ಒಟ್ಟು 732 ಕಡೆಗಳಲ್ಲಿ , 90 ದಾಸರು , 658 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಗಳ ಪರಿಹರಿಸೊ ಶ್ರೇಷ್ಠ ಮಾರುತಿಯೇ ಭ್ರಷ್ಟನಾದೆನು ಭಂಡ ಸಂಸಾರದಲ್ಲೀ ಪ ಸ್ವಾರ್ಥವೆನ್ನುವ ದುಃಖ ಸಾಗರದಿ ಮುಳುಗಿದ್ದು ಸ್ವಾರ್ಥಕೋಸುಗ ಹೀನ ಕೃತ್ಯಗಳ ಗÉೈದೂ ಅರ್ಥವನು ಗಳಿಸುತ್ತ ತುಂಬಿದೆನು ಈ ವಡಲ ವ್ಯರ್ಥವಾಯಿತು ಜನ್ಮ ಸಾರ್ಥವನು ಮಾಡೋ1 ನಿರುತದೀ ಧರ್ಮ ಕರ್ಮಗಳ ತೊಲಗಿದೆನು ಭವದಿ ಸುಖವೆಲ್ಲವೂ ಮಾಯವಾಯಿತು ದೇವಾ ಶರಣರಿಗೆ ತಂದೆ ನೀನೆಂದು ಮೊರೆಹೊಕ್ಕೇ 2 ಪರಹಿತವ ಬಯಸದಲೆ ಕೇಡು ಬಗೆದೆನು ನಿತ್ಯ ಪರಸತಿಯಪೇಕ್ಷಿಯಲಿ ನಿರುತನಾಗಿದ್ದೇ ಅರಿತೆನೀಗಲೆ ನಾನು ಸರ್ವ ನಶ್ವರವೆಂದು ನರಹರಿಯ ನೀರೆರೆಯೊ ಈ ಬಾಡು ಶಶಿಗೇ 3 ಭಕ್ತವತ್ಸಲನೆಂಬ ಬಿರುದ ಪೊತ್ತಿಹೆ ನೀನು ಭಕ್ತಿಯಲಿ ನಾ ನಿಂನ ಸೇವೆ ಮಾಡುವೆನು ಭಕ್ತದಾಯಕಯಂನ ಹಸಿವೆ ತೃಷೆಗಳ ನೀಗಿ ಮುಕ್ತಿಯನು ನೀಡೆನಗೆ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾಯ ಕರವ ಪಿಡಿಯೊ ಗೋಪಾಲ ಪ ಜಾಳು ಜೀವನದ ಗೋಳಿಗೆ ಸಿಲುಕಿದೆ ಕೇಳುವರುಂಟೆ ದಯಾಳು ನೀನಲ್ಲದೆ ಅ.ಪ ತನುಬಲ ಧನಬಲ ಜನಬಲವೆಲ್ಲವು ಅನುಸರಿಸುವುವೇ ಕೊನೆತನಕ ಧನವು ತಪ್ಪಿದರೆ ಜನರು ತ್ಯಜಿಸುವರು ಜನಕ ನೀನಲ್ಲದೆ ಪೊರೆವರ ಕಾಣೆನೊ 1 ಸಟೆಯನಾಡುವುದು ದಿಟವ ತೊರೆಯುವುದು ಕಟುತರ ವಚನಕೆ ನಗುತಿಹುದು ಕಪಟ ಜೀವನವು ತುಟಿಯ ಮೀರಿದ ದಂತಗಳಂತಿರುವುದು 2 ನಿಮಿಷದ ಸೌಖ್ಯಕೆ ವರುಷದ ಕ್ಲೇಶವು ಪುರುಷ ಜೀವನವಿದು ಧರೆಯೊಳಗೆ ಪುರುಷೋತ್ತಮನೆ ಪ್ರಸನ್ನ ಹೃದಯನಾಗಿ ಕಲುಷರಹಿತವಾದ ಹರುಷವÀ ನೀಡೆಲೋ 3
--------------
ವಿದ್ಯಾಪ್ರಸನ್ನತೀರ್ಥರು
ಕಾಯಬೇಕೋ ಶಂಕರೇಶ್ವರ ನೀನೆನ್ನನೂ ದೇವಾ ಪ ಮಾಯಧಾರಿಪ್ರೀಯನಹುದೋ ಕಾಯಜಾಂತಕನೇ ಆಯತಾರ್ಥವನ್ನು ತೋರೋ ಪಾರ್ವತೀಶನೆ ದೇವನೆ 1 ಇಂತುದಿನವು ಗಳಿಸಿಯಿರುವ ಅಂತು ದು:ಖಕ್ಕೆ ಪಂತವ್ಯಾಕೊ ಪಾಲಿಸೆನ್ನೊಳಂತರಂಗಮಂ ಶಂಭೂ 2 ದಾಸ ತುಲಸಿರಾಮ ನಿನ್ನ ದಾಸನಾದೆನೂ ದೋಷ ರಹಿತನ ಮಾಡೆನ್ನ ಮೋಸಹೋದೆನೂ-ಗುರುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಯೆ ದುರ್ಗಾಂಭ್ರಣಿಯೆ | ಕಾಯೆ ಶ್ರೀ ರುಕ್ಮಿಣಿಯೆ ಶುಭ ಕಾಯೆ ದಯದಿ ಹರಿ ವಿಧಿ ಕಾಯಜ ತಾಯೆ ಪ ಮಾಕುಮತಿ ಶ್ರೀಕರಳೆ | ಪೋತನ ನುಡಿ ಕೇಳೆ ಭೀಕರಳೆನಿಸುತ | ವ್ಯಾಕುಲಗೊಳಿಸದೆ ನೀಕರುಣಿಸು ರತ್ನಾಕರನ ಮಗಳೆ 1 ಸೀತೆ ಸಾರಸನಯನೆ | ಶೀತಾಂಶುವಿನ ಭಗಿನಿ ಮಾತೆ ನಮಿಪೆ ತವ | ಘಾತಕ ವ್ರಾತದ ಭೀತೆಯ ತೋರದೆ | ಪ್ರೀತಿಯಿಂದೊಲಿದು 2 ಲಕ್ಷ್ಮಿಕೃತಿ ಶಾಂತಿ ಅಕ್ಷರಳೆ ಜಯವಂತಿ ಈಕ್ಷಣ ಕರುಣಕವಾಕ್ಷದಿಂದೀಕ್ಷಿಸು ಪೇಕ್ಷವ ಮಾಡದೆ ಮೋಕ್ಷದಾಯಕಳೆ3 ವಟದೆಲೆಯೊಳು ಮಲಗಿರುವ | ವಟುರೂಪಿ ಪತಿಪದವ ಪಠಿಸುತಬ್ಜಸೀಕರ | ಪುಟದಿ ನಮಿಸುವಂಥ ಕುಟಿಲರಹಿತೆ ಶತ | ತಟಿತ ಸನ್ನಿಭಳೆ4 ಭಾಮೆ ಶ್ರೀ ಭೂಸುತೆಯೆ | ಶಾಮಸುಂದರ ಸತಿಯೆ ನಾ ಮೊರೆ ಹೊಕ್ಕೆನು | ಪ್ರೇಮದಿಂದಲಿ |ಸು ಕ್ಷೇಮಗರೆದು ಮಮಧಾಮದಿ ನೆಲಸೆ 5
--------------
ಶಾಮಸುಂದರ ವಿಠಲ
ಕಾಲಮಹಿಮೆ ಕೇಳಿ ಜಗದಾಲೋಚನೆ ತಾಳೀ ಪ ಕೀಳು ಖೂಳರಿಗೆ ಮೇಲು ಹಾಸಿಗೆ ಮಂಚ ಬಾಲಾಜಿ ಭಜನೆ ಜನಕೆ ಜೋಳಿಗೆ ಯೀ ಪ್ರಪಂಚಾ 1 ಉತ್ತಮಪುರುಷರಿಗೆಲ್ಲ ತುತ್ತಿಗೆ ಮಾನಹೋಗಿ ಹೆತ್ತವ್ವೆ ಹೋಗೆ ಕಳ್ಳ ಚಿತ್ತರ್ಗೆ ಮಂಚಾ ತೂಗೆ 2 ಡಂಬಾಚಾರಿಗಳಿಗೆಲ್ಲಾ ಕೊಂಬು ಕುದುರೆಯಗಾಡಿ ಶಂಬೂನುತರೂ ಪಾಪಿಗಾಡಿಗಳ ಹಿಂದೆ ವೋಡೆ 3 ನಿಚ್ಚಾ ಮುತ್ತೈದೆರ್ಗೆಲ್ಲಾ ಅಂಜಿಕೆ ಅರುಶನವಿಲ್ಲಾ ಬಿಚ್ಚಾಲೆಯಿಲ್ಲದ ರಂಡೇರ್ಹೆಚ್ಚಿ ಹೀಗಾಯಿತಲ್ಲ 4 ದೋಷರಹಿತ ಹರಿದಾಸ ತುಲಸೀರಾಮಾ ದೇಶಿಕಾ ತನ್ನ ನಿಜದಾಸಾನ ಮಾಡಿಕೊಂಡಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಕಾವೇರಿ ಕನ್ಯಾರ್ಚಿತ ಸುಚರಿತ ದಿವಾಕರಾನತ ಸುರೇಶ ವಿನಮಿತ ಪ ಭವಾಬ್ಧಿ ವಿರಹಿತ ಸಮೀರಸುತನುತ ಶಿವಾ ನೃಹರಿ ಮಾಧವಾ ಕೃಪಾಯುತ ಅ.ಪ ರಮೇಶ ಧರಣಿಪ ಕುಮಾರ ಶಿರಧರ ಸುಮಾನ ವಿರಹಿತ ಪರಾತ್ಪರಾ ಶಮಾ ದಮಯು ತಕ್ಷಮಾ ಸುಧಾಕರ ನಮಾಮಿಶಂಕರ ವಿಮಾನಮಂದಿರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೃಷ್ಣ ಕೃಷ್ಣ ಬಾಂಧವ ಸೃಷ್ಟ್ಯಾದಷ್ಟ ಕರ್ತ ಭವ ನಷ್ಟವಗೈಸೋದು ಅಷ್ಟರೊಳಗೆ ಹರಿ ವಿಷ್ಣು ಸರ್ವೋತ್ತಮ ಇಷ್ಟೆ ಪೇಳುವದಕೆ ನಿಷ್ಟಿಯನೀಯೊ ಪ ಈ ಸುದಿನವಾರಭ್ಯ ಕ್ಲೇಶದೊಳಗೆ ಬಿದ್ದಾ ಯಾಸ ಬಡುತಲಿದ್ದೆ ಲೇಶವಾದರು ಸುಖ ಲೇಶಗಾಣದಿರಲು ಏಸು ಜನ್ಮದ ಪುಣ್ಯ ಸೂಸಿತೋ ನಿನ್ನಯ ದರುಶನ ಲಾಭವಾಗೆ ದೇಶದೊಳಗೆ ನಿನ್ನ ದಾಸರ ದಾಸನೆನಿಸಿಕೊಂಬ ಈ ಸುಲಭ ವೊಂದಿಸನುದಿನ ದು ರಾಶೆಯ ಬಿಡಿಸೆಂದು ನಾಶರಹಿತ ಗುಣರಾಶಿ ರಮೇಶ 1 ವೇದಪರಾಯಣ ಸಾಧುಗಳರಸಾ ವಿ ನೋದಿಗಾ ಪಳ್ಳಿಗನೆ ಆದಿದೈವವೆ ತೀರ್ಥ ಪಾದ ಜಗತ್ಯೆಂತ ಭೇದಾ ಶೃಂಗಾರ ವೇಣು ನಾದ ಸನಕಾದಿ ಮುನಿವಂದಿತಾ ಮಾಧವ ಮಹಿಧರ ಯಾದವ ಕರುಣ ಪ ಯೋಧದಿ ಎನ್ನಪರಾಧವನೆಣಿಸದೆ ಸಾಧನ ಕೆಡಿಸುವ ಕ್ರೋಧವ ಬಿಡಿಸಾರಾಧನೆ ತಿಳಿಯದು ಭೂದೇವರೊಡಿಯಾ 2 ಕರವಾ ಬಿಡದಿರೆನ್ನ ಕರಣ ಶುದ್ಧವ ಮಾಡು ಕರದ ಮಾತಿಗೆ ಭಯಂಕರವ ಓಡಿಸಿ ಮಂದ ಕರಿಯ ಕಾಯಿದ ಶುಭಕರ ಕಾಳಿ ಮಥನ ಸಂ ನಿತ್ಯ ಕರ ಪತಿ ಕುಲ ರತುನಾ ಕರಕೆ ಉಡುಪ ಮಕರಧ್ವಜಪಿತ ತೋರಿಸೊ ಭಜಕರರೊಳಗಿಡುವುದು 3
--------------
ವಿಜಯದಾಸ
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೇಶಿದನುಜನ ನಾಶಗೊಳಿಸಿದ ಕೇಶವನೆ | ಕಾಯೋ ಶ್ರೀಧರ ಪ ನಾಶರಹಿತ ಪರೇಶ ದಿನಪಸಂಕಾಶ | ಕ್ಲೇಶವಿನಾಶ ಭೂಧರ ಅ.ಪ ದೀನಪಾಲನೆ ಗಾನಲೋಲನೆ ಧೇನುಕಾಸುರ ಸೂದನೆ ಸಾನುರಾಗ ವಿನೋದನೆ 1 ರಥಾಂಗ ವೈರಿ ಗೋಪಾಲನೆ ಮಂಗಳಾಂಗ ಶುಭಾಂಗ ಮಾಂಗಿರಿ ರಂಗ ಗೋಪೀ ಬಾಲನೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೊಡಲಾಗದಿದ್ದರೆ ನುಡಿಯುವರೇನಣ್ಣ ಕಡೆಯಿಂದ ಬಾರೆಂದು ಜಡಿದಿಂದು ಪ. ದುಡುಕಿದೆವೆನ್ನುತ ಮಿಡುಕದಿರಣ್ಣಯ್ಯ ಕಡುಮುದದಿಂದಾವು ನಡೆದೇವು ಕೋಲೇಕೋಲೆ ಮುತ್ತಿನ ಕೋಲೆ ಅ.ಪ ಗುಣಯುತರೆನಿಸುವ ಹಿರಿಯ ವಂದಿಸ ಲೆನಂತಲೈ ತಂದೆವು ಮಣಿದೆವು ಹಣಗಾರರರೆಂದಲ್ಲಿ ಮಣಿಯಲು ಬರಲಿಲ್ಲ ಹಣದಾಸೆ ನಮಗಿಲ್ಲ ಕೇಳೀಸೊಲ್ಲ ||ಕೋಲೇ|| 1 ಅಣ್ಣಯ್ಯ ನಿಮಗೀ ಘನತೆಯು ಸಲ್ವುದು ಗಣ್ಯರಾದಿರಿ ನೀವು ಜಗದೊಳು ಪುಣ್ಯವಂತೆಯು ನಿಮ್ಮ ಪಡೆದಾಮಾತೆಯು ಧನ್ಯರಾದಿರಿ ನಿಮ್ಮೀಗುಣದಿಂದ ಕೋಲೆ 2 ದೋಷರಹಿತ ಶ್ರೀಶೇಷಗಿರೀಶನಾ ಕೇಶವನೊಲವೊಂದೆಮಗಿರಲಿ ಭಾಷೆಯ ಕೊಡುವೆವು ದೇಶಸೇವಕರಾವು ಲೇಸಾಗಲಿಳೆಗೆಂದು ಮನದಂದು ||ಕೋಲೆ||3
--------------
ನಂಜನಗೂಡು ತಿರುಮಲಾಂಬಾ
ಕೊಡು ಬೇಡುವೆನೊಂದ ಚಿದಾನಂದಕೊಡು ಬೇಡುವೆನೊಂದಕೊಡು ಬೇಡುವೆನೊಂದಕಡೆ ಹಾಯ್ದು ಹೋಗಿ ಮೆಲ್ಲಡಿಯಾದ ನಿಮ್ಮ ಪಾದದಡಿಯೊಳಡಗುವುದಾ ಪ ನಿತ್ಯ ನಿರಂಜನ ಕರ್ಮ ನಿರ್ಮಾಯವಾದ ಷ-ಡೂರ್ಮೆ ವಿರಹಿತೆಂಬ ಪೆರ್ಮೆಯೊಳಡಗುವುದ 1 ವಿಶ್ವಾತ್ಮ ವಿಶ್ವಾಧಾರ ವಿಶ್ವಹರ ವಿಶ್ವವಿಶ್ವದಾಕಾರ ಸ್ವಸ್ವ ನಿಸ್ವನದ ಸ್ವಸ್ವಪೂರಿತ ಮ-ಹಾಸ್ವಯಂ ಜ್ಯೋತಿಯೆ ಭಾಸ್ವ ಮೂರುತಿ ಈಗ 2 ಶತಕೊಟಿ ಸೂರ್ಯರಾಕಾರ ಶತಾಶತ ಶತವಿಂದು ಪ್ರಭಾವಕಾರಸ್ತುತಿಗೆ ಮೀರಿದ ದೊರೆಯೋಗಿ ಚಿದಾನಂದಪತಿಯ ಪಾದಪದ್ಮನುತಿಸಿ ಕೊಡುವುದೀಗ 3
--------------
ಚಿದಾನಂದ ಅವಧೂತರು
ಕೊಡುಮತಿ ದಿವ್ಯಮತಿ ಭಾರತೀ ಪ ಪಾದ | ಬಿಡದೆ ಭಜಿಪ ಮತಿಅ.ಪ. ಅಜ್ಞಾನ ತಮದೊಳು | ಪ್ರಜ್ಞೆ ರಹಿತನಾದೆಸುಜ್ಞಾನ ಕರುಣಿಸೀ | ತಜ್ಞನೆನಿಸೆ ತಾಯೇ 1 ಮಂದ ಜನರ ಸೇರಿಕುಂದು ನೋಡದೆ ಕಾಯೇ | ಗಂಧವಾಹನ ಜಾಯೇ 2 ಕೋವಿದರೊಡನಾಡೀ | ಕಾವ ಕರುಣಿ ಗುರುಗೋವಿಂದ ವಿಠಲನ | ಭಾವದಿ ನೋಡುವ 3
--------------
ಗುರುಗೋವಿಂದವಿಠಲರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು