ಒಟ್ಟು 931 ಕಡೆಗಳಲ್ಲಿ , 91 ದಾಸರು , 832 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಂದಿಗೆ ದಯಬಾಹುದೋ ರಾಮಾ ಎಂದಿಗೆ ದಯಬಾಹುದೊ ಎನ್ನಯ ಮೇಲೆ ಮಂದರಧರ ಗೋವಿಂದ ಮುಕುಂದ ಪ ಪಾದ ಸ್ಮರಿಸುತಲಿರುವನ ಕಷ್ಟವ ಕಳೆದು ಮನೋಭಿಷ್ಟವ ತೀರಿಸು 1 ಕಂತುಜನಕ ಶ್ರೀಕಾಂತಾ ಭಕ್ತನ ಚಿಂತಿಯ ಬಿಡಿಸಿ ಸಂತತ ಪಾಲಿಸಲು 2 ವರಹೆನ್ನೆಪುರ ನರಹರಿ ನಿನ್ನಯ ಮೊರೆ ಹೊಕ್ಕವನ ಪೊರೆಯಲಿ ಹರುಷದಲಿ 3
--------------
ಹೆನ್ನೆರಂಗದಾಸರು
ಎಂದಿಗೆ ಬಿಟ್ಟೀತು ಈ ಆಸೆ ಪ ಕುಂದಿ ಕುಂದಿ ಕೊರಗುವ ಮನಸೆ ಅ.ಪ ಸಾರವಿಲ್ಲದ ಸುಖಗಳ ಕೋರಿ | ಸಂ- ಸಾರವೆಂಬ ಚಕ್ರದಿ ಸೇರಿ1 ಕಷ್ಟದಿಂದೇನು ಕಾಣುವೆ ಕೊನೆಗೆ 2 ಗರ್ವಹಂಕಾರಗಳಿಂ ಮೆರೆದೆ 3 ಅದು ಇದು ಬೇಕೆಂದಪೇಕ್ಷಿಸುವೆ | ನಿನ್ನ ಮೊದಲರಿಯದೆ ವೃಥಾ ಯೋಚಿಸುವೆ 4 ಪರಮಸುಖವ ಪಡು ನೀ ಸತತ 5
--------------
ಗುರುರಾಮವಿಠಲ
ಎಂದು ಕಾಂಬುವೆ ಮಾಧವತೀರ್ಥರ ಸುಂದರ ಮಂದಿರ ಪ ಚಾರುಚಿತ್ರ ಕಲಶಕನ್ನಡಿ ಆರೊಂದು ನೆಲೆಗೋಪುರವ ಸವಿ ಸ್ತಾರಮಾಗಿ ತೋರುವ ಮಹಾ ದ್ವಾರದಮುಂದೆ ಬಿದ್ದು ನಮಿಸಿ 1 ತೊಲೆತುಂಡು ಕಂಭ ಬೋದುಗೆ ಶಿಲೆಯಿಂದ ನಿರ್ಮಿತವಾಗಿ ಹೊಳೆವ ಮಂಟಪ ರಂಗು ಮಧ್ಯ ದೊಳಗೆಚೆಲುವ ವೃಂದಾವನವ 2 ಮೂಲ ಪ್ರತಿಮೆ ಸಾಲು ಸಾಲು ವಿ ಮೂಲಪೀಠದ ಪವಿತ್ರಶಾಲೆ ಕಾಲತ್ರಯದಿ ವೇದಘೋಷ 3 ಧಾತ್ರಿಜನರು ಬಂದು ಕೂಡಿ ಯಾತ್ರೆಗೈದು ಜನುಮ ನಿತ್ಯ ಸಾರ್ಥಮಾಡಿಕೊಂಡು ಸತತ ಅರ್ಥಿಯಿಂದ ಪೋಪ ಸಮಯ 4 ಧರೆಯೊಳಧಿಕ ಬುದ್ಧಿನ್ನಿಪುರದಿ ಮೆರೆವ ಶ್ರೀಗುರು ಮಾಧವೇಂದ್ರ ವರಮಂದಿರದಮಿತ ವೈಭವ ಕರುಣಿ ಶ್ರೀರಾಮ ನಿಂತು ನಡೆಸುವ 5
--------------
ರಾಮದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎಂದು ಕಾಂಭುವೆ ರಂಗಯ್ಯ ನಾ ಪ ಇಂದ್ರಾನುಜಗುಣ ಸಾಂದ್ರನ್ನಾ | ಉಪೇಂದ್ರನ್ನಾ | ಸುರ್ಯನ್ನಾ ಚಂದ್ರನನಾ 1 ಮಂದರಧರ ನಂದನ್ನಾ | ಸಂದನ್ನಾ ಮುಕುಂದನ್ನಾ 2 ವಾತಜಕೇತುಳ್ಳಾತನ ಸ್ಯಂದನಾ | ಸೂತ ತ್ರೈಜಗ ತಾತನ್ನಾ 3 ಭೂತಳ ಸಂತತ ಪೊತ್ತಿಹ | ಯಾದವ |ಸಾಧಾನಾಧಾನಾಡನ್ನಾ 4 ಮಿತಾನಂತಿ ಭಗಾತ್ರ ವಿರಾಜಿತ | ಪತ್ರಿ ಮುಕುಟಧ್ವಜ ಸೂತ್ರನ್ನಾ5 ಸತ್ರಿ ನೇತ್ರ ಮಿತ್ರ ವಿಧಾತೃ | ಪಿತೃ ವಿಚಿತ್ರ ಚರಿತನ್ನು 6 ಗುರುವರ ಮಹಿಪತಿ - ದೊರೆಯಾ | ಮುರ ಅರಿಯಾ ಸುಖವರ್ಯಾ ನರಹರಿಯಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದು ಕಾಹು(ಣು?)ವೆ ಎನ್ನ ಮನೋಹರ ಎಂದಿ[ಗೆಕಾ] ಹುದಿನ್ನೆಂದಿಗೆ ಬಂದೆ ಭವಭವಭವವೀ ದುಃಖದಿ ನೊಂದೆನೊ ರಂಗನಂಘ್ರಿ ಚರಣವ ಪ. ಮಂಗಳಾಂಗನ ಮಾಧವನ ಕೋಟಿ ಅಂಗಜಜನಕವಿಲಾಸನ ಗಂಗಾಜನಕನ ಗರುಡವಾಹನ ತುಂಗವಿಕ್ರಮನಂಘ್ರಿ ಚರಣವ 1 ಕಂತುಜನಕನ ಕಮಲನಾಭನ ಸಂತತದ ಸರ್ವೇಶನ ಯಂತ್ರವಾಹಕ ಎನ್ನ ಒಡೆಯನ ಚಿಂತಾಯ[ಕ]ನ ಶ್ರೀ ಚೆಲುವಚರಣವÀ 2 ಪರಮಪುರುಷನ ಪುಣ್ಯನಾಮನ ಶರಣುಜನಸರ್ವೇಶನ ಕರುಣಿ ಹೆಳವನಕಟ್ಟೆರಂಗನ ಚರಣ[ವ]---------- 3
--------------
ಹೆಳವನಕಟ್ಟೆ ಗಿರಿಯಮ್ಮ
ಎಂದು ನೀ ನೀಡುವಿಯೊ ಮನಶಾಂತಿ ಗೋವಿಂದನೆ ಎನಗೆ ಒಂದೂ ತೋರದೆ ಕವಿದಿಹುದೊ ಭ್ರಾಂತಿ ಪ ಒಂದು ಘಳಿಗೆ ನಿನ್ನ ಪೊಗಳುವೆನೆಂದರೆ ಬಂದೊದಗುವುದೊ ಕುಂದು ಸಹಸ್ರವು ಅ.ಪ ಅನುದಿನ ಗಣನೆಗೆ ಬಾರದ ನುಡಿಗೆ ಕೊನೆಮೊದಲುಗಳಿಲ್ಲದೆ ದಿನಗಳು ಕಳೆದುವು ದುರ್ವಿಷಯದಲಿ ಎಣೆಯಿಲ್ಲದೆ ಎನ್ನ ಮನದಲಿ ಬೇಸರ ಜನಿಸಿ ಕೊರೆಯುತಿದೆ ಅನವರತದಿ ನಿನ್ನ ಮನನದಿ ನಲಿಯಲು 1 ಮರುಳು ಮೋಸಗಳಲಿ ಚತುರತೆಯುಳ್ಳ ದುರುಳರು ಸಂತತ ಮುಖ ವರಳುವ ತೆರದಲಿ ಸಡಗರದಿಂದ ಒರಲುವ ವಚನಗಳ ತಿರುಳುಗಳೆಲ್ಲವನರಿತು ಮನ ತೆರಳದೆ ಸಹಿಸುತ ನರಳುತಿರುವೆನೊ2 ಬಗೆ ಬಗೆ ಮಾಡುತಲಿರುವ ದುರಾಶೆಯಗಲಿದೆ ಮನವನ್ನು ಹಗರಣ ಮಾಡಿದೆನೋ ಜೀವನವ ನಗೆಗೀಡಾದೆನು ನಾ ಹಗೆ ಪಡ್ವರ್ಗವನೊಗೆದು ತವಚರಣ ಯುಗಳದಲಿ ಮನವು ಪ್ರಸನ್ನವಾಗುವಂತೆ 3
--------------
ವಿದ್ಯಾಪ್ರಸನ್ನತೀರ್ಥರು
ಎಂದು ನೋಡುವೆ ಎನ್ನ ಗುರುವಿನಾ | ನಿಂದು ನಂದಿಗಮನನಾ ಎಂದೆಂದಿಗೆ ಪೊಂದಿದವರಿಗಾ | ಇಂದು ಮೌಳಿಯ ಪ ತ್ರಿಗುಣ ರೂಪನ ತ್ರಿಭುವನೇಶನ | ಜಗತಿಧರ ವಿಭೂಷನ || ನಗವತಿ ಸುತಿಪತಿಯ ರುದ್ರನ 1 ತಪೋಧನೇಶನ ತಪ ಪ್ರತಾಪನ | ತಪನ ಶಶಿ ಅಗ್ನಿನೇತ್ರನ | ಕುಪಿತ ರಹಿತ ಕುಜನ ಮಥನನ | ಅಪರಮಿತ ಗುಣ ವನದಿ ಶಿವನ 2 ವಿಮಲಗಾತ್ರನ ವಿಶ್ವಪಾಲನ | ರಮೆಯರಸ ಪದಿಧಾರನ || ಸುಜನ ರನ್ನನ | ನಮಿಸುವರ ಮನೋವಾಸ ಈಶನ 3 ಅಂಧಹರಣನ ಅರ್ಧವೇಷನ | ಮಂದಮತಿ ವಿದುರನ | ಬಂಧು ಬಳಗನ ಬಹು ಉದ್ದಂಡನ | ಅಂಧ ಏಕೇಶವರ್ನ ವದನನ 4 ತತುವನಾಥನ ತುಂಗ ವರದನ | ಸತತ ವೈರಾಗ್ಯ ಭಾಗ್ಯನ || ಪತಿತ ಪಾವನ ವಿಜಯ ವಿಠ್ಠಲನ್ನ | ಪತಿ ವಿಶ್ವೇಶನ 5
--------------
ವಿಜಯದಾಸ
ಎಂದು ಪೇಳಯ್ಯ ಕಂದಗೆಂದು ಪೇಳಯ್ಯ ಹರಿ ಯೆಂದು ಪೇಳಯ್ಯ ಮಂದಮತಿ ನಿವಾರಣೋದಯ ಪ ಜಡಭವದ ಜಡರು ಕಡಿದು ದೃಢತರದ ಜ್ಞಾನ ಕೊಡುವ ಒಡೆಯ ನಿಮ್ಮ ಪುಣ್ಯ ನಾಮ ಕಡು ಪಾಪಿ ಜಿಹ್ವೆಗುದಯ 1 ಸೂತ್ರಧಾರ ನಿನ್ನ ಪಾದ ಖಾತ್ರಿಗೊಳಿಸಿ ನಿಜ ಸುಖದ ಪಾತ್ರನೆನಿಪ ಸತತ ಎನ್ನ ನೇತ್ರಕೆ ನಿನ್ನ ದರ್ಶನೋದಯ 2 ಅಧಮತನ ದೂರಮಾಡಿ ಸದಮಲ ಮತಿಯಿತ್ತು ವಿಧ ವಿಧದಿ ಕಾಯ್ವ ಸದಾಯೆನ್ನ ಹೃದಯದಿ ಶ್ರೀರಾಮೋದಯ 3
--------------
ರಾಮದಾಸರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನ್ನ ಮನ ಕಂಡಕಡೆಗೆ ಎರಗುತಿದೆನಿನ್ನಲ್ಲಿ ನಿಲಿಸಿ ಕಾಯೊ ಪ ಚಕ್ಷುರಿಂದ್ರಿಯಗಳಿಂದ ಚದುರೆಯರಈಕ್ಷಿಸಿ ನೊಂದೆನೈಯಶಿಕ್ಷಕನು ನೀನೆ ಎನಗೆ ಸಿರಿಯರಸಭಕ್ಕುತರೊಳಿಟ್ಟು ಕಾಯೋ 1 ಶ್ರೋತ್ರೇಂದ್ರಿಯಗಳಿಂದ ಸತತ ದು-ರ್ವಾರ್ತೆಗಳ ಕೇಳಿ ಕೆಟ್ಟೆಕರ್ತೃ ಎನಗೆ ನಿನ್ನಯಾ ಕಥೆಗಳನುಅರ್ಥಿಯಿಂದೆರೆದು ಕಾಯೋ 2 ಘಾಣೇಂದ್ರಿಯಂಗಳಿಂದ ದುರ್ಗಂಧಗಳಘ್ರಾಣಿಸಿ ನೊಂದೆನೈಯಪ್ರಾಣೇಶ ನಿನಗರ್ಪಿತ ಪರಿಮಳವಮಾಣದೆ ಇತ್ತು ಕಾಯೋ 3 ರಸನೇಂದ್ರಿಯಂಗಳಿಂದ ಷಡ್ರಸಗಳನುಹಸಿದು ನಾ ಸೇವಿಸಿದೆನೋಬಿಸಜಾಕ್ಷನೇ ನಿನ್ನಯ ಪ್ರಸಾದವನುಆಸ್ವಾದಿಸೆನಗೆ ದೇವ 4 ತ್ವಚೇಂದ್ರಿಯಂಗಳಿಂದ ತಾಮಸರಸೋಕಿ ನಾ ಕೆಟ್ಟೆನೆಯ್ಯಕಾಕು ಮಾಡದೆ ಎನ್ನನು ಸಿರಿಕೃಷ್ಣಸಾಕಾರನಾಗಿ ಸಲಹೋ 5
--------------
ವ್ಯಾಸರಾಯರು
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು