ಸೂರ್ಯಾಂತರ್ಗತ ನಾರಾಯಣ ಪಾಹಿ
ಆರ್ಯ ಮಾರುತಿ ಪಂಚಪ್ರಾಣ ಪ
ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು
ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ.
ದ್ರುಪದನ ಸುತೆ ನಿನ್ನ ಕರೆಯೆ ಅಂದು
ಕೃಪಣ ವತ್ಸಲ ಶೀರೆ ಮಳೆಯೇ
ಅಪರಿಮಿತವು ನೀರ ಸುರಿಯೆ ಸ್ವಾಮಿ
ಕುಪಿತ ದೈತ್ಯರ ಗರ್ವ ಮುರಿಯೇ
ಜನಸೋ ಜನರ ವಿಪತ್ತು ಕಳೆದೆ
ಈ ಪರಿಯ ದೇವರನೆಲ್ಲಿ ಕಾಣೆನೊ
ತಪನಕೋಟ ಪ್ರಕಾಶ ಬಲ ಉಳ್ಳ
ಕಪಿಲರೂಪನೆ ಜ್ಞಾನದಾಯಕ 1
ಹೃದಯ ಮಂಟಪದೊಳಗೆಲ್ಲ ಪ್ರಾಣ-
ದದುಭುತ ಮಹಿಮೆಯ ಬಲ್ಲ
ಸದಮಲನಾಗಿ ತಾವೆಲ್ಲ ಕಾರ್ಯ
ಮುದದಿ ಮಾಡಿಸುವ ಶ್ರೀನಲ್ಲ
ಹದುಳ ಕೊಡುತಲಿ ಬದಿಲಿ ತಾನಿದ್ದು
ಒದಗಿ ನಿನಗೆಲ್ಲ ಮದುವೆ ಮಾಡಿದ
ಪದುಮಜಾಂಡೋದರ ಸುದತಿಯ
ಮುದದಿ ರಮಿಸೆಂದು ಒದಗಿ ಬೇಡುವೆ 2
ಎನ್ನ ಬಿನ್ನಪವನ್ನು ಕೇಳೊ ಪ್ರಿಯ
ಮನ್ನಿಸಿ ನೋಡೊ ದಯಾಳೋ
ಹೆಣ್ಣಬಲೆಯ ಮಾತು ಕೇಳೂ ನಾನು
ನಿನ್ನವಳಲ್ಲವೇನು ಹೇಳೋ
ನಿನ್ನ ಮನದನುಮಾನ ತಿಳಿಯಿತು
ಕನ್ಯಾವಸ್ಥೆಯು ಎನ್ನದೆನ್ನದೆ
ಚೆನ್ನ ಶ್ರೀನಿಧಿವಿಠಲ ಪ್ರಾಯದ
ಕನ್ನೆ ಇವಳನು ದೇವ ಕೂಡಿಕೊ 3