ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(1) ಸತಿ-ಪತಿ ಭಾವದ ಸ್ತುತಿಗಳು (ಜಾವಡಿಗಳು) ಎಂದಿಗೆ ತೀರಿದೆ ಸುಂದರನಾಯಕಿ ಅಂಗಜ ಬಾಣದ ಅತುರವನ್ನೂ ಪ ಚಂದ್ರಮುಖಿಯೇ ನೀ ನಾದಿನ ಹೇಳಲ್ ಬಂದೆನುನಾನಹುದೇ ಭಾವಕರನ್ನೇ ಕುಂದುಗಳನೀಪರಿ ಉಸುರುವೆ ಉಚಿತವೆ ಸಂದಣಿಯಾಗೆನ್ನೊಳಿಂದಿನ ಕಾಲಯೆಂದಿಗೆ 1 ಬಲ್ಲೆನು ನಿನ್ನಂ ಭಾವದ ಸೊಲ್ಲಂ ಬೆಲ್ಲದ ಮಾತನಾಡಿ ಕಳುಹಿಪೆನೇಂ ಬೊಲ್ಲಿದಿಗೆ ಸಾಕುಬಿಡು ಇಂಪಿನ ಕವಚತೊಡು ಸಲ್ಲಿದೆ ಸುಂಕವ ಸಮ್ಮತಿಯಿಂದಾ 2 ಮಾರನು ಬಂದೂ ಮನದೊಳು ನಿಂದೂ ದಾರಿಯನು ತಪ್ಪಿಸಿ ಧಣಿಸುವ ಕಾಣೆ ಓರದೆ ಕೋರಿದ ಕಾರ್ಯವ ತೀರಿಸೆ ಕಾಂಕಳು ನೀನಾಗಿ ಕಾಮಶಾಸ್ತ್ರವಂ 3 ಈ ಸುಖಸಂಪದ ಈಶ್ವರ ಬಲ್ಲಂ ಆಸೆಯ ತೋರಿ ನೀ ಮೋಸವಗೆಯ್ವೆ ದಾಸನು ವಂದಿಪ ಸುಖತೋರಿದೆ ದೇಶಿಕನಲೆ ತುಲಸಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
(2) ಆಂಡಾಳ್ ಸ್ತುತಿ ಆಂಡಾಳ್ ದೇವಿ ಶರಣೆಂಬೆ ಶ್ರೀಗೋದಾದೇವಿ ಪೊರೆಯೆಂಬೆ ಪ ಮುಡಿದು ಕೊಟ್ಟ ನಾಯಕಿ ತಾಯೆ ರಂಗನಾಥನ ಪರಮಪ್ರಿಯೆ ಮುಡಿಪುಹೊತ್ತು ಸೇವಿಪೆವಮ್ಮ ಶರಣಾಗತಿಯನ್ನ ಅ.ಪ ಅಂದುಗೋಪಿಯರು ಕೃಷ್ಣನ ಸೇರಲು ಚಂದದಿಮಾಡಿದ ಕಾತ್ಯಾಯನಿವ್ರತವ ತಂದೆಯಮತದಿ ಹೊಂದಿಸೇವಿಸಿದೆ ಒಂದು ತಿಂಗಳ ತಿರುಪ್ಪಾವೈಯಲಿ 1 ದಿನಕೊಂದು ಪಾಶುರ ಕಟ್ಟಿಪಾಡುತ ದಿನದಿನ ಸಖಿಯರೊಳು ಮಾರ್ಗಳಿಯಲಿ ದಿನ ಮೂಡುವಮೊದಲೆ ತಣ್ಣೀರ್ಮೀಯುತ ದಿನಪ ಕೃಷ್ಣನ ಕಲೆತ ಕನ್ಯಾಮಣಿಯೆ 2 ಧನುರ್ಮಾಸವನು ಧರಿಸಿ ಭಜಿಸುವೆವು ಧನಂಜಯನ ತೋರೆ ಸಿರಿಬಾಯ್ನುಡಿಯೆ ಧನಕನಕಚಂದನೂ ಬಲ್ಲೆವು ತಾಯೆ ತನು ಕರಗಿಸು ಜಾಜಿಪುರೀಶನಡಿಯಲ್ಲಿ 3
--------------
ನಾರಾಯಣಶರ್ಮರು
(2) ತುಳಸಿರಾಮದಾಸರ ಅಂತಿಮ ಯಾತ್ರೆ ಬೆಂಗಳೂರಿಗೆ ಹೋಗಿ ಬಂದರೂ ಮೈಸೂರಿಂದಾ ಪ ಬೆಂಗಳೂರಿಗೆ ಹೋಗಿಬಂದ ಜಂಗಮನು ತಾನಾಗಿ ನಿಂದಾ ಕಂಗಳೆರಡರ ಮಧ್ಯ ತಾ ನಿಜ ಲಿಂಗನಾಗಿ ಕಾಣಬಂದಾ ಅ.ಪ ಬಿದಿಗೆ ಪಾಡ್ಯವ ಮಾಡಿ ನೋಡೆಂದಾ ಬಂದಾಗ ಬರದಾ ವಿಧಿಯ ಬರಹವ ತೊಡೆದುಕೊಂಡೆಂದ ಕದಿವ ಕಳ್ಳರ ಕಂಡುಹಿಡಿದು ಮದನಪಿತನಾ ಯುಧದಿ ಹೊಡೆದೂ ನದಿಯ ಸ್ನಾನವ ಮಾಡಿ ನಿಜ ಪದವಿ ತೋರಿದ ನಮ್ಮ ದೇಶಿಕ 1 ಸೃಷ್ಟಿ ತದಿಗೆಯೊಳಿರಲು ಬೇಡೆಂದಾ ಅಲ್ಲಾಗ ತನ್ನ ಇಷ್ಟದೈವದ ಪೂಜೆ ಮಾಡೆಂದಾ ದೃಷ್ಟಿಗೋಚರಮಾದ ಗುರುವು ಸೃಷ್ಟಿಗಧಿಕಾ ತುಲಶಿರಾಮನ ಇಷ್ಟದಿಂದಲಿ ಭಜಿಸಿನೋಡಲು ಸ್ಪಷ್ಟನಾಗಿ ಕಾಣುತೈತೆ 2
--------------
ಚನ್ನಪಟ್ಟಣದ ಅಹೋಬಲದಾಸರು
(2) ವೇದಾಂತದೇಶಿಕರು ವೇದಾಂತ ಗುರು ಸಾರ್ವಭೌಮ ಜ್ಞಾನ ಬೋಧಾನುಕೂಲ ನಿಸ್ಸೀಮ ಪ ಆದಿನೋಡು ಅನಾದಿಯೆನ್ನುತ ಬೋಧೆಗೊಳಿಸುಪದೇಶ ಮಾಡಿದ ಸಾಧುಶಿಖರನೆ ಸರ್ವತಂತ್ರನೆ ವಾದಭೀಕರ ವೈಷ್ಣವೋ ನಿಜ 1 ದ್ವಿದಳ ದಾಸನ ಕೈದಸಿದ ನಿಜ ಪದವಿನೋಡೆಂದೆನುತ ಮನಸನು ಕದಿವ ಕಳ್ಳರ ಕೊಂದು ಹಿಡಿಯೆಂ ದೊದಗಿತ್ತನು ಮೊದಲಿನಕ್ಷರಾ2 ಮೂರು ಬಿಡು ನೀ ಮೂರು ಹಿಡಿ ಕೇ ಳಾರು ಚಕ್ರವ ದಾಂಟಿ ತ್ರಿಕುಟಿಯ ಸೇರಿ ಸಂಪದವಾರಿಯೊಳಗದ್ದು ತೋರಿದ ಪರಮಾತ್ಮ ಪರತರ 3 ಎಂಟು ಹಾರಿಸಿ ಎಂಟುಲಿಪಿಯನು ಗಂಟು ಮಾಡೆಂದೆನುತ ನನ್ನೊಳ ಗುಂಟುಮಾಡಿಯು ತೋರಿದ ವೈ ಕುಂಠನಾಥನ ನನ್ನೊಳಗ ನಿಜ 4 ಶುದ್ಧ ಹಂಸನ ಮಾಡಿ ನನಗಾ ಚಿದ್ವಿವೇಕದ ಕವಚ ತೊಡಿಸಿದ ಸತ್ಸ್ವರೂಪಾಚಾರ್ಯನಹುದೆಲೊ ಮದ್ಗುರುವೆ ಶ್ರೀ ತುಲಶೀರಾಮಾ 5
--------------
ಚನ್ನಪಟ್ಟಣದ ಅಹೋಬಲದಾಸರು
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(3) ಶಿವಸ್ತುತಿಗಳು ನಮೋ ಗಿರೀಶ್ವರ ನಮೋ ಸುರೇಶ್ವರ ನಮೋ ಧರೇಶ್ವರ ಗಂಗಾಧರಾ ಪ ರಮಾರಮಣ ಹರ ಕುಮಾರ ಪಿತಹರ ನಮಾಮಿ ಶಂಕರ ಗಂಗಾಧರಾ ಅ.ಪ ಬಾಲಾರ್ಕ ಸುರುಚಿರ ಬಾಲೇಂದುಶೇಖರ ಬಾಲಾಂಬಿಕಾ ವರಗಂಗಾಧರಾ 1 ಮಹಾಜಟಾಧರ ಮಹಾನಟೇಶ್ವರ ಮಹಾ ಮಹೇಶ್ವರ ಗಂಗಾಧರ 2 ಮಹಾ ಮಹಿಮರ ಮಹಾಚತುರ ಹರ ಮಹಾ ಮುನೀಶ್ವರ ಗಂಗಾಧರ 3 ಪರೇಶ ನಿರುಪಮ ಪರಾಕ್ರಮಾ ಹಿಮ ಗಿರೀಂದ್ರ ಧಾಮಾ ಗಂಗಾಧರ 4 ಸುರಾಸುರೋತ್ತಮ ಕರಾರ್ಚಿತಾ ಮಾಂ ಗಿರೀಶ ನಾಮಾ ಗಂಗಾಧರಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(3) ಶ್ರೀಕೃಷ್ಣ ಲಾಲಿ ಜೋ ಜೋ ಶ್ರೀಕೃಷ್ಣ ಗೋಪಾಲಕನೆ ಜೋ ಜೋ ಗೋಪಿಯ ಕುಮಾರನೆ ಪ ಪಾಡಿತೂಗುವೆನಯ್ಯ ಜೋಜೋಜೋ ಅ.ಪ ಹಾಲಿನ ಹೊಳೆಯಲಿ ಹರಿದು ಬಂದವನೆ ಆಲದೆಲೆಯ ಮೇಲೆ ಮಲಗಿ ಬಂದವನೆ ಕಾಲಿನ ಹೆಬ್ಬೆರಳ ಬಾಯಲಿಟ್ಟವನೆ ಹಾಲುಗಲ್ಲದ ಶಿಶುವೆನಿಸಿಕೊಂಡವನೆ ಪಾಡಿತೂಗುವೆನಯ್ಯ ಜೋಜೋಜೋ 1 ಕೆತ್ತಿದ ಚಿನ್ನದ ತೊಟ್ಟಿಲು ಇಲ್ಲ ಮುತ್ತಿನ ಮಣಿಗಳ ಸರಗಳು ಇಲ್ಲ ಮೆತ್ತನೆ ಹಾಸಿದ ಬಟ್ಟೆಯ ಮೇಲೆ ಹೊತ್ತು ಮೀರಿದೆ ಮಲಗೋ ಕಂದ ಪಾಡಿತೂಗುವೆನಯ್ಯ ಜೋಜೋಜೋ 2 ಚೆನ್ನಯ್ಯ ನೀನು ಮುದ್ದರಂಗಯ್ಯ ಅಣ್ಣಯ್ಯ ಕಾಣೋ ತುಂಟ ಕೃಷ್ಣಯ್ಯ ಸುಮ್ಮನೆ ಮಲಗಯ್ಯ ರಂಪಾಟ ಮಾಡದೆ ಕಣ್ಮುಚ್ಚಿ ಪವಡಿಸೋ ಪರಮಾನಂದನೆ ಪಾಡಿತೂಗುವೆನಯ್ಯ ಜೋಜೋಜೋ 3 ಅಂಗೈಯಲ್ಲೆ ಅದ್ಭುತ ಮಾಡುವೆ ಅಂಗಾಂಗದಲ್ಲಿ ಬ್ರಹ್ಮಾಂಡ ತೋರುವೆ ಭಂಗ ಪಾಂಡುರಂಗ ಚಂಗನೇಳದೆ ಮಲಗೊ ಜಾಜಿಪುರಿರಂಗ ಪಾಡಿತೂಗುವೆನಯ್ಯ ಜೋಜೋಜೋ 4
--------------
ನಾರಾಯಣಶರ್ಮರು
(32ನೇ ವರ್ಷದ ವರ್ಧಂತಿ) ಶ್ರೀಶ ಆಶಾಪಾಶದಿಂದಲಿ ಘಾಸಿಯಾದೆ ಬರಿದೆ ವಾಸವಾರ್ಜಿತ ಪಾದಪಂಕಜ ದಾಸಪೋಷಣ ಭೂಷಣಾಚ್ಯುತ ಪ. ಮತ್ತೆರಡು ಮೂವತ್ತು ವರುಷಗಳುತ್ತಮ ಕೃತ್ಯದಲಿ ಸತ್ಯ ಶೌಚಾಚಾರ ಭಕ್ತಿಗಳಿತ್ತು ಕೃಪಾರಸದಿ ಭೃತ್ಯನನು ಪೊರೆದಿತ್ತ ಮೋಹದ ಕತ್ತಲೆಯ ವಶಕಿತ್ತು ಬಿಡುವುದೇ ಶ್ರೀಶ 1 ನಿನ್ನ ಚರಣಾನನ್ಯ ಶರಣರ ಮುನ್ನ ಪೊರೆದ ತೆರದಿ ಇನ್ನು ಪೊರೆವುದಕೇನುಪೇಕ್ಷ ಪ್ರ- ಪನ್ನ ಪಾಲಯದಿ ಚಿನ್ಮಯಿನಂದೈಕ ಭರಿತ ಮ- ಭವ ಮಾಧವ 2 ಕೂರ್ಮ ವರಾಹ ನರಹರಿ ವಾಮನ ಭಾರ್ಗವನೆ ರಾಮಕೃಷ್ಣ ಜನಾದಿ ಮೋಹನೆ ಕಾಮಗಾಶ್ವ ಚರನೆ ರಾಮ ವಿಧುರಿತ ಪಾಪಚಯ ಕಮ- ಲಾ ಮನೋಹರ ಸುಂದರಾನನ 3 ಕಾಲ ಕರ್ಮವಿದೂರ ಯಮುನಾಕೂಲ ಕೇಳೀಲೋಲಾ ಮಂದ ಮರಾಳಗಮನ ಶೀಲಾ ನೀಲ ಮೇಘ ನಿಭಾಂಗ ಪಂಕಜ ಮಾಲಯದುಕುಲಬಾಲ ಪಾಲಯ 4 ನೀರಜಾಸನ ನಿಮ್ನನಾಭ ಸುರಾರಿವನ ಕುಠಾರಾ ಜಾರ ಚೋರ ವಾರಿಜಾಸನ ವಂದ್ಯ ಕರುಣಾ ಪೂರ ಸುರಪರಿವಾರ ಪಾಲಯ 5 ತಂದೆ ತಾಯಿ ಗುರು ಬಂಧು ಸೋದರನಂದನ ಸಖನೆಂದು ಮುಂದೆ ಭವಭಯದಿಂದ ನಿನ್ನನು ಹೊಂದಿದೆ ನಾ ಬಂದು ಹಿಂದೆ ಮಾಡಿದ ಕುಂದನೆಣಿಸದೆ ಇಂದು ಕರಪಿಡಿ ಎಂದು ಬಯಸುವೆ 6 ವಿನುತ ಚರಣಾ ಏಸು ಪೇಳುವುದಿನ್ನು ಎನ್ನನು ಪೋಷಿಸು ಬಹು ಕರುಣಾ ಶೇಷಗಿರಿ ನಿಲಯಾಕುವರದ ಕೃ- ಪಾಶ್ರಯನೆ ತವದಾಸ ಪಾಲಿಸು 7
--------------
ತುಪಾಕಿ ವೆಂಕಟರಮಣಾಚಾರ್ಯ
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(41ನೇ ವರ್ಷದ ವರ್ಧಂತಿ) ಸತ್ಯ ಸಂಕಲ್ಪಾನುಸಾರದಿ ನಡೆಸುವುದುತ್ತಮ ಬಿರುದಾದರು ಭೃತ್ಯನ ಬಿಟ್ಟನೆಂಬಪಕೀರ್ತಿ ಬರದಂತೆ ಚಿತ್ತದಲ್ಲಿರಲಾದರು ಪ. ಕಳೆದಿತು ಐದೆಂಟು ಮೇಲೊಂದು ವತ್ಸರ ಬೆಳೆದಿತು ಬಲು ಮತ್ಸರ ನೆಲನ ಮೇಲಡಿಯಿಡಲಿಲ್ಲ ಶಕ್ತಿಯು ಇಂಥ ಛಲದಿ ತೋರುವಿ ತಾತ್ಸಾರ ಬಳುಕಿ ಬಾಡಿದ ದೇಹವುಳುಹಲುತ ಸೇವಾ ಫಲಕೆ ಕಾರಣವೆಂಬೆನು ನಳಿನನಾಭನೆ ನಿನ್ನ ಮನವೆಂತಿರುವುದೆಂದು ತಿಳಿಯದೆ ಬಳಲುವೆನು 1 ವಯಿನು ತಪ್ಪಿದ ಬಳಿ- ಕ್ಯಾತರಗುಣವಪ್ಪುದು ಭೂತಪಂಚಕ ಸನ್ನಿಪಾತ ಸೂಚಿಸುವಂತೆ ಕಾತರತೆಯು ತಪ್ಪದು ಈ ತೆರದಲಿ ದೇಹ ರೀತಿಯಾಗಿರುವುದ ನೀ ತಿಳಿದಿರಲೆನ್ನಯ ಮಾತ ಕೇಳದೆ ಲಕ್ಷ್ಮೀನಾಥ ತಾತ್ಸಾರವಿಂತು ನೀತಿಯಾಗದು ಚಿನ್ಮಯ 2 ಜನನ ಮರಣ ಜೋಡಾಗಿರುವುದೆಂಬ ಸಿದ್ಧ ನಿನಗಿದು ಸುಲಭಸಾಧ್ಯ ಮನೆವಾರ್ತೆ ಮಡದಿ ಮಕ್ಕಳು ಮುಂತಾದುದಕೆಲ್ಲ ವನಜಾಕ್ಷ ನೀನೆ ಬಾಧ್ಯ ಕನಸಿಲಾದರು ನಿನ್ನ ನೆನವ ತಪ್ಪಿಸದಿರು ವಿನಯ ವೆಂಕಟರಾಯನೆ ನಿನಗಿಲ್ಲದಪಕೀರ್ತಿ ಎನಗಿಲ್ಲ ಮಹದಾರ್ತಿ ಘನಕಲ್ಪ ಸುರಭೂಜನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(5) ದೇವರಹೊಸಹಳ್ಳಿ ಆಂಜನೇಯ (ಕೆಂಗಲ್ಲು ಸಮೀಪ) ಪರಿಪಾಹಿ ಸಂಜೀವರಾಯ ಜೀಯ ಕರವ ಮುಗಿವೆ ವಜ್ರಕಾಯ ಪ ವರ ಜಾಜಿ ಕೇಶವ ಪ್ರೇಮ ಧಾಮ ಅ.ಪ ರಾಮಾವತಾರದಿ ಹರಿಗೇ ನೀನು ನೇಮ ಸೇವಕನಾದೆ ಭರದೇ ಆ ಮಹೀಜಾತೆಗೆ ಮುದ್ರೆ ಸ್ವಾಮಿ ಪೇಳ್ದಂತೆ ನೀನು ಯಿತ್ತೆ 1 ಅಂಜನದೇವಿಕುಮಾರ ಶ್ರೀಮ ದಾಂಜನೇಯ ಗಂಭೀರ ಸಂಜೀವನಾದ್ರಿಯ ತಂದೆ ಪ್ರ ಭಂಜನ ಸೌಮಿತ್ರಿಗಂದೇ 2 ರಾಮನಾಮ ಧ್ಯಾನನಿರತ ಸುಖ ಶ್ಯಾಮನ ಕ್ಷೇಮ ಸುವಾರ್ತ ವ್ಯೋಮದಿ ಭಕುತಗೆ ಪೇಳ್ದೆ ಸುಪಿ ತಾಮಹ ಪದವಿಯ ಪಡೆದೆ 3 ವ್ಯಾಸಯತೀಂದ್ರ ಕರಪೂಜ್ಯಾ ನಿತ್ಯ ದಾಸರಪೊರೆವ ಸಾಮ್ರಾಜ್ಯ ದೋಷ ಶೋಷಣ ಪ್ರಭಾವ ಗುಣ ಭೂಷಣ ಸಜ್ಜನ ಜೀವ 4 ಭೂತ ಪ್ರೇತ ಬ್ರಹ್ಮ ಪಿಶಾಚಂಗ ಳಾತುರದಿಂ ಬಾಧಿತರು ಖ್ಯಾತಿಯ ಮಾರುತಿ ನಾಮಾಮೃತವ ಪ್ರೀತಿಯಿಂ ಸವಿವರೋ ಭೀಮಾ 4 ಹಿಂದಣ ಜನ್ಮದ ಪಾಪದಿಂದ ನೊಂದರು ಪ್ರಾರ್ಥಿಸಿ ತಂದೆ ಭಾವದುರಿತಂಗಳನಂದು ನಿ ರ್ಬಂಧಿಸಿ ಕಳೆಯುವೆ ಬಂಧು 5
--------------
ಶಾಮಶರ್ಮರು
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಅಂ) ಪಾರ್ವತೀದೇವಿ ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ಪ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ. ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ 1 ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ2 ಕಂಚುಕ ತಿಲಕ | ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ 3
--------------
ವಿಜಯದಾಸ
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು