ಒಟ್ಟು 990 ಕಡೆಗಳಲ್ಲಿ , 88 ದಾಸರು , 714 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕರ್ಮವ ಮಾಡಿ ನಾ ನಿನ್ನ ಒಲಿಸಲಿ ಶ್ರೀನಿವಾಸ ಧ್ಯಾನಕೆ ನಿಲುಕದ ಜ್ಞಾನಿಗಳರಸ ನೀನು ಶ್ರೀನಿವಾಸ ಪ ಗಂಗೆಯ ತಂದು ಮಂಗಳಸ್ನಾನ ಮಾಡಿಸೆ ಶ್ರೀನಿವಾಸ ಗಂಗೆಯು ನಿನ್ನಂಗುಷ್ಟದಲ್ಲಿಹಳಲ್ಲೊ ಶ್ರೀನಿವಾಸ 1 ಮನಮೆಚ್ಚುವಂತೆ ನಿನ್ನ ಸುಮಗಳಿಂದರ್ಚಿಪೆನೆ ಶ್ರೀನಿವಾಸ ವನಜ ಪುಷÀ್ಪವು ನಿನ್ನ ನಾಭಿಯೊಳಿಹುದಲ್ಲೋ ಶ್ರೀನಿವಾಸ 2 ಅಂಗಿವಸ್ತ್ರಗಳಿಂದ ಶೃಂಗರಿಸುವೆನೆಂದರೆ ಶ್ರೀನಿವಾಸ ಅಂಗನೆ ಲಕುಮಿ ಸಕಲಾಭರಣಂಗಳಾಗಿರುವಳಲ್ಲೊ ಶ್ರೀನಿವಾಸ 3 ಅನ್ನ ಪಾನಗಳಿತ್ತು ಧನ್ಯನಾಗುವೆನೆ ಶ್ರೀನಿವಾಸ ಅನ್ನಪೂರ್ಣಿ ಷಡುರಸದನ್ನವ ಮಾಳ್ಪಳಲ್ಲೊ ಶ್ರೀನಿವಾಸ 4 ಕಡುಭಕ್ತಿಯಿಂದ ನಿನ್ನಡಿ ಸೇವೆ ಮಾಳ್ಪೆನೆ ಶ್ರೀನಿವಾಸ ಎಡಬಿಡÀದೆ ಹನುಮ ನಿನ್ನಡಿಯ ಪಿಡಿದಿಹನಲ್ಲೊ ಶ್ರೀನಿವಾಸ 5 ಜಗದುದರ ನಿನ್ನ ಬಗೆ ಬಗೆ ನಾಮಗಳ ಸ್ತುತಿಸೆ ಶ್ರೀನಿವಾಸ ಅಗಣಿತವಾಗಿಹುದು ಮುಗಿಯದಂತಿಹುದಲ್ಲೊ ಶ್ರೀನಿವಾಸ6 ಶ್ರಿಷ್ಟಿಕರ್ತ ಶ್ರೀ ರಂಗೇಶವಿಠಲನೆ ಎಂಬೆ ಶ್ರೀನಿವಾಸ ಇಷ್ಟೆಂದ ಮಾತ್ರಕೆ ಒಲಿದಿಷ್ಟವ ಸಲಿಸೈಯ್ಯಾ ಶ್ರೀನಿವಾಸ 7
--------------
ರಂಗೇಶವಿಠಲದಾಸರು
ಏನು ಗಳಿಸಿದ್ಯೊ ಪ್ರಾಣಿ ಜ್ಞಾನಕ ಮಾಡಿ ನೀ ಹಾನಿ ಧ್ರುವ ಶಬ್ಧಜ್ಞಾನದ ಅಂಗಡಿನೀ ಹಾಕಿ ಲುಬ್ದಿಸಿದೊ ಬಲು ಪಾಕಿ ಲಬ್ದಾಲಬ್ಧಿಯು ತಿಳಿಯದೆ ಡೊಂಕಿ ಸ್ತಬ್ಧನಾದ್ಯೊ ವಿಶ ಸೋಂಕಿ 1 ವಿದ್ಯಾ ವ್ಯುತ್ಪತ್ತಿ ತೋರಿ ನೀ ಬಹಳ ಸದ್ಯಮಾಡಿದ್ಯೊ ತಾಳ ಮೇಳ ಸಿದ್ಧಾಂತನುಭವ ನೀ ಮಾಡಿ ಹಾಳ ಕೋಳ 2 ಗಳಿಸುವದೇನೆಂದರಿಯದೇ ಖೂನ ಬಾಳಿ ಬದುಕಿ ಪಡದೇನ ಬೆಳಗು ಬೀರುತಿರೆ ಮಹಿಪತಿ ಗುರುಜ್ಞಾನ ತಿಳಕೊಬಾರದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ 1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ 2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ3
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ಮರುಳಾಗುವೆಯೇ ಎಲೆಮಾನವ ನಿನ್ನ ಮಾನಿನಿಯ ಗುಣಕೆ ನೀ ಹಿಗ್ಗಿ ಹಿಗ್ಗಿ ಪ ದಾನ ಧರ್ಮಗಳ ಕೊಡಬೇಕೆಂದರೊಡ ಬಡಲು ಹೀನ ಗುಣಗಳನೆ ತಾ ಸೇವಿಸುವಳು ಜ್ಞಾನ ಮೋಕ್ಷಾದಿಗಳ ಹಾದಿಯನುಕಟ್ಟಿ ಭವ ಕಾನನವನೆ ಹೊಗಿಸಿ ತೊಳಲಿಸುವಳು 1 ನರಕವನು ತನ್ನಲ್ಲಿ ನೆಲೆಮಾಡಿ ಕೊಂಡಿಹಳು ಪರಿಪರಿಯ ಮೋಹಗಳ ಬೀಸುತಿಹಳು ಸ್ಮರನ ಬಾಣವ ಮಾಡಿ ಸಾಲು ಗೊಲೆಕೊಲ್ಲುವಳು ಅರಿಯದವರಂತೆ ಮಿಣ್ಣಗೆ ಇರುವಳು 2 ತನ್ನಮನ ಬಂದಂತೆ ಚರಿಸುವಳು ಪಗಲಿರುಳು ಕನ್ನಗೊಯ್ಕರ ವೋಲು ಕೊರೆಯುತಿಹಳು ಭಿನ್ನಭಾವದಿ ನಡೆದು ಮನೆಯ ಪಾಲ್ಮಾಡುವಳು ಕಣ್ಣಿನೊಳು ಕಂಡೊಡವೆಗಳನಿರಿಸಳು 3 ಸುದತಿ ಯಾಕಾರೆ ಯಾಗಿಹಳು ನೋಯೆ ನುಡಿವಳು ಕಂಡ ಕಂಡವರೊಳು ಹೋಯೆಂದು ಕೂಗುವಳು ಶಿಕ್ಷಿಸಳು ನಿನ್ನನುರೆ ಬಾಯೊಳಗೆ ಭಯಬಿಡಿಸಿ ಹಾಗಿಸುವಳು 4 ಕಾಮ ಕ್ರೋಧಾದಿಗಳ ಕೀಲ ಬಲಗೊಳಿಸುವಳು ಪ್ರೇಮ ಗೆಡಿಸುವಳೆಲ್ಲ ಬಾಂಧವರನು ಭೂಮಿಯೋಳಗಧಿಕ ಭೀಮನ ಕೋಣೆ ಲಕ್ಷ್ಮೀಪತಿಯ ನೆನೆನೆನೆದು ಸಖಿಯಾಗು ಕಂಡ್ಯಾ 5
--------------
ಕವಿ ಪರಮದೇವದಾಸರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನು ವೈಭವವೊ ಶ್ರೀನಿವಾಸ ಧೊರೆಯೆನಿನ್ನದೇನು ವೈಭವವೊ ಪ ಸಿರಿಯು ತಾನೆ ನಿಂತು ನಿನ್ನನಿರುತ ಸೇವೆ ಗೈಯ್ಯುತಿಹಳೊಸರಸಿಜಾಸನಾದಿ ಸುರರುಕರವ ಮುಗಿದು ತುತಿಸುತಿಹರೂ 1 ನಾಗರಾಯ ದಿವ್ಯಾಸನನಾಗಿ ಹೆಡೆಯ ಛತ್ರ ಪಿಡಿವಯೋಗಿ ನಾರದ ತುಂಬುರಾರುರಾಗ ಮಾಡಿ ಹಾಡುತಿಹರೊ 2 ಗರುಡ ವಾಯು ಸುತರು ನಿನ್ನಪರಮ ವಾಹನರಾಗಿ ಬಹರುಸುರಮುನಿಗಳು ಸಕಲ ನರರುನಿರುತನಾಮ ಜಪಿಸುತಿಹರು 3 ಮಂಗಳ ವಾದ್ಯಗಳು ಮೊಳಗಿಮಂಗಳಾರುತಿಯಾಗಿ ಬೆಳಗಿತಿಂಗಳು ನೇಸರರು ದಿವ್ಯಮಂಗಳ ದೀವಟಿಗರಾಗಿ 4 ಅಮೃತ ನಿನ್ನ ಪಾನತೋರ ಭಕುತರಾಳೆ ಗದಗುವೀರನಾರಾಯಣನೆ ನಿನ್ನದೇನು ವೈಭವವೊ 5
--------------
ವೀರನಾರಾಯಣ
ಏನು ಹೇಳಲಿ ಕೂಸಿನ ಚರ್ಯಮಾನಿನಿ ಉಳಿದದ್ದ ಆಶ್ಚರ್ಯ ಪ ಪುಟ್ಟಿದೇಳನೆಯ ದಿನವೆ ಬಾಲಗ್ರಹ ಬಂದುಎಷ್ಟು ಕಾಡಿದಳು ನಮ್ಮಪ್ಪನಸೃಷ್ಟಿಪಾಲಕ ಸಿರಿವಿಷ್ಣು ದಯದಿಂದಕಷ್ಟ ಕಳೆದು ನಮ್ಮ ಕೂಸು ಉಳಿದಿತೇ 1 ಒಂದು ಮಾಸದ ಕೂಸು ಅಂದು ಬಂಡಿಯ ಕೆಳಗೆಹೊಂದಿಸಿ ಮಲಗಿಸಿದ್ದೆನೇ ನಾನುಅಂದು ಹಸಿದು ಮುಖದಿಂದ ಬೆರಳನೆ ಚೀಪಿಬಂಧ ಕಳೆದು ಹೀಂಗೆ ಬದುಕಿತೇ 2 ದುಷ್ಟತನವು ಬಹಳ ಎಂದು ಒರಳಿಗೆಕಟ್ಟಿಹಾಕಿದೆ ಇವನ ಒಂದಿನಾಬೆಟ್ಟದಂತೆರಡು ಮರಗಳು ಬೀಳಲು ಮಧ್ಯ ಪುಟ್ಟ ನಮ್ಮಪ್ಪ ಹ್ಯಾಂಗೆ ಬದುಕಿತೆ 3 ಅಂಗಳದೊಳಗೆ ಆಡುತ ಕುಳಿತಿದ್ದ ಕೂಸಿನಾ-ಮಂಗಳಾ ಘಾಳಿ ಬಂದೊಯಿತೆಅಂಗನೇರೆಲ್ಲರೂ ಅಳುತ ಕೂತೇವಲ್ಲೆ ನರ-ಸಿಂಗನಾ ಕರುಣದಿಂದುಳಿದಿತೆ 4 ನೀರು ಕುಡಿದು ಯಮುನೆ ಮೇಲೆ ಆಡಲು ಕೂಸುಘೋರ ಪಕ್ಷಿಯು ಬಂದು ನುಂಗಿತೆಪೋರರೆಲ್ಲರು ನೋಡಿ ಗಾಬರಿಯಾಗಲು ಮತ್ತೆಕಾರಿತವನ ಬಕ ಸೋಜಿಗವೆ 5 ಕತ್ತೆಗಳನು ಕೊಂದು ತಾಳಫಲವು ಗೋಪ-ಪುತ್ರರಿಗೆ ಉಣ್ಣ ಕೊಟ್ಟಿಹನಂತೆಚಿತ್ರಚರಿತನ ನಂದಬಾಲನ ಚರಿತೆ ಏಕಾವೃತದಿಂದಲಿ ಪೇಳಲಳವೇನೆ 6 ಕರುಗಳ ಕಾಯುತಿರಲು ವತ್ಸವೇಷದಿದುರುಳನೊಬ್ಬನು ಬಂದಿಹನಂತೆಅರಿಯದಾ ಕೂಸಿನಾ ಕಾಲ್ಪಿಡಿದುಬೆರಳ ಮರದ ಮೇಲಕ್ಕೆ ತೂರಿದನಂತೆ 7 ಏಳೇ ವರ್ಷದವ ಕೇಳೆ ಗೋವರ್ಧನಏಳು ದಿವಸ ಎತ್ತಿದನಂತೆಬಾಳುವ ಗೋಪಿಯರ ಪಾಲನೆ ಮಾಡಿದನೀಲವರ್ಣನ ಎಷ್ಟು ವರ್ಣಿಸಲೆ 8 ಬಾಲನಾದರು ನಿನ್ನ ಹಾಳು ದೈತ್ಯನ ಕೊಂದು ಬ-ಹಳ ಕುತ್ತುಗಳಿವೆ ಕೇಳಿದೇನೆಬಾಲಕರಿಬ್ಬರು ಲೋಲರಿಬ್ಬರು ನಮ್ಮ ಬಾಲಕರೇನೇ ಸ್ವರ್ಗಪಾಲನು ಇಳೆಯೊಳು ಉದಯಿಸಿದನೇ 9 ಮಂದಗಮನೆ ಎನ್ನ ಕಂದನಾಟಗಳನ್ನುಮಂದಿಯ ದೃಷ್ಟಿಯ ಭಯದಿಂದ ನಾನುಒಂದೂ ಹೇಳದೆ ಹೀಗಾನಂದ ಬಡುವೆನು ನಾನುಚಂದ್ರವದನೆ ರೋಹಿಣಿ ಕೇಳೆ 10 ಗೋಪಿ ಸುಖಿಸುತಿಹಳು 11
--------------
ಇಂದಿರೇಶರು
ಏನೆಂದ್ಹೇಳಲಿ ಸ್ವಾನುಭವದ ಸುಭೋಗ ಧ್ರುವ ಸುಖಗರುತದ ಶಿಖಾಮಧ್ಯ ಸಂತ್ರಾಧಾರಿ ಬೇಕಾದರೆ ನೋಡಿ ಷಕಚಕ್ರವೇರಿ ಏಕೋಮಯವಾಗ್ಯದ ವಸ್ತು ಒಂದೇ ಸರಿ ಲೋಕಪಾಲಕಸ್ವಾಮಿ ತಾ ಸಹಕಾರಿ 1 ಜುಮ್ಮು ಜುಮ್ಮುಗುಡುತದೆ ರೋಮಾಂಚಗಳು ಧಿಮಿ ಧಿಮಿಗುಡುತದೆ ನಾದಧ್ವನಿಗಳು ಕ್ರಮ ತಿಳಿದರೆ ಭಾಸುತದೆ ಸುಳಹುಗಳು ಸಂಭ್ರಮವಾದರು ಅನುಭವಿಗಳು 2 ಕಳೆ ಮಳೆಮಿಂಚು ತುಂಬೇದ ಬಲು ಬಹಳ ಹೊಳೆಯುತಲ್ಯದೆ ಸ್ವಸುಖದ ಕಲ್ಲೋಳ ಝಳಝಳಿಸುತ ಜ್ಯೋತಿರ್ಮಯ ಥಳಥಳ ತಿಳಕೊ ಮಹಿಪತಿ ಗುರುದಯದ ಸುಫಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆನ್ನುತ್ಹಳಿಯಲಿ ನಿನ್ನ | ನಾನಾವಿಧದಿ ಬೆಳಗುವ ಮಹಮಹಿಮನ ಪ ಸಾಗರ ನಿಲಯನೆಂದೆನಲೇ ನೀಗದ್ವೊಯ್ಕುಂಠ ಮೇಲು ಮಂದಿರನ ರಾಗದಿಂ ದ್ವಾರಕೆ ಪುರಮನೆಯವನೆನಲೇ ಯೋಗದಿಂದಣುರೇಣುತೃಣದಿ ವ್ಯಾಪಕನ 1 ಪನ್ನಂಗ ಹಾಸಿಗೆ ಮಾಡಿಹ್ಯನೆನಲೇ ಉನ್ನತ್ಹಾಸಿಗೆಯ ಮೇಲೆ ಮಲಗಿಕೊಳ್ವವನ ಭಿನ್ನವಿಲ್ಲದೆ ದರ್ಭೆಶಾಯಿಯೆಂದೆನಲೇನು ಚಿನ್ನಮಂಚದ ಮೇಲೆ ಲೋಲ್ಯಾಡುವವನ 2 ಹೊಟ್ಟಿಗ್ಹುಲ್ಲ ತಿಂದವನೆನಲೇ ಶಿಷ್ಟ ದಿವಿಜರಿಟ್ಟ ಮೃಷ್ಟಾನ್ನುಣ್ವವನ ಕೊಟ್ಟ ಹಣ್ಣಿನ ತೋಟ ಹಸಿದು ತಿಂದವನೆನೆ ಸೃಷ್ಟಿ ಈರೇಳಕ್ಕೆ ಅನ್ನ ಕೊಡುವವನ 3 ಅಸುಬಿಟ್ಟ ದಿಕ್ಕಿಲ್ಲದನೆನಲೇ ಅಸಮಲಬಲವುಳ್ಳಂಥ ಯಾದವಾರ್ಯನ ಕುಸುಮನಾಭಂಗೆ ಸಂಸಾರಿಯೆಂದೆನಲೇನು ಎಸೆವ ಪರವಸ್ತು ನಿರ್ಬಯಲು ನಿರ್ಮಯನ 4 ಅಳವಲ್ಲ ಎನಗೆ ನಿನ್ನ ವೊಲಿರೆ ದಿವ್ಯ ಮಹಿಮೆ ತಿಳಿಯುವ ತ್ರಾಣ ಒಲಿದು ಚರಣದಾಸರಾಳಾಗಾಳುವೆನೆಂದು ಇಳೆಯೊಳು ಸಾರುವೆ ನಳಿನಾಕ್ಷ ಶ್ರೀರಾಮ 5
--------------
ರಾಮದಾಸರು
ಏನೆಲೆ ಸಖಿ ವಾನರ ಮುಖಿ ನೀನು ಒಳ ಒಳಗೆ ಮಾಡಿದ ಯೋಚನೆ ಪ ಹಳೆಯ ಜೌಳಿಗಳು ಘಳಿಲನೆ ತಂದಿಟ್ಟು ಘನವ ಪೇಳಿಕೊಂಬೆ 1 ಭಕ್ಷ್ಯ ಭೋಜ್ಯ ನಿನ್ನ ಕುಕ್ಷಿ ತುಂಬಿದಾರು ಲಕ್ಷ್ಯವಿಲ್ಲದೆ ನಮ್ಮಾ- ನಾಕ್ಷೇಪಿಸುತ್ತಿರುವೆ 2 ಹಪ್ಪಳಾವು ಹತ್ತು ಹೋಳಿಗೆ ಇಪ್ಪತ್ತು ತಪ್ಲೇಲಿ ತಿಳಿ ತುಪ್ಪ ತಪ್ಪದೆ ಮಾಯವಾಯ್ತು 3 ಬಡವರಮ್ಮ ನಾವು ಬಡಿವಾರವೆಮಗಿಲ್ಲ ನಡುಬೀದಿಗೆ ಕಾಲ- ಚಾಚದಿರತ್ತಿಗೆ 4 ಜಲಜಾಕ್ಷ ಗುರುರಾಮ | ವಿ- ಠಲನಾ ಸ್ಮರಿಸುತ್ತಾ ಕಲಹಕಾರಿ ನೀನು ಎಲೆಯ ನೋಡಿವುಣ್ಣೆ 5
--------------
ಗುರುರಾಮವಿಠಲ
ಏಸುಬಾರಿ ಬೇಡಿದರೆ ಹೇಗಾಯಿತು ಹರೇ ವಾಸುದೇವನೆ ನಿನ್ನ ಧ್ಯಾನಕೆ ಸರಿಬಾರದಿರೆ ಪ ಪರಿ ಘಾಸಿಗೊಳಗಾಗಿ ಬಹು ಕ್ಲೇಶದಿಂದಲಿ ನಿನ್ನ ಆಶಿಸಿದವನಾ ಭೂಸುರ ಧೊರಿಯೆ ಶ್ರೀನಿವಾಸ ವೇಣುಗೋಪಾಲ ಕೂಸಿನಂದದಿ ಎತ್ತಿ ಪೋಷಿಸುವುದು ನಿನಗೆ ಹುಟ್ಟದೊ 1 ಸಂಸಾರ ವೆಂಬಂಥ ಶರಧಿಯೊಳು ಮುಳುಗಿ ಬಹು ಹಿಂಸೆ ಬಡುತಲಿ ಬಹಳ ಹೀನನಾಗಿ ಕಂಸಮರ್ದನನಾದ ಘನಮಹಿಮಗೋವಿಂದ ಸಂಶಯವಿಲ್ಲದೆ ನಿಮ್ಮ ಸ್ಮರಿಸುತಲಿ ಅನುದಿನವೂ 2 ಅಘಹರನೆ ನಗಧರನೆ ಆದಿ ಪರಾಕ್ರಮನೆ ನಿಗಮಗೋಚರನಾದ ಘನ 'ಹೊನ್ನ ವಿಠ್ಠಲ 'ನೆ ಜಗತ್ಕರ್ತನೆ ನಿನ್ನ ಚಿಂತನೆಯೆ ಅನುದಿನವೂ ಕರುಣಹುಟ್ಟದೇನು 3
--------------
ಹೆನ್ನೆರಂಗದಾಸರು
ಏಳಮ್ಮ ತಾಯೆ ಮುದದಿಂದೆಮ್ಮನು ಕಾಯೆ ಕೋಳಿ ಕೂಗುತಲಿದೆ ಕೇಳಮ್ಮಯ್ಯಾ ಪ ಕಾಲನಾಮಕ ಸೂರ್ಯದೇವನ ರಥದ ಕೆಂ- ಧೂಳಿಯೇಳುವಂತೆ ಅರುಣೋದಯವಾಯ್ತು ಅ.ಪ. ಮರುತಸುತನೆದ್ದು ಪರಾಕ್ಹೇಳುತಿಹನು ಗರುಡನು ಹೊರಬಾಗಿಲೊಳು ಕಾದಿರುವನು ಪರಿವಾರದವರೆಲ್ಲ ಕರಕಟ್ಟಿ ನಿಂದಿಹರು ಹಿರಿಯ ಸೊಸೆ ವಾಣಿ ವಾರಿ ಕಲಶ ಪೊತ್ತಿಹಳು1 ಸಾರಭಕ್ತರು ಎಲ್ಲ ಸಾಲಾಗಿ ನಿಂದಿಹರು ಭೂರಿ ಕುತೂಹಲದಿ ನಿನ್ನ ದರುಶನಕಾಗಿ ವಾರಿಜಭವ ಮುಖ್ಯ ಸರುವ ದೇವತೆಗಳು ಸಾರಿ ಬರುತಿರುವರು ನೀನೇಳಮ್ಮಯ್ಯಾ 2 ನೀ ಪೋಗಿ ಆತನ ಕರಪಿಡಿದೆಬ್ಬಿಸಾದೊಡೆ ಶ್ರೀಪತಿಯು ಶೇಷತಲ್ಪದಿಂದೇಳನು ಅಪಾರಮಹಿಮ ಶ್ರೀ ರಂಗೇಶವಿಠಲನ ವ್ಯಾಪಾರಂಗಳನರಿತವರಿನ್ನ್ಯಾರಮ್ಮ 3
--------------
ರಂಗೇಶವಿಠಲದಾಸರು
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ