ಒಟ್ಟು 1411 ಕಡೆಗಳಲ್ಲಿ , 100 ದಾಸರು , 901 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನಗೆಲ್ಲಿಯ ಕೊರತೆ ನಿನ ನಂಬಿದ ಮೇಲೆ ಮನಸಿಜನೈಯ್ಯಾ ಶ್ರೀ ರಂಗೇಶವಿಠಲ ಪ ಕೊಡುವ ಕರ್ತನು ನೀನು ಎಡಬಿಡದಿರುವಾಗ ಬಡತನವೆನಗ್ಯಾಕೆ ರಂಗೇಶವಿಠಲ 1 ಸತಿಯು ಸುತರು ಎನಗೆ ಹಿತವ ಬಯಸಲಿಲ್ಲ ಗತಿಯು ಎನಗೆ ನೀನೆ ರಂಗೇಶವಿಠಲ 2 ಮಂದಮತಿಯು ನಾನು ಸಿಂಧುಶಯನ ನಿನ್ನ ಕಂದನೆಂದು ತಿಳಿಯೊ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು
ಎಲೆ ಜೀವನ್ಮುಕ್ತ ನೀನೆ ಬ್ರಹ್ಮವೆಂದು ಕಾಣೋಎಲೆ ಜೀವನ್ಮುಕ್ತ ನೀನೆ ಬ್ರಹ್ಮವೆಂದು ಕಾಣೋ ಪ ಭಾನುವ ನೋಡಲು ಒಳಕಂಡಿಯ ಹಂಗ್ಯಾಕೆನೀನು ನಿನ್ನರಿವುದಕೆ ಯೋಗಗಳ ಸಾಧನ ಬೇಕೆ 1 ನಳಿನ ಸಖನ ನೋಡುವುದಕೆ ಬೆಳಕನು ಕೋರಲುಬೇಕೆಬಲು ನಿನ್ನನು ಕಾಣುವುದಕೆ ಸಾಧಕರ ಸಾಧನ ಬೇಕೆ 2 ಯೋಗಗಳೆಂಬುವುದಿನ್ನು ಜೀವ ಭ್ರಾಂತಿಯೆನ್ನುಈಗಲು ಇತರರಿಲ್ಲೆನ್ನು ಚಿದಾನಂದ ಸದ್ಗುರು ತಾನೆ ಎನ್ನು 3
--------------
ಚಿದಾನಂದ ಅವಧೂತರು
ಎಲೆ ದೇವಿ ಇಂತು ಚಿಂತೆಯು ಯಾಕ| ಸುಲಭದಿ ತಂದು ತೋರುವೆ ನಿನ್ನರಸನಾ ಪ ನಳಿನಗಳಲಿ ಅಪರಾಧವಾಯಿತೆಂದು| ಮುಳಿದು ಬಿಂಕದಿ ಅಳಿಮೊರೆದು ತಾನೆದ್ದು| ಕಲಸಾರುವೇನೇ ನಿನ್ನಯ ತನುಗುಪವ| ತೊಲಗಿಬಿಟ್ಟು ನಿಲ್ಲುವನೇನೇ ರಂಗಾ1 ಹಣ್ಣಾಗಿ ರಂಜಿಸತಿಹಾ ಚೂತದ ಫಲವನ್ನು| ತ್ಯಜಿಸಿ ಬಂದ ತಪ್ಪಾಯಿತೆಂದು| ಉಣಲೋಲ್ಲದೇ ಶುಕಬಿಟ್ಟು ಪೋಪದೇನೇ| ಪೊಂಬಣ್ಣಾಧರಸವಿಯಾ ಬಿಟ್ಟು ನಿಲ್ಲುವನೇ2 ಘನ್ನ ಚಿಂತೆಯಬಿಟ್ಟು ಹರುಷದಲಿರು ತಾಯೆ| ಇನ್ನು ನಾ ಪೋಗಿ ನಾನಾ ಪರಿಯಿಂದಾ| ನಿನ್ನ ಬಳಿಗೆ ಒಪ್ಪಂತೆ ಮಾಡುವೆನೆ ಸಂ| ಪನ್ನ ಕೀರುತಿ ಮಹಿಪತಿ ಸುತ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು
ಎಲ್ಯಾದರು ಮಾಡಬೇಕು ಕೆಲಸ ಪ ಅಲ್ಲೇನು ಇಲ್ಲೇನು ಬಲ್ಲಂಥಾವನಾದರೆ ತಾನು ಅ.ಪ ಶರೀರ ಸಂಬಂಧಿಗಳಿಗಾಗಿ | ಮೂರು ಕರಣದಿಂದಲಿ ಅನುವಾಗಿ ಕರೆಕರೆಪಡುತಲಿ ಅರೆನಿಮಿಷವಾದರೆ ಬಿಡದೆ 1 ತ್ತರವಾದ ಕಟ್ಟಾಜ್ಞೆ ಅಲ್ಲಿ ನ- ರರ ಕಾಟವು ಇಲ್ಲಿ ಸುರರ ನಿಬಂಧನೆಯಲ್ಲಿ 2 ಬಾಲ್ಯ ಯೌವನ ಕೌಮಾರ | ಮುಪ್ಪು ಲೀಲೆಯಿಂದಲಿ ಕೆಲವರು ಗೋಳಾಡುತಲಿ ಕೆಲವರು3 ಸ್ವಲ್ಪಾದರು ಸತ್ಕರ್ಮ ಮಾಡೆ | ಫಣಿ- ಅಲ್ಪರಿವುದು ಯಾಕೆ 4 ಇಪ್ಪತ್ತು ನಾಲ್ಕು ತತ್ವಗಳಿಂದ | ನ- ಕ್ಲುಪ್ತಗೈದಿರುವನು ಆಪ್ತ ಎಂದಿಗೂ ನಮಗವನು 5
--------------
ಗುರುರಾಮವಿಠಲ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಮಾತ್ರ ನಿಂದಲ್ಲದ್ದು ಹರಿ ಸೃಷ್ಟಿಯೊಳಗೆ ಎನ್ನ ಹುಟ್ಟಿಸಿದ್ದು ಪ ನಷ್ಟದೇಹ ಕೊಟ್ಟು ದುಷ್ಟ ಬವಣೆಯಿಂದ ಕಷ್ಟದೊಳಗೆ ಎನ್ನ ನೂಕಿದ್ದುಅ.ಪ ಉಳಿದ ಪಾಪಶೇಷ ಕಳೆಯದಲೆ ಎನ್ನ ಇಳೆಯವಾಸಕ್ಯಾಕೆಳೆಸಿದಲೇ ನಳಿನನಾಭ ನಿನ್ನ ಬಳಿ ಇದೆ ನ್ಯಾಯವೆ ಕಳವಳಪಡಲು ನಾನೊಳಿತೇನು ನಿನಗೆ 1 ಎಷ್ಟು ರೀತಿ ಕಷ್ಟ ತಡಿಬೇಕೊ ಇ ನ್ನೆಷ್ಟುದಿನ ಹೀಗೆ ಕಳೀಬೇಕೊ ಕರ್ಮ ಎನ್ನದಿರಲಿಕ್ಕಾಗಿನು ಶಿಷ್ಟಜನುಮ ಮತ್ತು ಕೊಟ್ಟ್ಯಾಕೊ 2 ಭಕ್ತವತ್ಸಲನೆಂಬ ಬಿರುದೇನೋ ನಿನ್ನ ಭಕ್ತರ ಅಭಿಮಾನ ತೊರೆದೇನೊ ಭಕ್ತರಿಗೀತೆರ ಮೃತ್ಯುಬಾಧೆಯೇನು ಮುಕ್ತಿದಾಯಕ ಜಗತ್ಕರ್ತ ಶ್ರೀರಾಮನೆ 3
--------------
ರಾಮದಾಸರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಏಕೆ ಬೇಕಾಗಿತ್ತೊ ನಿನಗೆ ಈ ಆಟಲೋಕೇಶ ಸಾಕಯ್ಯ ಇಲಿ ಬೆಕ್ಕಿನಾಟಾ ಪ ಸುಷ್ಟು ಜಲಧಿಶಯನ ಬಿಸುಟಿ ಬಿಸಲ್ಯಾಕೆಸೃಷ್ಟಿಪುದು ಮೊದಲ್ಯಾಕೆ ಸೃಷ್ಟಿಸಲು ಪ್ರಾಣಿಗಳಕಷ್ಟ ಪಡಿಸುವುದ್ಯಾಕೆ ಕಷ್ಟವನು ನೋಡಿತುಷ್ಟಪಡುವುದು ಯಾಕೆ ಇಷ್ಟಕೆ ಬಯಕೆ 1 ಸ್ವರ್ಗ ನರಕಗಳೇಕೆ ಜನ್ಮ ಜನ್ಮಾಂತರಕೆವರ್ಗ ಮಾಡುವುದೇಕೆ ಪಾಪಪುಣ್ಯಗಳೇಕೆದುರ್ಗಮದ ವೈಕುಂಠದಾಸೆ ತೋರುವುದೇಕೆನಿರ್ಗುಣನೆ ಸಲ್ಲದಿ ಉದ್ಯೋಗವ್ಯಾಕೆ 2 ಉದಧಿಶಯನದೊಳಾತ್ಮಾನಂದದಲಿ ಮುಳುಗಿಹೃದಯದೊಳು ನೀನೊಂದು ನೀನೇಯೇ ನೀನಾಗಿಮೋದ ಪಡುವುದು ಬಿಟ್ಟು ವೀರನಾರಾಯಣನೆಗದುಗಿನೊಳು ಬಂದಿಲ್ಲಿ ನಿಂತಿರುವುದೇಕೇ 3
--------------
ವೀರನಾರಾಯಣ
ಏತಕಿನಿತು ಕೋಪವಾಂತು ಭೀತಿಗೊಳಿಸುವೆ ರೀತಿಯೇನಿದನಾಥ ನಾಥ ನೀತಿಯೆನಿಪುದೆ ಪ. ಪರಮದಯಾಕರನು ನೀನೆನುತೊರೆವುದಾಗಮ ಪರಿಯ ನೋಡಲು, ಕರುಣೆ ನಿನ್ನೊಳಿರುವುದರಿಯೆ ನಾ1 ಪಾಲನೂಡಿದ ನಾರಿಗಂದು ಕಾಲನೆನಿಸಿದೆ ಕಾಲಕಾಲ ಶೂಲಿವಿನುತ ನೀಲವರ್ಣನೆ 2 ವರವನೀವ ವರದನೆಂದೇ ಹಿರಿಯರೊರೆವರು ಚರಣತಲದಿ ಶಿರವನಿಟ್ಟರು ತೆರೆಯೆ ಕಣ್ಗಳಂ3 ಅಡಿಯ ಪಿಡಿದು ಬೇಡಿಕೊಂಬೆ ಪೊಡವಿಗೊಡೆಯನೆ ಬಿಡದೆ ಕೈಯಪಿಡಿದು ಸಲಹೊ ಒಡೆಯ ಬೇಗನೆ 4 ಶೇಷಶೈಲ ಶಿಖರಧಾಮ ಯದುಕುಲೋತ್ತಮ ಶೇಷಶಯನ ಸಲಹು ನಮ್ಮ ಸತ್ಯವಿಕ್ರಮ5
--------------
ನಂಜನಗೂಡು ತಿರುಮಲಾಂಬಾ
ಏತಕೀ ಭಯ ನೀತಿಯೇನಯ್ಯ ಪ ಮಾತುಕೇಳು ತಾಮನದಲ್ಲಿನೊಂದು ಅ.ಪ ತಬ್ಬಿಕೊಂಡಿರ್ಪ ಪ್ರಾರಬ್ದ ಬಿಡುವುದೆ ಅಬ್ಜನಾಭನಿರುವ ನಮ್ಮರಕ್ಷಿಸಲು 1 ಬೊಬ್ಬೆರೋಗ ಬಂತೆಂದಬ್ಬರ ಜನಗೈಯ್ಯೆ ಉಬ್ಬಿಉಬ್ಬಿನೀ ಊರಬಿಟ್ಟೋಡಲು 2 ಹುಲಿಗಳಂಥನರರು ಇಲಿಯ ನೋಡಿ ಬೆದರಿ ಕಳೆದುಕೊಂಬರು ತಮ್ಮ ಸರ್ವಸ್ವವ 3 ಛಳಿ ಮಳೆಯು ಬಿಸಿಲು ಗಾಳಿಯೊಳು ಬಳಲುವುದ್ಯಾಕೆ ಬುದ್ಧಿಯಿಲ್ಲದೆ 4 ಕುನ್ನಿ ನಿನ್ನಂಥವರೆಷ್ಟುಮಂದಿ ಪೋದರು ಘನ್ನಗುರುರಾಮವಿಠಲನ್ನ ನಂಬು5
--------------
ಗುರುರಾಮವಿಠಲ
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನಾಗುವುದು ತಾನಾಗಿದೆ ಜಗ ನೀನ್ಯಾಕದರೋಳ್ಪಾಲಿಡುವ್ಯೋ ಪ ಕಾಣುಕಾಣುತಲಿ ಶೂನ್ಯವೆನಿಪುದೆಲ್ಲ ಜಾಣನಾಗಿ ಭವಗೆಲಿಯೆಲವೋ ಅ.ಪ ಸತತದಿ ಸತಿಸುತರ್ಹಿತಕಾಗಿ ಬಲು ಮತಿಗೆಟ್ಟತಿಯಾಗ್ವ್ಯಥೆಬಡುವ್ಯೋ ಪೃಥಿವಿ ಮೇಲೆ ನಿನ್ನ ಮತಿಯಲಿಂದ ಮಣ್ಣು ಪ್ರತಿಮೆಮಾಡಿ ಸೃಷ್ಟಿಗೊಳಿಸಿದೆಯೋ 1 ಹಲವುವಿಧದಿ ನಾನೆ ದುಡಿದು ಧಾನ್ಯಧನ ಗಳಿಸಿದೆನೆಂದು ಬಲು ಭ್ರಮಿಸುವೆಯೋ ತಿಳಿದುನೋಡೆಲೆ ಬೀಜದೊಳಗೆ ಮೊಳಕೆ ತಿದ್ದಿ ಬೆಳೆಯ ಬೆಳೆಸಿ ಸ್ಥಿತಿಮಾಡಿದೆಯೋ 2 ಎಷ್ಟುದಿನಿರ್ದರು ಬಿಟ್ಟು ಹೋಗುವುದನು ಗಟ್ಟಿಮಾಡ್ಯಾಕೆ ಭ್ರಷ್ಟನಾಗುವೆಯೋ ಸೃಷ್ಟಿಸ್ಥಿತಿಲಯಕರ್ತ ಶ್ರೀರಾಮನ ನಿಷ್ಠೆಯಿಂ ಪಾಡಿ ಮುಕ್ತಿಸುಖ ಪಡೆಯೋ 3
--------------
ರಾಮದಾಸರು
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು