ಒಟ್ಟು 330 ಕಡೆಗಳಲ್ಲಿ , 54 ದಾಸರು , 217 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿರಾಜಾ - ಪಾಲಿಸೊ ಎನ್ನ - ಯತಿರಾಜಾ ಪ ಯತಿರಾಜಾ ಪಾಲಿಸೊ ಎನ್ನ - ಅಹಂಮತಿಯ ಕಳೆದು ಗುರುವರೇಣ್ಯ | ಆಹ ಸತತದಿ ಹರಿ ಧ್ಯಾನ | ರತನನ ಮಾಡಿ ಸದ್ ಗತಿಯ ಸೇರುವಂಥ | ಪಥದಲ್ಲಿರಿಸೊ ರಾಜಅ.ಪ. ವೀಣಾ ವೆಂಕಟ ನಾಮಾಭಿಧ | ಕುಂಭಕೋಣ ಪುರದೊಳು ಮೆರೆದಾ | ಓವಿಜ್ಞಾನಿ ಸುಧೀಂದ್ರರೊಲಿಸಿದಾ | ಬಹುಮಾನವಾಗಿ ಶಾಲು ಪಡೆದಾ | ಆಹಏನು ಇದಾಶ್ಚರ್ಯ | ಮಾನ ಉಳಿವದೆಂತುನಾನೊಂದು ಕಾಣೆ | ನೆನುತಾವಸನ ಮುಂದಿಟ್ಟ 1 ಅಂದಿನಂದಿನ ಪಾಠಕ್ಕೆಲ್ಲ | ಟೀಕೆಛಂದಾಗಿ ಬರೆದಿರುವಲ್ಲ | ನಮ್ಮಹಿಂದಿನ ಸಂಶಯವೆಲ್ಲ | ನೀಗಿಮುಂದೆ ಜರುಗಿತು ಪಾಠವೆಲ್ಲ | ಆಹಎಂದು ನಮ್ಮ ವಸನ | ಕಂದ ನಿನ್ನಯ ಮೇಲೆಹೊಂದಿಸಿ ಮುದದಿಂದ | ಬಂದೆವೆಂದರ ಶಿಷ್ಯ 2 ಗುರುವು ಪಟ್ಟರು ಬಲು ಮೋದಾ | ಸುಧಾಪರಿಮಳಾರ್ಯರೆಂಬ ಬಿರುದಾ | ಪೊಂದಿಇರಲು ಕಾಲಾಂತರದಿಂದಾ | ಪಡೆದೆವರ ಯತ್ಯಾಶ್ರಮವವರಿಂದಾ | ಆಹಮೆರೆಸಿದೆ ರಾಮರ | ವರ ವೈಭವದಿಂದದುರುಳ ಮಾಯ್ಗಳಮತ | ತರಿದಿಟ್ಟೆ ವಾದದಿ 3 ಬೇಗೆಯಿಂದಳುತಿದ್ದ ಶಿಶುವಿಗೆ | ಚೈಲಆಗಸದೊಳು ನೀನು ನಿಲಿಸಿದೆ | ಹಾಂಗೆಮಾರ್ಗದಿ ಪ್ರಸವಿಸದವಳೀಗೆ | ನೀರನುಗಮಿಸುತ ನೀನು ಪೊರೆದೇ | ಆಹನಿಗಮಾಲಯ ವಾಸ | ರಾಘವೇಂದ್ರ ಗುರುವೆಬಗೆ ಬಗೆ ಗ್ರಂಥವ | ಮಿಗಿಲಾಗಿ ರಚಿಸೀದೆ 4 ಪಂಗು ಬಧಿರ ಮೂಕ ಜನರು | ನಿಮ್ಮಹಿಂಗದೆ ಬಂದು ಸೇವಿಪರು | ಬಂದಭಂಗಗಳೆಲ್ಲ ನೀಗುವರು | ಯತಿಪುಂಗನೆ ನಿನಗೆ ಸರಿಯಾರು | ಆಹಗಂಗಾ ಜನಕ ರೂ | ಪರಿಗಳು ನಾಲ್ಕರಿಂಅಂಗಲಾಚಿಪ ಜ | ನಂಗಳ ಪೊರೆಯುವ 5 ಅಘ ಪತಿ ಗೋ | ವಿಂದನ ಮಂದಿರಬಂದು ಸೇರುವುದಕ್ಕೆ | ಅಂದ ಸೋಪಾನವು 6 ವರಹಸುತೆ ತೀರ ವಾಸಾ | ಭಕ್ತಸುರತರುವೆ ನಿನ್ನ ದಾಸಾ | ನಾಗಿಇರಿಸೊ ಭೂ ತಳಾಧೀಶ | ಬೇಡ್ವೆವರ ಒಂದ ನಾನಿನ್ನ ಅನಿಶ | ಆಹಗುರುಗೋವಿಂದ ವಿಠಲನ | ಚರಣಾರವಿಂದವನಿರುತ ಭಜಿಸುವಂಥ ವರಮತಿ ಕೊಟ್ಟನ್ನ7
--------------
ಗುರುಗೋವಿಂದವಿಠಲರು
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು
ರಾಘವೇಂದ್ರ ಗುರು ನಮೋ ನಮೋ ಯೋಗಿಜನೇಡಿತ ನಮೋ ನಮೋ ಪ ವಾದಿಜಯಪ್ರದ ನಮೋ ಸಾಧುಜವಾವ ನಮೋ ನಮೋಶ್ರೀಧರ ಬೋಧಕ ನಮೋ ಅಗಾಧತವ ಮಹಿಮ ನಮೋ 1 ಎಷ್ಟು ದಿನವಾಯಿತು ನಮೋ ಶ್ರೀ ಕೃಷ್ಣನ ಕಾಣದೆ ನಮೋಭೆಟ್ಟಿಯ ಮಾಡಿಸು ನಮೋ ವಿಷ್ಣು ದಾಸರೇಣ್ಯನೆ ನಮೋ 2 ತುಷ್ಟ ಮುಖಾಯ ನಮೋ ಶಿಷ್ಯರು ಸೇವಿಸೆ ನಮೋದೃಷ್ಟಿಲಿ ಕಳೆಯುವಿ ನಮೋ ಸರ್ವೇಷ್ಯವರಪ್ರದ ನಮೋ 3 ಚೂತರಸದಿ ಹರಿ ನಮೋ ಪೋತನು ಬೀಳಲು ನಮೋಆ ತನು ತ್ಯಜಿಸಿದ ನಮೋ ಜೀವಾತು ನೀನಾದೆ ನಮೋ 4 ವರಜಯತೀರ್ಥರ ನಮೋ ಸುರಸ ಸುಗ್ರಂಥಕೆ ನಮೋಪರಿಮಳ ಟೀಕೆಯ ನಮೋ ವಿರಚಿಸಿ ರಾಜಿಪೆ ನಮೋ 5 ರತುನಮಾಲಿಯ ನಮೋ ಹುತವಹಗಿತ್ತೆಯೋ ನಮೋಅತಿಶಯ ಪ್ರಾರ್ಥಿಸೆ ನಮೋ ಪ್ರಥಮ ತೆಗೆದುಕೊಟ್ಟೆ ನಮೋ 6 ನಾರದ ಶಿಷ್ಯನೆ ನಮೋ ನಾರಸಿಂಹಾರ್ಚಕ ನಮೋಸೇರಿ ಭಜಿಸಿ ನಿಮ್ಮ ನಮೋ ಎನ್ನ ಚಾರುದೃಷ್ಟಿಲಿನೋಡು ನಮೋ 7 ನಾಕವತಾರನೆ ನಮೋ ಲೋಕನಾಥಾಶ್ರಯ ನಮೋಕಾಕು ದರ್ಮತ ಹರ ನಮೋ ಶ್ರೀಕರ ಸೇವಕ ನಮೋ 8 ವೃಂದಾವನದಲಿ ನಮೋ ನಮೋ ಭಕ್ತ ವೃಂದರಲಿಂದು ನೀ ನಮೋಬಂದು ಮಾತಾಡುವಿ ನಮೋ ಇಂದಿರೇಶನ ಪ್ರಿಯನಮೋ ನಮೋ 9
--------------
ಇಂದಿರೇಶರು
ರಾಮದೂತ ನËಮಿಭಕುತ ಕಾಮಿತದಾತ ಸುರಶೇವಿತ ಪ ಈ ಮಹಿಯೊಳೂ ಗ್ರಾಮಕೂಡ್ಲಿಗಿ ಧಾಮಮಾರುತ ಪಾಹಿಸತತಅ.ಪ ಭೂಮಿಸುತೆಯ ಕ್ಷೇಮವಾರ್ತೆಯ ರಾಮಗರುಹಿದ ಪದಕೆರಗಿದ ಹೇ ಮಹಾತ್ಮನೆ ಪ್ರೇಮದಿ ರಘು ರಾಮ ನೀಡಿದ ಬ್ರಹ್ಮನ ಪದ 1 ಇಂದು ಕುಲದಿ ಬಂದು ಕೌರವ ವೃಂದ ಮಥಿಸಿದೆಯಾ ಪಾಂಡು ತನಯ ಪೊಂದಿದಿಯಾ ನಂದಗೋಪನ ಕಂದನ ಕೃಪೆಯಾ ಪಾಲಿಸಯ್ಯಾ 2 ವ್ಯಾಸಶಿಷ್ಯ ಯತೀಶ್ವರ ತವ ಶಾಸ್ತ್ರದಿ ಮತಿಯಾ ಕರುಣಿಸಯ್ಯಾ ಶ್ರೀಶಕಾರ್ಪರ ವಾಸ ಶ್ರೀನರ ಕೇಸರಿಗೆ ಪ್ರೀಯ ಮಧ್ವರಾಯಾ 3
--------------
ಕಾರ್ಪರ ನರಹರಿದಾಸರು
ರಾಮನ ನೋಡಿರೋ ನಮ್ಮ ಸೀತಾರಾಮನ ನೋಡಿರೋ ಪ ರಾಮನನೋಡುತ ಪ್ರೇಮವ ಸುರಿಸುತ ನಾಮವ ನುಡಿಯುತ ನೇಮದಿ ಬೇಡುತ ಅ.ಪ ಅಜಭವಾದಿಗಳರಸನೀತಾ ಮತ್ತೆ ನಿಜಭಕುತರಿಗೆ ಮುಕ್ತಿಪ್ರದಾತ ತ್ಯಜಿಸಿ ದುಷ್ಟರಸಂಗ ಭಜಿಸಿ ಶಿಷ್ಯರ ಸಂಗ ಭುಜಗಭವವೆಂದರಿತು ನಿಜಸುಖಮೆಲ್ಲಲು 1 ಪಾದ್ಯ ಮತ್ತೆ ನಿತ್ಯಾನಿತ್ಯ ಜಗಸೃಜಿಪ ದೇವದೇವೇಶ ಮುಕ್ತಾಮುಕ್ತಾಶ್ರಯ ಸತ್ಯ ಪ್ರಾಣನ ಹೃಸ್ಥ ಉತ್ತಮೋತ್ತಮನೆಂದು ಎತ್ತಿಕೈಗಳ ಮುಗಿದು 2 ಭಕ್ತಿಯಿಂದಲಿ ನೋಡೆ ಸರ್ವಾಘಹರವೋ ಮತ್ತೆಪಾಡಲು ಕಾಮಿತ ಕರಗತವೊ ಹಸ್ತಿವರದನ ನೋಡೆ ಮತ್ತರಿಗೆ ಸಾಧ್ಯವೆ ವತ್ತುತ ಗೃಹಕೃತ್ಯ ಬೇಗ ಉತ್ತಮರಲ್ಲಿ 3 ಸುಲಭವಲ್ಲವೊ ಇಂಥಾ ಸಮಯ ಘಳಿಸಿ ನೋಡೀದವನೆ ಕೃತಾರ್ಥ ನಿತ್ಯ ಸಲಹುತ್ತಿರುವಂಥ ಅಲವ ಮಹಿಮಾರ್ಣವ ಲಲನೆ ಲಕ್ಷ್ಮಿಯ ನಾಳ್ವ 4 ಸರ್ವನಾಮಕ ನಿವನೂ ಮತ್ತೆ ಸರ್ವಪ್ರೇರಕ ಬಲಖ್ಯಾತ ನಿಹನೂ ಸರ್ವ ಸರ್ವಾಧಾರ ಸರ್ವೇಶ ಶಾಶ್ವತ ಸರ್ವಗುಣಗಣ ಪೂರ್ಣ ಸರ್ವವ್ಯಾಪ್ತನಾದ 5 ಆರಿಲ್ಲ ಸಮವಧಿಕ ಇವಗೇ ಮತ್ತೆ ಆರು ಕಾಣರು ನೆಲೆಯ ಸಾಕಲ್ಯ ಸತ್ಯ ಸಾರವಿಲ್ಲದ ಜಗದಿ ಸಾರನೊಬ್ಬನೆ ಇವನು ತೊರು ಪಾದಗಳೆಂದು ಸಾರಿಬೀಳುತ ಅಡ್ಡ 6 ಶರಣೆಂದ ವಿಭೀಷಣಗೆ ಪಟ್ಟ ಕಟ್ಟಿದನೂ ಕರುಣದಿಂದಲಿ ಶಬರಿಯ ಪೊರೆದವನು ದುರುಳ ಪಾಪಿಯ ದೊಡ್ಡ ಕವಿಯ ಮಾಡಿದ ಮಹಿಮ ಕರುಣ ಬೇಕಾದವರು 7
--------------
ಕೃಷ್ಣವಿಠಲದಾಸರು
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ
ವಂದಿಪೆ ಮುದದಿಂದಲಿ ನಾನು ವಂದಿಪೆ ಮುದ್ದು ಗಣಪಗೆ ವಂದಿಪೆ ಪ ನಂನಂದನನಾಮ ಮನದೊಳು ಆ- ನಂದದಿ ಭಜಿಸುವ ಚಂದ್ರಶೇಖರಸುತಗೆ ಅ.ಪ. ಆಕಾಶಕಭಿಮಾನಿ ಶ್ರೀಕಂಠವರಪುತ್ರ ರಾಕೇಂದುವದನ ಶ್ರೀಕಾಂತ ನಿಜಭಕ್ತ ಏಕಾಂತದಲಿ ಹರಿ ಆಕಾರತೋರಿಸಿ ನೂಕುತಭವಪಾಶ ಸಾಕು ಸಾಕು ಎಂದು 1 ವರವರದಾಯಕ ಸುರಗಣಪೂಜಿತ ವರಕರಿಮುಖವೇಷ ವರಸರ್ಪಕಟಿಸೂತ್ರ ಸಿರಿಕಾಂತಸೇವೆಗೆ ಬರುವ ವಿಘ್ನಂಗಳೆಲ್ಲ ಭರದಿಂದ ತರಿಯುತ ಕರುಣದಿ ಸಲಹೆಂದು 2 ವೇದವ್ಯಾಸರಶಿಷ್ಯ ಮೋದಕಗಳ ಪ್ರಿಯ ಮದನನಸೋದರ ಮುದವಿದ್ಯೆದಾಯಕ ಮಧ್ವಾಗಮದಲಿ ಅದ್ದುತ ಎಮ್ಮನು ಶುದ್ಧರನು ಮಾಡೋ ಸಿದ್ಧಿ ವಿನಾಯಕನೆಂದು 3 ಏಕದಂತನೆ ವರ ಆಖುವಾಹನ ಭಕ್ತರ ಶೋಕ ಹರಿಸೊ ಬೇಗ ಲೋಕ ವಂದಿತನೆ ರಕ್ತಾಂಬರ ತನು ರಕ್ತಗಂಧಪ್ರಿಯ ವಿ - ರಕ್ತಿನೀಡುತ ಹರಿಭಕ್ತನೆಂದೆನಿಸು ಎಂದು 4 ಪಾಶಾಂಕುಶ ಶಶಿದರ್ಪಭಂಜನ ಶ್ರೀಶನಾಭಿವಾಸ ವಿಶಾಲಕರ್ಣಯುತ ನಾಶಗೈಸುತವಿಷಯ ವಾಸನೆಗಳೆಲ್ಲ ವಿಶ್ವೋಪಾಸಕ ಪ್ರಭು ಶ್ವಾಸಾವೇಶಯುತನೆಂದು 5 ಚಾರುದೇಷ್ಣನೆ ನಿನ್ನ ಚರಣಕ್ಕೆ ಶರಣೆಂಬೆ ಸರಿನೀನು ಧನಪಗೆ ಗುರುಶೇಷಶತರಿಗೆ ತರಿದು ತಾಪತ್ರಯ ವರಜ್ಞಾನ ವೈರಾಗ್ಯ ಹರಿಭಕ್ತಿ ಹರಿ ಧ್ಯಾನ ನಿರುತ ಕೊಡು ಎಂದು 6 ಜಯತೀರ್ಥ ಹೃದಯದಿ ವಾಯುವಿನೊಳಿಪ್ಪ ಸಿರಿ ತಾಂಡವ ಕೃಷ್ಣವಿಠಲ ರಾಯನ ಧ್ಯಾನ ಕಾಯಾ ವಾಚಾ ಮನಸಾ ದಯಮಾಡಿ ಸಲಹೈಯ್ಯ ಜೀಯಾ ಗಣಪನೆಂದು7
--------------
ಕೃಷ್ಣವಿಠಲದಾಸರು
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾದಿರಾಜಾಶ್ರಮ ನೋಡಲು ಸಂಭ್ರಮ ಪಾಡಿ ಪೊಗಳುವರಿಗಾಹುದು ಪ್ರೇಮ ಪ ಕಾಡೊಳಗೆ ಸಂಚರಿಪ ಋಷಿಗಳು ಪಾಡಿಪೊಗಳುತ ಪರಮ ಪುರುಷನ ಬೇಡಿದಿಷ್ಟಾರ್ಥಗಳ ಪಡೆಯುತ ಕೂಡಿ ಸುಖಿಸುವ ಶಿಷ್ಟರಂದದಿ ಅ.ಪ ಪರಮಸಾತ್ವಿಕರೆಲ್ಲ ಪುರಂದರದಾಸರ ಪರಮ ಪುಣ್ಯದ ದಿನ ಬರಲು ಸಂಭ್ರಮದಿ ಪರಿಪರಿವಿಧದಿಂದ ಹರಿದಾಸರೆಲ್ಲರು ತ್ವರದಿಂದ ಗುರುಗಳಾಜ್ಞೆಯ ಮೀರದೆ ಭರದಿಂದ ನೆರೆದರತಿ ಶೀಘ್ರದಿಂದಲಿ ಮುದದಿಂದ ಗುರುಗಳಡಿಗೊಂದಿಸುತ ಕ್ರಮದಿಂದ ಸರಸವಾಕ್ಯಗಳಿಂದ ಶಿಷ್ಯರಿಂದ ಹರಿಸಿ ಆಶೀರ್ವಾದದಿಂದಲಿ ಸುರಿಸಿ ಅಮೃತವಾಣಿ ನುಡಿಯುತ ಹರುಷಪಡುತಿಹ ಗುರುಗಳಿಹ ಸ್ಥಳ 1 ಪವಮಾನಮತದವರೆಲ್ಲರೊಂದಾಗುತ ನಮಿಸಿ ಶ್ರೀಪತಿಗೆ ವಂದನೆ ಮಾಡುತ ವಿನಯದಿಂದಲಿ ತಮ್ಮನಿಯಮಿತ ಕಾರ್ಯವ ನÀಡೆಸುತ್ತ ತಂಬೂರಿಗಳ ಸುಸ್ವರದಿ ಮೀಟುತ ನಿಂದು ಹರುಷಿಸುತ ತಾಳಗಳ ಬಾರಿಸುತ ಶಿಷ್ಯರು ಕುಣಿಯುತ್ತ ಬಲುನಾದ ಕೊಡುತಿಹ ಕಾಲಗೆಜ್ಜೆಗಳೆಲ್ಲ ಘಲುರೆನುತ ದಾಸರಿಗೆ ಉಚಿತದ ಜೋಳಿಗೆಗಳನೆ ಪಿಡಿದು ನಡಿಯುತ್ತ ಶ್ರೀರಾಮರ ದೂತನ ಬಾರಿಬಾರಿಗೆ ನಮಿಸಿ ನಮಿಸಿ ಪೊಗಳುತ್ತ ಹರಿನಾಮ ಸ್ಮರಣೆಯಲಿ ಮಾರುತೀಶನ ಭಕುತರೆಲ್ಲರು ದ್ವಾರಬಿಡುತಲಿ ಪೊರಟು ಭಜಿಸುತ ಬೀದಿಯಲಿ ಕುಣಿಯುತ್ತ ಹರಿಗುಣ ಪಾಡಿ ಪೊಗಳುವ ಪರಮ ವೈಭವ2 ಆ ಮಾರುತನ ದಯದಿಯಾಯಿವಾರವು ಮಾಡಿ ಶ್ರೀನಿಕೇತನ ಪಾಡಿ ಪೊಗಳುತಲಿ ಜ್ಞಾನಿ ಪುರಂದರದಾಸರ ಚರಿತೆಯ ಪೇಳುವರು ಸಂಭ್ರಮದಿಂದಲಿ ನಲಿದಾಡುವರು ಹರಿದಾಸರ ಅದ್ಭುತಕಾರ್ಯಗಳ ಸುಸ್ವರದಿ ಪಾಡುವರು ಹರಿದಾಸ ಶ್ರೇಷ್ಠರ ಮಹಿಮೆಗಳ ಇನ್ನುಳಿದ ಶಿಷ್ಯರು ಪೇಳುವರು ವರ ಪಾರ್ಥಿವ ವತ್ಸರದಿ ಗುರುಗಳ ಕರುಣ ಪಡೆದವರು ನೆರೆದು ರಾತ್ರಿಕಾಲದಲಿ ಶ್ರೀ ಹರಿಯ ಭಜನೆ ಮಾಡುತಿರಲು ಹರುಷ ಪಡುತಲಿ ನಲಿದು ಕಮಲನಾಭ- ವಿಠ್ಠಲನೆ ಸಲಹು ಎನ್ನುವ3
--------------
ನಿಡಗುರುಕಿ ಜೀವೂಬಾಯಿ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಜಯದಾಸರ ಸ್ತೋತ್ರ ನಂಬಿದೆ ನಾ ನಿನ್ನ ಚರಣಕಮಲವನ್ನು ವಿಜಯರಾಯ ಪ ಬೆಂಬಿಡದೆಲೆ ವಿಷಯ ಹಂಬಲ ಬಿಡಿಸಯ್ಯ ವಿಜಯರಾಯ ಅ.ಪ ತಾಯಿ ಎಳೆಯ ಶಿಶುವನು ಬಿಟ್ಟಿರುವುದುಂಟೆ ವಿಜಯರಾಯಬಾಯ ಬಿಡುವೆ ನಾ ಭವದಲ್ಲಿ ಸಿಗಬಿದ್ದು ವಿಜಯರಾಯನೋಯಲಾರೆನೂ ಎನ್ನ ಕಾಯೊ ಕರುಣದಿಂದ ವಿಜಯರಾಯಕಾಯ ಮನವು ನಿನ್ನ ಚರಣಕ್ಕೊಪ್ಪಿಸಿದೆನೊ ವಿಜಯರಾಯ 1 ಕರ್ಮ ಕತ್ತಲೆಯೊಳು ಸುತ್ತಿ ವಿಜಯರಾಯ ತತ್ತಳಗೊಳುತಿಪ್ಪೆ ಎತ್ತಿರೊ ಎನ್ನ ವಿಜಯರಾಯಪೆತ್ತ ತಂದೆಗೆ ಮಗ ಭಾರವಾಗುವುದುಂಟೆ ವಿಜಯರಾಯವಿತ್ತ ಭಾಗ್ಯವನೊಲ್ಲೆ ಎಂದೆಂದಿಗೂ ನಾನು ವಿಜಯರಾಯ 2 ತುಂಬಿದ ಭಂಡಾರ ಸಂಪತ್ತು ಎನಗೆಂದು ವಿಜಯರಾಯಹಂಬಲಿಸುತ ಬಲು ಸಂಭ್ರಮದಿರುತಿಪ್ಪೆ ವಿಜಯರಾಯಸಂಬಳಕಾರ ಶಿಷ್ಯ ನಿನಗಲ್ಲ ಕೇಳಯ್ಯ ವಿಜಯರಾಯಬಿಂಬ ಶ್ರೀ ವೆಂಕಟ ವಿಠ್ಠಲನ ತೋರೊ ನೀ ವಿಜಯರಾಯ 3
--------------
ವೆಂಕಟೇಶವಿಟ್ಠಲ