ಒಟ್ಟು 405 ಕಡೆಗಳಲ್ಲಿ , 79 ದಾಸರು , 366 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾತ್ವಿಕ ಹಿನ್ನೆಲೆ ಅಗಣಿತಾಗಣಿತ ಮಹಿಮ ಜಗದೊಳು ನಿಮ್ಮ ಬಗೆ ತಿಳಿಯುವರಾರಮಮ ಪ ಮಗನ ಮಗನಿಗೆ ಒಲಿದು ಮಗಳಧಾರೆಯನೆರದಿ ಮಗಳಮಗನ್ವೈರಿಯ ನಿಗಯಿಟ್ಟು ಸಲಹಿದಿ ಅ.ಪ ಓಂಕಾರದಾಚೆಗಿರ್ದ ಅಮಲರೂಪ ಓಂಕಾರದೊಳು ನೆಲೆಸಿದಿ ಅಂಕುರಿಸಕ್ಷರ ತ್ರಯಲಂಕಾರದಿಂ ಸೃಷ್ಟಿ ಸಂಕಲ್ಪಗೈದು ನಿಷ್ಕಲಂಕನೆಂದೆನಿಸಿದಿ 1 ಸೃಷ್ಟಿ ಉತ್ಪತ್ತಿಗೈದಿ ಉದರದಿ ಇಟ್ಟು ರಕ್ಷಕನೆಂದೆನಿಸಿದಿ ಶಿಕ್ಷಕೆನಿಸಿ ಸರ್ವಸಾಕ್ಷಿನೀನೆಯಾಗಿ ಮೋಕ್ಷ ನೀಡುವ ಮದಧ್ಯಕ್ಷನೆಂದೆನಿಸಿದಿ 2 ಮೇದಿನಿಗೆ ಪತಿಯೆನಿಸಿದಿ ದಾಸರ ಪ್ರಿಯ ಮೇದಿನಿಸುತೆ ಮದುವ್ಯಾದಿ ವೇದಸಮ್ಮತಗೈದಿ ಸಾಧುಜನಕಹುದಾದಿ ಆದಿಶ್ರೀರಾಮ ಮಮ ಬೌದ್ಧದೇವನಾದಿ 3
--------------
ರಾಮದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಿಮಿರ ಭರದಿ ಬಿಟ್ಟೋಡಿತು ಪ ಶ್ರುತಿ ಶಾಸ್ತ್ರವೆಂಬ ಕಂಜಗಳತಿ ರಮ್ಯದಿಂದರಳಿದವುಕ್ಷಿತಿಯೋಳು ಕುಮುದದಂತೆ ದುರ್ಮತಗಳೆಲ್ಲ ಕುಗ್ಗಿದವು ||ಇತರ ದೇವಂಗಳಿಂತು ಭಜಿಸಿದೆ ರಘುಪತಿಯೆ ದೈವ ಮಧ್ವ ಮತವೆ ಸಿದ್ಧಾಂತವುಸತತವನು ಹರಿ ಸರ್ವೋತ್ತಮನೆಂದುತುತಿಸುವ ಕಾಂತಿಯು ತುಂಬಿತು ಜಗದೊಳು 1 ಚಕ್ರವಾಕ ಧ್ವನಿಗೈದವು ||ಸಾರಿ ಸಾರಿಗೆ ಹೊತ್ತು ಯೇರುವ ತೆರದಲಿಶ್ರೀರಮಣನ ಚರಣಾರವಿಂದವು ನಿತ್ಯಆರಾಧಿಸುವ ವಿಚಾರವಿದೆನುತಲಿತಾರತಮ್ಯ ಜ್ಞಾನ ತೋರಿದರಿಳಿಯೊಳು 2 ಅಂದವಾದಲಾದಿನ್ನೆ ಹನುಮಂತನೊಡೆಯ(ಮುಂದಿನ ಪಾದಗಳು ಸಿಕ್ಕಿಲ್ಲ)
--------------
ಮೋಹನದಾಸರು
ತಿಳಿಯೋ ಮನವೇ ನಿಜ ಘನವಾ | ಕಳಿಯೋ ಹಮ್ಮಿನ ಅವಗುಣವಾ ಪ ಸದ್ಗುರು ಶರಣವ ನೀ ಬ್ಯಾಗ | ಸದ್ಗುಣದಲಿಹುದು ಜಗದೊಳಗ | ತದ್ಗತ ಬೋಧವರೆದು ಈಗ | ಸದ್ಗತಿ ಕಾಣಿಸುವದು ನಿನಗ 1 ಪಿಡಿಯದೆ ನಾನಾ ಬಯಕೆಯನು | ತಡೆಯದೆ ಬಿಡು ಕುಜನಾಶ್ರಯನು | ಇಡು ಗುರು ಪದ ಭಕುತಿಯನು | ಪಡೆ ದೃಷ್ಟಿಯ ಘನ ಸಮತೆಯನು 2 ಬ್ಯಾರೆ ಬ್ಯಾರೆ ನಗದಾಕಾರಾ | ತೋರಿದರೇನದು ಬಂಗಾರಾ | ಈ ರೀತಿ ಮಾಯದ ವ್ಯವಹಾರಾ | ಈರೇಳು ಜಗ ಚಿನ್ಮಯ ಸಾರಾ 3 ಗೋಡಿಯಿಂದಲಿ ಚಿತ್ರಗಳೆಲ್ಲಾ | ರೂಢಿಸಿ ದೋರಿತು ಜನರೆಲ್ಲಾ | ಆಡಲು ಯರಡಕ ಹೊರತಿಲ್ಲಾÀ | ನೋಡಲಾಯಿತು ತಾನೇಯಲ್ಲಾ 4 ಹಾಲುಕ್ಕಿದ ಸೋರೆಯ ಪರಿಯಾ | ಜ್ಯಾಳಿಸಬ್ಯಾಡಾ ಯುವ ಬರಿಯಾ | ಕೇಳಿಕೋ ಮಹಿಪತಿ ಸುತ ಧೋರಿಯಾ | ಬಾಳು ಗಳೆದು ದುಸ್ತರಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತುರುಕರಿಲ್ಲದ ಊರೊಳು ಇರಬಾರದು ಪ ತುರುಕರು ಜಗದೊಳು ಪರಮ ಶ್ರೇಷ್ಠರು ಕಾಣೋ ಅ.ಪ. ತುರುಕರು ಕರೆದರೆ ಉಣಬಹುದು ಉಡಬಹುದುತುರುಕರಿಂದಲಿ ಜಗಕೆ ಪರಮ ಸೌಖ್ಯಾ ||ತುರುಕರ ಸೇವೆ ಮಾಡಿದ ಮಾನವೋತ್ತಮನುಎರಡೊಂದು ಋಣದಿಂದ ಮುಕ್ತನಾಹಾ 1 ತುರುಕರಾ ನಿಂದಕನು ಪರಮ ದುಃಖಿಯು ಸಿದ್ಧತುರುಕರ ಅರ್ಚಿಸಿದವಗೆ ಪರಮ ಪದವೀ ||ತುರುಕರಿಗೆ ಗ್ರಾಸವಿತ್ತವನ ಫಲಕೆಲ್ಲು ಸರಿಗಾಣೆಸರಿಗಾಣೆ ಧರೆಯೋಳು ಅವನೆ ಧನ್ಯಾ 2 ಪತಿ ಬೈಗು ಬೆಳಗೂ ||ತುರುಕರಾ ಪಾಲ ಶ್ರೀ ಗೋಪಾಲಕೃಷ್ಣನ್ನಸ್ಮರಣೆ ಮಾಡುತಲಿರೆ ಮೋಹನ್ನ ವಿಠಲ ಒಲಿವಾ 3
--------------
ಮೋಹನದಾಸರು
ತೊರವಿ ನರಹರಿ ಸ್ತೋತ್ರ ಹರಿಯು ನಿಂದಿಹ ನೋಡೀ | ಭೂತಳದಿ ತೊರವಿಲಿಹರಿಯು ಇಂದಿರೆಗೂಡಿ | ಒಡವೆರೆಸಿ ಸರ್ವದಶರಣ ಜನರೊಡನಾಡೀ | ಸುಖವೀವ ನೋಡೀ ಪ ಹರಿಯೆ ಪರನೆಂಧ್ಹೇಳ್ಪ ಬಾಲಕೆದುರುಳ ಕಾಶ್ಯಪು ಪರಿಪರೀಯಲಿಕರ ಕೆರೆಯ ಗೊಡಲಾಗ ನರಹರಿತರುಳನುದ್ಧರ ಗೈದ ಶ್ರೀಹರಿ ಅ.ಪ. ಉದರ ಪೋಷಕ ಬೋಧಾ ಗುರುಶಂಡಮರ್ಕರು ಮುದದಿ ತಿಳುಹಲ ಗಾಧ | ಸರಿಸುತ್ತ ದೂರದಿಹದನ ಪೇಳಿದ ವೇದ | ಪ್ರತಿಪಾದ್ಯ ಶ್ರೀಹರಿವಿಧ ವಿಧವು ಕಾರ್ಯಗಾಧ | ಸೃಷ್ಠಿ ಲಯ ಮೊದಲಾದಅದುಭೂತವು ಎನೆ ಕಾರ್ಯ ಬಹಳವಗೈದು ಲೀಲೆಯ ತೋರಿ ಜಗದೊಳುಮುದವ ಬೀರುತ ಸಾಧು ಸಜ್ಜನಮೋದ ಬಡಿಸುವೆ ನೆಂದು ಪೇಳಿದ 1 ಕರಿಯಪದತಳ ತುಳಸೀ | ಪ್ರಹ್ಲಾದ ಬಾಲನಹಿರಿದು ಶರಧಿಯೊಳಿರಿಸೀ | ಮತ್ತವನು ಉಳಿದಿರೆಧರೆಯ ಗುಹೆಯೊಳಗಿರಿಸೀ | ಮೇಲ್ಕಿಲೆಯ ಮುಚ್ಚಲುಮರಳಿ ಬಂದನು ಜೀವಿಸೀ | ಹರಿಯ ವಿಶ್ವಾಸೀ ತರಳನಿಗೆ ಅಹಿಯಿಂದ ಕಚ್ಚಿಸಿಕರುಣಿ ಮಾತೆಯು ವಿಷವನೂಡಿಸೆಗರಸಹೋದರಿ ಪೊರೆಯಲವನನುತರಳನಿಂಧ್ಹರಿವರನುಯೆಂದ 2 ಬಂದ ಚಿಮ್ಮಲಿಗಿಂದ | ಭಕುತಂಗೆ ಪೇಳುತನಂದ ಹುಲ್ಲೆಸೆಯಂದ | ಅದು ಹತ್ತಿ ಉಳಿಯಲುನಿಂದಿಹೆ ತಾ ನಲ್ಲೆಂದ | ಅದರಂತೆ ಗೈಯಲುನಿಂದ ತೋರವಿಲಿ ಛಂದ | ಹರಿಯು ಬಹು ಆನಂದನಂದ ನಂದನನಾದ ಗುರು ಗೋ-ವಿಂದ ವಿಠಲನ್ನಕೇಸರಿಯುಚಂದದಿಂ ದೂವ್ರ್ಯಾಸ ಪೂಜಿತನಂದ ಕಂದ ಮುಕುಂದ ಶ್ರೀಹರಿ 3
--------------
ಗುರುಗೋವಿಂದವಿಠಲರು
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಶ್ರೀಗುರುನಾಥ ತ್ರಾಹಿ ತ್ರಾಹಿ ಎಂದವನಪರಾಧ ನೋಡದೆ ನೀ ಕಾಯಿ ಧ್ರುವ ಪತಿತಪಾವನೆಂಬ ಬಿರುದು ನಿನಗೆ ಎಚ್ಚರಿಲ್ಲೆ ಪ್ರತಿದಿನ ಮೊರೆ ಇಡಲಿಕ್ಕೆ ಮತ್ತಿದೆ ಸೋಜಿಗವಲ್ಲೆ ಅತಿ ಸೂಕ್ಷ್ಮ ಸುಪಥವರಿಯಲಿಕ್ಕೆ ನಾ ಏನು ಬಲ್ಲೆ ಹಿತದಾಯಕ ನನ್ನ ದೀನ ದಯಾಳು ನೀನೆವೆ ಅಲ್ಲೆ 1 ತಪ್ಪಿಲ್ಲದೆ ನಿನ್ನ ಮೊರೆಯ ಹೋಗುವರೇನೊ ಏ ಶ್ರೀಪತಿ ಒಪ್ಪಿಸಿಕೊಳ್ಳದಿದ್ದರಹುದೆ ಜಗದೊಳು ನಿನ್ನ ಖ್ಯಾತಿ ಕೃಪೆಯುಳ್ಳ ಸ್ವಾಮಿ ನಿನ್ನದೆ ಸಕಲ ಸಹಕಾರ ಸ್ಥಿತಿ ಅಪರಾಧ ಕ್ಷಮೆ ಮಾಡಿ ಸಲಹಬೇಕೆನ್ನ ಶ್ರೀಗುರುಮೂರ್ತಿ 2 ಅನಾಥ ಬಂಧು ನೀ ಎಂದಾಡುತಿರಲಿ ಅನಾದಿಯಿಂದ ನ್ಯೂನಾರಿಸದೆ ಬಾರÀದೆ ಬಿರುದಿಗೆ ತಾ ಕುಂದು ಅನುದಿನ ಅನುಕೂಲ ಮುನಿಜನರಿಗೆ ನೀ ಬ್ರಹ್ಮಾನಂದ ದೀನ ಮಹಿಪತಿ ಸ್ವಾಮಿ ಭಾನುಕೋಟಿತೇಜ ನೀ ಪ್ರಸಿದ್ಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದನವ ಕಾಯ್ವೊನೆ ದೈನ್ಯ ಬಡುವವನೆ ವನಜಭವಾಂಡಕೆ ಒಡೆಯನಾಗೆಂದರೆಒಲ್ಲದೆ ವನವನ ತಿರುಗಿದನಮ್ಮ ನೋಡಮ್ಮಯ್ಯ ಪ. ದನಗಾಹಿ ಎಂದರೆ ಎನಗೇನು ಸಂಶಯವಿಲ್ಲಜನರೆಲ್ಲ ಬಲ್ಲರು ಈ ಮಾತು ಜನರೆಲ್ಲ ಬಲ್ಲರು ಈ ಮಾತು ಭಾವಯ್ಯನೆನಪಿಸಿ ಕೊಟ್ಟೆಲ್ಲೊ ಮರೆತಿದ್ದೆ 1 ಗೋಪಾಲ ಶಬ್ದಾರ್ಥ ನೀ ಕೇಳಿಶ್ರೀ ಕೃಷ್ಣ ಕೋಪವಿನ್ಯಾಕೊ ಎನಮ್ಯಾಲೆ ಕೋಪ ವಿನ್ಯಾಕೊ ಎನ ಮ್ಯಾಲೆ ಭಾವಯ್ಯನೀ ಪೇಳಿಕೊಂಡ್ಯೊ ನಿಷ್ಕಪಟಿ 2 ಕುದುರೆಯ ಮಾರಿಯ ಹೂವು ಗಣ್ಣಿನ ವರನಿಗೆ ಮದಗಜಗಮನೆ ಮನಸೋತುಮದಗಜಗಮನೆ ಮನಸೋತು ಮ್ಯಾಲಿನ್ನುಬದಲು ಮಾತಾಡಿ ಫಲವೇನೊ3 ನಾರುವ ಮೈಯವ ನೀರೊಳು ಅಡಗಿದ ಹಂದಿ ಮೈಯವನೆ ಮಹಾಕೋಪಿಹಂದಿ ಮೈಯವನೆ ಮಹಾಕೋಪಿ ತಿರುತಿಂಬೊಹಾರುವನ ಗೊಡವೆ ನಮಗ್ಯಾಕೊ 4 ಕೊಡಲಿಯ ಪಿಡಕೊಂಡ ಪಡೆದಮಾತೆಯಕೊಂದೆ ಒಡಲಿಗಿಕ್ಕದಲೆ ಮಡದಿಯಒಡಲಿಗಿಕ್ಕದಲೆ ಮಡದಿಯ ಕೊಂಡೊಯ್ದುಅಡವಿಗಟ್ಟಿದ ಮಹಾ ಮಹಿಮನೆ5 ಜಾರ ಚೋರನೆಂದು ಜಗದೊಳು ಹೆಸರಾದಿಅಪಾರವಾದ ವನಿತೆಯರುಅಪಾರವಾದ ವನಿತೆಯರ ಒಗೆತನಕೆನೀರು ತಂದಿದ್ದ ಮಹಾಮಹಿಮನೆ 6 ಭಂಡ ಗಾರನಂತೆ ದೇಹ ಕಂಡಜನಕೆಲ್ಲತೋರಿ ಪುಂಡಗಾರನಂತೆ ಹಯವೇರಿಪುಂಡಗಾರನಂತೆ ಹಯವೇರಿ ಹಾರಿಸುವ ಲೆಂಡ ರಾಮೇಶನ ಅರಿವೆನೊ7
--------------
ಗಲಗಲಿಅವ್ವನವರು
ದಾವಗಿಲ್ಲ ಖೂನ ತನ್ನೊಳಗ ಅವಗೆಲ್ಲಿಯ ಜ್ಞಾನ ಜಗದೊಳಗ ಧ್ರುವ ತಿಳಿದುಕೊಳ್ಳದವ ಆತ್ಮವಿಚಾರ ಕಳೆದು ಕೊಂಡವನೆ ಹಿತ ಅಪಾರ ಹೊಳಿಯದವಗ ಎಂದು ವಸ್ತುದಾಧಾರ 1 ದಾವಗಿಲ್ಲ ಖೂನ ಗುರುಮುಖ ಅವನೆ ತಾಳಿ ಬಾಹ್ವ ಜನ್ಮ ಅನೇಕ ಭಾವಿಸದು ದಾವಗಿನ್ನ ವಿವೇಕ ಅವಗೆಲ್ಲಿಹದು ನೋಡಿ ಸ್ವಸುಖ 2 ಖೂನ ತನ್ನ ತಿಳಿವದು ತ್ವರಿತ ಅನುಭವಕಿದೆ ತಾಮ ಸನ್ಮತ ದೀನ ಮಹಿಪತಿಗೆ ಸ್ವಹಿತ ಭಾನು ಕೋಟೆ ತೇಜನಾದ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರೆಂದು ಕರೆದ ಮಾತ್ರದಿ | ಈಗ ಎಮ್ಮ ದೋಷರಾಶಿ ನಾಶವಾಯಿತು ಪ. ಶ್ರೀಶ ತಾನು ಗುರುಗಳಿಂದ ಈ ಶರೀರಕೀ ಜನ್ಮದಲಿ ದಾಸತನದ ಪೆಸರನಿಟ್ಟು ವಾಸುದೇವ ಕಾಯ್ದ ಎನ್ನ ಅ.ಪ. ಏಸು ಜನ್ಮ ಯತ್ನ ಗೈಯ್ಯಲು | ಭೃತ್ಯಭಾವ ಪಾಶ ದುರ್ಲಭವು ಸುಜನಕೆ ಶ್ರೀಶನನುಗ್ರಹದ ಬಲದಿ ಈಸು ನಾಮ ದೊರೆಯಬೇಕು ಆಶಪಾಶ ತೊಲಗಿ ಭವ ಕ್ಲೇಶ ಕೊನೆಗಾಣಿಸುವುದು 1 ಪಂಡಿತನೆಂದೆನಿಸಿ ಮೆರೆಯಲು | ಜಗದೊಳಗೆ ಕಂಡಮಾತ್ರ ಗರ್ವ ಕಾರಣ ಮಂಡೆಬಾಗಿ ಹರಿಗೆ ನಿನ್ನ ತೊಂಡನೆಂದು ನಮಿಸೆ ನಲಿದು ಪುಂಡರಿಕಾಕ್ಷ ತಾನು ತಂಡ ತಂಡ ಪಾಪ ಕಳೆವ 2 ಹರಿಯದಾಸರೆಂದು ಎನಿಸಲು | ಧರೆಯೊಳಗೆ ಸುರರು ಬಯಸಿ ಬರುತಲಿಪ್ಪರು ಸರ್ವದೇವತೆಗಳು ಬಂದು ಹರಿಯದಾಸರೆನಿಸಿ ಮೆರೆದು ಪರಿಪರಿಯ ತತ್ವ ತಿಳುಹಿ ಹರಿಯ ಪುರಕೆ ತೆರಳಲಿಲ್ಲೆ 3 ದಾಸತನಕೆ ಅಧಿಕವಿಲ್ಲವು | ಸಾಧನವು ದಾಸತನವು ಗರ್ವವಳಿವಳಿವುದು ದಾಸ ದಾಸ ದಾಸ ನಿನಗೆ ವಾಸುದೇವ ಸಲಹೊ ಎನಲು ದೋಷನಾಶಗೈಸಿ ಹರಿಯು ದಾಸ ಜನರ ಕಾಯ್ದ ದಯದಿ 4 ಅಷ್ಟು ಭಾಗ್ಯಕಧಿಕ ಲಾಭವು | ದಾಸತನವು ಶ್ರೇಷ್ಠ ಗುರುಗಳಿಂದ ದೊರಕಿತು ಇಷ್ಟವೆನಗೆ ದಾಸಪೆಸರು ಶಿಷ್ಟರೆಲ್ಲ ಕರೆಯಲೀಗ ತುಷ್ಟಿಪಡುವೆ ಶ್ರೀ ಗೋಪಾಲ-ಕೃಷ್ಣವಿಠಲ ಸಲಹೊ ಎಂದು 5
--------------
ಅಂಬಾಬಾಯಿ
ಧನ್ಯ ಧನ್ಯಾ | ಜಗದೊಳವನೇ | ಧನ್ಯ ಧನ್ಯಾ | ಧನ್ಯ ಧನ್ಯ ಅವ ತನ್ನೊಳು ಸ್ವಹಿತದ | ಕಣ್ಣದೆರೆದು ಗುರುವಿನ್ನರಿತಿಹ ನಿಜ | ಸಣ್ಣ ದೊಡ್ಡದರೊಳು ಘನ್ನವ ನೋಡುತಾ | ಮನ್ನಿಸಿ ಶಾಂತಿಯಲಿನ್ನಿಳಿದವನೇ 1 ವಾದಗಳಳಿದು ಕ್ರೋಧವ ಕಳೆದು | ಸಾಧುರ ಕಾಣುತ ಪಾದಕ ಯರಗುತ | ಮೋದವ ಕುಡುವ ಬೋಧವ ಕೇಳುವ | ಸಾಧನ ನಾಲ್ಕರ ಹಾಧ್ಹಿಡಿದವನೇ 2 ಎಲ್ಲರಿಗೇ ಕಿರಿದೊಳ್ಳಿತೆನಿಸಿ | ಬಲ್ಲತನದ ಗರ್ವೆಲ್ಲವ ತ್ಯಜಿಸಿ | ಸಿರಿ ಫಲ್ಲನಾಭನ ಪದ | ದಲ್ಲೆವೆ ಮನರತಿ ನಿಲ್ಲಿಸಿದವನೇ 3 ಹಂಬಡೆಡಂಬಕ ನೊಬ್ಬರಕೂಡದೇ | ಒಬ್ಬರು ಹೊಗಳಿದರುಬ್ಬದೆ ಮನದಲಿ | ನಿಬ್ಬರ ಮಾತಿಗೆ ಉಬ್ಬಸಗೊಳ್ಳದೇ | ಕೊಬ್ಬಿದ ಹಮ್ಮುವ ಲೆಬ್ಬಿಸಿದವನೇ 4 ಒಂದೇ ನಿಷ್ಠಿಯು ಒಂದೇ ಮಾರ್ಗದಿ | ದಂದುಗ ವೃತ್ತಿಗಳೆಂದಿಗೆ ಹೊಂದದೆ | ತಂದೆ ಮಹಿಪತಿ ನಂದನ ಸಾರಿದ | ಬಂದದ ಸಾರ್ಥಕದಿಂದಿದ್ದವನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು