ಒಟ್ಟು 44128 ಕಡೆಗಳಲ್ಲಿ , 139 ದಾಸರು , 10983 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎಂಥವನೆ ಆಗಲಿ ಪತಿಯೆ ಸಾಕ್ಷಾತ್ ಶಿವನುಪತಿಯಿಲ್ಲದೇ ಬೇರೆ ಗತಿಯಿಲ್ಲ ಸತಿಗೆ ಪ ಪತಿತನಾಗಲಿ ಪಾತಕಿಯಾಗಿರಲಿಅತಿಮುದುಕನು ಪ್ರಾಯದವನಾಗಿರಲಿ 1 ಬಡವನಾಗಲಿ ಭೂಪತಿಯಾಗಿರಲಿಕುಡುಕನಾಗಲಿ ಕಡುಗೋಪಿಯಾಗಿರಲಿ 2 ವರ ಕೆಳದಿಯ ರಾಮೇಶ್ವರನ ಪದವನುಸ್ಮರಿಸಿದಂಥ ಗಂಡ ಬರುವನು ಮುನ್ನ 3
--------------
ಕೆಳದಿ ವೆಂಕಣ್ಣ ಕವಿ
ಎಂಥಾ ಜಾಣೆಯೋ ಸುಪ್ರವೀಣೆಯೋ ಮುನ್ನಾಕೆಎಂಥಾ ನೋಂಪಿಯನೋಂತ ಫಲವೋಕಾಂತನ ಪರಕೀಯ ಕಾಂತೆಯೆಡೆಗ ಬಿಡ-ದಂತೆ ಸಂತಸದೊಳೇಕಾಂತ ಸುಖದೊಳಿರ್ಪ ಪ ನುತ ಹಂಸತೂಲತಲ್ಪದೊಳು ನಾನಾ ಬಂಧಗತಿಯಲಿ ಕಾಮಕೇಳಿಯನೆಸಗಿರತಿಸುಖಪಾರವಶ್ಯದೊಳೊಂದು ವರುಷದಮಿತಿಯನು ತೃಟಿಕಾಲವೆಂದುಸುರುವಳು ತಾ 1 ಹೆಣ್ಣು ಜನ್ಮದಿ ಹುಟ್ಟಿದುದಕೆ ಫಲವದುಕನ್ನೆಯರೊಳಗೆ ಕಟ್ಟಾಣಿಯಾಕೆಮುನ್ನೆಷ್ಟುಗಾಲ ತಪವ ಮಾಡಿ ತಾನಿಂಥಾಪುಣ್ಯವ ಪಡೆದಳಾಕೆಯ ಜನ್ಮ ಸಫಲವೋ2 ವರುಷವಾಗಲಿ ಒಂದು ದಿನವಾದರಾಗಲಾತರುಣಿಯ ಭೋಗದಂತಿರಬೇಡವೆಇರುಳು ಹಗಲು ಕಾಣದಂತೆ ಶ್ರೀ ಕೆಳದಿಯಪುರದ ರಾಮೇಶನೊಳ್ಪರಸದೊಳಿರುವಳಿಂ 3
--------------
ಕೆಳದಿ ವೆಂಕಣ್ಣ ಕವಿ
ಎಂಥಾ ಠೌಳಿಗಾರನಮ್ಮ ಗೋಪಮ್ಮ ನಿನ್ನ ಮಗ ನ್ನೆಂಥಾ ಠೌಳಿಗಾರನಮ್ಮ ಪ. ಎಂಥಾ ಠೌಳಿಗಾರ ಪಂಥಾದಿ ಬೆನ್ನಟ್ಟಿ ಬಂದು ನಿಂತಲ್ಲೆ ನಾನಾರೂಪವೆಂತು ತಾಳುವ ನೋಡೆ ಎಂಥಾ ಅ.ಪ. ನೀರೊಳು ಮೀಯಲು ಪೋದೆನೆ ಗೋಪಮ್ಮ ಸಾರಿ ಪಿಡಿಯಲು ಹೋದೆ ಆರು ಅರಿಯರೆಂದು ಪೊತ್ತು ಮರೆಯಾದನೇ ಗೋಪಮ್ಮ 1 ಗೋಪಿ ಧೂಳು ಕೆದರಿ ಕೋರೆ ತೋರುವನ ಖೂಳ ದೈತ್ಯನ ಸೀಳೆ ಕೇಳಿ ಕಂದನ ನುಡಿ ಭಾಳ ಕ್ರೂರ ಮೃಗ ಕೇಳಿದೊಡಲು ಭಯ ತಾಳಿ ಬಂದೆ ಇಂಥ2 ದೊರಕಿದನೆಂದೆ ತಿರುಕ ಬ್ರಹ್ಮಚಾರಿ ತಿರುಗಿ ನೋಡೆ ಥೋರ ಕೊಡಲಿ ಪಿಡಿದು ನಿಂತು ಮಾರುತಿ ಸೇವಿತನಾದ ಗಮನ ದೇವನು ಎಂಥಾ 3 ಚಿತ್ತಜನೈಯ್ಯನು ನಾನೆತ್ತ ಪೋದರು ಬಿಡ ಸುತ್ತಿ ಬಹನೆ ಕೃಷ್ಣಾ ಮುತ್ತ ತಾರೆನುತ ಕತ್ತಲೆಯೊಳು ಪೋದೆ ವಿಸ್ತರಿಸುವೆನೆಂತು ಗೋಪಿ ಇಂಥಾ 4 ಶ್ರೀಪತಿ ಶ್ರೀನಿವಾಸನ ಪಿಡಿದು ಗೋಪಾಲನ ಎಳತಂದೆ ನಿನ್ನೆಡೆಗೆ ತಾ ಪರಾರಿಯಾಗಿ ಗೋಪತಿ ಹಯನೇರಿ ಏಪರಿ ಪೋದನೊ ತಾಪತಾಳಲಾರೆ ಎಂಥಾ 5
--------------
ಸರಸ್ವತಿ ಬಾಯಿ
ಎಂಥಾ ದಯವಂತ ನೀತನೊ | ಭಾರತಿ ಕಾಂತಅಂತರ್ಬಹಿ ವ್ಯಾಪ್ತನೋ ಪ ಸಂತತ ಶ್ವಾಸೋಚ್ಛ್ವಾಸ | ಮಂತ್ರ ತಾ ಜಪಿಸುತ ಶಾಂತೀಶ ಪಾದದಲ್ಲಿ | ಕ್ರಾಂತನಾಗಿಹ ನೀತ ಅ.ಪ. ಸೂರ್ಯ ಕೋಟಿ ಸಂಕಾಶದಿ ಪರಿಕಿಪ 1 ಪ್ರಾಣಾ - ಅಪಾನ - ಸಮಾನ | ಮತ್ತೆರಡು | ವ್ಯಾನಾ ಉದಾನರಲ್ಲಿರುತಾ ||ಪ್ರಾಣಿಗಳೊಳಗಿದ್ದು | ಜಾಣ ತನದಿ ತಾನುನಾನಾ ಕರ್ಮವ ಮುಖ್ಯ | ಪ್ರಾಣಾ ತಾನೇವೆ ಮಾಳ್ಪ ||ಪ್ರಾಣನ ಮಹಿಮಾನಂತವೆ | ವಾಣಿ ಮುಖಾದ್ಯರು ಎಣಿಸಲಸು ಅಳವೇ ನಾನಾ ರೂಪದಿ ಶ್ರೀನಿವಾಸ ಪದಧ್ಯಾನಾರಾಧಕ ನೆನಿಸುತ ಮೆರೆವಾ 2 ಸುರರಾ ಮೊರೆಯ ಕೇಳುತ | ಪರಿಸರ | ಹರಿಯ ಮತವ ಸಾರಿದ ||ಗುರು ಗೋವಿಂದ ವಿಠಲ | ಸರ್ವಾಧಿಕನು ಎಂದುಸರ್ವ ಶಾಸ್ತ್ರವ ನಿರ್ಣ | ಯವ ಮಾಡಿದ ನೀತ ||ಸರ್ವನಾಮಾಭಿಧ | ಸರ್ವ ನಿಯಾಮಕ | ಸರ್ವ ವ್ಯಾಪ್ತಹರಿ | ಕರುಣವಿಲ್ಲದಲೆಹರಿ ಚರಣಾಂಬುಜ | ದೊರಕದೆಂದನುತಲಿಸರ್ವಾಗಮಗಳ | ಸಾರವ ನ್ವೊರೆದ 3
--------------
ಗುರುಗೋವಿಂದವಿಠಲರು
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ನಿರ್ದಯನಾದ್ಯೋ ಎಲೆ ದೇವನೆ ಕಂತುಪಿತ ನಿನ್ನ ಅಂತ:ಕರುಣ ಎನ್ನ ಮೇಲೆ ಇಲ್ಲದೆ ಪ ಅಂತರಂಗದಿ ಮನದಿ ಅನುದಿನವು ಬಿಡದೆ ನಿಮ್ಮಾ ಚಿಂತನೆಯ ಮಾಡಿದರೆ ಚಿತ್ತಕರಗದೇಕೆ ಅಂಥ ಮಹಾದೋಷ ದತಿಶಯನಗೇನುಂಟ- ನಂತಗುಣ ಪರಿಪೂರ್ಣ ಆದಿನಾರಾಯಣ 1 ವಾಸುದೇವನೆ ನಿಮ್ಮ ವರ್ಣಿಸುವೆನು ವಸುಧಿಯೊಳು ಭೂಸುರರ ಪೋಷಿಸುವ ಪುಣ್ಯಪುರುಷಾ ಘಾಸಿಗೊಳಗಾಗಿ ನಿಮ್ಮ ಧ್ಯಾಸವೇಗತಿಯೆಂದು ಏಸೋ ಪರಿಯಲಿ ಭಜಿಸಿ ಈಶ ನಿನ್ನ ಕೃಪೆಯಾಗದೂ 2 ಸಕಲಲೋಕಾಧೀಶ ಸಕಲಭಾರಕರ್ತನಾಗಿ ಪ್ರಕಟ ಭಕುತರೊಳಗೆ ಪಾಲಿಸದೆ ಎನ್ನಾ ಮುಕುತಿದಾಯಕ ಹೆನ್ನ ವಿಠ್ಠಲ ನೀನೆ ಗೋವಿಂದ ಅಕಲಂಕ ಮಹಿಮ ನಿನ್ಹರುಷವನು ತೋರದಿನ್ನಾ 3
--------------
ಹೆನ್ನೆರಂಗದಾಸರು
ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂಥಾ ಪುಣ್ಯ ಎಂಥಾ ಭಾಗ್ಯ ಪ ಕಂತು ಜನಕ ಶ್ರೀಕಾಂತನ ದರುಶನ ಅ.ಪ ಜಗಜಗಿಸುವ ದಿವ್ಯಾಭರಣಂಗಳ ಸೊಗಸಿಲಿ ಧರಿಸುತ ನಗುವನ ದರುಶನ 1 ಹೇರು ಫಲಗಳನು ಸೂರೆಯ ಮಾಡುವ ಚಾರುವದನ ನಮ್ಮ ಶೌರಿಯ ದರುಶನ 2 ದೇಶ ತಿರುಗಿ ಆಯಾಸವೇತಕೆ ಶ್ರೀಶ ಪ್ರಸನ್ನ ಶ್ರೀ ಕೃಷ್ಣನ ದರುಶನ 3
--------------
ವಿದ್ಯಾಪ್ರಸನ್ನತೀರ್ಥರು
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಭಾಗ್ಯವೆ ಎಂಥಾ ಪುಣ್ಯವೆ ಗೋಪಿ ಪ. ಎಂತು ಸಾಕಲಿಂಥ ದುಷ್ಟನ ಎಂತನಿಂತು ಚಿಂತೆಯಾಂತು ಅ.ಪ. ಪುಟ್ಟಿದೇಳು ದಿವಸದಲ್ಲಿ ದುಷ್ಟಪೂತನಿ ಕೊಂದ ದೇವ ದೃಷ್ಟಿವಂತನೆ ದಿಟ್ಟ ತೃಣ ಕೇಶೀಯರ ಪುಟ್ಟಕಾಲಲಿ ಶಕಟನಳಿದ ಕಟ್ಟಿ ಸಕಲ ದನುಜರನ್ನು ದೃಷ್ಟಿ ತಾಕಿತೆ ಕೃಷ್ಣಗೆನುತ 1 ವಿಪ್ರನು ನಿನ್ನ ಮನೆಗೆ ಬಂದು ಕ್ಷಿಪ್ರದಿ ಪೂಜೆ ಕೃಷ್ಣೆಗೆನಲು ಅಪ್ರಮೇಯನು ವಿಪ್ರನ ಮುಟ್ಟೆ ಕಟ್ಟಿ ಕಂಬಕೆ ಬರಲು ನಿಂದು ಕೃಷ್ಣಗರ್ಪಿಸೆ ನೈವೇದ್ಯವಾಗ ಸುಪ್ರಕಾಶದಿ ತೆಗೆದುಕೊಂಡ ಕೃಷ್ಣನನು ನೀನಪ್ಪಿ ಮುದ್ದಿಸೆ2 ಚಂದಿರನ ನೀ ತೋರು ಎನಲು ಇಂದುವದನ ಕೇಳಲಾಗ ಸುಂದರಾನನನಂದದಿ ಗೋವ ಚಂದದಿಂದ ಕಾದು ಕಾಳಿಂಗನಂದದಿ 3 ಸುರರು ಶ್ರೀ ಶ್ರೀನಿವಾಸನ ಶಿರದಿ ಪುಷ್ಪ ಮಳೆಗೆರೆಯಲು ನೆರೆದು ಗೋಪೇರ ಸೀರೆ ಸೆರಗ ಸೆಳೆದು ವರಳನೆಳೆದು ಮುರಿದು ಮರವ ಗರೆದು ಅಮೃತಸದೃಶ ವಾಣಿ ನೆರೆದು ಗೋಪಿಯರೊಡನೆ ನಾಟ್ಯಗರೆದು ರಾಸವಾಡೆ ರಂಗನಕರೆದೆರೆವೆ ಮಗುವೆನ್ನುವ 4
--------------
ಸರಸ್ವತಿ ಬಾಯಿ