ಒಟ್ಟು 275 ಕಡೆಗಳಲ್ಲಿ , 68 ದಾಸರು , 253 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರೋ ಗುರು ರಾಘವೇಂದ್ರ ಸದ್ಗುಣಸಾಂದ್ರ ಪ ಬಾರೋ ಸದ್ಗುರುವರ ಸಾರಿದ ಸುಜನರ ಘೋರ ದುರಿತವ ತರಿದು ಕರುಣದಿ ಸಾರ ಸೌಖ್ಯವಗರಿದು ಪೊರಿಯಲು ಅ.ಪ ಸೂರಿಜನಾಲಂಕೃತ ಸುರಪುರದಿ ವಿಠ್ಠ ಲಾರ್ಯರಿಂದಲಿ ಪೂಜಿತ ಯದುಗಿರಿಯ ಕ್ಷೇತ್ರಾಗಾರನೆಂದೆನಿಸಿ ನಿರುತ ಭಜಕರನು ಪೊರೆಯುತ ಸೇವೆಯನುಕೊಳ್ಳುತ ತುರಗವನೇರಿ ಮೆರೆಯುತ1 ಭಕ್ತ್ಯಾದಿ ಫಲವೀವಂಥ ಗುರುವರನೆ ನಿಮ್ಮಯ ಸ್ತೋತ್ರ ಪಠಣವ ಮಾಡುತ್ತ ಅನವರತ ಭಜ- ನಾಸಕ್ತ ಜನರ ಕಾಮಿತ ನಾ ಕೊಡುವೆನೆನುತ ಮತ್ತೆ ಎಡಬಲದಲ್ಲಿ ದ್ವಿಜಕೃತ ಛತ್ರಚಾಮರ ವ್ಯಜನ ಸೇವಾ ನೃತ್ಯಗಾಯನ ವೈಭವದಿ ವರ ಹಸ್ತಿವಾಹನ ವೇರಿ ಮೆರೆಯುತ 2 ಇಳಿಸುರರೊಳು ಪ್ರಖ್ಯಾತ ಲಿಂಗೇರಿ ಭೀಮಾ ಹೊಳಿಯ ಸ್ಥಾನಕೆ ಬಂದಂಥ ಯದುಗಿರಿಯ ದ್ವಿಜವರ ಗೊಲಿದರ್ಚನಿಯ ಗೊಂಬಂಥ ಶರ್ವಾದಿವಿನುತ ಚಲುವ ಪ್ರಾಣನಾಥನ ಜಲಜಯುಗ ಸನ್ನಿಧಿ ಯೊಳನುದಿನ ಪೊಳೆವ ವೃಂದಾವನದಿ ಭಕುತರಿ ಗೊಲಿದು ಪೊರೆಯಲು ಕುಳಿತ ಯತಿವರ 3 ನಂದತೀರ್ಥರ ಸುಮತ ಸಿಂಧುವಿಗೆ ಪೂರ್ಣ ಚಂದ್ರರೆಂದೆನಿಸಿ ದಂಥಾ ಕರ್ಮಂದಿವರ್ಯನೆ ದುರಿತ ಘನಮಾರುತ ವಂದೆ ಮನದಲಿ ಬಂದು ನಿಮ್ಮಡಿ ದ್ವಂದ್ವವನು ಶೇವಿಸುವ ಶರಣರ ವೃಂದವನು ಪಾಲಿಸಲು ಸುಂದರಸ್ಯಂದನ- ವೇರುತಲಿ ವಿಭವದಿ 4 ನೀರಜಾಸನ ವರಬಲದಿ ಸಮರಾರೆನುತ ಬಂ- ಗಾರ ಕಶ್ಯಪ ಪೂರ್ವದಿ ಪ್ರಹ್ಲಾದ ರಾಜಕು ಮಾರ ನಿನ್ನೊಳು ವೈರದಿ ಹರಿಯನ್ನು ಜವದಿ ಚಾರು ಕೃಷ್ಣಾ ತೀರಕಾರ್ಪರ ನಾರಸಿಂಹನ ಸ್ತಂಭದಿಂದಲಿ ತೋರಿಸಿದ ಗುರು ಸಾರ್ವಭೌಮನೆ 5
--------------
ಕಾರ್ಪರ ನರಹರಿದಾಸರು
ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ಬಿಟ್ಟು ಬರಲಾರಳಮ್ಮಯ್ಯಪಟ್ಟಮಂಚವ ಭಾವೆಬಿಟ್ಟರೆ ರುಕ್ಮಿಣಿ ಕೃಷ್ಣನ ಬೆರೆದಾಳೆಂಬೊ ಅಂಜಿಕೆಯಿಂದ ಪ. ಪಾದ ಸಿಕ್ಕಿತೋ ಸಿಗದೆಂದುಚಿಕ್ಕ ಚನ್ನಿಗಳ ಕೈವಶಚಿಕ್ಕ ಚನ್ನಿಗಳ ಕೈವಶವಾಗದಂತೆಜಪ್ಪಿಸಿಕೊಂಡು ವಟವಾದಳೆ 1 ಶಂಬರಾರಿ ಪಿತನ ತಂಬುಲಸಿಗದೆಂದು ಚುಂಬನದ ಸಮಯ ಚಿಗಿಳೀತುಚುಂಬನದ ಸಮಯ ಚಿಗಿಳೀತು ಎಂತೆಂಬೊಹಂಬಲದಿ ಒಳಗೆ ಕುಳಿತಳೆ2 ನಲ್ಲೆ ರಂಗಯ್ಯನ ಎಲ್ಲೆಲ್ಲಿ ಬಿಡಲೊಲ್ಲೆಎಲ್ಲ ನಾರಿಯರ ನೆರವಿಕೊಂಡುಎಲ್ಲ ನಾರಿಯರ ನೆರವಿಕೊಂಡು ಮನೆಯೊಳುನಿಲ್ಲಗೊಡರೆಂಬೊ ಭಯದಿಂದ3 ಒಗೆತನ ನಗೆಗೀಡಾಯಿತು ನೋಡೆ ಈ ಬಗೆ ಎಲ್ಲೆ ಕಾಣೆ ಜಗದೊಳು ಈ ಬಗೆ ಎಲ್ಲೆ ಕಾಣೆ ಜಗದೊಳು ರುಕ್ಮಿಣಿ ತಗಿ ನಿನ್ನನಡತೆ ತರವಲ್ಲ4 ಅನಂತ ಮಹಿಮಗೆ ಇನ್ನೆಂಥ ಕಾವಲತನ್ನ ನಿಜರೂಪ ಅವರಲ್ಲಿತನ್ನ ನಿಜರೂಪ ಅವರಲ್ಲಿ ರಮಿಸೋದುತನ್ನ ಮನದಲ್ಲಿ ನಿಜ ಮಾಡಿ5 ಸಾಗರಶಾಯಿ ಮನಕೆ ಹ್ಯಾಂಗೆ ಬಂದೀತುಎಂದು ಹೀಗೆ ಕೈ ಮುಗಿದು ತಲೆಬಾಗಿಹೀಗೆ ಕೈ ಮುಗಿದು ತಲೆಬಾಗಿ ರುಕ್ಮಿಣಿಆಗೊಂದು ಮನದ ಬಯಕೆಲ್ಲ6 ಎಷ್ಟು ಜಪಿಸಿ ನೀನು ಠಕ್ಕಿಸಿ ಕೃಷ್ಣನ ಇಟ್ಟಾನೆ ರಮಿಯ ಎದಿಮ್ಯಾಲೆ ಇಟ್ಟಾನೆ ರಮಿಯ ಎದಿಮ್ಯಾಲೆ ರುಕ್ಮಿಣಿ ಇಷ್ಟರ ಮ್ಯಾಲೆ ತಿಳಕೊಳ್ಳ7
--------------
ಗಲಗಲಿಅವ್ವನವರು
ಬಿಡೆನು ನಿನ್ನಯ ಪಾದವಾ ಮುಖ್ಯ ಪ್ರಾಣ ಬಿಡೆನು ನಿನ್ನ ಪಾದಾ ಕಡಲ ಹಾರಿದೆನೆಂಬ ಸಡಗರದಿಂದೆನ್ನ ಕಡೆಹಾಯಿಸದೆ ಬೇಗ ಪ. ಹದಿನಾಲ್ಕು ಲೋಕದೊಳು ವ್ಯಾಪಕವಾಗಿ ಮುದದಿಂದ ಹಂಸ ಮಂತ್ರವ ಜಪಿಸುತ ಮಧುವೈರಿಯನು ಒಲಿಸಿ ಕಡೆಗೆ ಅಜ- ಪದವನೈದುವಿ ಸುಖದಿ ವಿಧುಕಳಾಧರ ವಾಸವಾದ್ಯರ ಮುದದಿ ರಕ್ಷಿಸಿ ದೈತ್ಯ ಪುಂಜವ ವಿಬುಧ ಗಣಾರ್ಚಿತ 1 ಮತಿವಂತನಾದಮ್ಯಾಲೆ ತ್ವತ್ಪಾದವೇ ಗತಿಯೆಂದು ನಂಬಿಹೆನು ನೀ- ನಿತ್ತ ಶಕುತಿಯಿಂದ ಪೂಜೆಯನು ಮಾ- ಡುತ ನಿನ್ನ ಪ್ರತಿಮೆಯ ನಮಿಸುವೆನು ವಿತತ ಮಹಿಮನೆ ಪೂರ್ವಭವ ದುಷ್ಕøತಗಳೆನ್ನನು ಪತನಗೊಳಿಪದನತುಳ ನೀ ನೋಡುತ್ತ ಎನ್ನನು ಜತನಮಾಡದೆ ವಿತಥ ಮಾಳ್ಪರೆ 2 ಹಿಂದೆ ತ್ರೇತಾಯುಗದಿ ಈ ಧರಣಿಗೆ ಬಂದು ನೀ ಕಪಿರೂಪದಿ ಅರ- ವಿಂದ ಬಾಂಧವನನು ಸೇರಿದಿ ಇಂದ್ರ ನಂದನನಿಂಗೆ ರಾಜ್ಯವ ಇಂದಿರೇಶನ ದಯದಿ ಕೊಡಿಸಿ ಪು- ರಂದರಗೆ ವರವಿತ್ತ ಬಲದಶ ಕಂಧರನ ಜವದಿಂದ ಗೆಲಿದನೆ 3 ಭೀಮನನೆನಿಸಿ ಕೀಚಕರ ನಿ- ರ್ನಾಮ ಗೊಳಿಸಿ ಜಯಿಸಿ ಕಿಮ್ಮೀರ ಬಕಮಾಗಧರ ಸೀಳಿಸಿ ಸಾಮಗಾಯನ ಲೋಲಕೃಷ್ಣನ ಪ್ರೇಮ ರಸಪೂರ್ಣೈಕ ಪಾತ್ರನಿ- ರಾಮಯನೆ ಧೃತರಾಷ್ಟ್ರತನಯಸ್ತೋಮವನು ತರಿದಮಲರೂಪ 4 ಕಡೆಯಲಿ ಕಲಿಯುಗದಿ ನೀ ಯತಿಯಾಗಿ ಮೃಡನ ತರ್ಕವ ಖಂಡಿಸಿ ಜ್ಞಾನಾ ನಂದಕದಲಿ ಕೃಷ್ಣನ ಸ್ಥಾಪಿಸಿ ಮಾಯಿಗಳನ್ನು ಬಡಿದು ದೂರದಲೋಡಿಸಿ ಪೊಡವಿಗಧಿಪತಿ ಪಾವನಾತ್ಮಕ ಒಡೆಯ ಶೇಷಾಚಲನಿವಾಸನ ಮೆರದನೆ ತಡವ ಮಾಡದಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೃಹತಿ ನಾಮಾ ಪ್ರಾಣ ಕಾಯೊ ಯೆನ್ನಾ ಪ ಮಹತಿ ಧಾರೀ ಸ್ತುತ್ಯ ಗುರು ಮುಖ್ಯ ಪ್ರಾಣಾ ಅ.ಪ. ಕರ್ಮ ಬೀಜವನೂ 1 ಸಿರಿ | ಅನ್ನ ನಾಮಕಗೇ |ಅನ್ನ ದನ್ನಾದನಿಗೆ | ಅನ್ನ ನೆನಿಸುತ ನೀನುಲೀನ ಗೈಸುವಿ ಜಗವ | ಮಾನ ನಿಧಿ ಪ್ರಾಣಾ 2 ವ್ಯಾಪ್ತೋಪವಾಸಿ ನಿ | ರ್ಲಿಪ್ತ ಬಲದೇವ ಸಂ-ತಪ್ತ ಸುಜನರ್ಗೆ | ಆಪ್ತ ಬಂಧೋ |ಗೋಪ್ತ ನಾಮಕ ಗುರು | ಗೋವಿಂದ ವಿಠಲನಪ್ರಾಪ್ತ ಮಾಡಿಸೊ ದೇವ | ದೀಪ್ತ ಮಾರುತಿಯೇ 3
--------------
ಗುರುಗೋವಿಂದವಿಠಲರು
ಬೆಳಿಯೋ ಬೆಳಿ ಮನವೇ ಬೆಳಿಕಂಡ್ಯಾ ಬೆಳಿ ಮನವೇ ಬೆಳಿ ನಿನ್ನ ಹೊಲವನು | ಇಳೆಯೊಳು ಯಣಿಗಾಣದ್ಹಾಂಗೆ 1 ಗುರುವಿನಭಯ ಕೊಂಡು ಸತ್ವದಾ ಹೊಲ ಹಿಡಿದು | ಜರಿದು ಸಂಗಿಗಳನ್ನೆಲ್ಲಾ 2 ವಿವೇಕವೇಯಂಬಾ ನೇಗಿಲ ಎಂಟು | ಭಾವವೆಂಬೆತ್ತುಗಳಿಂದ 3 ದೃಢಪಾಶದಿಂದಲಿ ಕಟ್ಟಿ ಯಚ್ಚರವೆಂಬಾ | ಒಡನೆ ಶಿಕ್ಷದಿ ನಡೆಸುತಾ 4 ಜ್ಞಾನ ಭಕ್ತಿ ವೈರಾಗ್ಯ ತಾಳದ ಬಲದಿ | ಅನನ್ಯ ಭಾವ ಕೂರಿಗೆಯಿಂದಾ 5 ಗುರು ಕರುಣ ಮಳೆ ಗರೆಯೆ ವೇದಾಂತ ಬೀಜ | ಭರದಿ ಬಿತ್ತಿ ನಾದುವಂತೆ 6 ಅನುಮಾನ ಕಸ ತೆಗೆದು ಬೋಧವ ಯಡಿಹಾಯ್ದು| ಧನಗಾಳ ತುಂಬಿಡುವಂತೆ 7 ವರಕ್ಷೋಭ ಯಂಬಾ ನುಡಿ ಹಕ್ಕಿ ಬರಗುಡದೆ | ಪರಮ ಜಾಗೃತಿಯ ಕವಣಿಯಿಂದಾ 8 ಬೇರೆ ಬೇರೆ ದೋರ್ವುದೆಲ್ಲಾ ವಬ್ಬುಳಿ ಮಾಡಿ | ಸಾರಿಹ ಶೃತಿ ವಾಕ್ಯದಿಂದ 9 ದೋರುವಾ ದೃಶ್ಯ ಹೆಕ್ಕಲ ಬಿಟ್ಟು ವಳಗಿರುವ | ತೂರಿ ಅಹಂಭಾವ ಹೊಟ್ಟವನು 10 ದೈನ್ಯವನು ಹಿಂಗಿ ಬಳಕೊಂಡು ಅನ್ಯರಾ ಮರೆ ಹೋಗದಂತೆ 11 ಪರಿಪೂರ್ಣಾದ ಬಳಿಕ ಒಕ್ಕಲು ತನಕ | ಮರುಳೆ ನೀ ಸಿಕ್ಕದಿರು ಕಂಡ್ಯಾ 12 ಸಂಚಿತ ಸರ್ವ ಬಿಡಿಸಿಕೊ ಸುತ ಪ್ರಭು ಗುರು ಮಹಿಪತಿ ವಲುಮೆಯಿಂದಾ 13
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭವ ಭಂಗ ಪ. ಥಳ ಥಳಿಸುತ ಗೆಳತಿಯರು ಸಹಿತಾಗಿಚಳತೆಂಬೊ ದಿವ್ಯ ಆಭರಣಚಳತೆಂಬೊ ದಿವ್ಯಾಭರಣ ಭೂಷಿತರಾಗಿಕುಳಿತ ನಾರಿಯರು ಕಡೆಯಿಲ್ಲ1 ಕುಂತಲ ಕದುಪಿನ ಕಾಂತೆಯರು ಹರುಷದಿಕಂತುನಯ್ಯನ ಮುಖನೋಡಿಕಂತುನಯ್ಯನ ಮುಖನೋಡಿಮೈಮರೆದು ನಿಂತ ನಾರಿಯರು ಕಡೆಯಿಲ್ಲ 2 ಅಂದುಗಿ ಅರಳೆಲೆ ಬಿಂದಲಿ ಭಾಪುರಿಅಂದವಾಗಿದ್ದ ಅಸಲಿಅಂದವಾಗಿದ್ದ ಅಸಲಿ ಕಟ್ಟಿದಕಂದರಿನ್ನೆಷ್ಟು ಕಡೆಯಿಲ್ಲ3 ಕಾಲಲಂದುಗೆ ಗೆಜ್ಜೆ ತೋಳಲಿ ತಾಯತಲಾವಳಿಗೆ ಮುತ್ತು ಅಲುಗುತಲಾವಳಿಗೆ ಮುತ್ತು ಅಲುಗುತಸುಳಿದಾಡೊ ಬಾಲರಿನ್ನೆಷ್ಟು ಕಡೆಯಿಲ್ಲ 4 ಹಸಿರು ಪಚ್ಚದ ಕಂಭ ಕುಸುರಾದ ಗಿಳಿಬೋದುಗೆಎಸಕೊ ಮಾಣಿಕದ ಜಗುಲಿಯ ಎಸಕೊ ಮಾಣಿಕದ ಜಗುಲಿ ಸಿಂಹಾಸನದಿ ವಸುದೇವ ತನಯ ಕುಳಿತಾನೆ 5 ಬಿಸÀಜನೇತ್ರಿಯರ ಮುಂದೆ ಕುಶಲದ ಮಾತ್ಹೇಳುತವಸುದೇವ ತಾನು ಕುಳಿತಾನವಸುದೇವ ತಾನು ಕುಳಿತಾನ ದೇವಕಿಯಸೊಸೆಯರ ಕಂಡು ಹರುಷಾಗಿ 6 ಚಲುವ ರಾಮೇಶನ ಬಲದ ಭಾಗದಿಬಂದು ಹಲವು ಮಾತುಗಳು ಕಿವಿಯೊಳುಹಲವು ಮಾತುಗಳು ಕಿವಿಯೊಳುಹೇಳುತ ಬಲರಾಮ ತಾನೆ ಕುಳಿತಾನೆ7
--------------
ಗಲಗಲಿಅವ್ವನವರು
ಭಳಿರೆ ನಿಮ್ಮಯ ಗುಣವ ವರ್ಣಿಸಲಳವೆಜಲಧಿಸಮಗಂಭೀರ ಜಯತೀರ್ಥವರ್ಯ ಪ. ನಿನ್ನ ಕೃತಿಯೆಂಬಂಜನವ ದೃಷ್ಟಿಯೊಳಿಟ್ಟುಸನ್ನ್ಯಾಯ ವಿವೃತ್ತಿ ಮತ ಭೇದಗಳಲ್ಲಿಪನ್ನಂಗಶಯನನ ಭಕ್ತಿಯಿಂದ ಪ್ರ-ಸನ್ನವನೆ ಮಾಡಿ ಪುರುಷಾರ್ಥವೀವುದೊ 1 ಆವ ಪರಿಯಿಂದ ಅರ್ಜುನನು ರಣದೊಳು ಪೊಕ್ಕುದೇವನುದರದಿ ಕಂಡನೀ ವಿಶ್ವರೂಪಆವಂದದಿ ಗುರು ಶ್ರೀಮದಾನಂದತೀರ್ಥರಭಾವಗಳನೆ ತಿಳಿದೆ ಭಾಷ್ಯಾದಿಗಳಲಿ 2 ಬುಧರು ನಿನ್ನಯ ನ್ಯಾಯಸುಧೆಯ ಶ್ರವಣವ ಸ-ವಿದು ಉದ್ಧರಿಸಿ ಮೋಹಂಗಳ ಮುಪ್ಪುಗಳ ಕಳೆದುಒಂದಧಿಕ ಬಲದಿಂದ ಒದ್ದು ಮಾಯಿ ದಿತಿಜರನುಒದಗಿ ಕಾಮವೆಂಬ ಕ್ಷುಧೆಗಳ ಅಳಿವರೊ 3 ಮಧ್ವರಾಯರೆಂಬುದು ಮತ್ತೊಂದು ರೂಪದಲಿಇದ್ದು ನುಡಿದಂದದಲಿ ಸಿದ್ಧಾಂತವನು ನೀ ಉದ್ಧರಿಸಿ ಲೋಕದಲಿಅದ್ವೈತ ಮತದವರ ಉದ್ಯೋಗದಿಂದ ಬಲುಮುಗ್ಧರನು ಮಾಡಿದೆ4 ಬರಿದೆ ಮಾತುಗಳಿಂದ ಬಂದ ವಿದ್ಯಾರಣ್ಯನಮರುಳು ಮಾಡಿದೆ ಗ್ರಂಥsÀಕರಣದಿಂದ ಪರರನರಿಗಳನು ಮಾಡಿದಾಶ್ಚರ್ಯ ಕಾರಣಪುರುಷವರ ಹಯವದನನ ಪಾದಸರಸಿಜಭೃಂಗ 5
--------------
ವಾದಿರಾಜ
ಭಾರತೀಶನ ಸೇರಿರೋ ಭವವಾರಿಧಿ ದಾಟುವರೆ ಸಾರ ತೋರುವ ಪ. ತುಂಗ ವಿಷಯಾಂಗಜನಿತೋತ್ತುಂಗ ತರಂಗದೊಳು ಅಂಗಜಾತ ತಿಮಿಂಗಿಲನು ತಾನುಂಗುವ ನಿಮಿಷದೊಳು ಮಂಗಳಾತ್ಮಕ ಮಾರುತನ ಸದಪಾಂಗಲೇಶವನೈದೆ ಸುಲಭದಿ ರಂಗನಿರವನು ತೋರಿ ಸಲಹುವ 1 ತ್ರೇತೆಯೊಳಗಿನ ಜಾತನಿಗೆ ರಘುನಾಥನ ತೋರಿಸಿದ ಕಾತುರದ ಪುರಹೂತನನು ಯದುನಾಥನಿಗೊಪ್ಪಿಸಿದಾ ಭೂತನಾಥನ ವಾಕ್ಯಬಲದಿಂದಾತ್ಮ ಜೀರಿಗೈಕ್ಯಪೇಳುವ ಪಾತಕಿಗಳನು ಗೆದ್ದು ತ್ರಿಜಗನ್ನಾಥ ಮುತ್ತಿದನೆಂದು ಮೆರಸಿದಿ 2 ಸೂತ್ರನಾಮಕ ಪ್ರಣವನಾಯಕ ಕ್ಷತ್ರಪುರದೊಳಿರುವಾ ಶತ್ರುತಾಪನ ಶೇಷಗಿರಿ ಪತಿಪುತ್ರನೆನಿಸಿ ಮೆರೆವಾ ಚಿತ್ರಕರ್ಮ ಚಿರಂತನಾಣುಗ ಪುತ್ರಮಿತ್ರಕಳತ್ರ ಭಾಗ್ಯದ ನೇತ್ರ ವಿಷಯ ಪರತ್ರ ರಕ್ಷಕ ಧಾತ್ರಪದಸತ್ಪಾತ್ರನೆನಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೂತರಾಜರು ಭೂತರಾಜ, ಭೂತರಾಜ, ಭೂತರಾಜ ಜೈ ಜೈ ಜೈ ಪ ಭಾವಿರುದ್ರ ಜೈ ಜೈ ಜೈ ಅ.ಪ. ವಿನುತ ಗುರುವಿನಲ್ಲಿ ಮುನಿಗೆ ಜೈ ಜೈ ಜೈ 1 ಹರಿಯ ಮುಖಜರನ್ನು ಬಹಳ, ಜರಿದು ಜರಿದು ಗರ್ವ ದಿಂದ | ಬೊಮ್ಮರಕ್ಕಸ ಜೈ ಜೈ ಜೈ 2 ಘೋರ ಅಡವಿ ಸೇರಿ ಭರದಿ, ದಾರಿಯಲ್ಲಿ ಬಂದ ಜನರ | ಸೊರೆಕೊಂಡು ಮಾನಧನವ, ಕ್ರೂರನೆಂದು ಕರಸಿ ಕೊಂಡೆ3 ಜ್ಞಾನ ಪೂರ್ಣ ಗುರುವಿನೊಡನೆ, ಮಾನವಾದ ಪಕ್ಷಗೈದೆ4 ಶರಧಿ ವಾದಿರಾಜ, ಭರದಿ ಹರಿಸಿ ಕೀಳು ಜನ್ಮ | ಚರಣ ಭಜಿಪ ಭಾಗ್ಯಕೊಡಲು, ಮೆರದೆ ಭೂತರಾಜ ನೆನಿಸಿ |5 ಕ್ಷಮಿಸನೇನು ಸುತನಪಿತನು, ನಮಿಸಿ ನಿಂತ ನಿನಗೆ ನುಡಿದ | ಸುಖದಿ ಬಾಳೆಂದು6 ಗಾತ್ರ ಕೆಂಪು ನೇತ್ರ | ಚಾರು ವಡವೆ ಗಣವ ಧರಿಸಿ, ವೀರ ರೂಪದಿಂದ ಮೆರೆವೆ 7 ಹಾರಿ ಹೋಗಿ ಧನಪನೆಡೆಗೆ, ತೋರಿ ನಿನ್ನಶೌರ್ಯ ಪಡದು | ಭಾರಿ ರತ್ನ ಮಕುಟ ನುತಿಸಿ, ನೇರ ಶಿರದಲಿಟ್ಟೆ ಗುರುವಿಗೆ 8 ಪಥದಿ ಖಳನ ಕೊಂದು ಬೇಗ ರಥ ಸಮೇತ ಬದರಿಯಿಂದ ಪೃಥಿವಿ ಅಳೆದೆ ದೊರೆಯತಂದು, ವಿತತ ಮಹಿಮ ದುಷ್ಠದಮನ 9 ಕ್ಷೇತ್ರಪಾಲ ಶರಣು ಭಾವಿಸೂತ್ರ ವಲಿಯ ಬಿಡಲು ನಿನ್ನ ಗಾತ್ರಕೆಡಹಿ ಬೇಡಿ ಕೊಂಬೆ, ನೇತ್ರ ನೀಡೊ ಹರಿಯ ಕಾಂಬ ಜೈ10 ಕಳೆದು ಬೇಗ ಹೊಲಸು ಮನವ, ಬೆಳಿಸಿ ಹರಿಯ ದೃಢಸುಭಕ್ತಿ ಕಲಿಯ ತುಳಿವ ಶಕ್ತಿ ನೀಡಿ, ಕಲಸೊ ಸಾಧುಸಂಗ ಜೀಯ, ಜೈ11 ಭಂಗ ಗೈದು ನಿಂತೆ ಅಲ್ಲ ಲಿಂಗ ತಂದೆ ಕದರಿಯಿಂದ, ತುಂಗ ಮಹಿಮ ಮಂಗಳಾಂಗ ಜೈ12 ಕುಣಿದು ಮುದದಿ ಭಜಿಪೆ ಗರಳ ಕಂಠ ಭಾವಿ ಶರಣು, ಚರಣ ಪಿಡಿವೆ ಸ್ತೋತ್ರಪ್ರೀಯ ಜೈ13 ವೈರಿ ವೃಂದ ಮೋದ ಕೊಡಿಸು ತಿರ್ಪೆಭೂಪ |ಜೈ14 ರಾಜ ಬಿರುದು ಸಹಿತ ಭಾರಿ | ವಾಜಿ ಏರಿ ನಡೆಯೆ ವಾದಿ ಅಳಿಯೆ ಸಿಗದು ಜೈ 15 ವಂದು ಕಮ್ಮಿ ನಾಲ್ಕು ಹತ್ತು, ತಂದೆ ವಿಧಿಯ ಕಲ್ಪಗಳಲಿ | ಇಂದು ಉಂಬೆ ದಿವ್ಯ ಪದವಿ16 ಭೀತಿ ಕರವು ನಿನ್ನ ರೂಪ, ವ್ರಾತ್ಯಗಣಕೆ ವಾದಿ ರಾಜ | ದೂತ ನಿನಗೆ ಪ್ರತಿಯ ಕಾಣೆ, ಪ್ರೀತಿ ಸುರಿಸು ಭೃತ್ಯರೆಮಗೆ ಜೈ17 ರಾಜ ರೆಡೆಯ ಬಲದಿ ನೆಲಸಿ, ರಾಜ ಮಂತ್ರಿ ಕೆಲಸ ನಡೆಸಿ ಸೂಜಿ ತಪ್ಪಿಗೆಡೆಯ ಕೊಡದೆ, ರಾಜ ಕ್ಷೇತ್ರ ಕಾಯುತಿರ್ಪೆ ಬೈ18 ಕರ್ಣ ಗುಂಪು, ನಿನ್ನ ಸ್ತುತಿ ಸೇವಿಸುವರು | ದೊಣ್ಣಿ ಸೇವೆ ದುಡುಕಿ ದವಗೆ, ಚಿಣ್ಣರೆಂದು ತಪ್ಪ ಕ್ಷಮಿಸು ಜೈ19 ಚಿತ್ರ ವೈಯ ನಿನ್ನ ಚರಿತೆ, ಭಕ್ತರಿಂದ ಕೊಂಡು ಹರಿಕೆ ಕಿತ್ತು ವಗೆದು ವಿವಿಧ ದೋಷ, ಎತ್ತಿ ಕೊಡುವೆ ಕಾಮಿತಾರ್ಥಜೈ20 ಭೂತ ಪ್ರೇತ ಬಾಧೆ ಸಕಲ, ಆರ್ತಿನಾಶ ಪದವ ಪಠಿಸೆ | ನಲಿವ ಜೈ ಜೈ ಜೈ 21
--------------
ಕೃಷ್ಣವಿಠಲದಾಸರು
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು