳು ಬೆದರಿ ದಿಕ್ಕೆಟ್ಟು ಗಡ ಗಡ ನಡುಗುತಿರಲಾಗ ಅಕ್ಕರದ ಭಕುತ ಪ್ರಹ್ಲಾದ ಬರೆ ಬಿಗಿಯಪ್ಪಿ ತಕ್ಕೈಸಿ ಮುಂಡಾಡಿ ಪ್ರಸನ್ನನಾದನು ತನ್ನ ಭಕ್ತರೊಳಿನ್ನೆಷ್ಟು ಪ್ರೀತಿಯೋ ರಂಗೇಶವಿಠಲಗೆ
--------------
ರಂಗೇಶವಿಠಲದಾಸರು
ಉಗಾಭೋಗ ದಾಸ ಭಾಗ್ಯವೆ ಭಾಗ್ಯ ಹರಿಕೊಟ್ಟ ಸೌಭಾಗ್ಯ ದಾಸ ಭಾಗ್ಯಕ್ಕೆ ಜಗದಿ ಸರಿಮಿಗಿಲಿಲ್ಲವೆಂದು ದಾಸತ್ವವೇ ಮಧ್ವಮತ ಸಾರತತ್ವವೆಂದು ವ್ಯಾಸರಾಯರು ಜಗದಿ ದಾಸರ ನಿಲ್ಲಿಸಿದರು ದಾಸರಿಗಂಕಿತ ಇರಲೇಬೇಕೆನುತಲಿ ದಾಸ ಪುರಂದರವಿಠ್ಠಲನಿಗೆನಿಸಿದರು ಈ ಸುಮಾರ್ಗವ ತಂದೆ ಮುದ್ದುಮೋಹನ ಗುರು ಮಾಸದಂತೀಗ ಮತ್ತೆ ಬಿತ್ತಿ ಬೆಳೆಸಿದರು ದಾಸ ಜನಪ್ರಿಯ ಗೋಪಾಲಕೃಷ್ಣವಿಠ್ಠಲ ತಾ ಸುಮ್ಮನೀವ ತನ್ನ ನಿಜದಾಸರಿಗೆ ಮುಕ್ತಿ
--------------
ಅಂಬಾಬಾಯಿ
ಉಗಾಭೋಗ ಪರಮಪುರುಷ ಕೇಳು ಒರೆದ ಮಾತಿಗೆ ನಾನು ನೆರೆ ತಪ್ಪುವನಲ್ಲ ವಂಚನೆ ಲೇಶವಿಲ್ಲ ಉರುದೈವ ವ್ಯಾಪಾರಕ್ಕೇನ ಮಾಡಲಿ ನಾನು ಸರ್ವವು ನಿನಗೆಂದು ಒಪ್ಪಿಸಿಹೆನಲ್ಲ ನರಕವಾಸಕೆ ನಾನು ಅಂಜÀುವನಲ್ಲವು ಮರಣಪಾಶಕೆಯಿನ್ನು ಅಂಜುವ ನಾನಲ್ಲ ಸರ್ವಸ್ವ ಹೋದರೂ ಚಿಂತೆ ಎನಗಿಲ್ಲ ಥರಥರ ಅಂಜುವೆ ನೊಂದೆ ವಿಷಯಕ್ಕೆ ಅರಿಯಲು ಅನೃತಕ್ಕೆ ಅಂಜುವೆ ನಾನಿನ್ನು ಸಿರಿ ಪರಾಕ್ರಮ ಶೌರ್ಯ ಇವುಗಳಿಂದಲಿ ಕೂಡಿ ಗರುವಪಡುತ ನಾನು ಮದಾಂಧನಾಗಿದ್ದೆ ಉರು ಶಿಕ್ಷೆ ಎನಗಿತ್ತು ಉದ್ಧಾರ ಮಾಡಿದೆ ಕುರುಡಗೆ ನೇತ್ರವು ದೊರೆತಂತೆ ಆಯಿತು ಪರಮ ಭಕ್ತನು ಆತನೆ ಪ್ರಹ್ಲಾದನು ಪರಿ ಪೀಡೆಗೆ ಗುರಿಯಾಗಿದ್ದರು ನಿನ್ನ ಸ್ಮರಿಸಿ ತಾನುತ್ತಮ ಗತಿಯನ್ನು ಪಡೆದನು ಸಿರಿಮದ ಕಳೆದೆನ್ನುನುದ್ಧಾರ ಮಾಡಿದೆ ಪರಮಪುರುಷ ನಿನಗೆ ಪ್ರಣಾಮ ಮಾಡುವೆ ಕರಿಗಿರೀಶನೆ ಕರುಣಿ ಕಾಯಬೇಕೆನ್ನನು
--------------
ವರಾವಾಣಿರಾಮರಾಯದಾಸರು
ಉಗಾಭೋಗ ಪರಿಪರಿ ದೇಹ ಧರಿಸಿ ನರ ಜನ್ಮದಲಿ ಬಂದು ಕರಕರೆ ಪಡುತಲಿ ಇರುವ ಮಾನವರೊಳು ಅರಿತು ಸಾತ್ವಿಕರನು ಕರದು ಬುದ್ಧಿಯ ಪೇಳೆ ಹರಿಯ ಪಾದವ ತೋರ್ವ ಗುರುವು ಒಬ್ಬರು ಬೇಕು ಪರಮಪ್ರಿಯರು ಇವರು ಅರಿವರು ಸಾತ್ವಿಕರ ಕರದು ಉಪದೇಶವಿತ್ತು ಉದ್ಧಾರ ಮಾಡುವರು ಚರಿತೆಯ ವರ್ಣಿಸಲು ನರರಿಗೆ ಸಾಧ್ಯವಲ್ಲ ನರಹರಿಯೆ ಬಲ್ಲ ಉರಗಾಖ್ಯರ ಮಹಿಮೆ ವರಭಕ್ತರಾಗಿ ಹರಿಗೆ ಶರಣು ಹೊಕ್ಕವರನು ಕರುಣೆಯಿಂ ಸ್ವರೂಪವರಿತು ಉದ್ಧರಿಪರು ಪರತರ ಗೋಪಾಲಕೃಷ್ಣವಿಠ್ಠಲನ ಚರಣವ ತೋರುವರು ವರ ತಂದೆ ಮುದ್ದುಮೋಹನರು
--------------
ಅಂಬಾಬಾಯಿ
ಉಗಾಭೋಗ ಮಕ್ಕಳ ಮಾಣಿಕ್ಯ ಮಧುರೆ ಗೋಕುಲ ಬಿಟ್ಟು ಚಿಕ್ಕಯತಿಗಳಿಂದ ಪೂಜೇಯ ಕೈಕೊಂಡು ರಕ್ಕಸಾಂತಕ ತನ್ನ ಭಕ್ತರ ಕಾಯುತ್ತ ಅಜ ಶಿವ ಇಂದ್ರಾದಿ ವರದನು ಚೊಕ್ಕ ಚಿನ್ನದ ಬೊಂಬೆಯಂತೆ ನಿಂತಿರುವನು ಮುಕ್ತಾಮುಕ್ತರ ಬಿಂಬ ಗೋಪಾಲಕೃಷ್ಣವಿಠಲ
--------------
ಅಂಬಾಬಾಯಿ
ಉಗಾಭೋಗ ವಿಕ್ರಮ ಸಂವತ್ಸರದಲ್ಲಿ ನಿನ್ನ ನಿಜ ದಾಸಕೂಟ ಜನಕೆ ಪ- ರಾಕ್ರಮ ಹೆಚ್ಚಲಿ ಅಚ್ಚುತಾನಂತ ಕೃಷ್ಣ ಶಕ್ರಾನುಜನೆ ನಿನ್ನ ದೂತ ಹನುಮನ ಸೇವೆ ವಕ್ರವಿಲ್ಲದೆ ನಡೆದು ನಿನ್ನ ಕೃಪೆಯಾಗಲಿ ಅಕ್ರೂರವರದ ತಂದೆ ಮುದ್ದುಮೋಹನ್ನರ ವಿಕ್ರಮೌದಾರ್ಯ ದಶ ದಿಕ್ಕುಗಳ ಬೆಳಗಲಿ ಶಕ್ರಾನುಜನೆ ಉದರ ಬಗೆದು ತರಳನ ಕಾಯ್ದ ವಕ್ರನಖನೆ ನಮ್ಮ ನೀತ ಶ್ರೀ ಗುರುಗಳಿಗೆ ವಿಕ್ರಮ ಶಾಂತಿ ಆಯುರಾರೋಗ್ಯ ಭಾಗ್ಯವಿತ್ತು ಚಕ್ರಧರನೆ ನಿನ್ನ ಸೇವೆ ಕೈಕೊಂಡೆಮ್ಮ ಭವ- ಚಕ್ರ ತೊಡಕು ಬಿಡಿಸಿ ದಾಸ ಜನರ ಕಾಯೋ ಉ- ರು ಕ್ರಮದೇವ ಜಗಚ್ಚಕ್ರವರ್ತಿಯೆ ನಮೋ ಶಕ್ತಾದ್ಯಮರ ನುತ ಗೋಪಾಲಕೃಷ್ಣವಿಠಲಾ
--------------
ಅಂಬಾಬಾಯಿ
ಉಗಾಭೋಗ ವೈಕುಂಠಗಿರಿಯ ವಾಸ ಲೋಕೈಕನಾಥ ಶ್ರೀಶ ಏಕಮನಸು ನಿನ್ನ ಪಾದಧ್ಯಾನದಿ ಕೊಡು ನಾ ಕೇಳಲಿನ್ನೇನು ನಾಕ ಜನರ ನಾಥ ಬೇಕೊ ನಿನ್ನ ಭಕ್ತರ ಏಕಾಂತ ಸಹವಾಸ ನೀ ಕರುಣಿಸು ಇದನಾ- ನೇಕ ಜನ್ಮಗಳಲ್ಲಿ ಶ್ರೀಕಳತ್ರ ಶ್ರೀಶ ಗೋಪಾಲಕೃಷ್ಣವಿಠಲ
--------------
ಅಂಬಾಬಾಯಿ
ಉಗಾಭೋಗ ಶ್ವೇತ ದ್ವೀಪವಾಸಿ ಗೋಪಾಲ ವಿಠಲಸಾರ್ವಭೌಮ ಪರಮ ಪುರುಷ
--------------
ಗೋಪಾಲದಾಸರು
ಉಗಾಭೋಗ ಹಿಂದಿನ ಊರಿಗೆ ಹಿಂತಿರುಗುವುದಿಲ್ಲ ಮುಂದಿನ ಊರಿನಾನಂದವ ಕಂಡಿಲ್ಲ ಇದ್ದಿದ್ದ ಊರೊಳು ಇರುವ ಹಾಗೆ ಇಲ್ಲ ನಂದ್ಯಾವ ಊರೆಂಬೊದನ್ಯರಿಗಳವಲ್ಲ ಸಂದಗ್ಧವಾದಂಥ ಇದರ ಅರ್ಥಗಳನು ತಂದೆ ಮುದ್ದುಮೋಹನರ ಬಿಂಬಶ್ರೀ ಸುಂದರ ಗೋಪಾಲಕೃಷ್ಣವಿಠ್ಠಲ ಬಲ್ಲ
--------------
ಅಂಬಾಬಾಯಿ
ಉಡಪಿಯ ಕೃಷ್ಣ ಯನ್ನ ನುಡಿ ಲಾಲಿಸೋ ಪ ಸಡಗರದಲಿ ನೀನು ಮಡದಿವೃಂದ ಬಿಟ್ಟು ಕಡಲಪಯಣದಿಂದಲಿ ವಂದು ಬಿಡದೆ ಭಕ್ತರಿಗೆಲ್ಲ ವಡೆಯನಾಗಿ ನೀನು ಷಡುರಸ ಅನ್ನವ ಕೊಡುತನಿಂತಿಹೆ 1 ಪ್ರಾಣಪತಿಯು ಅತಿ ಜಾಣನೆಂದೆನಿಶಿÉ ನೀ ಕಾಣಿಸುವಿ ನರಪ್ರಾಣಿಗೆ ಮಾಣವಕನೆ ನೀ ಜಾಣನೆಂದೆನುತಲಿ ಧ್ಯಾನಮಾಡಿ ಮೋದಿಸುವರು 2 ಧರೆಯೊಳು ರಜತಪೀಠ ಪುರದೊಳೂ ನೆಲೆಸಿಪ್ಪ ಸುರವೃಂದನುತ ಬೇಗ ಸಲಹೆನ್ನ ವರಮಧ್ವ ಮುನಿನುತ ಸರಸಿಜಭವ ವಂದ್ಯ ಶ್ರೀವತ್ಸಾಂಕಿತ ವೆಂಕಟಪತಿಯೇ 3
--------------
ಸಿರಿವತ್ಸಾಂಕಿತರು
ಉಡಿಯ ತುಂಬಿದರು ಮೋದದಿ ಮಡದಿಯರು ಜನಕನ ಸುಕುಮಾರಿಗೆ ಪ ಸಡಗರದಲಿ ಹುರಿಗಡಲೆ ಕುಬುಸ ಕ- ಕದಳಿ ಖರ್ಜೂರ ದ್ರಾಕ್ಷಿಗಳನೂ-ಜನಕನ ಸುಕುಮಾರಿಗೆ ಅ.ಪ ಸರಸಿಜಾಕ್ಷಿಯರು ಕೊಬ್ಬರಿ ಬಟ್ಲುಗಳು ಚಂದ- ದರಸಿನ ಕುಂಕುಮ ಹಣಿಗೆಗಳನು-ಜನಕನ ಸುಕುಮಾರಿಗೆ 1 ಮುತ್ತು ಮಾಣಿಕ ನವರತ್ನಗಳನು ಬಹು ಕಿತ್ತಳೆ ದಾಡಿಮ ಮುಖ್ಯಫಲಗಳ-ಜನಕನ ಸುಕುಮಾರಿಗೆ 2 ಪರಿಪರಿ ವಸ್ತುಗಳನು ಮಾನಿನಿಯರು ಗುರುರಾಮವಿಠಲನರಿಸಿಯಾದ-ಜನಕನ ಸುಕುಮಾರಿಗೆ 3
--------------
ಗುರುರಾಮವಿಠಲ
ಉಡಿಯ ತುಂಬಿರೆ ಕಡಲೊಡೆಯನ ಮಡದಿಗ್ಹರುಷದಿ ಪ ಬಿಡಿಯ ಮುತ್ತು ಬಿಗಿದ ತಟ್ಟೆಯ ಪಿಡಿದು ಬೇಗದಿಅ.ಪ ಅಚ್ಚ ಜರಿಪೀತಾಂಬ್ರನುಟ್ಟ ಅಚ್ಚುತನರಸಿಗೆ ಹೆಚ್ಚಿನ ಆಭರಣ ಧರಿಸಿ ಮೆರೆವ ದೇವಿಗೆ ಅಚ್ಚುತನ ವಕ್ಷಸ್ಥಳದಿ ವಾಸಿಪ ಲಕುಮಿಗೆ ಅಚ್ಚಮುತ್ತು ಅರಿಶಿನಡಿಕೆ ಉತ್ತತ್ತಿ ಫಲಗಳು 1 ಕದಳಿ ಫಲಗಳಿಂ ಅಂಬುಜಾಕ್ಷನರಸಿಗೆ ದಾಳಿಂಬೆ ತೆಂಗು ಸಹಿತದಿ ಅಂಬುಧಿಯೊಳು ಜನಿಸಿದ ಮುಕುಂದನರಸಿಗೆ ಅಂಬುಜಾಕ್ಷಿಯರೆಲ್ಲ ನೆರೆದು ಸಂಭ್ರಮಪಡುತಲಿ2 ಮಾದಳದ ಫಲವು ಮಾವು ಪನೆÀ್ನರಿಲ ಫಲಗಳ ಮಾಧವನ ಮಡದಿಗೀಗ ಮಾನಿನಿಮಣಿಯರು ಕ್ರೋಧಿನಾಮ ಸಂವತ್ಸರದಿ ಸಾಧು ಜನಗಳ ಆದರಿಸಿ ಕಾವ ಕಮಲನಾಭ ವಿಠ್ಠಲನರಸಿಗೆ 3
--------------
ನಿಡಗುರುಕಿ ಜೀವೂಬಾಯಿ
ಉಡಿಯ ತುಂಬಿರೆ ನಮ್ಮ ಉಡುರಾಜಮುಖಿಗೆ ಉಡಿಯ ತುಂಬಿರೆ ನಮ್ಮ ಕಡಲೆ ಕೊಬ್ಬರಿ ಬಟ್ಟಲೊಳು ಬಾಳೆಫಲಗ- ಳ್ವುಡಿಯ ತುಂಬಿರೆ ನಮ್ಮ ಪ ಜಂಬುನೇರಲ ಗೊನೆ ಜಾಂಬೂಫಲಗಳು ನಿಂಬೆ ದಾಳಿಂಬ್ರ ಔದುಂಬ್ರ ಫಲಗಳು 1 ಉತ್ತತ್ತಿ ದ್ರಾಕ್ಷಿ ಕಿತ್ತಳೆ ಸೀತಾಫಲವು ಅಕ್ಕಿ ಅಂಜೂರ ಉತ್ತತ್ತಿ ಫಲಗಳು2 ಶ್ರೇಷ್ಠ ಭೀಮೇಶ ಕೃಷ್ಣನ ಪಟ್ಟದರಸಿ ಗ್ಹಚ್ಚಿ ಕುಂಕುಮ ವೀಳ್ಯ ಕೊಟ್ಟು ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಉಡುಪಿ ದೃಷ್ಟಿ ಇದ್ಯಾತಕೆ ಉಡುಪಿ ಕೃಷ್ಣನ್ನ ನೋಡದ ಪ ಗೋಪಿಯರ ಪೂಜೆ ಗ್ರಹಿಸಿ ಗೋಪಿಚಂದನ ಸಹಿತವಾಗಿ ವ್ಯಾಪಾರದ ಹಡಗೀಲಿ ಬಂದ ಶ್ರೀಪತಿಯ ನೋಡದ 1 ಮಧ್ವರಾಯರಿಗೊಲಿದು ಬಂದು ಸಮುದ್ರತೀರದಲ್ಲಿ ನಿಂದು ಪದ್ಮನಾಭನಪುರದಿ ನೆಲಸಿದ ಮುದ್ದು ಶ್ರೀಕೃಷ್ಣನ್ನ ನೋಡದ 2 ದುಷ್ಟವಾದ ದೇಶವನೆಲ್ಲಾ ಶ್ರೇಷ್ಠ ಮಾಡಿದ ಕೃಷ್ಣನ್ನ ನೊಡದ 3 ಶುದ್ದವಾದ ಗೋವುಘೃತವು ಕ್ಷೀರ ಸಕ್ಕರೆ ಮಧುವು ದಧೀ ನಾರಿಕೇಳ ಫಲಗಳಿಂದ ಮಿಂದ ಶ್ರೀಕೃಷ್ಣನ್ನ ನೋಡದ 4 ಉದ್ದಂಡವಾದ ಉರನಲ್ಲಿ ಭೂಮಂಡಲನಾಳ್ವ ಶಿರವನಿಟ್ಟು ಕೊಂಡೆ ಮಕರಿತು ಚೆಂಡು ಧರಿಸಿದ ಪುಂಡರೀಕಾಕ್ಷನ್ನ ನೋಡದ 5 ಪಾನಪಟ್ಟಿ ಮುತ್ತಿನಬಟ್ಟು ಮೂಗುತಿಯನಳವಟ್ಟು ವಜ್ರದ ಕರ್ಣಕುಂಡಲವನಿಟ್ಟು ಅರ್ಜುನಸಾರಥಿಯ ನೋಡದ 6 ವೈಜಯಂತಿ [ನವ] ಹಾರಪದಕ ಸರಗಳಿಟ್ಟ ವಾರಿಜನಾಭನ ನೋಡದ 7 ಕಡೆಗೋಲ ಬಲದ ಕೈಲಿ ಎಡದ ಕೈಯ ತೊಡೆಯೊಳಿಟ್ಟು ಉಡುದಾರ ಗೆಜ್ಜೆಯನಿಟ್ಟ ಪೊಡವಿಗೀಶ್ವರನ್ನ ನೋಡದ 8 ಅಂದುಗೆ ಗೆಜ್ಜೆನಿಟ್ಟು ಕುಂದಣದಾವುಗೆಯ ಮೆಟ್ಟಿ ಆ ನಂದದಿಂದ ಗಂಗೆ ಪಡೆದ ಇಂದಿರೇಶನ ಪಾದವ ನೋಡದ 9 ಸಂಸಾರದಗ್ನಿಯಲ್ಲಿ ಬೆಂದು ನೊಂದುಬಂದ ಭಕ್ತರ ಚರಣವೆಂ ಬೊ ಶರಧಿಯಲ್ಲಿ ಭರದಲಿರುವ ಹರಿಯ ನೋಡದ 10 ದುರುಳ ಶಕಟನನ್ನು ತುಳಿದ ವರದ ವೆಂಕಟಕೃಷ್ಣನ್ನ ನೋಡದ 11
--------------
ಯದುಗಿರಿಯಮ್ಮ