ಒಟ್ಟು 470 ಕಡೆಗಳಲ್ಲಿ , 70 ದಾಸರು , 428 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿವಿಕೆ ನೋಡಣ್ಣಾ ಪ ಉಬ್ಬುಸಗೊಳುತಲಿ ಹುಡುಕುತ ತಂದು | ಒಬ್ಬರ ಪದ ಪದ್ಯಗಳನೇ ಹಳಿದು | ಉಬ್ಬುಬ್ಬಿ, ಹೇಳುವ ತನ್ನದೆಂದು 1 ಹಂಬಲಿಸದೆ ಮೃದು ತಂಪಿನ ಯಲಿಯಾ | ಬೆಂಬಿಸ ದಾರಿಸಿ ಮುಳ್ಳಿನ ಕೊನೆಯಾ | ತಿಂಬುವ ಒಂಟೆಯ ಮತಿಪರಿಯಾ 2 ಪರಿಪರಿ ಶೃಂಗಾರದ ಕಲೆಯಂಗಳು | ಪರಿ ಅರೆಯದೆ ಇರಲು | ಕೊರತೇನು ಪತಿವ್ರತೆ ಗುಣಗಳು 3 ಸಾರಸ ತಿಳಿಯದೇ ನೋಡಾ| ನಿಬ್ಬಿರೆನುತಾ ಬಿಟ್ಟವ ಬಲು ಮೂಢಾ | ಹಬ್ಬುವಾ ಚಾತುರತನ ಕೂಡಾ 4 ಬರೆ ಬೀರುತ ಮಾತುಗಳನೆ ಬಚ್ಚಾ | ಧರೆಯೊಳು ಹೆಮ್ಮಿಗೆ ಬಿದ್ದನು ಹುಚ್ಚಾ | ಗುರು ಮಹಿಪತಿ ಸುತ ಪ್ರಭು ಮೆಚ್ಚಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತುಂಗಾತೀರ ಪ್ರಭಾಕರ ಶೃಂಗಾರ ಶ್ರೀ ರಾಘವೇಂದ್ರ ಪ್ರಭು [ಮಾ ಮಂದಾರ] ಪ ತುಂಗ ಕೃಪಾಕರ ಕಾಮಿತದಾತ [ಸಂಗ]ವೆಂಕಟೇಶ ನಿರಂತರ ಮೋದಿತ ಅ.ಪ ಯೋಗದಂಡಧರ [ವರ] ಸಂಭಾವಿತ ತ್ಯಾಗಾದಿ ಸುಗುಣ ನಿರುಪಮ ಶಾಂತ ಮಾರ್ಗ ದ್ವೈತ ನಿರೂಪಣ ಮಹಾನಂದ [ಶ್ರೀ]ಗುಣೋಲ್ಲಾಸಿತ ವಿರಾಜಿತ 1 ಆಗಮಾದಿ ವಿಧಿಸೂತ್ರ ವಿಚಾರಿತ ರಾಗ ರಾಗಾಂಗರಾಗಭೂಷಿತ ಯಾಗ ಯಜ್ಞ ಭೇದ ನಿರೂಪಿತ ಮಾಂಗಿರೀಶ ಹರಿಪದ ಪ್ರಪೂಜಿತ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ತುಂಗೆ ಮಂಗಳ ತರಂಗೆ | ಕರುಣಾಂತರಂಗೆ ರಂಗನಾಥನ ಪದಭೃಂಗೆ ಪ. ಅಂಗಜಪಿತನ ಅಂಗದಿ ಉದ್ಭವೆ ಭವ ಭಂಗ ಹರಿಸೆ ಅಂಗನೆ ಎನ್ನಂತರಂಗದಿ ಹರಿಪಾ- ದಂಗಳ ತೋರಿಸೆ ಶೃಂಗೆ ಶುಭಾಂಗೆ ಅ.ಪ. ಆದಿ ದೈತ್ಯನು ಖತಿಯಲಿ | ಮೇದಿನಿಯ ಸುತ್ತಿ ಒಯ್ದು ಪಾತಳ ಪುರದಲಿ ಮಾಧವ ಕರುಣದಿ ಆದಿವರಾಹನೆಂದೀ ಧರೆಯೊಳು ಬಂದು ಮೇದಿನಿ ಪೊರೆಯಲು ಶ್ರೀದನ ದಾಡೆಯಿಂ ನೀನುದುಭವಿಸಿದೆ 1 ಸ್ನಾನಪಾನದಿ ನರರನು | ಪಾವನಗೈವ ಮಾನಿನಿ ನಿನ್ನ ಕಂಡೆನು ನಾನಾ ದುಷ್ಕøತಗಳ ನೀನೋಡಿಸಿ ಮತ್ತೆ ನಾನು ಎಂಬುವ ನುಡಿ ನಾಲಗೆಗೀಯದೆ ಮಾನವ ಕಾಯೆ ಶ್ರೀನಾಥನ ಪದಧ್ಯಾನವನೀಯೆ 2 ಹರನ ಪೆಸರಿನ ಪುರದಲಿ | ಹರಿದು ಬಂದು ವರ ಶ್ರೀ ಕೂಡಲಿ ಸ್ಥಳದಲಿ ಭರದಿ ಭದ್ರೆಯ ಕೂಡಿ ಪರಿದಲ್ಲಿಂದಲಿ ಹರಿಹರ ಕ್ಷೇತ್ರವ ಬಳಸಿ ಮಂತ್ರಾಲಯ ಪುರಮಾರ್ಗದಿ ಸಾಗರವನೆ ಸೇರಿ ವರ ಗೋಪಾಲಕೃಷ್ಣವಿಠ್ಠಲನೆ ಧ್ಯಾನಿಪೆ 3
--------------
ಅಂಬಾಬಾಯಿ
ದಯವಾಗು ದೀನ ಬಂಧು ನಿಜ ಭಕ್ತ ಭಯ ಹರ ಸ್ಮಯ ಮುಖೇಂದು ಸಿಂಧು ನಿನ್ನಡಿಯ ಬಯಸುವೆನು ಭಕ್ತನೆಂದು ಪ. ಶ್ರೀ ಭೂಮಿಯರಸ ನೀನು ದಯವಾಗೆ ಭಾಗವತರುದಯವಹುದು ಯೋಗ ಭೋಗಗಳೆಂಬುದು ಮಿತಿರಹಿತ- ವಾಗಿ ತಾನೇರಿ ಬಹುದು 1 ತಾಪಾಗ್ನಿ ಶಮನಕಾರಿಯೆ ನಿ:ಶೇಷ ಭೂಪಾಲ ಮೌಳಿಸಿರಿಯೆ ಶ್ರೀಪತಿಯೆ ನಿನ್ನ ಮರೆಯೆ ಎನ್ನಲ್ಲಿ ಕೋಪಿಸದೆ ಸಲಹು ದೊರೆಯೆ 2 ಪೂರ್ವ ಗಿರಿನಾಥ ನಿನ್ನ ಸಂಸ್ಮರಣೆ ಸರ್ವ ದುರಿತೌಘವನ್ನ ಪರ್ವತ ಶೃಂಗವನ್ನು ನಿಶಿತ ಶತ- ಪರ್ವದೊಲ್ ತರಿವರನ್ನ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಾನಧರ್ಮವ ಮಾಡಿ ಸುಖಯಾಗು ಮನವೆ ಪ ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1 ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2 ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3 ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4 ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5
--------------
ಕನಕದಾಸ
ದಾಸಕೂಟ ವರ್ಣನೆ ಸಾಟಿಯುಂಟೆ ಶ್ರೀನಿವಾಸನ ದಾಸಕೂಟದ ಮ್ಯಾಳಕೆ ಬೂಟಕದ ಮಾತಲ್ಲ ಕೇಳಿರಿ ಭಜನೆ ಮಾಡುತ ತಾಳಕೆ ಪ. ವಾಸುದೇವನ ವರ್ಣಿಸಲು ಕಮಲಾಸನಾದಿ ಸುರೇಂದ್ರರು ದಾಸಜನರ ಸಮೂಹದೊಳಗಾವಾಸವಾಡುತ ನಲಿವರು ಸೂಸುತಿಹ ಗಂಗಾದಿನದಿಗಳು ಬ್ಯಾಸರದೆ ಬಂದಿರುವವು ಕೇಶವನ ಕೊಂಡಾಟ ಧರೆಯೊಳು ಮೀಸಲಳಿಯದೆ ಮಧುರವು 1 ಬಾರಿಸುತ ತಂಬೂರಿ ತಾಳವ ನಾರದರ ಸಂಸ್ಮರಿಸುತ ಭೂರಿ ಕಿಂಕಿಣಿ ಮದ್ದಳೆಯ ಶೃಂಗಾರ ರಸವನು ಸುರಿಸುತಾ ವಾರಿಜಾಕ್ಷನ ಪರಮಮಂಗಳ ಮೂರುತಿಯ ಮುಂದಿರಿಸುತ ಮಾರುತನ ಮತವರಿತು ಬಹುಗಂಭೀರ ಸ್ವರದಿಂದರುಹುತಾ 2 ಹಿಂದೆ ಗಳಿಸಿದ ಹಲವು ದುರಿತವು ಕುಂದುವುದು ನಿಮಿಷಾರ್ಧದಿ ಅಂದಿನಂದಿನ ದೋಷದುಷ್ಕøತವೊಂದು ನಿಲ್ಲದು ಕಡೆಯಲಿ ಇಂದಿರಾಧವ ಶೇಷ ಭೂಧರ ಮಂದಿರನು ಮಹ ಹರುಷದಿ ಮುಂದೆ ನಲಿವುತ ಮನಕೆ ಪೂರ್ಣಾನಂದವೀವನು ನಗುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ದುರಿತ ಗಜಕೇಸರಿಯೆ ತ್ರಿಲೋಕದ ದೊರೆಯೆ ನಿನಗಾರು ಸರಿಯೆ ಭಾಗ್ಯದ ಸಿರಿಯೆ | ಕರುಣವ ಮಾಡಿ ಪರಿಯಲಿ ಸಾರಂಗ | ಧರನೆ ಧರಣಿಧರ ವರ ಪರಿಯಂತಾ ಪ ಭೂಮಿಯೊಳಗೆ ಉತ್ತಮ ನೆಲಾ ನೀಡೆಂದು | ಹೇಮ ಮುನೀಶ್ವರ ಕಾಮಿಸಿ ಹರಿಪಾದ | ನೀ ನೇಮ ನಿತ್ಯದಲ್ಲಿ | ತಾ ಮನೋರಥನಾಗಿ || ಸಾಮಜವರದನ ನಾಮವ ನೆನೆಯಲು | ಹೇಮ ತೀರಥದೊಳು | ತಾ ಮನಗೊಂಬ ನಾಮನೆ ಪಡೆದು 1 ಮಂಗಳಾಂಗಿಯೇ ಬರಲು ರಂಗರಾಯನು ಸಾ | ರಂಗಶರವೇಪಿಡಿದುಶೃಂಗಾರಮಯದಿಂದ | ಬಂಗಾರ ರಥ ತು | ರಂಗಗಳ ಸಮೇತ ಭುಜಂಗಶಯನನಾಗಿ ಕಂಗೊಳಿಸುತ್ತಲೂ | ತುಂಗ ಮಹಿಮ ವಿಹಂಗಾದಿಗಳಿಂದ ಕೈಕೊಳ್ಳುತ್ತಿಂಗಿತದಲಿ ನೀಲಾಂಗ ನಿರ್ದೋಷಾ 2 ಜಯ ಕುಂಭಘೋಣನಿಲಯಾನೆನೆಸುವ ಉ | ಭಯ ಕಾವೇರಿ ನಿವಾಸಾ | ಭಯ ಕೃದ್ಭಯನಾಶ | ತ್ರಯ ಗುಣವಿರಹಿತಾ ವಿಯದ್ಗಂಗಾನದಿ ತಾತಾ | ಜಯ ಜಯವೆನುತಿರೆ ಪ್ರಿಯನಾಗಿ ಕೇಳುತಾ | ನಯನ ಮೀತಾರ ಪಾಲಯಪಾವನದೇವಾ | ದಯಮುಖ ಹರಾ ವಿಜಯವಿಠ್ಠಲಪರಾ 3
--------------
ವಿಜಯದಾಸ
ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ಪ ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿದುಟ್ಟು ಮೇಗಿಲ್ಲದ ಬೆಲೆಯಾದ ಪಟ್ಟದುಡುದಾರವಿಟ್ಟು 1 ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿಪರಿಪರಿ ಪದಕ ಮುತ್ತು ಸರ ವೈಜಯಂತಿಕೊರಳ ಕೌಸ್ತುಭದ ಕಾಂತಿ ನಿರುಪಮ ಶ್ರೀವತ್ಸಲಾಂಛನ ಸರಿಗೆ ತಾಳಿ ಪದಕವು ಸೇರಿದ ಮುತ್ತಿನ ಜಲ್ಲೆ 2 ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳುಬಗೆಬಗೆ ರತುನಂಗಳ ನಗಗಳನಿಟ್ಟುನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪುನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲಭಾನುವ 3 ನಾಸಿಕ ಲಲಾಟಚೆಲುವ ಪುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ 4 ಕೋಟಿ ಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣನೋಟದಿಂದ ತರುಣೇರ ಪೋಟಿ ಮಾಡುತಚಾಟು ಮಾತುಗಳಾಡುತ ಪೊಟ್ಟನಂತೆ ತಿರುಗಿದರೆನೀಟಲ್ಲವೋ ನಿನಗದು ಪಾಟಲಾಧರನೆ ಕೇಳು 5 ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದುಅಂಕಿತ ವೇಣುನೂದುತ ಶಂಕೆ ಇಲ್ಲದೆ ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆÉಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ 6 ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿಪೊಂಗೊಳಲನೂದುತ ಶ್ರೀರಂಗ ಸುಳಿದರೆಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತರಂಗವಿಠಲಗಲದಿರೋ ಹಿಂಗದೆ ನರಸಿಂಗನೇ 7
--------------
ಶ್ರೀಪಾದರಾಜರು
ದೃಷ್ಟಿ ದೋಷವು ತಗಲಿತೆನ್ನ ಕಂದನಿಗೆ ಪ ದೃಷ್ಟಿಗೋಚರನಲ್ಲದಾ ದೇವ ರಕ್ಷಿಸಲು ಅ.ಪ ಸೇರು ಬೆಣ್ಣೆಯ ತಿಂದು ದೂರು ಕೇಳಿದೆನಿಂದು ಚಾರು ಮುಖಿಯರ ನೋಟ ಕ್ರೂರವೆಂದರಿ ಕಂದ ಈರೇಳು ಭುವನಗಳ ತಿಂದು ತೇಗುವ ದೇವ ಆರೋಗ್ಯಭಾಗ್ಯವನು ನಿನಗೆ ಕರುಣಿಸಲಿ 1 ಎಂದು ಕಾಣೆವು ಇಂಥಾ ಸುಂದರನ ನಾವೆಂದು ಮಂದಗಮನೆಯರ ನುಡಿ ಅಂದವಾಯಿತೆ ಕಂದ ಸಂದೇಹವಿಲ್ಲವರ ಶೃಂಗಾರಕೀ ಫಲವು ಜಲಧಿ ಮನುಮಥನ ಮನುಮಥನೆ ಗತಿ 2 ನೀರು ಮಂತ್ರಿಸಿದಾಯ್ತು ಬೂದಿ ಮಂತ್ರಿಸಿದಾಯ್ತು ನಾರಸಿಂಹಾದಿ ವರಮಂತ್ರಗಳ ಜಪವಾಯ್ತು ಭಾರಿ ಪುಸಿಯಾಯ್ತು ಜನನಿಯೊಲು ಹರಸಿದೀತನಲಿ ಮೀರಿಹನು ಯಂತ್ರ ಮಂತ್ರಾರ್ಥವೆಲ್ಲಾ ಪ್ರಸನ್ನ3
--------------
ವಿದ್ಯಾಪ್ರಸನ್ನತೀರ್ಥರು
ದೇವ ದೇವ ದೇವ ದಿವಿಜರೊಡಿಯನೆ ಭಾವ ಪೂರ್ವಕ ವಿಧದಿ ಭಜಿಸುವೆನು ನಾನು ಪ ನಂದಗೋಪಿಯ ಕಂದನಾದ ಸುಂದರಾಂಗನೆ ಸಿಂಧುಶಯನ ಮಂದರಧರ ಇಂದಿರೇಶನೆ ಎಂದು ನಿನ್ನ ಪೊಂದಿದವರನಂದ ಪೊರೆವನೆ 1 ಹೆಂಗಳೆರ ಸಂಗವುಳ್ಳ ಮಂಗಳಾಂಗನೆ ಶೃಂಗಾರಾಂಗ ರಮಾಸಂಗವುಳ್ಳ ರಂಗನೆ ಗಂಗಾಜನಕ ನೀರಜಾಂಬಕ ಗಾನಲೋಲನೆ ಮಂಗಳಕರದಿಂದ ಲಭಯಂಗಳೀವನೆ 2 ರನ್ನೆ ಸೀತೆಯನ್ನು ವೈದವನ್ನ ತರಿದನೆ ನಿನ್ನವರಿವರೆನ್ನುವವರನ್ನು ಕಾಯ್ವನೆ ಪನ್ನಗಶಯನನಾದ ಚೆನ್ನ ನೀವನೆ ಘನ್ನ ' ಶ್ರೀ ಹೆನ್ನೆವಿಠಲ’ ನನ್ನ ಕಾರುಣಿ 3
--------------
ಹೆನ್ನೆರಂಗದಾಸರು
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧ್ಯಾನ ಮಾಡಿರೊ ರಂಗಯ್ಯನ ಪ ಗಾನ ವಿಲೋಲನ ದೀನಾರ ಪೊರೆವೊನ ಅ.ಪ. ಮೀನ ರೂಪವ ತಾಳಿ ದಾನವಾಖ್ಯನ ಸೀಳಿ ಮಾನವ ಪೊಂದಿದ ಜಾಣ ರಂಗೈಯ್ಯನ 1 ಕೂರ್ಮ ತಾನಾಗಿ ಗಿರಿಯ ಬೆನ್ನಲಿ ಪೊತ್ತು ಸುರರನ್ನೆ ಪೊರೆದ ಗಂಭೀರ ರಂಗೈಯ್ಯನ 2 ವರಾಹ ರೂಪದಿ ಕೋರೆಯ ಕೊನೆಯಲಿ ಧರಣಿಯನೆತ್ತಿದ ಶೂರ ರಂಗೈಯ್ಯನ 3 ನರಹರಿ ರೂಪದಿ ಘೋರ ದೈತ್ಯನ ಸೀಳಿ ತರಳನ ಸಲಹಿದ ಕರುಣಿ ರಂಗೈಯ್ಯನ 4 ಪುಟ್ಟ ಹಾರುವನಾಗಿ | ದಿಟ್ಟ ಬಲಿಗೆ ಒಲಿದು ಕೊಟ್ಟ ವರಗಳ ದಿಟ್ಟ ರಂಗೈಯ್ಯನ 5 ಪರಶು ಪಿಡಿದು ಭೂವರರ ಗೆಲಿದು ಭೂ ಸುರರನ್ನೆ ಸಲಹಿದ ಧೀರ ರಂಗೈಯ್ಯನ6 ಮಾನವ ರೂಪದಿ ದಾನವಾಂತಕನಾಗಿ ದೀನರ ಪೊರೆದ ಸುಜ್ಞಾನಿ ರಂಗೈಯ್ಯನ 7 ಕಂಸನ ವಂಶ ನಿರ್ವಂಶಾಕೋಸುಗ ಯದು ವಂಶದೊಳು ತಾನು ಜನಸಿದನು ಹಿಂಸೆ ಮಾಡುತಲಿರ್ದ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಮುರಧ್ವಂಸಿ ಕೃಷ್ಣಗೆ 8 ಸತಿಯರ ವ್ರತದಿಂದ ಪತಿತರಳಿಯದಿರೆ ಗತಿ ತೋರದೆ ಭವಕಾತರಿಸೆ ಅತಿ ನಗ್ನದಿ ಬಂದು ವ್ರತಭಂಗ ಮಾಡಿದ ಸಿರಿ ಕಂಠÀನುತನಾದ ಸಿತವಾಹನ ಸಖನ 9 ವೇದ ಬಾಹಿತರನ್ನು ಭೂದೇವಿ ಧರಿಸದೆ ಮಾಧವ ಪೊರೆಯೆಂದು ಮೊರೆಯಿಡಲು ಚದುರತನದಿ ಸತಿಯ ಕುದುರೆಯ ಮಾಡಿತಾ ಕೊಂಡ ಕದನದಿ ಕೊಂದವನ 10 ಮಂಗಳ ಮಹಿಮನ ಶೃಂಗಾರ ಪ್ರಿಯನ ಅಂಗಜಾರಿಯ ಧನುರ್ಭಂಗನ ಅಂಗಳದೊಳು ಮೂರ್ಲೋಕಂಗಳ ತೋರಿದ ತುಂಗ ವಿಕ್ರಮನಾದ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ಧ್ಯಾನವನೆ ಮಾಡಿ ನವರತ್ನ ಸಿಂಹಾಸನಸಾನಂದದಿಂದ ನಿಮಗರ್ಪಿಸುವೆನುಶ್ರೀ ನಿಧಿಯೆ ಪಾದ್ಯಾಘ್ರ್ಯ ಮಧುಪರ್ಕಗಳನು ಸು-ಮ್ಮಾನದಿಂದರ್ಪಿಸುವೆ ಗೌರಿ ದೇವಿ ಜಯ 1 ತುಂಗಭಧ್ರಾ ಸರಸ್ವತಿ ಯಮುನೆ ಕಾವೇರಿಗಂಗಾದಿ ಶುಭತೀರ್ಥ ಸಲಿಲದಿಂದಮಂಗಲಸ್ನಾನವನೆ ರಚಿಸಿ ಜಡೆವೆಣೆದು ಕುಸುಮಂಗಳಂ ಮುಡಿಗೆ ಮುಡಿಸುವೆನಂಬಿಕೆ 2 ಚಂದ್ರಗಾವಿಯ ಸೀರೆ ಕುಪ್ಪಸವ ತೊಡಿಸುವೆನುಚಂದದಿಂದರಿಸಿನವ ಲೇಪಿಸುವೆನುಚಂದ್ರಕಸ್ತೂರಿ ತಿಲಕ ಕುಂಕುಮದ ರೇಖೆಯನುಅಂದದಿಂದಿಡುವೆ ಶ್ರೀ ಗೌರಿ ನಿಮಗೆ3 ಕಣ್ಣ ಕಪ್ಪಿಟ್ಟು ಕರಯುಗಕೆ ಗಂಧವ ತಿವುರಿಚಿನ್ನದಾಭರಣ ನಿಕರವನಿಡುವೆನುರನ್ನ ದುಂಗುರ ಹಾರ ಪದಕದಿಂದ ಶೃಂಗರಿಸಿನಿನ್ನ ಪದಯುಗವ ಪೂಜಿಪೆನು ಗೌರಿ ಜಯ4 ಚಾರು ಪುನ್ನಾಗ ಪೂಗಸಿರಿಸ ಸುರಹೊನ್ನೆ ಸಂಪಗೆ ಮೊದಲಾದ ಪೂಸರವ ಸಿರಿಮುಡಿಗೆ ಮುಡಿಸುವೆನು ಗೌರಿ ಜಯ 5
--------------
ಕೆಳದಿ ವೆಂಕಣ್ಣ ಕವಿ