ಒಟ್ಟು 946 ಕಡೆಗಳಲ್ಲಿ , 91 ದಾಸರು , 831 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮನವೆ ಸಲೆ ನಿನ್ನ ಮರೆವದು ಗುಣವೇ ಪ ಹರಿಯೋ ಮರವಿನ ಮುಸುಕಿದೆ ಮರೆಯೋ | ಸಿರಿ ಸೌಖ್ಯ ಮೃಗಜಳ ಪರಿಯೋ | ಚರವೆಂಬ ಹಂಬಲ ಮರಿಯೋ | ಪರಿ ವಾಸನೆಯ ಜರಿಯೋ | ಪ್ರಾರಬ್ಧ ನಿಜ ವೆಂದರಿಯೋ | ತಾಪ ಮೊನೆ ಮುರಿಯೋ | ಅರವಿನ ನಯನವದೆರಿಯೋ | ಪಾದ ಪದ್ಮಕ ಬೆರೆಯೋ 1 ತಿಳಿಯೋ ಇಳಿಯೊಳು ಸತ್ಪಥ ನೆಲಿಯೋ | ಕಳೇವರ ಸ್ಥಿರ ಬೊಬ್ಬುಳಿಯೋ | ನಲವಾರು ಅರಿಗಳ ನಳಿಯೋ | ಬಲಿತಿಹ ಹಮ್ಮಲ ಕಳಿಯೋ | ಬಳಲಿಪಾಗುಣ ಮಲ ತೊಳಿಯೋ | ಬಲು ಶಾಂತಿ ಹೃದಯದಲಿ ತಳೆಯೋ | ಒಲುವಂತೆ ಗುರುನಡಿ ಕಲಿಯೋ | ಸಲಹುವಾಗರದು ದಯ ಮಳಿಯೋ 2 ಜಡಿಯೋದೃಢ ಭಾವನೆಯನು ಹಿಡಿಯೋ | ಕೆಡುವ ಭಾವ ಮೂಲವ ಕಡಿಯೋ | ತಡಿಯದೆ ಮಹಿಪತಿ ದಯ ಪಡಿಯೋ | ಅಡಿಗಳಾಶ್ರಯವನು ಹಿಡಿಯೋ | ಒಡೆಯನಾಜ್ಞೆಯಂದದಿ ನಡೆಯೋ | ಕಡು ಪ್ರೀತಿಲಿ ಸ್ತುತಿ ನುಡಿಯೋ | ಮಡಿದ್ಹುಟ್ಟುವ ಜನ್ಮದ ಮುಡಿಯೋ | ಒಡನ ಹಾದಿದರಿಂದ ಕಡಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ - * ನೆಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ಪ ಆಲಯದೊಳಗೆ ನೀನಾಡದೆ ಬೆಣ್ಣೆ ಪಾಲು ಸಕ್ಕರೆಯನೊಲ್ಲದೆ ಚಿಕ್ಕ ಬಾಲೇಯರೊಳು ನೀನಾಡದೆ ಬಾಲಯ್ಯ ನೀಯೆನ್ನ ಕಣ್ಣ ಮುಂದಾಡದೆ 1 ಬಿಟ್ಟ ಮುತ್ತಿನ ಬೊಗಸೆ ಕಂಗಳು ಫಣಿಯೊಳಿಟ್ಟ ಕಸ್ತೂರಿ ತಿಲಕ ಗಂಧವು ದಿಟ್ಟತನದಿ ಬರುವ ಅಂದವು ಮುದ್ದು ಕೃಷ್ಣ ನೀಯೆನ್ನ ಕಣ್ಣ ಮುಂದಾಡದೆ 2 ಅಷ್ಟದಿಕ್ಕಲಿ ಅರಸಿ ಕಾಣದೆ ಬಾಳ ದೃಷ್ಟಿಗೆಟ್ಟೆನೊ ನಿನ್ನ ನೋಡದೆ - ನ್ನೆಷ್ಟು ಪೇಳಲಿ ಹೇಳಬಾರದೆ ಶ್ರೀದ - ವಿಠಲ ನೀಯೆನ್ನ ಕಣ್ಣ ಮುಂದಾಡದೆ 3
--------------
ಶ್ರೀದವಿಠಲರು
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದು ಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದುಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ 1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ 3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಿಂದ ಬಂದಿದ್ದೆಲೆ ಖೋಡಿ ನೀ ನೆಲ್ಲಿಗೆ ಹೋಗ್ತಿದ್ದಿ ತ್ವರೆಮಾಡಿ ಪ ಕಲ್ಲುಮುಳ್ಳೆನ್ನದೆ ಮುಂದೆ ನೋಡಿ ಜರ ನಿಲ್ಲದೆ ಹೋಗ್ತಿದ್ದಿ ಓಡೋಡಿ ಅ.ಪ ಏಳುಗೇಣಿನ ಕುದುರೇರಿದ್ದಿ ಭವ ಮಾಲೆ ಕೊರಳಿಗೆ ಹಾಕಿದ್ದಿ ಮೂಲ ಲಗಾಮವೆ ತೆಗೆದಿದ್ದೀ ನೀ ಬೀಳುವ ಎಚ್ಚರ ಮರೆತಿದ್ದಿ 1 ಶೀಲ ಸನ್ಮಾರ್ಗವ ಬಿಟ್ಟಿದ್ದಿ ಮಹ ಕಾಳು ಕತ್ತಲೆಹಾದ್ಹಿಡಿದಿದ್ದಿ ಕಾಲನಾಳಿನ ಕೈಗೆ ಸಿಗುತಿದ್ದಿ ಬಹು ಗೋಳಿನೊಳಗೆ ಹೋಗಿ ಬೀಳುತಿದ್ದಿ2 ಅಸ್ಥಿರ ಕುದುರೆ ಹತ್ತಿದ್ದಿ ಬಲು ಮಸ್ತಿಲಿಂದ ಕಣ್ಣು ಮುಚ್ಚಿದ್ದಿ ಪುಸ್ತಿಯಿಲ್ಲದ ದಾರ್ಹಿಡಿದಿದ್ದಿ ಮುಂದೆ ಸ್ವಸ್ಥತೆ ನೀ ಹ್ಯಾಂಗೆ ಪಡೀತಿದ್ದಿ 3 ಯಾರನ್ನ ಬೇಡಿ ಬಂದಿದ್ದಿ ನೀ ನಾರಸೇವೆ ಕೈಕೊಂಡಿದ್ದಿ ದಾರಿ ತಪ್ಪಿದಾರ್ಹಿಡಿದಿದ್ದಿ ಸುವಿ ಚಾರ ಪಥವ ಧಾರೆರೆದಿದ್ದಿ 4 ಬಂದಕಾರ್ಯವನು ತೊರೆದಿದ್ದಿ ಮನ ಬಂದಂತೆ ಕುಣಿಕುಣಿದಾಡುತಿದ್ದಿ ತಂದೆ ಶ್ರೀರಾಮನ ಮರೆತಿದ್ದಿ ಈ ಬಂಧುರಸಮಯ ವ್ಯರ್ಥ ಕಳೀತಿದ್ದಿ 5
--------------
ರಾಮದಾಸರು
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಎಲ್ಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀಎಲ್ಲ್ಯಾಡಿ ಬಂದ್ಯೋ ಎನ್ನ ಕಣ್ಣಮುಂದಾಡದೆ ಪ ಆಲಯದೊಳಗೆ ನೀನಾಡದೆ ಚಿನಿ-ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕಬಾಲರೊಡನೆ ಕೂಡ್ಯಾಡದೆ ಮುದ್ದುಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ1 ಬಟ್ಟ್ಟಮುತ್ತಿನ ಬೊಗಸೆ ಕಂಗಳು ಪಣಿಯೊ-ಳಿಟ್ಟ ಕಸ್ತೂರಿ ತಿಲಕದಂದವುದಿಟ್ಟತನದಿ ಕೂಡ್ಯಾಡಲುಪುಟ್ಟ ಕೃಷ್ಣಯ್ಯ ನೀ ಎನ್ನ ಕಣ್ಣ ಮುಂದಾಡದೆ2 ಅಷ್ಟ ದಿಕ್ಕಲಿ ಅರಸಿ ಕಾಣದೆ ಬಹಳದೃಷ್ಟಿಗೆಟ್ಟೆನು ನಿನ್ನ ನೋಡದೆ ಇ-ನ್ನೆಷ್ಟು ಹೇಳಲಿ ಕೇಳಬಾರದೆ ರಂಗ-ವಿಠಲ ನೀ ಎನ್ನ ಕಣ್ಣ ಮುಂದಾಡದೆ3
--------------
ಶ್ರೀಪಾದರಾಜರು
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟೆಷ್ಟು ಜನ್ಮಗಳ ಕಷ್ಟಂಗಳನು ಸಹಿಸಿ ನಿಷ್ಠೆಯಿಂ ತಪಗೈಯ್ದ ಶ್ರೇಷ್ಠಫÀಲದಿ ಕರವ ಪಿಡಿದೆ ಪೇಳುವದೇನು ನಡೆದ ಕಾರ್ಯಕೆ ಮನದಿ ಮಿಡುಕಲೇನು ಬಟ್ಟೆಗೇ ಗತಿಯಿಲ್ಲ ಪುಟ್ಟಿದಂತಿಹನಲ್ಲ ಹುಟ್ಟು ನೆಲೆಯರಿತಿಲ್ಲ ದಿಟ್ಟನಲ್ಲ ಅಹಿಂಸೆಯೆ ಮತ್ರ್ಯರಿಗೆ ಸಹಜಧರ್ಮವದೆಂದು ಬಹುನೀತಿ ಪೇಳುವನು ಬುದ್ಧನಿವನು ಬೆತ್ತಲೆಯೆ ಮನೆಮನೆಗೆ ಸುತ್ತುತಿಹನೆ ಉತ್ತಮಾಂಗನೆಯರ ಚಿತ್ರ ಚಲಿಸಿ ಮತನೆನ್ನಿಸಿ ನಲಿವ ಉನ್ಮತ್ರನಿವನೆ
--------------
ನಂಜನಗೂಡು ತಿರುಮಲಾಂಬಾ
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏತಕೆ ಸಂತತ ಚಿಂತಿಸುವೆ ಪ ಕೋತಿಗೆ ಮದ್ದಿಕ್ಕಿದ ರೀತಿಲಿ ಮನವೆಅ.ಪ ಹಾನಿ ವೃದ್ಧಿಗಳು ತಾನಾಗಿ ಬರುವುದು ಏನೇನು ಮಾಡಲು ಬಿಡಲೊಲ್ಲದು ಜ್ಞಾನವಿಲ್ಲದೆ ವೃಥಾ ಧೇನಿಸಿ ಧೇನಿಸಿ 1 ದೇಹಸಂಬಂಧಿಗಳ ಮೋಹ ಪಾಶಕ್ಕೆ ಸಿಕ್ಕಿ ಸಾಹಸ ಮಾಡುವುದೇನು ಫಲ ಊಹಿಸಿ ನೋಡಲು ಭ್ರಾಂತಿಯದಲ್ಲವೆ 2 ಪೂರ್ವ ಕರ್ಮಾನುಸಾರ ನಡೆಸುವನು ಗರ್ವವಿರಹಿತನು ಗುರುರಾಮವಿಠಲನು 3
--------------
ಗುರುರಾಮವಿಠಲ
ಏತರಿಂದ ಬ್ರಾಹ್ಮಣಿಕೆ ಪರಮಾತ್ಮನೆತಾನೆಂದು ತಿಳಿಯದ ನರನಲಿ ಪ ಜನಿವಾರ ನೋಡಿ ಬ್ರಾಹ್ಮಣ ನೆಂದರೆ ಸು-ಮ್ಮನೆ ಮರಕೆ ಬಳ್ಳಿ ಸುತ್ತಿಲ್ಲವೆಹಣೆಯ ಬಟ್ಟದ ನೋಡಿ ಬ್ರಾಹ್ಮಣ ನೆಂದರೆಹಾದಿ ಕಲ್ಲಿಗೆ ಸುಣ್ಣ ಬರೆದಿಲ್ಲವೆ1 ಜುಟ್ಟು ನೋಡಿ ಇವ ಬ್ರಾಹ್ಮಣ ನೆಂದರೆಜುಟ್ಟಿನ ಗುಬ್ಬಿಯು ತಾನಿಲ್ಲವೆಉಟ್ಟ ಧೋತ್ರವ ನೋಡಿ ಬ್ರಾಹ್ಮಣ ನೆಂದರೆಉಟ್ಟುದಿಲ್ಲವೆ ಮನೆಯ ನಡುಗಂಬ 2 ಬ್ರಾಹ್ಮಣನಾದರೆ ಬ್ರಹ್ಮ ಸರ್ವವು ಆಗಿಬ್ರಹ್ಮವಖಂಡದಿ ಭೇದವಿಲ್ಲದೆಬ್ರಹ್ಮ ಚಿದಾನಂದ ಗುರುನಾಥನಾಗಿಯೆಬ್ರಹ್ಮವ ಕಂಡವನೀಗ ಬ್ರಾಹ್ಮಣ3
--------------
ಚಿದಾನಂದ ಅವಧೂತರು
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಾಗುವುದು ತಾನಾಗಿದೆ ಜಗ ನೀನ್ಯಾಕದರೋಳ್ಪಾಲಿಡುವ್ಯೋ ಪ ಕಾಣುಕಾಣುತಲಿ ಶೂನ್ಯವೆನಿಪುದೆಲ್ಲ ಜಾಣನಾಗಿ ಭವಗೆಲಿಯೆಲವೋ ಅ.ಪ ಸತತದಿ ಸತಿಸುತರ್ಹಿತಕಾಗಿ ಬಲು ಮತಿಗೆಟ್ಟತಿಯಾಗ್ವ್ಯಥೆಬಡುವ್ಯೋ ಪೃಥಿವಿ ಮೇಲೆ ನಿನ್ನ ಮತಿಯಲಿಂದ ಮಣ್ಣು ಪ್ರತಿಮೆಮಾಡಿ ಸೃಷ್ಟಿಗೊಳಿಸಿದೆಯೋ 1 ಹಲವುವಿಧದಿ ನಾನೆ ದುಡಿದು ಧಾನ್ಯಧನ ಗಳಿಸಿದೆನೆಂದು ಬಲು ಭ್ರಮಿಸುವೆಯೋ ತಿಳಿದುನೋಡೆಲೆ ಬೀಜದೊಳಗೆ ಮೊಳಕೆ ತಿದ್ದಿ ಬೆಳೆಯ ಬೆಳೆಸಿ ಸ್ಥಿತಿಮಾಡಿದೆಯೋ 2 ಎಷ್ಟುದಿನಿರ್ದರು ಬಿಟ್ಟು ಹೋಗುವುದನು ಗಟ್ಟಿಮಾಡ್ಯಾಕೆ ಭ್ರಷ್ಟನಾಗುವೆಯೋ ಸೃಷ್ಟಿಸ್ಥಿತಿಲಯಕರ್ತ ಶ್ರೀರಾಮನ ನಿಷ್ಠೆಯಿಂ ಪಾಡಿ ಮುಕ್ತಿಸುಖ ಪಡೆಯೋ 3
--------------
ರಾಮದಾಸರು