ಒಟ್ಟು 1256 ಕಡೆಗಳಲ್ಲಿ , 87 ದಾಸರು , 859 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಏನು ಕಾರಣ ಹರಿಯೆ ಅನುಮಾನಿಸಿದಿ ದೊರೆಯೆ ಘನವಲ್ಲ ನಿನಗಿದು ತೆರೆದ ಬೀಗ ಜೋಡಿಸುವುದು ಪ ವದನದಿಂದಲಿ ನಿನ್ನ ಮಹಿಮೆ ಪೊಗಳಲರಿಯದೆ ಸದನದಿ ಅನ್ಯರ ಪಾಡುತ್ತಿದ್ದೆನೇನೋ 1 ಪಾಡದಿದ್ದರೆ ನಾನೊಬ್ಬ ನೋಡಿ ಬಂದದ್ದೇನೊ ನಿನಗೆ ಬೇಡಿಕೊಂಬೆನೊ ಬಾಯ ಬೀಗ ತÉಗೆಸೊ ಹರಿಯೆ 2 ವೇದ ಪೊಗಳಲರಿಯದ ವಿಜಯ ರಾಮಚಂದ್ರವಿಠಲನ್ನ ಮೋದಮಯ ದೇವ 3
--------------
ವಿಜಯ ರಾಮಚಂದ್ರವಿಠಲ
ಏನು ದಾಸ ನಾನು ಹರಿಯೆ ನೀನು ಮೆಚ್ಚುವೆಯೇನೊ ಪ ಏನು ಮಾಡಿದರೇನು ನಿನ್ನಯ ಖೂನವರಿದೆನೇನೊ ಹರಿಯೆ ಅ.ಪ ಲೋಕ ವಾರ್ತಿ ಎಲ್ಲ ಜರಿದು ಏಕ ಚಿತ್ತವಿಲ್ಲ ಕಾಕು ಪೋಕರ ನೀಕರಿ ನಿನ್ನ ಸ್ವೀಕರಿಸಲಿಲ್ಲ ಬರಿದೆ 1 ನಿನ್ನ ಮಹಿಮೆಯನ್ನು ಕೇಳಿ ನಿನ್ನ ರೂಪವಿನ್ನು ಮನದಣಿಯೆ ನೋ ಡೆನ್ನ ಮರೆಯದೆನ್ನ ದಾಸ್ಯವಿನ್ನು ಬರಿದೆ 2 ಭಾವ ತಿಳಿಯಲಿಲ್ಲ ಗುರುಗಳ ಸೇವೆ ಮಾಡಲಿಲ್ಲ ಧಾವತಿಗೊಂಡೆ ಕೇವಲ ವಾಸುದೇವವಿಠಲ ಬರಿದೆ 3
--------------
ವ್ಯಾಸತತ್ವಜ್ಞದಾಸರು
ಏನು ಮಾಡಲೀ ಮನ ಮಾತು ಕೇಳದೇನು ಮಾಡಲಿ ಶ್ರೀ ನರಹರಿಯ ನೆನೆಯದೆ ಕಂಡ ಹೀನ ವಿಷಯದಲ್ಲಿ ಶ್ವಾನನಂತೆ ಪೋಪರೇನು ಪ ಸಾಧು ಸಜ್ಜನರ ಬೋಧನೆಯ ಜರಿಸಿ ಮಾಧವನೆ ನಿನ್ನ ಪಾದಕೊಯಿರಿ ಮಾಳ್ಪೊದೇನು 1 ಕಾಯ ಬಾಂಧವರ ಮಾಯಪಾಶಕ್ಹಾಕೆ ತೋಯಜಾಕ್ಷ ಎನ್ನ ಬಾಯ ಬಿಡಿಸೊರೈಯ್ಯ 2 ಗಜ ಸಿಕ್ಕಿಬಿದ್ದು ನೈಜ ದಿಕ್ಕುಕಾಣದಂತೆ ಸಿಕ್ಕೆ ವಿಷಯದಲ್ಲಿ 3 ತಂದು ತಂದು ಗೋವಿಂದ ನಿನ್ನಲಿಡೆ ಸಂದುಗೊಂಡು ಬಿಡಿಸಿಕೊಂಡು ಪೋಪುದೈಯ್ಯ 4 ದೇಹಗೇಹದಲ್ಲಿ ಸ್ನೇಹ ಇಡಿಸಿ ಕೆಡಿಸಿ ಶ್ರೀ ಹಯವದನ ಮೋಹಪಾಶಕ್ಹಾಕೋದೇನು 5 ವಾಕು ಕೇಳೋ ತಂದೆ ಪಾದ ಒಂದೇ ಸಾಕಬೇಕೊ ಇಂದೆ 6 ಹೀನಬುದ್ಧಿಬಿಡಿಸಿ ಜ್ಞಾನ ನಿನ್ನಲಿರಿಸಿ ಗಾನಲೋಲ ಕಾಯೋ ಶ್ರೀ ನರಹರಿಯೆ 7
--------------
ಪ್ರದ್ಯುಮ್ನತೀರ್ಥರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನುಗತಿ ಏನುಗತಿ ಇನಕುಲೇಶ ಹೀನ ವಿಷಯದಿ ಮನ ಶ್ವಾನನಂತಿಟ್ಟ ಎನಗೇನು ಪ ಮೂರು ಗುಣಗಳಿಂದ ಮೂರು ತಾಪಗಳಿಂದ ಮೂರು ಈರೆರಡೊಂದು ಮದಗಳಿಂದ ಮೂರು ಐದಾರಿಂದ ಮರೆತು ತನು ಮೂಲಗಳ ಸ್ಮರಿಸದೇ ನರಹರಿಯ ನರಕಕ್ಕೆ ಗುರಿಯಾದ ಎನಗೆ 1 ಅತಿಥಿಗಳಿಗನ್ನ ಬಲು ಹಿತದಿ ಕೊಡದೆಲೆ ಪರ ಸತಿಯ ಸಂಗದಿ ನೆಲಸಿ ಹಿತವ ಮರೆದು ರತಿಪತಿಪಿತ ನಿನ್ನ ಸ್ತುತಿಸದೆ ಮತಿಗೆಟ್ಟು ಕ್ಷಿತಿಯೊಳಗೆ ನಾನೊಬ್ಬ ಯತಿಯಂತೆ ಚರಿಪ 2 ಇನ್ನಾದರೆನ್ನ ಪಾವನ್ನ ಮಾಡಲು ನಿನ್ನ ಘನ್ನ ಉಪಕೃತಿ ಮರಿಯೆ ಶ್ರೀ ನರಹರಿಯೆ ನಿನ್ನ ಪೊರತನ್ಯರನು ಮನ್ನಿಸುವರ ಕಾಣೆ ಬೆನ್ನ ಬಿದ್ದೆನೊ ದಯವನ್ನು ಮಾಡೆಲೋ ಬೇಗ3
--------------
ಪ್ರದ್ಯುಮ್ನತೀರ್ಥರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏಳಯ್ಯ ಮಹಾರಾಜ ಬೆಳಗಾಯಿತೇಳಯ್ಯ ರಂಗ ಬಾ ಪ ಬಾಗಿಲಲಿ ಕೂಗುವರು ಸನಕಾದಿ ಮುನಿವರರು ಜಾಗರವ ಮಾಡಿರ್ಪ ಸುರರೆಲ್ಲ ಬಂದಾಯ್ತು ಯೋಗಿಗಳು ಪೊಗಳುವರು ನಿನ್ನಂಘ್ರಿಯ 1 ಲಂಕೆಯನು ಬಿಟ್ಟು ವಿಭೀಷಣನು ನಿಂತಿರ್ದ ಗಂಗೆಯನು ಬಿಟ್ಟೇಳು ಜಗದೀಶನೆ | ತಂಗಿಯನು ಬೇಡುವರೆ ಭಾವ ಪಾರ್ಥನು ಬಂದ ಮಂಗಳದ ನುಡಿ ನಿನಗೆ ಕೇಳಲಿಲ್ಲವೊ ಹರಿಯೆ 2 ಥಟ್ಟನೆ ಏಳು ಯಾದವರಿಗರಸ | ಸೃಷ್ಟಿಗೊಡೆಯನೆ ಕೇಳು ಭೂಸುರನು ರುಕ್ಮಿಣಿಯ ಪುಟ್ಟ ವಾಲೆಯ ತಂದ ನೀ ನೋಡು ನೋಡು 3 ಕೋಪಿಗಳರಸಾದಿ ದುರ್ವಾಸ ಮುನಿ ಬಂದ | ಇಂಪಾಗಿ ಪಾಡುತಿಹ ಸುರಮುನಿಯು ಬಂದ | ಕೋಪದೊಳೊದೆದ ಮುನಿ ಬಂದ ಬೇಗೇಳು ಪುಷ್ಪಶರ ಮಗ ಬಂದ ಬೇಗೇಳು ರಂಗ 4 ಸಿರಿದೇವಿ ನಿನ್ನಂಘ್ರಿಗಳನೊತ್ತ ಬಿಡಳೇನೊ | ಮಾರುತಿಯ ಜಪವಿನ್ನು ಮುಗಿಯಲಿಲ್ಲೊ | ನರರೆಲ್ಲ ನಗುವಂತೆ ಮಾಡದಿರೊ ರಂಗ 5
--------------
ವಿಶ್ವೇಂದ್ರತೀರ್ಥ
ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು