ಒಟ್ಟು 817 ಕಡೆಗಳಲ್ಲಿ , 97 ದಾಸರು , 686 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರಕಮಲ ತಡೆಯುವುದೆ ಕಟುಖಾರವಾ ನಿತ್ಯ ಪೂಜಿಸುವ ಕೋಮಲದಾ ಪ. ಪರಿವಾರ ಜನವು ಭೋಜನಕೆ ಕುಳಿತಿರಲು ನರ ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು ಪರಿಪಕ್ವ ಶಾಖದ ಹೋಳುಗಳ ಬಡಿಸಲು ಕರ ಕರೆಗೆ ಸಿಲುಕೇ 1 ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ ಹೃದ್ವಜದಲಿ ತುಂಬಲನುವಾದ ಪುಸ್ತಕವ ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2 ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3 ಮಧುರಾನ್ನ ಸವಿದು ಮಧುಸೂದನನ ಗುಣಗಳನು ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4 ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5
--------------
ಅಂಬಾಬಾಯಿ
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರುಣದಿ ಕೊಡು ಕಾರ್ತಿಕೇಯಾ | ತವ | ಶಿರದ ಮೇಲಿಹ ಗಂಧ ಸಿಂಗಾರ ಹೂವಾ ಪ ದುರಿತ ಕೋಟಿಗಳನು ತರಿಯೇ | ಮಹಾ | ದುರುಳರುಪದ್ರದ ಗಿರಿಯನು ಮುರಿಯೇ ಪರಮ ಕುಲಿಶದಂತೆ ಇರುವಾ | ತವ | ಶಿರದ ಮೇಲಿರುವ ಸಂಪಿಗೆ ಹೂವ | ದೇವಾ 1 ಕೆಡುಕಿನ ತಾಮಸವಳಿದೂ | ತವ | ದೃಢಭಕ್ತಿ ಎನ್ನಯ ಮನದೊಳು ಮೊಳೆದೂದೃಢವಾಗಿ ನೆಲೆಸುವ ತೆರದೀ | ತವ | ಮುಡಿ ಮೇಲಿಹ ಮಲ್ಲಿಗೆಯನತಿ ಮುದದೀ2 ಆಶಾದಿಗಳ ಪರಿತ್ಯಜಿಪಾ | ತವ | ದಾಸರ ಚರಣಯುಗ್ಮಕೆ ನಮಸ್ಕರಿಪಾ | ಲೇಸಿನ ತಿಳಿ ಜನಿಸಲಿಕೇ ಪಾವಂ- ಜೇಶ ನೀ ಪೊತ್ತು ಕೊಂಡಿರುವ ಅಶೋಕೇ 3
--------------
ಬೆಳ್ಳೆ ದಾಸಪ್ಪಯ್ಯ
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾಪ. ವರ ಫಣಿಗಿರಿ ಸುಸ್ಥಿರಮಂದಿರ ಶ್ರೀ ಗುರು ಜನಾರ್ದನಾಮರಗಣ ಪಾಲಕಅ.ಪ. ಅಪರಾಧಗಳಾಲೋಚಿಸುವರೆ ಸರೀ- ಸೃಪರಾಜನಿಗಳವೆ ಕೃಪೆಯಿಂದಲಿ ಸಂರಕ್ಷಿಸದಿದ್ದರೀ- ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1 ಪುರಂದರ ಮುಖ್ಯ ದಾಸರಂತೆ ಗುಣವೆನಗಿನಿತಿಲ್ಲ ಜನರ ವಿಡಂಬನಕೆ ದಾಸನಾದರೂ ಘನ ಕೃಪಾರ್ಣವನೆ ಕನಕಾಂಬರಧರ2 ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣ ರಕ್ಷಾಮಣಿ ನೀನೆ ಪಕ್ಷೀಂದ್ರವಾಹನ ಪಾಪವಿಮೋಚನ ತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ಕರುಣಿಸು ಕರುಣಿ ಶ್ರೀ ರಂಗಯ್ಯಾ ಹರಣ ಪೋದರು ನಿಮ್ಮ ಸ್ಮರಣೆ ಮರೆಯದಂತೆ ಪ ಮರವೆ ಮಾಯದಿ ಸಿಲುಕಿ ಮರುಳ ಮಾನವರಿಗೆ ಶಿರವ ಬಾಗದಂತೆ 1 ಘನದು:ಖಮಯವಾದ ಜನನಮರಣವೆಂಬ ಕುಣಿಯೊಳಗೆ ಸಿಕ್ಕಿ ಜನಿಸಿಬಾರದಂತೆ 2 ದುರಿತ ದಾರಿದ್ರ್ಯದಿಂದ ಪರಿಪಕ್ವನೆನಿಸೆನ್ನ ವರದ ಶ್ರೀರಾಮ ನಿಮ್ಮ ಚರಣ ಸೇವೆಯ ಘನತೆ 3
--------------
ರಾಮದಾಸರು
ಕರುಣಿಸು ಕರುಣಿಸು ಪರಮ ಪುರುಷ ರಂಗ ಪ ಕರಿಯ ಮೊರೆ ಕೇಳಿ ಹರಿತಂದಂತೆನ್ನಾ ಅ.ಪ ನೀರೊಳು ಮುಳುಗುತ ಗಿರಿಯ ಬೆನ್ನಲಿ ಪೊತ್ತ ಕೋರೆಯ ತೋರುತ ನರಹರಿಯಾದರು ಬಿಡೆನೊ 1 ನೀನೆ ತರಿದುಂಡರು ನಾ ನಿನ್ನ ಬಿಡುವೆನೆ ಮೌನಿ ಕುವರನಾಗಿ ಜನಿಸಿದರು ಬಿಡೆನೊ 2 ಪುರವ ಕಳೆದು ವನಕೆ ತೆರಳಿದರು ಬಿಡೆನೊ ಉರಗನ ಮಡುವಿನೊಳು ಸರಿದರು ನಾ ಬಿಡೆನೊ 3 ದಿಗಂಬರ ನೀನಾಗಿ ಹಗರಣವ ಮಾಡಲು ಮಗುಳೆ ತೇಜಿಯನೇರಿ ಪೋಗಲು ನಾ ಬಿಡೆನೊ 4 ಗರುಡನ ಹೆಗಲೇರಿ ತಿರುಗಿದರು ಬಿಡೆನೊ ಸಿರಿ ರಂಗೇಶವಿಠಲನೀ ಕರೆಕರೆಗೊಳಿಸÀದೆ 5
--------------
ರಂಗೇಶವಿಠಲದಾಸರು
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ