ಒಟ್ಟು 158 ಕಡೆಗಳಲ್ಲಿ , 49 ದಾಸರು , 148 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಕರ್ತ ನಾನಲ್ಲೆಂದು ಹಿರಿಯರಾಡಿದ ಮಾತು ಅರಿ ಜೀವೋಪಿ ಕರ್ತನೆಂಬ ವಿರೋಧ ಪ ಸಿರಿ ಅರಸ ತತ್ವೇಶರ ಕೈಯೊಳು ಚರಿಪಾಧೀನ ಜೀವನಲ್ಲವೆ ಪರಮ ನಿಷ್ಕ್ರಿಯ ನಾ ಹೀನ ಮನವೆ ಅ.ಪ ಜಲಾಗ್ನಿ ಸ್ತಂಭ ಜಪ ಕಲಿತ ಮಾತ್ರಕೆ ಪ್ರಾಣಿ ನಿಲಬಹುದೆ ಅನಲ ಜ್ವಾಲೆಯೊಳು ಮ್ಯಾಲೆ ಸುಖದಾಸೆಯಿಂದ ಹಲವು ಕರ್ಮಾಚರಿಸಿ ಗೆಲಬಹುದೆ ನಿಲಯ ಹರಿಕರ್ತನೆಂದ ನುಡಿಗೆ 1 ಬಿಡಿಬಾಯ ಮಾತಿಗೆ ಪೊಡವಿಪ ಒಪ್ಪುವುದಾದರೆ ಪಡುವದ್ಯಾಕೆ ತದ್ಧಿತಪಃ ಪ್ರಮಾಣ ಬಿಡುವುಧ್ಯಾಗೆ ಶ್ರುತಿ ಸ್ಮøತಿ ಹರಿ ಆಜ್ಞೆ ಕಾಯ ಏಕವಾಗೋ ತನಕ 2 ಜ್ಞಾನೇಚ್ಛಾಕ್ರಿಯ ಶಕ್ತಿ ಮಿನುಗುವ ಜೀವಕ್ಕೆ ನಿತ್ಯ ಸ್ವಭಾವದಲ್ಲೆ ಜ್ಞಾನಿಗೆ ಕೊಡುವ ಯಥೇಷ್ಟಾಚರಣೆ ಏನೇನು ಕೂಡದು ಶ್ರವಣಾಧಿಕಾರಿಗೆ 3 ನಾನು ನನ್ನದು ಎಂಬ ಜ್ಞಾನ ಅನುಗಾಲ ಇರಲಾಗಿ ನೀನು ನಿನ್ನದು ಎಂಬ ವಂಚನೆಯಲ್ಲವೆ ಹೀನ ಬಿಡದು ಇದರಿಂದ ಅನುಮಾನ ಮಾಡಸಲ್ಲ ತನ್ನ ಕ್ರಿಯ ಅನ್ಯಕ್ರಿಯದಂತಾಗೋತನಕ ಮನವೆ 4 ಜ್ಞಾತಾಜ್ಞಾತ ಕರ್ಮದೊಳು ಜ್ಞಾತಾನುಷ್ಠಾನ ವಿಶೇಷ ಪೀತನಾಹ ಶ್ರೀಶ ತಾನು ಕರ್ಮ ನಿಷ್ಪಲವಲ್ಲವು ಜ್ಞಾತ ವಿಜಯ ರಾಮಚಂದ್ರವಿಠಲ 5
--------------
ವಿಜಯ ರಾಮಚಂದ್ರವಿಠಲ
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೋಗುತಿದೆ ಹೊತ್ತು ಬರಿದೆ ವ್ಯರ್ಥವಾಗಿಹರಿಗುರುಗಳ ನೆನೆಯದೆ ಪ. ನರರ ನೂರಮೂವತ್ತೆರಡುಕೋಟಿವರುಷ ದಿವಸವೊಂದೆ ಬೊಮ್ಮಗೆಪರೀಕ್ಷಿಸಲು ಬ್ರಹ್ಮಕಲ್ಪಸಾಸಿರ ಕೋಟಿನರಕದೊಳಗೆ ಬಿದ್ದು ಮರಳಿ ಭವದಿ ಬಂದು1 ಒಂದೊಂದಕೆ ಇಪ್ಪತ್ತೊಂದುಲಕ್ಷ ಯೋನಿಎಂದೆನಿಸುವ ಸ್ವೇದಜ ಉದ್ಬಿಜಬಂದು ಜರಾಯುಜಾಂಡಜ ಕುಲದಿ ಪುಟ್ಟಿನೊಂದೆ ಎಂಬತ್ತುನಾಲ್ಕುಲಕ್ಷ ಯೋನಿಯಲಿ 2 ಮಾಸ ಒಂಭತ್ತು ಮತಿಗೆಟ್ಟು ಗರ್ಭದಿಹೇಸದೆಬಂದು ಜೀವಿಸಿ ಬಳಲಿಮೋಸವನರಿಯದೆ ಮುನ್ನಿನ ಕರ್ಮದಿಘಾಸಿಯಾದೆನೊ ಯೌವನಮದದಿ ಸೊಕ್ಕಿ 3 ಕೆಲಹೊತ್ತು ಚದುರಂಗÀ ಪಗಡೆ ಆಟಗಳಿಂದಕೆಲಹೊತ್ತು ಹಸಿವೆ ನಿದ್ರೆಗಳಿಂದಲಿಕೆಲಹೊತ್ತು ಕಾಕಪೋಕರ ಕತೆಗಳಿಂದಕೆಲಹೊತ್ತು ಪರನಿಂದೆ ಪರವಾರ್ತೆಗಳಿಂದ 4 ಕಾಲವು ಕಡೆಯಾಗಿ ಹರಿ ನಿಮ್ಮನರ್ಚಿಸೆವೇಳೆಯಿಲ್ಲದೆ ಹೋಯ್ತು ಬಂಜೆಯಾಗಿಜಾಲಿಸಿಹೋಗುತಿದೆ ಈ ವಿಧದಿ ಹೊತ್ತು ಬೇಗನೆಪಾಲಿಸಿ ದಯಮಾಡೊ ಸಿರಿಹಯವದನ 5
--------------
ವಾದಿರಾಜ
ಎಂದಿಗೆ ಬಹನೆ ಕೃಷ್ಣ ಮಂದಸ್ಮಿತಾನನೆ |ಅಂದದಿಂದಿರುವ ತನ್ನಯ ವೃಂದಾವನ ಬಿಟ್ಟಿಲ್ಲಿಗೆ ತವಕದಿ ಪತರುಣೀ, ಗೋಕುಲದೊಳಗಿಹ ಸಖಿಯರು ಎಂಥಾ ಧನ್ಯರೆ |ಪರಮಾತ್ಮನ ಪೊಂದಿ ಇತರ ಕರಕರಿ ಅರಿಯಳೆ ||ಹರಿಯಿಂತೊಲಿದಿರಲವರೇನು ಸುರಲೋಕದ ಸ್ತ್ರೀಯರೇ |ಪರಿಪರಿ ಸುಖ ಸಾಗರದೊಳಗಿರುವರುಜರಿದುಮಧುರೆಯಲ್ಲಿಹದೆಂದು 1ಅಮ್ಮೆಏನೊಳ್ಳೆವರವರಾಳ್ವರು ಸಮ್ಮಾತಾಂತಲ್ಲವೆ |ನಮ್ಮನೆಯವರವರಂತೆ ಸುಮ್ಮನೆ ಇರುವರೆ ||ಬೊಮ್ಮನ ಜನಕೆಮೊಲಿಸಿದರೆ ಒಮ್ಮೆಗೆ ಪೇಳಿರೆ |ಸಮ್ಮಸಿ ಕೊಳ್ಳಲು ಮನದಿ ಸುಕರ್ಮದ ಪ್ರಬಲಿಗೆ ಘಮ್ಮನೆ ಬಹಸಖಿ 2ಅಲ್ಲೀ ಸ್ತ್ರೀಯರಕಿಂತಿತಿಶಯ ಚಲ್ವೆರ್ನಾವಲ್ಲವೆ |ಸುಳ್ಳಲ್ಲಿಂತಾಭರಣಾಂಬರವೆಲ್ಲಿ ಕಂಡಿಹರೆ ||ಗೊಲ್ಲಿತಿಯರು ನಮ್ಮಂದದಿ ಸೊಲ್ಲಿಸಬಲ್ಲರೆ |ಮಲ್ಲಮರ್ದನ ಪ್ರಾಣೇಶ ವಿಠಲೆಮ್ಮನು ಬಿಟ್ಟೆಲ್ಲಿ ಪೋಗನು 3
--------------
ಪ್ರಾಣೇಶದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ತೋರುತಲೈದಾನೆ ಮುಕ್ತಿಯ ತೋರುತಲೈದಾನೆಸಾರಿ ಶರಣರೆಂದು ಶ್ರೀನಿವಾಸದೇವ ಪ.ಹುಲ್ಲು ಕಲ್ಲಿನ ಪೂಜೆಯ ಮಾಡಿ ಕೆಡದೆಬೆಲ್ಲದಾಸೆಗೆಂಜಲು ತಿನ್ನದೆಸೊಲ್ಲುಸೊಲ್ಲಿಗೆ ಹರಿಸರ್ವೋತ್ತಮನೆಂದುಬಲ್ಲವರು ಭಕ್ತಿಲಿ ಭಜಿಸಿರೆಂದು 1ಭುವಿಯ ವೈಕುಂಠವು ನೋಡಿರಾನತರೆಂದುನವನವ ಉತ್ಸಾಹದೊಳಿಹನುಯುವತಿ ಲಕುಮಿ ಕೂಡ ಸ್ವಾಮಿ ಪುಷ್ಕರಕೂಲಭವನದೊಳಗಿಪ್ಪ ಭಕ್ತ ಚಿಂತಾಮಣಿ 2ನೆಲೆಯೆ ಸಿಕ್ಕದ ಧರ್ಮಕರ್ಮದ ತೊಡರ ಬಿಟ್ಟಲಸದೆ ತನ್ನಂಘ್ರಿಯಾತ್ರೆ ಮಾಡಿಸುಲಭದಿ ಮೋಕ್ಷವ ಗಳಿಸಿಕೊಳ್ಳೆನುತಲಿಕಲಿಯುಗದೊಳಗೆ ಪ್ರಸನ್ನವೆಂಕಟಪತಿ 3
--------------
ಪ್ರಸನ್ನವೆಂಕಟದಾಸರು
ದುರಿತವಾರಿವಾಹ ಜಂಝಾನಿಳ ಶರಣುಆಗಾಮಿಸಂಚಿತಅಖಿಳಕರ್ಮದೂರಈಷಣತ್ರಯದೂರ ಇಳೆಯೊಳಗೆ ಪುಣ್ಯಅಧ್ಯಾತ್ಮ ಅಮಿತ ಗೋಪ್ಯತತ್ವವಿಚಾರಕಾಮಾದಿ ಷಡುರಿಪುಗಳನ ಗೆಲಿದು ಹೃದಯಭುವನಮಂಡಲಾಧಿಪ ಕವಿಗಳ ಶಿರೋರತುನ
--------------
ಗೋಪಾಲದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸೋ ವೆಂಕಟಗಿರಿ ರಾಯಾ ಲಕ್ಷ್ಮೀ |ಲೋಲನೀಲಾಂಬುದ ಸಮ ಕಾಯಾ ಪಮಾಕಮಲಾಸನವಾಸವ- ಸುರ |ನೀಶ ಕರಾಧ್ಯ ಕೇಶವ ||ಲೋಕೇಶ ಯನ್ನಲ್ಲಿ ವಾಸವ-ಮಾಡಿನೂಕು ತುಚ್ಛತರ ಕ್ಲೇಶವ 1ಹಿಂದಿನ ಜನುಮಗಳೆಣಿಕಿಲ್ಲ - ದಯಾ |ಸಿಂಧುಸಾಧನವೀಗಲಿನಿತೆಲ್ಲಾ ||ಮುಂದಿನ ಗತಿಯೇನೋ ತಿಳಿದಿಲ್ಲ - ಇದ |ರಿಂದಲಂಜುವೆ ಜಾಂಬವತೀ ನಲ್ಲ 2ಬಾಲಕನಾದೆ ಕೆಲವು ದಿನ - ಪ್ರಾಯ |ಕಾಲವೊದಗಲು ಪರಾಂಗನಾ ||ಮೇಲೆ ಅಭಕ್ಷಣೆಯಲಿ ಮನವಿಟ್ಟೆ - ಹೇ |ಳಲೊಂದೆರಡೇ ಯನ್ನವಗುಣ 3ಉದಯ ಸ್ನಾನವು ಸಂಧ್ಯಾವಂದನೆ - ಅಘ್ರ್ಯ |ವಿಧಿಗುರುಹಿರಿಯರ ವಂದನೆ |ಮೊದಲಾಗಿ ಪಿತರಾರಾಧನೆ ಬಿಟ್ಟೆ |ಮದದಿಂದ ಹೀನನೆಂಬುವ ನಾನೇ4ಅನ್ಯರ ಮನೆ ದ್ವಾರ ಕಾಯ್ವೆನೋ - ಸ್ವಾಮಿ |ನಿನ್ನ ಸ್ಮರಣೆಯ ಕ್ಷಣ ಮಾಡೆನೋ ||ಅನ್ನಕ್ಕೆ ಬಹುದೂರ ಪೋಪೆನೋ - ಸಾರೆ |ಪುಣ್ಯಕ್ಷೇತ್ರಗಳಿರೆ ನೋಡೆನೋ 5ಧನಹೀನನಾದ ಕಾರಣದಿಂದ -ಸತಿ|ಮನೆ ಹೊಂದಿಸಳೋ ಪರಮಾನಂದ ||ತನುಜರಶನ ವಸನಗಳಿಂದ ಕಾಡು |ವಣು ಮಾತ್ರ ಸುಖವಿಲ್ಲ ಇದರಿಂದ6ಏಸುಹೇಳಲಿ ಮಾತ ಲಾಲಿಸೋ - ಶ್ರೀ ಪ್ರಾ- |ಣೇಶ ವಿಠ್ಠಲ ನೀನೇ ತಾರಿಸೋ ||ಆ ಸತ್ಕರ್ಮದಿ ಮನ ಪ್ರೇರಿಸೋ - ನಿನ್ನ |ದಾಸವರ್ಗದೊಳೆನ್ನ ಕೂಡಿಸೋ 7
--------------
ಪ್ರಾಣೇಶದಾಸರು
ಬರಿಯ ಮಾತಲಿಲ್ಲ ಶ್ರೀಹರಿಯ ಪ್ರೀತಿರಣ್ಣ ಮಧ್ವಾಚಾರ್ಯರುಪದೇಶವೆ ಮುಕ್ತಿಪುರದೊಳು ಖ್ಯಾತಿರಣ್ಣ ಪ.ರಂಗನ ಪ್ರತಿಮೆಯನು ಬಿಡದೆ ಬಹಿರಂಗದಿ ಪೂಜೆಯ ಮಾಡಿಕಂಗಳುತುಂಬಲು ಮೆಲ್ಲನೆ ಅಂತರಂಗದಿ ಪೀಠದಿ ನೋಡಿಹಿಂಗದೆ ಗುರುಶಿಕ್ಷಾಕ್ರಮದಲಿ ಧ್ಯಾನಂಗತನಾಗ್ಯೊಲಿದಾಡಿಲಂಘಿಸಿ ಜನ್ಮಾಯುಷಗಳ ತುದಿಯಲಿಮಂಗಳ ಬಿಂಬವ ನೋಡದೆ ನೋಡಿ 1ಒಮ್ಮಿಂದೊಮ್ಮೆ ಹೃದಯದದ್ದಕೆಧರ್ಮವ ಜರಿದರೆ ಹೀನನಿರ್ಮಳ ಶೌಚಾಚಮನವೆ ಗಳಿಸಿದಸಮ್ಯಕ್‍ಜ್ಞಾನ ನಿಧಾನತಮ್ಮವಗುಣ ರೋಗಕೆ ಔಷಧವುಕರ್ಮದ ಮೂಲವೆ ಸ್ನಾನಹಮ್ಮಿಲಿ ಸನ್ಮಾರ್ಗಕೆ ಕುಂದಿಡದೆಇಮ್ಮಡಿ ಸಾಧಿಸಿ ನವನವೀನ 2ಸದ್ವ್ವ್ರತ ದೀಕ್ಷೆಯು ಧ್ರುವಪದ ಮುಕ್ತಿಯುಸುದ್ವಾರವ ಬಿಡಬಹುದೆಮಧ್ವೇಶನ ಮಹಿಮೆಯ ಕೇಳದೆ ರಕ್ಷಾಧ್ವರ ಕಥೆ ಕೇಳಬಹುದೆವಿಧ್ವಂಸಿಸುವ ಚೋರರು ಹೇಳ್ಯಾಡುವಸದ್ವಚನದಿ ಸುಖವಾಹುದೆಅದ್ವಯ ಪ್ರಸನ್ವೆÉಂಕಟೇಶನ ಪಾದಕಮಲದ್ವಯ ಬಿಟ್ಟಗೆ ತಮಸಹುದಹುದೆ 3
--------------
ಪ್ರಸನ್ನವೆಂಕಟದಾಸರು
ಬಿನ್ನಪಲಾಲಿಸಯ್ಯ ಭಕ್ತಪರಾಧ-ವನ್ನು ಕ್ಷಮಿಸಬೇಕಯ್ಯ ಪ.ಅನ್ಯಾಯ ಕಲಿಕಾಲಕ್ಕಿನ್ನೇನುಗತಿಸುಪ್ರ-ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತ ಅ.ಪ.ಮಕ್ಕಳ ಮಾತೆಯಂದದಿ ಕಾಯುವ ಮಹ-ದಕ್ಕರದಿಂದ ಮುದದಿಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತುರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನುದಿಕ್ಕಿಲ್ಲದವರ ಧಿಕ್ಕಾರ ಗೈದರೆಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ-ವರ್ಕಳಮಣಿ ನಿನಗಕ್ಕಜವಲ್ಲವುಕುಕ್ಕುಟಧರವರ ಮುಕ್ಕಣ್ಣತನಯ 1ಜಾತಿ ನೀತಿಯನು ಬಿಟ್ಟು ಡಾಂಭಿಕತನದರೀತಿಗೆ ಪ್ರೀತಿಪಟ್ಟುಸೋತು ಹಣವ ಕೊಟ್ಟು ಖ್ಯಾತರೆಂಬುವಗುಟ್ಟುಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿಯಾತುಧಾನರಗುಣಯಾತಕ್ಕರಿಯದುಭೂತೇಶ್ವರಸಂಜಾತ ಸುರನರ-ವ್ರಾತಾರ್ಚಿತ ಪುರಹೂತಸಹಾಯಕನೂತನಸಗುಣವರೂಥಪುನೀತ2ಯಾವ ಕರ್ಮದ ಫಲವೋ ಇದಕಿ-ನ್ಯಾವ ಪ್ರಾಯಶ್ಚಿತ್ತವೋಯಾವ ವಿಧವೊ ಎಂಬ ಭಾವವರಿತ ಪುರುಷಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲದೇವ ಲಕ್ಷ್ಮೀನಾರಾಯಣನಪಾದಸೇವಕನೀ ಮಹಾದೇವನ ಸುತ ಕರು-ಣಾವಲಂಬಿಗಳಕಾವನಮ್ಮಯ ಕುಲ-ದೇವ ವಲ್ಲೀಪತಿ ಪಾವಂಜಾಧಿಪ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಧ್ವಮುನಿಮನಮಂದಿರನಿವಾಸ ಸಿರಿಕೃಷ್ಣಶುದ್ಧರಿಗೆ ಸದ್ಗತಿ ಮಿಶ್ರರಿಗೆ ಮಧ್ಯವುಸತ್ವರಿಗೆ ನವವಿಧ ಭಕುತಿಯನೆ ತೋರಿಸಿಒಬ್ಬರ ಕರ್ಮದಲಿ ಒಬ್ಬರು ರತರಾಗೆದೇಹ ಸಂರಕ್ಷಣೆಯಲ್ಲಿ ಇನ್ನುದುಷ್ಟಜೀವ ದುಷ್ಟಶಾಸ್ತ್ರ ದುಷ್ಟಕರ್ಮಗಳಿನ್ನುಈ ವಿಧದಲಿನಿತ್ಯಪೊರೆದು ಎನ್ನ ಮರೆದೆ
--------------
ಗೋಪಾಲದಾಸರು
ಮಾಡುದಾನಧರ್ಮಪರಉಪಕಾರವ ಮರೆಯದಿರೆಚ್ಚರಿಕೆಪ.ಕೇಡ ನೆನೆಯಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ||ಅ||ಬಾಳು ಬದುಕುಸಿರಿ ಇರುವಾಗ ಬಂಧು ಬಳಗಗಳೆಚ್ಚರಿಕೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಾಲು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ 1ಮೂಢರ ಒಡನಾಡಿ ಮುಂದೆ ಕೆಡಲು ಬೇಡಮೋಸ ನೋಡೆಚ್ಚರಿಕೆನಾಡೊಳು ಸುಜನರ ನೋಡಿ ನಡೆಕಂಡ್ಯ ನಟನೆ ಬೇಡೆಚ್ಚರಿಕೆ 2ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆ |ನಿನ್ನಾಯು ಮುಗಿದಿರಲು ಯಮದೂತರುಬಂದು ಎಳೆಯುವರೆಚ್ಚರಿಕೆ 3ಒಬ್ಬರಂತೆಲ್ಲರ ನೋಡಿ ಸತ್ಕರ್ಮದಿ ಉಬ್ಬಬೇಡೆಚ್ಚರಿಕೆ |ಕಬ್ಬು ಬಿಲ್ಲನ ಪಿತನ ಏಕಾಂತ ಭಾವದಿಂನೆರೆನಂಬು ಎಚ್ಚರಿಕೆ 4ಹೆಣ್ಣು ಹೊನ್ನು ಮಣ್ಣು ನಿನ್ನನಗಲಿಸಿ ಹೋಗುವರೆಚ್ಚರಿಕೆ |ಮುನ್ನಮಾಡಿದ ಪುಣ್ಯ ಬೆನ್ಹತ್ತಿ ಬರುವುದುಮುಂದೆ ನೋಡೆಚ್ಚರಿಕೆ 5ತಿಂದೋಡಿ ಬಂಧುಬಳಗ ತಪ್ಪಿಸಿ ಕೊಂಬರೆಂದು ನೋಡೆಚ್ಚರಿಕೆ |ಎಂದೆಂದು ಅಗಲದ ಬಂಧು ಶ್ರೀಹರಿನಮಗೆಂದು ನೋಡೆಚ್ಚರಿಕೆ 6ಕಾಲನ ದೂತರು ಯಾವಾಗ ಎಳೆವರೋ ಕಾಣದು ಎಚ್ಚರಿಕೆ |ಬೇಲೂರು ಪುರವಾಸ ಪುರಂದರವಿಠಲನ ಆಳಾಗು ಎಚ್ಚರಿಕೆ 7
--------------
ಪುರಂದರದಾಸರು