ಒಟ್ಟು 4323 ಕಡೆಗಳಲ್ಲಿ , 125 ದಾಸರು , 2943 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾಪಾತ್ಮನಾನಲ್ಲ ಪಾಪವೆನಗಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಪ ಅಂದು ಭೃಗುಮುನಿಯೆದೆಯಲೊದೆಯಲವನಿಗೆ ಪಾಪ ಬಂದುದೇ ಮೂದಲಿಸಿ ಬೈದವನಿಗಾ ದೋಷವು ನಿಂದುದೇ ಹಣೆಯೊಡೆಯಲೆಸೆದ ಭೀಷ್ಮಂಗಘವು ಹೊಂದೀತೆ ಪಾಂಡವರ್ಗೆ ಕುಂದು ಬಂದೀತೆ ದೇವಾ 1 ವರದನಾಕಾರದೊಳಗುಷ್ಣಜಲ ಮೃತ್ತಿಕೆಯ ತರಲು ಕೈಸುಡಲು ಹಣೆಯನು ಟೊಣದು ಬೈದೇ ಮರಳಿ ನಾಚಿಕೆಯಿಲ್ಲದೆ ಚರಣಕ್ಕೆ ಪಾವುಗೆಯ ನಿರಿಸಿದಪರಾಧ ನಿನ್ನದೋ ಯೆನ್ನದೋ ದೇವಾ 2 ಕುರುಡನಿಗೆ ದಾರಿಯನು ತೋರುವಾಪ್ತನು ಮುಳಿದು ಜರಿದು ನೂಕಿದೊಡಾತನೇನ ಮಾಡುವನೂ ಗುರಿಯನಿಡುವವನು ತಪ್ಪೆಸೆಯೆ ಸರಳಿನದೇನು ಅರಸಾಳಕೊಂದಡವನೇನು ಮಾಡುವನೂ 3 ಕುಣಿಸಿದಂತಾಡುವುದು ಬೊಂಬೆಯು ಸ್ವತಂತ್ರವದ ಕಿನಿತುಂಟೆ ಕಪಟನಾಟಕ ಸೂತ್ರಧಾರೀ ಎನಿತಾಡಿಸಿದೊಡಾಡುವೆನು ಪಾಪಪುಣ್ಯವೆಂ ಬೆಣಿಕೆಗಾನಲ್ಲ ನೀನಲ್ಲದೆಲೆ ದೇವಾ4 ತಂದೆ ತಾಯ್ಗಳು ತಮ್ಮ ಕಂದನನು ಸರ್ಪಮುಖ ದಿಂದ ಕಚ್ಚಿಸಲು ತರಳನಲಿ ತಪ್ಪೇನೂ ಮುಂದರಿಯದಜ್ಞಾನಿಯೆಂದು ನೀಕ್ಷಮಿಸಿಕೋ ತಂದೆ ವೈಕುಂಠ ವೇಲಾಪುರಾಧೀಶಾ 5
--------------
ಬೇಲೂರು ವೈಕುಂಠದಾಸರು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾರುಗಾಣವುದೆಂದಿಗೊ ರಂಗಯ್ಯ ಪ ಘೋರಾಹಂಕಾರವ ಬಿಟ್ಟು ನಿನ್ನಯಪಾದ ಸೇರುವುದಿನ್ನೆಂದಿಗೊ ಅ.ಪ ಬಿಟ್ಟುಬಿಡುವುದೆಂದಿಗೆ 1 ವಾಸುದೇವನೆ ನಿಮ್ಮ ಪಾದಾರವಿಂದದೊಳು ವಾಸವಾಗುವದೆಂದಿಗೊ 2 ಸಮವ ಮಾಡುವುದೆಂದಿಗೊ 3 ತಟ್ಟನೆ ಸೇರಿಸಯ್ಯ 4 ಭಕ್ತಿನಾಮವನು ಕೊಡಿಸಯ್ಯ 5
--------------
ಯದುಗಿರಿಯಮ್ಮ
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾರ್ವತೀಪತಿಯೆ ಎನ್ನಪಾಲಿಸುವುದು ಪ ದೂರು ನೋಡದೇ ಗುರುವ ಸಾರುವುದು ಸತತಾ ಅ.ಪ ಭಜಕರ ಸರ್ವಕಾವನ ನಿಜದಾಸರೊಳ್ಕೂಡಿಸಿ ಭಜನೆಯ ಮಾಡಿಸೋಬೇಗ ಭುಜಗಭೂಷಣನೆನೀನು 1 ನಂದಿ ವಾಹನನೆ ಎನ್ನಾ ಮಂದಮತಿಗಳ ಹರಿಸಿ ಕಂದುಗೊರಳನೆ ನೀನು ಆನಂದದಿಂದಲಿ ಕಾಯೋ 2 ಇಂದು ಗರ್ವವ ಬಿಡಿಸಿ ಕಾರಣಕರ್ತಹರಿಯೆ ಶ್ರೀರಮಣನ ತೋರೋ 3 ಭೂತನಾಥನೆ ನೀನು ಮಾತನು ಲಾಲಿಸುವುದು ದಾತಾನೆ ಸಲಹೊ ಎನ್ನಾ ಪಾತಕವನು ಹರಿಸಿ 4 ಶುದ್ಧಭಕುತಿಯನೆ ಕೊಟ್ಟುಸದ್ವೈಷ್ಣವರ ಪ್ರೀಯನೆ ಮಧ್ವಾಂತರ್ಗನಾದ ಮುದ್ದುಮೋಹನವಿಠಲನ ತೋರು 5
--------------
ಮುದ್ದುಮೋಹನವಿಠಲದಾಸರು
ಪಾರ್ವತೀಶ ಎನ್ನಿರೋ ಮನಸಾರೆ ಪಾರ್ವತೀಶ ಎನ್ನಿರೊ ಪ. ಪಾರ್ವತೀಶನ ಭಜಿಸಿ ನಿಮ್ಮನು ದ್ಧಾರ ಮಾಡುತ ಹರಿಯ ಮಹಿಮೆಯ ಸಾರಿ ಭಜಿಸಲು ಮನವನೀಯುವ ಕಾರ್ಯ ದುರಂಧರ ಈಶನನ್ನು ಅ.ಪ. ತರುಣಿ ಅಸ್ತಂಗತನಾಗುತಿರೆ ಹರುಷದೊಳೊಮ್ಮೆ ಶಂಭೊ ಎಂದು ವರ ಉಚ್ಚಾರವ ಮಾಡಲಾಕ್ಷಣ ತರಿದು ನಿಮ್ಮಯ ಸಕಲ ಪಾಪವ ಪೊರೆವ ಕರುಣಿ ಈಶನೆನ್ನುತ ಸ್ಮರಿಸಿ ಸುಖದೊಳು ಬಾಳಿ ಜಗದೊಳು 1 ಪಾದ ನೆನವ ಶಂಭೋ ಎಂ ದೀ ಸುನುಡಿಯ ತಿಳಿದು ಭಾಸುರಾಂಗನ ಮೊಮ್ಮಗನ ಸ್ತುತಿ ಲೇಸು ಎಂದು ಧ್ಯಾನವ ಮಾಡಲು ಸೂಸಿ ಕರುಣವ ಬೀರಿ ನಿಮಗೆ ಲೇಸು ಮಾಡುತ ಹರಿಯ ತೋರುತ 2 ಪಾಶಾಂಕುಶಧರನೆನಲು ನಿಮ್ಮಯ ಪಾಪ ರಾಶಿ ಖಂಡಿಸಿ ಪೊರೆದು ಶ್ರೀ ಶ್ರೀನಿವಾಸ ಪದವನು ಈಶ ಧ್ಯಾನಿಪ ಮನವನೀವನು ಸೂಸಿ ಭಕ್ತಿಯೊಳ್ ಶ್ರೀಶ ಭಕ್ತರು ವಿಶ್ವಾಸದಿಂದಲಿ ಈಶ ಎನ್ನಿರೋ ಈ ಸಂಸಾರ ಈಸಲೋಸುಗ 3
--------------
ಸರಸ್ವತಿ ಬಾಯಿ
ಪಾಲನುತ ಶ್ರೀಶೈಲಮಂದಿರ ಮಲ್ಲಿಕಾರ್ಜುನ ರಕ್ಷಿಸು ಪ ಏಳುಕೊಳ್ಳಗಳೇಳು ನೆಲೆಗಳ ಮೇಲೆ ತೋರ್ಪ ಲಿಂಗನೆ ಕಾಲಕಾಲದಿ ಬಾಲನೆಂದೆನ್ನ ಮಲ್ಲಿಕಾರ್ಜುನ ರಕ್ಷಿಸು 1 ಶೀಲ ಭಕುತರ ಪಾಲಿಸಲು ಪಾತಾಳಗಂಗೆಯ ನಿರ್ಮಿಸಿ ಪಾಲಿಸಿದಿ ಬುವಿ ಪಾಲಿಸಿ ವರ ಮಲ್ಲಿಕಾರ್ಜುನ ರಕ್ಷಿಸು 2 ಸಾರಸೌಖ್ಯ ನೀಡುದ್ಧಾರ ಮಾಡಿದ ಮಲ್ಲಿಕಾರ್ಜುನ ರಕ್ಷಿಸು 3 ಅಂಗಜಹರ ಗಂಗಾಧರ ಗುರುಲಿಂಗಜಂಗಮಾತ್ಮಕ ಭವ ಮಲ್ಲಿಕಾರ್ಜುನ ರಕ್ಷಿಸು 4 ಕಾಲಕಾಲ ಕಾಲಕೇಶ್ವರ ಶೂಲಪಾಣಿಯೆ ನಂಬಿದೆ ಕಾಲನ ಮಹದಾಳಿ ಗೆಲಿಸೆನ್ನ ಮಲ್ಲಿಕಾರ್ಜುನ ರಕ್ಷಿಸು 5 ಕಳೆದೆ ದಿನಗಳ ಇಳೆಯ ಸುಖಮೆಚ್ಚಿ ತಿಳಿಯದೆ ತವಮಹಿಮೆಯ ಒಲಿದು ಕ್ಷಮಿಸೆನ್ನ ಬಾಲನೆಂದೆತ್ತಿ ಮಲ್ಲಿಕಾರ್ಜುನ ರಕ್ಷಿಸು 6 ಅಷ್ಟವರ್ಣ ವಿಶಿಷ್ಟಭಕ್ತಿಯ ಕೊಟ್ಟು ಕುರಣಾದೃಷ್ಟಿಯಿಂ ಅನುದಿನ ಮಲ್ಲಿಕಾರ್ಜುನ ರಕ್ಷಿಸು 7 ದುಷ್ಟಭವಕಿನ್ನು ಹುಟ್ಟಿಬರುವಂಥ ಕೆಟ್ಟ ಬವಣೆಯ ತಪ್ಪಿಸು ಇಷ್ಟದಾಯಕ ಮುಟ್ಟಿಪೂಜಿಪೆ ಮಲ್ಲಿಕಾರ್ಜುನ ರಕ್ಷಿಸು 8 ಪರಕೆ ಪರತರ ಪರಮಪ್ರಕಾಶ ವರದ ಶ್ರೀರಾಮಮಿತ್ರನೆ ಮರೆಯ ಬಿದ್ದೆನು ಕರುಣಿಸಿ ಮುಕ್ತಿ ಮಲ್ಲಿಕಾರ್ಜುನ ರಕ್ಷಿಸು 9
--------------
ರಾಮದಾಸರು
ಪಾಲಬಾಲಕ ಸುಂದರ ಪ ಲೋಲ ಶ್ರೀವರ ಶ್ರೀಕರ ಪಾಲ ನೀ ಕರುಣಾಲವಾಲನೆ 1 ನವನೀತದಧಿಚೋರ | ಭುವನಮೋಹನಾಕಾರ | ಭುವನೋದ್ಧಾರಕ ಶ್ರೀಧರ|| ಸೇವ್ಯ ವಿವಿಧಮಾನುಷವಿಗ್ರಹ || ಕುವರ ನೀನೆನಿಸುತ್ತ ಯಾದವ | ಭುವನದಲಿ ಪಾಲಿಸಿದ ಶ್ರೀಹರಿ2 ಕಂಕಣ ಕೇಯೂರ| ಕಡಗಾದ್ಯಲಂಕಾರಿ | ಕಿಂಕರಜನಪ್ರಿಯ ಶËರಿ || ಸಂಖ್ಯೆಯಿಲ್ಲದ ದುಷ್ಟದಾನವ | ಳಾಂಕ ಮಹಿಮಾನಂತ ರೂಪನೆ 3 ಜಂಭಾರಿ ಶಂಭುಸುಪ್ರೀತ ಖ್ಯಾತ|| ಕಂಬುಕಂಧರ ದೇವ ಕುಂಭಿನಿನಾಥ || ಯಂಭು ತ್ರಿದಶರಿಗಿಂಬುದೋರಲು | ಬೆಂಬಿಡದೆ ಪಾಲಿಸಿದ ಶ್ರೀಹರಿ 4
--------------
ವೆಂಕಟ್‍ರಾವ್
ಪಾಲಯ ಕೃಪ ಆಲಯ ಬಾಲಗೋ ಪಾಲ ಬೇಗ ಪಾಲಿಸು ಪಿಡಿದೆನ್ನ ಪ ನಿತ್ಯನಿರ್ಮಲ ಸತ್ಯಚರಿತ ದೇವ ಸತ್ಯಭಾಮೆಯ ಪ್ರಿಯನಾಥ ಸ್ವಾಮಿ ನಿತ್ಯನಿಗಮ ವೇದವಿನುತ ಜಗ ಕರ್ತು ಕಾರುಣ್ಯರಸಭರಿತ ಆಹ ಭಕ್ತಾಂತರ್ಗತ ಕಾಲಮೃತ್ಯುಸಂಹರ ಸ ಚ್ಚಿತ್ತಾನಂದ ಹರಿ ಸತ್ಯ ಸರ್ವೋತ್ತಮ 1 ದಿನಮಣಿಕೋಟಿಪ್ರಭಾಕರನುತ ವನಜಸಂಭವ ಸುರನಿಕರ ದಿವ್ಯಗುಣ ಘನನಿಧಿಗಂಭೀರ ಜೀಯ ಅನುಪಮ ಭೂಗಿರಿವರ ಆಹ ಮನಸಿಜಪಿತ ಮನುಮುನಿಮನಮಂದಿರ ತನುತ್ರಯದಲಿ ನಿನ್ನ ನೆನಹನು ಪಾಲಿಸು 2 ಶ್ಯಾಮಸುಂದರ ಕೋಮಲಾಂಗ ಭಕ್ತ ಕಾಮಿತಫಲಪ್ರದಪುಂಗ ದುಷ್ಟ ಸೋಮಕಸುರಮದಭಂಗ ಪುಣ್ಯ ನಾಮಕ ಸುಜನತರಂಗ ಆಹ ತಾಮಸ ಪರಿಹರ ಭೂಮಿಜನಕ ಜಯ ಕ್ಷೇಮ ಕರುಣಿಸು ಮಮಸ್ವಾಮಿ ಶ್ರೀರಾಮಯ್ಯ3
--------------
ರಾಮದಾಸರು
ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಿಸಯ್ಯ ಪವನ ಕುವರನೇ | ಪಾವನ್ನ ಮೂರ್ತಿಶೀಲರೂಪಿ ಶೈಲ ಸದನನೇ ಪ ಬಾಲ ಗೋಪಾಲ ಗುಣವ | ತೈಲಧಾರೆಯಂತೆ ಮನದಿಕಾಲಕಾಲ ಸ್ಮರಿಪ ಸುಖ | ಕೈಲಾಸವಾಸ ಕೊಟ್ಟು ಕಾಯೊಅ.ಪ. ಪಂಪಾಪುರ ನಿವಾಸ ಈಶನೇ ಜೈಗೀಷ ಔರ್ವಪೊಂಪೆ ಎಂಬ ಗಿರಿಜೆ ರಮಣನೇ ||ಲಂಪಟಾವ ಬಿಡಿಸಿ ಜ್ಞಾನ | ಸಂಪದಾವನಿತ್ತು ಸಲಹೋನೋಂಪಿ ಗೈವೆ ನಿನ್ನ ಪದದಿ | ಇಂಪನೀಯೊ ಹರಿಯ ಪದದಿ 1 ಕೃಪಣ ಕಲುಷ ಭವ ಸಮುದ್ರದಿಂದಮತ್ತೆ ಪುಟ್ಟಿ ಭಯವು ಕಾಣೆ | ಚಿತ್ತದಲ್ಲಿ ಹರಿಯು ಇರಲು 2 ತೈಜಸ ತಾಮಸಾ | ತ್ರಯವು ಅಹಂಸಾಕಾರಿ ಶುಕನೆ ದುರ್ವಾಸಾ |ಲೌಕಿಕಗಳೆಲ್ಲವು ವೈ | ದೀಕ ವೆನಿಸೊ ತತ್ಪುರೂಷಕಾಕು ಸಂಗ ಕೆಡಿಸೊ ಹರ ವಿ | ಶೋಕ ಹರಿಯ ತೋರಿ ಬೇಗ3 ನಿಕರ ವಾಯು ನಂದನಾ ||ವಾಸ ವಾದ್ಯಮರನುತ ಸ | ದಾಶಿವನೆ ಬ್ರಹ್ಮ ತನಯಮೀಸಲೆನಿಸೊ ಮನವ ಹರಿಯ | ಆಶೆಯಲ್ಲಿ ನಿರುತ ಎನಗೆ 4 ಮಂಗಳಾಂಗ ಗಂಗೆ ಧಾರಕಾ | ಊಧ್ವ5ಟನೆಅಂಗಜಹ ಮೃಕಂಡ ಪಾಲಕಾ ||ರಂಗ ಗುರು ಗೋವಿಂದ ವಿಠಲ | ಸಂಗಿ ಶಿವ£5Éೀಡ್ವೆ ಭಕ್ತಿಸಂಗವಿತ್ತು 5ಗೆ ವಿಷಯ | ಸಂಗ ಬಿಡಿಸಿ ಕಾಯೊ ರುದ್ರ 5
--------------
ಗುರುಗೋವಿಂದವಿಠಲರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ. ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀ ಕಾಲ ಕಾಮಿತಫಲಪ್ರದಾಯಕ ಅ.ಪ. ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿ ಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದ ಪರಿ ಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿ ಬನ್ನ ಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನು ಹರಿ 1 ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನು ಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನು ಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನು ಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2 ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವ ನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವ ನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವ ನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ3 ಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿ ಭೂರಿ ಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿ ಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4 ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹ ಗೃಹ ಗೈದಿಸಿ ಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿ ಮಿಂಚಿಯೆನ್ನೊಳು ಮೋದಿಸಿ ಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ5 ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆ ಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆ ಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆ ಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6 ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆ ಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆ ನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆ ಪಡುತಿರುಪತಿ ಪುರೇಶನೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಅವಾಂತರೇಶಾ ಪಾವನ ಕೋಶಾ ಪಾಲಾಬ್ದಿ ಶಯನನ ದಾಸಾ ಕಾಲ ಜನಕ ವಿಶಾಲಮಹಿಮಾರೈಯಿ ಲೋಲಾ ಜೀವೋತ್ತಮ ಕಾಲಕಾಲಕೆ ಎನ್ನ ಪ ಪುಣ್ಯಗಾತುರ ಮಾರುತಾ ಪುಂಜಿತ ಜೀವಾ ಗಣ್ಯರಹಿತ ಗುಣಜಾತಾ ಮನ್ಯುದಾನವ ಕುಲಘಾತಾ ಮಹಾತತ್ವ ದಾತಾ ಸನ್ನ್ಯಾಯಮಣಿ ಶ್ರುತಿಗೀತಾ ಧನ್ಯನ ಮಾಡೊ ಅನ್ಯನೇನೊ ನಾನು ಕಾ ರುಣ್ಯದಿ ದುರಿತಾರಣ್ಯ ಮನ್ಮಥ ಲಾ ಗುಣ್ಯ ಮನದಾ ಕಾರ್ಪಣ್ಯವ ಓಡಿಸಿ 1 ದ್ವಿತೀಯ ನಿರ್ಜರವರೇಣ್ಯ ದೀನನುಗಣ್ಯ ದಿತಿಜಾವಳಿಗೆ ಕಾಠಿಣ್ಯ ಸತತ ಅಪ್ರತಿರಾಜ್ಯನ್ಯಾಸ ಚರಾಚರಮಾನ್ಯಾ ತುತಿಸುವೆ ಕೇಳು ದೈನ್ಯ ಗತಿ ನೀನೆ ಕ್ಷಿತಿಯೊಳಗಿತರರ ಕಾಣೆನೊ ಸತಿಪತಿ ಮಿಗಿಲಾದ ತುತುವೇಶ ತತಿಗಳ ಜಿತ ಸದ್ಗುರು ಭಾರಿತ ಪ್ರತಿಪಾದ್ಯ ಮಾರುತಿ ಮತಿಯಲಿ ನಿನ್ನ ಮತದಲಿ ಪೊಂದಿಸಿ 2 ವಿಕಸಿತ ಸದನಾ ಜ್ಞಾನ ವಿಶೇಷ ಧ್ಯಾನಾ ಅಖಿಳ ವಿಚಾರ ನಿದಾನಾ ಅಕಳಂಕವಾದ ಬಹುಮಾನಾ ಅಮೃತಪ್ರಾಣಾ ಸಕಲಕ್ಕು ನೀನೇ ಪವಮಾನಾ ಸುಖಸಾಗರ ಸುರನಿಕರವಿನುತ ಮಹಾ ಭಕುತ ಭವಾಬ್ಧಿತಾರಕ ವಿಷಭಂಜನ ಲಕುಮಿವಲ್ಲಭ ನಮ್ಮ ವಿಜಯವಿಠ್ಠಲನ್ನ ನಖ ಕೊನೆ ಪೊಗಳುವ ಉಕುತಿ ನೀಡಿಂದು 3
--------------
ವಿಜಯದಾಸ