ಒಟ್ಟು 269 ಕಡೆಗಳಲ್ಲಿ , 55 ದಾಸರು , 221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವ್ಯಾಪಾರ ಉದ್ಯೋಗವನು ಮಾಡುವೆ | ಭೂಪಾಶದೊಳಗೆ ಎಲ್ಲರಿಗೆ ಬಲ್ಲಿದನಾಗಿ ಪ ಮುರಾರಿ ನಾಮವೆಂಬೊ ಮುಂಡಾಸವನೆ ಸುತ್ತಿ | ಅರವಿಂದನಾಭವೆಂಬೊ ಅಂಗಿಯ ತೊಟ್ಟು || ನರಹರಿನಾಮವೆಂಬೊ ನಡುಕಟ್ಟನೆ ಸುತ್ತಿ | ಕರುಣಾಸಾಗರನೆಂಬೊ ಕಠಾರಿಯನು ಸಿಕ್ಕಿಸಿ 1 ಕಮಲನಾಭವೆಂಬೊ ಕಮಲದಾನಿ ಪಿಡಿದು | ತಿಮಿರದೋಷವೆಂಬೊ ಪಾಯಿಪೋಸು ಮೆಟ್ಟಿ || ಶಮೆದಮೆಯೆಂಬೊ ಪರಿಚಾರಕರ ಒಡಗೊಂಡು ಗಮಿಸಿದ್ದೆನೊ ಹರಿದಾಸರಿದ್ದ ಚಾವಡಿಗೆ 2 ಪೋಗಿ ನಮಸ್ಕಾರವೆಂದು ತಲೆಬಾಗಿ ನಿಲ್ಲಲು | ಭಾಗವತರು ಕರೆದು ಇಂಬನಿತ್ತು || ಯೋಗಕ್ಷೇಮವೆಲ್ಲ ವಿಚಾರಿಸಿ ಪ್ರೀತಿಯಲಿ | ಈಗಳೆ ಕುಳಿತ ಅಚ್ಯುತನ ತೋರಿದರು 3 ಕಂಡು ಕರವನು ಮುಗಿಯೆ ಕರುಣಾಸಾಗರನೆಂಬೊ | ಮಂಡಲಾಧಿಪನು ಕರೆದು ಮನ್ನಿಸಿ || ಗಂಡುಗಲಿಯಾಗೆಂದು ಸಂಚುಗಾರಿಕೆ ತುಲಸಿ | ದಂಡೆ ಕೊರಳಿಗೆ ಹಾಕಿ ದಾಸರೊಳಗಿರಿಸಿದನು 4 ಘನವಾದ ಉದ್ಯೋಗ ದೊರಕಿತು ನನಗಿನ್ನು | ಅನುಮಾನವಿಲ್ಲವು ಎಂದೆಂದಿಗೂ || ದಿನದಿನಕೆ ಹರಿನಾಮವೆಂಬೊ ಲೆಖ್ಖ-| ವನು ಬರೆದು ತ್ರಿಲೋಕದರಸನಿಗೆ ಒಪ್ಪಿಸಿದೆ || 5 ಬರೆದು ಲೆಖ್ಖವ ನೋಡಿ ದಯಾಪಯೋವಾರಿಧಿ | ಹರುಷದಿಂದಲಿ ಎನಗೆ ಸಂಬಳಕ್ಕೆ || ಬರೆಸಿ ಕೊಟ್ಟನು ಸನದು ಕೇಶವಾದಿಯಂಬೊ | ವರಹಗಳು ಎಂದಿಗಾದರು ಅಳಿವಿಲ್ಲದೆ || 6 ಈಸು ದಿನ ಉದ್ಯೋಗ ಹೀನನಾಗಿ ನೊಂದೆ | ದಾಸರಾ ದಯದಿಂದ ದೊರೆಕಿತಿಂದು || ಸಂಚಿತ ಕರ್ಮ ಓಡಿಸಿ |ಶ್ರೀಶ ವಿಜಯವಿಠ್ಠಲನಲ್ಲಿ ಬಾಳಿದೆನೊ || 7
--------------
ವಿಜಯದಾಸ
ಶರಣಾಗತಿಯೊಂದೆ ಸಾಧನ ಮಾಧವ ಪ ಶರಣಾಗತಿಯಿಂದ ಹರಿಯ ಪ್ರಸಾದವು ಹರಿಯ ಪ್ರಸಾದವು ಪುರುಷಾರ್ಥಕೆ ಸಾಧನ ಅ.ಪ ಹರಿಯಲಿ ಚಿತ್ತವು ಹರಿಯಲಿ ಭಕುತಿಯು ಹರಿಯುದ್ದೇಶದಿ ಯಜನಾದಿಗಳು ಹರಿಯ ಚರಣದಲಿ ನಮ ನವು ಇದನೇ ಶರಣಾಗಿಯೆಂದರುಹಿದ ನುಡಿ ಕೇಳಿÀದೆ 1 ಸರ್ವೋತ್ತಮ ನೀನೊಬ್ಬನೆ ಎನ್ನುವ ದಿವ್ಯಜ್ಞಾನವ ಪೊಂದುತ ಮನದಲಿ ಸರ್ವಾಧಿಕ ನಿಶ್ಚಲ ಪ್ರೇಮ ಸಹಿತ ಸರ್ವಕರ್ಮ ನಿನ್ನೊಳಗರ್ಪಣೆ ಮಾಡುವೆ 2 ತ್ರಿವಿಧ ಪೂಜೆಗಳಲಿ ರತಿಯು ಹರಿಯ ಪ್ರಸನ್ನತೆಯಲಿ ನಂಬುಕೆಯು ಹರಿದಾಸನು ನಾನೆಂಬುವ ನಂಬಿಕೆ ಶರಣಾಗತಿಯಿದು ಮೋಕ್ಷಫಲಕೆ ಸಾಧನ 3
--------------
ವಿದ್ಯಾಪ್ರಸನ್ನತೀರ್ಥರು
ಶರ್ವೇಡ್ಯ ಮೋಹನ ವಿಠಲ ಪೊರೆ ಇವನ ಪ ಸರ್ವತ್ರ ಸರ್ವದಾ | ಸರ್ವ ಮಂಗಳನೇ ಅ.ಪ. ಸುಕೃತ | ರಾಶಿ ಫಲಿಸಿತೋ ಇವಗೆದಾಸ ದೀಕ್ಷೆಯಲಿ ಮನ | ಲೇಸುಗೈದಿಹನೋ |ವಾಸವಾದೀ ವಂದ್ಯ | ಭಾಸುರಾಂಗನೆ ದೇವದೋಷಾಗಳನಳಿದು ಸಂ | ತೋಷವನೆ ಪಡಿಸೋ1 ಹರಿದಾಸ ರೊಲಿದಿವಗೆ | ದರುಶನವನಿತ್ತಿಹರುಗುರು ರಘೋತ್ತಮರಂತೆ | ಬೃಂದಾವನಸ್ಥಾನರಹರಿಯು ಸ್ವಪ್ನದಲಿ | ಹರಿಹಯಾಸ್ಯವ ತೆರದಿದರುಶನಕೆ ಕಾರಣವು | ಪರಮ ಪ್ರಿಯರ್ದಯವೂ 2 ಅದ್ವೈತ ತ್ರಯಜ್ಞಾನ | ಸಿದ್ಧಿಸುತ ಸಂಸಾರಅಬ್ಧಿಯನೆ ಉತ್ತರಿಸೊ | ಮಧ್ವಾಂತರಾತ್ಮಾ 3 ಕಿಂಕಿಣಿಯ ಶೋಭಿತನೆ | ಶಂಕರೇಡ್ಯನೆ ನಿನ್ನಅಂಕಿತವ ನಿತ್ತಿಹೆನೊ | ಲೆಂಕತನದವಗೇವೆಂಕಟ ಕೃಷ್ಣ ಹೃತ್ | ಪಂಕಜದಿ ತವರೂಪಕಿಂಕರಗೆ ತೋರೆಂದು | ಶಂಕಿಸದೆ ಬೇಡ್ವೇ 4 ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾವ | ಹವಣೆ ನಿನದಲ್ಲೇ |ಪರ್ವ ಪರ್ವದಿ ಇವಗೆ | ನಿರ್ವಿಘ್ನ ನೀಡಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷ ಪರ್ಯಂಕ ಶಯನ ವಿಷಯದಭಿ ಲಾಷೆ ಪರಿಹರಿಸಿ ಕಾಯೋ ಪ ರೆನದೆ ಮನೆಮನೆ ತಿರುಗಿದೆ ಅನಿಮಿಷೋತ್ತಂಸ ನಿನ್ನ ಪಾದವೊಂ ದಿನ ಭಜಿಸಿದವನಲ್ಲವೋ 1 ಹರಿ ಗುರುಗಳನು ನಿಂದಿಪ ನೀಚರನು ಸರಿಸಿ ಅವರನು ಸ್ತುತಿಸಿದೆ ಪೊರೆಯಲೋಸುಗ ಉದರವ - ಜನರಿಂದ ಹರಿದಾಸನೆನಿಸಿಕೊಂಡೆ 2 ಭಗವಂತ ನಿನ್ನ ಗುಣವ ವರ್ಣಿಸದೆ ಭಗವತಿಯರವಯವಗಳಾ ಸೊಗಸಿನಿಂದಲಿ ವರ್ಣಿಸಿ ಎನ್ನ ನಾ ಲಗೆ ಎರಡು ಮಾಡಿಕೊಂಡೆ 3 ಸರ್ವಪ್ರಕಾರದಲ್ಲಿ ಹಗಲಿರುಳು ದುರ್ವಿಷಯಕೊಳಗಾದೆನೋ ಶರ್ವಾದಿ ವಂದ್ಯ ಚರಣಾ ನೀನೊಲಿ ದುರ್ವಿಯೊಳು ಸಲಹ ಬೇಕು 4 ಉಪರಾಗ ಪರ್ವಗಳಲಿ ಸ್ನಾನ ಜಪ ತಪ ಅನುಷ್ಠಾನ ಜರಿದು ನೃಪರ ಮಂದಿರವ ಕಾಯ್ದು ಧನವ ತಂ ದುಪ ಜೀವಿಸಿದೆನೊ ಜೀಯಾ 5 ವೇದ ಶಾಸ್ತ್ರಾರ್ಥಗಳನು ತಿಳಿದು ಸ ನ್ಮೋದ ಬಡದಲೆ ಕುಶಾಸ್ತ್ರ ಓದಿ ಪಂಡಿತನೆನಿಸಿದೆ ಕೀರ್ತಿ ಸಂ ಪಾದಿಸಿದೆ ವ್ಯರ್ಥ ಬಾಳಿದೇ 6 ವೈರಾಗ್ಯ ಪುಟ್ಟಲಿಲ್ಲ ಘೋರ ಸಂ ಸಾರದೊಳು ಮಗ್ನನಾದೆ ಸೂರಿಗಳ ಮಧ್ಯದಲ್ಲಿ ಬುಧನಂತೆ ತೋರುವೆನು ನೋಳ್ಪ ಜನಕೆ 7 ನಾ ಮಾಡ್ದ ಪಾಪರಾಶಿ ಎಣಿಸಲ್ಕೆ ತಾಮರಸಭವಗಸದಳ ಸ್ವಾಮಿ ಎನಗೇನು ಗತಿಯೋ ಭಾರವಾದೆ ಈ ಮಹಿಗೆ ಪ್ರತಿದಿನದಲೀ 8 ಭೂತ ಸಂಬಂಧದಿಂದ ಬಹುವಿಧದ ಪಾತಕವೆ ಸಮನಿಸಿದವೋ ದಾತೃನೀ ಕಡೆ ಗೈದಿಸೋ ಭವದಿ ಜಗ ನ್ನಾಥ ವಿಠ್ಠಲ ಕೃಪಾಳೋ 9
--------------
ಜಗನ್ನಾಥದಾಸರು
ಶೇಷನುತ ಗೋಪ ವಿಠ್ಠಲ | ನೀ ಸಲಹೊ ಇವಳಾ ಪ ವಾಸದೇವನೆ ನಿನ್ನ | ಪ್ರಾರ್ಥಿಸುವೆ ಹರಿಯೇ ಅ.ಪ. ಕನ್ಯೆ ಬಹು ಭಾವುಕಳು | ನಿನ್ನೆಯಿಂ ಪ್ರಾರ್ಥಿಪಳುಘನ್ನ ಹರಿದಾಸ್ಯದಲಿ | ಮುನ್ನಮನವಿರಿಸೀ |ಇನ್ನು ತೈಜಸರೂಪ | ಚೆನ್ನ ಶೇಷನು ಆಗೆಮಾನ್ಯರೂ ಪರಮಗುರೂ | ವನ್ನೆ ಕಂಡಿಹಳೋ 1 ಗುರುತರೂಪಿ ತೈಜಸನು | ವ್ಯಾಸಪೀಠದ ಮುಂದೆಇರುತ ಗುರು ರಾಜರ | ಮಹಿಮೆ ಪೇಳುತಲೀ |ಹರಿಸುತಲಿ ಕನ್ಯೆಗೇ | ಫಲಪುಷ್ಪ ತಾಂಬೂಲದೊರಕಿಸಿಹ ಅದರಿಂದೆ | ಉಪದೇಶವಿತ್ತೇ 2 ಪತಿಸೇವೆ ದೊರಕಿಸುತ | ಕೃತ ಕಾರ್ಯಳೆಂದೆನಿಸೊಹಿತವಹಿತವೆರಡರಲಿ | ರತಿ ಇಡದೆ ಉಂಬಾ |ಮತಿಯನ್ನೇ ಕರುಣಿಸುತಾ | ಮತಿಮತಾಂವರರಂಘ್ರಿಶತಪತ್ರ ಸೇವೆಯಲಿ | ರತಳು ಎಂದೆನಿಸೊ 3 ಭವ | ಸಾಗರದ ಬತ್ತಿಪುದುಮರುತಾಂತರಾತ್ಮ ಹರಿ | ವೇಣುಗೋಪಾಲಾ 4 ಭಾವ ಮೈದುನಗೊಲಿದ | ಶ್ರೀವರನೆ ಮೈದೋರಿಭಾವುಕಳೆ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ |ಸಾರ್ವಭೌಮನೆ ಹರಿಯೆ | ಕೋವಿದೋತ್ತಂಸ ಗುರುಗೋವಿಂದ ವಿಠ್ಠಲನೆ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ರಮಣಪತಿ ವಿಠಲ ನೀ ಕರುಣಿಸೋ |ಮಾರಪಿತ ಮರುತ ಮನೆಮಂದಿರ ನಿವಾಸಾ ಪ ಉದಯದಲಿ ಎದ್ದು ಹರಿಧ್ಯಾನವನು |ಮುದದಿಂದ ಬ್ಯಾಸರದೆ ನಿರುತ ಮಾಡಿ |ಸದಮಲ ಶ್ರೀ ಮುದ್ರಿಊಧ್ರ್ವಪುಂಡ್ರವ |ಪದುಮಾಕ್ಷಿ ಶ್ರೀತುಲಸಿಸರಗಳಿಂದಾ 1 ಸಿರಿ ಬೊಮ್ಮ ಪಂಚಭೇದ ಜ್ಞಾನದ, ತತ್ವವಿಚಾರ |ಹರಿದಾಸ ಸಹವಾಸ ಸರ್ವದಾ ಕೊಟ್ಟು 2 ಶ್ರೀಶ ಪ್ರಾಣೇಶ ವಿಠ್ಠಲರಾಯನೇ ನಿನ್ನ |ದಾಸತ್ವವನೆ ಕೊಟ್ಟು ಉದ್ಧರಿಪದೋ ||ಲೇಸಾಗಿ ಪ್ರಾರ್ಥಿಸದೆ ಎನ್ನ ಭಿನ್ನಪವು ಉ |ದಾಸಿಸದೆ ನೀ ಕರುಣಿಸೆಂದು ದಿನದೇ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ವೇಣುಗೋಪಾಲ ಕೃಷ್ಣಾ ಕಾವುದೈ ಪರಿಹರಿಸಿ ನೀನೆನ್ನ ಕೃಷ್ಣಾ ಪ ಶ್ರೀ ವ್ಯಾಸರಾಯಾರ್ಜಿತ ಕರುಣಾ ದೇವಾದಿನುತಚರಣ ಗುಣಗಣಾಭರಣ ಅ.ಪ. ಭೂಮಿ ಆಕಾಶಾದಿ ಸಕಲವನು ವ್ಯಾಪಿಸಿದಪ್ರೇಮದಿಂ ನಿನ್ನಂಶವನು ಪೂರ್ಣಗೊಳಿಸಿದನೇಮದಿಂ ಜಾಂಬುವತಿ ಭಕುತಿಯಿಂ ಪೂಜಿಸಿದಭೀಮರಥಿಯಿಂ ಬಂದು ಶ್ರೀ ವ್ಯಾಸರಾಯಗೊಲಿದ 1 ಪುರಂದರ ಕಚ್ಚು ನೈವೇದ್ಯಕ್ಕೆಮೆಚ್ಚಿಯತಿ ವ್ಯಾಸರನು ಅಚ್ಚರಿಯಗೊಳಿಸಿದಹುಚ್ಚು ಕುರುಬಗೆ ಜಗನ್ನಾಥದಾಸರ ಜನುಮದಿಚ್ಛೆಯನು ವ್ಯಾಸರಿಂ ಪೂರೈಸಿ ಮೆರೆಯುತಿಹ 2 ಕನ್ನಡದ ರಾಜ್ಯವೆಂದೆನಿಸಿದ ವಿದ್ಯಾನಗರದುನ್ನತಿಯ ಗೈದ ಯತಿ ವ್ಯಾಸರನು ಪಟ್ಟದೊಳುಸನ್ನಹಿಸಿ ಘನ ಕೃಷ್ಣ ನರಪತಿಗೆ ಬಂದಿದ್ದಬನ್ನ ಕುಹುಯೋಗವ ಸಂಹರಿಸಿ ಪಾಲಿಸಿದ 3 ಪ್ರಾಣಯತಿ ಹರ ವ್ಯಾಸರಾಯಾದಿ ಹರಿದಾಸಜಾಣರನು ಕುಣಿಸಲಿಕೆ ನಾದವನು ಕೊಡಲೆಂದುವೇಣುವನು ಊದುತ್ತೆ ಮೋದಿಸುವನೆಂಬಂತೆಕಾಣಿಸುವ ರೀತಿಯಲಿ ನರ್ತಿಸುತ ನಿಂತಿರುವ 4 ವ್ಯಾಸರಂದದಿ ಧರ್ಮದುಪದೇಶ ಮಾಡುತ್ತೆದೇಶದೊಳು ಪಸರಿಸಲು ಲಕ್ಷ್ಮೀಶ ತೀರ್ಥರನುಶಾಸನವ ಗೈದುಪನ್ಯಾಸಕ್ಕೆ ನೇಮಿಸಿದಶ್ರೀಶ ಗದುಗಿನ ವೀರನಾರಾಯಣನು ಎಂಬ 5
--------------
ವೀರನಾರಾಯಣ
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಹರಿದಾಸವೃಂದ ಸ್ತೋತ್ರ (ಕೋಲು ಪದ) ಶ್ರೀ ಪುರಂದರದಾಸರು ಪರಮೇಷ್ಟಿ ಪಿತನಾಜ್ಞೆ ಧರಿಸಿ ಬಂದ ವರಸುರ ಮೌನಿಯವತಾರಿ ಕೋಲೆ | ವರಸುರ ಮೌನಿಯವತಾರಿಯಾದ ಪುರಂದರದಾಸರ ಬಲಗೊಂಬೆ ಕೋಲೆ 1 ಶ್ರೀ ವಿಜಯದಾಸರು ಪುಟ್ಟ ಬದರಿಯಲ್ಲಿ ಪುಟ್ಟಿ ಪುರಂದರ ಶ್ರೇಷ್ಟದಾಸರ ದಯಾಪಾತ್ರ ಕೋಲೆ | ಶ್ರೇಷ್ಟದಾಸರ ದಯಪಾತ್ರರಾದ ವಿಜಯ ವಿಠಲದಾಸರ ಬಲಗೊಂಬೆ ಕೋಲೆ 2 ಶ್ರೀ ಗೋಪಾಲದಾಸರು ನಾಗಭೂಷಣಸುತ ನಾಗಾಶ್ಯವಂಶಜ ಭಾಗವತಾಗ್ರಣಿ ಭಾಗಣ್ಣ ಕೋಲೆ | ಭಾಗವತಾಗ್ರಣಿ ಭಾಗಣ್ಣದಾಸರಿಗೆ ಬಾಗಿ ನಮಿಸಿ ಪ್ರಾರ್ಥಿಪೆ ಕೋಲೆ 3 ಶ್ರೀ ಜಗನ್ನಾಥ ದಾಸರು ಬಂದ ಸಹ್ಲಾದನಂಶಜ ಕೋಲೆ | ಬಂದ ಸಹ್ಲಾದನಂಶದ ಮಾನವಿ ಮಂದಿರ ದಾಸರಿಗೆ ವಂದಿಪೆ ಕೋಲೆ 4 ಶ್ರೀ ಪ್ರಾಣೇಶದಾಸರು ಶ್ರೀ ಗುರು ರಂಗವೊಲಿದ ಭಾಗವತರ ಛಾತ್ರ ದಾಗಿ ಶ್ರೀ ಹರಿಯ ಬಣ್ಣಿಸಿ ಕೋಲೆ | ಛಾತ್ರರಾಗಿ ಶ್ರೀಹರಿಯ ಬಣ್ಣಿಸಿದಂಥ ಲಿಂಗ ಸೂಗೂರ ದಾಸರಿಗೆ ವಂದಿಪೆ ಕೋಲೆ 5 ಪ್ರಾಣೇದಾಸರ ಸೂನುವೆನಿಸಿದ ಮಾನವಿ ರಾಯರ ಸೇವಿಸಿ ಕೋಲೆ | ಮಾನವಿ ರಾಯರ ಸೇವಿಸಿದಂಥ ಗುರು ಪ್ರಾಣೇಶದಾಸರ ಬಲಗೊಂಬೆ ಕೋಲೆ 6 ಶ್ರೀ ಶ್ರೀಶಪ್ರಾಣೇಶದಾಸರು ಗಂಧದ ಕೊರಡು ಪೆಟ್ಟು ತಿಂದು ಮಾವಂದಿರಿಂದ ಛಂದಾಗಿ ತತ್ವವರಿದಂಥ ಶ್ರೀ ರಘು | ನಂದನ ದಾಸರಿಗೆ ವಂದಿಪೆ ಕೋಲೆ 7 ಶ್ರೀ ಶೇಷದಾಸರು ಇಳೆಯೊಳು ಚಿಂತರವೇಲಿ ವಾನರೇಂದ್ರನ ಸಲೆ ಸೇವಿಸುತ ವಲಿಸಿದ ಕೋಲೆ | ಸಲೆ ಸೇವಿಸುತ ವಲಿಸಿದ ಗುರು ಪ್ರಥಮ ಶಿಲೆ ಶೇಷದಾಸರ ಬಲಗೊಂಬೆ ಕೋಲೆ 8 ಪಾರ್ಥಿವ ವರ್ಷದಿ ಪಾರ್ಥಸಾರಥಿ ಭವ್ಯ ಮೂರ್ತಿಯ ಮುದದಿ ಸ್ಥಾಪಿಸಿ ಕೋಲೆ | ಮೂರ್ತಿಯ ಮುದದಿ ಸ್ಥಾಪಿಸಿದಂಥ ಪೂರ್ವ ಪಾರ್ಥಾಹಿಪಾರ್ಯರ ಪ್ರಾರ್ಥಿಪೆ ಕೋಲೆ 9 ಪರಿವಾರ ಸಹಿತ ಚರಿಸುತ ಕೋಲೆ | ಪರಿವಾರ ಸಹಿತ ಚರಿಸುತ ಅಸಿಘ್ಯಾಳು ಪುರವಾಸ ದಾಸರಿಗೆ ಶರಣೆಂಬೆ ಕೋಲೆ 10 ಶ್ರೀ ಗುರು ಜಗನ್ನಾಥದಾಸರು ಸ್ವಾಮಿರಾಯರ ವಲಿಸಿ ಸ್ವಾಮಿರಾಯನಿಗೊಲಿದು ಸ್ವಾಮಿ ಶ್ರೀಹರಿಯ ಮಹಿಮೆಯ ಕೋಲೆ ಸ್ವಾಮಿ ಹರಿಯ ಮಹಿಮೆ ಪೇಳಿದ ಕೋಸಿಗಿ ಸ್ವಾಮಿರಾಯಾರ್ಯರ ಬಲಗೊಂಬೆ ಕೋಲೆ 11 ಶ್ರೀ ಇಂದಿರೇಶದಾಸರು (ತಿರುಪತಿ ಶ್ರೀ ಹುಚ್ಚಾಚಾರ್ಯರು) ಅಚ್ಭ ಸದ್ಭಕ್ತಿಯಲಿ ಅಚ್ಯುತಕೃಷ್ಣನ ಅರ್ಚಿಸಿ ವಿಧ ವಿಧ ಮೆಚ್ಚಿಸಿ ಕೋಲೆ | ಅರ್ಚಿಸಿ ವಿಧ ವಿಧ ಮೆಚ್ಚಿಸಿದಂಥ ಜ್ಞಾನಿ ಹುಚ್ಚಾಚಾರ್ಯರನ ಬಲಗೊಂಬೆ ಕೋಲೆ 12 ಶ್ರೀ ಭೀಮಸೇನಾಚಾರ್ಯರು ಕೊಪ್ಪರ ಶ್ರೀಮತ್ ಕಾರ್ಪರಕ್ಷೇತ್ರಧಾಮ ನರಸಿಂಹನ ನೇಮ ಪೂರ್ವಕದಿ ಪೂಜಿಸಿ ಕೋಲೆ | ನೇಮ ಪೂರ್ವಕದಿ ಪೂಜಿಸಿದಂಥ ಪೂಜ್ಯ ಭೀಮಸೇನಾರ್ಯಋ ಬಲಗೊಂಬೆ ಕೋಲೆ 13 ಶ್ರೀ ರಾಘಪ್ಪದಾಸರು ಮರುತನ ಪ್ರತ್ಯಕ್ಷಗೈದು ತನ್ನ ಗುರುತು ತೋರದೆ ಚರಿಸಿದ ಕೋಲೆ | ಗುರುತು ತೋರದೆ ಚರಿಸಿದ ರಘುಪತಿ ಚರಣ ಕಿಂಕರಗೆ ಶರಣೆಂಬೆ ಕೋಲೆ 14 ನೂರಾರು ಶಿಷ್ಯಪರಿವಾರ ಸಹಿತರಾಗಿ ಶೌರಿಕಥಾಮೃತ ಸವಿಯುತ ಕೋಲೆ | ಶೌರಿಕಥಾಮೃತ ಸವಿದಂಥ ಶ್ರೀ ರಘುವೀರನ ದಾಸರಿಗೆ ನಮಿಸುವೆ ಕೋಲೆ 15 ಗೋವಿಂದದಾಸರ ಭಾವಕ್ಕೆ ಮೆಚ್ಚಿ ದೇವನ ಮಹಿಮೆ ತೋರಿದ ರಾಘವಾಖ್ಯ ಕೋವಿದರಾಗ್ರಣಿಯ ಬಲಗೊಂಬೆ ಕೋಲೆ 16 ಶ್ರೀ ಗೋವಿಂಧದಾಸರು ಎಳೆಯತನದಿ ವಿದ್ಯ ಕಲಿಯದೆ ಹರಿನಾಮ ಬಲದಿಂದ ಜ್ಞಾನಿಗಳಿಸಿದ ಕೋಲೆ | ಬಲದಿಂದ ಜ್ಞಾನಗಳಿಸಿ ಅಸಿಷ್ಯಾಳು ನಿಲಯ ದಾಸರಿಗೆ ವಂದಿಪೆ ಕೋಲೆ 17 ಮಾವನ ವೈರಿಯಾದ ಮಾವರನ ಮನದಿ ಮಾವನನಂತೆಂದು ಭಾವಿಸಿ ಕೋಲೆ | ಮಾವನಂತೆಂದು ಭಾವಿಸಿ ಸ್ತನಿಸಿದ ಗೋವಿಂದದಾಸರ ಬಲಗೊಂಬೆ ಕೋಲೆ 18 ಬಂದ ವಿಪ್ರರಿಗೆ ಸಂದರುಶನದಿಂದ ವಂದಿಸಿ ಪರಮಾನಂದವ ಬಡು ಗೋ ವಂದಿಸಿ ದಾಸರಿಗೆ ವಂದಿಪೆ ಕೋಲೆ 19 ಲೇಸು ಭಕ್ತಿಯಿಂದ ದಾಸರ ಕವನ ಸುಧೆ ಪ್ರಾಶನಗೈದು ಸಂತತ ಕೋಲೆ | ಪ್ರಾಶನಗೈದು ಸಂತತ ಅಶಿಷ್ಯಾಳು ವಾಸದಾಸರಿಗೆ ಶರಣೆಂಬೆ ಕೋಲೆ 20 ಜಾಗರ ಶಿಷ್ಯ ಶ್ರೀ ಐಕೂರಾಚಾರ್ಯರು ಏಕಾಂತದಲಿ ಕುಳಿತು ಶ್ರೀಕಾಂತನ್ನ ವಲಿಸಿ ಲೋಕಾಂತರದಲಿ ಚರಿಸಿದ ಕೋಲೆ | ಲೋಕಾಂತರದಲಿ ಚರಿಸಿದ ನಮ್ಮಗುರು ಐಕೂರಾಚಾರ್ಯರಿಗೆ ಶರಣೆಂಬೆ ಕೋಲೆ 21 ಹುಟ್ಟಿದು ಒಂದೂರು ಮೆಟ್ಟಿದ್ದು ಬಹು ಊರು ಕಟ್ಟ ಕಡೆಯಲಿ ಹರಿಯೂರು ಕೋಲೆ | ಕಟ್ಟ ಕಡೆಯಲ್ಲಿ ಹರಿ ಊರು ಸೇರಿದಂಥ ಶ್ರೇಷ್ಟ ಸದ್ಗುರುಗಳ ಬಲಗೊಂಬೆ ಕೋಲೆ 22 ಹಾದಿ ಇದೆಂದು ಬೋಧಿಸಿದಂಥ ನಮ್ಮ ಮಾಧವೇಶಾಚಾರ್ಯರ ಬಲಗೊಂಬೆ ಕೋಲೆ 23 ಚತುರ ವಿಂಶತಿ ವರನುಡಿಗಳಿಂದೆಸೆಯುವ ರತುನ ಹಾರದ ಕೋಲುಪದ ಕೋಲೆ | ರತುನ ಹಾರದ ಕೋಲುತದ ನಿತ್ಯಪರಿಸುವರಿಗೆ ಶಾಮಸುಂದರವಿಠಲ ಮುದವೀವÀ ಕೋಲೆ 24
--------------
ಶಾಮಸುಂದರ ವಿಠಲ
ಶ್ರೀಗುರುಜಗನ್ನಾಥದಾಸರಾಯರ ಸ್ತೋತ್ರ ಹರುಷದಿ ಕರಪಿಡಿದು ಪರಮ ಕರುಣದಿಂದ ಹರಿದಾಸ್ಯವಿತ್ತು ಉ - ದ್ಧರಿಸಿದ ಉಪಕಾರ ಮರೆಯಲಾರೆನು ಎಂದೂ ಪ ವರದೇಂದ್ರಾರ್ಯರÀು ನಮ್ಮ ಶರಣನು ಇವನಿಗೆ ಕರುಣಿಸೆಂದಾಜ್ಞಾಪಿಸೆ ತರುಳನ ಶಿರದಲಿ ಕÀರವಿಟ್ಟು ಕೃಪೆಯಿಂದ ಗುರುತು ತೋರಿದಕೆ ನಾ ಪರಮಧನ್ಯನೆಂಬೆ 1 ಮರುತಮತದತತ್ವ ಹರಿಕಥಾಮೃತಸಾರ ವರರಹಸ್ಯಗಳೆಲ್ಲವ ಸರಸವಾಗುತೆಂ ಅರಹುವೆವೆಂತೆಂಬ ವರವಾಕ್ಯದಂತೆನ್ನ ಪರಿಪಾಲಿಪುದಯ್ಯ 2 ಹರಿಮುನಿದರು ಗುರುಕರುಣಿಪನೊಮ್ಮಿಗೆ ಗುರು ಮುನಿಯೆ ಹರಿ ಪೊರೆಯ ಹರಿಯ ಕೃಪೆಗೆ ಮುಖ್ಯ ಗುರುವೆ ಕಾರಣನೆಂದು ನೆರೆನಂಬಿರಲು ನೀನರಿಯದಂತಿಪ್ಪುದೆ 3 ಮರುತ ಮತಾಬ್ಧಿಚಂದಿರ ಗುರುರಾಜರ ವರಬಲದಿ ಮೆರೆವ ಹರಿಭಕ್ತಾಗ್ರಣಿ ನಿಮ್ಮ ಚರಿತೆ ಬಣ್ಣಿಸುವೆನಾ ಹರಿವಲಿಯುವÀ ತೆರ ಕರುಣಿಸೆನ್ನಯನಿಜ4 ಬರಿದೆ ಬಾಹ್ಯಾಚಾರ ವಿರಚಿಸದಲೆ ಮನದಿ ಹರಿರೂಪ ಕಾಂಬತೆರದಿ ವರದೇಶ ವಿಠಲನ ಸಿರದಾಸ್ಯತನವೆಂಬ ಗುರುತುತೋರುವುದಯ್ಯ ಗುರುಜಗನ್ನಾಥಾರ್ಯ 5
--------------
ವರದೇಶವಿಠಲ
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಶ್ರೀಹರಿದಾಸವೃಂದ ಸ್ತೋತ್ರ ದಾಸವರ್ಯರಿಗೊಂದಿಪೆ ದಾಸವರ್ಯರಿಗೆರಗಿ ಜನ್ಮಾಂತರದ ದೋಷವ ಪರಿಹರಿಸಿಕೊಂಬೆ ಪ ನಾರದ ಮುನಿಹರಿಯಾಜ್ಞ್ಞೆಯಿಂದಲೆ ಪುರಂ - ದರ ದಾಸರಾಗಿಜನಿಸಿದ ದಾ - ನಾರಾಯಣನ ದಿವ್ಯನಾಮದ ಮಹಿಮೆಯ ಮೂರು ಲೋಕಗಳಲ್ಲಿ ಹರಹಿದ 1 ಭಜಿಸುವ ಭಕುತರ ಅಗಣಿತದೋಷವ ನಿಜವಾಗಿ ಪರಿಹರಿಸುವಂಥ ದಾಸ - ಸುಜನ ಪೋಷಕ ದುಷ್ಟಕುಜನ ಕುಠಾರ ಶ್ರಿ ವಿಜಯರಾಯರ ಪಾದಕ್ಕೆರಗುವೆ 2 ಕೋಪರಹಿತಭಕ್ತ ಪಾಪವಿದೂರಕ ಭೃಂಗ ದಾ - ತಾಪ ಸೋತ್ತುಮಭವ ತಾಪನಿವಾರಕ ಗೋಪಾಲದಾಸರಿಗೆರಗುವೆ 3 ಧರಿಯಸುರರ ಉದ್ಧರಿಸಲೋಸುಗ ದಿವ್ಯ ಹರಿಕಥಾಮೃತ ಸಾರಗ್ರಂಥವದಾ - ವಿರಚಿಸುತಙÁ್ಞನಪರಿಹರಿಸಿದಂಥ ಹರಿಭಕ್ತಾಗ್ರಣಿ ಶ್ರೀ ಜಗನ್ನಾಥ 4 ಧರೆಯೊಳು ಹರಿಲೀಲಾಮೃತ ವೃಷ್ಟಿಗರೆಯಲು ಪರಿಪರಿ ಕಥೆಗಳ ರಚಿಸಿದ ದಾ - ವರದೇಂದ್ರ ಮುನಿಗಳ ಪಾದಸಾರಸಭೃಂಗ ಪರನುಸುಚರಿತ ಶ್ರೀ ಪ್ರಾಣೇಶ 5 ಹರಿಭಕ್ತಿ ಮಾರ್ಗವ ಪರಿಪರಿಶಿಷ್ಯರಿ ಗರುಹಿ ಕರುಣದಿಂದುದ್ಧರಿಸಿದ ದಾ - ಪರಮತತಿಮರಕ್ಕೆ ತರಣಿಸ್ವರೂಪ ಶ್ರೀ ಗುರುಪ್ರಾಣೇಶಾರ್ಯರಿಗೆರಗುವೆ6 ಗುರುಪಾದ ಸೇವೆಯ ಪರಿಪರಿಗೈದು ಈ ಧರಿಯೊಳು ಧನ್ಯರೆಂದೆನಿಸಿದ ದಾ - ಹರಿದಾಸ ಕುಲರತ್ನ ಸರುವ ಸದ್ಗುಣ ಪೂರ್ಣ ವರಶ್ರೀಪ್ರಾಣೇಶದಾಸಾರ್ಯ 7 ಗುರುಪ್ರಾಣೇಶರ ಕರಸರಸಿಜ ಸಂಜಾತ ಪರಮಭಾಗವತರೆನಿಸಿದ ದಾ ಮರುತಮತದ ತತ್ವವರಿದಂಥ ಸುಖದ ಸುಂ - ಮೋದ ವಿಠಲರೆಂಬ 8 ಭೂಮಿಯೋಳ್ ವರದೇಶ ವಿಠ್ಠಲನ ನಿಜಭಕ್ತ ಸ್ತೋಮಕ್ಕೆ ಶಿರಬಾಗಿ ನಮಿಸುವೆ ದಾ ಆ ಮಹಾತ್ಮರಪಾದರಜಾದೊಳೆನ್ನನು ದೇವ ನೇಮದಿಂದಲಿ ಹೊರಳಾಡಿಸೊ 9
--------------
ವರದೇಶವಿಠಲ