ಒಟ್ಟು 304 ಕಡೆಗಳಲ್ಲಿ , 78 ದಾಸರು , 282 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಮ್ಮಾ ಶ್ರೀ ವಾಸುದೇವನಾ ನಮ್ಮ ಬೇಡಿದಿಷ್ಟಾರ್ಧವ ನೀವನಾ ಪ ಪರ ಬ್ರಹ್ಮ ರೂಢಿಗೆ ನರಲೀಲೆಯಾಡುವ ಬಗೆಯಾಅ.ಪ ದೇವರ ಅನುಮತ ನೋಡಿದಾ ಅಂವ ದೇವಕಿ ಉದರದಿ ಮೂಡಿದಾ ಪಾವನ ಗೋಕುಲ ಮಾಡಿದಾ ಸುಖ ದೇವಿ ಯಶೋದೆಗೆ ನೀಡಿದಾ ಆವಾವ ಪರಿಯಲಿ ನೋವ ಬಗೆಯ ಬಂದು ಗಾಲಿಲ ಅಸುರರ ಜೀವನ ವಳಿದಾ 1 ಗೊಲ್ಲತೆಯರ ಮನಮೋಹಿಸಿ ಕದ್ದು ಅಲ್ಲಿಹ ಪಾಲ್ಬಣ್ಣೆ ಸೇವಿಸಿ ಬಿಲ್ಲ ಹಬ್ಬದ ನೆವತೋರಿಸಿ ಪೋಗಿ ಮಲ್ಲಚಾಣರರಾ ಭಂಗಿಸೀ ಬಲ್ಲಿದ ಕಂಸನ ಮಲ್ಲಯದ್ಧಗಳಿಂದ ಘಲ್ಲಿಸಿದನು ಜನಚಲ್ಲಿ ಬಡಿದನಾ 2 ನೀರೊಳು ಕಟ್ಟಿಸಿ ಮನೆಯನು ಬಂಗಾರದ ದ್ವಾರಕಾ ಪುರವನು ಸೇರಿಸಿ ಯದುಕುಲದವರನು ರುಕ್ಮಿ ಣೀ ರಮಣಲ್ಲಿಗೆ ಮರೆದನು ಸಾರಿದ ಶರಣರಾ ತಾರಿಸಿ ಹೋದನು ಮಹಿಪತಿ ನಂದನ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಲು ಬಂದಿರುವ ನಿಮ್ಮನು ಪ ಬೇಡಿದ ವರಗಳ ನೀಡುವ ದೇವನುಅ.ಪ ವಾಸುದೇವನ ಕೃಪಲೇಶವ ಪಡೆಯಲು ಅಸೇತು ಹಿಮಗಿರಿ ದೇಶಗಳಿಲ್ಲಿಹ ಸಾಸಿರ ಕ್ಷೇತ್ರ ಪ್ರವಾಸವ ಗೈವದು ಲೇಸಲ್ಲವೆನುತ ದಾಸಜನಗಳನು 1 ಬೆಡಗು ಬಿಂಕಗಳಿಲ್ಲ ಸಿಡುಕನು ಇವನಲ್ಲ ಬಡವಬಲ್ಲಿದನೆಂಬೊ ಕಡುಭೇದವಿಲ್ಲವು ಕಡಲಶಯನನಿವ ಪೊಡವಿಯಳಿಗೆ ತ ನ್ನಡಿಯಾಳುಗಳ ಕರಪಿಡಿದೆತ್ತಲೋಸುಗ2 ಒಂದು ತುಳಸಿದಳ ಬಿಂದು ಗಂಗೋದಕ ದಿಂದಲೇ ಪರಮಾನಂದವ ಪೊಂದುವ ತಂದೆ ಪ್ರಸನ್ನನು ಬಂದ ಮಂದಿರದಲಿ ಇಂದಿರೆ ತಾನಲ್ಲಿ ಎಂದೆಂದು ಇರುವಳು3
--------------
ವಿದ್ಯಾಪ್ರಸನ್ನತೀರ್ಥರು
ನೋಡು ನೋಡಮ್ಮ ಭಾರತಿದೇವಿ ಪ ನೋಡಿ ನೋಡಮ್ಮ ಜೋಡುಕರಗಳ ಜೋಡಿಸಿ ಎದುರಿಲಿ ಮೂಢನು ನಿಂತಿಹೆಅ.ಪ. ಕಾಳಿ ದ್ರೌಪದಿ ನೀಲಲೋಹಿತೆಬಾಲೇ ಮಂಗಳೇ ಶೀಲೆ ಸುಂದರಿ 1 ಇಂದ್ರಸತಿ ಮುಖ ಸುಂದರಿಯರುಬಂದು ಸೇವಿಸೆ ಪೊಂದಿಪುಟ್ಟಿದೆ 2 ವಾಸುದೇವನ ನೀ ಸ್ಮರಿಸೆ ವಸ್ತ್ರರಾಶಿ ಪಡೆದೆ ಇಂದಿರೇಶನ ಸುಪ್ರಿಯೆ 3
--------------
ಇಂದಿರೇಶರು
ಪರಿ ಏನೋ ಬಾಲ ಹನುಮ ಪ. ಬಂಧಿಸಿದರಾರಿಲ್ಲಿ ನಿನ್ನ ಹನುಮ ಅ.ಪ. ಒಂದು ಸಲ ನೋಡುವೆನೆ ಬ್ರಹ್ಮಾಸ್ತ್ರವಲ್ಲವಿದು ಒಂದು ಸಲ ನೋಡುವೆನೆ ಅಜಗರವಿದಲ್ಲ ಒಂದು ಸಲ ನೋಡುವೆನೆ ಕಳ್ಳ ಗುಂಪಲ್ಲವಿದು ಒಂದೆರಡು ಕೋಣವೆರಡರ ಮಧ್ಯೆ ಇರುವ 1 ಕ್ಷಣಕೆ ಪರಿಹರವಾಯ್ತು ಹಿಂದೆ ಆ ಬಂಧಗಳು ಕ್ಷಣಕ್ಷಣಕು ಇದ್ದಂತೆ ಇರುವುದೀ ತೊಡಕು ಗುಣದಂತೆ ಆವರಣ ವರ್ತುಳಾಕಾರದಲಿ ತೆನೆಗಳಲಿ ಕೋತಿಗಳ ಕಾವಲಿನ ಕಟ್ಟು 2 ಬೀಸಿದೀ ಬಲೆ ತೆಗೆಯೆ ಶ್ರೀ ಶನಿಗು ಅಳವಲ್ಲ ವಾಸುದೇವನೆÀ ಬಲ್ಲ ಈ ಮರ್ಮವ ದಾಸಜನ ಪ್ರಿಯ ಶ್ರೀಗೋಪಾಲಕೃಷ್ಣವಿಠ್ಠಲ ವ್ಯಾಸರಿಂದಲಿ ನಿನಗೆ ಮೋಸಗೈಸಿದನೋ 3
--------------
ಅಂಬಾಬಾಯಿ
ಪಾಥೇಯವ ಕಟ್ಟಿರೊ ವೈಕುಂಠಕೆ ಪಯಣ ಸ-ಮ್ಮತವಾದರೆ ಪ. ಮಾತಾಪಿತರುಯೆಂಬೊ ಭಕ್ತಿಚಿತ್ರಾನ್ನವಪಾರ್ಥಸೂತನ ಪಾದಪದ್ಮಪತ್ರವ ಹಾಸಿ ಅ.ಪ. ಹರಿಭಕ್ತಿಹರಿಗೋಲಿಂದ ಮೆಲ್ಲನೆ ನೀವುವಿರಜಾನದಿಯ ದಾಟಿರೊಕರಜಾಗ್ರಗಳಿಂದ ಹಿರಣ್ಯಕನನು ಸೀಳಿದಪರವಾಸುದೇವನ ದರುಶನವಾಹೋದಯ್ಯ 1 ಪ್ರಳಯದ್ಹಾವಳಿಯಿಲ್ಲವೊ ಪೇಳುವುದೇನುಚಳಿ ಮಳೆ ಬಿಸಿಲಿಲ್ಲವೊಬೆಳಸು ಬಿತ್ತಿಲ್ಲದ ಬೇಕಾದ ಸಂಪತ್ತುನಳಿನನಾಭನ ಪುರದೊಳಗೆ ನೆಲಸಿಹುದಯ್ಯ 2 ಶುದ್ಧ ಸಾತ್ವಿಕ ಪುರವು ತಾಮಸರಿಗೆ[ಪೊದ್ದಲಳವಲ್ಲವೊ]ಅಧ್ಯಾತ್ಮ ಅರ್ಜುನಗೆ ನಿರ್ಧಾರ ಪೇಳಿದತದ್ಧಾಮ ಪರಮಂ ಮಮವೆಂಬೊ ಪುರವೊ 3 ಕೂಗಳತೆಗೆ ಕೊಂಚವೊ ಹರಿಯ ಪುರನಾಗರಾಜನ ಸಾಕ್ಷಿಯೊನಾಗಶಯನನಲ್ಲಿ ನಮ್ಮ ಕಂಡರೆಹೋಗಬೇಡಿರೆಂದು ಹುಟ್ಟ ತಡೆವನೊ 4 ಬರವೆಂಬ ಮಾತಿಲ್ಲವೊ ಒಂದುಕಾಸುತೆರಿಗೆಯ ಕೊಡಬ್ಯಾಡಿರೊಪರಮಕರುಣಿ ಹಯವದನ ವೈಕುಂಠದಿಸರುವಮಾನ್ಯವನಿತ್ತು ಶರಣರ ಪೊರೆವನು 5
--------------
ವಾದಿರಾಜ
ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಪಾದತೋರೋ ಪದ್ಮಾಕ್ಷ ಬಾರೋ ಪ. ಪಾದಪದ್ಮವ ತೋರೋ ಪದ್ಮಾಕ್ಷ ಬಾರೋ ಆದಿಮಧ್ಯಾಂತ ಸ್ವರೂಪ ಮೈದೋರೋ ಅ.ಪ. ಬಲಿಯನ್ನು ತುಳಿದಂಥ, ಭೂಮಿಯನಳೆದಂಥ ಶಿಲೆಯಾಗಿದ್ದವಳ ಕಲುಷವ ಕಳೆದಂಥ 1 ಶಿಶುರೂಪದಿಂದಲೆ ಶಕಟನ ಒದ್ದಂಥ ಶಶಿಮುಖಿಯಶೋದೆಗೆ ಶಿಶುವೆನಿಸಿ ಮೆರೆದಂಥ 2 ಗೊಲ್ಲರ ಮನೆಮನೆಗೆ ಕಳ್ಳನಂದದಿಪೊಕ್ಕು ನಲ್ಲೆಯರ ಕೈಪಿಡಿಗೆ ನಿಲ್ಲದೋಡುವ ಮುದ್ದು 3 ಕಾಳಿಂಗನ ಫಣೆಯೊಳ್ ಕೋಲಾಹಲದಿ ಕುಣಿದ ಕಾಳಿಂಗನರಸಿಯರಿಗೆ ತಾಲೀ ಭಾಗ್ಯವನಿತ್ತ4 ಕರುತುರುಗಳ ಮರೆಸಿ ದೊರೆ ನಿನ್ನರಸಿದ ಪರಮೇಷ್ಠಿಯೆ ತನ್ನ ಕರದಿಂ ಪೂಜಿಸಿದಂಥ 5 ಮಾವ ಕಂಸನ ಕೊಂದು ತಾಯಿ ದೇವಕಿ ವಸುದೇವಸುತ ವಾಸುದೇವನೆಂದೆನಿಸಿದ 6 ಸಿರಿದೇವಿಯೇ ನಿಜಕರಗಳಿಂದೊತ್ತುವ ಪರಮಪಾವನ ಪದಸರಸೀರುಹ 7 ವರಶೇಷಗಿರಿದೊರೆ ಶರಣರ ಮರೆವರೆ ಶಿರಬಾಗಿ ಬೇಡುವೆ ಭರಿಸೆನ್ನನೆನುವೆ 8
--------------
ನಂಜನಗೂಡು ತಿರುಮಲಾಂಬಾ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾರುಗಾಣವುದೆಂದಿಗೊ ರಂಗಯ್ಯ ಪ ಘೋರಾಹಂಕಾರವ ಬಿಟ್ಟು ನಿನ್ನಯಪಾದ ಸೇರುವುದಿನ್ನೆಂದಿಗೊ ಅ.ಪ ಬಿಟ್ಟುಬಿಡುವುದೆಂದಿಗೆ 1 ವಾಸುದೇವನೆ ನಿಮ್ಮ ಪಾದಾರವಿಂದದೊಳು ವಾಸವಾಗುವದೆಂದಿಗೊ 2 ಸಮವ ಮಾಡುವುದೆಂದಿಗೊ 3 ತಟ್ಟನೆ ಸೇರಿಸಯ್ಯ 4 ಭಕ್ತಿನಾಮವನು ಕೊಡಿಸಯ್ಯ 5
--------------
ಯದುಗಿರಿಯಮ್ಮ
ಪಾಲಿಸು ಪರಮಾತ್ಮನೆ ಪಾವನ ಗುಣ- ಶೀಲ ಸದ್ಗುಣಧಾಮನೆ ಪ ಶ್ರೀಲಕುಮಿಯ ಪ್ರಿಯ ಶ್ರೀಶಸರ್ವೋತ್ತಮ ವಾಸವವಂದಿತ ವಾಸುದೇವನೆ ಹರಿ ಅ.ಪ ಕೇಶವ ನಾರಾಯಣ ಮಾಧವ ಗೋವಿಂದ ವಿಷ್ಣುವೆ ನಮಿಪೆ ಮಧುಸೂದನ ತ್ರಿವಿಕ್ರಮ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭನೆ ಪೊರೆ ದಾರಿ ಕಾಣೆ ದಾಮೋದರ ಸಂ_ ವಾಸುದೇವ ಪ್ರದ್ಯುಮ್ನನನಿ- ರುದ್ಧ ಪುರುಷೋತ್ತಮ ಅಧೋಕ್ಷಜ ನಾರಾಸಿಂಹ ಅಚ್ಚುತ ಜನಾರ್ದನ ಉ- ಪೇಂದ್ರ ಹರಿ ಶ್ರೀ ಕೃಷ್ಣ ಶೌರಿ1 ವಾರಿ ವಿಹಾರದಲಿ ಬೆನ್ನಿಲಿ ಗಿರಿ ಭಾರವನ್ನೆ ತಾಳಿ ಕೋರೆ ತೋರುತ ಕರುಳ್ಹಾರವ ಮಾಡಿದ ಮೂರಡಿ ಭೂಮಿಯ ಬೇಡಿ ಭೂಪಾಲನ ಕಾಡಿ ಕೆಡಹುತ ಕೂಡಿ ಕಪಿಗಳ ಬೇಡಿ ಪಾಲ್ಮೊಸರ್ಬೆಣ್ಣೆ ಬುದ್ಧನೀ- ನಾಗಿ ಖಡ್ಗವಧರಿಸಿ ಕುದುರೆಯ- ನೇರಿ ಮೆರೆಯುವ ಶ್ರೀ ರಮಾಪತೆ 2 ಶಾಂತೀಶ ಅನಿರುದ್ಧನೆ ಶರಣೆಂಬೆ ನಿನ್ನ ಕೃತಿಪತಿ ಪ್ರದ್ಯುಮ್ನನೆ ಜಗದೀಶ ಜಯಾಪತಿ ಜಯ ಸಂಕರ್ಷಣ ದೇವ ನಮಿಪೆ ಮಾಯಾಪತಿ ವಾಸುದೇವನೆ ನಿನ್ನ ಪಂಕಜ ತೋರು ಲಕ್ಷ್ಮೀ- ರಮಣ ನಾರಾಯಣ ನಮೋ ಗರಡು ಗಮನನೆ ಕಮಲನಾಭ ವಿ-ಠ್ಠಲನೆ ಶ್ರೀಹರಿ ಪರಮ ಕರುಣಿಯೆ 3
--------------
ನಿಡಗುರುಕಿ ಜೀವೂಬಾಯಿ
ಪಾಲಿಸು ಶ್ರೀಶನೆ ಪರಮ ಪವಿತ್ರನೆ ಪಾವನ್ನ ಚರಿತನೆ ಪಾಲಿಸೆನ್ನ ಪ ಕಾಲಕಾಲಕೆ ನಿನ್ನ ಮಹಿಮೆಯ ತೋರಿಸಲಹುದು ಸರ್ವವ್ಯಾಪಕ ಮಾಯಾದೇವಿಯರಮಣ ಶ್ರೀಪತೆ ಕಾಯೊ ಶ್ರೀಹರಿವಾಸುದೇವನೆಅ.ಪ ವಾಸುದೇವನೆ ನಿನ್ನ ಸೋಸಿಲಿ ಭಜಿಪರ ಕ್ಲೇಶಗಳ್ಹರಿಸಿ ಸಂತೋಷವಿತ್ತು ದೋಷದೂರನ ನಾಮ ಆಸೆಯಿಂದ ಭಜಿಪರಸಂಗವನೂ ನೀಡೆನುತ ಬಿನ್ನೈಸುವೆನೂ ಎನ್ನೊಡೆಯ ನೀನೆಂದೆನುತ ಅಡಿಗಳಿಗೆರಗುವೆನೂ ಧೃಡಭಕುತಿ ನಿನ್ನೊಳಗಿರಿಸಿ ರಕ್ಷಿಪುದೆಂದು ಬೇಡುವೆನೂ ನುಡಿನುಡಿಗೆ ನಿನ್ನಯ ನುಡಿಗಳನು ನುಡಿವಂಥ ಭಕ್ತರ ಅಡಿಗಳಾಶ್ರಯ ಕೊಟ್ಟು ಕಾಯ್ವುದು ಬಡವನೆನ್ನಲಿ ಬೇಡ ಎನ್ನನು ಬಡವರಾಧಾರಿ ಶ್ರೀಹರಿ 1 ಶಂಖು ಚಕ್ರವು ಪದ್ಮಗದೆಯು ಹೊಳೆಹೊಳೆಯುತ್ತ ಬಿಂಕದಿಂದಲಿ ನಿಂತು ನೋಡುತಲಿ ಮಂಕುಮತಿಗಳನ್ನು ಶಂಕೆಯೊಳಗೆ ತಳ್ಳಿನೋಡುತ್ತ ನಿನ್ನಯ ಸದ್ಭಕ್ತರ ಶಂಕೆಗಳೆಲ್ಲವನು ಕ್ಷಿಪ್ರದಿ ಕಳೆಯುತ್ತ ಶ್ರೀಹರಿ ನಿನ್ನ ಪಾದ ಪಂಕಜಗಳೆ ಚಿಂತಿಸುವರಿಗೆ ಹರುಷ ನೀಡುತ್ತ ವೈರಿ ನಿನ್ನಯ ವಿಧವಿಧದ ಲೀಲೆಗಳ ತೋರುತ್ತ ಉದಯ ಭಾಸ್ಕರನಂತೆ ಪೊಳೆಯುತ್ತ ಮುದದಿ ಸಿರದಿ ಕಿರೀಟ ಹೊಳೆಯುತ್ತ ಸದಮಲಾತ್ಮಕ ಸತ್ಯಮೂರುತಿ2 ಹೃದ್ಗೋಚರನಾಗು ಪದ್ಮಾನಾಭ ಉದ್ಧರಿಸೆನ್ನನು ಉದ್ಧವಸಖನೆಂದು ನಂಬಿರುವೆ ಮನ್ಮನದ ಭಯಗಳವದ್ದು ಬಿಸುಡುತ ಸಲಹೊ ನರಹರಿಯೆ ಮಮಸ್ವಾಮಿ ನಿನ್ನಯ ಪದ್ಮ- ಪಾದಕೆ ನಮಿಪೆ ಶ್ರೀಹರಿಯೆ ಮೋಹಕ ಬಂಧವ ಬಿಡಿಸಿರಕ್ಷಿಸುತೆನ್ನ ಸಲಹು ಮಾಯಾಪತಿಯೆ ಬಹು ವಿಧದಿ ಪ್ರಾರ್ಥಿಪೆ ತೋಯಜಾಕ್ಷನೆ ತೋರು ನಿನ್ನಯ ಚಾರು ಚರಣಕೆ ಬಾಗಿ ನಮಿಸುವೆ ಕಾಯ್ವುದೆನ್ನನು ಕಮಲನಾಭವಿಠ್ಠಲನೆ ಶ್ರೀಹರಿ ವಾಸುದೇವನೆ 3
--------------
ನಿಡಗುರುಕಿ ಜೀವೂಬಾಯಿ
ಪಾಷಾಣವಲ್ಲವದು ಭೂಷಣವು ಕರಕೆ ದೋಷವಾ ದೂರಿಪುದು ತೋಷ ಜನಿಪುದು ಮನಕೆ ಪ ದಾಸಳುದಕದಿ ಜನಿಸಿ ಶ್ರೀಶನಂಕಿತ ವಹಿಸಿ ವಾಸುದೇವನ ಭಜಕರೆದೆ ಪಿರಿದು ಎನಿಸಿ ದಾಸಜನರಿದನು ನಿತ್ಯದಿ ಪಾಡಿ ಪೂಜಿಸಲು ಘಾಸಿಯಕ್ಷಯ ಲೋಕಪಥವ ಸಲೆ ಕರುಣಿಪುದು 1 ಶ್ರೀದೇವಿ ವಲ್ಲಭನು ಭೂದೇವಿ ರಮಣನು ಸಾಧುಗಳ ಪ್ರಿಯ ಶ್ರೀಗಿರಿನಿಲಯನು ಮೋದದಲಿ ಶಕ್ತ ಮೌಕ್ತಿಕ ಸ್ವರ್ಣಸರಿಯಲ್ಲ ಭೇದ ತೋರಲು ದೃಶನ್ಮಾಯಯಂತಿಹ ಸ್ವಾಮಿ 2 ಭಕ್ತರೊಳು ನಿಜದಾಸ ಯುಕ್ತ ಚಂದ್ರಹಾಸ ವಕ್ತøದೊಳ್ಗೊಳಸಿಹನು ನರಸಿಂಹದಾಸ ಮುಕ್ತಿಪಂಥ ಕಂಡನವ ಸಂದೇಹ ಬೇಡಿದಕೆ ಶಕ್ತ ನರಸಿಂಹವಿಠ್ಠಲ ಸಾಲಿಗ್ರಾಮವು 3
--------------
ನರಸಿಂಹವಿಠಲರು
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪುರಂದರ ಗುರುವರ ಇನ್ನು ಭಾಳ ಹೊತ್ತಾಯಿತು ಭಕುತ ಜನಪ್ರಿಯ ಪ. ಶ್ರೀಶನಪ್ಪಣೆಯಿಂದ ಭೂಲೋಕದಲಿ ಪುಟ್ಟಿ ಆಶೆಯಿಂದಲಿ ಧನ ಗಳಿಸಿ ಕೋಟಿ ವಾಸುದೇವನು ಎಚ್ಚರಿಸಲು ವೈರಾಗ್ಯ ದಾಸತ್ವದಲಿ ಜಗದಿ ಮೆರೆಯಬೇಕು 1 ವ್ಯಾಸ ಮುನಿಯಿಂದುಪದೇಶಕೊಳ್ಳಲುಬೇಕು ದಾಸತ್ವ ಜಗದಲಿ ಸ್ಥಾಪಿಸಬೇಕು ದೋಷರಹಿತ ಮಧ್ವಶಾಸ್ತ್ರ ತತ್ವಗಳ ಪ್ರ ಕಾಶಗೈಸುತ ಕವನಗೈಯ್ಯಬೇಕು 2 ಸತಿಸುತ ಪರಿವಾರ ಭೂ ಸಂಚರಿಸಬೇಕು ಸ್ತುತಿಸುತ್ತ ಹರಿಯನ್ನು ಕುಣಿಸಬೇಕು ಜತನದಿ ನಿಜತತ್ವಗಳನರಿಯಲಿಬೇಕು ಕ್ಷಿತಿಗೆ ಅಚ್ಚರಿ ಮಹಿಮೆಯ ತೋರಬೇಕು 3 ಪುಷ್ಯದಮಾವಾಸೆ ಹರಿಪುರ ಸೇರಲು ಶಿಷ್ಯಕುಲವು ಜಗದಿ ಬೆಳೆಯಲೆಂದು ಶಿಷ್ಯ ವಿಜಯದಾಸರಿಗೆ ಅಂಕಿತವನಿತ್ತು ಶಿಷ್ಯ ಪ್ರಶಿಷ್ಯ ಸಂತತಿ ಬೆಳಸಬೇಕು 4 ಪಾಪಿ ಜನಗಳ ಪಾವನಗೈಯಲಿಬೇಕು ತಾಪಪಡುವರ ಪೊರೆಯಲೆತ್ನಿಸಬೇಕು ಶ್ರೀಪತಿ ದಾಸತ್ವ ಜಗದಿ ನಿಲ್ಲಿಸಬೇಕು ಗೋಪಾಲಕೃಷ್ಣವಿಠ್ಠಲನ ಸ್ಮರಿಸಬೇಕು 5
--------------
ಅಂಬಾಬಾಯಿ