ಒಟ್ಟು 161 ಕಡೆಗಳಲ್ಲಿ , 42 ದಾಸರು , 149 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಬೇಕೋ ರಂಗಯ್ಯ ನೀ - ಬರಬೇಕೊ ಪಬರಬೇಕೊ ಬಂದು ಒದಗಬೇಕೊ ಮಮಗುರು |ನರಹರಿ ನಾರಾಯಣ ನೀನಾ ಸಮಯಕೆ ಅ.ಪಕಂಠಕೆ ಪ್ರಾಣ ಬಂದಾಗ - ಎನ್ನ |ನಂಟರಿಷ್ಟರು ಬಂದಳುವಾಗ ||ಗಂಟು ಹುಟ್ಟಿನ ಕಾಲಬಂಟರು ಕವಿದೆನ್ನ |ಗಂಟಲೌಕುವಾಗ ವೈಕುಂಠನಾರಾಯಣ 1ನಾರಿಯು ಪುತ್ರ ಮಿತ್ರರು -ಬಂಧುಗಳು |ಆರೆನ್ನ ಸಂಗಡ ಬಾರರು ||ಆರಿಗಾರಿಲ್ಲ ಯಮನಾರುಭಟಕೆ ಅಸು-|ರಾರಿ ಮೈಮರೆದಾಗ ನೀರೇರುಹನಾಭ 2ಕರಿಪ್ರಹಲ್ಲಾದಾದಿ ಭಕ್ತರ -ಪತಿ|ಕರಿಸಲು ಒದಗಿದೆ ಶ್ರೀಧರ ||ನೆರೆಹೀನನೆನ್ನ ಉದ್ಧರಿಸಿಅಚ್ಯುತನಿನ್ನ |ಚರಣದೊಳಿಂಬಿಡೊ ಪುರಂದರವಿಠಲ 3
--------------
ಪುರಂದರದಾಸರು
ಬಾರೆ ವೈಯ್ಯಾರಿದೊಡ್ಡಮಾರಿ ಸಂಚರಿಸುವಾಗಫೋರರಾತ್ರಿಲೆ ಬರಬಹುದೆ ಪ.ಮಂದಗಮನೆ ನೀ ಮದನಜ ನೈಯ್ಯನಬದಿಯಲೆ ಬೆರೆದ ಬಗೆ ಹ್ಯಾಂಗಬಗೆಹ್ಯಾಂಗನಿನ್ನ ಕೀರ್ತಿಅದ್ಭುತವಮ್ಮಾ ಜಗದೊಳು 1ಧರ್ಮನ ಒಂದು ವರುಷ ರಮ್ಮಿಸಿ ಕರೆದೆಲ್ಲಧರ್ಮ ತಾ ಹೇಸಿ ಜರಿದನುಧರ್ಮ ತಾ ಹೇಸಿ ಜರಿದನು ಅದಕೇಳಿಬ್ರಮ್ಹಾದಿಗಳೆಲ್ಲ ನಗುತಾರೆ 2ಭೀಮನ ಒಂದು ವರುಷ ಕಾಮಿಸಿ ಕರೆದೆಲ್ಲಭೀಮತಾ ಹೇಸಿ ಜರಿದನುಭೀಮತಾ ಹೇಸಿ ಜರಿದನು ಅದಕೇಳಿಭೂಮಿ ಪಾಲಕರು ನಗುತಾರೆ 3ಮಿತ್ರಿ ಇಬ್ಬರ ಸಂಗ ತೃಪ್ತಿಯ ಗೈಯದೆಪಾರ್ಥನ ವರುಷ ಕರೆದೆಲ್ಲಪಾರ್ಥನ ವರುಷ ಕರೆದೆಲ್ಲಅವಜರಿದುಯಾತ್ರೆಗೆ ನಡೆದ ಬಿಡಳೆಂದು4ಸಕಲರ ಕರೆಯಲುಕಕುಲಾತಿತೀರದೆನಕುಲನ ವರುಷ ಕರೆದೆಲ್ಲನಕುಲನ ವರುಷ ಕರೆದೆಲ್ಲಅವಜರಿದುಯುಕ್ತಿಲೆಬ್ಯಾಗಕಡೆಯಾದ5ಸಹದೇವನೊಂದು ವರುಷ ಮೋಹಿಸಿ ಕರೆದೆಲ್ಲಸಹದೇವ ಹೇಸಿ ಜರೆದನುಸಹದೇವ ಹೇಸಿ ಜರೆದನುಆದೆಲ್ಲ ಹಲ್ಲಿ ಮರಿಯಂತೆ 6ಎಲ್ಲರ ಕರೆಯಲು ಒಲ್ಲದೆ ಜರೆದರುಅಲ್ಲವತಿಂದ ಇಲಿಯಂತೆಅಲ್ಲವತಿಂದ ಇಲಿಯಂತೆ ಮರುಗಲು
--------------
ಗಲಗಲಿಅವ್ವನವರು
ಭೀಮ ಶ್ಯಾಮ | ಕಾಮಿನಿಯಾದನೂ ಪಹೆಂಗಳೆ ನೂತನ ಶ್ರೀಂಗಾರವಾದನುಉಂಗುರಗೂದಲೊಳಿಂಗಿಸಿ ರಾಗಟಿ ||ಹಿಂಗೂವ ತೆರ ಕಳಿಂಗನ ವೇಣಿಗೆರಂಗನಿಕ್ಕಿದ ಚವುರಿಂಗೆ ಗೊಂಡೆಯೂ ||ತಿಂಗಳರ್ಧಾಫಣಿಮಂಗಾಳ ಕುಂಕುಮಕಂಗಳಿಗೆ ಕಪ್ಪು ಭಂಗಾರದೋಲಿಯು ||ಜಂಗು ಬ್ಯಾಳೀ ಸರ ಅಂಗಾಜ ಸತಿಯಭಂಗೀಪ ಚಲುವ ಅಂಗವಾದ 1ಏಕಾವಳಿಸರ ತೂಕದ ಸರಿಗೆ |ಲೋಕದೊಳಿಲ್ಲದ ಬೇಕಾದ ಭಾಪುರೆ ||ಹಾಕೀದ ಚಿತ್ರ ಕಂಚೂಕವ ಬಿಗಿದ-ನೇಕಪರಿವಸ್ತವೂ ಕರಕೇ ||ಆ ಕಂಠೀರವನ ಸೋಲಿಪ ಕಟಿಪಟ್ಟಿಸೋಕೆಯಿಳೀ ಸೀರಿ ಮೂಖ ಹರಿದ್ರ ನಾ- |ಸೀಕಾದಿ ಮೂಗುತಿಯು ಕಟ್ಟಿದಾ ಗಿಳಿಯಾಕಾನಾ ಬಾವುಲಿಯೂ ಕಿವಿಗೇ 2ಲುಲ್ಲುರುಳೀ ಪದದಲ್ಲಿ ಕಡಗಾವುಘಲ್ಲೆಂಬೊ ಗೆಜ್ಜಿಯ ಬಲ್ಲೀದ ಶಬ್ದವು ||ಎಲ್ಲೆಲ್ಲಿ ಜಗದೋಳಿಲ್ಲದ ಪರೀಯಪಿಲ್ಲ್ಯಾವನ್ನು ಬಟ್ಟಿನಲ್ಲಿಟ್ಟಾನೋ ||ಕೊಲ್ಲೂವೆನುವ ಆವಲ್ಲಿಹನೆನುತಹಲ್ಲು ತಿನುತಾಲಿಸೊಲ್ಲುಸೊಲ್ಲೀಗೆ ತಾ |ಕುಲ್ಲೂತ ಪಾತಕಿದ್ದಲ್ಲಿಗೆ ನಡೆದನಿಲ್ಲಾದೆದನುಜದಲ್ಲಾಣನೂ 3(ಈ ಪದವನ್ನು ದಾಸರಾಯರ ಕೃತ ಭೀಮಸೇನ ವಿಲಾಸದಿಂದ ಸಂಗ್ರಹಿಸಿದೆ.)
--------------
ಪ್ರಾಣೇಶದಾಸರು
ಮಂಗಳಂಜಯಮಂಗಳಂ ಪ.ವಾತಸುತ ಹನುಮನ ಒಡೆಯಗೆ ಮಂಗಳದಾತ ಶ್ರೀ ರಘುಪತಿಗೆ ಮಂಗಳ ||ಸೇತುವೆಗಟ್ಟಿದ ರಾಯಗೆ ಮಂಗಳಸೀತಾರಮಣಗೆಶುಭಮಂಗಳ1ಬಿಲ್ಲ ಹಿಡಿದು ಬಲು ಬಿಂಕದ ದೈತ್ಯರಹಲ್ಲ ಮುರಿದವಗೆ ಮಂಗಳ |ಕಲ್ಲಾದಹಲ್ಯೆಯನುದ್ಧಾರ ಮಾಡಿದಬಲ್ಲಿದದಾಶರಥಿಗೆ ಮಂಗಳ2ಹರಧನು ಮುರಿದ ವಿನೋದಿಗೆ ಮಂಗಳವರದ ತಿಮ್ಮಪ್ಪಗೆ ಮಂಗಳ ||ಪುರಂದರವಿಠಲರಾಯಗೆ ಮಂಗಳಸರುವೋತ್ತಮನಿಗೆ ಶುಭಮಂಗಳ 3
--------------
ಪುರಂದರದಾಸರು
ಮರೆಯದಿರೆಲೆ ಮನವಿಲ್ಲಿ - ಯಮಪುರಿಗೆ ಒಯ್ದು ಬಾಧಿಸುತಿಹರಲ್ಲಿ ಪ.ಪರನಾರಿಯರ ಸಂಗವಿಲ್ಲಿ - ಉಕ್ಕುಎರೆದ ಸತಿಯರ ತಕ್ಕೈಸುವರಿಲ್ಲಿಗುರು - ಹಿರಿಯರ ನಿಂದೆಯಿಲ್ಲಿ - ಬಾಯೊಳೆರದು ಸೀಸವ ಕಾಸಿ ಹೊಯಿಸುವರಿಲ್ಲಿ 1ಉಂಡ ಮನೆಯ ಕೊಂಬುದಿಲ್ಲಿ - ಎದೆಗುಂಡಿಗೆಯನು ಸೀಳಿ ಕೊಲುತಿಹರಲ್ಲಿಗಂಡನ ದಣಿಸುವುದಿಲ್ಲಿ - ಯಮಕುಂಡದೊಳಗೆ ಹಾಕಿ ಕುದಿಸುವರಲ್ಲಿ 2ಚಾಡಿಯ ಹೇಳುಸುದಿಲ್ಲಿ - ನುಡಿದಾಡುವ ನಾಲಿಗೆ ಕೇಳುವರಲ್ಲಿಬೇಡಿದರಿಗೆ ಧರ್ಮವಿಲ್ಲಿ - ಇದನೀಡದಿರಲು ಒದ್ದು ನೂಕುವರಲ್ಲಿ 3ಪುಸಿ - ಠಕ್ಕು - ಠವುಳಿಗಳಲ್ಲಿ -ಕಟ್ಟಿಎಸೆದು ಕೊಲ್ಲುವರೊ ನಿನ್ನವರು ಕೇಳಿಲ್ಲಿಅಶನಪ್ರಭದಿಗಳಲ್ಲಿ - ಮಾಡೆಬಿಸಿಯ ಕೆಂಡವ ತಂದು ತಿನಿಸುವರಲ್ಲಿ 4ಸಿರಿಮದದೊಳಗಿಹುದಿಲ್ಲಿ - ಸೊಕ್ಕಮುರಿದು ಹಲ್ಲುಗಳ ಕಳಚುವರಲ್ಲಿಪುರಂದರವಿಠಲನ ಇಲ್ಲಿ - ನೆನೆಯಸ್ಥಿರವಾದ ಮುಕುತಿ ಪಡಕೊಂಬುವರಲ್ಲಿ 5
--------------
ಪುರಂದರದಾಸರು
ಮಹಾದಾದಿದೇವ ನಮೋ ಮಹಾಮಹಿಮನೆ ನಮೋಪ್ರಹಲ್ಲಾದವರದ ಅಹೋಬಲ ನರಸಿಂಹ ಪ.ತರಣಿಗುಬ್ಬಸವಾಗೆ ತಾರಾಪತಿಯು ನಡುಗೆಸುರರು ಕಂಗೆಟ್ಟೋಡೆ ನಭವ ಬಿಟ್ಟು ||ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ 1ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ ||ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿಬಿಡದೊಡಲ ಬಗೆದ ಕಡುಗಲಿ ನಾರಸಿಂಹ 2ಸರಸಿಜೋದ್ಭವ ಹರ ಪುರಂದರಾದಿ ಸಮಸ್ತಸುರರು ಅಂಬರದಿ ಪೂಮಳೆಗರೆಯಲುಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನುಕರುಣಿಸುವ ಪುರಂದರವಿಠಲ ನಾರಸಿಂಹ 3
--------------
ಪುರಂದರದಾಸರು
ಮಾಧವಮಧುಸೂದನ- ಯಾದವಕುಲರನ್ನ ಯ-|ಶೋದೆ ಕರೆದಳು ಬಾರೆಂದು- ಮುದ್ದಿಸಿ ಮಗನ ಪಸಂಗಡಿಗರನೆಲ್ಲ ಬಿಟ್ಟು ಬಾರೈ ಚೆಲುವ |ಮುಂಗೈಯವಾಕು ಬೆರಳ ಹೊನ್ನುಂಗರ ||ಝಂಗಿಪ ಹುರಿಗೆಜ್ಜೆ ಉಡೆದಾರವನು ಕಂಡು |ಅಂಗನೆಯರು ನಿನ್ನನೊಯ್ವರೊ ||ಕಂಗಳ ಸಿರಿಯೆ ನೀ ಕಲ್ಪವೃಕ್ಷವೆ ಎಂದು |ಡಿಂಗರಿಗರು ಕಂಡರೆ ಬಿಡರೊ ನಿ- ||ನ್ನಂಘ್ರಿಯ ಮೇಲೆ ನೊಸಲನಿಡುವೆ ಕೃಷ್ಣ |ಕಂಗಳ ಸಿರಿಯೆ ಬಾರೋ- ರಂಗಯ್ಯ 1ಬಾಲಕರೊಡನಾಟ ಸಾಕು ಬಾ ಬಾರೈಯ |ನೀಲಾಂಗ ನಿನ್ನ ಮುಂದಲೆ ಮುತ್ತಿನರಳೆಲೆ ||ಕೀಲುಮಾಗಾಯಿ- ಮಾಣಿಕ ಪುಲಿಯುಗರ ಕಂಡು |ಸೋಲ್ವರೊ ನಿನಗೇಸೋ ಸೋಗೆಯರು ||ಶ್ರೀಲೋಲ ನಿನ್ನಲಿ ಕಂಸನ ತುಂಬಿದೊ-|ಡ್ಡೋಲಗದೊಳು ರಕ್ಕಸರು ಪಂಥವನಾಡೆ ||ವೀಳ್ಯವ ಪಿಡಿದೆ ಕೊಲುವೆನೆಂದು ನಿನ್ನಯ |ಕಾಲಿಗೆ ಎರಗುವೆ ಬಾರೊ-ರಂಗಯ್ಯ 2ಬೊಮ್ಮದ ಮರಿಯೆ ವಿಶ್ವವನೆಲ್ಲ ಹೃದಯದೊ-|ಳೊಮ್ಮೆ ತೋರುವನೆಂದು ಕಂಡು ನಾ ಬಲ್ಲೆ ||ಎಮ್ಮ ಮನಕೆ ಅಹಲ್ಲಾದನು ನೀನೆ |ಉಮ್ಮಯದಿಂ ಭಾಗವತರ ಪಾಲಿಸುತಿಪ್ಪ-||ಗಮ್ಯಗೋಚರ ಸಿರಿಪುರಂದರವಿಠಲ ತೊರೆ-|ದಮ್ಮೆಯ ಕೊಡುವೆನು ಬಾರೋ-ರಂಗಯ್ಯ 3
--------------
ಪುರಂದರದಾಸರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮಾರಿಯನು ತೋರುತಿಹೆನು ಅದನೀಗನಾರಿ ಎಂದೆಂಬರಯ್ಯಪಸೀರೆ ಕುಪ್ಪಸವನುಟ್ಟುಸಿಂಗರದಿ ತೋರ ಕಂಕಣವನಿಟ್ಟು ಅಯ್ಯಮೂರಳೆಯಕಟ್ಟಾಣಿಕಟ್ಟಿಯೇಮೋರೆ ಮುರಕಿಸುತಿಹುದು ಅಯ್ಯ1ಚಳ್ಳತುಂಬುಗಳಿಂದಚವುರಿ ಬೆಳ್ಳಿಯ ಬಳೆಗಳಿಂದ ಅಯ್ಯಮುಳ್ಳು ಗಜ್ಜೆಗಳ ಧರಿಸಿ ಮನೆಯೊಳಗೆಹಲ್ಲು ಕಡಿಯುತಲಿಹುದು ಅಯ್ಯ2ಓಲೆ ಮಾಡಿಸು ಎಂಬುದುವರಹಕೆ ಬಾಳುವೆ ನೋಡಿರಿ ಎಂಬುದಯ್ಯಹೇಳುವುದು ಕಿವಿಯೊಳಗೆ ಲೋಭಕಾಲು ಕೈ ತಿರುಹುವುದು ಅಯ್ಯ3ಕರೆಕರೆಯ ಮಾಡುತಿಹುದು ತಾಯಿಯಹೊರಡಿಸು ಮನೆಯಿಂದಲೆಂಬುದಯ್ಯಹರನ ಚಿಂತೆಗೆ ಹಾನಿಯು ಇದರಿಂದನರಕ ಬಹಳವ ತಿರುಗುವೆ ಅಯ್ಯ4ನಾರಿಯೆನಿಸಿಹುದೆ ಮೃತ್ಯುಇದನೀಗ ದೂರ ಮಾಡಿದನಾದರೆ ಅಯ್ಯಸೇರುವುದು ಸರ್ವಮುಕ್ತಿಚಿದಾನಂದನಿರೆ ತಾನೆಯಹುದು ಅಯ್ಯ5
--------------
ಚಿದಾನಂದ ಅವಧೂತರು
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಮುಕ್ತನಾಗುವೆನಿತ್ಯಮುಕ್ತನಾಗುವೆಭಕ್ತಿಯಿಟ್ಟು ಗುರುವಿನಲ್ಲಿ ಭಜಿಸಿ ಬಗಳೆ ನೀನೆಯಾಗಿಪಮುರುಕಿ ಮೂಳಿಯರ ಜೊಲ್ಲು ಮಧುವೆಂದು ಸವಿದಂತೆಹಿರಿಯರಂಘ್ರಿ ತೀರ್ಥವನು ಕುಡಿದು ತೃಪ್ತನಾಗೋ ನೀನು1ಏಣಲೋಚನೆಯನ್ನು ನೀನು ಬಿಡದೆ ಬಿಡದೆ ನೋಡಿದಂತೆಜ್ಞಾನಿಗಳ ಮೂರ್ತಿಯನ್ನು ಘಳಿಗೆ ಘಳಿಗೆ ನೀನು ನೋಡೋ2ಕಾಮ ಕೇಳಿಗಾಗಿ ಹಲ್ಲ ಕಿರಿದು ಕಾಲಿಗೆರಗಿದಂತೆಪಾಮರೋದ್ಧಾರನಾದ ಗುರುಪದಕ್ಕೆ ಶರಣು ಹೋಗೋ3ನಾರಿಯಲ್ಲಿ ಲೋಲನಾಗಿ ನೀಚಮಾತು ಕೇಳಿದಂತೆವೀರ ಸಾಧು ತತ್ವವನ್ನು ವಿವರವಾಗಿ ನೀನು ತಿಳಿಯೋ4ಚದುರೆ ಮೇಲೆ ನಿನ್ನ ಚಿತ್ತ ಚದುರದಂತೆ ಇದ್ದ ಹಾಗೆಚಿದಾನಂದ ಬಗಳೆಯಲ್ಲಿ ನೆಲಸೆ ಚೇತನಾತ್ಮ ಶುದ್ಧನಹೆಯೋ5
--------------
ಚಿದಾನಂದ ಅವಧೂತರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
--------------
ಪ್ರಸನ್ನವೆಂಕಟದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ವಾಸುದೇವ ನಿನ್ನವರ್ಮ ಕರ್ಮಂಗಳದೇಶ ದೇಶದೊಳು ಹೇಳಲೆ ? ಪಬೇಸರಿಯದೆ ಎನ್ನ ಹೃದಯ ಕಮಲದಲ್ಲಿವಾಸವಾಗಿ ಸುಮ್ಮನಿರುವೆಯೊ ? ಅ.ಪಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆ ಮೆಚ್ಚಿಕೊಟ್ಟದ್ದು ನಾ ಹೇಳಲೆ 1ಕಡಗೋಲು ಮಂಡೆಯಂದದಿ ಕೈಕಾಲು ಮುದುಡಿಕೊಂಡದ್ದು ನಾ ಹೇಳಲೆ ?ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ 3ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯ ಬೇಡಿದುದನು ಹೇಳಲೆ ?ಲೀಲೆಯಿಂದಲಿ ಧರೆಯಈರಡಿ ಮಾಡಿದ ಜಾಲತನ್ವನುನಾನು ಹೇಳಲೆ5ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯ ಪಿಡಿದದ್ದು ಹೇಳಲೆ ?ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡ ದೋಷತನವ ನಾನು ಹೇಳಲೆ 6ತಾಯ ಮಾತನೆಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ? 7ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದ ಸುದ್ದಿ ಹೇಳಲೆ 8.............................................................................................................................................................................. 9ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವ ಪಿಡಿದದ್ದು ಹೇಳಲೆ ?ಆಯತದಿಂದ ಕಲಿಯಲಿದ್ದು ಮನುಜರ ಮಾಯವ ತೋರಿದ್ದು ಹೇಳಲೆ 10ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?ಕರುಣದಿಂ ಭಕುತರ ಪುರಂದರವಿಠಲನೆಂದು ನಾ ಹೇಳಲೆ 11 *
--------------
ಪುರಂದರದಾಸರು