ಒಟ್ಟು 1242 ಕಡೆಗಳಲ್ಲಿ , 61 ದಾಸರು , 210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ಯಾಕೊ ಪಾರ್ಥನ ಹೆಸರು ಹೋಕೆ ಮಾತಿನ ಕೃಷ್ಣ ಸಾಕು ನೀ ನಮ್ಮ ಸರಿಯೇನೊ ಕೋಲಸಾಕು ನೀನಮ್ಮ ಸರಿಯೇನೊ ಬಲಿಯ ಮನೆಯ ಬಾಗಿಲ ಕಾಯ್ದು ಬದುಕಿದಿ ಕೋಲ ಪ. ಚಿಕ್ಕಂದಿನಾರಭ್ಯ ವತ್ಸಗಳನೆ ಕಾಯ್ದು ತುಚ್ಛನಾಗಿದ್ಯೊ ಜನರೊಳು ತುಚ್ಛನಾಗಿದ್ಯೊ ಜನರೊಳು ರುಕ್ಮಿಣಿಯಕೂಡಿ ಹೆಚ್ಚಿನವನೆಂದು ಹೆಸರಾದ್ಯೊ ಕೋಲ1 ಜನಿಸಿದಾಕ್ಷಣದಲ್ಲಿ ಜನನಿ ಜನಕರನಗಲಿದಿದನಗಳ ಕಾಯ್ದ್ಯೊ ವನವನ ದನಗಳ ಕಾಯ್ದ್ಯೊ ವನವನ ತಿರುಗಿದ್ದುಮನಕೆ ತಾರಯ್ಯ ಮರೆಯದೆ ಕೋಲ 2 ಬಡಿವಾರ ಬಂದ ಬಗಿ ಹೇಳೊ ಕೋಲ3 ಸತ್ಯಭಾಮೆ ನಿನ್ನ ಹೊಸ್ತಿಲ ಹೊಗಲಿಕ್ಕೆಅತ್ಯಂತ ಪದವಿ ಒದಗಿತುಅತ್ಯಂತ ಪದವಿ ಒದಗಿತು ಕೃಷ್ಣ ನಿನ್ನ ಹೆತ್ತವರ ಭಾಗ್ಯ ಅರಿವೆಯೆ ಕೋಲ4 ಹೆಂಡಿರ ಪುಣ್ಯದಿಂದ ಕಂಡೆಯಾ ಈ ಭಾಗ್ಯವ ಪಾಂಡಿತ್ಯವೆಲ್ಲೊ ಬಲವೆಲ್ಲೊಪಾಂಡಿತ್ಯವೆಲ್ಲೊ ಬಲವೆಲ್ಲೊ ಕೃಷ್ಣ ನಿನ್ನ ಪಂಡಿತರು ಕೇಳೋ ಹುಸಿಯಲ್ಲ ಕೋಲ5 ನಾರಿಯರ ಪುಣ್ಯದಿ ಏರಿದ್ಯೋ ರಥವಾಜಿ ಧೀರತನದಿಂದ ಗಳಿಸಿದ್ಯೊಧೀರತನದಿಂದ ಗಳಿಸಿದ ಗಳಿಕೆಯ ತೋರೊ ರಾಮೇಶ ನಮಗಿನ್ನು ಕೋಲ 6
--------------
ಗಲಗಲಿಅವ್ವನವರು
ಯೋಗಿ ಎಂಬ ಆನೆ ಬಂದಿತಯ್ಯಆನೆ ಬಂದಿತು ಪ್ರಪಂಚ ಪೇಟೆಯತಾನೆ ಕೀಳುತ ತಳಪಟ ಮಾಡುತ ಪ ಪಾಷಗಳೆಂದೆಂಬ ಸರಪಳಿ ಹರಿದುಈಷಣಗಳು ಎಂಬ ಸಂಕೋಲೆ ಮುರಿದುದ್ವೇಷವೆನಿಪ ಗಾಡಿಕಾರರನರೆದುಕ್ಲೇಷವೆನಿಪ ಕಾವಲವರ ಜಡಿದು 1 ದಶವಾಯುಗಳೆಂಬ ದನಗಳನೋಡಿಸಿವ್ಯಸನ ಕುದುರೆಗಳ ಸೀಳಿ ಸೀಳಿಕ್ಕಿಹಸಿವು ತೃಷೆಗಳನು ಕಾಲೊಳಿಕ್ಕಿಕಸೆಕಸೆ ಅಂಗಡಿಗಳನು ತೂರಿಕ್ಕಿ2 ಬಹುಮತಗಳು ಎಂಬ ಮನೆಯನೆ ಕೆಡಹಿಇಹಪರ ವಾಸನೆ ಕೊಟ್ಟಿಗೆ ಕೊಡಹಿಮಹಾ ಅಭಿಮಾನದ ನಾಯಿಗಳ ಮುಡುಹಿಬಹು ಕಲ್ಪನೆಯ ಕುರಿ ಕೋಳಿಗಳ ಉಡುಹಿ3 ಬೋಧ ಲಹರಿಯಲಿ ತೂಗುತಜ್ಞಾನ ಸೊಕ್ಕಿನಲಿ ಕೆಕ್ಕರಿಸಿ ನೋಡುತ ತಾನೆ ತಾನಾಗಿ ತನ್ನ ಮರೆಯುತ 4 ಬೆಳಗುವ ಸುಷುಮ್ನ ಬಾಜಾರವಿಡಿದುಗೆಲುವಿನಲಿ ಭ್ರೂಮಧ್ಯ ಜಾಡಿನಲಿನೆಡೆದುತಿಳಿಗೊಳ ಸಹಸ್ರಾರದ ನೀರ ಕುಡಿದುಬಲು ಚಿದಾನಂದವೆಂಬ ಆನೆಯು ನಡೆದು 5
--------------
ಚಿದಾನಂದ ಅವಧೂತರು
ಯೋಗಿ ಕುಲಪುಂಗವ ಕಾಯೋ ಕೋಲ ತನಯ ತಟಿ ಸದನಾ ವಿಬುಧವೃಂದ ನುತ ಪ್ರೇಮಸಾಗರ ಪ ಸುಜನ ಪಾಲಾ ವಿಜಿತಾನಂಗನ ಭಾಸುರ ಮಹಿಮ1 ಪಾವನಾತ್ಮಕ ಪಾಪ ವಿದೂರ ಕಾವುದೈ ಸದಾ ಕೋವಿದರೊಡೆಯ2 ಶಾಮಸುಂದರ ಪ್ರೇಮ ಸುಪಾತ್ರ ಸ್ವಾಮಿ ಶ್ರೀಗುರು ರಾಘವೇಂದ್ರಾರ್ಯ 3
--------------
ಶಾಮಸುಂದರ ವಿಠಲ
ರಾಮನ ನೆನೆಬೇಕು ಶ್ರೀರಾಮನ ನೆನೆಬೇಕು ಪ ಪಾಮರರೆಲ್ಲರೂ ಏಕಚಿತ್ತದಿ ರಾಮನ ನೆನೆಬೇಕು ಅ.ಪ. ಕೋಲನು ಹಿಡಿದು ಕೂರುವ ಮುನ್ನ ಎಲ್ಲಾ ಕೂದಲು ನರೆಯುವ ಮುನ್ನ ಆಲಿಗಳೆರಡೂ ಕಾಣದ ಮುನ್ನ ಕಾಲು ಕೈಗಳು ಮಾತು ಕೇಳದ ಮುನ್ನ 1 ಅಲ್ಪಾನಂದದಿ ಸುಖದುಃಖವನು ಮರೆಯುತಲಿರಬೇಕು ಅಲ್ಪರಲೂ ತಾ ಭ್ರಾತೃಪ್ರೇಮವ ಹೊಂದುತಲಿರಬೇಕು ಸಲ್ಲುವೆಯಾದರೆ ಮಾರುತಿಯಂತುಲಿಬೇಕು ಕಲ್ಪಿತ ಶ್ರೀಜಾಜಿಪುರೀಶನ ಧ್ಯಾನದಲಿರಬೇಕು 2
--------------
ನಾರಾಯಣಶರ್ಮರು
ಲಾವಣಿ ಪದ ದೂರ್ ದೂರಲ್ಲ ಕೋಲ್‍ಕಾರ ಕೃಷ್ಣ ಕೇಳು ಬಾಲೆ ದಾರಿಯೋಳ್ ಸುಂಕ ಶೋದಗಳುಂಟೂ ಇದು ಏನ್ ಗಂಟು 1 ಗಂಡನುಳ್ಳ ಬಾಲೆಯರ ದುಂಡಕುಚ ಮುಟ್ಟಲಿಕ್ಕೆ ಪುಂಡತನ ಬುದ್ಧಿಯಿದು ಥರವೇನೋ ಜೀವಯರವೇನೋ ಪುಂಡತನ ಬುದ್ದಿಯಿದು ಥರವೇನೆಂದರೆ ಹೆಂಡತೆಂತ ಮುಟ್ಟಿದಾಗ ಕುಚಯುಗವಾ ಕಾಣದೆ ನಗುವ 2 ಕಾಕು ಮಾತಾಡುತಿದ್ದಿ ಸಾಕು ನಿನ್ನ ಮಾತೀಗ ಸಲುಗೇನೆಂದರೆ ಬೇಕು ಬೇಡಿದ್ದು ನಾ ಕೊಡುತೇನೆ ನಿನ್ನಿಡುತೇನೇ 3 ಕೊಂಡು ಕೊಂಡು ನಡೆಸಲಿಕ್ಕೆ ಶೆಟ್ಟಿಗಾರ ನಾನಲ್ಲ ನೀನಿಟ್ಟುಕೊಂಡ ಸೂಳೆ ನಾನಲ್ಲ ಹೋಗೋ ನೀನಲ್ಲ ಸಾಗೋ ಇಟ್ಟುಕೊಂಡ ಸೂಳೆ ನಾನಲ್ಲ ಹೋಗೆಂದರೆ ಕಟ್ಟಿಕೊಂಡು ಹೋದೇನು ಒಳತನಕಾ ಬೆಳಬೆಳತನಕಾ 4 ಒಳತನಕ್ಯಾತಕೆ ಬೆಳತನಕ್ಯಾತಕೆ ತಾಳಿಯರಿಲ್ಲಾ ಮಾತಿನ ಬೆಡಗಾ ಅಹುದೆಲೊ ಹುಡುಗ ತಿಳಿಯದಿದ್ದರೆ ನಾ ತಿಳಿಯ ಹೇಳಿಕೊಡುವೆನೆಂದು ಸೆಳೆದಪ್ಪಿಕೊಂಡ ಶ್ರೀದವಿಠಲ ಬಹುಬಹು ಧಿಟಲಾ5
--------------
ಶ್ರೀದವಿಠಲರು
ಲೀಲೆಯಿಂ ಬಾ ಲೋಲಲೋಚನೆ ಕೋಲನಾಡುವ ಪ. ಶೀಲದಿಂದೆಮ್ಮಾಳ್ವ ಭೂಪಗೆ ಜಯವ ಪಾಡುವ ಅ.ಪ. ಮಂದಗಮನದಿಂದ ಬಾ ಅರವಿಂದ ಲೋಚನೆ ಮಂದಿಗಳಿಗಾನಂದ ಸಮಯಮಿಂದು ಪೊಸತೆನೆ 1 ಬಣ್ಣ ಬಣ್ಣ ಬೆಳೆಗಳಿಂ ಪೊಂಬಣ್ಣ ದುಡುಪಿನಿಂ ಕಣ್ಮನಂಗಳ ತಣ್ಪುಗೊಳಿಪಳ್ ಜನ್ಮಭೂಮಿತಾಂ 2 ನವನವೊತ್ಸವದಿರವ ಸೂಚಿಪ ಶರತ್ಸಮಾಗಮಂ [ತವ] ಮೆರೆವುದರರೆ ಶೇಷಶೈಲವರದನೊಲವಿನಿಂ3
--------------
ನಂಜನಗೂಡು ತಿರುಮಲಾಂಬಾ
ಲೋಕದವರ ತಳ್ಳಿ ಕಾಲಿಗೆಸುತ್ತಿದ ಬಳ್ಳಿ ಶೋಕಮಯಸಂಕೋಲೆ ಸಾಕು ಹರಿ ಕಡಿ ಕೀಲಿ ಪ ದಮ್ಮನಿದ್ದರೆ ಠೊಣ್ಯನೆಂಬುವರು ತೆಳ್ಳಗಿದ್ದರೆ ಬಡಕನೆಂಬುವರು ರಮ್ಯನುಡಿಯೆ ಬಾಯ್ಬಡಕನೆಂಬುವರು ಸುಮ್ಮನಿದ್ದರೆ ಗುಸುಕನೆಂಬುವರು 1 ಜಮ್ಮಾಸಿ ಉಂಡರೆ ಜೋಗಿಯೆಂಬುವರು ಕಮ್ಮಿ ಉಂಡರೆ ರೋಗಿಯೆಂಬುವರು ದಿಮ್ಮಾಕೆಂಬುವರು ಜಳಜಳವಿದ್ದರೆ ಸಮ್ಮತಬಡರು ಹೊಲಸುಕಂಡರೆ 2 ಮಾಡಿ ಉಂಡರೆ ನೋಡಿ ಸಹಿಸರು ಬೇಡಿ ಉಂಡರೆ ಹೇಡಿಯೆಂಬುವರು ಗಾಢಮುಕ್ತಿಪದ ಕೊಡುವ ಶ್ರೀರಾಮನ ಹಾಡಿ ಪಾಡಿದರೆ ನಿಂದೆ ಮಾಡುವರು3
--------------
ರಾಮದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವನಜನೇತ್ರೆ ಕನಕಗಾತ್ರೆ ಅನುವಿನಿಂ ಬಾ ಮಿತ್ರೆ ಪ. ವಿನಯದಿಂದ ಜನಕ ಸಾರುವ ಕೋಲನಾಡುವ ಅ.ಪ. ಆರ್ಯಮಾತೆಯ ಆರ್ಯಧರ್ಮದ ಸಾರವರಿಯುವ ವೀರಮಾತೆಯ ಭೂರಿಕೀರ್ತಿಯ ಪಾಡಿಸುಖಿಸುವ 1 ಬೇಗನೇಳಿರೆ ಭಾಗ್ಯೋದಯಮದೀಗ ನೋಡಿರೇ ಬೀಗಿಮಲಗುವ ರೋಗವುಳಿದು ಸರಾಗದೆ ಪಾಡಿರೇ 2 ಅವನೀಮಾತೆಯ ಭವಿತವ್ಯತೆಗೆ ತವಕಗೊಳ್ಳುತ 3 ಶುದ್ಧರಾಗಿ ತಿಲಕತಿದ್ದಿ ವೃದ್ಧರಂ ನಮಿಸಿರಿ4 ಶ್ರದ್ಧೆಯಿಂ ಕಾರ್ಯಸಿದ್ಧಿಗೊಯ್ಯಿರಿ ಸಿದ್ಧಾರ್ಥರೆನಿಸಿರಿ ಸದ್ಧರ್ಮ ದೀಕ್ಷಾಬದ್ಧರಾಗಿ ಸುಭದ್ರವಿಳೆಗೊದವಿರಿ5 ಅರಸರನ್ನು ಸರಸದಿಂದ ಹುರುಡಿಸಿರಿನ್ನು ಪುರುಷರೆನ್ನಿಸಿ ಕಾರ್ಯಮೆಸಗುವ ತೆರನ ತೋರಿಸಿ 6 ದೇಶದೇಳ್ಗೆಯೊಳಾಸೆಯಿರಿಸಿ ಲೇಸನೆಸಗಿರಿ ದೋಷಹರಣ ಶೇಷಗಿರೀಶಗೆ ಮೀಸಲಿರಿಸಿರಿ7
--------------
ನಂಜನಗೂಡು ತಿರುಮಲಾಂಬಾ
ವಲ್ಲಭೆ ಬಲು ಸುಲಭೆ ಪ ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ 1 ಕೋಲ ಮುನಿಗೊಲಿದಮಲ ಮೃಗನಾಭಿ ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ2 ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ ರವರವ ನರಕದಲ್ಲಿ ಬವಣೆಪಟ್ಟ ಮೇಲೆ ಸವಿಯದಂತೆ ತಮಸುನಿವಹದೊಳಗೆ ಇಪ್ಪನು 3 ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ 4 ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ ನಿತ್ಯ ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ 5
--------------
ವಿಜಯದಾಸ
ವಾತನ್ನ ಜಯಾಜಾತನ್ನ ಲೋಕ- ಪ್ರೀತನ್ನ ಸ್ತುತಿಸಿ ಖ್ಯಾತನ್ನ ಪ ವಿಷವ ನುಂಗಿದ ಮಹಾಶೌರ್ಯನ್ನ ನಿತ್ಯ ಅಸಮ ಸುಂದರ ಮತಿಧಾರ್ಯನ್ನ ನಿಶಾಚರ ಕುಲದೋಷ ಸೂರ್ಯನ್ನ ಆರಾ ಧಿಸುವ ಭಕ್ತರ ಸುಕಾರ್ಯನ್ನ 1 ವಾನರ ಕುಲದೊಳು ಧೈರ್ಯನ್ನ ಮುದ್ದು ಆನನ ಗೀರ್ವಾಣವರ್ಯನ್ನ ಆನಂದ ವಿಜ್ಞಾನ ಚರ್ಯನ್ನ ದುಷ್ಟ - ದಾನವರಳಿದತಿ ವೀರ್ಯನ್ನ 2 ದ್ವಿಜರಾಜ ಕುಲಾಗ್ರಣಿ ಭೀಮನ್ನ ಮಹ ದ್ವಿಜಕೇತ ನಂಘ್ರಿಗೆ ಪ್ರೇಮನ್ನ ದ್ವಿಜರ ಪಾಲಿಸಿದ ನಿಸ್ಸೀಮನ್ನ ಕುರು ವ್ರಜವ ಸದೆದ ಸಾರ್ವಭೌಮನ್ನ 3 ಅದ್ವೈತ ಮತ ಕೋಲಾಹ ಲನ್ನ ವೇದ ಸಿದ್ಧಾಂತ ಶುಭಗುಣ ಶೀಲನ್ನ ಸದ್ವೈಷ್ಣವರನ್ನು ಪಾಲನ್ನ ಗುರು ಮಧ್ವಮುನಿ ಗುಣಲೋಲನ್ನ 4 ಚಾರುಚರಿತ ನಿರ್ದೋಷನ್ನ ಲೋಕ ಮೂರರೊಳಗೆ ಪ್ರಕಾಶನ್ನ ಧೀರ ವಿಜಯವಿಠ್ಠಲೇಶನ್ನ ಬಿಡದೆ ಆರಾಧಿಪ ಭಾರತೀಶನ್ನ 5
--------------
ವಿಜಯದಾಸ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು