ಒಟ್ಟು 260 ಕಡೆಗಳಲ್ಲಿ , 61 ದಾಸರು , 208 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂಕನಾಗೋ ಮನವೆ ನಿನಗೆ ಯಾಕೀ ಲೋಕ ಗೊಡವೆ ಪ ಮೂಕನಾಗಿ ಬಹುಜೋಕೆಯಿಂದ ನಡಿ ಏಕಾಂತ ಗುಟ್ಟೀ ಲೋಕರಿಗರುಹುದೆ ಅ.ಪ ಹೇಳಿದರೇನಾದೋ ನೀ ಬಲು ಕೇಳಿದರೇನಾದೊ ಹೇಳಿಕೆ ಕೇಳಿಕೆ ಗಾಳಿಯ ಮೊಟ್ಟ್ಯೆಂದು ನೀಲಶಾಮನ ಮನದಾಲಯದೊಳಗಿಟ್ಟು 1 ಅವನಿ ಗೊಡವೆ ಯಾಕೋ ಹರಿಯೆಂದು ಭವಭಯವನು ಕಳಕೋ ದಿವನಿಶಿ ನಿಜದನುಭವದೊಳಗಾಡುತ ಭವಗೆಲುವಿನ ಸುದ್ದಿ ಭವಿಗಳಿಗುಸುರದೆ 2 ಪಾದ ಪಿಡಿಯೋ ಮುಂದಿನ್ನು ಹುಟ್ಟು ಸಾವು ಗೆಲಿಯೊ ದುಷ್ಟಮತಿಗಳ ಗೋಷ್ಠಿಗೆ ಹೋಗದೆ ಬಿಟ್ಟಗಲದೆ ನಿಜಪಿಡಿದು ನೀತಿ 3 ಮತ್ರ್ಯಜನರ ಇದಿರು ನೀ ಬಲು ಗುಪ್ತದಿಂದಿರು ಚದುರ ಸತ್ಯತಿಳಿದು ಹರಿ ಸರ್ವೋತ್ತಮನಂಘ್ರಿ ಚಿತ್ತದಿ ನಿಲ್ಲಿಸಿ ಅತ್ಯಾನಂದಗೂಡಿ 4 ನಂಬಿಗಿಲ್ಲದಲ್ಲಿ ಸುಬೋಧ ಡಂಬವೆನಿಪುದಲ್ಲಿ ಜಂಬವಡಿಯದೆ ಕುಂಭಿನಿಯೊಳು ನೀ ನಂಬಿ ಶ್ರೀರಾಮನ ಗುಂಭದಿಂ ಭಜಿಸುತ 5
--------------
ರಾಮದಾಸರು
ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಯಾಕೆ ನೀನು ಹೀಗೆ ಮಾಡುವಿ ವೀರ ಹನುಮ ಯಾಕೆ ನೀನು ಹೀಗೆ ಮಾಡುವಿ ಪ. ಯಾಕೆ ನೀನು ಹೀಗೆ ಮಾಡುವಿ ಜೋಕೆಯಿಂದ ಸಲಹೊ ಎಂಬ ವಾಕು ಕೇಳದೇನೋ ನಿನಗೆ ಬಿಂಕ ಅ.ಪ. ಸತ್ಯವಂತನೆಂಬ ವಾಕು ಎತ್ತ ಪೋಯಿತೀಗ ಬಿರುದು ಒತ್ತಿ ಒತ್ತಿ ಕೇಳಿದರೂ ಉತ್ತರವÀ ಕಾಣೆನಲ್ಲೊ 1 ಒಡೆಯ ರಾಮಭಂಟನೆನಿಸಿ ಒಡವೆ ವಸ್ತು ಇಟ್ಟುಕೊಂಡು ಬಡಿವಾರದಲಿ ನಿಂತರೀಗ ಬಡವರೆಮ್ಮ ಗತಿಯದೇನೊ 2 ವೀರ ಉಡುಪು ಧರಿಸಿಕೊಂಡು ವೀರ ಭೀಮನೆನಿಸಿಕೊಂಡು ಮೋರೆ ಎತ್ತಿ ನೋಡದಿರಲು ದಾರಿಯಾವುದೆಮಗೆ ಪೇಳು 3 ಮುನಿಯ ರೂಪ ತಾಳಿ ಮತ್ತೆ ಮೌನಧರಿಸಿ ನಿಂತರೀಗ ಮಾನತನದಿ ತುತಿಸುವೆಮಗೆ ಏನು ಮುಂದೆ ಗತಿಯು ಇನ್ನು 4 ಬೇಡಲಿಲ್ಲೊ ನಿನ್ನ ಒಡವೆ ಬೇಡಲಿಲ್ಲೊ ನಿನ್ನ ಭಾಗ್ಯ ಆಡೊ ಒಂದು ಮಾತು ಎನಲು ಮಾಡಿರುವೆ ಮನವ ಕಲ್ಲು 5 ಏನು ಸೇವೆ ಮಾಡಲೀಗ ಏನು ನಿನ್ನ ಸ್ತುತಿಸಲೀಗ ಏನು ಧ್ಯಾನ ಮಾಡಲೀಗ ಏನು ತಿಳಿಯದಲ್ಲೊ ಎನಗೆ 6 ಶುದ್ಧವಾದ ನಿನ್ನ ಒಂದು ಮುದ್ದು ಮಾತು ಕೇಳೆನೆಂದು ಒದ್ದಾಡುವೆನೊ ಮನದಿ ಬಹಳ ಇದ್ದಿಯಾಕೊ ಸುಮ್ಮನಿನ್ನು 7 ಮನದಿ ಎನಗೆ ದೃಢವು ಇಲ್ಲ ಹನುಮ ನಿನಗೆ ದಯವು ಇಲ್ಲ ಮುನಿಸು ಮಾಡೆ ನೀನು ಸಲ್ಲ ಘನವೆ ನಿನಗೆ ಪೇಳೊ ಸೊಲ್ಲ 8 ನಿನ್ನ ಹೊರತು ಪೊರೆವರಿಲ್ಲ ಮನ್ನಿಸಿನ್ನು ಕಾಳಿನಲ್ಲ ನಿನ್ನ ಕೀರ್ತಿ ಜಗದಿ ಬಹಳ ಉನ್ನತದಲಿ ಮೆರೆಸೊ ಮಲ್ಲ 9 ಅನ್ನಕೊಡಿಸಿ ಇಟ್ಟುಕೊಂಡು ಮನ್ನಿಸುವೆನೆಂಬೋ ಇಂಥ ಭಿನ್ನನಾದ ನುಡಿಗೆ ನಾನು ಇನ್ನು ಒಪ್ಪಲಾರೆ ಕಂಡ್ಯ 10 ಕದರುಮಂಡಲಿಗಿ ಹನುಮ ಹೆದರಲಾರೆ ನಿನಗೆ ಇನ್ನು ಒದಗಿ ಪಾಲಿಸೆಂದು ಬೇಡೆ ಹೃದಯ ಕರಗದಲ್ಲೊ ನಿನಗೆ 11 ನಿರುತ ನಿನ್ನ ದಾಸಳೆನಿಸಿ ಚರಿಸುವಂಥ ಎನಗೆ ಒಲಿದು ಅರುಹದಿರಲು ಒಂದು ವಾಕು ಬಿರುದು ಉಳಿವುದೇನೊ ಇನ್ನು 12 ಇಷ್ಟ ಸಲಿಸದಿರೆ ಗೋಪಾಲ ಕೃಷ್ಣವಿಠ್ಠಲಗ್ಹೇಳಿ ನಾನು ಕಟ್ಟಿ ಹಾಕಿಸುವೆನೊ ಎನ್ನ ಮೂರ್ತಿ 13 ಗುರುಗಳಾಜ್ಞೆಯಿಂದ ನಾನು ಹರುಷದಿಂದ ಬಳಿಗೆ ಬರಲು ಗರುವದಿಂದ ನಿನ್ನ ನೇತ್ರ ತೆರದು ನೋಡದಿರುವರೇನೊ 14 ತಂದೆ ನೀನೆ ಸಲಹೊ ಎಂದು ಬಂದು ನಿನ್ನ ಅಡಿಗೆ ಎರಗೆ ಒಂದು ಮಾತನಾಡದಂಥ ಕುಂದು ಏನು ಪೇಳೊ ಇನ್ನು15 ಬೇಡ ಬೇಡ ಛಲವು ಇನ್ನು ಪಾಡಿಪೊಗಳುವಂತೆ ದಯವ ಮಾಡು ಎನ್ನ ಮೊರೆಯ ಕೇಳಿ 16
--------------
ಅಂಬಾಬಾಯಿ
ಯಾಕೆ ಬಳಲಿಸುವಿ ಗುರುರಾಯಾ ಇನ್ನು ಸಾಕು ಮಾಡಿ ಸಲಹೋ ಕಡು ಬೇಗ ಜೀಯಾ ಭಕ್ತ ಕೇಳಿದರೆ ಕೊಡವಲ್ಲಿ ಉಪ- ಯುಕ್ತವಲ್ಲದ ಮಾಯವನು ಬಿಡಿಸಲೊಲ್ಲಿ ಶಕ್ತಿ ನಿನಗಿಹುದೋ ಕರದಲ್ಲಿ ವಿ- ರಕ್ತನೇ ಕೋಪವ್ಯಾತಕೋ ದಾಸನಲ್ಲಿ 1 ತ್ರಾಹಿ ತ್ರಾಹಿ ಗುರುರಾಯಾ ಈಗ ದೇಹಿ ಎಂಬಗೆ ನಾಸ್ತಿ ಎನಬ್ಯಾಡೋ ಜೀಯಾ ದೇಹ ನಿನಗೊಪ್ಪಿಸಿದೆನಯ್ಯಾ ಮುದ್ದು ಮೋಹದಾ ಹರಿಕಂದಾ ಪ್ರಹ್ಲಾದರಾಯಾ 2 ಇಷ್ಟಕ್ಕೆ ನಾ ಬಿಡುವುದಿಲ್ಲ ನೀನು ಥಟ್ಟನೆ ಕೊರಳ ಕೊಯ್ದರೆ ಯತ್ನವಿಲ್ಲಾ ಕೊಟ್ಟು ಕಾಯ್ದರೇ ಅಹಿತವಲ್ಲಾ ನಮ್ಮ ಧಿಟ್ಟ ಶ್ರೀ ಹನುಮೇಶವಿಠಲನ ಜಾಲಾ 3
--------------
ಹನುಮೇಶವಿಠಲ
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ರೋಗವನು ಪರಿಹರಿಸೊ ಗುರು ರಾಘವೇಂದ್ರಾ ಪ ಕರಮುಗಿದು ಬಿನ್ನೈಪೆ ಧೀರ ಯೋಗೇಂದ್ರ ಪಾಲಾ ಅ.ಪ. ಅರಿಯದಾ ತರಳ ತನ್ನ ನಿಜಮತಿಯಿಂದ ದೂಷಿಸಲಿಲ್ಲ ಪರರ ಮಾತನು ಕೇಳಿ ದೂಷಿಸಿದನಲ್ಲದೇ 1 ಏನ ಪೇಳಲಿ ಗುರುವೆ ನಿನ್ನ ಸಮಕರುಣಿಗಳು ಇನ್ನುಂಟೆ ಜಗದೊಳು ಕೇಳಿದ ಕಾರಣದಿ ಬಂದು ಬಿನ್ನೈಸಿದೆ 2 ಬಾಲಕನು ಪರಿಪರಿಯಿಂದ ಪೀಡಿತನಾಗಿ ಬೆಂಡುಬೆಂಡಾದಾತಂದೆವರದಗೋಪಾಲವಿಠ್ಠಲ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಭವಹುದು ಹರಿಕಥಾಮೃತ ಪ ಪದುಮನಾಭನ ಪದದ ಪಥದಿಅಹುದು ಸಜ್ಜನಗಣಕೆ ಸತ್ಯ ಅ.ಪ ಅರಿಷಡ್ವರ್ಗಂಗಳ ತೊರೆದುಜರಿದು ತಾಪತ್ರಯವ ಕಳೆದುಮುರಹರನ ಪದದ ಪಥದಿಇರಲು ಸಜ್ಜನ ಗಣಕೆ ಸತ್ಯ 1 ಏಳು ದಿನವು ಪರೀಕ್ಷಿತನುವೇಳೆಯರಿತು ಹರಿಯ ಕಥೆಯಕೇಳಿ ಮುಕ್ತನಾದ ಮೇಲೆಕೇಳಿದ ಕಥೆಯ ಕೇಳಬೇಕು2 ಎರಡು ಘಳಿಗೆ ಖಟ್ಟಾಂಗರಾಯಕರಣ ಪುಟದಿ ಕೃಷ್ಣನ ಕಥೆಯಸ್ಮರಿಸಿ ಮುಕ್ತನಾದ ಮೇಲೆನಿರುತ ಕಥೆಯ ಕೇಳಬೇಕು 3
--------------
ವ್ಯಾಸರಾಯರು
ವರದ ವೆಂಕಟ ಶ್ರೀನಿವಾಸ ಪ ಕರುಣದಿ ಪಿಡಿಯೊ ಎನ್ನ ಶೇಷಗಿರೀಶಾಅ.ಪ. ಘೋರ ಭವದಿ ನೊಂದೆನು ಇಂದು ಭಾರ ನಿನ್ನದು ಎಂದು ಸಾರಿ ಬೇಡಿದೆ ನಿನಗೆ ಭಕ್ತಬಂಧು ದೂರಮಾಡಲು ಬೇಡ ಕರುಣಾ ಸಿಂಧು ವಾರಿಜಾಸನ ವಂದ್ಯ ನೀರಜನಯನನೆ ಶರಣರ ಪೊರೆಯುವ ಸುರ ದ್ರುಮನೆ ಪರಿಪರಿ ಭವಣೆಯ ತರಿಮಹಿದಾಸನೆ ಚರಣ ಸೇವಕರ ಸೇವಕನೆನಿಸೊ ಶ್ರೀಶನೆ ದುರುಳ ಅಸುರನ ಶಿರವ ತರಿದು ತರಳ ಪ್ರಹ್ಲಾದನ ಪೊರೆದೆ ಎಂದು ಸುರರು ಪೊಗಳವುದನ್ನು ತಿಳಿದು ಭರದಿ ಬಂದು ಶಿರವ ನಮಿಸುವೆ ನಿಂದು 1 ಸಿರಿ ಅಜಭವಾದಿ ವಂದಿತ ಚರಣ ಪರಿಮಿತಿಯಿಲ್ಲದ ಗುಣ ಗಣ ಪೂರ್ಣ ನೀರಜ ಭವಾಂಡೋದಯಕೆ ಕಾರಣ ದುರಿತ ಹರಣ ಕ್ರೂರಜನ ಕುಠಾರ ದೇವನೆ ಗರುಡಗಮನ ಭೀಮರೂಪನೆ ಅರಗಳೆಣಿಸದೆ ಪೊರೆಯಂ ಬೇಗನೆ ಕರವ ಮುಗಿದು ಸಾರಿ ಬೇಡುವೆ ಕರಿಯ ತೊಡರನು ತರಿದು ನಕ್ರನ ಶಿರವ ಸೀಳಿದ ಕರುಣಿ ಕೃಷ್ಣನೆ ಸೀರೆ ಪಾಲಿಸಿ ಪೊರೆದ ದಾತನೆ ಮರಳಿ ಬರುವ ಭವವ ಬಿಡಿನೊ ರಂಗನೆ 2 ನಂಬಿದವರ ಕಲ್ಪವೃಕ್ಷ ನಂಬದವರ ಕಲುಷಕೆ ಶಿಕ್ಷಾ ಇಂಬಾಗಿ ಸರ್ವತ್ರ ಸುಜನರ ರಕ್ಷಾ ತುಂಬಿದ ವೈಭವದಿ ಮೆರೆಯೊ ದಕ್ಷಾ ಕಂಬುಕಂಠನೆ ನಿನ್ನ ನಂಬಿದೆ ಅಂಬರದಲಿ ಕಾಣೆಂದು ಬೇಡಿದೆ ಬಿಂಬನ ನಾಮನುಡಿಸೆಂದು ಕೇಳಿದೆ ಶಂಬರವೈರಿ ನಿನ್ನ ಚರಣವ ಸಾರಿದೆ ಶಂಭುವಂದಿತ ತುಂಬುರ ಪ್ರಿಯ ನಂಬಿ ಭಜಿಸುವೆ ತುಂಬು ಮನದೊಳು ಅಂಬುಜಾಕ್ಷನೆ ಜಯತೀರ್ಥ ಮುನೀಂದ್ರ ಬೆಂಬಲವಾಯುಗ ಶ್ರೀ ಕೃಷ್ಣವಿಠಲಾ 3
--------------
ಕೃಷ್ಣವಿಠಲದಾಸರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ
ವಾಯುದೇವರು - ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ಪ ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ಅ.ಪ ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ 1 ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ 2 ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪುಲ ಪ್ರಮತಿ ವರವೈಷ್ಣವ ತತ್ವಗ ಳುಪದೇಶಿಸಿದ ಪ್ರಸನ್ನ ಯತಿವರೇಣ್ಯ3
--------------
ವಿದ್ಯಾಪ್ರಸನ್ನತೀರ್ಥರು
ವಿಜಯರಾಯ | ಗುರು | ವಿಜಯರಾಯ ಪ ವಿಜಯರಾಯ | ಗುರು | ವಿಜಯರಾಯ ಅ.ಪ. ಎರಡನೆ ಯುಗದೊಳು | ವಿ | ಸುರಲೀಲ ಕಪಿಯಾದ್ನೊ |ವಿ|ಹರಿಕಾರ್ಯಕನುವಾಗಿ | ವಿ | ಹರಿಕರುಣ ಪಾತ್ರನೆ | ವಿ | 1 ಭಂಜನ ಪಾದ | ವಿ | ಸುಕಮಲವ ಸೇವಿಸೆ | ವಿ |ಪ್ರಕಟಿ ಯಾದವರಲ್ಲಿ | ವಿ | ನಿಕಂಪಾನೆನಿಸೀದೆ | ವಿ | 2 ಪುರಂದರ ದಾಸರೋಳ್ ತುರುಕರು ನೀನಾಗಿ | ವಿ | ಹರಿಚರಿತೆ ಕೇಳಿದೆ | ವಿ |3 ಪರ ವಿದ್ಯಾರ್ಜಿಸಿದ್ಯೊ | ವಿ | 4| ಗುರು ವಾಜ್ಞದಿ ಮತ್ತೆ | ವಿ | ತಿರಿಪಾದ ಪೂರೈಸೆ ವಿ |ವರ ಭೂಸುರನಾಗಿ | ವಿ | ಹರಿಚರಿತೆ ಪೇಳಿದೆ | ವಿ | 5 ವತ್ಸರ ಮಾಸ | ವಿ |ಎರಡು ಐದನೆ ದಿನ | ವಿ | ಗುರುವಾರ ಪ್ರಹರದಿ | ವಿ | 6 ವರಯೋಗ ಮಾರ್ಗದಿ | ವಿ | ಗುರು ಗೋವಿಂದ ವಿಠಲನ | ವಿ |ಚರಣಾಬ್ಜ ಸೇರುತ | ವಿ | ಮೆರೆವೆ ಭಕ್ತರ ಮನದಿ | ವಿ |7
--------------
ಗುರುಗೋವಿಂದವಿಠಲರು