ಒಟ್ಟು 672 ಕಡೆಗಳಲ್ಲಿ , 90 ದಾಸರು , 584 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋರಿ ಬಂದೆನೊ ನಾನು ಪತಿ ನಿನ್ನ ಪ ಘೋರ ಸಂಸಾರದಿಂದ ಪಾರು ಮಾಡುವಿಯೆಂದು ಅ.ಪ. ಸರ್ವ ಪ್ರಾಣಿಗಳಲ್ಲಿ ಸರ್ವವಸ್ತುಗಳಲ್ಲಿ ಸರ್ವೇಶ ಹರಿಯ ಕೂಡಿ ಸರ್ವದಾ ಇರುವೆಯೆಂದು 1 ಅಂಜಾನೆ ಗರ್ಭದಿ ಸಂಜಾನಿತ ನೀನಾಗಿ ಕಂಜನಾಭನ ಮನ- ರಂಜಾನೆ ಮಾಡಿದೆಯೆಂದು 2 ದಾನವಾಂತಕನಿಂದ ಸ- ನ್ಮಾನಿತನಾದಂಥ ದೀನರಕ್ಷಕ ಭೀಮ- ಸೇನ ವಿಕ್ರಮನೆಂದು 3 ಹೀನಬುದ್ಧಿಯ ಬಿಡಿಸಿ ದೀನ ಸುಜನರಿಗೆ ಜ್ಞಾನ ಮಾರ್ಗವ ತೋರಿ- ದಾನಂದತೀರ್ಥನೆಂದು 4 ಶ್ರೀ ರಂಗೇಶವಿಠಲಗೆ ಸಮ ರ್ಯಾರಿಲ್ಲವೆಂತೆಂದು ಈರೇಳು ಜಗದೊಳು ಸಾರುತಿರುವೆಯೆಂದು 5
--------------
ರಂಗೇಶವಿಠಲದಾಸರು
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಕೋಲಾಟದ ಪದಗಳು ಕುಶಲದಿಂದ ಬಾಳಿರೈ ಯಶವನಾಂತು ಬೆಳಗಿರೈ ಕುಶೇಶಯಾಕ್ಷನೊಲಿದು ಸಂತೋಷವೀಯಲಿ ಪ. ಪಿತೃಭಕ್ತರೆನಿಸುತ ಮಾತೃಸೇವೆಗೈಯುತ ಪುತ್ರಪೌತ್ರಮಿತ್ರರಿಂ ಕಲತ್ರಭಾಗ್ಯದಿಂ1 ಕಾರ್ಯಸಿದ್ಧಿಯಾಗೆ ನಿಮ್ಮಾರ್ಯಮಾತೆಗೆರಗುತ ಸಾರಸತ್ಯಧರ್ಮಮಂ ನೀವ್ ಮೀರದಾವಗಂ 2 ದಾನವೇಂದ್ರನ ತೆರದೊಳು ದಾನಶೂರರೆನ್ನಿಸಿಳೆಯೊಳ್ ದೀನ ದುಃಖಗಳಿಗೆ ನೀವು ಶ್ರೀನಿಧಾನರೆನ್ನುವೋಲ್ 3 ಈ ಶರತ್ಸಮಾಗಮಂ ದೇಶಮಾತೆಗೆ ಸಂಭ್ರಮಂ ದೇಶಭಕ್ತರಿಗುತ್ಸವಂ ಇದೇ ನಮಗೆ ಸಂಭ್ರಮಂ4 ತಂದೆ ಶೇಷಗಿರಿವರಂ ನಂದಿನಿಯ ಕೈಪಿಡಿಯುತಾ ನಂದದಾಯಕ್ ನೆನಿಸಲೆಂದೆಂದು ಹರಸುತ 5
--------------
ನಂಜನಗೂಡು ತಿರುಮಲಾಂಬಾ
ಕೋಳಿ ಕೂಗಿತು ತಂಪು ಗಾಳಿ ಬೀಸಿತು ಏಳಯ್ಯಾ ಬೆಳಗಾಯಿತು ಪ ಧೀರ ಸೋಮಕನಿರಿದು ಮೇರು ಬೆನ್ನಲಿ ಪೊತ್ತು ಘೋರ ಹಿರಣ್ಯಾಕ್ಷ ಕಶ್ಯಪರ ಶೀಳಿ ಮಾರಿ ಬಲಿಯನ್ನೊತ್ತಿ ಕಂಸ ದಾನವರನಳಿದು ಶೇರಿ ತ್ರಿಪುರರ ದಹಿಸಿ ಕ್ರೂರ ದುಷ್ಟರ ತರಿದು ಭಾರಿ ಆಯಾಸದಲಿ ನಿದ್ರೆ ಹತ್ತಿರೆ ಸ್ವಾಮಿ1 ವೇದವನು ತಂದೆ ಸುರವೃಂದಕಮೃತವನಿತ್ತೆ ಮೇದಿನಿಯ ನೆಲಸಿ ಪ್ರಲ್ಹಾದನಾ ಪೊರೆದೆ ಮೋದಿಗಂಗೆಯ ಜನಿಸಿ ಭೂದಾನ ಮಾಡಿದೆ ಮೋದದಿಂದಜಪದವಿಯ ಆಂಜನೇಯಗಿತ್ತೆ ಪೋದ ಮಕ್ಕಳ ತಂದು ಗುರುಪತ್ನಿಗೇ ನೀಡಿ ವೇದನುತ ನಿರ್ವಸನ ಸುಹಯಾರೂಢನೇ2 ಶರಣಜನ ಬಂದು ಸುಸ್ವರದಿಂದ ಪಾಡುತಿರೆ ಪರಿ ಕಣ್ಣಮುಚ್ಚುವುದೇ ಸರಿಯೆ ಬೆನ್ಮರೆಮಾಡಿ ಮಣ್ಣನಾಡಾಡುವುದೇ ಉರಿಮೋರೆಯಿಂದ ತರಳಾಟ ಆಡುವುದೇ ಪರಶು ಶರ ಚಕ್ರಗಳ ಪಿಡಿದು ಉಡಿಗೆಯ ಮರೆತೆ ಭರದಿ ತುರಗವನೇರು ನರಸಿಂಹ ವಿಠ್ಠಲಾ 3
--------------
ನರಸಿಂಹವಿಠಲರು
ಕೌಸಲ್ಯಾ ಸುಕುಮಾರ ಭಾಸಿತ ಕೋದಂಡಧರ ವಾಸವನುತ ರಣಧೀರ ಭೂಮಿಸುತಾ ಮೋಹಕ 1 ಮುನಿಕೌಶಿಕ ಮಖಪಾಲನ | ಜನಕಸುತಾ ಮನಮೋಹನ ಭವ ಖಂಡನ ಘನದಾನವ ಸತಿಭಂಜನ 2 ಭರತಾರ್ಚಿತ ವರಚರಣ | ಖರದೂಷಣ ಸಂಹರಣ ಮರುತಾತ್ಮಜ ಮಣಿಭೂಷಣ | ಶರಣಾಗತ ಮನತೋಷಣ3 ಲಂಕಾಧಿಪಕುಲನಾಶಕ | ಕಿಂಕರವಾನರಪೋಷಕ ಪಂಕೇರುಹ ಲೋಚನಾಕಳಂಕ [ಶಮನ] ಮಾಂಗಿರಿ ನಾಯಕ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗಂಗಾನದಿ ಮಂಗಳಂ ಜಯತು ಭಾಗೀರಥಿಗೆ ಜಯ ಮಂಗಳಂ ಯಮುನೆ ಸರಸ್ವತಿಗೆ ಪ ವಾಮನರೂಪಿಲಿ ದಾನವ ಬೇಡಿ ಪ್ರೇಮದಿಂ ಪಾದವ ಮೇಲಕ್ಕೆ ನೀಡಲು ನೇಮದಿಂ ತಡೆದು ಬ್ರಹ್ಮಾಂಡದಿಂದ ಸುಮ್ಮಾನದಿಂ ಪೊರಟು ಬಂದ ದೇವಿಗೆ 1 ಹರಿಯ ಪಾದದಲಿ ಉದ್ಭವಿಸಿದ ಗಂಗೆಗೆ ಹರನ ಶಿರದಲ್ಲಿ ವಾಸವಾದವಳಿಗೆ ಧರಿಣಿಗೆ ಇಳಿದು ಬಂದ ದೇವಿಗೆ 2 ಭಾಗೀರಥಿ ಎಂಬೊ ಪೆಸರು ಪೊತ್ತು ಅವನ ಭಾಗಿಗಳಿಗೆ ಮೋಕ್ಷವನಿತ್ತು ಹರುಷದಿ ಯೋಗಿಗಳು ಸ್ತುತಿಪ ಗಂಗಾದೇವಿಗೆ 3 ಜಾಹ್ನವಿ ಎನಿಸಿದೆ ಜಗದೊಳಗೆ ಜನರಿಗೆ ಜನನ ಮರಣ ಕೊಡದೆ ಬಿಡಿಸಿ ಜಾಣತನದಿ ಮುಕ್ತಿ ಕೊಡುವವಳಿಗೆ 4 [ದೃಡದಿ ] ಬಲಭಾಗದಿ ಭಗೀರಥಿ ಬರುತಿರೆ ಯೆಡದ ಭಾಗದಲಿಯಮುನೆ ಬರುತಿರಲು ನಡುವೆ ಸರಸ್ವತಿ ತ್ರಿವೇಣಿಯೆಂದೆನಿಸಿ ಪೊಡವಿಗಧಿಕವಾಗಿ ಮೆರೆಯುವ ದೇವಿಗೆ 5 ಬಂದು ಭಾಗೀರಥಿಗೆ ವಂದನೆಗಳ ಮಾಡಿ ತಂದು ಪುಷ್ಪವ ತುಳಸಿ ಕ್ಷೀರವನು ಚಂದದಿಂ ಪೂಜೆಮಾಡಿ ವೇಣಿಮಾಧವಗೆ ಅಂದು ವಂದಿಸಿದವರಿಗೆ 6 ಸೃಷ್ಟಿಯ ಮೇಲುಳ್ಳ ಜನರೆಲ್ಲರು ಬಂದು ಇಷ್ಟಾರ್ಥಗಳನು ಕೊಡುವೆನೆಂದೆನುತಲೆ ಪಾದ ತೋರಿಸುವಳು 7
--------------
ಯದುಗಿರಿಯಮ್ಮ
ಗಣೇಶ ಬಾರೋ ಕರುಣವ ಬೀರೋ ಪ ತ್ರಿಗುಣಯ್ಯನ ಸುತ ಮುನಿಜನಹಿತ ಅ.ಪ ಭಗ್ನವೆಗೈಯುತಲಿಶ ತೃಘ್ನಾಗ್ರಜನಣ್ಣನನಿ- ರ್ವಿಘ್ನತೆಯಲಿ ಭಜಿಸುವದಕೆ 1 ಮೂಲಾಧಾರನಿಲಯರಿಪು ಕಾಲಗಿರಿಸುತಾಬಾಲ ಪಾಲಿಸುತಿಹೆ ಕರುಣಾಳೊ 2 ತಾಮಸದಾನವ ಹರಗುರು ರಾಮವಿಠಲನಡಿಗಳನಿ- ಕಾಮಿತ ಫಲಗಳ ಕೊಡುವಡೆ 3
--------------
ಗುರುರಾಮವಿಠಲ
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೂಳ್ಯಾಗಿ ಮೆರೆಯಣ್ಣ ಶ್ರೀಹರಿ ಗೂಳ್ಯಾಗಿ ಮೆರೆಯಣ್ಣ ಪ ಗೂಳ್ಯಾಗಿ ಮೆರೆಯೆಲೊ ಮೂಳಮಾನವರ ಆಳಾಗಿ ಕೆಡದ್ಯಮದಾಳಿಯ ಗೆಲಿದು ಅ.ಪ ಅದ್ರಿಧರನಡಿಯ ಪ್ರೇಮವೆಂಬ ಮುದ್ರೆಯನ್ನು ಪಡೆಯೋ ಕ್ಷುದ್ರದಾನವ ಹರರುದ್ರಾದಿನುತ ಸ ಮುದ್ರಶಾಯಿಧ್ಯಾನ ಭದ್ರಮಾಡಿಟ್ಟುಕೊಂಡು 1 ಕುಜನರ ಸಂಗ ತಳ್ಳೋ ಸುಸಂಗ ಭುಜವ ಬೆಳೆಸಿಕೊಳ್ಳೋ ಭುಜಗಶಯನನ ನಿಜಚರಣದ ಮಹ ಭಜನೆವೆಂದೆಂಬುವ ಝಾಲ ಧರಿಸಿಕೊಂಡು 2 ತಾಮಸವನ್ನು ನೀಗಿ ಸುಜನರ ಪ್ರೇಮಪಾತ್ರನಾಗಿ ಶಾಮಸುಂದರ ಶ್ರೀರಾಮನಾಮ ತ್ರಿ ಭೂಮಿಗಧಿಕೆಂದು ನಿಸ್ಸೀಮ ಡುರುಕಿ ಹೊಡಿ 3
--------------
ರಾಮದಾಸರು
ಗೋಕುಲ ಆನಂದ ಲೀಲಾ | ಘನ ಸುಂದರ ರುಕ್ಮಿಣಿಲೋಲ ಶ್ರೀಕರ ಶುಭದಾಯಕ ವರ | ಗೋಪಾಲ ಬಾಲ ಪ ಮಣಿರಂಜಿತ ಭೋಗರಾಗವಿಮಲ ಶೃಂಗಾರಶೀಲ ಸುರಪಾಲ ಸಂಸೇವ್ಯ ಗಾನಲೋಲ ಅ.ಪ ಪದ್ಮಲೋಚನ ಪರಿವೃತ ಶರಣವತ್ಸಲ ಸರ್ವಜ್ಞ ಸುಭಾಷಿತ ಸದ್ಭಾವ ವಿನಯಾದಿ ಭೂಷಿತ ಚಿತ್ರ ವಿಚಿತ್ರ ಕರ್ಷಿತ ಸೂತ್ರಾ ಮನಸಿಜ ಗಾತ್ರಾ | ಸುವಿನೀತ ಗೋಪೀನಂದನ 1 ಮಣಿಪೀಠ ಮಂಡಿತಾ | ಕಿರೀಟ ಮಣಿಮಯ ರಾರಾಜಿತ | ಗೋಪಿಕಾನತ ಪಾಂಡವಪಕ್ಷ ದನುಜವಿಪಕ್ಷ |ಕಮಲದಳಾಕ್ಷ ದಾನವಶಿಕ್ಷ ಶ್ರೀವನಮಾಲಿಕಾವಕ್ಷ | ಮಾಂಗಿರಿನಾಥಾ ದೀನರಕ್ಷ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲದಾಸರಾಯ ಮಾಂಪಾಲಯ ಪ ಗೋಪಾಲದಾಸರಾಯಾ ಅಪಾರ ಮಹಿಮ ಮ- ತ್ಪಾಪಗಳೋಡಿಸಿ ಕಾಪಾಡೊ ಗುರುರಾಯ ಅ.ಪ ಸುಜನ ವಿಜಯದಾಸರಿಗೆ ನಿಜ ಶಿಷ್ಯರೆನಿಸಿದ 1 ಧನ್ವಂತ್ರಿ ಜಪದಿ ಜಗನ್ನಾಥದಾಸರ ಬನ್ನವ ಬಿಡಿಸಿದ ಘನ್ನ ಮಹಿಮಗುರು 2 ಏನು ಕರುಣವೋ ಶ್ರೀ ಮಾನವಿ ದಾಸರಿಗೆ ಸಾನುರಾಗದಿ ಆಯುರ್ದಾನವ ಮಾಡಿದ 3 ಪದುಮನಾಭನ ಪದಪದುಮ ಮಹಿಮೆಗಳ ವಿಧ ವಿಧ ಪದಸುಳಾದಿಗಳಿಂದ ತುತಿಸಿದ 4 ಶರಣು ಜನಕೆ ಸುರತರುವೆನಿಸಿ ಧರೆಯೊಳು ಮೆರೆವ ' ಕಾರ್ಪರ ನರಹರಿ’ ಯ ನೊಲಿಸಿದಂಥ5
--------------
ಕಾರ್ಪರ ನರಹರಿದಾಸರು
ಗೋಪಿ ದಾನವ ಕೋರುವಿ ಎಂಥಾ ಕೂಸಮ್ಮ ಶ್ರೀ- ಕಾಂತ ಸುಜನಮಾನಸಂತರಂಗದಿ ನಿತ್ಯ ನಿಂತು ನಲಿವ ಕೃಷ್ಣ ಪ. ಕ್ಷೀರ ವಾರಿಧಿಯಲ್ಲಿದ್ದನಾದರು ಬೆಣ್ಣೆ ಕ್ಷೀರವ ಕದ್ದು ಮೆದ್ದ ತೋರುವ ತತ್ವ ಶುದ್ಧ ಆದರು ಬಹು ಕ್ರೂರ ರಕ್ಕಸರ ಗೆದ್ದ ನೀರಜಾಲಯ ರಮಣ ಗೋಕುಲ ನಾರಿಯರ ಮೇಲ್ ಬಿದ್ದು ರಮಿಸಿದ ವಾರಿಜಾಸನ ವಂದ್ಯ ಸುರವರ ವೈರಿ ಶಕಟನ ಕಾಲಲೊದ್ದ 1 ಸಂಸಾರಾರ್ಣವ ತಾರಕನಾದರು ಪಾಂಡು- ವಂಶ ರಕ್ಷಣಕಾರಕ ಹಂಸಾದ್ಯ ಸುರಮಾರಕನಾದರು ನಾನಾ ಹಿಂಸಾದೋಷ ನಿವಾರಕ ಕಂಸಮರ್ದನ ವೈನತೇಯ ಶು- ಪಾದ ಕಮಲ ತಿ- ಲಾಂಶ ದೋಷರಹಿತ ಗೋಪಾ- ಲಾಂಶವೇರಿ ವಿನೋದಗೊಳುತಿಹ 2 ಶುದ್ಧ ಪೂರ್ಣಾನಂದ ಸುಜನಾರ್ತಿವಾರÀ ನಿ- ಷಿದ್ಧ ಕಲುಷದೂರಾ ಕ್ರುದ್ಧ ಖಳವಿದಾರ ಕಿಂಕರ ಪರಿಚರ ಸಿದ್ಧಾಂತ ಶ್ರುತಿ ಶೇಖರಾ ಬುದ್ಧ ರೂಪದಿ ಭೂತಪತಿಗೆ ಸ- ಮೃದ್ಧಿ ಜಯಪಾಲಿಸಿ ಸುರೋತ್ತಮ ಸಿದ್ಧವಂದಿತ ಶೇಷಗಿರಿಯೊಳ- ಗಿದ್ದು ದಾಸರನುದ್ಧರಿಸುತಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ