ಒಟ್ಟು 520 ಕಡೆಗಳಲ್ಲಿ , 78 ದಾಸರು , 360 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣಾಯ ನಿಗಮೋದರಾಯ ಶ್ರೀರಾಘವಾಯ ನಮೋ ಸಮಸ್ತೆ ಪ ನೀರೇಜನಾಭಾಯ ನೀಲಾಂಬುದಾಭಯ ನೀರೇಜ ನಿಲಯಾಯ ನಮೋನಮಸ್ತೆ ಅ.ಪ ನಾಗೇಶ ಶಯನಾಯ ವಾಗೀಶ ವಿನುತಾಯ ಯೋಗೀಶ ನಮಿತಾಯ ನಮೋ ನಮೋ ಶ್ರೀಗೋತ್ರ ಸಹಿತಾಯ ರಾಗಾಂಬು ಭರಿತಾಯ ಶ್ರೀಮಾಂಗಿರೀಶಾಯ ನಮೋ ನಮಸ್ತೇ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾಲಗೆ ಬರದಯ್ಯಾ ಶ್ರೀ ಗುರುವರರಾಯಾಪಾಲಿಸೆನ್ನೊಳು ನಿನ್ನ ಪೂರ್ಣದಯ ಪ ನಾಲಿಗೆ ಮತಿಗಳು ತಡೆದು ನಿಂತಿಹವಯ್ಯಮೇಲು ನಿಮ್ಮಯ್ಯ ನಾಮಾ ನಾ ಪೇಳೆನೆಂದರೆ ಅ.ಪ. ಕಥೆಯ ಕಟ್ಟಿದೆ ನಾಟಕ ಪದ್ಯವ ರಚಿಸಿದೆನೆಂಬಿ ಹೆಮ್ಮೆಯೊಳಿದ್ದೆ ಯತಿರಾಯಾನಿನ್ನ ಸುಚರಿತೆಯ ಕಥಿಸಲುಗತಿಕಾಣದೆ ನಿಂತು ಬಾಯ್ಬಿಡುವೆ ಪೊರೆಯಯ್ಯಾ 1 ಪಾದ ತುತಿಸುವೆನೆಂದರೆ 2 ಸ್ಮರಿಸುವೆ ಮನದೊಳು ನಿರುತದಿ ಯತಿವರ್ಯಾಶ್ರೀ ರಾಘವೇಂದ್ರರಾಯಾಧರೆಯೊಳು ಪರಮ ದಾನಿಗಳ ಹಿರಿಯನೆಂದುಅರಿತು ನಾ ಬಂದೆನೊ ಮೂಕನಾಗಿರುವೆನೊ 3 ಮನದೊಳಗಿರುತಿರ್ದ ಭಕುತಿ ಭಾವಗಳುಏನಿತೆಂಬುದನು ನೀನೇ ನೋಡಿಮನಸಿನಭೀಷ್ಟವನಿತ್ತು ಕಾಯುವದಯ್ಯಾಮನದೊಳು ನೆನೆಯುವೆ ಹೊರಗಾಡಲಾರದೆ 4 ಕರುಣಾಳು ಗದುಗಿನ ವೀರನಾರಾಯಣಹರನೆ ಕಳುಹಿಸಿದನೆಂದು ನಾನಿಲ್ಲಿ ಬಂದೇವರ ನಿನ್ನ ಚರಣವೂ ದೊರೆಯೆ ನಾ ತುತಿಸಲುಸರಿಯಾದ ನುಡುಗಳ ಕರುಣಿಸು 5
--------------
ವೀರನಾರಾಯಣ
ನಿತ್ಯ ಶ್ರೀಕರವು ಪ ಭೂಪತಿಯಂದದಿ ಭೂಮಿಯಾಳುವುದು ಕಾಪಾಡುತಿಹುದು ಲೋಕಿಗರಅ.ಪ ಆಳುವಾರುಗಳು ಆಚಾರ್ಯರುಗಳು ಪೇಳಿದರಿದರಾಂತರ್ಯವನು ಕೇಳುತ ಬಾಳಿದ ಬಹು ಭಾಗವತರ ಪಾಳಯವದು ತಾಂ ಪರಮಪದ 1 ಅಭಿಮತದಿಂದಲಿ ಮುನಿಗಳು ಮೂವರು ವಿಭವದಿಂದಲದ ಸಲಹಿದರು ಉಭಯ ವೇದಗಳ ಅಮೃತವರ್ಷದಿಂ ಸು ರಭಿತ ಕುಸುಮಗಳರಳಿದವು 2 ಶಂಖ ಸುದರ್ಶನ ಲಾಂಛನ ಭುಜಗಳಲ ಲಂಕಾರದ ಹನ್ನರೆಡು ನಾಮಗಳು ಪಂಕಜ ತುಳಸೀಮಣಿ ಪವಿತ್ರಗಳು ನಿಶ್ಶಂಕೆಯ ಮೂರು ಮಂತ್ರವೆ ಕಾಯ್ಗಳು 3 ಶಾಸ್ತ್ರ ಸಿದ್ಧವಾದರ್ಚಾಮೂರ್ತಿಯ ಕ್ಷೇತ್ರ ತೀರ್ಥಗಳು ಪಕ್ವಫಲ ಶ್ರೋತೃಗಳಿಗೆ ಮಧುರಾದತಿಮಧುರವು ಖ್ಯಾತಿಯ ವಿಜಯರಾಘವ ಕೃತಿ-ಪ್ರ- ಖ್ಯಾತಿಯ ಅಣ್ಣಂಗಾರ್ಯ ಕೃತಿ4 ನಿತ್ಯ ನೈಮಿತ್ತಿಕ ತಿರುವಾರಾಧದಿ ನವ್ಯ ತದೀಯದ ಕೈಂಕರ್ಯ ಸ್ತುತ್ಯಪ್ರಬಂಧ ಗೀತಾ ಶ್ರೀಭಾಷ್ಯ [ದರ್ಥಿ]ಪಾರಾಯಣ ಪರಮಾನಂದ 5 ಶ್ರೀರಂಗ ವೆಂಕಟ ವರದ ನಾರಾಯಣ [ರಾ ಶ್ರೀ] ಪದಯುಗ ಪೂಜನ ಪ್ರಾಪ್ತಿ ಫಲ ಓರಂತನುದಿನ ಧ್ಯಾನ ಗಾನಗಳು [ಬೀರುವವು] ತೃಪ್ತಿಕರ ಸುಧಾನಿಧಿ 6 ಜಾಜೀ ಕೇಶವ ಜಗವ ಪಾಲಿಸಲು ಮಾಜದೆ ಮಾಡಿದ ಉಪಕೃತಿಯು ರಾಜಿಪ ಚರಣಗಳಾಶ್ರಿತರಿಗೆ ಸವಿ ಭೋಜನವೀವುದು ಹರಿಯೆಡೆಯೊಳ್ 7
--------------
ಶಾಮಶರ್ಮರು
ನಿತ್ಯ ಶುಭ ಮಂಗಲಂ ಮಂಗಲಂ ಮಾರುತಿಯ ಪೆಗಲೇರಿ ಬರುವನಿಗೆ ಪ. ಮಂಗಲಂ ಮಾರೀಚ ವೈರಿಹರಿಗೆ ಮಂಗಲಂ ಸೀರಜಾ ಮುಖಪದ್ಮ ಭೃಂಗನಿಗೆ ಮಂಗಲಂ ವೀರ ರಾಘವ ದೇವಗೆ ಅ.ಪ. ರಾವಣಾದಿಗಳಿಂದ ಲಾಹವದಿ ಬಹು ನೊಂದ ದೇವತೆಗಳನು ಬೇಗ ಕಾವೆನೆಂದು ತಾ ಒಲಿದು ಕೌಸಲ್ಯದೇವಿ ಗರ್ಭದಿ ಬಂದು ಸಾವಧಾನದಿ ಸಕಲ ಸಜ್ಜನರ ಸಲಹಿದಗೆ 1 ಮಂದಮತಿಗಳೊಳಧಿಕ ತುಂಡಿಲನು ಮಾತ್ಸರ್ಯ ದಿಂದ ಮಾಡಿರುವ ಪ್ರತಿ ಬಂಧಕವನು ಇಂದಿಲ್ಲಿ ಬರಲು ಸಮಂಧಗೈಸದೆ ದಾಸ ನೆಂದೆನ್ನ ಮೇಲೆ ದಯದಿಂದಲೊಲಿದವಗೆ 2 ಇಂಗಿತಾಭೀಷ್ಟದ ಕುರಂಗ ಮರ್ದನ ರಾಮ ಶೃಂಗರಿಸಿ ಸರ್ವಪರಿವಾರ ಸಹಿತಾ ಮಂಗಲಾರತಿ ಕೊಂಡು ಮಂಗಳವ ಬೆಳೆಸುವ ಭು ಜಂಗ ರಾಜೇಂದ್ರ ಗಿರಿಶೃಂಗನಾಥನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯ ಶುಭ ಮಂಗಳಂ ಪ. ಸರಸೀರುಹಾಕ್ಷಾಯ ದುರುಳಮದಶಿಕ್ಷಾಯ ಸುರಮೌನಿ ಪಕ್ಷಾಯಾಧೋಕ್ಷಜಾಯ ಶರಣನ ರಕ್ಷಾಯ ಕರುಣಾಕಟಾಕ್ಷಾಯ ಧರಣಿಜಾರಮಣಾಯ ರಾಮಭದ್ರಾಯ 1 ಕ್ರತು ಪಾಲಕಗೆ ಶಶಿವದನೆ ಜಾನಕಿಯ ಕೈಪಿಡಿದವಂಗೆ ಶಶಿಮೌಳಿಚಾಪಮಂ ಮುರಿದ ಅಸಮಬಲನಿಗೆ ದಶಕಂಠಕಾಲಂಗೆ ರಾಘವೇಂದ್ರನಿಗೇ 2 ಕಾಕುತ್ಸ್ಥಕುಲಮಂಡನಗೆ ಕಮಲಾಪ್ತ ಕುಲದೀಪಂಗೆ ಸಾಕೇತನಗರಾಧಿಪಗೆ ಲೋಕೇಶನಿಗೆ ಪಾಕಶಾಸನಮುಖ್ಯ ನಾಕಪೂಜಿತಚರಣ ವೈಕುಂಠನಾಯಕ ಶ್ರೀ ಶೇಷಗಿರಿವರಗೆ 3
--------------
ನಂಜನಗೂಡು ತಿರುಮಲಾಂಬಾ
ನಿತ್ಯದುದಯಾಸ್ತಮಾನದಲಿ ಸ ರ್ವೋತ್ತಮ ಹರಿನಾಮ ಬರೆದೋದಿ ಭಕ್ತಿಯಿಂದಾಲಿಪರ ಭವತಾಪ ಜರೆ ಮೃತ್ಯುನೀಗಿ ನಿತ್ಯಮುಕ್ತಿ ಕೈಸೇರುತಿಹ್ಯವು ಪ ನರಿಹರಿ ಹಯವದನ ಜನಾರ್ದನ ವಾಸುದೇವ ವಾರಿಜಾಕ್ಷ ಮುರಧ್ವಂಸಿ ಮುಪ್ಪುರಾಂತಕ ಮುಕ್ಕುಂದ ಹರಿ ಸರ್ವೇಶ ಉರಗಪರ್ಯಂಕ ನಿರಂಜನ ನಿರ್ಜರೇಶ ಶರಣಜನಮಂದಾರ ಸಿರಿಯರಸ ಪರಮಪ್ರಕಾಶ ಪರತರೇಶ ಪರಮಪುರುಷ ಪರಾತ್ಪರನೆಂದು 1 ಮಾಧವ ದೇವದೇವೇಶ ದನುಜರಸಂಹರ ಶ್ಯಾಮಸುಂದರ ಘನಮೇಘಶ್ಯಾಮ ಸಚ್ಚಿದಾನಂದ ಚಿನುಮಯಾತ್ಮ ತಚ್ಚೈತನ್ಯರೂಪ ವೇಣುಧರ ಗೋಪಾಲ ಗೋವ ರ್ಧನೋದ್ಧಾರ ಗಾನಾಂದಧೋಕ್ಷಜಪಿತ ಧ್ಯಾನಗಮ್ಯ ತ್ರಿಭುವನೇಶ ತ್ರಿವಿಕ್ರಮನೆಂದು 2 ನಿತ್ಯಗುಣಾರ್ಣವ ನಿಜಗುಣ ನಿಷ್ಕಲಂಕ ನಿತ್ಯಾತ್ಮ ನಿರುಪಮ ಪರಂಜ್ಯೋತಿ ನಿತ್ಯನಿರ್ಮಲ ಸತ್ಯಭಾಮಾಕಾಂತ ಚಿದ್ರೂಪ ಚಿತ್ಕಳಂಕ ಕಮಲಾಕ್ಷ ಲಕುಮೀಶ ಶೌರಿ ಸೂತ್ರಧಾರಿ ಭಕ್ತವತ್ಸಲ ಭಯನಿವಾರ ನರಸಿಂಹ ಮುಕ್ತಿದಾಯಕ ಮಧುಸೂದನ ರಮಾರಮಣ ಮೃತ್ಯುಂಜಯ ವಿಶ್ವೇಶ ವಿಶ್ವವ್ಯಾಪಕನೆಂದು 3 ಕಾಲಾರಿ ಚಕ್ರಿ ಚತುರ್ಭುಜ ಭವನಾಶ ನೀಲಾಂಗ ರಂಗ ರಾಘವ ಭುವನೇಶ ನೀಲಲೋಚನ ನಗಧರ ಜಗಮೋಹ ಮೇಲುನಿಲಯ ನಿಗಮಾತೀತ ಪದ್ಮನಾಭ ಕಾಲೀಮರ್ದನ ಕೌಸ್ತುಭಾಂಬರ ವಿಷ್ಣು ಪಾಲಸಾಗರಕನ್ನಿಕಾಪ್ರಿಯನಾಥ ಲೀಲಜಾಲ ಜಾಹ್ನವೀಜನಕ ಕೇಶವ ಶೂಲಪಾಣಿಸಖ ಶಾಂತಾಕಾರನೆಂದು4 ಪರಮಾನಂದ ಗೋವಿಂದ ಗಜರಕ್ಷ ಶರಧಿಮಥನ ಕೂರ್ಮಮತ್ಸ್ಯ ಕರುಣಾಂಗ ವಾಮನ ಧ್ರುವಪಾಲ ದುರಿತಾರಿ ಕೃಷ್ಣ ವೆಂಕಟ ವಿಠಲ ಶರಣಾಗತವರದ ನುತಪಾಲ ವರದಾತ ವೇದಾಂಗ ಸುಖಧಾಮ ವರ ಶ್ರೀರಾಮ ಪರಮ ಪುಣ್ಯನಾಮ ಧರೆಮೂರರೊಳತ್ಯಧಿಕಮೆಂದು 5
--------------
ರಾಮದಾಸರು
ನಿನ್ನ ನಂಬಿದವರ್ಗೆ ನಿನ್ನಂದವೆ ಬಂದುದಿನ್ನೇನಿನ್ನೇನು ಪ್ರಸನ್ನ ರಾಘವ ದಶ'ಧವಾುತೆ'್ಮುರ'ನ್ನೇನಿನ್ನೇನು ಪಕೊರಳು ಗೊ್ಯುಕತೆುಂದ ಕಂಗೆಡುತಿದೆ ಲೋಕ'ನ್ನೇನಿನ್ನೇನುಪರರ ಬಾಧೆಗೆ ಕಲ್ಲುಹೊರುವಾಟ ಒದಗಿದುದಿನ್ನೇನಿನ್ನೇನುಧರೆಯ ಬಗೆದು ಬೆರತಿಂಬ ಕಾಲವು ಬಂದುದಿನ್ನೇನಿನ್ನೇನುಕರುಳ ಬಗೆದು ರಕ್ತಗುಡಿವ ಭಯವು ತೋರಿತಿನ್ನೇನಿನ್ನೇನು 1ದಾನಗೈಯಲು ಸ್ಥಾನ ಹಾನಿಯಾಗುವದಾುತಿನ್ನೇನಿನ್ನೇನುಜ್ಞಾನ ಕುಲದಿ ಪುಟ್ಟ ಕ್ಷಾತ್ರ ಜೀವನ ಬಂದುದಿನ್ನೇನಿನ್ನೇನುಮಾನಿನಿ ದುರುಳನಾಧೀನವಾಗುವದಾುತಿನ್ನೇನಿನ್ನೇನುಸೂನುವ ಪರರೆತ್ತಿಕೊಂಡೊಯ್ವ ತೆರಬಂದುದಿನ್ನೇನಿನ್ನೇನು 2ಉಟ್ಟ ಬಟ್ಟೆಯು ಪೋಪ ಸಮಯ ತಾನೊದಗಿದುದಿನ್ನೇನಿನ್ನೇನುದಿಟ್ಟ 'ಪ್ರರು ರಾವುತರಾಗುವಂತಾುತಿನ್ನೇನಿನ್ನೇನುದಿಟ್ಟಿಸಿ ನೋಡೆ ನೀನೆಮ್ಮನೆನ್ನುವರಾಗದಿನ್ನೇನಿನ್ನೇನುಹುಟ್ಟು ಹೊಂದುಗಳಡಗುವ ಕಾಲ ತಾ ಬಂದುದಿನ್ನೇನಿನ್ನೇನು 3ಕರುಣದಿಂದೀಕ್ಷಿಸಿ ಕಾಯ್ವವ ನೀನಿರಲಿನ್ನೇನಿನ್ನೇನುದುರಿತ ಕೋಟಿಗಳ ದ'ಪುದು ನಿನ್ನಯ ನಾಮ'ನ್ನೇನಿನ್ನೇನುಸ್ಮರಣೆ ಮಾತ್ರದಿ ಧನ್ಯರಹೆವಾವು ಭಯ ಪೋಪುದಿನ್ನೇನಿನ್ನೇನುವರ ವಾರಣಸೀವಾಸದಿಚ್ಛೆ ಪುಟ್ಟಿದುದೆಮಗಿನ್ನೇನಿನ್ನೇನು 4ಕರುಣದಿಂ ಚಿಕ್ಕನಾಗಪುರದಿ ನೀನೆಲಸಿದೆುನ್ನೇನಿನ್ನೇನುಗುರುವಾಸುದೇವಾರ್ಯ ರೂಪುದಾಳಿದೆಯಾಗಿುನ್ನೇನಿನ್ನೇನುಕರೆದು ಜ್ಞಾನಾಮೃತವೊರೆದು ರಕ್ಷಿಸಿದೆ ನೀನಿನ್ನೇನಿನ್ನೇನುಚರ[ಣ ಕಮಲಗಳ ನಂಬಿದೆವು ನಾನಿನ್ನೇನಿನ್ನೇನು] 5
--------------
ತಿಮ್ಮಪ್ಪದಾಸರು
ನೀ ಕರುಣಿಸದಿರೆ ಸಾಕುವರ್ಯಾರು ದಯಾಕರ ಮೂರುತಿ ರಾಘವೇಂದ್ರ ಪ ಪಾರು ಮಾಡೊ ಸಂಸಾರಭವದಿ ಅ- ಪಾರ ಮಹಿಮ ಗುರು ರಾಘವೇಂದ್ರಾ ದೂರ ನೋಡಿದರೆ ಬಿಡಿಸೋ ತವ ಚರ- ಣಾರವಿಂದಕೆ ಕೊರಳನು ಕಟ್ಟಿಸೊ 1 ಒಡವೆ ವಸ್ತುಗಳ ಮಡದಿ ಮಕ್ಕಳ ಕೊಡು ಎನುತಲಿ ಬೇಡುವುದಿಲ್ಲ ಒಡೆÉಯನೆ ನಿನ್ನಯ ಅಡಿಗಳಲಿ ದೃಢ ಭಕುತಿಯ ಕೊಡದಿರೆ ಬಿಟ್ಟವನಲ್ಲ 2 ನರರ ಸೇವೆಯಾ ಬಿಡಿಸೋ ಹರಿವಾಯುಗಳ ಸೇವೆಯಾ ಹಿಡಿಸೊ ವರದ ಹನುಮೇಶವಿಠಲನಾ ಸರ್ವೋತ್ತಮನೆಂದು ಕರೆದವನೆ 3
--------------
ಹನುಮೇಶವಿಠಲ
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳಅ.ಪ ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ 1 ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ ಗುಣಗಳ ತಿಳಿದು ತಿಳಿಸುತ ತಮ್ಮ ತಮಗಿಂ ರಧಿಕರಿಂದುಪದೇಶ ಮಾರ್ಗದಿ ಕಲಿಯುಗದೊಳು ಕೇವಲ ಕ ತ್ತಲೆಯ ಹರಿಸುವ ಸೊಬಗ ಸಂತತ 2 ರಾಮ ನರಹರಿ ಕೃಷ್ಣ ಕೃಷ್ಣರ ನೇಮದಿಂದೀ ಮೂರ್ತಿಗಳ ಪದ- ತಾಮರಸ ಭಜನೆಯನು ಮಾಳ್ಪರು ಕೋಮಲಾಂಗರು ಕಠಿನಪರವಾದಿ ಸ್ತೋಮಗಳ ಮಹಮಸ್ತಕಾದ್ರಿಗೆ ಭೂಮಿಯೊಳು ಪವಿಯೆನಿಸಿದ ಯತಿ ಯಾಮ ಯಾಮಕೆ ಎಲ್ಲರಿಗೆ ಶುಭ ಕಮಿತಾರ್ಥವ ಕರೆವ ಗುರುಗಳ 3 ನೂರು ಪರ್ವತ ವರುಷ ಬಿಡದಲೆ ಚಾರು ವೃಂದಾವನದಲಿ ವಿ ಸ್ತಾರ ಆರಾಧನೆಯು ತೊಲಗದೆ ವಾರವಾರಕೆ ಆಗುತ್ತಿಪ್ಪುದು ಸಾರೆ ಕಾರುಣ್ಯದಲಿ ಲಕುಮೀ ನಾರಾಯಣ ತಾ ಚಕ್ರರೂಪದಿ ಸಾರಿದವರಘವ ಕಳೆದು ಇವರಿಗೆ ಕೀರುತಿಯ ತಂದಿಪ್ಪುದನುದಿನ4 ಮಿತವು ಎನದಿರಿ ಇಲ್ಲಿ ದಿನ ದಿನ- ಕತಿಶಯದೆ ಆಗುವುದು ಭೂಸುರ ತತಿಗೆ ಭೋಜನ ಕಥಾಶ್ರವಣ ಭಾ- ರತ ಪುರಾಣಗಳಿಂದಲೊಪ್ಪುತ ಕ್ಷಿತಿಯೊಳಗೆ ಮಂಚಾಲೆ ಗ್ರಾಮಕೆ ವ್ರತಿಯ ಇಲ್ಲವೆಂದೆನಿಸಿಕೊಂಬುದು ಪತಿತಪಾವನ ವಿಜಯವಿಠಲನ ತುತಿಸಿಕೊಳ್ಳುತ ಮೆರೆವ ಗುರುಗಳ 5
--------------
ವಿಜಯದಾಸ
ನೋಡಿದ್ಯಾ ಶ್ರೀರಾಮನ ನೋಡಿದ್ಯಾ ಪ. ನೋಡಿದ್ಯಾ ನಯನವೆ, ಕೊಂಡಾಡಿದ್ಯಾ ಮನವೆ ಪಾಡಿದ್ಯಾ ವದನವೆ ಬಾಗಿದ್ಯಾ ಶಿರವೇ ಅ.ಪ. ಕುವಲಯ ಶ್ಯಾಮ ಸುಂದರನ ಶ್ರೀ ಭುವಿಜಾತೆಯರಸನ ರಾಘವನ (ವರ) ಪವಮಾನಸುತ ಸಂಸೇನ್ಯನ ಸರ್ವವ್ಯಾಪಕ ಶ್ರೀ ರವಿಕುಲ ತಿಲಕನ ಭುವನಮೋಹನ ವಿಗ್ರಹನಾ 1 ಪಂಕ್ತಿರಥನಂದನನ ವರ ಪಂಕೇರುಹ ಪತ್ರೇಕ್ಷಣನ ವರ ಪಂಕಜಸಖನಿಭ ಭಾಸುರನ ಆಹಾ ಪಂಕಜಾಸನನ ಪೆತ್ತಾತನ ಶಂಕರಪ್ರಿಯ ಕೋದಂಡರಾಮನ 2 ದುಷ್ಟ ತಾಟಕಿಯನು ತಾ ಕೊಂದು ಎಸೆವ ಮಂಗಳಮೂರ್ತಿ ದಶರಥರಾಮನ 3 ದೃಢದಿಯಹಲ್ಯೆಯ ಶಾಪಕಳೆದು ಬಂದು ಪೊಡವಿಜಾತೆಯ ಕೈಪಿಡಿದು ಪಡೆದ ತಾಯ್ತಂದೆಯರ ಒಡಗೂಡಿ ಮೆರೆದಂಥ ಒಡೆಯ ರಾಘವನ 4 ದಾಸರ ದಾಸನೆಂದೆನಿಸಿದಾತನ 5 ಗರುಡವಾಹನ ಮುರಹರನ ವರ ಪರಶುಧರ ಗರ್ವಹರನಾ ಆಹಾ ವರಶೇಷಗಿರಿಯಲ್ಲಿ ಮೆರೆವ ವೆಂಕಟನಾ ಶರಣಾಭರಣ ಶ್ರೀ ನರಹರಿ ರೂಪನ 6
--------------
ನಂಜನಗೂಡು ತಿರುಮಲಾಂಬಾ
ನೋಡಿರಯ್ಯ ಶ್ರೀರಾಮನ ಮೂರ್ತಿಯ ಪಾಡಿರೊ ಮಹಿಮೆಯನು ಪ ಅಗಣಿತ ಮಹಿಮನು ತ್ರಿಗುಣ ವರ್ಜಿತನು ಸುಗುಣೇಂದ್ರತೀರ್ಥರಿಂದ ಬಗೆಬಗೆ ಪೂಜೆಗೊಂಬ 1 ಸಂಜೀವವನು ತಂದ ಅಂಜನಸುತನಯ್ಯ ನಂಜನಗೂಡೊಳಿಪ್ಪ ಕಂಜಾಕ್ಷಕರುಣಿಯ 2 ವಾರಿಜ ಭವಪಿತ ಮಾರುತ ಗತಿಪ್ರಿಯ ವಾರಿಧಿಬಂಧಕ ಶ್ರೀರಮಾಧವನನ್ನು ಮಂಗಳ ಪುರದೊಳು ಮಂಗಳವಾರದಿ ಮಂಗಳದಿ ಮೆರೆದನಂಗನಪಿತನನ್ನು 3 ವರ ರಾಘವೇಂದ್ರರ ಕರುಣಾಗ್ರೇಸರ ಶ್ರೀವತ್ಸಾಂಕಿತನಾದ ಅರವಿದೂರನನ್ನು 4
--------------
ಸಿರಿವತ್ಸಾಂಕಿತರು
ಪರಮ ಪುರಷಾ ರಾಘವ ಪಾಲಿಸೊ ಸುರಮುನಿವರ ಪೂಜಿತ ಪ ಸರಸಿಜಾಪ್ತವಂಶಾಬ್ಧಿ ಚಂದ್ರಮ ನಿನ್ನ ಹೊರತು ಪೊರೆವರನ್ಯರ ಕಾಣೆನೊ ಅ.ಪ ಆಂಜನೇಯ ಪ್ರಿಯ ಆದರಿಸೈ 1 ಮೃತ್ಯಪರಿಹರಿಸೆನುತ್ತ ಬೇಡಲು ನಿನ್ನ ಭಕ್ತಜನರಿಗಭಯ ಕೊಡುವನೆ 2 ಸಾಮಜವರದ ಮಹಾಮಹಿಮನೆ ನಮ್ಮ ಸ್ವಾಮಿ ನೀನೆ ಗುರುರಾಮ ವಿಠಲ 3
--------------
ಗುರುರಾಮವಿಠಲ
ಪರಮ ಸುಗುಣಸಾಂದ್ರ ಗುರುರಾಘವೇಂದ್ರ ಪ ಕರುಣಾಳೋ ಮುನಿ | ವಂಶಸುಧಾಕರ | ಗುರುರಾಜ ಪ್ರಭೋ | ಶ್ರೀ ರಾಘವೇಂದ್ರ ಅ.ಪ ಮುರುಕುಮಂಟಪದೊಳು | ಹರಕುಚಿಂದಿಯನ್ಹೊದ್ದು | ಉರಿಯ ಬೆಳಕಿನಲ್ಲಿ | ಪರಿಮಳ ರಚಿಸಿದೆ || ಗುರುಗಳಾಕ್ಷಣ ಕಂಡು | ಪರಮಸಂಭ್ರಮದಿಂದ | ಪರಿಮಳಾಚಾರ್ಯನೆಂಬ | ಬಿರುದಿತ್ತು ಕರೆದರೊ 1 ಜಡಮತಿ ಬ್ರಾಹ್ಮಣ | ಮಿಡುಕಿ ನಿರೂಪಿಸೆ | ವಡನೆ ಗಂಧವ ತೇದೆ | ಅನಲನ ಜಪಿಸುತೆ || ಒಡಲ ಬೇಗೆಯಿಂ ಜನರು | ಬಡಬಡಿಸಿದ ಕಂಡು | ಕಡಲರಸನ ದಯದಿ | ಕಡುಶಾಂತಿ ಇತ್ತೆಯೊ2 ಬಾದರಾಯಣಮುನಿ | ಭೇದಮತವ ಬಿತ್ತೆ | ಮೋದತೀರ್ಥರು ತರುವ | ಸಾದರಗೈದರೊ || ಸ್ವಾದಫಲಂಗಳು | ನಿನ್ನಿಂದ ತೋರ್ದವು | ಸಾಧುಜನಾರ್ಚಿತ | ಶ್ರೀಶಕೇಶವಪ್ರಿಯ 3
--------------
ಶ್ರೀಶ ಕೇಶವದಾಸರು
ಪರಿಪಾಲಿಪುದೈ ಗುರುವೆ ನೆರೆನಂಬಿದೆನಯ್ಯ ಪ್ರಭುವೆ ಪ ಘಾಸಿ ಗೊಂಡೆನಲ್ಲಾ ಮಾಯಾ ಪಾಶದಿ ಸಿಲುಕಿದೆನಲ್ಲಾ | ಉ- ಪಾಯ ವನರಿಯೆ ಪಾಲಿಸೈ ಪ್ರಭವೇ 1 ಕಾಯೋ ಪ್ರಭುವೇ 2 ಉಳಿಸಿಕೊ ಗುರುದೇವಾ ನಿರುತದಿ ಮಾಡುವೆ ನಿನ್ನ ಸೇವಾ ಕರುಣಿಸು ಶ್ರೀ ರಾಘವೇಂದ್ರಾ 3
--------------
ರಾಧಾಬಾಯಿ