ಒಟ್ಟು 492 ಕಡೆಗಳಲ್ಲಿ , 79 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನಂಬು ನಂಬು ನಂಬು ಮನವೆ ಅಂಬುಜಾಕ್ಷನ ಪ್ರಭುವ ಪಾದ ಇಂಬು ನಿನಗೆ ದೊರಕುವುದು ತುಂಬಿ ಮಂಗಳ ಪ ದುಷ್ಟ ಅನ್ನ ದುಷ್ಟ ಸಂಗ ಭ್ರಷ್ಟ ಭಾವದಿಂದ ಮನವು ಕೆಟ್ಟು ಬೆದರಿ ಸವಿಯುಗೊಳ್ಳದು ಶಿಷ್ಟರನುಭವ 1 ಸತ್ಯಹರಿಯು ಜಗದ್ಗುರುವು ಸತ್ಯ ಮಧ್ವಶಾಸ್ತ್ರ ಫಲವು ಸತ್ಯ ಮಹಿಮ ಗುರುಕರುಣ ಸತ್ಯ ನಿತ್ಯದಿ 2 ಭಾರತ ಭಾಗವತವ ಕೇಳು ಭರತನಣ್ಣನ ಚರಿತೆ ಕೇಳು ಖರೆಯು ಹರಿಯ ಭಕ್ತರೀಗೆ ನಿರುತ ಮಂಗಳ 3 ನಿರುತ ವಿದಯ ಲೋಭಿಗಳ ದುರುಳ ದುರ್ಬಲ ಭಾವ ತಿಳಿದು ಹರಿಯ ಮೆರೆಯೆ ಸಕಲ ಭಯವು ಮರುಳು ಮಾಳ್ಪವು 4 ಕರಿಯ ಧ್ರುವನ ಅಸುರ ಬಾಲನ ನರನ ಸತಿಯು ಭೀಷ್ಮ ಕುಚೇಲ ವರದ ದೇವನ ದಾಸರ ಭಜಿಸು ನಿರುತ ದೃಢದಲಿ 5 ಹಿಂದೆ ಎಷ್ಟೊ ಕಾಲದಿಂದ ಕುಂದು ನೋಡದೆ ನಿನ್ನ ಬಿಡದೆ ಮುಂದು ತಂದ ಬಗೆಯ ತಿಳಿಯೊ ಸಂದೇಹ ಪೋಪದು 6 ಕಾಲಿಗೆ ಬಿದ್ದ ದೀನರನ್ನು ಕರ್ಮ ಮೀರಿ ಪೊರೆವ ಬಾಳ ಕರುಣಿ ಮಹಾ ವಿಜಯ ರಾಮಚಂದ್ರನು7 ಹಿಂದೆ ಪೇಳ್ದ ವಾಕ್ಯವೆಲ್ಲಿ ಇಂದು ಬಿಡದೆ ಫಲಿಸುವೋವು ಮಂದನಾಗದೆ ಪ್ರಭುವ ಪಾದ ದ್ವಂದ್ವ ಬಿಡದಿರು 8 ನಿತ್ಯ ಹನುಮ ಭೀಮ-ಮಧ್ವ ಭೃತ್ಯರ ಶಿರೋರತನುನಿವನು ಸತ್ಯ ಮಹಿಮ ಜಯೇಶವಿಠ- ಲಾಪ್ತ ಸತ್ಯವು 9
--------------
ಜಯೇಶವಿಠಲ
ನಂಬು ನಮ್ಮ ಹರಿಯ ನಂಬಿದ- ರಿಂಬುದೋರುವ ದೊರೆಯಾ ವಿಶ್ವ ಕು- ಟುಂಬಿ ವಾಯು ಪೂಜ್ಯಾಂಬುಜ ಪಾವನ ಪ. ಕಾಮಧೇನು ಕಲ್ಪತರು ಚಿಂತಾಮಣಿಯಿಂದಪ್ಪ ಕಾಮಿತಾರ್ಥವೆಲ್ಲ ನಿರವಧಿ ಪ್ರೇಮಿಸಿ ಕೊಡಬಲ್ಲ ನಿತ್ಯ ಕಥಾಮೃತ ಸೇವಿಸಲು ಪಾಮರ ಜನಕೆ ಸ್ವಧಾಮವನೀವನ 1 ದುರಿತರಾಶಿಗಳನು ನಿಮಿಷದಿ ತರಿವನು ಮಾಧವನು ಸ್ಮರಿಸುವ ದಾಸರನು ಮರೆಯದೆ ಕರುಣಿಸಿ ಸಲಹುವನು ಚರಣಾಂಬುಜ ಕಿಂಕರಾಗಿರುವರು ಕರೆದಲ್ಲಿಗೆ ಬಂದಿರುವ ಮಹಾತ್ಮನ 2 ಶ್ರೀ ಭೂಮಿಸಹಿತ ಕೈವಶನಾಗುವ ಗುಣಭರಿತಾ ಯೋಗಿ ಮನೋನುಗತ ಶ್ರೀಮದ್ಭಾಗವತಾಂತಗತಾ ನೀಗಿ ನಿಖಿಳಭವ ರೋಗವ ಶರಣ ಮ- ನೋಗತ ಸಲಿಸುವ ಭೋಗ ಗಿರೀಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮಿಸುವೆನು ಮನ್ಮಾತೆ ಪದಯುಗಳಕೇ ಪ ಅಮಮ ಎನ್ನಲಿ ನಿಮ್ಮ | ಮಮತೆ ಎಷ್ಟಮ್ಮಾ ಅ.ಪ. ಭಾಗವತ | ಮೊದಲಾದ ಶಾಸ್ತ್ರಶೃತೆಖೇದ ಮೋದಾದಿ ಎನೆ | ದ್ವಂದ್ವಗಳ ಸಹಿಷ್ಣುತೆಸಾಧನೋತ್ತಮಗೈದೆ | ಈ ದೇಹ ದಾತೇ 1 ಸಿರಿ ವೆಂಕಟನ | ಬೆಟ್ಟಕ್ಕ ತ್ರೈಬಾರಿಕಷ್ಟದಲಿ ಸಾಧನ | ಸ | ಹಿಷ್ಣುತೆಯು ಎಷ್ಟಮ್ಮಾ 2 ಸೇತು ರಾಮೇಶ್ವರದ | ಯಾತ್ರೆಗಳ ಗೈದು ಸ-ತ್ಪಾತ್ರರನ್ನಾದರಿಸಿ | ಕಾತುರತೆಯಲ್ಲೀ |ವಾತಾಂತರಾತ್ಮ ಗುರು | ಗೋವಿಂದ ವಿಠ್ಠಲನಕೀರ್ತನೆಯ ಚತುರೆ ತವ | ಪಾದಕಾ ನಮಿಪೇ 3
--------------
ಗುರುಗೋವಿಂದವಿಠಲರು
ನಮಿಸುವೆನು ವ್ಯಾಸಾರ್ಯ | ಸುಮನಸರಿಗತಿ ಪ್ರೀಯ ವಿಮಲಕೀರ್ತಿ ಸುಶಯ್ಯ ಯತಿವರಾರ್ಯ ಪ ಅಮಮ ನಿಮ್ಮಯ ಕೀರ್ತಿ ಪೊಗಳಲಳವೇ ಎನಗೆಸುಮನಸ ಮುನಿಯನುಗ್ರಹೀತಾ - ಖ್ಯಾತಾ ಅ.ಪ. ಕನಕ ಕಶ್ಯಿಪು ಸುತನೆ | ಧನಕನಕ ತೃಣಗಣನೆಅಣು ಘನನ ಶ್ರೀ ಚರಣ | ವನಜ ಭ್ರಮರಾ |ಮನುಜಮೃಗ ವೇಷ | ಶ್ರೀ ನರಹರಿಯ ಮೂರ್ತಿಯನುಘನವಾದ ಸ್ತಂಭದೊಳು | ಕರೆದು ತೋರಿಸಿದೇ 1 ಮತ್ತೆ ನೀ ತ್ರೇತೆಯಲಿ | ಹತ್ತು ತಲೆ ರಾವಣನಭ್ರಾತೃವಾಗವತರಿಸಿ | ಕೀರ್ತಿಯಲಿ ಮೆರೆದೇ |ಭೃತ್ಯ ಭಾವದಿ ನಮಿಸಿ | ಸತ್ಯಾತ್ಮ ಶ್ರೀಹರಿಯವಿಸ್ತರದ ಕೀರ್ತಿಯಲಿ | ಲಂಕ ಪತ್ತನವಾಳ್ದ 2 ನರಪ ಪ್ರತೀಪನಾ | ಪರಸೂನು ವೆಂದೆನಿಸಿ ಕುರುಪತಿಯ ಋಣಸೇವೆ | ಸರಿಯಾಗಿ ಸಲಿಸೀ |ಮರುತಾತ್ಮ ಭೀಮನಿಂ | ವರವನೇ ಪಡೆಯುತ್ತವರ ಕಲೀಯಲಿಯತಿ | ವರನೆನಿಸಿ ಮೆರೆದೇ 3 ಬ್ರಹ್ಮಣ್ಯಯತಿ ಕರಜ | ಬ್ರಹ್ಮ ಬ್ರಾಹ್ಮಣ ಪ್ರೀಯಬ್ರಹ್ಮಣ್ಯ ಪ್ರೀಯ ಸು | ಬ್ರಹ್ಮಣ್ಯನಾವೇಶನೇ |ಬ್ರಹ್ಮಾಸ್ಮಿ ಎಂದೆನಿಪ | ಬ್ರಹ್ಮದ್ವೇಷಿಯ ನಿಕರಬ್ರಹ್ಮಾಂಡದಲಿ ತರಿದೇ | ಬ್ರಾಹ್ಮಣರ ಪೊರೆದೇ 4 ಭಾಗವತ ಪ್ರೀಯ 5
--------------
ಗುರುಗೋವಿಂದವಿಠಲರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮ್ಮ ಗುರುರಾಯಾ | ಪೊಡವಿಗೆ ನಡೆ ತಂದನು ಪ ಪೊಡವಿಗೆ ನಡೆ ತಂದನು| ಎಡ ಬಲದಲಿ ಭಾಗವತರ ಮೇಳದಿಂದಲಿ | ಪರಿ ಪರಿಯಾಟವ | ಆಡುತ ಪಾಡುತ ನಲಿದಾಡುತಲಿ 1 ಭವ ರೋಗಿಗಳೆಲ್ಲರು | ತ್ವರಿತದಿ ಬನ್ನಿರೋ ಯನುತಲಿ ಹರಿನಾಮಾ | ಭೇರಿಯ ಹೊಯ್ಸುತ ತತ್ವೋಪದೇಶದ | ಕರದಲಿ ಔಷಧವನೆ ಹಿಡಕೊಂಡು2 ಬಂದವರಿಗೆಲ್ಲ ಬೇಡಿದ್ದು ಕೊಡುತಲಿ | ಮಂದ ಮತಿಗಳವಗುಣವನೆ ಬಿಡಿಸುತ | ಸಾರಥಿ | ಎಂದೆಂದು ಶರಣರಿಗಾಧಾರಿಯಾಗಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಸಿಂಹನ್ಯನ ಮನೆಯ ಹರಿಕಥೆ ಸಂದರ್ಭದಲ್ಲಿಆನಂದಮಾನಂದವಾನಂದವಾುತು ಸಾನಂದವಾದ ನಾರಸಿಂಹಯ್ಯಮಂದಿರದಲ್ಲಿ ಪರಾಮಮಹೋತ್ಸವ ಪ್ರೇಮದಿಮಾಡಲುಸ್ವಾ'ುೀಲಕ್ಷ್ಮಣಸೀತ ಸಮೇತರಾಗಿಬರಲು 1ಭಾರತ ರಾಮಾಯಣ ಭಾಗವತಾದಿ ಗ್ರಂಥಪಾರಾಯಣಂಗಳು ಭೂಸುರಾಧಿಪರು ಮಾಡಲು 2ಭಕ್ತಾಜನರು ಹರಿಭಜನೆ ಮಾಡಲು ರಾಗರಕ್ತೀಭಕ್ತೀ ಯುಕ್ತಶಕ್ತೀ ಪರರಾಗಿನಿರಲು 3ಪರಿಪರಿ ತೆರದಿ ವಾದ್ಯಪಂಕ್ತೀ ಮಂಟಪದಲ್ಲಿತಿರುವಾರಾಧನೆ ತೀರ್ಥಪ್ರಸಾದ 'ನಿಯೋಗ 4ಪರಮಭಾಗವತರು ಪಂಡಿತ ನಿಪುಣರುತರುಣೀಮಣಿಯರೆಲ್ಲ ತತ್ಸೇವೆಮಾಡಲು 5ಸಿರಿಶುಕ್ಲವರ್ಷ ಚೈತ್ರಶುದ್ಧ ಬಿದಿಗೆ ಭರಣಿಗುರುತುಲಸೀರಾಮಜನನ ಚಾರಿತ್ರೆನುಡಿಯಲು 6ಶ್ರೀಲಕ್ಷ್ಮೀದೇವಮ್ಮ ಸುಖಪ್ರಸು'ಸಿದಳುತುಲಸೀರಾಮಾಖ್ಯನನ್ನ ತತ್ಕಾಲ ಲಗ್ನದಲ್ಲಿ 7ಶ್ರೀಶಾ ತುಲಸೀರಾಮಸ್ವಾ'ುೀ ಪದಾರ'ಂದಆಶ್ರೀತರಂಗಸ್ವಾ'ುೀದಾಸಾನು ಸೇ'ಸಲು 8
--------------
ಮಳಿಗೆ ರಂಗಸ್ವಾಮಿದಾಸರು
ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಪ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ 1 ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ 2 ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ 3 ಹಮ್ಮನಾಡಿ ಮುನ್ನ ಬ್ರಹ್ಮ ತಾ ಕೆಟ್ಟಅಮ್ಮನ ನುಡಿ ಕೇಳದೆ ಹನುಮಂತ ಕೆಟ್ಟತಮ್ಮನ ನುಡಿ ಕೇಳದೆ ರಾವಣನು ಕೆಟ್ಟನಿಮ್ಮ ನೋಯಿಸಿದ ಮೈರಾವಣನು ಕೆಟ್ಟ 4 ಭಾಗೀರಥಿಯ ತಂದೆ ಬಹುದೈತ್ಯರ ಕೊಂದೆಭೋಗಿಶಯನ ಶ್ರೀ ಲಕ್ಷ್ಮೀಕಾಂತನೆಭಾಗವತ ಪ್ರಿಯ ಭವಭಯಹರಕಾಗಿನೆಲೆಯಾದಿಕೇಶವಗೆ ನಮೊ ನಮೋ 5
--------------
ಕನಕದಾಸ
ನಾ ಬೇಡುವೆನೋ ನಿನ್ನ ಸೌಭಾಗ್ಯಸಾಗರ ಶ್ರೀ ಭೂ ನೀಳಾವರ ಭಾಗವತೋದ್ಧಾರ ಪ ಯಾವಾಗಲು ನಿನ್ನ ಬಳಿಯೊಳು ನಾನಿದ್ದು ಭಾವಿಸಿ ಕುಶಲದ ಮಾತನಾಡೀ ದೇವ ನಿನ್ನಯ ಪಾದಯುಗಳವನೊತ್ತುತೆ ಸೇವಿಸಿ ಸುಖಿಪಂತೆ ಕರುಣಿಸು ಮುರಹರ1 ಮುಂಗಡೆ ಕುಣಿ ಕುಣಿದಾಡಿ ಸ್ತೋತ್ರವ ಮಾಡಿ ಕಂಗಳೊಳಾನಂದಭಾಷ್ಪಗೂಡೀ ಅಂಗವ ಮರೆತೆನ್ನ ಕಂಠಗದ್ಗದವಪ್ಪ ಮಂಗಳಕರ ಭಕ್ತಿ ಕೃಪೆ ಮಾಡು ಶ್ರೀರಂಗ 2 ಹೆಜ್ಜಾಜಿಯ ಚೆನ್ನಕೇಶವ ಮಾಧವ ಹೆಜ್ಜೆ ಹೆಜ್ಜೆಗೆ ನಿನ್ನ ಸ್ಮರಣಿಯಿತ್ತು ಸಜ್ಜುಗೊಳಿಸಿ ಎನ್ನ ಹೃದಯಪೀಠದಿ ಕೂಡೊ ಅರ್ಜುನಸಾರಥಿ ಶ್ರೀಕೃಷ್ಣ ಪರಮಾತ್ಮ 3
--------------
ಶಾಮಶರ್ಮರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ