ಒಟ್ಟು 489 ಕಡೆಗಳಲ್ಲಿ , 70 ದಾಸರು , 393 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜನಿಸಿ ನಾ ಬುವಿಯೊಳು ನಿನಗೆ ದುಡಿಯುವುದಾಯ್ತು ಎನಗೇನುಫಲ ಪೇಳು ಮಾಯವೆ ಎಲೆ ಜೀವವೆ ಪ ನಿನಗೆ ನೀ ದುಡಿಯುವಿ ಎನಗೆ ದುಡಿಯುವುದೇನು ದಿನಸರಿಯದೆನುವುದು ನ್ಯಾಯವೆ ಎಲೆ ಕಾಯವೆ ಅ.ಪ ಘನರೋಗ ತಾಪತ್ರವನುಭವಿಸುವುದೆಲ್ಲ ನಿನಗಾಗಲ್ಲೇನು ಪೇಳು ಮಾಯವೆ ಎಲೆ ಜೀವವೆ ನಿನಗೆ ಬಂದ ಕರ್ಮವನುಭವಿಪೆಯಲ್ಲದೆ ಎನಗಾಗೆನುವುದು ನಿಜನ್ಯಾಯವೆ ಎಲೆ ಕಾಯವೆ 1 ಬನ್ನ ಬಡುವೆನಲ್ಲ ಕರ್ಮ ಮಾಯವೆ ಎಲೆ ಜೀವವೆ ಎನ್ನ ಜೋಪಾನವು ನಿನ್ನಿಂದಲೆಂಬುವುದು ಮಣ್ಣುಗೊಂಬೆ ನಿನಗೆ ನ್ಯಾಯವೆ ಎಲೆ ಕಾಯವೆ 2 ಚಳಿಮಳೆಬಿಸಿಲಿನ ಬಲುತಾಪದಲಿ ನಿನ್ನ ಸಲಹುವರಾರ್ಹೇಳು ಮಾಯವೆ ಎಲೆ ಜೀವವೆ ಚಳಿಮಳೆಬಿಸಿಲಿನ ಬಲುತಾಪ ಎನಗೆಲ್ಲಿ ಎಲುವಿನ್ಹಂದರ ನಿಂದೀನ್ಯಾಯವೆ ಎಲೆ ಕಾಯವೆ 3 ಭಿನ್ನ ಮಾತುಗಳೇನೋ ಮಾಯವೆ ಎಲೆ ಜೀವವೆ ನಿನ್ನದು ದಾವೂರು ನನ್ನದು ದಾವೂರು ಎನ್ನ ಸರಿಗಟ್ಟುವುದು ನ್ಯಾಯವೆ ಎಲೆ ಕಾಯವೆ 4 ನಾನಿಲ್ಲದಿರೆ ನಿನ್ನ ಖೂನವರಿವರಾರು ನೀನೆ ಪೇಳೆಲೋ ನಿಜ ಮಾಯವೆ ಎಲೆ ಜೀವವೆ ಹೀನನೆ ನೀನೆನ್ನ ಖೂನವರಿಯದೆ ಬಿನಗು ಶ್ವಾನನಂತೊದರುವುದು ನ್ಯಾಯವೆ ಎಲೆ ಕಾಯವೆ 5 ಹೊನ್ನೂ ಹೆಣ್ಣು ಮಣ್ಣು ಎನ್ನಿಂದ ಪಡೆದು ನೀ ಧನ್ಯನೆನಿಸುವೆಯಲ್ಲ ಮಾಯವೆ ಎಲೆ ಜೀವವೆ ನಿನ್ನಗದರ ಫಲ ಎನ್ನಗೇನೆಲೆ ಪಾಪಿ ನಿನ್ನ ಮೋಹಿಸಿ ನಾನು ಕೆಡುವೆ ಎಲೆ ಕಾಯವೆ 6 ಎನ್ನಿಂದ ಕೆಡುವೆನೆಂಬನ್ಯವಾದವು ಬೇಡ ನಿನ್ನದೆಲ್ಲವ ಬಲ್ಲೆ ಮಾಯವೆ ಎಲೆ ಜೀವವೆ ಬನ್ನ ಬಡುವೆ ಸತತ ಎನ್ನನರಿವುದು ನಿನ್ನಗಳವೇ ಎಲೆ ಕಾಯವೆ 7 ಹೇವನಿನಗ್ಯಾಕಿಷ್ಟು ಸಾವುತ್ಹುಟ್ಟುತ ನೀನು ನೋಯುವುದ ಬಲ್ಲೆ ನಾ ಮಾಯವೆ ಎಲೆ ಜೀವವೆ ಹೇವದಮಾತಲ್ಲ ಸಾವುಹುಟ್ಟೆನಗಿಲ್ಲ ಕೇವಲನಾದಿಕಾಲದಿರುವೆ ಎಲೆ ಕಾಯವೆ 8 ಕೇವಲನಾದಿಯು ಜೀವ ನೀನಾದರೆ ದೇವರೆ ನೀನಿದ್ದಿ ಮಾಯವೆ ಎಲೆ ಜೀವವೆ ದೇವರು ನಾನಲ್ಲ ದೇವ ಶ್ರೀರಾಮನ ಕೇವಲದಾಸ ನಾನಿರುವೆ ಎಲೆ ಕಾಯವೆ 9
--------------
ರಾಮದಾಸರು
ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ಜಯತು ಜಯತು ಜಯತೆಂಬೆನು ವಿಠಲ ಭಯನಿವಾರಣ ನಿರಾಮಯ ನೀನೆ ವಿಠಲಪ. ಮನವೆನ್ನ ಮಾತ ಕೇಳದು ಕಾಣೊ ವಿಠಲ ಮನಸಿಜನಾಯಸ ಘನವಾಯ್ತು ವಿಠಲ ನಿನಗಲ್ಲದಪಕೀರ್ತಿಯೆನಗೇನು ವಿಠಲ ತನುಮನದೊಳಗನುದಿನವಿರು ವಿಠಲ1 ಕದನ ಮುಖದಿ ಗೆಲುವುದ ಕಾಣೆ ವಿಠಲ ಮದನ ಮುಖ್ಯಾದಿ ವೈರಿಗಳೊಳು ವಿಠಲ ವಿಧವಿಧದಿಂದ ಕಷ್ಟಪಟ್ಟೆನು ವಿಠಲ ಇದಕೇನುಪಾಯ ತೋರಿಸಿ ಕಾಯೋ ವಿಠಲ2 ಹುಟ್ಟಿದೆ ನಾನಾ ಯೋನಿಗಳೊಳು ವಿಠಲ ಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲ ಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲ ಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ3 ಬಂಗಾರ ಭಂಡಾರ ಬಯಸೆನು ವಿಠಲ ಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲ ರಂಗ ರಂಗನೆಂಬ ನಾಮದಿ ವಿಠಲ ಭಂಗವ ಪರಿಹರಿಸಯ್ಯ ನೀ ವಿಠಲ4 ಏನು ಬಂದರೂ ಬರಲೆಂದಿಗು ವಿಠಲ ಮಾನಾವಮಾನ ನಿನ್ನದು ಕಾಣೊ ವಿಠಲ ನಾನು ನಿನ್ನವನೆಂದು ಸಲಹಯ್ಯ ವಿಠಲ ಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಾತಿಭ್ರಷ್ಟ ಹೊಲೆಮಾದಿಗರಿವರಲ್ಲವೇನೋ ನೀತಿಬಾಹಿರರಾಗಿ ಆಚರಿಸುವವರು ಪ ಪನ್ನಂಗಶಯನ ಉನ್ನತ ಕತೆ ಕೀರ್ತ ನ್ಯನ್ನು ಕೇಳೆನೆ ಮುಖವನ್ನು ಹಿಂತಿರುವಿ ಭಿನ್ನ ಬೇಸರಿಲ್ಲದೆ ಅನ್ಯಜನ ಸುದ್ದಿಯೊಳು ಕುನ್ನಿಯಂದದಿ ದಿನಗಳನ್ನು ಕಳೆವವರು 1 ಆಲಯದ ಸತಿಯಳ ತಾಳದೆ ತುಸುತಪ್ಪು ತಾಳಿಯನ್ಹರಕೊಂಡು ದಾಳೀಯ ಹೊಡೆದು ಮೇಲುಜಾತಿಲಿ ಹುಟ್ಟಿ ಕೀಳು ಸೂಳೇರಿಗೊಲಿದು ಹೇಳಿದತೆರ ಕುಣಿದು ಬೀಳುಗಳೆವವರು 2 ಸದ್ಧರ್ಮಕಾರ್ಯಕ್ಕೆ ಇದ್ದುದ ಸಲ್ಲಿಸೆನಲು ಕದ್ದು ತಂದುಕೊಡುವೆವೆಂದಬದ್ಧ ನುಡಿಯುವವರು ಬದ್ಧ್ದ........ಬಂದು ಒದ್ದು ಕೂಡ್ರಿಸಲಾಗ ಸದ್ದಿಲ್ಲದೆ ತಂದು ಬೇಡಿದ್ದು ಕೊಡುವವರು 3 ಜ್ಞಾನಿಗಳು ಬಂದರೆ ಗೋಣೆತ್ತಿನೋಡದೆ ಹೀನಜನರಿಗೆ ಬಹುಮಾನ ಕೊಡುವವರು ಧ್ಯಾನ ದಾಸರ ತರದಿ ಜ್ಞಾನದ ಮಾತ್ಹೇಳಿ ಗೇಣ್ಹೊಟ್ಟಿಗೆ ಪರರ ಗೋಣು ಮುರಿವವರು 4 ತಾಸಿನ ಮೋಜೆಂಬ ನಾಶನ ಜಗಮಾಯ ಮೋಸನರಿಯದೆ ಯಮಪಾಶದೊಳು ಬಿದ್ದು ದಾಸಜನಪ್ರಿಯ ಜಗದೀಶ ಶ್ರೀರಾಮನ ಧ್ಯಾಸಮುರಿದು ದು:ಸ್ಸಹವಾಸದಿರುವವರು 5
--------------
ರಾಮದಾಸರು
ಜೋ ಸಚ್ಚಿದಾನಂದನೆ ಜೋ ಜೋ ದೇವಕಿಕಂದನೆ ಜೋಜೋ ಬ್ರಹ್ಮಾದಿವಂದ್ಯನೆ ಧ್ರುವ ಹುಟ್ಟಿ ಬಂದು ನಿಜದೋರಿದೆ ಖೂನ ಮುಟ್ಟಿ ಬೀರುವ ಸುಚಿನ್ನಸಾಧನ ಇಟ್ಟ ಕಾವಲಿ ಹಾಕಿದೆ ಮೌನ ಮೆಟ್ಟಿಮರ್ದಿಸಿ ಬಂದೆ ಮಾವನ 1 ಮಾಡಬಂದೆ ನೀ ಧರ್ಮಸ್ಥಾಪನಿಯ ನೋಡಬಂದೆನಿಷ್ಟ ಜನರಾರ್ಚನಿಯ ಆಡಬಂದೆ ನಂದಯಶೋದೆ ಮನಿಯ ನೀಡಬಂದೆ ನಿಜಸುಖಸಾಧನಿಯ 2 ಶಿಷ್ಟಜನರಿಗಾಗಿ ಸಹಾಕಾರಿ ಸೃಷ್ಟಿಯೊಳು ತೋರಬಂದೆ ಶ್ರೀಹರಿ ದುಷ್ಟ ಜನರ ಮರ್ದಿಸುವಾವತಾರಿ ಕಂಸಾರಿ 3 ದೇವಾದಿಗಳ ಮಗುಟಮಣಿಯೆ ಭಾವಿಸಲಳವಲ್ಲ ಸದ್ಗುಣಿಯೆ ಕಾವ ದೈವ ನೀನೆ ಕೃಷ್ಣ ಕರುಣೆಯೆ ದೇವಕಿ ಗರ್ಭನಿಧಾನದ ಖಣಿಯೆ 4 ಬಲವಾಗಿ ಎನಗಬಂದೆ ಸರ್ವೇಶ ಒಲಿದು ಭಾನುಕೋಟಿತೇಜಪ್ರಕಾಶ ಫಲವ ನೀಡಿ ತೋರಬಂದೆ ಸಂತೋಷ ಸಲಹಬಂದೆ ಮಹಿಪತಿ ಪ್ರಾಣೇಶ 5 ಮನೋಹರ ಮಾಡುವ ನೀನೆ ಸಹಕಾರಿ ಅನುದಿನ ಲೆವಕಲ ನೀನೆ ಮುರಾರಿ 6 ಅನೆ ಕಾಯಲಿಪರಿ ನೀನೆ ಉದಾರಿ ಅನಾಥರಿಗೊಲುವ ನೀನೆ ಶ್ರೀಹರಿ 7 ಪತಿತ ಪಾವನ ಪೂರ್ಣ ನೀನೆ ನಿಶ್ಚಯ ಹಿತದಾಯಕ ನೀನಹುದೊ ಮಹಿಪತಿಯ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನವನ್ನೇ ತಿಳಿದುಕೋ ಮನುಜ ಜ್ಞಾನವನ್ನೇ ತಿಳಿದುಕೋ ಪ ಸತ್ತು ಹುಟ್ಟಿಯೇ ಸತ್ತು ಮುಂದಣ ಜನ್ಮಕು ಮತ್ತುಮತ್ತು ಗಳಿಸಿಕೊಂಡು ವಿಪತ್ತು ಮತ್ತೆ ಬಂದಿದೆ ಮೃತ್ಯು 1 ಹಾದಿಯಿದೆ ಸಾಪು ಕಾಣದೆ ಬಿಡುವೆ ಆಪುಬಯಕೆ ಯೋನಿಯ ಕೂಪು ಹಾಕಿ ಹಾಕಿ ಭಾಪು 2 ಹಸಿವು ಬಿಡೋ ಹಸಿವು ಯಾಕೆ ಆದಿ ಪಶುವುಬಗುಳ ಬೇಡ ಹುಸಿಯು ನಾಚುತಿದೆ ಬಸಿರು3 ಹೆಚ್ಚ ಬೇಡ ಹೆಚ್ಚು ಅಹಂಕಾರ ಮುಚ್ಚುಓದಿಗೆ ಬೆಂಕಿಯ ಹಚ್ಚು ಮಾಡಿಕೊಂಡೆಯ ಕಿಚ್ಚು4 ಜ್ಞಾನವ ತಿಳಿಯಿನ್ನು ಯಮಗೆ ಕೊಡಬೇಡ ಬೆನ್ನುಆರುತಾನಿಹನೆನ್ನು ಚಿದಾನಂದನೆ ಎನ್ನ5
--------------
ಚಿದಾನಂದ ಅವಧೂತರು
ಡೌಲಿನ ಡೌಲ್ಯಾಕೆ ಮಾಡ್ತೀ ಕಾಲತೀರದ ಮೇಲೇನೆಂದು ಹೇಳ್ತೀ ಪ ಹೊಯ್ಮಾಲಿತನದ್ಹೊಲೆಕೆಲಸ ಮಾಡಿಕೂತಿ ಸೈಮಾಡಿ ಬರಕೊಟ್ಟದೆಲ್ಲ ಮರೆತಿ ಅ.ಪ ಕಾಯವೆಂಬ ಹೊಲ ಕೌಲಿಗೆ ಹಿಡಿದಿ ಮಾಯ ಮರವೆಯೆಂಬ ಮುಳ್ಳು ಬೆಳೆಸಿದಿ ಹೇಯವಿಷಯವೆಂಬ ಸೆದೆಯ ಕೆಡವಿದಿ ಸಾವು ಹುಟ್ಟುಯೆಂಬ ಕೊರಡಗಿದ್ಹೋದಿ ಕಾವಲಾದೆಲೆ ಮೂಳಿ ನಿನ್ನ ಎಡಬಲದಿ ವಾಯಿದೆ ಸಮೀಪಬಂತು ಮುಂದೇನು ಹಾದಿ 1 ಕ್ರೋಧ ಎಂದೆಂಬ ಅಲಬು ಕಿತ್ತದೆ ಭೇದ ಎಂದೆಂಬುವ ಜೇಕು ತೋಡದೆ ವಾದವೆಂಬ ಬೋರೆ ಜಡ್ಡು ಕಡಿಯದೆ ಖೇದಯೆಂದೆಂಬ ಕರಿಕೆದಡ್ಡ ನಳಿಯದೆ ಶೋಧವಿನಿತಿಲ್ಲದೆ ಮುಸುಕಿಟ್ಟು ಮಲಗಿದಿ ಕಾದುವ ಒಡೆಯನಿಗೀಡೇನು ಮಾಡ್ದೀ 2 ಚಿತ್ತಶುದ್ಧಿಯೆಂಬ ಬದುವು ಕೆಡಿಸಿದಿ ನಿತ್ಯ ನಿರ್ಮಲತೆಯೆಂಬ ಬಾಂದು ಒಡೆಸಿದಿ ಸತ್ಯ ಸನ್ಮಾರ್ಗೆಂಬ ಸೀಮೆಯ ಮುರಿದಿ ತತ್ವ ವಿಚಾರವೆಂಬ ಒಡ್ಡ್ಹರೆಗಡಿದೀದಿ ಕರ್ತು ಶ್ರೀರಾಮನ ಅರ್ತು ಭಜಿಸಿದೆ ಯಮಗ್ವ್ಯೆರ್ಥ ತುತ್ತಾದಿ3
--------------
ರಾಮದಾಸರು
ತಪ್ಪು ನೋಡುವರೇನೋ ಕೃಪಾಸಿಂಧು ಶ್ರೀಗುರು ಒಪ್ಪಿಸಿಕೊಂಡರೆ ತಪ್ಪಾರಿಸುವರೆ ಧ್ರುವ ಒಡಲಹೊಕ್ಕವರವಗುಣವ ನೋಡುವರೇನೊ ಒಡಿಯನೆಂದವರ ತಾ ಕೈಯ್ಯ ಬಿಡುವರೆ ಮಡದಿ ಮಕ್ಕಳೆನಿಸಿ ಕಡೆಗಣ್ಣ ನೋಡುವರೆ ಒಡುಹುಟ್ಟಿದವರಿಗೆರಡ ಬಗೆವರೇನಯ್ಯ 1 ಬಡವರ ಮಕ್ಕಳ ಮಡುವಿನೊಳು ಧುಮುಕಿಸಿ ಕುಡಗೋಲ ಕುಂಬಳ ಕೊಟ್ಟವರ ಕೈಯ್ಯ ಒಡನೆ ಹೋಳುವದುಚಿತವೇನಯ್ಯ 2 ಬಡವನಾಧಾರಿ ಎಂದು ನಾ ನಿಮ್ಮ ಪೊಡವಿಯೊಳು ಶ್ರೀಪಾದ ದೃಢದಲಿ ನೋಡು ಕರುಣಾಲೆನ್ನ ನೀಡಿ ಅಭಯ ಹಸ್ತದಿ ಮೂಢ ಮಹಿಪತಿಗೆ ಕಡೆಗಾಣಿಸುವುದೈಯ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಮಾಡಿದ್ದು ಸತ್ಯ ನಾನಪ್ಪ ಮಿಥ್ಯಲ್ಲ ತಿಮ್ಮಪ್ಪ ತಪ್ಪು ಮಾಡಿದ್ದು ಸತ್ಯ ನಾನಪ್ಪ ಪ ತಪ್ಪು ಎನ್ನದು ಗಪ್ಪು ಮಾಡಿ ಪರರೊಪ್ಪುವಂತೆ ಮಂದಿ ತಪ್ಪು ತೋರಿಸಿ ತಪ್ಪು ಒಪ್ಪಿಸುತಿಪ್ಪ ಮೃತ್ಯುಗೆ ಕಷ್ಟವಾಗ್ವುದ ತಪ್ಪಿಸೋ ತಪ್ಪ ಅ.ಪ ಪರರ ದುರ್ಗಣ ಗಿರಿಯು ಪರ್ವತಪ್ಪ ಬೆಳಸಿ ಎನ್ನಯ ಪರಮದುರ್ಗುಣ ತೃಣಕೆ ಸಮನಪ್ಪ ಮಾಡಿತೋರಿಸಿ ಜರೆದು ಬೀಳುವೆ ನರಕಗುಂಟಪ್ಪ ದುರಿತಶೇಷಪ್ಪ ಹರಿದುಕೊಳ್ಳದೆ ಮರವೆಲಿ ಮತ್ತು ಪರರ ಜರಿಯುತ ದುರಿತದಿಂದೆಮಪುರವ ಸಾಧಿಪೆ ತಿರುಗಿ ನೋಡದೆ ಅರಿವು ಕರುಣಿಸು ಶರಣರ್ಹೊನ್ನಪ್ಪ 1 ಎಷ್ಟೋ ಎಷ್ಟೋ ಪಾಪಕೋಟೆಪ್ಪಾ ಆಚರಿಸಿ ನಾನು ಕೆಟ್ಟು ಭ್ರಷ್ಟನಾದೆ ಕಲ್ಲಪ್ಪ ದುಷ್ಟತನದಿ ನಷ್ಟಮಾಡಿದೆ ಪರರ ಮಾನಪ್ಪ ಮುಷ್ಟಿದಾನಪ್ಪ ಹುಟ್ಟಿದಂದಿನಿಂದ ಕೊಟ್ಟು ಪಡಿಲಿಲ್ಲ ಶಿಷ್ಟರೊಲುಮೆಯ ನಿಷ್ಠೆಯಿಂ ನಾ ಸೃಷ್ಟಿಕರ್ತ ದೃಷ್ಟಿಲಿಂದಿನ್ನು ಹುಟ್ಟಿಸೆನ್ನಗೆ ನಿಷ್ಠ ಜ್ಞಾನಪ್ಪ 2 ಎಲ್ಲ ಪಾಪಕ್ಹೆಚ್ಚು ನಂದಪ್ಪ ಜಗದಿ ಎಲ್ಲ ಖುಲ್ಲರಿಗೆ ನಾನ್ಹಿರಿಯ ಬಾಲಪ್ಪ ಕೇಳಲೇನು ಕಳ್ಳ ಸುಳ್ಳತನದಿ ವೀರಪ್ಪ ಕಾಲಯಮನಪ್ಪ ಅಲ್ಲ ಅಹುದೆನ್ನುವುದನೆಲ್ಲ ಬಲ್ಲೆ ನೀ ಇಲ್ಲವೆನಿಪ ಸಾಧ್ಯವೆಲ್ಲಿದೆ ಎನಗೆ ಪುಲ್ಲನಯನ ಕ್ಷಮೆ ಪಾಲಿಸು ಸಿರಿಯರ ನಲ್ಲ ಶ್ರೀರಾಮ ಗೊಲ್ಲ ಕೃಷ್ಣಪ್ಪ 3
--------------
ರಾಮದಾಸರು
ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು
ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾನೆ ದೊರೆವುದೇನೋ ಸುಖ ನಾನಾಜನ್ಮದ ಪುಣ್ಯವಿಲ್ಲದೆ ಪ ಮೃಷ್ಟಾನ್ನವುಂಡು ಮೆರೆವುದೀಗ ಕೊಟ್ಟು ಅನ್ನ ಹುಟ್ಟಿದವಗಿಲ್ಲದೆ ಇಟ್ಟುತೊಟ್ಟು ಶೃಂಗಾರದಿಂದ ಸೃಷ್ಟಿಯಿಂದ್ವಸ್ತ್ರ ವಡವೆಗಳು ಕೊಟ್ಟು ಹುಟ್ಟಿದ ಪುಣ್ಯರಿಗಲ್ಲದೆ 1 ಕೋಮಲಯುವತಿ ದೊರೆವುದೀಗ ಭೂಮಿಯೋಳ್ಕನ್ಯಾದಾನಿಗಲ್ಲದೆ ಭೂಮಿಸೀಮೆಗಳಿಸಿ ಬಲು ಕ್ಷೇಮದಿಂದ ಬಾಳ್ವುದೀಗ ಭೂಮಿಸೀಮೆ ದಾನಗೈದ ಆ ಮಹಾಪುಣ್ಯವಂತರಿಗಲ್ಲದೆ 2 ನಿಖಿಲಸುಖದಿ ಮೆರೆವುದೀಗ ಭಕುತಜನರಪ್ಪ ತೃಪ್ತರಿಗಲ್ಲದೆ ಅಖಿಲಪದಕೆ ಅಧಿಕವೆನಿಪ ಮುಕುತಿಪದವಿ ಪಡೆವುದಮಿತ ಮುಕುತಿದಾಯಕ ಶ್ರೀರಾಮಪಾದ ಭಕುತಾನುಭಕುತರಿಗಲ್ಲದೆ 3
--------------
ರಾಮದಾಸರು
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳೀವಲ್ಲದಿದು ಎನಗೆ ತಿಳಿಸಯ್ಯ ಹರಿಯೆ ಬಲುಪಾಪಿಜೀವಿಯ ತಪ್ಪಾರಿಗಿಹ್ಯದೋ ಪ ಹುಟ್ಟಿಸಿದವನಿಗೋ ಹುಟ್ಟಿ ಬಂದವನಿಗೋ ಸೃಷ್ಟಿಗೊಳಿಸಿದಂಥ ಸೃಷ್ಟಿ ಕರ್ತನಿಗೋ ಗಟ್ಟ್ಯಾಗಿ ನನಗಿದರ ಗುಟ್ಟು ತಿಳಿಸೈ ತಂದೆ ಮುಟ್ಟಿಭಜಿಸುವೆ ನಿನ್ನ ಶ್ರೀಕೃಷ್ಣರಾಯ 1 ಗೋಡೆಯ ಡೊಂಕಿರಲು ಗೋಡೆಯ ತಪ್ಪಥವ ಗೋಡೆಯನು ಕಟ್ಟಿದ ಗೌಂಡಿಯ ತಪ್ಪೋ ಕೂಡಿಟ್ಟು ಹಣ ವೆಚ್ಚಮಾಡಿ ಕಟ್ಟಿಸಿದಂಥ ಗೋಡೆಯೊಡೆಯನ ತಪ್ಪೋ ತಿಳಿಹೇಳೆನಗೆ 2 ಬಂಡಿ ತಗ್ಗಿಗೆ ಬೀಳೆ ಬಂಡಿದೇ ತಪ್ಪಥವ ಬಂದಡರಿ ಕೂತುಕೊಂಡವರದೆ ತಪ್ಪೋ ಬಂಡಿಹೊಡೆಯುವಂಥ ದಿಂಡೆಗಾರನ ತಪ್ಪೋ ಕಂಡು ಇದ್ದಂತ್ಹೇಳೋ ಪಂಢರಿರಾಯ 3 ಜೀವಾಳ ಅಪಸ್ವರ ನುಡಿಯಲದರದೇ ತಪ್ಪೋ ಜೀವಾಳ ಬಾರಿಸುವಗೋ ಜೀವಾಳ ಕರ್ತನಿಗೋ ಆವಂಗೆ ತಪ್ಪು ಜಗಜೀವ ಜೀವೇಶನೆ ನ್ಯಾ ಯಾವಾಗ್ಹೇಳಯ್ಯ ಭಾವಜಪಿತನೆ 4 ಪ್ರಾಣೇಶ ಶ್ರೀರಾಮ ನೀನೆ ಬರೆದಿಹ್ಯ ಬರೆಹ ನೀನೆ ವ್ಯಾಪಕ ಸರ್ವ ನೀನೆ ರಕ್ಷಕನೋ ನೀನೆ ಸ್ವಾತಂತ್ರ್ಯಾಖಿಲ ಏನಿಲ್ಲ ಮನುಜನಾ ಧೀನ ತಪ್ಪ್ಯಾಕಿವಗೆ ನೀನೆ ಪೇಳಯ್ಯ 5
--------------
ರಾಮದಾಸರು