ಒಟ್ಟು 304 ಕಡೆಗಳಲ್ಲಿ , 77 ದಾಸರು , 265 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾಲಿಸೆಮ್ಮನು ವೆಂಕಟೇಶಾ ನಂಬಿದೆ ನಿನ್ನ ಪಾದಾ ಸಲಹೋ ಗಿರೀಶಾ ಪಾಲಿಸು ಪನ್ನಗಾ ಚಲವಾಸಾ ಪಾಲಿಸುವ ನ್ನ ಸರ್ವೇಶಾ ಪ ಅನುದಿನ ಕೊಂಡಾಡುವೆನಾ ಪತಿತ ಪಾವನ ನೀನೇಗತಿಯೆಂದು ನಂಬಿದೆ ಸನ್ಮತಿಯ ಪಾಲಿಸು ದೇವಾ ಅಹಿಗಿರಿ ನಿಲಯಾ 1 ಕರಣಶುದ್ಧನ ಮಾಡಿ ಕರೆದುಕೋ ಯನ್ನನು ಕರುಣಾಕರ ವೆಂಕರಾಯಾ ಜೀಯಾ2 ಅಗಣಿತ ಸರಿಯಾರು ನಿನಗೇ ಮೂಲೋಕದ ದೊರೆಯೇ 3 ಕರೆಕರೆ ಸಂಸಾರದೀ ಕೊರಗುತ್ತ ಮರುಗುತ್ತಲಿಹೆ ಭರದೀ ಕಣ್ದೆರೆದು ನೋಡೆಮ್ಮನು ಕನಕಾದ್ರಿಗೊಡೆಯಾ4 ಅರ್ಥಿಯಿಂದಲಿ ನಿನ್ನ ಬಲು ಪರಿಯಿಂದಲಿ ನುತಿಪೆನಾ ಸತ್ಯ ಮೂರುತಿ ನೀನೆ ಹತ್ತಿರ ಕರೆದು ಸಲಹೋ 5 ಹಿಂದೆ ಪ್ರಹ್ಲಾದನ ನುಡಿಯಾ ಕೇಳಿ ನೀ ಕಂಬದಿಂದೊಡೆದು ಬಂದೆ ಅಂಧಕಾರದಿ ಮುಳುಗಿ ಮುಂದೆ ಕಾಣದಲಿರುವೆ ಒಡೆಯ ಇಂದಿರೆ ರೆಮಣಾ 6 ವರವ ಕೊಡುವೇ ಇಷ್ಟಾರ್ಥಗಳ ಕೊಡುವೆ ವೆಂಕಟವಿಠಲಾ 7
--------------
ರಾಧಾಬಾಯಿ
ಪಾಹಿ ರಮಾ ಮನೊಹರ ಪಾಪಿ ಪ ಪಾಹಿ ಸದಾಗಮವೇದ್ಯ ಸಕಲ ಕ ಲ್ಯಾಣ ಗುಣಾರ್ಣವ ಲೀಲಾಮಾನುಷ ಅ.ಪ ಆನೆಯೊಂದು ಕರೆಯಲು ಆ ಕ್ಷಣದಲಿ ನೀನೇ ಬಂದುದೇಕೆ ದೇವ ನೀನೇ ಪಡೆದ ಮಕ್ಕಳ ದೈನ್ಯದ ನುಡಿ ನೀನಲ್ಲದೆ ಕೇಳುವರ್ಯಾರಿರುವರು1 ತುರುವಿನ ಕೆಚ್ಚಲ ಕರು ಗುದ್ದಿದರದು ಕರೆಯದೇ ಕ್ಷೀರವನು ದೇವ ಮರೆತು ಎನ್ನ ಅಪರಾಧಗಳೆಲ್ಲವ ಮರೆಯದಿರೆಲೊ ಎನ್ನಯ ಬಾಂಧವ್ಯವ 2 ಅತ್ತು ಕರೆದು ಔತಣ ನೀಡಿದ ಪರಿ ನಿತ್ಯ ಸೇವೆಯಾಯ್ತೋ ಕೃಷ್ಣ ನಿತ್ಯ ಪೂರ್ಣ ಕರುಣಾಮಯ ಕರುಣಿಸೊ ಚಿತ್ತ ಪ್ರಸನ್ನತೆ ಸಾರ್ಥಕ ಜೀವನ 3
--------------
ವಿದ್ಯಾಪ್ರಸನ್ನತೀರ್ಥರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪುರುಷರೈವರು ಕೂಡಿ ಹರುಷದಿ ಬರುತಿರೆ ಸರಸದಿ ಕೃಷ್ಣೆ ಕದವಿಕ್ಕೆ ಸರಸದಿ ಕೃಷ್ಣೆ ಕದವಿಕ್ಕೆ 1 ನಾಗವೇಣಿಯೆ ನೀನು ಸಾಗಿ ಮುಂದಕ್ಕೆ ಬಂದು ಬಾಗಿಲಿಕ್ಕಿದ ಬಗೆ ಪೇಳೆ 2 ಸರ್ಹ್ಯಾಗೆ ತೆಗೆಯಲಿ ಕದವನು ಹ್ಯಾಗೆ ತೆಗೆಯಲಿ ಕದವನು 3 ಹರದಿ ದ್ರೌಪದಿ ಕೇಳೆ ದೊರೆಯು ಧರ್ಮರು ನಾವು ತ್ವರಿತದಿ ಬಂದೆವು ತೆಗೆ ನೀನು 4 ದೊರೆಗಳಾದರೆ ರಾಜ್ಯ ಪರರಿಗೆ ಕೊಟ್ಟು ತಾ- ನಡವಿ ಯಾತಕೆ ತಿರುಗೀರಿ ಅಡವಿ ಯಾತಕೆ ತಿರುಗೀರಿ5 ಪಟ್ಟದರಸನ ಕೂಡ ಇಷ್ಟು ಮಾತುಗಳ್ಯಾಕೆ ಶ್ರೇಷ್ಠ ಭೀಮನು ನಾ ಬಂದೀನೆ ಶ್ರೇಷ್ಠ ಭೀಮನು ನಾ ಬಂದೀನೆ 6 ಶ್ರೇಷ್ಠನಾದರೆ ಕೈಯ್ಯೊಳ್ಹುಟ್ಟು ಹಿಡಿದು ರಾಜ- ಗಟ್ಟ್ಟಿ ಅಡಿಗೆ ಉಣೀಸ್ಹೋಗೋ ರಾಜ- ಗಟ್ಟಿ ಅಡಿಗೆ ಉಣೀಸ್ಹೋಗೋ 7 ಪುಂಡಕೌರವರಿಗೆ ಗಂಡನೆನಿಸುವಂಥ ಗಾಂಡೀವರ್ಜುನ ನಾ ಬಂದೀನೆ ಗಾಂಡೀವರ್ಜುನ ನಾ ಬಂದೀನೆ 8 ದುಂಡು ಹರಡಿನಿಟ್ಟು ಗೊಂಡ್ಯದ್ಹೆರಳನ್ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ 9 ಸಕಲವಿದ್ಯೆಗಳಲ್ಲಿ ಕುಶಲ ಸಂಪನ್ನನಾದ ನಕುಲರಾಯನು ನಾ ಬಂದೀನೆ ನಕುಲರಾಯನು ನಾ ಬಂದೀನೆ 10 ಸಕಲವಿದ್ಯೆಗಳಲ್ಲಿ ಕುಶಲನಾದರೆ ತೇಜಿ ಕೆಲಸ ರಾಯರಿಗೆ ತಿಳಿಸ್ಹೋಗೊ ಕೆಲಸ ರಾಯರಿಗೆ ತಿಳಿಸ್ಹೋಗೊ 11 ಪಾವಕÀತನುಜೆ ಮಾದೇವಹಾರದವೇಣಿ ಸ(ಹ) ದೇವರಾಯನು ನಾ ಬಂದೀನೀಗ ಸ(ಹ)- ದೇವರಾಯನು ನಾ ಬಂದೀನೀಗ 12 ಗೋವ ಕಾಯುತಲಿ ಗೋಪಾಲಕನಾಗಿ ಕೊಳಲೂದಿ ಗೊಲ್ಲರೊಳಾಡಹೋಗೊ ಕೊಳಲೂದಿ ಗೊಲ್ಲರೊಳಾಡಹೋಗೊ 13 ಮಾತುಳಾಂತಕನಲ್ಲಿ ಮಾತು ಕಲಿತು ಬಂದಿ(ಲ್ಲಿ) ಸೋತೆವೆ ನಿನಗೆ ಸುಂದರಾಂಗಿ ಸೋತೆವೆ ನಿನಗೆ ಸುಂದರಾಂಗಿ 14 ಸೋತರೇನಾಯಿತು ದ್ಯೂತಪಗಡೆ ಬಿಟ್ಟು ಅ- ಜ್ಞಾತವಾಸವನೆ ಚರಿಸ್ಹೋಗೊ ಅ- ಜ್ಞಾತವಾಸವನೆ ಚರಿಸ್ಹೋಗೊ15 ತಿರುಗಿ ತಿರುಗಿ ಭಾಳ ಬಳಲಿ ಬಂದೆವೆ ನಾವು ಕರುಣವಿಲ್ಲವೆ ಕಮಲಾಕ್ಷಿ ಕರುಣವಿಲ್ಲವೆ ಕಮಲಾಕ್ಷಿ 16 ಭಾಳ ಬಳಲಿದೆವೆಂದು ಹೇಳಿಕೊಂಡರು ಕರು- ಣಾಳು ನಾನಲ್ಲ ಕರೆಯಲು ಕರು- ಣಾಳು ನಾನಲ್ಲ ಕರೆಯಲು 17 ಕಾಮನಯ್ಯನ ಕರುಣಕ್ಕೆ ಪಾತ್ರರೆ ನಾವು ಸಾಮಜಗಮನೆ ಸರಸ್ಯಾಕೆ ಸಾಮಜಗಮನೆ ಸರಸ್ಯಾಕೆ 18 ಹೇಮಮಾಣಿಕ್ಯದ ಕದವ ತೆಗೆದು ಪತಿಗಳಿಗೆ ಪ್ರೇಮದಿಂದೆರಗಿ ಕರೆದಳು ಪ್ರೇಮದಿಂದೆರಗಿ ಕರೆದಳು 19 ಆದರದಿಂದ ಕರೆಯಲರ್ಜುನ ಭೀಮ ಧರ್ಮ ಸಾದೇವ ನಕುಲ ಸಹಿತಾಗಿ ಸಾದೇವ ನಕುಲ ಸಹಿತಾಗಿ 20 ಪಂಚಪಾಂಡವರು ಬಂದು ಪರಮ ಸಂಭ್ರಮದಿಂದ ಮಂಚದ ಮ್ಯಾಲೆ ಕುಳಿತಾರೊ ಮಂಚದ ಮ್ಯಾಲೆ ಕುಳಿತಾರೊ21 ಥsÀಳಕು ಬೆಳಕಿನಿಂದ ಝಳಕು ಮಿಂಚುಗಳಂತೆ ಬಳುಕುತ ಬಾಳೆಸುಳಿಯಂತೆ ಬಳುಕುತ ಬಾಳೆಸುಳಿಯಂತೆ22 ಗಂಡರೈವರ ಮುಂದೆ ಗರುವಿಲೆ ನಿಂತಳು ದುಂಡುಮಲ್ಲಿಗೆ ಶಿರ ಬಾಗಿ 23 ಕರಕಮಲವ ಪಿಡಿದು ಕರೆದು ಸಾದೇವ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ 24 ಮುಖಬೆವರ್ವೊರೆಸುತ ನಕುಲರಾಯನು ಭಾಳ ಸುಖದಿ ಮುದ್ದಿಸಿದ ಮಡದಿಯ ಸುಖದಿ ಮುದ್ದಿಸಿದ ಮಡದಿಯ 25 ಅರ್ಜುನಾಗಲೆ ಮೋಹದಿಂದ ಮುಂಗುರುಳು ತಿದ್ದಿ ವಜ್ರದಾಭರಣನಿಡಿಸಿದ 26 ಭೀಮ ನಗುತ ಬಿಗಿದಪ್ಪಿ ದ್ರೌಪದಿಯ ಧರ್ಮ- ರಾಯನ ತೊಡೆಯಲ್ಲಿರಿಸಿದ ಧರ್ಮ- ರಾಯನ ತೊಡೆಯಲ್ಲಿರಿಸಿದ 27 ಧರ್ಮ ಮುತ್ತಿನ ಹಾರ ಪದಕ ಕೊರಳಿಗೆ ಹಾಕಿ ವರಮೋಹನಾಂಗಿ ಒಲಿಸಿದ ವರಮೋಹನಾಂಗಿ ಒಲಿಸಿದ 28|| ಸಿಂಧುಸುತನ ಮುಖಬಿಂಬ ಸೋಲಿಸುವಂಥ ಚಂದ್ರವದನೆ ಮುನಿಸ್ಯಾಕೆ ಚಂದ್ರವದನೆ ಮುನಿಸ್ಯಾಕೆ 29 ಮಾತಿನರಗಿಳಿಯೆ ನೀ ಜ್ಯೋತಿ ಮುತ್ತಿನ ಗೊಂಬೆ ಪ್ರೀತಿಪತಿಗಳ ನೀ ನೋಡೆ ಪ್ರೀತಿಪತಿಗಳ ನೀ ನೋಡೆ 30 ಪ್ರಾಣಪದಕವೆಂದು ತಿಳದೆವೈವರು ನಿನ್ನ
--------------
ಹರಪನಹಳ್ಳಿಭೀಮವ್ವ
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಂದನೇಳೆ ದೇವಿ ರಂಗ ಮನೆಗೇ| ಇಂದು ಮುಖಿ ನಿನ್ನ ಮನದಾ ನಂದ ಕೊಡಲು ಪ ಭಾಗವತ ರೊಡಗೂಡಿ| ಭಕ್ತಿರಂಗದೊಳಾಡಿ ಸುಖವ ಸೂರ್ಯಾಡಿ 1 ಗರುಡವಾಹನ ಪರಾಕೆಂಬ ಶೃತಿ ಭಟರು| ಮೂರಾರು ಸಾಲ ಪಂಜಿನ ಬೆಳಗಿನಿಂದ 2 ಸಕಲ ಸುಂದರ ರಾಶಿಯೆ ಎನಿಪ ಮೋಹನರೂಪ| ಅಕಳಂತಕ ಬ್ರಹ್ಮಾದಿ ಸುರರೊಡೆಯಾ 3 ದುರಿತ ಹರನೆಂಬ| ಬಿರದ ಜಾಂಗಟೆ ಶಂಖ ಕೌಸಾಳರವದಿ 4 ತನ್ನ ಭೃತ್ಯರ, ಭೃತ ಭೃತ್ಯನ ಕರೆದು| ಮನ್ನಿಸುವ ಮಹಿಪತಿ ಸುತಪ್ರಾಣ ಪದಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರಬಾರದೇನೋ ಹರಿಯೇ | ಹೇ ದೊರೆಯೆ ಪ ಕರೆದು ಚೀರುತಲಿರೇ | ಮರೆಯಲಿಪ್ಪುದು ಥರವೇ ಅ.ಪ. ಅಕ್ಷಯ ಹಾಕೀ | ಭರದಿ ಸಲಹಿದೆ ಅಂದೂ1 ಸರಿ ಅಧಿಕರು ನಿನಗೇ | ನರ ಸುರರಲಿ ಯಾರೂಇರರು ಎಂಬುದ ತಿಳಿದು | ಗರುವ ಮಾಡುವಿ ಏನೊ 2 ಬಂಧು ನೀನಲ್ಲವೇನೋ | ಎಂದೆಂದಿಗೂ ನೀನುಇಂದು ಎನ್ನಯ ಕಣ್ಣಾ | ಮುಂದಕೆ ಬಂದು ನಿಲ್ಲೋ3 ದೇಹದಿ ಜೀವಾಂತರದೀ | ಬಹಿರಂತರದಿ ವ್ಯಾಪ್ತಮುಹುರ್ಮುಹು ಪ್ರಾರ್ಥಿಸುವೇ | ಮಹ ಮಹಿಮನೆ ಬಾರೊ 4 ಗುರು ಗೋವಿಂದ ವಿಠಲಾ | ಸುರ ಶತೃಗಳು ಪಟಳಾಹರಿಸೆನ್ನ ವಿದ್ಯಾಪಟಲಾ | ತೋರೋ ನಿನ್ನ ಮುಖ ಕಮಲಾ 5
--------------
ಗುರುಗೋವಿಂದವಿಠಲರು
ಬರಿದೆ ಚಿಂತಿಸಬೇಡ ಮನವೆ ಭಯಗೊಂಡು ಹರಿಯೊಲುಮೆ ನಮ್ಮಲ್ಲಿ ಸ್ಥಿರವಾಗಿ ಉಂಟು ಪ ಕೊಲ್ಲುವನೊ ಕಾವನೋ ನಿಲ್ಲುವನೊ ಪೋಗುವನೋ ಬಲ್ಲನೊ ಅರಿಯನೋ ಇದನೆಲ್ಲವೆನುತ ಸೊಲ್ಲುಸೊಲ್ಲಿಗೆ ಕರೆದು ಎಲ್ಲವನು ತಿಳುಹಿದರೆ ಕಲ್ಲಾಗುವನೆ ಸ್ವಾಮಿ ಜಗದ ವಲ್ಲಭನು 1 ಕರಿರಾಜ ಧ್ರುವನು ಪ್ರಹ್ಲಾದ ದ್ರೌಪದಿ ದೇವಿ ಮರೆವಿನೊಳಜಾಮಿಳನು ಕರೆಯಲಾಗಿ ಮೊರೆಯ ಲಾಲಿಸಿ ತಾಯಿ ಕರುವನರಸುವ ತೆರದಿ ಉರಗ ಗಿರಿವಾಸ 2 ಗರ್ಭದೊಳಗಿರುವಾಗ ಹಬ್ಬಿರುವ ಮಾಂಸಲತೆ ಉಬ್ಬಸವ ಬಿಡುತಿರಲು ಅಬ್ಬೆ ಸಲಹಿದಳೆ ಉಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲನು ಮುಂದೆ ತೋರಿದ (ರಾ)ರೊ ನಿನಗೆ 3 ಮಡದಿ ಮಕ್ಕಳನೆಲ್ಲ ಒಡಗೊಂಡು ಮಲಗಿರಲು ಕಡಸಾರ ಬಂದವಳು ಕಾಲು ಸುತ್ತಿ ನಡುವಿರುಳು ಹಿಡಿದಿರ್ದ ಹಿಡಿತಲೆಯ ಮೃತ್ಯುವನು ಬಿಡಿಸಿ ಸಲಹಿದರಾರು ಜಡನಾದ ಮನವೆ 4 ಹರಿಯನರಿಯದೆ ಮನದಿ ಮರುಗಿ ಕರಗಲು ಬೇಡ ಎರವು ಮಾಡದೆ ಸ್ವಾಮಿ ಪರಿಪರಿಯ ಸೌಖ್ಯವನು ಕರೆದು ಈವನು ನಮಗೆ ವರಾಹತಿಮ್ಮಪ್ಪ 5
--------------
ವರಹತಿಮ್ಮಪ್ಪ
ಬಾರನ್ಯಾತಕೆ ಕೃಷ್ಣ ಬಾರನ್ಯಾತಕೆ ಪ ಹರಿಯ ಮನಕೆ ಹರುಷಪಡಿಸಿ ಹರಿಯ ಕರೆಸಿ ಮನದೊಳಿರಿಸಿ ಹೊರಗೆ ಬಿಡರೆಂಬೊ ಭಯಕೆ ಮರೆಯೊಳಿದ್ದುಕಾಲ ಕಳೆಯುವ 1 ಮದಗಜಗಮನೆಯರೆಲ್ಲ ಮದನಕದನ ದೊಳಗೆ ಸೋಲಿಸಿ ಮುದದಿ ಎನ್ನಬಿಡದೆ ಮನೆಯೊಳು ಸದರದಿಂದ ನೋಡುವರೆಂದು 2 ಆಣಿ ಮುತ್ತಿನ ಮಾತನಾಡಿ ಜಾಣ ಪ್ರಾಣನಾಥ ವಿಠಲನ ವಿನಯದಿಂದ ಕರೆದು ತಂದರೆ ವನಜಮುಖಿಯೆ ಹರುಷ ಪಡುವೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರೆನ್ನ ಸಖಿಯೇ ಕರೆದು ತೋರಿಸೇ ಪ ಕರೆದು ತೋರಿಸೇ ಕಂಜನಯ್ಯಾನಾ| ಕರಿವರ ದಾಯಕ ಕರುಣಾ ಸಾಗರನಾ 1 ಸರಸಿಜ ಲೋಚನ ಮುಕುಟ ಕುಂಡಲನಾ| ಕೌಸ್ತುಭ ಕೇಯೂರ ಧರನಾ 2 ಮದನ ಶರಕ ಗುರು ಮಾಡುವರೇನೇ| ಮಧುಹರ ಮುನಿವದು ಉಚಿತ ವೇನೇ 3 ಒಂದರಗಳಿಗೆಯ ಮರೆದಿರ ಲಾರೆ| ಇಂದು ನೀ ಧನ್ಯಳ ಮಾಡಲೆ ನೀರೆ4 ಬೆರೆದು ಬಿಡುವನಲ್ಲಾ ಸಕಲಂತರ್ಯಾಮಿ| ನೆರೆದನು ಗುರು ಮಹಿಪತಿ ಸುತಸ್ವಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೊ ಕೃಷ್ಣ ಬಾರೊ ಕೃಷ್ಣ ಬಾರೊ ಕೃಷ್ಣ ಮನದಸದನಕೆ ಪ ತೊರೊ ಕೃಷ್ಣ ತೊರೊಕೃಷ್ಣ ತೊರೊಕೃಷ್ಣ ಚರಣ ಬಡವಗೆ ಅ ಶಿರವ ನಿಡುವೆ ಚರಣದಲ್ಲಿದುರಿತಹರಣ ಕರುಣಭರಿತನೆ ಪೊರೆವ ಧರಣಿ ಧರಿಪನೆ 1 ಸಿರಿಯಮದದಿ ಮರೆತೆ ನಿನ್ನ ಕರೆದು ಪೊರೆಯೊ ಶರಣರಕ್ಷಕಾ ಅಳಿವೆ ಕ್ಷೇಮ ಧಾಮನೆ 2 ವೇದವಿನುತ ಮೋದಭರಿತ ಸಾಧುಚರಿತ ಆದಿ ಕಾರಣಾ ಕಾಯೊ ಬಂಧನೀಡ್ವನೇ3 ನೀರಜಾಕ್ಷ ವಾರಿನಿಲಯ ಸೂರಿಗಮ್ಯ ಪೂರ್ಣಧಾಮನೆ ಸರ್ವನಾಮ ಸರ್ವಕರ್ಮ ಸರ್ವಶ್ರೇಷ್ಟಸರ್ವ ಪ್ರೇರಕಾ 4 ಇಂದಿರೇಶ ನಂದಪೂರ್ಣ ಸುಂದರಾಂಗ ಬಂಧಮೋಚಕ ಕುಂದುರಹಿತ ವಂದನಾರ್ಹ ಬಿಂದು ಬಿಂಬ ಕಂಧರಾಶ್ರಯ 5 ಭುವನ ವಿತತ ಭುವನಮೂಲ ಭುವನ ಪಾಲ ಭುವನನಾಶಕ ಭುವನ ಭಿನ್ನ ಸ್ತವನ ಪ್ರೀಯ ಕವನವರಿಯೊ ಕವಿಬಿರೀಡಿತ ಭಕುತಿದಾಯಕ ಶಕುತ “ಶ್ರೀಕೃಷ್ಣವಿಠಲ” ಯುಕುತಿ ಗೊಲಿಯ ಲಕುಮಿನಾಯಕ
--------------
ಕೃಷ್ಣವಿಠಲದಾಸರು
ಬಾರೊ ಮುಂದಿರೊ ಪರನಾರಿಸಹೋದರಮಾರ ನಿನಗಾರ ಮುದ್ದತಾರ ವೀರಹನುಮ ಪ. ಮರಗಳ ಮುರಿದೆ ಕರೆಕರೆದು ನೆರೆದಸುರರಶಿರಂಗಳ ತರಿದೆ ನಿನ್ನ ಸರಿಯಾರೋ ವೀರ ಹನುಮ 1 ಕಂಡೆ ನಿನ್ನ ಬಲವ ಸುಪ್ರಚಂಡ ರಿಪುಕುಲವತುಂಡು ತುಂಡಿಕ್ಕಿ ಮೆರೆದೆ ಬಲುಗಂಡೆ ವೀರ ಹನುಮ 2 ಎನ್ನೊಡೆಯ ಶ್ರೀಹಯವದನಗೆ ರನ್ನದ ಕನ್ನಡಿಯಂತೆ ಪ್ರಸನ್ನ ಮೋಹದ ......ಬಾಳು ಬಾಳು ವೀರ ಹನುಮ 3
--------------
ವಾದಿರಾಜ