ಒಟ್ಟು 407 ಕಡೆಗಳಲ್ಲಿ , 76 ದಾಸರು , 295 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಾನು ತಿಳಿದವನಲ್ಲ ನೀ ಕಾಯ್ದೆ ಶ್ರೀ ಕೃಷ್ಣ ನಾನರಿಯದಿರ್ದಡಿದ ನೀನರಿಯದವನೇ ಪ ಒಂದು ದಿನ ನಿನ್ನ ಧ್ಯಾನದಿ ನಡೆದು ಬರುತಿರಲು ಕೊಂದು ಚೂತದ ನೆಳಲಸಾರಿ ನಾನು ಒಂದು ನಿಮಿಷಮ ನೀರ ತಡಿಯಲಿ ಸಂಚರಿಸುತಿರ ಲೊಂದು ತಕ್ಷಕ ಬಂದು ವನವ ಹೊಕ್ಕಿರಲು 1 ಮಲ ಮೂತ್ರದುಪಹತಿಯ ಪರಿಹರಿಸಿ ಕೈಗಳನು ಜಲಮೃತ್ತಿಕೆಗಳಿಂದ ತೊಳೆದು ತೊಳೆದು ಎಳೆ ಬಿಸಿಲ ಸೇವಿಸುತ ದಂತಧಾವನ ಗೈದು ಸಲಿಲವನೆ ಮುಕ್ಕುಳಿಸಿ ಕೇಲದೊಳುಗಿದು 2 ನಿಂತು ಕಾಲ್ಮೊಗ ದೊಳೆದು ಆಚಮಿಸಿ ಆದಿತ್ಯ ನಂತಿ ಕಕೆ ಸಲಿಲಮಂತಿದ್ದಿ ಜಪವಾ ಅಂತ ರಂಗದಿ ಜಪಿಸಿ ಮುಗಿಸಿ ವಸ್ತ್ರಗಳಿಟ್ಟು ಗೊಂತಿಗೈತಂದವನು ಮರಳಿಧರಿಸಿ 3 ಹಚ್ಚಡವ ಹೊದ್ದು ಮುಂದಕೆ ನಡೆದು ಬರುತಿರ ಲಾಶ್ಚರ್ಯವೆನಿಸಿ ಬದಿಯೊಳಗುಮ್ಮಲು ಸ್ವಚ್ಚವಲ್ಲವಿದೆಂದು ಕಿಮುಚಿನಾ ನೋಡಿ ಬಲು ಬೆಚ್ಚಿ ಹಚ್ಚಡ ಬಿಸುಡೆ ಬಿಚ್ಚೆ ಪೆಡೆಯಲು ಕಂಡೆ 4 ನೀ ಕೊಲುವ ಕಾಲದೊಳು ಕೊಲುವರಿಲ್ಲ ಲೋಕೈಕನಾಥ ಚಿಪ್ಪಳಿ ವೇಣುಗೋಪಾಲ ನೀ ಕರುಣದಿಂ ಕಾಯ್ದೆ ಎನ್ನಸುವನು 5
--------------
ಕವಿ ಪರಮದೇವದಾಸರು
ನಾಯಿ ಕಚ್ಚೀತೆಚ್ಚರಿಕೆ ಎಲೋ ಡಾವಿಟ್ಟು ಬರುತಾದೆಚ್ಚರಿಕೆ ಪ ನೋವು ತೀರದೀ ನಾಯಿ ಕಚ್ಚಲು ಕೇವಲ ವಿಷವುಳ್ಳ ಹೇಯನಾಯಿ ಅ.ಪ ಮೆಚ್ಚು ಮದ್ದಿಕ್ಕುವುದು ಅಚ್ಚರೋಗದ ನಾಯಿ ಮುಚ್ಚುಮನೆ ಮುರಿವುದು ಲುಚ್ಚನಾಯಿ ಸಾಚ್ಯನೆಂದು ನಂಬಿ ನೆಚ್ಚಿದವರ ಮೇಲೆ ಕಚ್ಚಿ ಬಿಚ್ಚುವುದೊಂದ್ಹುಚ್ಚು ನಾಯಿ 1 ಸೂಳೆನ್ನ ಹೋಗುವುದು ಮೂಳನಾಯಿ ಶೀಲ ತೊರೆವುದೊಂದು ಜೂಲುನಾಯಿ ಕೀಳರಿಂ ತಲೆಗೂಡಿ ಹಾಳ್ಹರಟ್ಹೊಡೆವುದು ಕೂಳ ಕಾಣದಂಥ ಹಾಳೂರನಾಯಿ 2 ಉಂಡುಂಡು ಮಲಗ್ವುದು ಸುಂಡಿನಾಯಿ ಕಂಡಂತೆ ತಿರಗುವ ದಂಡನಾಯಿ ಹೆಂಡ್ತಿನ್ನ ಬಿಟ್ಟು ಪರರ್ಹೆಂಡರಿಗೊಲಿವುದು ಉಂಡೊಗೆದೆಂಜಲ ನೆಕ್ಕುವ ನಾಯಿ 3 ಬಡವರ ಬಡಿವುದು ಬಡಕನಾಯಿ ಕಡುಗರ್ವದಿರುವುದು ತುಡುಗ ನಾಯಿ ದೃಢಯುತರನು ಕಂಡು ಬಿಡುನುಡಿಯಾಡ್ವುದು ಸುಡುಗಾಡೋಳ್ಬಿದ್ದಸ್ತಿ ಕಡಿಯುವ ನಾಯಿ 4 ವಿಚಾರನರಿಯದ್ದು ಬೇಬಿಟ್ಟಿನಾಯಿ ಅಚಾರಮನವಿಲ್ಲದ್ಹರಕುನಾಯಿ ಊಚಸ್ಥಾನದಿ ಕೂತು ನಾಚದೆ ಮೋರಿಚ್ಛೆ ವಾಚ ಪೇಳ್ವುದೊಂದು ನೀಚನಾಯಿ 5 ಆಸೆ ಪೇಳುವುದೊಂದು ಮೋಸದ ನಾಯಿ ಶಾಶ್ವತ ತಿಳಿಯದ್ದು ಪಾಶದ ನಾಯಿ ಈಶನ ದಾಸರ ದೂಷಿಪುದು ಹೊಲೆ ದಾಸರಮನೆಮುಂದಿನ್ಹೇಸಿನಾಯಿ6 ಕೋಪವ ತೊರೆಯದ್ದು ತಿರುಕನಾಯಿ ಪಾಪಕ್ಕೆ ಅಂಜದ್ದೀ ನರಕಿನಾಯಿ ಭೂಪ ಶ್ರೀರಾಮನ ಜ್ಞಾಪಕಕೆ ತರುವೆನು ಕೂಪದಿ ಉರುಳುವ ಪಾಪಿನಾಯಿ 7
--------------
ರಾಮದಾಸರು
ನಿಮ್ಮ ನುಡಿಗಳ ಕೇಳಲೆನಗೆ ಹೊತ್ತೆಲ್ಲಿಯದುನಮ್ಮ ಗೃಹಕೃತ್ಯಗಳು ಬಹಳವಾಗಿಹವೊ ಪನಮ್ಮಯ್ಯನೊಂದು ಗ್ರಾಮವನೇಕಸ್ವಾಮ್ಯದಲಿತಮ್ಮ ದಂಪತಿಗಳುಪಭೋಗಕೆಂದುತಮ್ಮಲ್ಲಿ ತಾವೆ ಸಂವಾದಿಸಿದರವರಲ್ಲಿಹಮ್ಮು ಕಡೆಯಾದ ಹದಿಮೂವರುದಿಸಿದರೂ 1 ಕ್ಲೇಶ ಬಡಿಸುವರು 2ಸ್ತ್ರೀ ಕಾಮನೆ ರಾಗ ಪ್ರತಿಕೂಲದಿಂ ದ್ವೇಷ ಬೇಕೆಂಬದನೆಕಾದುನುಳಿಯೆ ಕ್ರೋಧಾಆಕ್ರಮಿಸಿ ಸಕಲವನು ಬಚ್ಚಿಡುವನವ ಲೋಭಸಾಕು ಗುರುಹಿರಿಯರೆಂಬವರರಿಯೆ ಮೋಹಾ 3ನಿತ್ಯವಲ್ಲದ ಸಿರಿಯ ನಂಬಿ ಬೆರೆತಿಹಮದನುಉತ್ತಮರ ಕೂಡೆ ಸೆಣೆಸುವನು ಮತ್ಸರನುಮತ್ತೆ ಈಷ್ರ್ಯನು ದುಃಖನನ್ಯರಿಗೆ ಬಗೆಯುತಿಹವ್ಯರ್ಥದಿಂ ಬಸವಳಿಯುತಿಹನಸೂಯಕನು 4ದಂಭವನೆಂಬವನಲ್ಲಿ ಪುರುಷಾರ್ಥವಿಸಿಕಿಲ್ಲಹಂಬಲಿಸುತಿಹ ದರ್ಪಕೊಬ್ಬಿ ಬರಿದೆಉಂಬರೊಬ್ಬರಿಗಿಲ್ಲ ಸಕಲವೂ ನನಗೆಂದುದೊಂಬಿಯಲಿ ನಾ ಸಿಕ್ಕಿ ಬಳಲುತಿಹೆನಾಗಿ 5ವೃತ್ತಿಯೆರಡದರಲ್ಲಿ ಫಲವೆರಡು ಜನ್ಮಕ್ಕೆಬಿತ್ತಿ ಬೆಳೆವರೆ ಚೌಳು ಜಲವ ಕಾಣೆಒತ್ತರಿಸಿ ಬರುತಿರುವ ಜ್ಞಾತಿಗಳ ಬೆಂಕಿಯಲಿಹೊತ್ತು ಹೊತ್ತಿಗೆ ಬರಿದೆ ದಹಿಸುತಿಹೆನಾಗೀ 6ಬರಿಯ ಭ್ರಾಂತಿನ ಬಲೆಯ ಬೀಸಿ ನೋಡುತ್ತಿರುವತಿರುಪತಿಯ ವೆಂಕಟನ ಚರಣಗಳನುಕರಗಳಲಿ ಬಿಗಿಯಪ್ಪಿ ಶಿರವೆರಗಿ ಗುರುಮುಖದಿಅರುಪಿದುದ ನಿಲಿಸೆಂದು ಬೇಡಿಕೊಳುತಿಹೆನು 7ಕಂ||ತನುವಿನೊಳಭಿಮಾನವಿರಲೀಘನತರ ಸಂಸಾರ ದುಃಖ ತೊಲಗದು ಸತ್ಯತನು ನಿತ್ಯತೆದೋರ್ದಕಾರಣಮನದೊಡನಿಂತೆಂದು ಜೀವನನು ವಾದಿಸಿದಂ
--------------
ತಿಮ್ಮಪ್ಪದಾಸರು
ನಿರುತದಿಂದಿಳೆಯೊಳು ಅರಸಿ ನೋಡಲು ಕಾಣೆ ಗುರು ಸತ್ಯಜ್ಞಾನರಿಗೆ ಪ ಸರಿ ಇಲ್ಲಿವರ ಚರಣಕಮಲವ ನಿತ್ಯ ದುರಿತ ಹರಿಪರ ಅ.ಪ ಸತ್ಯ ಜ್ಞಾನ ಗುರೋ ನೀ ಗತಿ ಎಂದವರ ನಿತ್ಯದಿ ಬಿಡದೆ ಕಾಯ್ವ ಅತ್ಯಾದರದಿ ಮಧ್ವಮತ ಸ್ಥಾಪಕರಾಗಿ ಮಿಥ್ಯಾ ಜ್ಞಾನಗಳಳಿದ | ಮೆರೆದ 1 ಸತ್ಯಧೀರರಿಂದ ಯತ್ಯಾಶ್ರಮ ಪಡೆದು ರತ್ಯಾದಿ ವಿಷಯವ ಬಿಟ್ಟು ಯತ್ಯಾಶ್ರಮೋಕ್ತ ಕೋಪತ್ಯಾಗಾದಿಗಳನು ವ್ಯತ್ಯಾಸಿಲ್ಲದೆ ನಡೆಸಿ | ಶೋಭಿಸಿ2 ಗುರು ಆರಾಧನಿ ದಿನ ತೀರ್ಥವ ಕೊಡುತಿರೆ ವರ ಸುವಾಸಿನಿ ಒಬ್ಬಳೂ ಕರವ ನೀಡಲು ಬಂದು ಅರಿತು ವಿಧವತ್ವ ನೆರಪೇಳ್ದರಪರೋಕ್ಷದಿ | ಭೂತಳದಿ 3 ಭರದಿಂದ ಸುರಿಯುತ್ತಿರೆ ಮೊರೆಯಿಡೆ ಎಡಬಲದವರು ಅದನು ಕೇಳೆ ದೂರಸ್ಥಳಿಹಳೆಂದ್ಹೇಳಿರು | ಪಂಕ್ತಿಯಲಿ 4 ಈ ರೀತಿಯಿಂದಲಿ ತೋರಿಸಿ ಮಹಿಮೆಯ ಇರಿಸೆ ಮಂತ್ರಿಸಿ ಫಲವ ಭರದಿ ಸುರಿವ ಮಳೆ ತ್ವರಿತದಿ ನಿಲ್ಲಲು ಅರಿತು ವಿಚಾರಿಸಲು | ನಿಜವಿರಲು5 ಪತಿ ಪೂಜೆ ಸಾವಧಾನದಿ ಮಾಡಲು ಇವರ ಮನೋಧಾರಡ್ಯ ಜವದಿ ಜಯಾಮುನಿ ಅವನಿಗರುಹಬೇಕೆಂದು | ತಾ ಬಂದು 6 ಬರುತಿರೆ ಉರಗಾಕಾರದಿಂದಲಿ ಬಂದು ಅರಿಯದ ಜನರು ಕೂಗೆ ಮಾರಮಣನ ಧ್ಯಾನ ಜರಿಯದೆ ಅವರಿಗೆ ತೋರಿದರಭಯವನು | ವಿಚಿತ್ರವನು 7 ಭೂವೈಕುಂಠದಿ ವಿಶ್ವರೂಪದರ್ಶನಕ್ಹೋಗೆ ಮಾರ್ಗವ ಕೊಡದಿರಲು ಭಾವದಿ ಧ್ಯಾನಿಸೆ ಶ್ರೀ ವಲ್ಲಭನಾಮ ಧರಿಸದೀರಾಧರಿಸೇ | ಧರಿಸಿ 8 ಈ ವಿಧ ಮಹಿಮೆಯ ತೋರಿಸಿ ಜಗದೊಳು ಗೋದಾತೀರದಿ ಶೋಭಿಪ ಅವನಿಪ ಮಹೇಂದ್ರ ಭುವನ ಶ್ರೀ ನರ ಹರಿ ನಿನ್ನ ಮಾಘಸಿತದಿ | ಸ್ಮರಿಸಿದ9
--------------
ಪ್ರದ್ಯುಮ್ನತೀರ್ಥರು
ನೀ ಕರುಣದಿ ಕಾಯಬೇಕೀ ವಾಕು ಪ. ಭವ ಮಡುವಿನೊಳಗಿರುವೆನು ದಡಕೆ ಸೇರಿಸು ನೀನು ಅ.ಪ. ಆರು ಕಾಯುವರಿಲ್ಲಾ ಸೇರಿದೆ ನಿನಗಲ್ಲಾದೆ ಸಂಸಾರ ಶರಧಿಯೊಳು ಈಸಲಾರೆನು ಘಾಸಿಪಡಿಸಲಾಗದು ನೀನು ಆಶಾ ತೋರಿಸಿ ಮೋಸ ಮಾಡುವದು ಇದು ತರವೇ ಗುರುವೇ 1 ಯಂದಿಗೆ ಬರುತೀಯೋ ಸುಂದರ ಮೂರುತಿಯೆ ಪಂಚ ವೃಂದಾವನ ಛಂದಾನೋಳ್ಪರಿಗೆ ಸಂದರುಶನ ಕೊಡು ಇಲ್ಲಿ 2 ಅನಾಥನು ನಾನು ಯನ್ನ ಪೊರೆವ ದಾತನು ನೀನು ಋಜುಗಣಧ್ವರಿಯೇ ಕಾಳಿಮರ್ದನಕೃಷ್ಣನ ಮರಿಯೆ 3
--------------
ಕಳಸದ ಸುಂದರಮ್ಮ
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ನೋಡಿದೆನು ಕೃಷ್ಣನ್ನ | ದಣಿಯ ನೋಡಿದೆನು ಕೃಷ್ಣನ್ನ | ಮನದಣಿಯ ಪ. ಪಾಡಿದೆನು ವದನದಲಿ ಗುಣಗಳ ಮಾಡುತಲಿ ಸಾಷ್ಟಾಂಗ ಕಡು ಕೃಪೆ ಬೇಡಿದೆನು ಹರಿಯ ಅ.ಪ. ಅರುಣ ಉದಯದ ಮುನ್ನ ಯತಿಗಳೂ ಶರಣವತ್ಸಲನನ್ನು ಪೂಜಿಸಿ ಕರದಿ ಕಡಗೋಲನ್ನು ಪಿಡಿದಿಹ ಬಾಲರೂಪನಿಗೆ ತರತರದ ನೇವೇದ್ಯವರ್ಪಿಸಿ ತುರುಕರುಗಳಾರತಿ ಗೈಯ್ಯುತ ಪರಮಪುರುಷಗೆ ವಂದಿಸಲು ಈ ಚರಿತ ಮತ್ಸ್ಯನ್ನಾ 1 ಮಧ್ವರಾಯರ ಹೃದಯವಾಸಗೆ ಮುದ್ದು ಯತಿ ಪಂಚಾಮೃತಂಗಳ ಶುದ್ಧ ಗಂಗೋದಕದ ಸ್ನಾನವಗೈಸಿ ಸಡಗರದಿ ಮಧ್ಯೆ ಮಧ್ಯೆ ನೈವೇದ್ಯವರ್ಪಿಸಿ ಮುದ್ದು ತರಳರಿಗ್ಹೆಜ್ಜೆ ಪಂಕ್ತಿಯು ಅಗಣಿತ ಕೂರ್ಮರೂಪನ್ನಾ2 ಉದಯಕಾಲದಿ ಸರ್ವ ಜನಗಳು ಮುದದಿ ಮಧ್ವ ಸರೋವರದೊಳು ವಿಧಿಯಪೂರ್ವಕ ಸ್ನಾನ ಜಪ ತಪವಗೈದು ಮಾಧವನಾ ಉದಯದಾಲಂಕಾರ ದರ್ಶನ ಪದುಮನಾಭಗೆ ನಮನಗೈವರು ವಿಧಿಕುಲಕೆ ಉದ್ಧಾರಕರ್ತನು ವರಹನೆಂದಿವನಾ 3 ಪಾಲಿಸಲು ಬಾಲನ ಶ್ರೀ ಗೋ ಪಾಲಕೃಷ್ಣನು ಕಂಭದಲಿ ಲೀಲೆಯಿಂದಲಿ ಉದಿಸಿ ಖೂಳನ ಸೀಳೀ ತೊಡೆಯಲ್ಲಿ ಬಾಲೆಯನು ಕುಳ್ಳಿರಿಸಿಕೊಂಡಘ ಜಾಲಗಳ ಸುಡುವಂಥ ದೇವನು ಬಾಲರೂಪವ ಧರಿಸಿ ನಿಂತಿಹ ಲೋಲ ನರಹರಿಯ 4 ಅದಿತಿ ದ್ವಾದಶವರ್ಷ ತಪಸಿಗೆ ವಿಧಿ ಜನಕ ತಾ ಕುವರನಾದನು ಅದರ ತೆರದಲಿ ವ್ರತವ ಗೈದ ವೇದವತಿಗಿನ್ನು ಚದುರ ತನಯನ ವರವನಿತ್ತನು ಯದುಕುಲಾಗ್ರಣಿ ಅವರ ಭಕ್ತಿಗೆ ಒದಗಿ ಬಂದ ಮೂರ್ತಿವಾಮನನೆಂಬ ವಟುವರನ5 ದುಷ್ಟ ಕ್ಷತ್ರಿಯರನ್ನೆ ಕೊಲ್ಲುತ ಅಷ್ಟು ಭೂಮಿಯ ದಾನಗೈಯುತ ದಿಟ್ಟ ತಾನೆಲ್ಲಿರಲಿ ಎಂಬುವ ಯೋಚನೆಯ ತಳೆದು ಅಟ್ಟಿ ಅಬ್ಧಿಯ ಪುರವ ನಿರ್ಮಿಸಿ ಪುಟ್ಟ ರೂಪವ ತಾಳಿ ಬರುತಲಿ ಮೆಟ್ಟಿ ನಿಂತಿಹ ರಜತ ಪೀಠದಿ ಶ್ರೇಷ್ಠ ಭಾರ್ಗವನ 6 ಪಿತನ ಆಜ್ಞೆಯ ಪೊತ್ತು ಶಿರದಲಿ ಸತಿ ಅನುಜ ಸಹಿತದಿ ಜತನದಲಿ ವನವಾಸ ಮುಗಿಸುತ ದಶಶಿರನ ಕೊಂದ ಅತಿ ಸಹಾಯವ ಗೈದ ಶರಧಿಗೆ ಪ್ರತಿಯುಪಕಾರವನು ಕಾಣದೆ ಜತನದಲಿ ತಾ ನಿಲ್ಲೆ ನೆಲಸಿದ ಜಾನಕೀಪತಿಯ7 ಗೋಪಿಯರ ಉಪಟಳಕೆ ಸಹಿಸದೆ ಗೋಪನಂದನರೊಡನೆ ಕಾದುತ ತಾಪಪಡಿಸುವ ಕಂಸರನುಚರರಿಂದ ಕಳದೋಡಿ ಗೋಪಿ ಮೊಲೆ ಕೊಡುತರ್ದದಲಿ ಬಿಡೆ ಈ ಪರಿಯ ತಾಪಗಳ ಸಹಿಸದೆ ತಾಪಸರ ಪೂಜೆಗಳ ಬಯಸುತ ಬಂದ ಗೋಪತಿಯ 8 ವೇದ ಬಾಹಿರರಾದ ದುರುಳರು ವೇದ ಮಾರ್ಗವ ಪಿಡಿಯೆ ಸುರತತಿ ನೀ ದಯದಿ ಸಲಹೆಂದು ಪ್ರಾರ್ಥಿಸೆ ಜಿನ ವಿಮೋಹಕನೂ ವೇದರ್ಥವ ಗುಪ್ತದಲಿ ತಾ ಬೋಧಿಸುತ ಮೋಹಕವ ಕಲ್ಪಸಿ ಬುದ್ಧ ಪ್ರಮೋದನೆಂಬುವನಾ 9 ಚತುರ ಪಾದವು ಕಳದು ಧರ್ಮವು ಅತಿಮಲಿನವಾಗುತಲಿ ಕಲಿಜನ ಚತುರ ಜಾತಿಯ ಕಲೆತು ಕಂಗೆಡೆ ಭಕ್ತವರ್ಗಗಳು ಗತಿಯು ನೀನೆ ಪೊರೆಯೊ ಎಂದೆನೆ ಸತಿಯ ಹೆಗಲೇರುತಲಿ ಖಡ್ಗದಿ ಹತವಗೈಯ್ಯುತ ಖಳರ ಸುಜನರ ಪೊರೆದ ಕಲ್ಕಿಯನು10 ನೋಡಿದೆನು ವರ ಮಚ್ಛ ಕೂರ್ಮನ ನೋಡಿದೆನು ಧರಣೀಶ ನೃಹರಿಯ ನೋಡಿದೆನು ವಾಮನನ ಭಾರ್ಗವ ರಾಮಚಂದ್ರನನೂ ನೋಡಿದೆನು ಕಡಗೋಲ ಕೃಷ್ಣನ ಬುದ್ಧ ಕಲ್ಕಿಯ ನೋಡಿದೆನು ಗುರು ವರದ ಗೋಪಾಲಕೃಷ್ಣವಿಠ್ಠಲನ 11
--------------
ಅಂಬಾಬಾಯಿ
ನೋಡಿರೋ ನೋಡಿರೋ ಸ್ವಾಮಿ ಶ್ರೀಪಾದ ಗೂಢಗುರುತವಾಗ್ಯದ ನಿಜಬೋಧ ಧ್ರುವ ಕಣ್ಣಿನೊಳಗದ ಕಾಣುಗುಡುತಿದೆ ಕಣ್ಣೆ ಕಣ್ಣೆಗೆ ಕಾಣಿಸುತಿದೆ 1 ಝಗಝಗಿಸುತಿದೆ ಥಳಥಳಿಸುತಿದೆ ಬಗೆ ಬಗೆ ಭಾಸುತ ಹೊಳೆಯುತಲಿದೆ 2 ಕೇಳಬರುತದೆ ಹೇಳಗುಡುತದೆ ತಾಳ ಮೃದಂಗವು ಭೋರಿಡುತದೆ 3 ಏನೆಂದ್ಹೇಳಲಿ ಸ್ವಾನಂದ ಲೀಲೆ ಸ್ವಾನುಭವದಸುಖ ಆಲಿಸಿ ಕೇಳಿ 4 ಮಾಯಾಕಾರಗಿದು ಕೈಯಲಿಗೂಡದು ಮಹಿಪತಿ ಸ್ವಾಮಿದಯಕೆ ಒದಗುವದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪಾದ | ನಿತ್ಯದಿ ಭಜಿಸುವ ಭೃತ್ಯನೆ ಬಲು ಧನ್ಯನೋ ಪ ಭೃತ್ಯ ಜನಕೊತ್ತೊತ್ತಿ ಪೇಳುವ ಅ.ಪ. ಮುನಿಕುಲ ಸನ್ಮಾನ್ಯ ಸತ್ಯಜ್ಞಾನರ ಕರಜಮಾನ ಮೇಯ ಜ್ಞಾನ ನಿಪುಣಾಹೀನ ಮಾಯ್ಗಳ ಗೋಣ ಮುರಿಸು | ಸ್ವಾನುಭಾವದಿ ಬ್ರಹ್ಮ ಸತ್ಯಜ್ಞಾನ ಆನಂದನೆನುತಲಿ | ಆನುಪೂರ್ವ ವೇದಾರ್ಥ ಪೇಳ್ದ 1 ಈ ಮಹಿಯೊಳು ಭರತ | ಭೂಮಿಯೊಳಖಿಳ ಸುಸೀಮೆಯ ಚರಿಸುತಲೀ ||ನೇಮದಿಂದಲಿ ವಾದ ಭಿಕ್ಷೆಯ | ಪ್ರೇಮದಿಂದಲಿ ಬಯಸಿ ಬರುತಗ್ರಾಮ ಗ್ರಾಮದ ಭ್ರಾಮಕ ಜನ | ಸ್ತೋಮವ ನಿಸ್ತೇಜ ಗೈಸಿದ 2 ಪರಮ ಹಂಸೋತ್ತಮ | ಪರವಾದಿ ಗಜಸಿಂಹಗರುವ ರಹಿತ ಸಾರ್ವಭೌಮಾ ||ವರ ಸುವತ್ಸರ ಚಿತ್ರ ಭಾನುವು | ಚೈತ್ರ ಶುಕ್ಷದಿ ಅಷ್ಟಮೀ ದಿನಸಿರಿ ಗುರು ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದ 3
--------------
ಗುರುಗೋವಿಂದವಿಠಲರು
ಪಾರ್ವಟೆ ಉತ್ಸವಗೀತೆ ನೋಡಿದೆ ನೋಡಿದೆ ಪಾರ್ವಟೆ ಉತ್ಸವವ ರೂಢಿಗೊಡೆಯ ರಂಗನ ಪರಮಸಂಭ್ರಮವ ಪ. ಮುದದಿ ವಿಜಯದಶಮಿಯಲಿ ಭುಜಗಶಯನ ರಂಗ ವಿಧವಿಧವಾದ ಆಭರಣ ವಸ್ತ್ರಗ[ಳಿಂದ] ಮದನನಯ್ಯನು ತಾನು ಶೃಂಗಾರವಾಗಿ ಒದಗಿ ಪಲ್ಲಕ್ಕಿ ಏರಿ ಬರುವ ವೈಭೋಗವ 1 ಮುತ್ತಿನಕಿರೀಟ ಮುಗುಳುನಗೆಯ ನೋಟ ರತ್ನದ ಪದಕಗಳ ಹತ್ತುಅಳವಟ್ಟು ಬಟ್ಟಲಲಿ ಭಕ್ತರು ಬಿಟ್ಟ ಉಭಯವನ್ನೆಲ್ಲ ಗ್ರಹಿ ಸುತ್ತ ನರಸಿಂಹನಪುರದ ಮಂಟಪದಲ್ಲಿ 2 ಅಂಬುಮಾಲೆ ಆನೆಮೇಲೆ ನೇಮದಿಂದಲೆ ತಂದು ನೀಲವರ್ಣಗೆ ಕೊಡಲು ಪೂಜೆಯನು ಮಾಡಿ ಅಂಬು ನಾಗಶಯನ ಬಹರಿನೇರಿ ಲೀಲೆಯಿಂದ ಬರುವ ಪರಮವೈಭೋಗವ 3 ಶರಧಿಯಂತೆ ಪುರುಷೆ ಭೋರ್ಗರೆಯುತ ಬರುತಿರೆ ಮುರುಜ ಮೃದಂಗ ಭೇರಿವಾದ್ಯ ಘೋಷಗಳು ಗಜ ಸಿಂಹ ವೃಷಭ ಶಾರ್ದೂಲನಡೆಯಿಂದ ಬಂದ ವಸುದೇವಪುತ್ರನ 4 ಬಂದು ಅಶ್ವವನಿಳಿದು ಅರ್ಥಿಯಿಂದಲೆ ನಿಂದು ಗಾಯಿತ್ರಿಮಂಟಪದಲ್ಲಿ ಮಿತ್ರರು ಸಹಿತ ಇಂದಿರೆ ಸಹಿತಲೆ ನಿಂದ ವೆಂಕಟರಂಗ ಮಂದಿರದೊಳಗೆ 5
--------------
ಯದುಗಿರಿಯಮ್ಮ