ಒಟ್ಟು 267 ಕಡೆಗಳಲ್ಲಿ , 58 ದಾಸರು , 245 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಿಜಯಂಗೈವುದು ತ್ರಿಜಗನ್ಮಾತೆಯೆ ದ್ವಿಜರಾಜಾನನೆಯೇ ಅಜರಾಜಾತ್ಮಜಸುತನರಸಿಯೇ ಶ್ರೀ ಜಾನಕಿಯೇ ಪ. ಪವನಜ ಗರುಡರ ಬಗೆಯಿಂ ನಿನ್ನಂ ಸೇವಿಸಲಾನರಿಯೆ ಕವಿಕುಲ ಚೂಡಾಮಣಿಯೋಲ್ ನಿನ್ನನು ಭಾವಿಸಲೆನಗಳವೇ 1 ನೆಲದೊಳು ನಿನ್ನೀ ನೆಲೆಯಂ ತಿಳಿಯಲ್ ಬಲುಮೆಯದಾರೊಳು ಪೇಳ್ ಚಲದಿಂ ಪೇಳ್ವರು ಕೆಲವರು ನಿನ್ನಂ ಚಂಚಲೆಯನುವೋಲ್ 2 ಎಂತಾದರು ಸುಸ್ವಾಂತದಿ ನಿನ್ನೀ ಸಂತಾನದೊಳನಿಶಂ ಶಾಂತ್ಯೌದಾರ್ಯ ಗುಣಾನ್ವಿತೆ ನೀ ಮೆರೆ ಸಂತತಮುಂ ನಲವಿಂ3 ಎಣಿಸಲ್ಕರಿಯದ ಋಣತಾಪದೊಳಕಟಾ ಹೆಣಗಾಡುತಲಿರುವೀ ಅಣುಗರ ನೋಡಿ ಕ್ಷಣದೊಳೂ ನಿನ್ನ ಘನತೆ ತೋರಿಸು ದೇವಿ 4 ತಳುವುದಿದೇತಕೆ ನಳಿನÀದಳಂಬಕೆ ಗಳಿಲನೆ ಬಾರೆಂಬೆ ಜಲಜಲೋಚನ ಶೇಷಗಿರೀಶನ ಲಲನಾಮಣಿ ಜಗದಂಬೆ 5
--------------
ನಂಜನಗೂಡು ತಿರುಮಲಾಂಬಾ
ಬಿಟ್ಟು ಸಿಂಹಾಸನ ಇಟ್ಟು ದ್ವಾರದಿ ಹೆಜ್ಜೆ ಪ. ಅಭಯ ಜನಕೆ ಕೊಟ್ಟು ನಭದ ಸೂರ್ಯನಂತೆ 1 ಸೂರಿ ಮಾಡುತಲಾಗ 2 ಸಾಸಿರ ಅರ್ಬುದ ದ್ರವ್ಯ ಆಸಮಯದಲೆ ಕೊಟ್ಟ 3 ಅಕ್ಷಯ ಲಕ್ಷಕೋಟಿ ದ್ರವ್ಯ ಆಕ್ಷಣದಲಿ ಕೊಟ್ಟ 4 ಬಲುಬಲುದ್ರವ್ಯ ಮೇಲೆ ಮೇಲೆ ಕೊಟ್ಟು 5 ಶ್ರೇಷ್ಠದ ಭೇರಿಯ ಘಟ್ಯಾಗಿ ಹೊಯಿಸುತ 6 ಹಿಂದೆ ಮುದದಿಂದ ಬಂದ ರಾಮೇಶನು ತಂದೆ ಬೊಮ್ಮಗೆ ದುಂದುಭಿ ಹೊಯಿಸುತ 7
--------------
ಗಲಗಲಿಅವ್ವನವರು
ಬೆಟ್ಟವಿಳಿದು ಬೇಗಬಾರೊ ಜಗ- ಜಟ್ಟಿ ಹನುಮನೆ ನಿನಗೆ ಸರಿಯಾರೊ ಕರುಣವ ಬೀರೊ ಚರಣವ ತೋರೊ ಪ ದುಷ್ಟದಶಕಂಠನ ಪಟ್ಟಣದಿ ರಾಮನ ತಿಳುಹಿ ಕುಶಲವ ಪಡಿಸಿದೆ ಮುದವ 1 ವನವ ಭಂಗಿಸಿ ಬಂದು ದನುಜರ ಶಿಕ್ಷಿಸಿ ತಾಳಿ ಚಿಂತೆಯನು ಕಂಡೆ ಸೀತೆಯನು 2 ಸೀತೆ ಕುರುಹ ರಘುನಾಥಗೆವೊಪ್ಪಿಸಿ ಕೀರ್ತಿಯಂ ಮೆರೆದೆ ಸೇವೆಯಗೈದೆ 3 ಕ್ಷಣದಿ ಲಕ್ಷಣಗೆ ಪ್ರಾಣವನಿತ್ತೆ ಧೀರಾ ವಜ್ರ ಶರೀರ 4 ಭರತಗೆ ತಿಳುಹಿಸಿ ಹರುಷ ಪೊಂದಿಸಿದೆ ಹಾರ ಕೈಕೊಂಡೆ ಘಟಿಕಾದ್ರಿಯೊಳ್ನಿಂದೆ5
--------------
ಗುರುರಾಮವಿಠಲ
ಬ್ಯಾಗ ಬಾರೋ ಗುರುರಾಘವೇಂದ್ರರಾಯಾ ಬಾಗಿ ನಮಿಪೆ ಮಹರಾಯಾ ಪ ಯೋಗಿ ಮಧ್ವಮತದಾಗಮದಿಂದಲಿ ಭಾಗವತರು ಶಿರಬಾಗಿ ಪಾಡುವರೋ ಅ.ಪ ಕುಂದಣಮಣಿಮಯ ಸ್ಯಂದನದೊಳತಿ ಸುಂದರ ಶುಭತರ ರೂಪ - ದಿಂದಲಿ ರಾಜಿಪಾಮಂದಭೋಧ ನಿಜ ನಂದದಾಯಕ ಯತಿಕುಲ ದೀಪ ಛಂದದಿ ಭಕುತ(ರ) ಕುಂದನಿಚಯಕೆ ನಿಜ ಚಂದಿರ ಸಮ ಭೂಪಾ - ಪಾದ ದ್ವಂದ್ವವು ನಿಜರಿಗೆ ನಂದ ನೀಡುವ ಪ್ರತಾಪಾ ವಂದಿಸಿ ಗುಣಗಳ ವೃಂದ ಪೊಗಳುವ ಮಂದ - ಜನರು ಬಲು - ಸುಂದರ ಶುಭಗುಣ ದಿಂದ ಶೋಭಿಪÀ ಜನ - ಸಂದಣಿಯೊಳು ನಿನ್ನ ಸುಂದರ ಮೂರುತಿ - ಛಂದದಿ ನೋಳ್ಪರೊ 1 ಕನಕ ಮಣಿಮಯ ಘನಸುಕೊಡೆಗಳು ಮಿನುಗುವ ಚಾಮರ ಚೋದ್ಯವೋ ಅನುಗ - ಕರಗತ ಮಣಿಮಯ ಛಡಿಗಳ ಅನುಪಮ ಭಾರವೋ ಮುನಿಜನ ಶಿರಮಣಿಸಿ ಗುಣ ಗಣ ಎಣಿಸುವ ಗಂಭೀರವೋ ತನು - ಮನ - ಮನಿ - ಧನ ವನುತೆರ ನಿನಗನು - ಮಾನಮಾಡದೆ ನೀಡುವಗಾಧವೋ ಘನ ಸಂತೋಷದಿ - ಮನದೊಳು ನಲಿಯುತ ಕುಣಿದಾಡುತ - ದಣಿಯದೆ ಕರಚಪ್ಪಳಿ | ಕ್ಷಣ ಕ್ಷಣದಲಿ ತ್ಮಮ - ತನು ಮರೆದೀಪರಿ ಜನರೊಳು ನಮ್ಮ ಜನುಮ ಸಫಲವೆಂಬುವರೋ 2 ಪಟುತರ ಭಟರಾರ್ಭಟಿಸುವ ಮಹ ಚಟ - ಚಟ - ಚಾಟ ಶಬ್ಧವೋ ಕುಟಿಲ ವಿಮತ ಘನ ಪಟಲ ವಿದಾರಣ ಚಟುಲ ಸ್ವಮತ ಸಿದ್ಧಾಂತವೋ ಕುಟಿಲಾಳಕಿಯರ ಕುಣಿಯುವ ಪದದಿ ಸಂ - ಘಟಿತ ಗೆಜ್ಜೆಗಳ ಶಬ್ಧವೋ ಪಟು ಗುರುಜಗನ್ನಾಥವಿಠಲರ ದಾಸರ ಧಿಟ ಪದ ಸಂಗೀತವೋ ಧಿಟಗುರುರಾಯನೆ - ಭಟರುಗಳ ಮಹÀಸು - ಕಟಕದಿ ಮೋದೋ - ತ್ಕಟದಲಿ ಇಷ್ಟವ ಥಟನೆ ಬೀರುತ ಬಲು ಪುಟಿದಾಡುತ ಹರಿ ಭಟ ಜಲಜೋತ್ಕಟ ದಿವಾಕರ 3
--------------
ಗುರುಜಗನ್ನಾಥದಾಸರು
ಬ್ಯಾಡ ಬ್ಯಾಡಿರೆಂದ ಅವರೊಳು ಪಂಥಬ್ಯಾಡ ಬ್ಯಾಡಿರೆಂದು ಬ್ಯಾಡ ಬ್ಯಾಡ ಪಂಥ ನೋಡಿಕೊ ರುಕ್ಮಿಣಿಮಾಡೋರು ಮುಖಭಂಗಬೇಡಿಕೊಂಡೆನು ಭಾವೆ ಪ. ಹರದೆಯರಾಡಿದ ಮಾತು ಹರಿಯು ಕೇಳುತಬೇಗ ಕರೆಯ ಹೋಗೆಂದ ಮಡದಿಯರ ಕರಿಯ ಹೋಗೆಂದ ಮಡದಿಯರ ದ್ರೌಪತಿಯೆಸರಿಯಲ್ಲ ಪಂಥ ಬಿಡಿರೆಂದ1 ಹಾದಿ ಬೀದಿಯ ಮಾತು ಸಾಧಿಸುವರೆ ನೀವುವೇದಾಂತ ಮಳೆಯ ಗರೆದಾರುವೇದಾಂತ ಮಳೆಯ ಗರೆದಾರು ನಿಮ್ಮ ಮುಖಆದೀತು ಸಣ್ಣ ಸಭೆಯೊಳು 2 ಅತ್ತಲಿತ್ತಲೆ ಮಾತು ಜತ್ತು ಮಾಡೋರೆನೀವುಶ್ರುತ್ಯರ್ಥವೆಲ್ಲ ಸುರಿಸೋರುಶ್ರುತ್ಯರ್ಥವೆಲ್ಲ ಸುರಿಸೋರು ನಿಮ್ಮಮುಖ ಬತ್ತೀತು ಒಂದು ಕ್ಷಣದಾಗೆ 3 ಮಂದರಧರ ತನ್ನ ತಂಗಿಯರ ಕರೆಯೆಂದು ಮಂದಹಾಸದಲಿ ನುಡಿದನುಮಂದಹಾಸದಲಿ ನುಡಿದನು ಭಾವೆರುಕ್ಮಿಣಿ ಬಂದರು ಭಾಳೆ ವಿನಯದಿ4 ಆರು ಮಂದಿ ಹರಿಯ ನಾರಿಯರುಹದಿನಾರು ಸಾವಿರ ಮಂದಿ ಸಹಿತಾಗಿಹದಿನಾರು ಸಾವಿರ ಮಂದಿ ಸಹಿತಾಗಿ ಬಂದರು ನಾರಿ ದ್ರೌಪದಿಯ ಕರೆಯಲು5 ನೂರುಮಂದಿ ಹರಿಯನಾರಿಯರುತಂತಮ್ಮ ಹಾರಭಾರಗಳ ಅಲವೂತಹಾರಭಾರಗಳು ಅಲವೂತ ಬಂದರು ನೀರೆ ಸುಭದ್ರೆಯು ಕರೆಯಲು 6 ಪನ್ನಂಗ ವೇಣಿಯರು ಮನ್ನಿಸಿ ಹರಿಯಾಜ್ಞೆಚನ್ನ ರಾಮೇಶನ ಮಡದಿಯರು ಚನ್ನ ರಾಮೇಶನ ಮಡದಿಯರು ಬಂದರುಕನಿ ದ್ರೌಪತಿಯ ಕರೆಯಲು 7
--------------
ಗಲಗಲಿಅವ್ವನವರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕ್ತಿ ಪಾಶದಿ ಕಟ್ಟುತ ಹರಿಯನು ನಿತ್ಯದಲಿರು ಮನವೇ ಪ. ಭಕ್ತಿಗೆ ಮೆಚ್ಚುತ ಅಚ್ಚುತ ತಾನೆ ಬಹ ನಿಶ್ಚಯವಿದು ಮನವೆ ಅ.ಪ. ಅನುದಿನ ನಾರಾಯಣನೆಂದಣುಗಗೆ ಕ್ಷಣದಿ ಕಂಬದಿ ಬಂದ ದನುಜನ ಮುರಿದ ಗುಣನಿಧಿಯನು ನೀ ಕ್ಷಣ ಬಿಡದನುದಿನ ನೆನೆ ಮನವೇ 1 ಕಲ್ಲಾಗಿದ್ದಹಲ್ಲೆ ಪೊರೆದು ಶಿವ ಬಿಲ್ಲ ಮುರಿದ ರಾಮನ ನಲ್ಲೆ ಕುಬ್ಜೆಯ ಡೊಂಕನೆ ತಿದ್ದಿದ ಖುಲ್ಲ ಕಂಸನ ಗೆದ್ದಾ ಕೃಷ್ಣನ 2 ಅಂಬರೀಷ ದ್ವಾದಶಿ ವ್ರತವನು ಮಾಡೆ ಮುನಿ ಪುಂಗವ ಜರಿಯುತಿರೆ ರಂಗನ ಚಕ್ರದಿಂದ್ಹುಟ್ಟಿದನರಿಯ ದೇವ ಈ ಅಂಗ ಭಂಗರಕೆ ಚಾಟಿ ಶ್ರೀ ಶ್ರೀನಿವಾಸನು 3
--------------
ಸರಸ್ವತಿ ಬಾಯಿ
ಭಗವಂತನ ಸಂಕೀರ್ತನೆ ಏನಿದು ರೂಪ ಶ್ರೀ ನರಹರೆ ಪ ಏನಿದು ರೂಪವೋ ಮನಸಿಜನಯ್ಯನೇ ನೆನಿಸಿದವರ ಹೃದ್ವನಜದೊಳ್ ಮೆರೆವುದೂ ಅ.ಪ ಮಾರನ ಪಿತನೆಂದು ಕರೆಸಿ ಕೊಂಬುವನಿಗೆ ಮೋರೆಯೊಳ್ ಮೂರು ಕಣ್ಣುಗಳ ಧರಿಸಿರುವುದು 1 ಪರಮ ಶಾಂತನೆಂದು ಮೆರೆಯುವೀ ಶ್ರುತಿಯೊಳು ಕ್ರೂರ ರೂಪದಿಂದ ನರರಿಗೆ ತೋರ್ಪುದು 2 ವರ ವೈಜಯಂತಿಯ ಕೊರಳೊಳ್ ಧರಿಸುವಗೆ ಕರುಳ ಹಾರವ ಧರಿಸಿ ವರ ಶಬ್ದ ಮಾಳ್ವೊದು 3 ನಾನೇ ದೇವರು ಮತ್ತು ಅನ್ಯರಿಲ್ಲೆಂಬುವ ಕನಕ ಕಶ್ಯಪ ಮುಖ್ಯ ದನುಜರ ಸೀಳ್ವುದು 4 ತರಳ ಕರದಾಕ್ಷಣದಿ ವರ ವೈಕುಂಠವ ಬಿಟ್ಟು ನರಹರಿ ಎನಿಸಿ ನೀ ಭರದಿ ಬಂದಿರುವುದು 5
--------------
ಪ್ರದ್ಯುಮ್ನತೀರ್ಥರು
ಭವ - ಸಂಕಟ ಕಳೆ - ವೆಂಕಟೇಶ ||ಅ|| ಪಂಕ ಸಿರಿ ವೆಂಕಟೇಶ ಅ.ಪ. ಮಹ ವೇದಗಳನು ಕದ್ದ ದೈತ್ಯನ ಕೊಂದೆ ವೆಂಕಟೇಶಮಹ ಮೀನನಾಗಿ ನೀ ಸತ್ಯವ್ರತಗೆ ಒಲಿದೆ ವೆಂಕಟೇಶ 1 ಕೂರ್ಮ ನೀನಾಗುತ - ವೆಂಕಟೇಶಮಂದರಗಿರಿ ಪೊತ್ತು ಭಕ್ತರ ಸಲಹಿದೆ ವೆಂಕಟೇಶ 2 ಮತ್ತರಾದ ಮಧುಕೈಟಭರ - ಕೊಂದೆ ವೆಂಕಟೇಶಮತ್ತೆ ಭೂ ಚಾಪೆಯ ಮಾಡಿದವನ ಕೊಂದೆ ವೆಂಕಟೇಶ 3 ಕಶಿಪು ಬಾಧೆ ಕಳೆಯಲು - ತರಳಗೆ ವೆಂಕಟೇಶಕ್ಷಣದಿ ಕಂಭದಿ ಬಂದು ದುರುಳನ ಸವರಿದೆ ವೆಂಕಟೇಶ 4 ಮೂರು ಪಾದವ ಬೇಡಿ - ಬಲಿಯ ಭಂಜಿಸಿದೆ ವೆಂಕಟೇಶಪಾರಗಾಣದ ಮಹಿಮೆ ಬಾಗಿಲ ಕಾಯ್ದೆ ವೆಂಕಟೇಶ 5 ಹಂಚಿ ಮೆರೆದೆ ವೆಂಕಟೇಶ 6 ಮಡದಿಯ ಕದ್ದೊಯ್ದ ದೈತ್ಯನನ್ನಳಿದೆ ವೆಂಕಟೇಶಧೃಢ ಭಕುತಗೆ ಲಂಕೆಯ ಪಟ್ಟಣವಿತ್ತೆ ವೆಂಕಟೇಶ 7 ಗೋಪಿ ಜನರ ಪ್ರಿಯ | ಸುಪರ್ಣವರವಾಹ ವೆಂಕಟೇಶಪಾಪಿ ಕೌರವ ಕುಲಹರ ಧರ್ಮ ಸ್ಥಾಪಿ ವೆಂಕಟೇಶ 8 ಬೆತ್ತಲೆ ನೀ ನಿಂತು ಕುತ್ಸಿತ ಅಸುರರಸದೆದ್ಯೋ ವೆಂಕಟೇಶಕುತ್ಸಿತ ಅಸುರರ ಮೋಹಿಸುತಳಿದೆಯೊ ವೆಂಕಟೇಶ 9 ತುರಗನೇರಿ ಕಲ್ಕಿ ಎನಿಸಿಕೊಂಡೆಯೊ ವೆಂಕಟೇಶಉರಗಾದ್ರಿ ವಾಸ ಗುರು ಗೋವಿಂದ ವಿಠಲ ವೆಂಕಟೇಶ 10
--------------
ಗುರುಗೋವಿಂದವಿಠಲರು
ಭವ ಭಸಿ- ತಾಂಗನ ನೋಡಿದೆ ಪ. ರಂಗನ ತನ್ನಂಗದೊಳಗೆ ಇಟ್ಟು ಹಿಂಗದೆ ನೆನೆಯುವ ಮಂಗಳ ಮೂರುತಿ ಅ.ಪ. ತ್ಯಕ್ಷನ ನೋಡಿದೆ | ಕರುಣಕ- ಟಾಕ್ಷನ ನೋಡಿದೆ ವೀಕ್ಷಣದಿಂದ ಶ್ರೀ ವಕ್ಷನ ಸುತನನು ಶಿಕ್ಷಿಸಿದ ಫಾಲಾಕ್ಷನ ಶಿವನ 1 ಹರನನು ನೋಡಿದೆ | ಗಂಗಾ- ಧರನನು ನೋಡಿದೆ ಗಿರಿಜೆವಲ್ಲಭ ಭಾಸುರ ವಂದಿತನಾ ಸರಿತು ತುಂಗ ಪಂಪಾಪುರವಾಸನ 2 ಶೂಲಿಯ ನೋಡಿದೆ | ರುಂಡ ಮಾಲಿಯ ನೋಡಿದೆ ಕೈಲಾಸದಿ ಉಮೆ ಲೋಲನೆನಿಸಿ ಇಲ್ಲಿ ವ್ಯಾಳಭೂಷಣನಾಗಿ ಲೀಲೆಯೊಳ್ ಮೆರೆವನ 3 ಈಶನ ನೋಡಿದೆ | ನರಹರಿ ದಾಸನ ನೋಡಿದೆ ಪಾಶುಪತಾಸ್ತ್ರವ ವಾಸವಜನಿಗಿತ್ತ ಪೋಷಿಕಿರಾತನ ವೇಷನ ಹರುಷದಿ 4 ದಿಟ್ಟನ ನೋಡಿದೆ | ವೈಷ್ಣವ ಶ್ರೇಷ್ಠನ ನೋಡಿದೆ ವೃಷ್ಣೀಶ ಗೋಪಾಲಕೃಷ್ಣವಿಠ್ಠಲನಿಗೆ ಪುಟ್ಟ ಮೊಮ್ಮಗನಾಗಿ ತುಷ್ಟಿಪಡಿಸುವನ5
--------------
ಅಂಬಾಬಾಯಿ
ಭಾರತೀಶ ಕರುಣಾರಸ ಭೂಷಾ ಖರಾರಿ ದಯಾರಸ ಪೂರಿತ ವೇಷಾ ಪ. ಅಕ್ಷಪೂರ್ವಜನ ರುಕ್ಷಶರಾಹತಿ ವಿಕ್ಷತಕಪಿಗಳನೀಕ್ಷಿಸುತ ರೂಕ್ಷನ ನುಡಿ ಕೇಳ್ದಾಕ್ಷಣದೊಳಗರೆಲಕ್ಷಯೋಜನಕೆ ಲಂಘಿಸುತ ಕರತಲದೊಳಗಿಡುತ ಅಕ್ಷಿನಿಮೋಘಕೆ ಲಕ್ಷಕೊಡದೆ ನಿಜಪಕ್ಷದ ಜನರನು ರಕ್ಷಿಸಿದ 1 ಸೇರಿ ದುರಾಕೃತ ಕೌರವರ ಧಾರುಣಿಗೊರಗಿಸಿ ಘೋರ ರೂಪ ಕಿಂಮೀರನ ರಕ್ತನ ಕಾರಿಸುತ ಭಾರಿಗದೆಯ ಪಿಡಿದಾರುಭಟಿಸಿ ಬಹುವಾರಣ ತತಿಗಳ ಹಾರಿಸುತ ವೀರಜಗಧೀರಣ ಮೂರ್ತೆ 2 ಹಿಂಡುಗೂಡಿದಾ ಖಂಡಲ ರಿಪುಗಳು ಖಂಡ ಪರಶುಹರಿತಾನೆನುವ ಭಂಡಮಾತ ಭೂಮಂಡಲ ಮಧ್ಯದಿ ಪುಂಡುತನದಿ ಪ್ರಸ್ತಾಪಿಸುವ ಪಂಡಿತ ಮಾನಿಗಳೆನಿಸಿದ ಮೈಗಳ ಖಂಡಿಸಿ ತತ್ವವ ಬೋಧಿಸುವ ಬ್ರಹ್ಮಾಂಡಕೋಟಿಪತಿಯನುತಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ