ಒಟ್ಟು 570 ಕಡೆಗಳಲ್ಲಿ , 83 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗೊಲ್ಲರಾ ಮನೆಯ ಪೊಕ್ಕುಗುಲ್ಲು ಮಾಡುವುದೇನಲ - ಬಲುಲಲ್ಲೆ ಮಾಡುವುದೇನಲ ಪ ಹಾಲು ಮೊಸರು ಘೃತವು ನೆಲುವಿನಮೇಲೆ ಇಟ್ಟ ಬೆಣ್ಣೆಯಬಾಲಕರಿಗಿಲ್ಲದಲೆ ಸುರಿದುಹಾಲುಗಡಿಗೆಯನೊಡೆದಲ 1 ಸಣ್ಣ ಮಕ್ಕಳ ಕಣ್ಣ ಮುಚ್ಚಿಹುಣ್ಣಿಮೆ ಬೆಳುದಿಂಗಳಲಿಬಣ್ಣ ಬಣ್ಣದ ಮಾತನಾಡಿಸಣ್ಣ ಕೆಲಸಕ್ಕೆಳೆದಲ 2 ಸುದತಿಯೊಬ್ಬಳು ದಧಿಯ ಮಥಿಸುತಒದಗಿದ ಬೆಣ್ಣೆಯ ತೆಗೆಯಲುಮದನ ಕದನಕೆ ಕೆಡಹಿ ಮಾನಿನಿಒದರಿದರು ನೀ ಬಿಡೆಯಲ 3 ಕಿಟ್ಟ ನಾ ನಿನಗೆಷ್ಟು ಹೇಳಲಿದುಷ್ಟ ಬುದ್ಧಿಯ ಬಿಡೆಯಲಇಷ್ಟು ಹರಳಿಸಿ ರಟ್ಟು ಯಾತಕೆಬಿಟ್ಟು ಮಧುರೆಗೆ ಪೋಗೆಲ4 ಕೇಶವ ವಿಠ್ಠಲ ನಿನ್ನನುಕೂಸು ಅಂದವರ್ಯಾರಲೊ - ಹಸುಗೂಸು ಅಂದವರ್ಯಾರಲೊದೇಶದೊಳಗೆ ವಾಸವಾಗಿಹ ಬೇಲೂರು ಚೆನ್ನಕೇಶವ 5
--------------
ಕನಕದಾಸ
ಗೋವಿಂದ ರಾಮ ಗೋವಿಂದ ಹರೇ ಗೋವಿಂದ ನಾರಾಯಣ ಕಾಯ್ದೆ ಶ್ರೀ ಕೃಷ್ಣ ಪ ಜಾನಕಿಯ ಕೈವಶ ಮಾಡಿದೆ ಶ್ರೀ ರಾಮ ಸಂಹರಿಸಿದೆ ಶ್ರೀ ಕೃಷ್ಣ 1 ಪರಾಕ್ರಮವನು ತಮಿಸಿದೆ ಶ್ರೀ ರಾಮ ಮರೆದೋಚಿತೆಗೆದುಂಡೆ ಶ್ರೀ ಕೃಷ್ಣ2 ಸ್ತ್ರೀರೂಪವ ಮಾಡಿದೆ ಶ್ರೀ ರಾಮ ಧುಮುಕಿ ಹೆಡೆಯ ಮೆಟ್ಟಿ ವಾರಿಧಿಗಟ್ಟಿದೆ ಶ್ರೀ ಕೃಷ್ಣ ಮುಕ್ತಿಯನಿತ್ತೆ ಶ್ರೀ ಕೃಷ್ಣ 3 ವನವಾಸವ ಮಾಡಿದೆ ಶ್ರೀರಾಮ ಕರುಣದಿ ಶ್ರೀ ಕೃಷ್ಣ 4 ಕಪಿಗಳ ನೆರಹಿ ಖಳನ ಕೊಂದೆ ಶ್ರೀ ರಾಮ ಶರಣಗೆ ಪಟ್ಟವ ಕಟ್ಟಿ ಇರಿಸಿದೆ ಸ್ಥಿರವಾಗಿ ಶ್ರೀ ರಾಮ ಮೆರೆದನು ಶ್ರೀ ರಾಮ ಶ್ರೀ ಕೃಷ್ಣ 5
--------------
ಕವಿ ಪರಮದೇವದಾಸರು
ಘೋರವಿದು ಮಹ ಘೋರವಿದು ಸಂ ಸಾರದ ನೆಲೆ ದಾರಿಗರಿತಿಹ್ಯದು ಪ ತೋರದೆ ಮೂಜಗ ಹಾರೈಸಿದನು ದು:ಖ ವಾರಿಧಿಯೊಳು ಘೋರ ಬಡುತಿಹ್ಯದು ಅ.ಪ ಪರಮೇಷ್ಠಿ ಶಿರವಂದು ತೆಗೆಸಿಹ್ಯದು ಮುರಹರನನು ಸುಡುಗಾಡು ಹೊಗಿಸಿಹ್ಯದು ಸಿರಿವರ ಹರಿಯನು ಪರಿಪರಿ ಜನುಮವ ಧರಿಸುತ ಧರೆಮೇಲೆಳೆಸಿಹ್ಯದು 1 ಚಂದ್ರಗೆ ಕುಂದುರೋಗ್ಹಚ್ಚಿಹ್ಯದೋ ಬಲು ಮೇಂದ್ರ ಸೂರ್ಯನ ಪೊಲ್ಲ ಕಳಚಿಹ್ಯದು ಇಂದ್ರನ ಅಂಗಾಂಗ ಸಂದು ಬಿಡದಲತಿ ರಂಧ್ರಗೊಳಿಸಿ ಹೇಯ ಸುರಿವುವುದು 2 ಕಾಲ ತಂದಿಹ್ಯದು ಪಾ ತಾಳಕೆ ಬಲಿಯನು ಇಳಿಸಿಹ್ಯದು ವಾಲಿಯ ನಿಗ್ರಹ ಮಾಡಿಸಿ ಲಂಕೆಯ ಪಾಲದಶಕಂಠನ ವಧಿಸಿಹ್ಯದು 3 ಪರಮ ಪಾಂಡವರನ್ವನಕೆಳಸಿಹ್ಯದು ಆ ಕುರುಪನ ಕುಲನಾಶ ಮಾಡಿಹ್ಯದು ಪರಮ ತ್ರಿಪುರ ಶಿರಸೆರೆ ಸೂರೆಮಾಡಿಸಿ ಸುರನಿಕರರಿಗ್ಹಂಚಿಕೊಟ್ಟಹ್ಯದೊ 4 ಹಿರಿಯರನೀ ಪಾಡ ಪಡಿಸಿಹ್ಯದು ಈ ಮರುಳ ನರರ ಪಾಡೇನಿಹ್ಯದು ಗುರುವರ ಶ್ರೀರಾಮನೋರ್ವನ ಹೊರತಾಗಿ ಸರುವ ಜಗವ ಗೋಳಾಡಿಸಿಹ್ಯದು 5
--------------
ರಾಮದಾಸರು
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಚರಣವೆಂಬ ದುರ್ಗಮ ದುರ್ಗ ಸೇರಿದೆ ನಿಜಭಕ್ತ ಜನರಿಗೆ ಆಭಯವ ಕೊಡುವಂಥ ಧ್ವಜವುಳ್ಳ ಪುರವಿದು ಪರರಿಗಸಾಧ್ಯ 1 ತನ್ನ ನಂಬಿದ ಇಂದ್ರ ಗಣಪತಿ ಇಹರೆಂದು ಚನ್ನ ವಜ್ರಾಂಕುಶ ಧರಿಸಿದೆ ನಿಧಿ ಪೂರ್ಣ 2 ನಿತ್ಯ ನಿರ್ಮಲವಿದು ಅಜ ಮೊದಲಾದವರು ಇಲ್ಲೆ ಸೇರುವರಯ್ಯ 3 ಕೆಳಗ ರವಿಯ ಕಾಂತಿ ಮ್ಯಾಲರ್ಧಾ ಶಶಿ ಛವಿ ಸ್ಥಳವಿದೆ ಭಾಗ್ಯಾಭಿಮಾನಿ ದೇವತೆಗೆ 4 ಸವಿಯಾದ ನದಿ ಇಲ್ಲಿ ಜನಿಸಿದೆ ಫಲ ಪದ್ಮ ಯವ ಮೊದಲಾದವಿವೆ ವಾಸುದೇವವಿಠಲನ್ನ ಚರಣವೆ 5
--------------
ವ್ಯಾಸತತ್ವಜ್ಞದಾಸರು
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಛಿ ಛಿ ಮನುಜನೆ ನಿನ್ನನೆ ತಿಳಿಯೋಚಿಕ್ಕ ಬುದ್ಧಿಯ ನೀನೀಗ ಮಾಡಬೇಡ ಪ ಎಲ್ಲ ದಿನಗಳು ಆಗಲೋ ಈಗಲೋ ಒಳ್ಳಿತಾಗಿ ಬಿಡು ಸಂಸಾರವನುಸರ್ವರನು ನಿನಗೊಪ್ಪಿಸೆಯೋ ಸತಿಸುತ ರೆಂಬರುಏನಾದರೆಂದು ತಿರುಗಿ ಪರಾಮರಿಸಿ ಕೊಂಬೆಯಾ 1 ತುದಿಗಟ್ಟೆಯಲಿ ತಂಬಿಗೆ ಇಟ್ಟರೆ ತೆಗೆಯಿರಿ ಒಳಯಿಕೆ ನೀವೆಂಬಿತುದಿಗಟ್ಟೆಯಲಿಹ ತುಂಬಿಗೆಯಿಂದಲಿತಿರುಗಿ ಕುಡಿಯುವೆಯೋ ನೀನೀರ2 ಮನೆ ಮಾತಿಗೆ ನೀ ಬಡಿದು ಆಡಿದ ಮನೆ ತಕ್ಕೊಂಡೆಲ್ಲದರಮನೆಯಲಿ ಆರಿಗೆ ಹೇಳಿ ಹೋಗುವೆಯೋಮನೆ ಪರಾಮರಿಗೆ ತಿರುಗಿ ಕೊಂಬೆಯೋ 3 ದೇಹವ ಸಾರ್ಥಕ ಮಾಡಿರಿ ಎಂದು ದೈನ್ಯದಿ ಎಲ್ಲರಿಗೂ ಹೇಳುವೆದೇಹವ ಸಾರ್ಥಕ ಮಾಡಿದರಿಲ್ಲವೋದೇಹ ಪರಾಮರಿಕೆಯ ಕೊಂಬೆಯೋ 4 ನಿನ್ನ ದೇಹವೇ ನಿನಗೆ ಇಲ್ಲವೋ ನಿನಗೆಲ್ಲಿಯ ಸತಿಸುತ ಭ್ರಾಂತಿನಿನ್ನ ಚಿದಾನಂದ ಗುರುವೆಂದು ಕಂಡರೆನಿನಗೇನಿಲ್ಲವೋ ಗುರುವಾಗುವೆ ನೀ 5
--------------
ಚಿದಾನಂದ ಅವಧೂತರು
ಜಡಮತಿ ಮನುಜ ಡಂಭವ ತ್ಯಜಿಸೊ ದೃಢದಿಂದ್ಹರಿಪಾದ ಸತತದಿ ಭಜಿಸೋ ಪ ಒಡಲೊಳ್ವಂಚಕನಾಗಿ ಹೊರಗೆ ಬಹುಮಾನವ ಪಡೆದರೆ ಹರಿ ನಿನ್ನ ಮೆಚ್ಚುವ ನೇನೋ ಅ.ಪ ನಿರುತ ಮಾನಸದೊಳ್ ಮನೆಮಾಡಿಹ್ಯ ಪ್ರಭು ಮರೆವೆ ಪರದೆ ತೆಗೆದಿರವಿಟ್ಟು ನೋಡೋ ಅರಿಯದ ನರರು ನಿನ್ಹಿರಿಯನೆನಲು ಕರಿವರದ ಕಮಲನಾಭನರಿಯನೆ ಮರುಳೆ 1 ಮರುಳನೆ ದುರಿತವ ಸ್ಮರಿಸವನಿತರಲಿ ಅರಿಯುವ ಹರಿ ನಿನ್ನಂತರದಲಿ ನಿಂದು ಮರುಳುಮತಿಯ ನೀಗಿ ಹೊರಒಳಗೊಂದಾಗಿ ಅರೆಲವನಿಲ್ಲದೆ ಪರಮನಂ ಧ್ಯಾನಿಸೋ 2 ಧರೆಮೆಚ್ಚಿ ನಡೆದರೆ ಬರುವುದೇನೆಲೊ ನಿನ ಗ್ಹರಿಮೆಚ್ಚಿ ನಡೆವುದೆ ಪರಮಸೌಭಾಗ್ಯ ಧರೆಯಾಣ್ಮ ಶ್ರೀರಾಮ ಮರೆಯಾಗುವನೆಲೋ 3
--------------
ರಾಮದಾಸರು
ಜನುಮದ ದಿವಸವಿದು ಹನುಮ ನಿನ್ನಜನುಮದ ದಿವಸವಿದೂ ಪ ಅನುದಿನ ನಿನ್ನನುನೆನೆಯುವ ಜನರಿಗೆ ಘನ ಮುದ ಕೊಡುವಂಥ ಅ.ಪ. ಯಾವಾಗಲೂ ಹರಿಯ ಭಕುತಿಯಲಿಸೇವೆಮಾಳ್ಪ ಪರಿಯಭಾವುಕರಿಗೆ ಕಲಿಸುವುದಕೆ ಗಡಜೀವಿಯಾಗಿ ಅವತರಿಸಿದ ನಿನ್ನದೂ 1 ಪೊಡವಿಯ ಮಾತೆಯನು ದನುಜಬ ಚ್ಚಿಡಲವಳಿರುವದನುಹುಡುಕಿ ತೆಗೆಯಲಾ ಕಡಲನೆ ಜಿಗಿಯುವಕಡುಶಕ್ತಿಯ ಗಡ ಪಡೆದ ನಿನ್ನಯ 2 ಧಾರುಣಿನ ಕಾರಣ ಗದುಗಿನವೀರನಾರಾಯಣಚಾರು ಚರಣದಿ ತೋರಿ ಭಕುತಿಯನುಸೂರೆಗೈಯ್ಯೆ ಮೈದೋರಿದ ನಿನ್ನನು 3
--------------
ವೀರನಾರಾಯಣ
ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ಕಲ್ಪತರುವೆ ಜೋ ಜೋ ಎಂದು ಜನ್ಮಕ್ಕೆ ಬರುವೆ | ಜೋ ಜೋ ನಿಮ್ಮ ಚರಣದಲ್ಲಿರುವೆ ಜೋ ಜೋ ಪ ಅಷ್ಟ ಸಿದ್ಧಿಗಳೆಲ್ಲ ಬಡ್ಡಿಯ ಕೊರೆಸಿ | ಗಟ್ಟ್ಯಾಗಿ ವೇದದ ಕಾಲವ ನಿಲ್ಲಿಸಿ ಅಷ್ಟತತ್ತ್ವದ ಹುರಿ ಹೆಣಿಕಿಲಿ ಬಿಗಿಸಿ | ತೊಟ್ಟಿಲೊಳರುವಿನ ಹಾಸಿಗೆ ಹಾಸೀ || ಜೋ ಜೋ 1 ಸಾಧನ ನಾಲ್ಕೆಂಬೋ ಹಗ್ಗವ ಹೊಸೆದು | ಬೋಧದ ಗಂಟು ತುದಿಯಲ್ಲಿ ಬಿಗಿದು | ನಾದ ಅನಾಹತ ಗಂಟೆಯ ಹೊಡೆದು | ಆದಿ ಗುರುವಿನ ಮಲಗಲಿ ಕರೆದು || ಜೋ ಜೋ || 2 ಕಾಲಿಗೆ ಯೋಗದ ಪಾಶವ ಕಟ್ಟಿ | ಮೂಲೈದು ಬ್ರಹ್ಮರಂಧ್ರಕ್ಕೆ ಮುಟ್ಟಿ | ಮೇಲಿನ ಜೋತೆಗೆ ಭಾಸದ ಬುಟ್ಟಿ | ಲೀಲೆಯಿಂದಲಿ ನೋಡು ಗುರುವಿನ ದೃಷ್ಟಿ || ಜೋ ಜೋ 3 ಮನಸೀಗೆ ಬಾರದ ಮಾತುಗಳಾಡಿ |ನೆನೆಹಿಗೆ ನಿಲ್ಕದ ನಿತ್ಯನ ಕೂಡಿ | ಕನಸು ಎಚ್ಚರದ ಗಾಢವ ನೋಡಿ |ಉನ್ಮನಿ ಬೆಳಗುವ ಮೂರ್ತಿಯ ಪಾಡಿ || ಜೋ ಜೋ 4 ಭಕ್ತಿ ವಿರಕ್ತಿಗೆ ಸಿಲ್ಕುವನೀತಾ | ಸತ್ಯ ಶರಣ್ಯ ಸದ್ಗುರು ನಾಥಾ | ಕರ್ತೃತ್ವ ಇಟ್ಟನು ಮೌನದಲ್ಲೀತಾ | ವೃತ್ತಿ ವಿರಹಿತ ಗಿರಿ ಪಾಲಿಸು ಗುರುತಾ || ಜೋ ಜೋ 5
--------------
ಭೀಮಾಶಂಕರ
ಜ್ಞಾನಶೂನ್ಯಗಾತ್ಮದನುಭವವ್ಯಾಕೆ ಹೀನ ಸಂಸಾರಿಗೆ ಪರದ ಸುದ್ದ್ಯಾಕೆ ಪ ಕತ್ತೆಗೆ ಬೆಲೆಯುಳ್ಳ ಉತ್ತಮ ಜೀನ್ಯಾಕೆ ಕೃತ್ರಾಮಗೆ ಸತತ ಸತ್ಪಥದ ಬೋಧ್ಯಾಕೆ ತೊತ್ತಿಗ್ಹೋಗುವಗರಸೊತ್ತಿಗಧಿಕಾರವ್ಯಾಕೆ ಮಿಥ್ಯೆಮತಿಗ್ಯಾತಕ್ಕೆ ಉತ್ತಮರ ನೆರೆಯು 1 ನಂಬಿಗಿಲ್ಲದವಗ್ಯಾಕೆ ಗುಂಭದ ಮಾತುಗಳು ಜಂಬಕೊಚ್ಚುವವಗ್ಯಾಕೆ ಗಂಭೀರತನವು ಅಂಬುಜಾಕ್ಷನ ಚರಿತ ಡಂಭನಿಗ್ಯಾತಕ್ಕೆ ಗೊಂಬೆಯಾಟಗಾರಗ್ಯಾಕೆ ತಂಬೂರಿ ತಬಲ 2 ದಾನಧರ್ಮದ ಮಹಿಮೆ ಜೀನನಿಗೆ ಏತಕ್ಕೆ ಗೋಣು ಮುರಿವವಗ್ಯಾಕೆ ದೈನ್ಯಮಾತುಗಳು ನಾನಾ ಬಯಕೆಯುಳ್ಳ ಮಾನವಗೆ ಭಕ್ತಜನ ಪ್ರಾಣ ಶ್ರೀರಾಮ ನಿಮ್ಮ ಧ್ಯಾನವಿನ್ಯಾಕೆ 3
--------------
ರಾಮದಾಸರು
ಜ್ಯೇಷ್ಠಾಭಿಷೇಕ ಗೀತೆ ನೋಡಿದೆ ಜ್ಯೇಷ್ಠಾಭಿಷೇಕದುತ್ಸವವ ಸೃಷ್ಟಿಯೊಳಾಶ್ಚರ್ಯವಾ ಪ. [ಒಪ್ಪುವ] ಮಿಥುನಮಾಸದ ಶುಕ್ಲಪಕ್ಷ ಚತುರ್ದಶಿಯಲ್ಲಿ ವಿಪ್ರರು ಕೂಡಿ ಸಹ್ಯೋದ್ಭವೆಯನ್ನು ತರುವೆವೆಂದೆನುತಲೆ ವಿಪ್ರರು ಪೋದ ವಿಚಿತ್ರ[ವ] ನೋಡಿದೆ 1 ಅಂದು ಗಜೇಂದ್ರನ ತಂದು ಸಿಂಗಾರ ಮಾಡಿ ಕುಂದಣದ ಛತ್ರಿ ಚಾಮರ ಬೀಸುತ್ತ ವಿಪ್ರರು ಬರುವುದ 2 ವೇದಘೋಷಗಳಿಂದ ವಿಪ್ರರು ಕೊಡಗಳ ವಿ ನೋದದಿಂದಲೆ ಪೊತ್ತು ತಾ[ಳ] ತಮ್ಮಟೆ ಭೇರಿ ನಾನಾ ವಾದ್ಯಂಗಳ ಮುಂದೆ ರಜತದಕೊಡ ಬರುವ ವೈಭೋಗವ 3 ಕರಿ ಕೊಡವನ್ನು ಇಳಿಸಲು ಅಸಮಾನ [2ನಿ2]ರಿಗಳ ಬಿಚ್ಚಿ ಹೊಸಬಟ್ಟೆಗಳ ಹಾಸಿ ಕುಶಲದಿಂದಲೆ ಹೊಲೆದು ಪೊಸದಾಗಿ ಕಟ್ಟುವತಿಶಯ[ವ] 4 ಗರ್ಭಗೃಹವು ಗಾಯಿತ್ರಿ ಮಂಟಪವನ್ನು ಶುಭ್ರವಾಗಿಯೆ ತೊಳೆದು ಘಮಘಮಿಸುವ ದಿವ್ಯ ಪರಿಮಳ ವು ಬರುವಂಥ ಗಂಧÀವ ತಳಿದರು ಅಂದು ಆಲಯಕ್ಕೆಲ್ಲ 5 ಭಕ್ತರಿಗೆ ತೊಟ್ಟಕವಚವ ಕಳೆದು ಅಭಯ ಹಸ್ತ ಪಾದವ ನಿತ್ತು ಕಸ್ತೂರಿ ಕಮ್ಮೆಣ್ಣೆ ಒತ್ತಿ ಸಂಭ್ರಮದಿಂದ ಮಿತ್ರಸಹಿತ ನಿಂದ ಭಕ್ತವತ್ಸಲ ರಂಗ 6 ಛಂದದಿ ಇಕ್ಷುರಸವು ಚೂತ ಕದಲಿ ರಸಂಗಳು ದಧಿ ತಿಂತ್ರಿಣಿ ನಿಂಬೆರಸ ಕ್ಷೀರ ಘೃತಗಳಿಂದ ಆ ನಂದದಿ ಯೆರೆದರು ಇಂದಿರೆರಮಣಗೆ 7 ಕೇಸರಿ ಪುನಗಿನ ತೈಲವನೆ ತೆಗೆದು ವಾಸುಕಿಶಯನಗೆ ಲೇಪವನು ಮಾಡಿ ಸ ಹಸ್ರಕೊಡದ ಅಭಿಷೇಕವ ಮಾಡಿದರು 8 ಪಟ್ಟುಪೀತಾಂಬರವನುಟ್ಟು ಶ್ರೀರಂಗನು ಕಳೆದ ಕವಚ ತೊಟ್ಟು ಹತ್ತುಸಾವಿರಸೇರಿನ ಅಕ್ಕಿ ಅನ್ನವ ನಿಟ್ಟು ವಿಪ್ರರು ಸುರಿದರು ವಿಸ್ತಾರವಾಗಿಯೆ9 ದಧಿ ಕದಳಿ ಫಲದಿಂದ ನೈ [ವೃಂದಕ್ಕೆ] ಕರೆಕರೆದು ಕೊಡುವ ಪರಿಯ ನಾ 10 ರಂಗನಾಯಕಿ ಪಟ್ಟದರಸಿ [ವೆರಸಿ]ನರಹರಿ ಚಕ್ರಮೂರುತಿಗೆ ಆಗ ಕಲ್ಪೋಕ್ತದಿಂದಭಿಷೇಕವ ಮಾಡೆ ಕರ್ಪೂರ ತೈಲವ [ಲೇ ಸಾಗಿ]ಹಚ್ಚಿ ಮಲಗಿದ ವೆಂಕಟರಂಗ[ನ] 11
--------------
ಯದುಗಿರಿಯಮ್ಮ
ಟೀಕಾಚಾರ್ಯರ ಸ್ತೋತ್ರ ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ಪ ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1 ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2 ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3 ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4 ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5
--------------
ವ್ಯಾಸವಿಠ್ಠಲರು
ಡಂಗುರ ಹೊಡಿಸಿದ ಯಮನು | ಪಾಪಿ ಹೆಂಗೆಳೆಯವರ ತಂದು ಭಂಗಪಡೆಸಿದರೆಂದು ಪ ಮೃತಿಕೆ ಶೌಚÀದ ಗಂಧ ಪೋಗುವಂತೆ | ನಿತ್ಯದಲ್ಲಿ ಸ್ನಾನ ಮಾಡದೆ ಸುಮ್ಮನೆ || ತೊತ್ತು ಒಡತಿಯಾಗಿ ಮುಖವ ತೊಳಿಯದಿಪ್ಪ | ಕತ್ತೆ ಹೆಂಗಸರನು ಕಡಿದು ಕೊಲ್ಲಿರೊ ಎಂದು 1 ಪತಿಗೆರಗದೆ ಗೃಹಕೃತ್ಯ ಮಾಡುವಳ | ಮತಿವಿರದೆ ಚಂಚಲದಿಪ್ಪಳ || ವ್ರತಗೇಡಿ ಅನ್ಯರ ಮಾತಿಗೆ ಸೋಲುವ | ಪತಿತಳ ಎಳೆತಂದು ಹತವ ಮಾಡಿರೆಂದು 2 ಒಬ್ಬರಿಬ್ಬರ ಕೂಡ ಸಖತನ ಮಾಡುವಳ | ಒಬ್ಬೊಬ್ಬರಿಗೆ ಮೈಯಿತ್ತು ಪಾಡುವಳೆ || ಅಬ್ಬರದ ಸೊಲ್ಲನು ವಿಸ್ತರಿಸುವಳ | ದಬ್ಬಿರೊ ವೃಶ್ಚಿಕದ ಕುಂಡದೊಳಗೆ ಎಂದು 3 ವಸನವಿಲ್ಲದೆ ಮೈಯ ತೊಳಕೊಂಬೊ ಪಾಪಿಯ | ಅಶನ ಭಕ್ಷಿಸುವಾಗ ಅಳಲುವ ದುಃಖಿಯ ಪೆಸರಿಯ ತರೆ ಕೆಳಗಾಗಿ ಬಾಧಿಸರೆಂದು 4 ಬಿಗಿದು ಪುಟವ ಹಾಕಿ ಬದಿ ಬಗಲ ಮುಚ್ಚದೆ | ನಗುವಳು ಅವರಿವರೆಂದರಿಯದೆ || ಬಗೆ ಬಗೆ ವಯ್ಯಾರ ನಿಜವಾಗಿ ತೋರುವ | ಅಧಮ ನಾರಿಯೆ ತಂದು ಅರಿದು ಕೊಲ್ಲಿರೊ ಎಂದು 5 ಪಾಕದ ಪದಾರ್ಥ ನೋಡಿ ಇಡದವಳ | ಲೋಕವಾರ್ತೆಗೆ ಮನೆಯ ಜರಿದು ಪತಿಗೆ || ಬೇಕಾದವರ ಜರಿದು ಬಹುಪುಷ್ಪ ಮುಡಿದಿಪ್ಪ ಕಾಕಿಯ ಎಳೆತಂದು ಕಣ್ಣು ಕಳಿಚಿರೆಂದು 6 ಪಂಕ್ತಿ ಭೇದವ ಮಾಡಿ ಬಡಿಸುವ ಪಾಪಿಯ | ಕಾಂತ ಕರೆದಾಗ ಪೋಗದವಳ || ಸಂತರ ನೋಡಿ ಸೈರಿಸದಿಪ್ಪ ನಾರಿಯ | ದಂತಿಯ ಕೆಳಗೆ ಹಾಕಿ ತುಳಿಸಿ ಕೊಲ್ಲಿರೊ ಎಂದು 7 ವಿಧವೆಯ ಸಂಗಡ ಇರಳು ಹಗಲು ಇದ್ದು | ಕದನ ತೆರೆದು ನೆರಳು ನೋಡುವಳ || ಕದದ ಮುಂದೆ ಕುಳಿತು ತಲೆ ಬಾಚಿ ಕೊಂಬುವಳ | ಕುದಿಸಿ ಕಟಾಹದೊಳು ಮೆಟ್ಟಿ ಸೀಳಿರೊ ಎಂದು 8 ಆವದಾದರು ತೊರೆದು ಪತಿದೈವವೆಂದರಿದು | ಸೇವೆಯ ಮಾಡಿ ಸುಜನರಿಗೆ ಬೇಗ || ದೇವೇಶ ವಿಜಯವಿಠ್ಠಲ ತಿರುವೆಂಗಳ | ಕೈವಲ್ಯ ಕಲ್ಪಿಸಿ 9
--------------
ವಿಜಯದಾಸ