ಒಟ್ಟು 159 ಕಡೆಗಳಲ್ಲಿ , 56 ದಾಸರು , 149 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಕು ಸಾಕೊ ನಿನ ಸಂಗ ಶ್ರೀಕಾಂತ ನೃಹರಿ ಯಾಕಿಂತು ನಿರ್ದಯವೊ ಭಕ್ತರೊಳು ನಿನಗೆ ಪ. ಕರಿಗಿರಿ ಶಿಖರದಲಿ ನೆಲಸಿರುವ ನೃಹರಿಯೆ ಗುರುಗಳು ಸಹಿತದಲಿ ನಿನ್ನ ಗಿರಿ ಏರಿ ಪರಮ ಸಂತೋಷದಲಿ ದರುಶನಕೆ ನಾ ಬರಲು ಸಿರಿಸಹಿತ ಪವಡಿಸಿ ಕದವ ಹಾಕಿಸಿದೆ 1 ಬಂದ ವರ ಭಕ್ತರಿಗೆ ಸಂದರುಶನವ ಕೊಡದೆ ಮಂದಿರದ ಬಾಗಿಲ್ಹಾಕಿಸಿದೆಯಲ್ಲೊ ದೇವ ಇಂದೆನ್ನ ಮನಕೆ ಪರಿತಾಪವನೆ ಕೊಟ್ಟೆ ಚಂದವೇ ನಿನಗಿನ್ನು ಮಂದರೋದ್ಧರನೆ2 ನಿನ್ನ ದರುಶನ ಕೊಡದ ಘನ್ನ ಪಾಪವನೆ ನಾ ಮುನ್ನೇನ ಮಾಡಿದೆನೊ ಪನ್ನಗಶಯನ ಎನ್ನ ಕೊರಗಿಸುವುದು ಇನ್ನು ನಿನಗೆ ಹಿತವೆ ಮನ್ನಿಸಿ ಸಲಹಬೇಕಿನ್ನು ಶ್ರೀ ಹರಿಯೆ 3 ಕದವೇಕೆ ಹಾಕಿಸಿದ್ಯೊ ಪದುಮನಾಭನೆ ದೇವ ಒದಗಿ ಬಹ ಭೃತ್ಯರನು ಒದೆದು ನೂಕಿ ಯದುವೀರ ನಿನಗಿನ್ನು ಎಷ್ಟು ನಿದ್ರೆಯೊ ಕಾಣೆ ಕದನವಾಡುವೆ ನಿನ್ನೊಳು ಪ್ರಹ್ಲಾದವರದ 4 ವರಭಕ್ತರು ಕಾದಿರಲು ದರುಶನ ಕೊಡದೆ ನೀ ಸಿರಿಸಹಿತ ಪವಡಿಸಿದೆ ಘನವೆ ನಿನಗಿನ್ನು ಸುರವಂದ್ಯ ಗೋಪಾಲಕೃಷ್ಣವಿಠ್ಠಲ ಹೃದಯ ಅರಮನೆಯೊಳು ನೆಲಸಿ ಸಲಹಯ್ಯ ಸತತ 5
--------------
ಅಂಬಾಬಾಯಿ
ಸಾರಿದ ಭಕ್ತಸಂಸಾರಿ ಮಾಲಿಂಗ ಕ್ಷೀರ ಗ್ರಾಮದಿ ನಿಂತ ಧೀರ ಮಾಲಿಂಗ ಪ ಹರ ಹರ ಮಹಾದೇವ ಶಿವಮಾಲಿಂಗ ವರ ಶಂಭೊ ಗಿರಿವಾಸ ಶಂಕರ ಮಾಲಿಂಗ ಉರಗ ಭೂಷಣ ಗಂಗಾಧರನೆ ಮಾಲಿಂಗ ಪರದೈವ ಶಶಿಮೌಳಿ ಗರುವ ಮಾಲಿಂಗ 1 ಖಂಡಲಪತಿಯೆ ದೋರ್ದಂಡ ಮಾಲಿಂಗ ತಂಡದ ಸುರರೊಳ್ ನಂಜುಂಡ ಮಾಲಿಂಗ ರುಂಡಮಾಲೆಯ ಧರಿಸಿಕೊಂಡ ಮಾಲಿಂಗ ಕೆಂಡಾಕ್ಷತೇಜ ಮಾರ್ತಾಂಡ ಮಾಲಿಂಗ 2 ಮಾರಹರನೆ ಶ್ರುತಿಸಾರ ಮಾಲಿಂಗ ಧೀರ ಬಾಣನ ದ್ವಾರ ಸಾರಿ ಮಾಲಿಂಗ ಮೂರುಪುರ ವೀರ ಸಂಹಾರಿ ಮಾಲಿಂಗ ಘೋರ ಸಂಸಾರ ಭವದೂರ ಮಾಲಿಂಗ 3 ಬ್ರಹ್ಮಾದಿ ಸುರವಂದ್ಯ ಹರ್ಮಿ ಮಾಲಿಂಗ ನಿರ್ಮಲ ರೂಪಕ ಧರ್ಮಿ ಮಾಲಿಂಗ ಕರ್ಮಬಂಧದ ನರವರ್ಮಿ ಮಾಲಿಂಗ ಉರ್ವಿಯೊಳು ನೀ ಬಹಳ ಪೆರ್ಮಿ ಮಾಲಿಂಗ 4 ನೀಲಕಂಠನೆ ನಿಗಮಶೀಲ ಮಾಲಿಂಗ ಪಾಲ ಕರಶೂಲ ಕಪಾಲಿ ಮಾಲಿಂಗ ಕಾಲ ಕಲ್ಪಾಂತಕ ಜಾಲ ಮಾಲಿಂಗ ಲೋಲಾಸ್ಥಿಮಾಲ ಸುರಮೂಲ ಮಾಲಿಂಗ 5 ಪ್ರಣವ ರೂಪಕ ಪಾರ್ವತಿ ಮಾಲಿಂಗ ತ್ರಿಣಯ ಗಣಸೇವಪರ ಧಣುರೆ ಮಾಲಿಂಗ ಮಣಿ ಕರ್ಣಾಭರಣ ಮಾಲಿಂಗ ಅಣುಮಹಾರೂಪ ಗುಣನಿಧಿಯೆ ಮಾಲಿಂಗ 6 ಪಂಥ ಬೇಡೆನ್ನೊಳು ನಿಶ್ಚಿಂತ ಮಾಲಿಂಗ ಸಂತತ ಸಲಹೆನ್ನ ಕಾಂತ ಮಾಲಿಂಗ ಅಂತರಾತ್ಮಕನಾದ ಶಾಂತ ಮಾಲಿಂಗ ಚಿಂತಿತಾರ್ಥವ ತೋರುವಂಥ ಮಾಲಿಂಗ 7 ಬೇಡಿದ ವರಗಳ ನೀಡೊ ಮಾಲಿಂಗ ಮಾಡಿದ ಸೇವೆಯ ನೋಡೊ ಮಾಲಿಂಗ ಜೋಡಾಗಿ ನಿನ್ನೊಳು ಕೂಡೊ ಮಾಲಿಂಗ 8 ಭೂಮಿಗೆ ವರಾಹತಿಮ್ಮಪ್ಪನಂತೆ ಗ್ರಾಮ ಮಂದಿರದೊಳು ನೆಲಸಿಹನಂತೆ ಪ್ರೇಮದಿ ಅದನೆಲ್ಲ ಕಡಿದುಕೊಡುವಂತೆ ಈ ಮಹಾ ಮಾಲಿಂಗ ಸ್ವಾಮಿ ದಯವಂತೆ 9
--------------
ವರಹತಿಮ್ಮಪ್ಪ
ಸಿರಿಯು ಬೇಡೆನಗೆ ಈ ಬರಿಯ ವೈಭವದ ಪರಿಯು ಬೇಡವೆನಗೆ ಪ ಪರಿಪರಿಯಲಿ ನಿನ್ನ ಚರಣ ಸೇವೆಯಲಿ ಪರತರ ಸುಖಗಳ ಅರಿವು ಬೇಕಲ್ಲದೆ ಅ.ಪ ಮರೆತೆನೊ ನಿನಗಾಗಿ ಚೆಲುವ ಸತಿಸುತರ ತೊರೆದೆನೋ ಬಹು ವಿಧ ಪ್ರೇಮಪಾಶಗಳ ಬೆರಗಾದೆನೋ ದೇವ ಮರುಕದಿಂದೆನಗೆ ನೀ ವರ ಮಾರ್ಗವ ತೋರೋ ಮುರಳೀಧರನೆ 1 ಮಂದಮತಿಗಳೆನ್ನ ನಿಂದಿಸುತಿರುವುದಾ ನಂದವೇನೋ ನಿನಗೆ ಸುಂದರ ಮೂರುತಿ ಕುಂದಿ ಕುಂದಿದ ಮನ ಮಂದಿರದಲಿ ನಿಲ್ಲೋ ಇಂದಿರಾ ರಮಣನೆ 2 ಎನ್ನ ಕುಂದುಗಳನ್ನು ಮನ್ನಣೆ ಮಾಡಿ ಸಂ ಪನ್ನತೆ ಎನಗೀಯೋ ಘನ್ನ ಮಹಿಮ ಸುಪ್ರಸನ್ನವಿಠ್ಠಲನೇ ನಿನ್ನವನೆನಿಸೆಲೋ ಪನ್ನಗಶಯನನೇ 3
--------------
ವಿದ್ಯಾಪ್ರಸನ್ನತೀರ್ಥರು
ಸುಜನ ಪ್ರೇಮ ಸದ್ಗುರುರಾಯ ಪ ಕಾಮಿತದಾಯಕ ಕಡುಗಲಿ ಭೀಮ ಅ.ಪ ಆಶಾಶರಧಿಯನು ದಾಟಿದ ಮ ಹಾಶೂರನು ನೀನು ಮೋಸಗಾರರಿಗೆ ಮೃತ್ಯುದೇವತೆಯೆ ದಾಶರಥಿಯ ಕಾರ್ಯ ಧುರಂಧರನೆ 1 ಮರ್ಮವರಿತು ವುಳುಹಿ ಧರ್ಮೇತರ ನಿಲಯಗಳ ದಹಿಸಿದೈ 2 ಸುರ ಕಪಿ ಚಕ್ರವರ್ತಿ ಗುರುರಾಮ ವಿಠಲನ ದಾಸೋತ್ತಮ ಮ- ಧ್ವರಾಜ ನಿಜ ಶರಣರ ಕಲ್ಪತರುವೇ 3
--------------
ಗುರುರಾಮವಿಠಲ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಸ್ವಾಮಿಯ ನೋಡುವ ಬನ್ನಿ ನಮ್ಮ ಸುಪ್ರೇಮೀಯ ನೋಡುವ ಬನ್ನಿ ಪ ಎಂಟು ಮೈಯವನಂತೆ ಎಸೆವೈದು ಮುಖವಂತೆ ಯರ್ದಾಂಗಿಯ ಪಡೆದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 1 ಮಾಧವನೆ ಶರವಂತೆ ಭೂಧರನೆ ಧನುವಂತೆ ಭೂಮೀಯೇ ರಥವಂತೆ ಸೊಮ ಸೂರ್ಯರೇ ಗಾಲಿಗಳಂತೆ ಅಂತ ಸ್ವಾಮಿಯ ನೋಡುವ ಬನ್ನಿ 2 ವಾಜಿ ವೇದಗಳಂತೆ ಒದನೊದಗಿ ಬಹವಂತೆ ಅಮೃತ ಶರಧಿಯ ಅಲ್ಲಿ ಬತ್ತಳಕೆಯಂತೆ ಅಂತ ಸ್ವಾಮಿಯ ನೋಡುವ ಬನ್ನಿ 3 ಹರಿಯವರ ಶರವಂತೆ ಅಜನು ಸಾರಧಿಯಂತೆ ದುರುಳ ತಾರಕ ಸುತರ ಪುರವ ಮುರಿದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 4 ಇದುವೆ ಭೂ ಕೈಲಾಸವೆಂದು ತೋಷದಿ ಬಂದು ಸಾಕಾರವಾಗಿಲ್ಲ ನೆಲಸಿಹರಂತೆ ಮುದದಿ ಲೋಕಗಳೆಲ್ಲ ಕೈವಶವಂತೆ ಅಂತಸ್ವಾಮಿಯ ನೋಡುವಬನ್ನಿ 5
--------------
ಕವಿ ಪರಮದೇವದಾಸರು
ಹರಿಯೇ ಧೊರೆಯೇ ಪ ಕಂದನ ನುಡಿಕೇಳಿ ಕಂಬದಿಂದ ಬಂದೆ ಅಂದು ಅಹಲ್ಯೆಯ | ಬಂಧನ ಬಿಡಿಸಿದೆ ಕರಿಮೊರೆಯಿಡಲಾಕ್ಷಣ ಬಂದು ನೀ ನಕ್ರನ್ನ ಸೀಳಿದ ಚಕ್ರಧರನೆ ನೀನು 1 ತರಳ ಧೃವನ್ನಾ ತೊಡೆಯಿಂದ ನೂಕಲು ಕಡುಭಯದಿಂದ ವನದಲ್ಲಿ ಚರಿಸುತ್ತ ಘನತಪಗೈಯಲು ಧೃಡ ಭಕುತಿಗೆ ಮೆಚ್ಚಿ ಒಡನೆ ಓಡಿ ಬಂದು ಘನತರ ಸಂಪದವತ್ತೆ 2 ಪರಮ ಪುರುಷೋತ್ತಮ ನೀನಲ್ಲವೆ ಮೊರೆಹೊಕ್ಕೆನು ನಿನ್ನ ಕರುಣಿಗಳರಸನ್ನ ತ್ವರಿತದಿಂದಲಿ ಕಾಯೊ ವೆಂಕಟವಿಠಲಾ 3
--------------
ರಾಧಾಬಾಯಿ
ಹರಿಹರಿ ಹರಿಯೆನ್ನಿ ಮಂದರಧರನೆ ಗತಿಯೆನ್ನಿ ದೀನ ದಯಾಕರನು ದಿವಿಭುವಿ ಪ. ಮಾನ ಭರಾಕರನು ನೀನೆಂದೊರವರನು ದುರಿತ- ಹೀನರ ಮಾಡುವನು 1 ತರಳನ ಮೊರೆ ಕೇಳಿ ವರ ನರ ಹರಿಯ ರೂಪವ ತಾಳಿ ದುರುಳ ಹಿರಣ್ಯಕನಾ ಕರುಳನು ಕೊರಳೊಳು ಧರಿಸಿದನಾ 2 ಗಜರಾಜನ ಕಾಯ್ದಾ ಬಾಣನ ಭುಂಜ ಪುಂಜವ ಕೊಯ್ದಾ ಗಜಪುರವರಗೊಲಿದಾ ಚರಣಾಂ- ಬುಜವೀವುತ ನಲಿದಾ 3 ನೆನೆದಲ್ಲಿಗೆ ಬರುವಾ ನಂಬಿದ ಜನರ ಸಂಗಡವಿರುವಾ ಅನುಗಾಲವು ಪೊರೆವಾ ಮನಸಿಜ ಜನನಿಯನಪ್ಪಿರುವಾ 4 ದಾಸರ ಸಲಹುವದು ಶೇಷ ಗಿ- ರೀಶನ ಮಹಾ ಬಿರುದು ದೋಷಗಳನು ತರಿದು ಈರೆರ- ಡಾಸೆ ಪೂರಿಪ ನೆರೆದೂ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ ||ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ ||ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ ||ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮ
--------------
ಪ್ರಸನ್ನ ಶ್ರೀನಿವಾಸದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಎನ್ನ ತಂದೆ ಎನ್ನತಾಯಿ ಎನ್ನ ಬಂಧುವೆ ನೀಇನ್ನಾರೊಡೆಯರಿಲ್ಲ ಕಾಯೊ ಲಕ್ಷ್ಮೀನಲ್ಲ ಪ.ಕರುಣ ನೋಟದಿ ನೋಡಿ ಹೊರಡಿಸಿದ ತಂದೆ ಮಂದರಧರನೆ ಬಸುರೊಳಿಟ್ಟ ತಾಯಿ ನೀನುಧÀರೆಗೆ ಪರಗತಿಗೆ ನೆಲೆಗೊಡುವ ಬಾಂಧವ ನೀನುದುರಿತಕರಿಗಣಕೆ ಸಿಂಹಾಸ್ಯ ನೀನು1ಷÀಟ್ಕರ್ಮ ಸಂಗ್ರಹವ ಮಾಡಿಸುವ ತಂದೆ ನೀದುಷ್ಕರ್ಮ ಖಂಡಿಸುವ ತಾಯಿ ನೀನುಷಟ್ಕೋಣ ಬಲದಿರುವ ತ್ರಿಕೂಟಾದ್ರಿವಾಸ ವಷಟ್ಕಾರಗೈದೆ ಕೌರವ ಕುಲಾರಿಯು ನೀನು 2ಶ್ರುತಿವಿರೋಧಿಗಳ ಮೋಹಿಪ ಸುರರ ತಂದೆ ನೀಅತುಳಧರ್ಮಾತ್ಮಕರ ತಾಯಿ ನೀನುಕ್ಷಿತಿಗೆ ವೈಕುಂಠವೆನಿಪ ಪ್ರಸನ್ವೆಂಕಟ ಬಂಧುಗತಿಗೆ ಗತಿಯಾದಾದಿಪುರುಷ ನಮೋ 3
--------------
ಪ್ರಸನ್ನವೆಂಕಟದಾಸರು
ಗುರುಪದವ ನಂಬಿ ಹರಿಪದವ ಕಾಂಬೆಮರುತ ಸಂತತಿಗೆ ನಮಿಸುವೆ ನಮಿಸುವೆ ಪ.ಹರಿಪದಕೆ ಅಚ್ಛಿನ್ನ ಭಕುತಿ ಪರಿಪೂರ್ಣ ಶ್ರೀಹರಿಕಾರ್ಯದಲಿ ಧುರಂಧರನೆನಿಸುವಹರಿಭೃತ್ಯಜನಕೆ ಹಿತಕಾರಿ ಔದಾರಿ ಜಗದ್ಗುರು ಪರಮಹಂಸ ಮಧ್ವತ್ರಿರೂಪಿಯ 1ತತ್ವಸಾಗರ ತಿಮಿಂಗಿಲ ಪದ್ಮನಾಭಮುನಿಕರ್ತಮೂಲರಾಮ ಮೆಚ್ಚಿದ ನರಹರಿಯಮತ್ರ್ಯ ಮಾಯಿಜನ ತುಹಿನರವಿಭಮಾಧವಾಭಿಜÕ ಅಕ್ಷೋಭ್ಯತೀರ್ಥೆನಿಪ ಮಲ್ಲರ 2ಸುಖತೀರ್ಥಗಂಭೀರ ವಾಕ್ಯವಾರಿಧಿಚಂದ್ರಅಕಳಂಕ ಜಯವರ್ಯ ಯತಿಸಮೂಹಮಕುಟಮಣಿ ವಿದ್ಯಾಧಿರಾಜ ನಿರ್ಮಲಕಾಯಸುಕವೀಂದ್ರ ವಾಕ್ಸಿದ್ಧ ವಾಗೀಶರ 3ಗುರುಭಕುತಿ ನಿಸ್ಸೀಮ ರಾಮಚಂದ್ರಾಖ್ಯಯತಿಗುರುಆಜ್ಞಾಪಾಲ ವಿದ್ಯಾನಿಧಿಗಳದುರುವಾದಿಗಜಮೃಗಪ ರಘುನಾಥ ತೀರ್ಥಶ್ರುತಿಪರಮಾರ್ಥ ಪರಿಚರ್ಯ ರಘುವರ್ಯರ 4ವೈರಾಗ್ಯ ವೈಭವಾನ್ವಿತ ರಘೋತ್ತಮ ಮುನಿಪವೈಷ್ಣವ ತತ್ವಜÕ ವೇದವ್ಯಾಸರಕೈವಲ್ಯಮಾರ್ಗಜÕ ವಿದ್ಯಾಪತಿಯು ಹೊನ್ನಮೈಯ ಮರುತಂಶ ವಿದ್ಯಾಧೀಶರ 5ವೇದಾಮೃತಾಬ್ಧಿಯೊಳು ಮಗ್ನ ವೇದನಿಧಿಗಳಸಾಧುನಿಕರಲಲಾಮ ಸತ್ಯವ್ರತರಬಾದರಾಯಣರಾಮಪಾದರತ ಸತ್ಯನಿಧಿಮೇದಿನಿಗೆ ಕಲ್ಪತರು ಸತ್ಯನಾಥರ 6ಶ್ರೀ ಸತ್ಯನಾಥರತ್ನಾಕರಕರೋದ್ಭವಕುಮುದಅಶೇಷಯಾಚಕ ಸುಖದ ಸುಗುಣಶ್ರೀ ಸತ್ಯಾಭಿನವ ಮುನಿ ಭಾಗವತೇಢ್ಯಜÕಶಾಶ್ವತ ಪರೋಕ್ಷ ಗುರುಪದನಿಷ್ಠರ 7ದುಷ್ಟ ಪರವಾದಿ ನರಕುಲಿಶ ಜಿತಕಾಮ ತಪೋನಿಷ್ಠ ವಿದ್ಯೋನ್ನತ ವಿಚಾರಶೀಲಶಿಷ್ಟ ಜನಪಾಲಶ್ರುತಿಜಲಾಭ್ಧಿ ಕಲ್ಲೋಲಇಷ್ಟಾರ್ಥದಾತ ಸತ್ಯಾಧೀಶರ 8ಕೃಷ್ಣ ಪಾದಾಸಕ್ತ ಗುರುಕೃಪಾಸಂಯುಕ್ತಇಷ್ಟಾರ್ಥದಾತ ಸತ್ಯಾಧಿರಾಜರಸೃಷ್ಠೇಶ ಪ್ರಸನ್ನವೆಂಕಟಪತಿಯಅನವರತತುಷ್ಟೀಕರಿಸುವ ವಾಯುಮತ ಮಹಿಮರ 9
--------------
ಪ್ರಸನ್ನವೆಂಕಟದಾಸರು
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು
ಪಾಲಿಸು ಗಣನಾಥ ನೀ ಎನ್ನ ಮೇಲೆ ಕೃಪೆಯ ನಿರತ ಪಸ್ಥೂಲ ಶರೀರ ವಿಶಾಲ ಲೋಚನ ಸುರಜಾಲ ವಂದಿತಜಾಲವಂದಿತ ಗುಣಶೀಲ ಸಜ್ಜನಪಾಲ ಅ.ಪಮೂಷಿಕವಾಹನನೆ ವಿಘ್ನೇಶ್ವರ ಪಾಶಾಂಕುಶಧರನೆಈಶ ನಂದನ ನಿನ್ನ ದಾಸನೆನಿಸೊ ಎನ್ನಆಸೆಯ ಸಲಿಸು ವಿಘ್ನೇಶ ವಿನಾಯಕ 1ಕಾಮಿತಫಲಪ್ರದನೇ ವಿನಾಯಕ ಸ್ವಾಮಿ ಶನೇಶ್ವರನೆಸಾಮಜವದನನೇ ಶ್ಯಾಮಲವರ್ಣನೇಕಾಮವರ್ಜಿತ ಗುಣಸ್ತೋಮ ವಂದಿತನೇ 2ಗಿರಿಜೆಯ ವರಸುತನೇ ಲಂಬೋದರ ಉರಗನ ಸುತ್ತಿಹನೇಕರದಿ ಮೋದಕಹಸ್ತವರಏಕದಂತನೆಶರಣು ನಿನಗೆ ಗೋವಿಂದನ ಸಖನೆ 3
--------------
ಗೋವಿಂದದಾಸ