ಒಟ್ಟು 453 ಕಡೆಗಳಲ್ಲಿ , 85 ದಾಸರು , 411 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪ ಪಾಲಿಸಯ್ಯ ತಿಮ್ಮಯ್ಯ ತಪ್ಪ ಪಾಲಿಸಯ್ಯಪ. ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳು ಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆಅ.ಪ. ಜಲಜನಾಭ ನಿನ್ನ ಮಹಿಮೆಯ ನೆಲೆಯನರಿಯದೆನ್ನ ಮನವದು ನೆಲೆಯಿಲ್ಲದ ಭವಜಲಧಿಯೊಳಾಡುತ್ತ ಲಲನಾ ವಿಷಯದ ಬಲೆಗೆ ಮೋಹಿಸಿ ಮನ ಸಿಲುಕಿ ಮಲಿನವಾಯ್ತು ತತ್ವದ ನೆಲೆಯನರಿಯದಾಯ್ತು ಹೀಗೆನ್ನುತ ಕಳೆದುಹೋಯ್ತು ವಿಂಶತಿ ವತ್ಸರಗಳು ತೊಳಲಿ ಸಕಲ ಭವದೊಳಗಾರ್ಜಿತವಹ1 ಹಾಳು ಮನವು ಕೂಡಿ ನಾನಾ ಚಾಳಿ ಮಾಳ್ಪುದಾಡಿ ಬುದ್ಧಿಯ ಪೇಳಿದಷ್ಟು ದುಶ್ಯೀಲವೆ ಮಾಳ್ಪುದು ಆಲೋಚನೆಯೊಳಗೆ ಬಿದ್ದರೆ ಮೇಲಿಲ್ಲವು ಕ್ಷಣಕೆ ತನ್ನಯ ಶೀಲವನೆ ಸ್ವೀಕರಿಸುತಿರುವುದು ಪೇಳಲೇನು ಕರುಣಾಳು ನೀ ಯೆನ್ನಯ2 ನಾನಾ ಕಷ್ಟಪಟ್ಟೆ ಇನ್ನಾದರು ಮಾನಿಸಬೇಕಷ್ಟೆ ಎನ್ನೊಳು ಊನ ಗ್ರಹಿಸಿ ಅನುಮಾನ ಸಾಧಿಸಿದರೆ ನಾನೆಂಬುವದೇನು ಸ್ವತಂತ್ರವ ಕಾಣೆನು ಎನ್ನೊಳಗೆ ಸಂತತ ನೀನೇ ಗತಿಯೆನಗೆ ಇದಕನು- ಮಾನವಿಲ್ಲ ಪಾದಾನತಜನರಾ ಧೀನನೆಂಬ ಬಿರುದಾನಬೇಕಾದರೆ3 ಅಪರಾಧಿಯೆ ನಾನು ಹೇಗೈ ಅಖಿಲಾತ್ಮನು ನೀನು ಹೃದಯದಿ ಕೃಪೆಯ ಬೀರಿ ತೋರಿಪ ಪರಮಾತ್ಮನೆ ಚಪಲನಾಗಿ ಎನ್ನುಪಮೆಗೆಯೊಡ್ಡಿದೆ ಸಫಲವಾಯ್ತು ಎನಗೆ ಕೀರ್ತಿಯು ಅಪಕೀರ್ತಿಯು ನಿನಗೆ ಪಾದವ ಜಪಿಸುವಂತೆ ಕರುಣಿಪುದಿನ್ನಾದರೂ ಕಪಟವಾಯ್ತೆ ಸರೀಸೃಪಗಿರಿರಾಜನೆ4 ದೂಷಣಾರಿ ನಿನ್ನ ಪಾದದ ದಾಸಗೈಯ್ಯೊ ಎನ್ನ ಎನ್ನೊಳು ದೋಷವಿಲ್ಲ ಜಗದೀಶ ಜನಾರ್ದನ ದಾಶರಥಿಯ ಕರುಣಾಶರಧಿಯೊಳಗೆ ಈಸಾಡಿದ ದಾಸ ಕಾರ್ಕಳಾ ಧೀಶ ಶ್ರೀನಿವಾಸ ರವಿಶತ ಭಾಸ ಶ್ರೀಲಕ್ಷ್ಮೀನಾರಾಯಣ ಸ ರ್ವೇಶ ಭಕ್ತಜನಪೋಷ ನೀಯೆನ್ನಯ5
--------------
ತುಪಾಕಿ ವೆಂಕಟರಮಣಾಚಾರ್ಯ
ತರಣಿ ಪಾವಕ ಶಶಿ ನೇತ್ರಗಳುಪರಶುಮೃಗಂಗಳ ಧರಿಸಿರೆ ಕರಗಳು ವರದಾಭಯಗಳಲೊಪ್ಪಿರಲು 1ವಾಮವ ಗೌರಿಗೆ ಕೊಟ್ಟಿರಲು ಸಾಮಜಕೃತ್ತಿಯ ಹೊದ್ದಿರಲುಭೀಮನು ಮೂರ್ತಿಯ ಬೇಡಲು ಕೊಡಲು ಕಾಮನ ನೋಟದಿ ಕೆಡಹಿರಲು 2ಧರೆಯೊಳು ದಕ್ಷಿಣ ಕಾಶಿಯಲಿ ುರೆ ಗಂಗಾಧರ ರೂಪಿನಲಿತಿರುಪತಿ ವೆಂಕಟ ವರ ನಾಮದಲಿ ಮೆರೆವೆ ಮಹೇಶ್ವರ ಮಹಿಮೆಯಲಿ 3ಓಂ ಕೋಟಿಸೂರ್ಯಸಮಪ್ರಭಾಯ ನಮಃ
--------------
ತಿಮ್ಮಪ್ಪದಾಸರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ದಯದಿಂದಲಿ ನೋಡೊ ಎನ್ನಾ ಹಯವದನ್ನಾ ಶ್ರೀಹರಿ ಪ ವರಗಳ ನೀಡಿ ಅ.ಪ. ಭಕುತದಿ ಕೂಡಿ ಆಡುವೆ ನೀ ನಿತ್ಯ ಸುಜನರಿಗೆ ಕಾಡಿ ಕೆಣಕುವ ಈ ಖೋಡಿ ಅನುದಿನ ಸಾಮಗಾನ ಪ್ರೇಮಾ ಬ್ರಹ್ಮಾದಿಗಳಿಗೆ ಕಾಮಿತಪ್ರದ ರಾಮಾ ಪರಿಪೂರ್ಣ ರಾಮಾ 1 ಶಾಮಸುಂದರ ಶಕಟಾಸುರಮರ್ದನ ಸಾಮಜವರದನೆ ಮಾತುಳಾಂತಕ ಮದನ ಜ£ಕÀನೆ ಕರುಣಿಸಿ ಎನ್ನನು 2 ಏನು ಬಲ್ಲೆನು ನಾನು ನಿನ್ನ ಮಹಿಮೆಯನ್ನು ದೀನ ಸುರಧೇನು ಬಣ್ಣಿಸಲಳವೆ ನಿನ್ನ ಮಹತ್ತನ್ನು ಮುನಿಮೌನಿವರರಿಂದ ಅನಘನೆನಿನ್ನಮಿತ ಗುಣಗಣನ ಕಾಣದೆ ಲಕುಮಿ ಮನದಲ್ಲಿ ಅನುವು ತಪ್ಪೆ ನಿತ್ಯ 3 ಹಾಟಕಾಂಬರಧರ ಶ್ರೀವತ್ಸಲಾಂಛನ ಜಟಾಮಕುಟ ಕುಂqಲ ಕೈಟಭಾಂತಕನೆ ಕಡಲಮಂದಿರ ಕುಟಿಲ ಕಟುಮತಿ ಖಳರನು ಶಿಕ್ಷಿಸಿ ಕೈಯ್ಯ ಬಿಡದೆ ಎನ್ನಾ ಮಾನಿಧಿವಿಠಲ ಕಾಲಿಗೆ ಬೀಳುವೆ 4
--------------
ಮಹಾನಿಥಿವಿಠಲ
ದಯವು ಏತಕೆ ಬಾರದೌ ದೇವಿ ಭಯವಿಮೋಚನೆ ಭಕ್ತ ಸಂಜೀವಿ ಪ ಚರಣಕಮಲಕ್ಕೆ ಶಿರವ ಬಾಗಿದೆನೆ ಸೆರಗನೊಡ್ಡಿ ಪರಮಭಕ್ತಿಲಿ ಬೇಡಿಕೊಂಡೆನೆ ಕರುಣಭರಿತ ಮೊರೆಯ ಕೇಳ ದಿರು ವಿಜಯವಾಣಿ ಪರಮಕಲ್ಯಾಣಿ ಸರಿಯೆ ನಿನಗಿದು ಶರಣಜನರ ಕರುಣಾಕರಿ ಅಂಬ ಪರತರ ಬಿರುದು ಇದೆಯೇನೆ 1 ಮಾರಮರ್ದನರಸಿ ಗಂಭೀರೆ ಶಾರದಾಂಬೆಯೆ ಮೂರುಲೋಕಂಗಳಿಗೆ ಆ ಧಾರಿ ಪಾರಮಹಿಮೆಯೆ ತೋರು ಕರುಣವ ಬೇಗ ವರಗೌರಿ ಮರೆಯದಿರು ಶೌರಿ ಚಾರು ಚರಿತವ ಪಾಡಿ ಬೇಡುವೆ ಸಾರಮನದಿಷ್ಟ ಪೂರೈಸಿದ ರೌದ್ರಿ 2 ಸ್ವಾಮಿ ರಾಮನನಾಮಮಹಿಮರತಿ ನೀ ಮನವ ಸೋತಿ ಪ್ರೇಮದಿಂದಲಿ ತ್ರಿಜ ಗನ್ಮಾತೆ ವಿಮಲಚರಿತೆ ಪ್ರೇಮಮಂದಿರೆ ಭಕ್ತ ವರದಾತೆ ಅಮರಾದಿವಿನುತೆ ಹೈಮವತಿ ನಿನ್ನ ನಂಬಿ ಭಜಿಸುವೆ ಕ್ಷೇಮಪಾಲಿಸೆನ್ವ್ಯಾಧಿ ಕಳೆದು ನಾಮರೂಪರಹಿತೆ ವಿಮಲೆ ಅಮಿತಮಹಿಮಳೆ ಮಮತೆದೋರೆ 3
--------------
ರಾಮದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾತ ಸನ್ಮುನಿಗಣ - ನಾಥ ಕಾಮಿತ ಕಲ್ಪವೃಕ್ಷಾ - ಕಲ್ಪವೃಕ್ಷಾ ಆಶ್ರಿತಜನದಕ್ಷಾ ಪ ಧಾತ ಮುಖ ಸುರಮುನಿಯ ಸಂತತಿ ಪ್ರೀತಿ ಪೂರ್ವಕದಿಪ್ಪ ಕಾರಣ ಜೋತಿ ವೃಂದಾವನದಿ ತಾ ನಿ - ರ್ಭೀತ ಮಹಿಮೆಯ ತೋರ್ಪಜಗದಿ ಅ.ಪ ಬಿಕ್ಷುನಾಯಕ ಸರ್ವಾಪೇಕ್ಷದಾಯಕನೆಂಬ ಬಿರಿದು ನೆಂಬ ಬಿರಿದು ಪೊತ್ತಿಹ ಪಾಪ ತÀರಿದು ಪಾದ ಪದುಮವ ವಕ್ಷೋಮಂದಿರದೊಳಗೆ ತಾನಪ - ರೋಕ್ಷಕರಿಸೀ ಸರ್ವಜನರಾ - ಪೇಕ್ಷ ಪೂರ್ತಿಸಿ ಮೆರೆವ ಗುರುವರ 1 ಕ - ಮಂಡುಲಧರ ಹಂಸರೂಪಾ ಅಮಿತ ಪ್ರತಾಪ ಕರ ಮಾ - ತ್ರಿಜಗ - ಸುಜನ ಮನ್ಮನೋ - ಪುಂಡರೀಕ ನಿವಾಸ ನಿರ್ಮಲ 2 ಕಿಟಜ ಸರಿದ್ವರ - ತಟವಾಸ ಗುರುಜಗನ್ನಾಥ ಜಗನ್ನಾಥ ವಿಠಲ ಗುಣಗಾಥ ತಟನಿ ಲಹರೀ ಮಧ್ಯ ತನ ಹೃ ತ್ಪುಟ ಸುನಾವಿಯ ಮಾಡಿ ಸಂತತ ಅಟನಗೈಯುತ ಜಗದಿರಾಜಿಪ ಚಟುಲ ವಿಕ್ರಮ ಕರುಣಸಾಗರ 3
--------------
ಗುರುಜಗನ್ನಾಥದಾಸರು
ದಾತನೀತ ಯತಿನಾಥ ನಿಜಪದ ದೂತಜನರ ಪೊರೆವಾ ಪ ಧಾತನಾಂಡದೊಳತಿ ಖ್ಯಾತನಾಗಿ ಶಿರಿ ನಾಥ ನೊಲಿಸಿ ಮೆರೆವಾ ನೀತಮನದಿ ತನ ಮಾತು ಮೀರಿದಿಹ - ಗೀತೆರದಿ ತಾನೆ ಒಲಿವಾ ತಾತನೆ ಮನೋಗತ ಭೀತಿಯ ಬಿಡಿಸೆನೆ ಪ್ರೀತಿ ಮನದಿ ತಾ ಬರುವಾ ಅ.ಪ ರಾಮ ಕೃಷ್ಣ ನರಹರ್ಯಂಘ್ರಿಯ ಪ್ರೇಮಮನದಿ ಭಜಿಪಾ ನೇಮದಿ ತನ್ನನು ಕಾಮಿಪ ಜನರಿಗೆ ಕಾಮಿತ ಫಲರೂಪಾ ಈ ಮಹಾ ಮಹಿಮೆಯ ನೇಮದಿ ತೋರುವ ಭೂವಿ ಸುರರ ಭೂಪಾ ತಾಮಸ ಮತಿ ನಿರ್ಧೂಮ ಗೈಸುವ ಧೂಮಕೇತುನೆನಿಪಾ 1 ಮಂದ ಜನರಿಗೆ ಎಂದಿಗಲಭ್ಯನ - ಪೊಂದಿದ ಜನರಾ ಕುಂದೆÀಣಿಸದೆ ತಾ ನಂದ ಕೊಡವೊ ಮಹಾರಾಯಾ ವಂದಿಪ ಜನರಘ - ವೃಂದವ ದರುಶನ - ದಿಂದ ತರಿವೊ ಜೀಯಾ ಸುಂದರತರ ವೃಂದಾವನ ನಿಜ ಮಂದಿರ ಗತ ಧ್ಯೇಯಾ 2 ದಾತಗುರು ಜಗನ್ನಾಥ ವಿಠಲನತಿ ಪ್ರೀತಿಯಿಂದ ಭಜಿಪಾ ದೂತ ಜನರು ಬಲು ಆತುರದಲಿ ಕರಿಯೆ ಪ್ರೀತ ಮನದಿ ತಾ ಬಪ್ಪ ಮಾತೆಯತೆರ ನಿಜ ದೂತರÀ ಮನಸಿನ ಮಾತು ನಡೆಸುವ ನೀಭೂಪಾ ಈತಗೆ ಸರಿಯತಿನಾಥ ಕಾಣೆನೊ ಭೂತಳೇಶರಧಿಪಾ 3
--------------
ಗುರುಜಗನ್ನಾಥದಾಸರು
ದಾಸನಾಗಬೇಕು ಸದಾಶಿವನ ದಾಸನಾಗಬೇಕು ಪ ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಅ ಮನದ ಕಲ್ಮಷ ಕಳೆದು - ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ 1 ತನುವು ಅಸ್ಥಿರವೆನುತ - ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ 2 ಆರು ಚಕ್ರದಿ ಮೆರೆವ - ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ 3
--------------
ಕನಕದಾಸ
ದಾಸರ ನೆರೆನಂಬಿರೊ ಚಲುವ ವಿಜಯದಾಸರ ನೆರೆನಂಬಿರೊ ಪ ದಾಸರ ನೆರೆನಂಬಿ ಯೇಸು ಜನ್ಮದ ಭವಪಾಶವ ಹರಿಸಿ ರಮೇಶನ್ನ ಮಹಿಮೆಯಲೇಸಾಗಿ ವಿರಚಿಸಿ ಪರಮೋಲ್ಹಾಸದಲಿ ಜೀ-ವೇಶ ಭೇದವ ಯೇಸು ಬಗೆಯಲಿ ತಿಳಿಯುತಲೆ ನೆರೆ-ದೋಷ ಬುದ್ಧಿಯ ನಾಶಗೈವರ ಅ.ಪ. ಇಂದು ನಿಜವು ಕಂದುಗೊರಳಮ-ರೇಂದ್ರವಂದ್ಯ ಮುಕುಂದನನು ಬಿಡ-ದಂದು ಭಜಿಪ ಪುರಂದರನ ಪದದ್ವಂದ್ವಯುಗಳರವಿಂದ ಮಧುಪರ ನಂದದಲಿ 1 ಕಂಟಕ ಬಂಧಹರವೆಂದು ಮನದಲ್ಲಿ ನೆರೆ ತಿಳಿದರಿಂದ || (ದುಡುಕು) ಪರಮ ಧನ್ಯರು ಧರಿಗೆ ಯಾದವ-ರರಸೆ ಪೊರೆವನು ಕರುಣದಲಿ ಭೂಸುರರಗುರುದೊರೆ ಮರುತ ಪೊರೆವನುಸುರರವರ ಕಾದಿಹರು ಯೆನಿಪರ2 ಸಿರಿ ಮಾ-ಧವ ಮೋಹನ ವಿಠಲರೇಯನಅವಸರದ ಕಿಂಕರರ ಭಜಕರು 3
--------------
ಮೋಹನದಾಸರು
ದಾಸರ ಭಾಗ್ಯವಿದು ಪ ತಂದೆ ಮುದ್ದು ಮೋಹನ ದಾಸರ ಭಾಗ್ಯವಿದು ಅ.ಪ. ಕರಿಗಿರಿ ನರಹರಿ ಸಂದರ್ಶನವು | ನರಹರಿ ಭಕುತರ ವಿಹಿತದಸೇವೆ |ಪರಿಪರಿ ಗೈಯ್ಯುತ ಹಿಗ್ಗುತ ನಾನು | ಧರಿಸಿರುವಂಕಿತ ಭಾಗ್ಯವು ಎಲ್ಲಾ 1 ಉರುಗಾದ್ರಿವಾಸನ ಶರಣರ ಕೂಡೆ | ಸರಸದಿ ಕೇಳುತ ಹರಿ ಮಹಿಮೆಯನುಉರುತರ ಸುಖಸಂತೋಷದಿ ಕೀರ್ತನೆ | ಹಿರಿದಾಗಿ ಪಾಡುತ ನರ್ತಿಪುದೆಲ್ಲ2 ಭವನಿಧಿ ದಾಟಿಪ ಹವಣೆಯು ಎನಿಸುವ | ಭುವನ ಮೋಹನನ | ಗುಣರೂಪಗಳನವನವ ಕೀರ್ತನೆ ಸ್ತವನದಲಿ ಗುರು | ಗೋವಿಂದ ವಿಠಲ ನುಡಿಸುವುದೆಲ್ಲಾ 3
--------------
ಗುರುಗೋವಿಂದವಿಠಲರು
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು