ಒಟ್ಟು 400 ಕಡೆಗಳಲ್ಲಿ , 75 ದಾಸರು , 328 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಳಸಿದೇವಿ ಪದಕೇ | ನಾರೇರು | ಬೆಳಗಿರಿ ಆರುತಿಯಾ ಪ ಬೆಳಗುವುದೂ ನಮ್ಮ | ಅಳಗಿರಿ ರಂಗನಲಲನೆ ಶ್ರೀ ತುಳಸಿಗೆ | ಕಲಿಮಲ ಹಾಗೆ ಅ.ಪ. ದಳಪ್ರತಿ ದಳದಲ್ಲಿ | ಶ್ರೀಹರಿ | ನೆಲಸಿಹ ತಾನಲ್ಲಿಒಲಿಮೆಲಿ ಭಕುತರ | ಹಲವು ಸೇವೆಗಳಿಗೊಲಿದು ಅಭೀಷ್ಟವ | ಸಲಿಸುವ ದೇವಿಗೆ 1 ಅಮೃತ | ಕಲಶವ | ಧರಿಸುತ ಧನ್ವಂತ್ರಿಬರಲು ನಯನದಿಂ | ಮರುಳೆ ಆನಂದಕೆವರ ಬಿಂದೋದ್ಭವೆ | ಹರಿ ಪ್ರಿಯೆ ತುಳಸೀ 2 ಇಂಬು ತೋರಿ ಇರಲುಅಂಬುಜಾಕ್ಷ | ಗುರು ಗೋವಿಂದ ವಿಠಲನ |ತುಂಬಿ ದ್ವೈಭವದಿ | ಸಂಭ್ರಮ ಸೇವಿಪ 3
--------------
ಗುರುಗೋವಿಂದವಿಠಲರು
ತೆರಳಿದರೋ ತಂದೆ ಮುದ್ದು ಮೋಹನರೂಮರಳಿ ಬಾರವ ಪುರಿ ನರಹರಿ ಪೂರಕೇ ಪ ತರಳತನಾರಭ್ಯ ದ್ವಾದಶ ವತ್ಸರಪರಿಸರಾಗಮ ಪಠಿಸಿ ನಿಪುಣನೆನಿಸೀ |ಇರಲು ಬಂದರು ಮುದ್ದು ಮೋಹನ್ನದಾಸರುಕರಿಗಿರಿ ನರಹರಿ ರಥವ ಉತ್ಸವಕೇ 1 ಕರಿಗಿರಿ ಸನಿಯದ ನರಸಿಪುರದೊಳಿದ್ದವರಸುಬ್ಬರಾಯಾಖ್ಯ ಭರದಿಂದ ಬರುತಾ |ಗುರು ಮುದ್ದು ಮೋಹನರ ಪದಪಾಂಸು ಶಿರದಲ್ಲಿಧರಿಸಿ ಬಿನ್ನವಿಸಿದರುಪದೇಶ ಕೊಂಡಿರೆಂದೂ 2 ಪರಿಕಿಸಲೋಸುಗ ಅರುಣ ಉದಯ ಮುನ್ನಕರಿಗಿರಿ ಪುರಬಿಟ್ಟು ತೆರಳಲು ಅವರೂ |ಭರದಿ ಅಡ್ಡೈಸುತ ಗುರುಪಾದದಲಿ ಬಿದ್ದುವರ ಉಪದೇಶವ ಕೈಗೊಂಡ ಧೀರಾ 3 ಶುಭ ಅಂಕಿತವಾ |ತಂದೆ ಮುದ್ದು ಮೋಹನ್ನ ವಿಠ್ಠಲನೆಂದುಛಂದೋಗಮ್ಯನೆ ದಿವ್ಯ ನಾಮವನಿತ್ತರು 4 ದಾಸ ದೀಕ್ಷೆಯ ಪೊತ್ತು ದಾಸ ಕೂಟವ ನೆರಸಿಶೇಷಗಿರೀಶನೆ ಸರ್ವೇಶನೆನುತಾಎಸೆವ ಅಂಕಿತ ಮಂತ್ರ ಉಪದೇಶಗೈಯ್ಯುತ್ತದಾಸರ ಕ್ಲೇಶವ ಹರಿಸೀದ ಗುರುವೇ 5 ವರಚೈತ್ರ ಪಂಚಮಿ ವರುಷವು ವಿಕ್ರಮಶರಣರ ಪೊರೆಯಲು ಕರಿಗಿರಿಯಲ್ಲೀ |ಗುರು ಮುಖ್ಯ ಪ್ರಾಣ ಪ್ರತೀಕವ ನಿಲಿಸುತಆರು ಮೂರನೆ ದಿನ ಹರಿಯ ಸೇರುವೆ ನೆನುತಾ 6 ನರಲೀಲೆ ಕೊನೆಗೈದು ಪರಮ ಪುರುಷಹರಿಶಿರಿಯರಸಗೆ ಪ್ರೀತೆ ಪಾತ್ರನೆನಿಪಾನೂ |ವರ ಗುರು ಗೋವಿಂದ ವಿಠಲನ ಚರಣವಸ್ಮರಿಸಿ ಹಿಗ್ಗುತ ಪೊರಟ ನೀರಿಕ್ಷಿಸುತಾ7
--------------
ಗುರುಗೋವಿಂದವಿಠಲರು
ದಧಿವಾಮನ ವಿಠಲ ಉದ್ಧರಿಸೊ ಇವನ ಪ ಅಧಿ ಭೂತ ಅಧ್ಯಾತ್ಮ ಅಧಿದೈವಗತ ದೇವವಿಧಿ ಜನಕ ವಿಶ್ವಾತ್ಮ ಮಧು ಮಥನ ಹರಿಯೆ ಅ.ಪ. ವಿದ್ಯಾಯುಗಳನಿತ್ತು ಮಧ್ವಮತ ದೀಕ್ಷೆಯಲಿಶ್ರದ್ಧೆ ಬುದ್ಧಿಯ ನೀಯೊ ಮಧ್ವಾಂತರಾತ್ಮಾ |ಕೃದ್ಧಖಳರ್ಹಾವಳಿಯ ಒದ್ದು ಪೋಷಿಸುತಿಪನಶುದ್ಧಗೈವುದು ಮನವ ಸಿದ್ಧಜನ ವಂದ್ಯಾ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳವಾರ ವಾರಕೆ ತಿಳಿಸಿ ಪೊರೆಯಬೇಕೋ |ಸಾರತಮ ನಿನ್ಹೊರತು ಆರು ಕಾಯುವರಯ್ಯಪೋರಗಿಹ ದುರಿತಾಳಿ ಪಾರುಮಾಡೈದೇವ 2 ಕಾರಣಿಕ ಕರುಣಾಬ್ಧಿ ತಾರೇಶ ಶ್ರೀ ಹರಿಯೆನೀರ ಜಾಸನವಂದ್ಯ ನೀರಜಾಕ್ಷಾ |ತಾರಕನು ಕುಭವ ಕೂಪಾರ ದಾಟಿಸಲುಧೀರ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ದಾಸನಾಗಬೇಕು ರಂಗಸ್ವಾ'ುೀಗುರು ನಿಮ್ಮ ದಾಸನಾಗಬೇಕು ಪದಾಸನಾಗಬೇಕು ಕ್ಲೇಶಪಂಚಕವಳಿದು ಆಸೆಯಲ್ಲಿ ಮನಸೂಸದೆ ಸರ್ವದಾ ಅ.ಪಮನದ ಕಲ್ಮಷ ಕಳೆದು ಮಹಾ ರಾಮಕೋಟಿಗಳ ಮ'ಮೆಗಳನು ತಿಳಿದು ಇನಿತು ಈ ಜಗವೆಲ್ಲ ಶ್ರೀರಾಮಮಯವೆಂದು ಘನವಾದ ಮೋಹದಾ ಗಡಿಯನು ದಾಂಟುತ್ತಾ 1ತನುವು ಅಸ್ಥಿರವೆನ್ನುತಾ ತಿಳಿದು ಈ ದುವ್ರ್ಯಾಧಿಪ್ಲೇಗು ಭಯವಬಿಡುತಾ ಘನವಾದ ರಾಮಕೋಟಿಯಲಿ ನೆಲೆಸುತಾಬಿನಗು ಸಂಸಾರದ ಮಮತೆಯ ಬಿಡುತಾ 2ಆರುಚಕ್ರದಿಮೆರೆವ ಅಖಂಡನಾ ಮೂರುಗುಣವತಿಳಿಪ ಆರುಮೂರದಿನಾರು ತತ್ವಾತೀತನಿಜತೋರಿ ರಾಮಕೃಷ್ಣಾದಾಸನುದ್ಧರಿಸಿದರು 3
--------------
ಮಳಿಗೆ ರಂಗಸ್ವಾಮಿದಾಸರು
ದಾಸನಾಗಬೇಕು ಸದಾಶಿವನ ದಾಸನಾಗಬೇಕು ಪ ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಅ ಮನದ ಕಲ್ಮಷ ಕಳೆದು - ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ 1 ತನುವು ಅಸ್ಥಿರವೆನುತ - ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ 2 ಆರು ಚಕ್ರದಿ ಮೆರೆವ - ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ 3
--------------
ಕನಕದಾಸ
ದಾಸರ ದೂಷಿಪರೊ ಕುಜನರು ಹರಿ- ದಾಸರ ನಿಂದಿಪರೊ ಪ ಏಸೇಸು ಜನುಮದ ದೋಷರಾಶಿಗಳೆಲ್ಲ ನಾಶವಗೈÀವ ಶ್ರೀಕೇಶವನಣುಗರ ಅ.ಪ ಮಂದಮತಿಗಳೆಲ್ಲರೂ ಸಜ್ಜನರ ನಿಂದನೆಯೊಳಗಿಹರೊ ಮುಂದಿನ ಬವಣೆಗಳೊಂದೆಣಿಸದಲೆ ಮು- ಕುಂದನ ಭಕುತರ ಸಂದಣಿ ಸೇವಿಪ 1 ಇಂದಿರೇಶನ ಗುಣವ ಪಾಡುತಲಿ ಆ- ನಂದದೊಳೋಲ್ಯಾಡುವ ನಂದಕಂದನ ಲೀಲೆಯಿಂದ ಹಗಲಿರುಳು ಮು- ಕುಂದನ ಕುಣಿಸುವರೊ ದಣಿಯುವರೊ 2 ಆರು ಮಂದಿಗಳ ಗೆದ್ದು ಹೃದಯದಲ್ಲಿ ಶ್ರೀ- ಮಾಧವನನು ಕಾಂಬರ ಶ್ರೀಧರನಂಘ್ರಿಗಳಾದರದಿಂ ಭಜಿಸಲು ಸಾಧು ಗುರುಗಳು ಇವರು ಸುಂದರರು 3 ಸುರಮುನಿವರ ಪ್ರಿಯನ ಭಕ್ತರಿಗೆಲ್ಲ ವರಗಳ ಕೊಡುತಿಹನ ಪರಮಪಾವನ ಮೂರುತಿಯನೆ ಕೊಂಡಾಡುತ ದುರಿತಗಳಳಿಯುವರ ಪಾವನರ 4 ಕರೆದು ಭಕ್ತರ ಸಲಹುವ ಕರುಣದೊಳು ಮೂ- ಪರಮ ಗುರುಗಳ ಮುಖ್ಯ ಕಾರಣವು ಪಡೆದವರು ಶ್ರೀ-ಕಮಲನಾಭ ವಿಠ್ಠಲನೆನ್ನುವರು5
--------------
ನಿಡಗುರುಕಿ ಜೀವೂಬಾಯಿ
ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ದುರಿತಗಜ ಪಂಚಾನನ-ನರಹರಿಯೆ ದೇವರ ದೇವ ಕಾಯೊ ಗೋವಿಂದ ಪ ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನುಬಿಸುಡುವನೆ ಕಾಲುಹೊಳೆಗಳ ಗೋವಿಂದ 1 ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆಬಂಧನ ಬಿಡೆಸೆನ್ನ ತಂದೆ ಗೋವಿಂದ 2 ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ 3 ಕರ್ಮ ಬೆನ್ನ ಬಿಡದಿದ್ದರೆನಿನ್ನ ವಾಲೈಸಲ್ಯಾಕೆ ಗೋವಿಂದ4 ಆಪÀತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ5 ಅರಸು ಮುಟ್ಟಲು ದಾಸಿ ರಂಭೆಯಾದಳು ದೇವಪರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ 6 ಮಾನಾಭಿಮಾನದೊಡೆಯ ರಂಗವಿಠಲಜ್ಞಾನಿಗಳರಸನೆ ಕಾಯೋ ಗೋವಿಂದ 7
--------------
ಶ್ರೀಪಾದರಾಜರು
ದುರಿತಾರಿಯೊಳು ಮನವಿರಿಸಿ ಸೌಖ್ಯವತಾಳು ನರಕವು ಬರದೊ ಮಾನವಾ ಪ ಪರಿಪರಿ ಜನ್ಮದೆ ಕೊರಗಿ ಕಂಗೆಡಬೇಡ ಸ್ಥಿರವಲ್ಲವೀ ದೇಹವೂ ಭರವಸದಿಂದ ಅ.ಪ ಮಂದಮತಿಯನಾಂತು ನೊಂದು ಸಾಯಲಿಬೇಡ ಕುಂದುಕೊರತೆಗಳಿಲ್ಲವೋ ವಂದಿಸಲು ಹರಿಯ 1 ಎರಡು ಕಂಬದ ಮೇಲೆ ಮೆರೆವ ಗೋಪುರವಿದು ಬಿರುಗಾಳಿಯಿಂದಲೋ ಉರುತರ ಮಳೆಯೊಳೊ ಉರುಳಿ ಬೀಳುವುದೆಂಬುದು ಬರೆದಿಡೊ ಮೂಢಾ 2 ನೀರ ಬೊಬ್ಬುಳಿಯಂತೆ ಆರಿಹೋಗುವುದಿದು ಸೇರದು ಪದುಮಾಕ್ಷನಾ ಆರುದಿನ ಬಾಳಿಗಾರು ಸಮರೆನಬೇಡ ಆರಡಿ ಕಮಲವುತಾ ಸೇರುವವೊಲು 3 ಎನಗೆ ಮುಂದೊದಗುವ ಜನ್ಮಕೋಟಿಗಳೊಳು ಅನುಗಾಲ ದೇಶವಸ್ಥೆಗಳೊಳಗೂ ವನಜನಾಭನೆ ನಿನ್ನ ಘನಪಾದಕಮಲವ ನೆನೆವ ನೆಲೆಸುವಂದದೆ ಅನವರತ ಬೇಡೋ 4 ಜೀವಾತ್ಮ ಪೋಪಾಗ ದೇವದೇವನ ಮರೆವ ಭಾವಗಳೊಳುದಯಿಪವು ಸಾವಕಾಶವ ತೊರೆದು ಮಾಂಗಿರಿರಂಗನ ದಿವ್ಯನಾಮವ ನೆನೆದು ಭಾವುಕನಾಗು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೂರ ನೋಡದಿರೆಲೊ ರಂಗಯ್ಯಾ ಪ. ಭವ ಮಡುವಿನೊಳಗಿರುವೆನೋ ಪಿಡಿಯೆನ್ನ ಕೈಯ ತಡಮಾಡ ಬ್ಯಾಡಯ್ಯ ಅ.ಪ. ಹಿಂದೇಸು ಜನ್ಮಂಗಳು ಬಂದು ಪೋದಾವಯ್ಯ ಮುಂದಿನಾಗತಿಯು ತೋರದಯ್ಯಾ ತಂದೆ ತಾಯಿ ಸರ್ವ ಬಂಧು ಬಾಂದವಾ ಕಂದರ್ಪ ಪಿತನೆ1 ಆರು ಕಾಯುವರಿಲ್ಲಾ ಮುರಾರಿ ನಿನಗೆ ಸಾರಿದೆನಲ್ಲಾ ಸೇರಿಸೋ ಸಾಧು ಜನರ ಸಹವಾಸಾ ಹರಿ ನಿನ್ನಲ್ಲಿ ಮನಸು ನಿಲ್ಲಿಸು ಶ್ರೀಶಾ ಶ್ರೀನಿವಾಸಾ 2 ಯೆಷ್ಟು ಹೇಳಲಿ ಯನ್ನ ಕಷ್ಟ ಕೇಳುವರಿಲ್ಲ ಅರಿಷ್ಟ ಸಂಸಾರದೊಳೂ ಕೆಟ್ಟು ಪೋಗುವೆನು ದೃಷ್ಟಿಯಿಂದಲಿ ನೋಡೆನ್ನ ಕಾಳಿಮರ್ಧನಕೃಷ್ಣವಾ 3
--------------
ಕಳಸದ ಸುಂದರಮ್ಮ
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ದೇವೇಂದ್ರನ ಸೊಸೆ ದೇವಕ್ಕಿ ತನಯಳು ಏನೇನು ಬಯಸಿದಳು ಪ ಒಂದು ತಿಂಗಳು ತುಂಬಲು ಸುಭದ್ರ ಅಂಜೂರಿ ದ್ರಾಕ್ಷಿ ಕಿತ್ತಳೆ ಜಂಬುನೇರಳು ಬಯಸಿದಳು ಅಂಬುಜಾಕ್ಷನ ತಂಗಿ ಪೈಜಣ ರುಳಿ ಗೆಜ್ಜೆ ಕಾ- ಲುಂಗುರ ಕಿರುಪಿಲ್ಯ ಇಟ್ಟೇನೆಂಬುವಳು 1 ಎರಡು ತಿಂಗಳು ತುಂಬಲು ಸುಭದ್ರ ಪರಡಿ ಮಾಲತಿ ಸಣ್ಣ ಶ್ಯಾವಿಗೆ ಬಯಸಿದಳು ಪರಿವೇಶನ ತಂಗಿ ಹರಡಿ ಕಂಕಣ ಹಸ್ತ ಕಡಗ ಹಿಂಬಳೆ ದ್ವಾರ್ಯ ಇಟ್ಟೇನೆಂಬುವಳು 2 ಮೂರುತಿಂಗಳು ತುಂಬಲು ಸುಭದ್ರ ವಾಲ್ಯ ಪಚ್ಚದ ಚಂದ್ರ ಬಾಳ್ಯವ ಬಯಸಿದಳು ಮಾರನಯ್ಯನ ತಂಗಿ ತೋಳಿಗ್ವಜ್ರದ ವಂಕಿ ಮಾಣಿಕ್ಯದ್ವೊಡ್ಯಾಣ ಇಟ್ಟೇನೆಂಬುವಳು 3 ನಾಲ್ಕು ತಿಂಗಳು ತುಂಬಲು ಸುಭದ್ರ ಆಕಳ ತುಪ್ಪ ಅನಾರಸ ಬಯಸಿದಳು ಶ್ರೀಕಾಂತನ ತಂಗಿ ತೂಕದ ಸರಿಗೆಯಿಟ್ಟು ಏಕಾವಳಿಯ ಸರ ಹಾಕೇನೆಂಬುವಳು 4 ಐದು ತಿಂಗಳು ತುಂಬಲು ಸುಭದ್ರ ಕೆನೆಮೊಸರ್ಹಾಕಿದ ಬುತ್ತಿ ಚಿತ್ರಾನ್ನವ ಬಯಸಿದಳು ಅಸುರಾಂತಕನ ತಂಗಿ ಹಸುರುಪತ್ತಲನುಟ್ಟು ಕುಸುಮ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 5 ಆರು ತಿಂಗಳು ತುಂಬಲು ಸುಭದ್ರ ಚೌರಿ ರಾಗಟೆ ಜಡೆಬಂಗಾರ ಬಯಸಿದಳು ಮಾರನಯ್ಯನ ತಂಗಿ ನಾಗಮುರಿಗೆನಿಟ್ಟು ಜಾಜಿ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 6 ಏಳು ತಿಂಗಳು ತುಂಬಲು ಸುಭದ್ರ ಕ್ಷೀರ ಮಂಡಿಗೆ ಬುಂದ್ಯ ಫೇಣಿಯ ಬಯಸಿದಳು ಕಮಲ ಕ್ಯಾದಿಗೆ ಮುಡಿಯ ನಿಂಬಾವಳಿ ಪತ್ತಲ ನಿರಿದುಟ್ಟೇನೆಂಬುವಳು7 ಎಂಟು ತಿಂಗಳು ತುಂಬಲು ಸುಭದ್ರ ಚಿಂತಾಕು ಪದಕ ಕಟ್ಟಾಣಿಯ ಬಯಸಿದಳು ವೈಕುಂಠಪತಿಯ ತಂಗಿ ಇಂಟರ್ ಪಪ್ಪುಳಿನುಟ್ಟು ಸೀಮಂತದುತ್ಸವ ಮಾಡೆ ಸುಖದಿಂದಿರುವಳು 8 ಒಂಬತ್ತು ತಿಂಗಳು ತುಂಬಲು ಸುಭದ್ರೆಗೆ ಬಂಗಾರದ್ಹೊರಸಿನಲ್ಲಿರಿಸಿ ಆರತಿ ಮಾಡಲು ಮಂಗಳಮಹಿಮ ಭೀಮೇಶಕೃಷ್ಣನ ತಂಗಿ ಕಂದ ಅಭಿಮನ್ಯು ಎಂಬುವನ ಪಡೆದಳು 9
--------------
ಹರಪನಹಳ್ಳಿಭೀಮವ್ವ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಧರೆಯೊಳು ನಾ ಬಂದು ಇರುಳು ಹಗಲು ನಿನ್ನ ಸ್ಮರಣೆಯ ಮಾಡದೆ ಪರರ ಬಾಗಿಲ ಕಾಯ್ದೆ ಮುರಲೀಧರ ಶ್ರೀಕೃಷ್ಣ ಪೊರಿಯೊ ತಪ್ಪನು ಕ್ಷಮಿಸಿ ಗೊಲ್ಲರ ಸಖದವನೇ ಶ್ರೀವತ್ಸಾಂಕಿತನೇ ನಾರದನಂದನ ನೀನು ಗಾರುಮಾಡಿಯೆನ್ನ ದೂರಗ್ರಹಿಸಲು ಈಗ ಆರು ಕಾಯರೋ ಜಾರ ಚೋರ ಕೃಷ್ಣ ಮಾರಜನಕ ನೀನು ಪಾರಗಾಣಿಸು ದೇವ ಶಿರಿವತ್ಸಾಂಕಿತನೇ
--------------
ಸಿರಿವತ್ಸಾಂಕಿತರು
ನಂದು ನಂದೆಂದೇಕೆ ಬಂಧ ಪಡೆಯುವಿಯೋ ಮಂದಮನ ತಂದೆ ಗೋವಿಂದ ತೋರುವ ಜಗಕೆ ಪ ಚಳಿಗಾಳಿ ನಿನ್ನದೆ ಮಳೆಬೆಳೆ ನಿನ್ನದೆ ಎಲೆಮನಸೆ ನೋಡು ನೀನೊಳಿತಾಗಿ ತಿಳಿದು 1 ನಿಶೆದಿನ ನಿನ್ನದೆ ವಸುಧೆಸ್ಥಿತಿ ನಿನ್ನದೆ ಪಶುವಿನಂದದಿ ಮನಸೆ ವ್ಯಸನದಲಿ ಬಿದ್ದು 2 ಆರುಮಾಡಿದ ಸೃಷ್ಟಿಗ್ಹಾರೈಸಿ ಕೆಡುವಿಯೋ ಮಾರಪಿತ ಶ್ರೀರಾಮ ಪಾದವಾರಿಜನಂಬದೆ 3
--------------
ರಾಮದಾಸರು