ಒಟ್ಟು 6322 ಕಡೆಗಳಲ್ಲಿ , 125 ದಾಸರು , 3863 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುಗ್ಗಾಣಿಯು ದೊಡ್ಡದಲ್ಲಾ ನಿನ್ನ ಪೆಗ್ಗೆಗೆ ಯವiನಾಳು ಹೊರಿಸ್ಯಾರು ಕಲ್ಲಾ ಪ ಬಗ್ಗಿಸಿ ಆರೆಂಟು ನುಗ್ಗಿ ನೋಡಿ ಬರುವ ಪೆಗ್ಗೆಯನಳಿದವರ ಅಗ್ಗದಿಂದಾಡಿದರು ಅ.ಪ ಒಂದೆರಡು ಮೂರೆಂಬ ಅಂದವು ಗುರುವಿನೊಳು ಚಂದದಿಂ ಕೇಳಿಕೊಳ್ಳೆಲೊ ಮಂಕುಜೀವಿ ಮುಂದೀಗ ಬರುವಂಥ ದುಂದುಗಾರರ ಕಂಡು ಕೊಂದುಹಾಕಲು ಚಂದ್ರಾಯುಧವ ಹಿಡಿದವಗೆ 1 ಒಂಬತ್ತು ಗೇಟಿನಾ ಮೋಟದೊಳು ನೋಡಯ್ಯ ಅಂಬಿಹರುಳುವಂತ ದುಂಬಿಗಳ ಕಾಟಾ ಅಂಬಾರಿಯೇರಲು ನಂಬೀಗೆ ಕೊಟ್ಟಿರ್ಪ ಶಂಭುನುತ ಶ್ರೀ ತುಲಸಿ ಕಂಬವ ಹಿಡಿದವಗೆ2
--------------
ಚನ್ನಪಟ್ಟಣದ ಅಹೋಬಲದಾಸರು
ದುಂಡು ಮುಖವುಳ್ಳ ಹುಡುಗನ ಕಂಡಿರಾಚಂಡನಾಡುತ ಬಂದ ಚದುರೆಯರ ಓಣಿಯಲಿ ಪ ಕರದೊಳಗೆ ಕೊಳಲಿಹುದು ಚರಣದೊಳು ರುಳಿಗೆಜ್ಜೆಕೊರಳೊಳಗೆ ಸರಪದಕ ಗುರುಳು ಮುಖದಿಜರದೊಲ್ಲಿ ಹೊದ್ದಿಹನು ಸ್ಮರನ ಮೋಹಿಪ ರೂಪಸಿರಿಯ ಕಂಡರೆ ಅವನ ಪರರು ಬಿಡರಮ್ಮ 1 ವಾರಿಜಾಕ್ಷೆರೆ ಬಹಳ ಜಾರಚೋರೆನ್ನ ಮಗವಾರೆನೋಟದಿ ಮನಸು ಹಾರಿಸುವನುಸಾರಿದರೆ ಮನೆಗಳಿಗೆ ದ್ವಾರಯಿಕ್ಕುತೆ ಬನ್ನಿದೂರು ಪೇಳಲು ಕೇಳಿ ಸಾರಿದೆನು ಮೊದಲೆ 2 ಕಂದನಾಗುವ ಕ್ಷಣದಿ ಒಂದೆ ಪ್ರಾಯದ ಪುರುಷಸುಂದರಾಂಗಿಯಳಾಗಿ ಬರುವನಂದಬಾಲನ ಮಹಿಮೆ ಬಂದು ನಂಬಲಿ ಬೇಡಿಇಂದಿರೇಶನು ಬಹಳ ಮಂದಿ ಮೋಹಿಸುವ 3
--------------
ಇಂದಿರೇಶರು
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರಿತ ಗಜಕೇಸರಿಯೆ ತ್ರಿಲೋಕದ ದೊರೆಯೆ ನಿನಗಾರು ಸರಿಯೆ ಭಾಗ್ಯದ ಸಿರಿಯೆ | ಕರುಣವ ಮಾಡಿ ಪರಿಯಲಿ ಸಾರಂಗ | ಧರನೆ ಧರಣಿಧರ ವರ ಪರಿಯಂತಾ ಪ ಭೂಮಿಯೊಳಗೆ ಉತ್ತಮ ನೆಲಾ ನೀಡೆಂದು | ಹೇಮ ಮುನೀಶ್ವರ ಕಾಮಿಸಿ ಹರಿಪಾದ | ನೀ ನೇಮ ನಿತ್ಯದಲ್ಲಿ | ತಾ ಮನೋರಥನಾಗಿ || ಸಾಮಜವರದನ ನಾಮವ ನೆನೆಯಲು | ಹೇಮ ತೀರಥದೊಳು | ತಾ ಮನಗೊಂಬ ನಾಮನೆ ಪಡೆದು 1 ಮಂಗಳಾಂಗಿಯೇ ಬರಲು ರಂಗರಾಯನು ಸಾ | ರಂಗಶರವೇಪಿಡಿದುಶೃಂಗಾರಮಯದಿಂದ | ಬಂಗಾರ ರಥ ತು | ರಂಗಗಳ ಸಮೇತ ಭುಜಂಗಶಯನನಾಗಿ ಕಂಗೊಳಿಸುತ್ತಲೂ | ತುಂಗ ಮಹಿಮ ವಿಹಂಗಾದಿಗಳಿಂದ ಕೈಕೊಳ್ಳುತ್ತಿಂಗಿತದಲಿ ನೀಲಾಂಗ ನಿರ್ದೋಷಾ 2 ಜಯ ಕುಂಭಘೋಣನಿಲಯಾನೆನೆಸುವ ಉ | ಭಯ ಕಾವೇರಿ ನಿವಾಸಾ | ಭಯ ಕೃದ್ಭಯನಾಶ | ತ್ರಯ ಗುಣವಿರಹಿತಾ ವಿಯದ್ಗಂಗಾನದಿ ತಾತಾ | ಜಯ ಜಯವೆನುತಿರೆ ಪ್ರಿಯನಾಗಿ ಕೇಳುತಾ | ನಯನ ಮೀತಾರ ಪಾಲಯಪಾವನದೇವಾ | ದಯಮುಖ ಹರಾ ವಿಜಯವಿಠ್ಠಲಪರಾ 3
--------------
ವಿಜಯದಾಸ
ದುರಿತ ತರಿಯುವಾ ಪ ಯಂತ್ರೋದ್ಧಾರರಾ | ಅಂತರಂಗರಾಮಂತ್ರ ಮಂದಿರಾ | ಕಾಂತಿ ಭೂತರಾ 1 ಕುಂತಿ ಜಾತರಾ ಏ | ಕಾಂತ ಭಕ್ತರಾಸಂತ ಗುರಗಳ ನೀ | ವಿಂತು ನಂಬಿರೊ 2 ಪಂಕಜಾಕ್ಷನಾ | ಅಣಕ ಧರಿಸಿಹಾಬಿಂಕ ಗುರುಗಳಾ | ಲಂಕೇಶನನುಜರಾ 3 ಖಂಪಾತಾಳ ಭೂ | ವ್ಯಾಪಿಸಿರುವರಾಅಪಾರ ಮಹಿಮರಾ | ಕೋಪ ರಹಿತರಾ 4 ಮೂಕ ಬಧಿರರಾ | ನೇಕ ರೋಗಿಯರಾನೂಕಿ ತಾಪವಾ | ದುಃಖ ಕಳೆಯುವಾ 5 ಮಾಯಿ ಮತಗಳಾ | ಸಾಯ ಒಡೆದರಾಆರ್ಯ ಮಧ್ವರಾ | ಪ್ರೀಯ ಶಿಷ್ಯರಾ 6 ಗುರುಗೋವಿಂದ ವಿಠಲನಾ | ಚರಣ ಸರಸಿಜಾನಿರುತ ಸ್ಮರಿಪರಾ | ವರವ ಕೊಡುವರಾ 7
--------------
ಗುರುಗೋವಿಂದವಿಠಲರು
ದುರಿತ ನಿವಾರಣಗೆ ಪಮಾಯಾರಹಿತನಿಗೆ ಮನಕಗೋಚರನಿಗೆಕಾಯ ಕರಣ ಕೃತ್ಯ ದೂರನಿಗೆಹೇಯಾದಿ ಭೇದ ರಹಿತನಿಗೆ ನಿಜ ಭಕ್ತಿದಾಯಕನಾದ ಶ್ರೀ ಗುರುವರ್ಯಗೆ 1ಜ್ಞಾನಸ್ವರೂಪಗೆ ಜ್ಞಾನದಾಯಕನಿಗೆಜ್ಞಾನಶಕ್ತಿಯೊಳೊಡಬೆರದಿಹಗೆಜಾನಿಸುತಿಪ್ಪರಜ್ಞಾನವಿರೋಧಿಗೆತಾನೆ ತಾನಾಗಿ ನಲಿವ ಮೂರ್ತಿಗೆ 2ಸ್ವಾನುಭವಾನಂದ ಪರಿಶುದ್ಧನಾದಗೆದೀನಜನರ ಪರಿಪಾಲಿಪಗೆಮಾನರಹಿತನಿಗೆ ಮಾನ್ಯ ಸನ್ನುತನಿಗೆಭಾನುವಿನಂದದಿ ಹೊಳೆವನಿಗೆ 3ಪುಣ್ಯ ಪಾಪಗಳೆಂಬ ಕಣ್ಣಿಯ ಕಟ್ಟನುಚೆನ್ನಾಗಿ ಕಳಚಿದ ಚಿನ್ಮಯಗೆತನ್ನವರನ್ಯರೆಂತೆಂಬ ಭೇದವ ಬಿಟ್ಟುತನ್ನಂತೆ ತನ್ನವರನು ಮಾಳ್ಪಗೆ 4ಸುರತರು ರೂಪಗೆ ಸುರಭಿಯಂತಿರುವಗೆಪುರುಷಾರ್ಥ ದಾನಿಗೆ ಪುಣ್ಯಾತ್ಮಗೆತಿರುಪತಿ ನಿಲಯ ಶ್ರೀ ವೆಂಕಟರಮಣಗೆಗುರು ವಾಸುದೇವ ರೂಪಿನ ದೇವಗೆ 5ಕಂ||ಇಂತೀ ಪೂಜಾ ಸ್ತುತಿಗಳಸಂತಸದಿಂ ಪಾಡಿ ಪೊಗಳಿ ಕೇಳುವ ಜನರಿಗೆಸಂತತ ಕಾಮಿತ ವರಗಳಸಂತೋಷದಿ ಕೊಡುವ ನೊಲಿದು ವೆಂಕಟರಮಣಂಓಂ ಪರಾತ್ಪರಾಯ ನಮಃ
--------------
ತಿಮ್ಮಪ್ಪದಾಸರು
ದುರಿತ ದುರ್ಗತಿಗೆ ಆವಾನಂಜನೊ ಹರಿಯ ಕರುಣವೆಂಬ ಕವಚ ತೊಟ್ಟಿರಲಿಕ್ಕೆ ಪ ಮಲಗಿ ಹೊರಳನೇಕೆ ಕುಳಿತುಕೊಂಡಿರನೇಕೆ ಬಲುದೂರ ತಿರುಗಾಡಿ ಬಪ್ಪನೇಕೆ ಮಲಿನ ವಸನವ ಪೊದ್ದು ಮೋರೆ ತೊಳಿಯನೇಕೆ ಪಾದ ನೆಳಲು ಸೇರಿದವ 1 ಸ್ನಾನ ಸಂಧ್ಯಾ ಮೌನ ಮಾಡದೆ ಇರನೇಕೆ ಕಾನÀನದಲಿ ಬಂದು ಸೇರನೇಕೆ ದಾನ ಧರ್ಮಂಗಳ ಮಾಡದೆ ಇರನೇಕೆ ದಾನವಾರಿಯ ಕಾಣುತಲಿಪ್ಪವ 2 ಮಡಿ ಉಡದೆ ಉಣನೇಕೆ ಅಡಿಗೆ ನೇಮನವೇಕೆ ಅಡಿಗಡಿಗೆ ಜಪಮಣಿ ಎಣಿಸನೇಕೆ ನಡೆಯುತ ಪಥದೊಳು ತಿನ್ನಲ್ಲಾ ಮೆಲ್ಲನೇಕೆ ಪೊಡವೀಶ ಶ್ರೀ ಹರಿಯ ಅಡಿಗಳ ಬಲ್ಲವಾ 3 ಓದದೆ ಇರನೇಕೆ ವೇದ ಪಠಿಸನೇಕೆ ವೇದಮಂತ್ರ ರಚಿಸದರನೇತಕೆ ಓದನವೀಯದೆ ಬಾಳುತಲಿ ಇರನೇಕೆ ಮಾಧವನ ಚರಣಾರಾಧನೆ ಮಾಳ್ಪ 4 ತೀರ್ಥ ತಿರುಗನೇಕೆ ಯಾತ್ರಿ ಚರಿಸನೇಕೆ ವ್ಯರ್ಥ ದಿವಸವೆಂದು ಅನಿಸಲೇಕೆ ಆರ್ಥಿಯನ್ನು ನೋಡಿ ಆಟ ಆಡುವನೇಕೆ ತೀರ್ಥಪದನ ದಿವ್ಯತೀರ್ಥ ಬಯಸುವವ 5 ವ್ರತವು ಮಾಡನೇಕೆ ಕಥಿಯ ಕೇಳನೇಕೆ ಸತಿಯ ಸಂಗಡ ನಿತ್ಯರಮಿಸನೇಕೆ ಚತುರ ಸಾರೆ ಉಂಡು ಹಾಗೇ ಇರನೇಕೆ ಪತಿತಪಾವನನಂಘ್ರಿ ಮತಿಯಲ್ಲಿ ನೋಳ್ಪನಾ6 ದುರಿತವೆಂಬೋದೆಂತು ಬಿಳಿದೊ ಹಸರೊ ಕೆಂಪೊ ಕರದೊ ಮತ್ತಾವದೋ ಅದರ ವರ್ಣಾ ದುರಿತಾರಿ ವಿಜಯವಿಠ್ಠಲನ್ನದಾಸಗೆ ತನ್ನ- ತೊರೆದು ಕಾಣೊ ಹಣೆ ನೋಡದೆ ಮಹಾ 7
--------------
ವಿಜಯದಾಸ
ದುರುಳ ಬುದ್ಧಿಯನು ತೋರಿಸಬೇಡವೊ ಪ ನರವರರಿಗೆ ಇದು ಸರಿಯಲ್ಲವೋ ಕೇಳ್ ಅ.ಪ. ತುಡುಗ ಬುದ್ಧಿಯಿದ ಕಡೆಗಾಲಕೆ ಸರಿ ನುಡಿಗೆದುರಿಲ್ಲವೋ ನಿನಗಿಂದು ಕಡು ಪತಿವ್ರತೆಯರು ಬಿಡುವ ನಯನಜಲ ಉಡಿಯಲಿ ಕಟ್ಟಿದ ಉಜ್ವಲ ಶಿಖಿಯೊ 1 ಧರ್ಮಪಥದಿ ಸಂಚರಿಸುವ ಸುಜನರ ಮರ್ಮವ ಭೇಧಿಸೆ ಮಾತಿನಲಿ ಒಮ್ಮೆ ಅವರು ಬಿಸಿರುಸಿರನು ಚಿಮ್ಮಿಸೆ ಒಮ್ಮೆಗೆ ನಿನ್ನಯ ಕುಲಕ್ಷಯ ನಿಜವು 2 ಮತ್ತನಾದ ನಿನಗೆತ್ತಣದೊ ಇನ್ನು ಯುಕ್ತಾಯುಕ್ತ ವಿವೇಚನೆಯು ಭಕ್ತವತ್ಸಲ ಶ್ರೀ ಕರಿಗಿರೀಶನ ಚಿತ್ತ ಸತ್ಯವೆಂದು ತೊಳಿಯೊ ಮೂಢ 3
--------------
ವರಾವಾಣಿರಾಮರಾಯದಾಸರು
ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ ಭಂಗ ರಂಗ 1 ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ2 ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ3 ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ 4 ಭಂಗ 5
--------------
ಕನಕದಾಸ
ದುರ್ಜನರ ಸಂಗವನು ತ್ಯಜಿಸು ಮನವೆ, ಸಾಧು ಸಜ್ಜನರ ಸಂಗವನು ಭಜಿಸಿ ಸುಖಿಯಾಗೆಲವೊ ಪ ದುಷ್ಟ ವ್ಯಾಘ್ರನ ಕೈಯ ಮುಟ್ಟಿ ಹಿಡಿ ತರಬಹುದು ಅಟ್ಟಿಬಹ ಮದಕರಿಯ ಕಟ್ಟಬಹುದು ಕೃಷ್ಣಸರ್ಪನ ಹುತ್ತ ಕಲಕಿ ಜೀವಿಸಬಹುದು ದುಷ್ಟಾತ್ಮರಾದವರ ಬಿಟ್ಟು ಕಳೆ ಮನವೆ 1 ಚೇಳಬಾಲದ ಉರಿಯ ಜ್ವಾಲೆ ತಾಳಲುಬಹುದು ಕಾಲಮೇಘದ ಸಿಡಿಲು ಬೀಳಬಹುದು ಶೂಲಪಾಣಿಯ ಫಣೆಯ ಆಲಿ ಕೀಳಲುಬಹುದು ಕಾಳುಮೂಳರ ಸಂಗ ಮರೆದು ಕಳೆ ಮನವೆ 2 ಹರಿವ ಗರಗಸಿನಲ್ಲಿ ಶಿರವನೊಡ್ಡಲುಬಹುದು ಬೆರಸಿಬಹ ಕಾಡ್ಗಿಚ್ಚ ಧರಿಸಬಹುದು ಸರಿಸದಲಿ ನಿಂತು ಕೇಸರಿಯ ಕೆಣಕಲುಬಹುದು ಮರೆಸಿ ಕೊರಳನು ಕೊಯ್ವ ನರರ ಮರೆ ಮನವೆ 3 ಒಂದು ಜಾತಿಗೆ ವಿಷವು ಪುಚ್ಚದೊಳಗಿರುತಿಹುದು ಮ- ತ್ತೊಂದು ಜಾತಿಗೆ ದಂತದೊಳಗೆ ವಿಷವು ಒಂದು ಜಾತಿಗೆ ಮೈಯ ಅಂದವೆಲ್ಲವು ವಿಷವು ಹಿಂದೆಯಾಡುವ ನುಡಿಯು ಘೋರ ವಿಷ ಮನವೆ 4 ತೇರ ಕಂಡರೆ ತೊಲಗು ಮಾರೈದನಾಕ್ಷಣದಿ ವಾರುವಗೆ ಕಡೆ ಸಾರು ಈರೈದು ಮಾರುವನು ದಾರಿಯನು ಬಿಡು ಗಜಕೆ ಮೂರು ಸಾವಿರವನ್ನು ಊರ ಬಿಡು ದುರ್ಜನರ ಸೇರದಿರು ಮನವೆ 5 ಸತ್ಯವಂತರ ಕಂಡರರ್ಥಿಯಿಂದಲೆ ಎರಗು ನಿತ್ಯದೊಳು ಶ್ರೀಹರಿಯ ಕೀರ್ತನೆಯ ಮಾಡು ಉತ್ತಮೋತ್ತಮ ಪದವ ಹತ್ತಿಸುವವರ ಬೇಡು ಧೂರ್ತಮನುಜರ ಸಂಗ ಕಿತ್ತು ಕಳೆ ಮನವೆ 6 ಶುದ್ಧಮನವೆ ಎನ್ನ ಬುದ್ಧಿಯೊಳಗಡಗಿರ್ದು ಉದ್ಧರಿಸು ವರಾಹತಿಮ್ಮಪ್ಪನನು ನೆನೆದು ಮದ್ದನರೆ ಜನ್ಮದೊಳು ಮರಳಿಬಾರದ ಹಾಗೆ ಗದ್ದುಗೆಯ ಹಾಯ್ಕೆನ್ನ ಹೃದಯ ಮಧ್ಯದಲಿ 7
--------------
ವರಹತಿಮ್ಮಪ್ಪ
ದುಷ್ಟ ಮನುಜ ಕೇಳೊ ನೀ ಬಲು ಭ್ರಷ್ಟನಾದೆಯಲ್ಲೋ ಪ ಎಷ್ಟು ಪೇಳಿದರೇನು ನಿನಗೆಳ್ಳಿ- ನಷ್ಟಾದರು ಮತಿ ಬರಲಿಲ್ಲ ಅ.ಪ ಶುದ್ಧ ವೈಷ್ಣವನೆಂಬೀ ನೀನು ನಿ- ಷಿದ್ಧ ಕೂಳನು ತಿಂಬೀ ಬುದ್ಧಿಪೂರ್ವಕವಾಗಿ ನಮ್ಮ ಅನಿ ರುದ್ಧನ ನಾಮದ ನೆನೆಯದಲಿರುವಿ 1 ಬಾಯೊಳು ಬಹುನೀತಿ | ಬೊಗಳುವೆ ಹೇಯ ಕರ್ಮದಿ ಪ್ರೀತಿ ಮಾಯವಾದಿಯನುತವನು ಪೊಗಳುವೆ ಕಾಯಕ್ಲೇಶ ನಿನಗಾಗದಿರದು 2 ಭಂಗ ಹೋಗದೆ ಬಾಳೊ | ಮುಂದಕೆ ಭಂಗಿಕೋರನೆ ಕೇಳೊ ರಂಗೇಶವಿಠಲನ ಮೊರೆಹೊಗು ನಿನ ದುರಿ- ತಂಗಳು ಪೋಪವು ಮಂಗನಾಗಬೇಡ 3
--------------
ರಂಗೇಶವಿಠಲದಾಸರು
ದೂರ ಕೇಳೊ ದೊರೆಯೆ ಥಟ್ಟನೆ ಬಾರೊ ಭಕ್ತ ಸಿರಿಯೆ ಗತಿ ಹರಿಯೆ ಪ. ಖುಲ್ಲ ವೈರಿಯು ಮೊದಲನೆಯ ಕಳ್ಳ ಸನ್ನಿಧಿಯಲಿ ಬಂಧಿಸಿ 1 ಕ್ರೋಧನನೆಂಬವನಿವನು ಮಾನಸ ಬೋಧವ ಕೆಡಿಸುವನು ಮಾಧವ ಮಧುವತ್ಕರಿದಿ ನಿವಾರಿಸಿ 2 ತುದಿ ನಡು ಮೊದಲಿಲ್ಲ ಲೋಭ ತಡೆಯುವವರ್ಯಾರಿಲ್ಲ ಶ್ರೀಮಡದಿಯ ನಲ್ಲ 3 ಬಾಹ ಬಾಧೆಗಳನು ತಿಳಿಸದೆ ಚೋಹದಿ ಕೆಡಹುವನು ಮಹಿಮೆಯ ಮಾರ್ಗವ ತಿಳಿಸುತ 4 ಅಷ್ಟವೇಷವುಳ್ಳ ಐದನೆ ದುಷ್ಟನು ಬಿಡಲೊಲ್ಲ ಮುರಿದಟ್ಟು ದಯಾಪರ 5 ಮತ್ಸ್ಯಘಾತಿಯಂತೆ ಕುತ್ಸಿತ ಮತ್ಸರನೆಂಬುವನು ಸತ್ಸಂಗಗತಿಗಳನುತ್ತರಿಪನು ಶ್ರೀವತ್ಸ ಬೆನ್ಹನೀ ತಾತ್ಸಾರಗೊಳದಲೆ 6 ಈ ಶತ್ರುಗಳಿರಲು ತತ್ವ ವಿಲಾಸಗಳೆಂತಹವು ಶೇಷಗಿರೀಶ ಕೃಪಾಂಬುಧಿ7
--------------
ತುಪಾಕಿ ವೆಂಕಟರಮಣಾಚಾರ್ಯ
ದೂರ ನೋಡದಿರೆಲೊ ರಂಗಯ್ಯಾ ಪ. ಭವ ಮಡುವಿನೊಳಗಿರುವೆನೋ ಪಿಡಿಯೆನ್ನ ಕೈಯ ತಡಮಾಡ ಬ್ಯಾಡಯ್ಯ ಅ.ಪ. ಹಿಂದೇಸು ಜನ್ಮಂಗಳು ಬಂದು ಪೋದಾವಯ್ಯ ಮುಂದಿನಾಗತಿಯು ತೋರದಯ್ಯಾ ತಂದೆ ತಾಯಿ ಸರ್ವ ಬಂಧು ಬಾಂದವಾ ಕಂದರ್ಪ ಪಿತನೆ1 ಆರು ಕಾಯುವರಿಲ್ಲಾ ಮುರಾರಿ ನಿನಗೆ ಸಾರಿದೆನಲ್ಲಾ ಸೇರಿಸೋ ಸಾಧು ಜನರ ಸಹವಾಸಾ ಹರಿ ನಿನ್ನಲ್ಲಿ ಮನಸು ನಿಲ್ಲಿಸು ಶ್ರೀಶಾ ಶ್ರೀನಿವಾಸಾ 2 ಯೆಷ್ಟು ಹೇಳಲಿ ಯನ್ನ ಕಷ್ಟ ಕೇಳುವರಿಲ್ಲ ಅರಿಷ್ಟ ಸಂಸಾರದೊಳೂ ಕೆಟ್ಟು ಪೋಗುವೆನು ದೃಷ್ಟಿಯಿಂದಲಿ ನೋಡೆನ್ನ ಕಾಳಿಮರ್ಧನಕೃಷ್ಣವಾ 3
--------------
ಕಳಸದ ಸುಂದರಮ್ಮ
ದೂರ ನೋಡುವರೆ ರಂಗಯ್ಯ ಎನ್ನ ಪ ದೂರ ನೋಡುವರೇನೋ ಸಂಸಾರ ಶರಧಿಯೊಳಗೆ ಮುಳುಗಿ ದಾರಿಗಾಣದೆ ನೀನೆ ಗತಿ ಮು-ರಾರಿಯೆಂದು ಸಾರಿದ ಮೇಲೆ ಅ.ಪ ಆಸೆ ಬಿಡದೆಲೊ ಕಾಸುವೀಸಕೆ-ಕ್ಲೇಶ ಘನ್ನವೆಲೊ ಈಶ ಯಾರಿಗೆ ಪೇಳಲೊಶವೆಲೊ-ಶ್ರೀಶ ಎನ್ನ ಮನಸಿನಲ್ಲಿ ಬಹಳ ಘಾಸಿಪಟ್ಟೆನೊ-ದಾಶರಥಿ 1 ಭಕುತಿಯಿಲ್ಲವೊ ಅದರ ಹೊರತು-ಮುಕುತಿಯಿಲ್ಲವೊ ಯುಕುತಿಯಿಂದಲಿ ವಲಿವನಲ್ಲವೊ- ಮುಕುತಿದಾಯಕ ನಿನ್ನ ಕಾಣದೆ ಭಕುತಿಗೋಸುಗ ಪರರ ತುತಿಸಿ, ಕಕುಲಾತಿಯಿಂದಲೆನ್ನ- ಶಕುತಿಯೆಲ್ಲ ನಷ್ಟವಾಯಿತು 2 ಪೊರೆಯದಿರುವರೆ ಕರುಣಾಳುಯೆಂಬ-ಬಿರುದ ಬಿಡುವರೆ ಹರಿಯೆ ಯೆನ್ನ ಮರೆತು ಬಿಡುವರೆ- ಕರಿಯು ಹರಿಯೇ ಎಂದು ಕರೆಯೆ ಸಿರಿಗೆ ಪೇಳದೆ ಭರದಿ ಬಂದು, ಪೊರೆದೆಯೆಂಬ ವಾರ್ತೆಕೇಳಿ -ಮರೆಯ ಹೊಕ್ಕೆನೊ ವಿಜಯವಿಠ್ಠಲ 3
--------------
ವಿಜಯದಾಸ
ದೂರ ಮಾಡುವರೇ ರಂಗಯ್ಯ ರಂಗಾ ಪ ದೂರ ಮಾಡುವರೇನೊ ಶಿಖರಪುರದ ಧೊರಿಯೆಶ್ರೀ ಶ್ರೀನಿವಾಸ ದಯಾಶರಧಿ ಅ.ಪ. ಕ್ಲೇಶ ಪಡುತ ಬಾಯಿ ಬಿಡಲು ಕಂಡು ದುಷ್ಟ ಜನರು ನೋಡಿ ಕಷ್ಟಬಿಡಿಸುತಿರಲು ಕಂಡು 1 ಕರ್ಮ ಬಂದು ಒದಗಿತೋ ದೇವ ಈಸು ಬವಣೆಬಟ್ಟು ಬಿಡುತಿರಲು ಕಂಡು 2 ದಾಸಜನರ ದೋಷವೆಣಿಸಬಹುದೆ ರಂಗ ಈಶನೆನಿಸಿಕೊಂಡುಮನ್ನಿಸಿ ಕೇಳೋ ಎನ್ನ ಬಿನ್ನಪ ಫಣಿಶಯನ ತಂದೆವರದಗೋಪಾಲವಿಠಲ 5
--------------
ತಂದೆವರದಗೋಪಾಲವಿಠಲರು