ಒಟ್ಟು 2419 ಕಡೆಗಳಲ್ಲಿ , 114 ದಾಸರು , 1608 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮಂತ ದೇವನ ನೋಡಿ ಘನ ವಿಜ್ಞಾನ ಧನವನ್ನು ಬೇಡಿ ಪ ಅನುಮಾನ ಸಲ್ಲ ಸುರಧೇನುವೆನಿಸುವನು ತನ್ನ ನೆನೆವರಿಗೆ ಅ.ಪ. ಅಂಜನದೇವಿಯೊಳ್ ಪುಟ್ಟಿ | ಪ್ರ- ಭಂಜನ ಸುತ ಜಗಜಟ್ಟಿ | ಶ್ರೀ ಕಂಜನಾಭನನು ಕಂಡು ಭಜಿಸುತಲಿ ತಾನು ರಂಜಿಪನು 1 ಪಾಥೋದಿಯನು ನೆರೆದಾಟಿ | ರಘು - ನಾಥನ ಮಡದಿಗೆ ಭೇಟಿ | ಇತ್ತು ಖ್ಯಾತ ಲಂಕೆಯನು ವೀತಿ- ಹೋತ್ರನಿಗೆ ಕೊಟ್ಟ ಬಲುದಿಟ್ಟ 2 ಸಂಜೀವನಾದ್ರಿಯ ತಂದು | ಕಪಿ ಪುಂಜವನೆಬ್ಬಿಸಿ ನಿಂದು | ತುಸ ಅಂಜಕಿಲ್ಲದಲೆ ಅಸುರರನು ಭಂಜಿಸಿ ನಿಂತ ಜಯವಂತ 3 ಶ್ರೀರಾಮಚಂದ್ರನು ಒಲಿದು | ಮಹ ಪಾರಮೇಷ್ಠ್ಯವನೀಯೆ ನಲಿದು | ಮುಕ್ತಾ ಹಾರ ಪಡೆದ ಗಂಭೀರ ಶೂರ ರಣಧೀರ ಉದಾರ 4 ಎಂತೆಂತು ಸೇವಿಪ ಜಂತು | ಗಳಿ ಗಂತಂತೆ ಫಲವೀವನಿಂತು | ಶ್ರೀ - ಕಾಂತ ನಾಮವನು ಆಂತು ಭಜಿಪರಲಿ ಪ್ರೇಮ ಬಹುನೇಮ 5
--------------
ಲಕ್ಷ್ಮೀನಾರಯಣರಾಯರು
ಹನುಮಂತ ದೇವರು (ದಂಡಕ) ಅಂಜನಿಯ ಉದರದಿಂ ಪುಟ್ಟುತಾರ್ಭಟಿಸುತಲಿ ಕಂಜಮಿತ್ರಂಗೆ ಹಾರ್ದೆ ಧೀರಾ ವಾಯುಕುಮಾರಾ ರಣರಂಗಧೀರಾ ಕದನಕಂಠೀರಾ ದಿನಮಣಿಯ ಪಿಡಿದು ನುಂಗುವೆನೆಂಬೊ ಸಮಯದೋಳ್ ಬರಲು ದೇವತೆ ನಿಕರಗಳೆಲ್ಲಾ ಬೆದರಿಸಿದಿ ಎಲ್ಲಾ ಭಾಪು ಭಲ ಭಲ್ಲ ಭಾರತಿಯ ನಲ್ಲ ಸೂರ್ಯಸುತನಂ ಕಂಡು ಪಂಪಾಸರೋವರದಿ ಭಾಸ್ಕರಾನ್ವಯಗೆರಗಿ- ದೆಂದು ಜಯ ಜಗದ್ಬಂಧು ಕಾರುಣ್ಯಸಿಂಧು ಸೀತಾಪತಿಯ ಕರುಣದಿಂದ ಗಗನಕ್ಕೆ ಖ್ಯಾತಿಯಿಂದಲಿ ಬ್ಯಾಗ ಬೆಳದಿ ವೃಷಿಗಳನಳದಿ ದೈತ್ಯರ ತುಳದಿ ರಾಮಮುದ್ರಿಯ ಕೊಂಡು ಅಜನಸುತ ಸಹಿತಾಗಿ ನೇಮದಿಂ ಶರಧಿಯಂ ನೋಡಿ ದುರಿತಗಳ ದೂಡಿ ಪಾಡಿ ಕೊಂಡಾಡಿ ಕೋಟಿ ಸಿಡಿಲಬ್ಬರಣೆಯಿಂದ ಜಲಧಿಯ ಜಿಗಿದು ದಾಟಿದಿ ಲಂಕಾಪುರ- ವನ್ನು ಪೇಳಲಿನ್ನೇನು ಭುಜಬಲವನ್ನು ತೃಣಬಿಂದು ಋಷಿಯ ಕಾಣುತಲಲ್ಲಿ ಕುಣಿದಾಡಿ ಪರಿಪರಿಯ ಚೇಷ್ಟೆ- ಗಳಿಂದ ಮಾಡಿದೈ ಛಂದ ಅಂಜನೆಯ ಕಂದ ಪುನಹ ಲಂಕೆಗೆ ಹಾರಿ ಲಂಕಿಣಿಯ ಸಂಹರಿಸಿ ಭೂಜಾತೆಯನು ಅರಸು- ತಲ್ಲಿ ಅತಿರೋಷದಲ್ಲಿ ತಿರುತಿರುಗುತಲ್ಲಿ ರಾಮನಾಮಾಮೃತವ ಜಿಹ್ವಾಗ್ರದೋಳ್ ಸುರಿವ ಭೂವಿಜಯ ಚರಣಮಂ ಕಂಡು.... ಮಾಡಿದೈ ಗಂಡು ರಘುವರನ ಮುದ್ರೆಯನಿತ್ತು ನಿಜಮಾತೆಗೆ ಹರುಷಬಡಿಸಿದಿ ಹನೂ- ಮಂತಾ ಗುರುಮುನಿಯ ಶಾಂತಾ ದಿವಸಾಧಿಪತಿಕೋಟಿತೇಜದಿಂ ಮೆರೆವಂಥಾ ಜಯ ಹನುಮ ಭೀಮ ಬಲವಂತಾ ಬಾಲದಿಂ ಬೆಂಕಿಯಂ ಹಚ್ಚಿ ಲಂಕಾಪುರವ ಲೀಲೆಯಿಂದಲಿ ದಹನಮಾಡಿ ಸುತ್ತ ಓಡ್ಯಾಡಿ ದೈತ್ಯರಂ ಕಾಡಿ ಸುರನಿಕರವಂದು ಆಕಾಶಮಾರ್ಗದಿ ಎಲ್ಲ ದೇವದುಂದುಭಿನಾದ ಗೈದು ..................................ಮಹಿಮೆ ಹೌಧೌದು ತ್ರಿಭುವನದೊಳಗಧಿಕನೈ ಕದರುಂಡಲಗಿರಾಯಾ ಅಭಯಮಂ ಕೊಡು ಎನ್ನ ಧೊರೆಯೆ ನಾ ನಿನ್ನ ಮರೆಯೆ ಅಗಡಿಪುರದಲಿ ನಿನ್ನ ಕೃಪೆಯಿಂದ ಪೇಳ್ದೆನೈ ಸೊಗಸಿನಿಂದ ಇಡು ಮಹಾರಾಯ ಅವನಾಯುಗೇಯಾ ಹನುಮಂತರಾಯಾ ಶ್ರೀಹನುಮಂತಗೌಡರ್À ಬಹಾದ್ದೂರರನ್ನು ಸರ್ಪಸುತಪುರದಲ್ಲಿ ಕಾಯ್ವ ಇಷ್ಟಾರ್ಥವೀವ ಭಕುತ ಸಂಜೀವ ಶ್ರೀ ಹನುಮಂತ ದಂಡಕವ ಕೇಳ್ದರ್ಗೆ ಇಹಪರದಿ ಶ್ರೀಹರಿಯೆ ಬಂದು ಅವರಲ್ಲಿ ನಿಂದು ಕಾರುಣ್ಯಸಿಂಧು ಪರಾಕು ಪರಾಕು
--------------
ಕದರುಂಡಲಗಿ ಹನುಮಯ್ಯ
ಹಯ ಮುಖ ಪದಾಬ್ಜ ಮಧುಪಾ | ದುರ್ಭವಭಯವ ತಾರಿಸು ಮುನಿಪಾ ಪ ವ್ರಯವಾಯಿತು ಮಮ | ಆಯುವು ಎಲ್ಲವುಪ್ರಿಯ ನೀನಲ್ಲವೆ | ಭಯ ಪರಿಹರಿಸೈ ಅ.ಪ. ರಜತ ಪುರಿಲಿ ನಿಂದೂ | ವಿಧಿಸಿದಿಅಜಪಿತ ಭಜನೆಯ ನಂದೂ |ಋಜಗಣದಲಿ ಬಹು | ರಾಜಿಪ ಗುರುವೇಅಜನ ಸುಪದವಿಗೆ | ನಿಜದಿ ಬರುವ ಯತಿ 1 ಸೋದೆ ಪುರದಿ ವಾಸಾ | ಭಕ್ತರ$ಗಾಧ ದೋಷ ನಾಶಾ ||ವಾದಿ ಜನರ ಮದ | ಛೇದನ ದಶಮತಿಬೋಧಪ್ರೀಯ ಗುರು | ಮೋದವ ಪಾಲಿಸು 2 ಪಂಚ ವೃಂದಾವನವಾ | ರಚಿಸುತಪಂಚರೂಪಿ ಹರಿಯಾ ||ಸಂಚಿಂತಿಸಿ ಭಕ್ತ | ವಾಂಛಿತ ಗರೆಯಲುಸಂಚುಗೊಳಿಸಿ ಪ್ರ | ಪಂಚವ ತೊರೆದೇ 3 ಅಮರೇಂದ್ರ ನಾಳ್ಬರಲೂ | ತ್ರೈವಿಕ್ರಮ ದುತ್ಸವದೋಳೂ ||ಸಮಯವಲ್ಲವಿದು | ನಿಮಗೆಂದೆನುತಲಿಕ್ರಮಿಸುವ ತೆರ ನೀ | ಮಾಡಿದೆ ಯತಿವರ 4 ಪೂವಿಲ್ಲನ ಪಿತನಾ | ಗುರುಗೋವಿಂದ ವಿಠ್ಠಲನಾ ||ಭಾವದಿ ಕಾಣುತ ಮೈಮರೆದ್ಹಿಗ್ಗುವಈ ವಿಧ ಸುಖ ಯಾವಾಗಲೂ ಕಾಣುವ 5
--------------
ಗುರುಗೋವಿಂದವಿಠಲರು
ಹರತನ್ನ ಕರದಲಿ ಪ್ರಾಣಲಿಂಗವನು ಧರಿಸಿಪ್ಪನೆಂಬುದ ಕೇಳಿ ರಾವಣನು ತರುವೆನೆನುತ ಪೋಗಿ ಭಜಿಸೆ ಶಂಕರನ ಕರುಣಿಸಲಾತನ ಮನದಭೀಷ್ಟವನು ದುರುಳ ಖಳತಾ ಕೊಂಡು ಲಿಂಗವ ಪುರಕೆ ಗಮಿಸುವ ವ್ಯಾಳ್ಯದಲಿ ವಿಧಿ ಸುರಪ ಮುಖ್ಯ ಅಮರರು ನಿಮ್ಮಯ ಸ್ಮರಿಸೆ ಮೆಚ್ಚಿದ ಪಾರ ಮಹಿಮನೆ ಮೊರೆ ಹೊಕ್ಕೆ ನಿಮ್ಮ ಪಾದವನು ವಿಘ್ನೇಶ 1 ಕರುಣಿಸೋ ಎನ್ನ ವಾಂಛಿತವ ಸರ್ವೇಶ ಪರಮ ಪಾವನ ವೇಷ ಮುನಿ ಜನರ ಪೋಷಾ ನಿರುತ ಭಕ್ತ ವಿಲಾಸ ನಿರೂಪ ಮಹೇಶ ಹರಿ ಮುಂತಾದವರೆಲ್ಲ ನುತಿ ಸುತ್ತಲಿಂದು ಕರಿವಕ್ತ್ರ ನೀ ಕೇಳು ಪರಮೇಶನಂದು ಕರದ ಲಿಂಗವ ನಿತ್ತನಾ ದಶಶಿರಗೆ ವರ ದೈವ ದ್ರೋಹಿ ರಕ್ಕಸನಾತನಿಂಗೆ ವರ ಮಹಾಲಿಂಗವದು ಸೇರಲು ತಿರುಗಿಡುವಯತ್ನವನು ಪೇಳಿಯೋ ಪೊರೆಯ ಬೇಕೆನಲ ಭಯನಿತ್ತ ನಾ ಮೊರೆಹೊಕ್ಕೆ 2 ಇವಗೆ ಚಕ್ರವನಾಗಹರಿ ಪಿಡಿದಿರಲು ಧನುಜೇಶ ಸಂಧ್ಯಾವಂದನೆಗೆ ಯೋಚಿಸಲು ಘನ ಮಹಿಮನೆ ನೀನು ವಟುರೂಪಿನಿಂದ ಮಣಗುತ್ತಿರಲು ಕಂಡು ಖಳ ಕರದಿಂದ ಅಣುಗನಿಮ್ಮಯ ಮಹಿಮೆಯರಿಯದೆ ಪೇಳೆ ವಿನಯದಿಂ ಲಿಂಗವನು ಖಳಬರುವ ತನಕ ಕರದಲಿ ಪಿಡಿದಂತಹ ಪರಮ ಮಹಿಮನೆ 3
--------------
ಕವಿ ಪರಮದೇವದಾಸರು
ಹರಹರ ವಿಶ್ವೇಶ್ವರ ಕರುಣಾಕರ ಪರಮ ಪುರುಷ ದೇವಾ ಚರಾಚರವ ತುಂಬಿಭರಿತವಾಗಿ ಸ್ಮರಿಸುವ ಭಕ್ತರ ತ್ವರಿತದಿ ಪಾಲಿಪ ಪ ಗಜಾಸುರನೆಂತೆಂಬ ದನುಜನ ವಿಜಯನಾಗಿ ತೊಗಲನ್ನು ಪೊತ್ತೆ ನಿಜಾನಂದವ ನೀವಾ ಚಿನ್ಮಯನೇ 1 ತನುಮನದೊಳಗೆಲ್ಲಾ ಹೊಳೆಯುತಲಿರ್ಪಾ ಜನಜನಿತಳಲ್ಲಿ ಪ್ರಣವರೂಪನಾದ ತುಂಬುತ್ತಾ ತುಳುಕುತ್ತಾ ಘನಪರಮಾನಂದಾ ಸಚ್ಚಿದ್ರೂಪಾ 2 ಒಳಹೊರಗೆಂಬೀ ಭೇದಗಳೆಲ್ಲವ (ಹೊರಗೆ ಒಳಗೆ) ಹರಣ ಮಾಡುತಿರ್ಪಾ ಹರನೇ ನಾನೀನಾದ ಕಾರಣ ಬೆರತು ನಿನ್ನೊಳು ಸ್ಮರಿಸುವೆ ಭರದಿ 3 ಚಿಂತೆಗಳೆಲ್ಲವನೀಗೆ ನಿಜಾನಂದ ಸಂತಸಗಳನೀವಾ ಅಂತವಿಲ್ಲದಾನಂತ ಪರಾತ್ಪರ ಶಾಂತಿ ಪದವನೀವ ಮಹಾದೇವಾ 4
--------------
ಶಾಂತಿಬಾಯಿ
ಹರಿ ಗೋರಸ ಕುಡಿವುದು ನೋಡಿರೋ |ಪರಿ ಪರಿಯ ಸಂಭ್ರಮ ಮಾಡಿರೋ ಪ ಕಾರಣ ಒರಳಲಿ ವೃತ್ತಿಗುಣದಿ ತಾ |ಇದ್ದು ಯಶೋದೆಯು ಕಟ್ಟಿರಿಸಿ ||ಸ್ತನವನುಣಿಸುತಿರಲು ನಿಜಕರ್ಮದ |ಬಲದಿ ಬಿಡಿಸಿಕೊಂಡಾಡುತಲಿ 1 ನಾ ನಾ ಎನುತಾಡುವಾ ಗೋಪಾಲರ |ನೆರೆಸುವರಂತೆ ಕುಣಿವುತಲಿ ||ನಾನಾ ದ್ವಾರಗಳಿಂದ ಧುಮುಕಿ |ಮುಚ್ಚಿದ ಮಡಿಕೆಗಳ ನೋಡುತಲಿ 2 ರಾಗ ಪೀಠದಲಿ ಮೋಹದ ಹೆಗಲಲಿ |ನಿಲ್ಲಲು ನೆಲವು ನಿಲುಕುತಿರಲು ||ಯೋಗ ರುಕ್ಮ ಘಟಿಯನಾ ಛೇದಿಸಿ |ವಿರತಿ ಗೊಲ್ಲತಿಗತಿ ಕಾಡುತಲಿ 3
--------------
ರುಕ್ಮಾಂಗದರು
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿ ನಿಮ್ಮ ಮಹಿಮೆ ಅರಿಯರಾರಾರು ನರ ಮನುಜರ ಪಾಡೇ ಸುರಮುನಿಗಳೆ ನಿನ್ನರಸಿ ಕೊಂಡಾಡಲು ದೊರೆಯದಿರುವಿ ಘನ ಪರತರಮಹಿಮ ಪ ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆಯುತ ಸೃಷ್ಟಿಗೊಳಿಸುತಿರುವಿ ಇಷ್ಟಭಕುತರ ಕಷ್ಟ ನಿವಾರಿಸಿ ಇಷ್ಟಪೂರೈಸುತಿರುವಿ ನಿಷ್ಠೆಯಿಂದ ಮನಮುಟ್ಟಿಭಜಿಪರನು ಬಿಟ್ಟಗಲದೆ ದೃಷ್ಟಿಯಿಂ ನೋಡುವಿ 1 ಲಾಷೆಯ ನೀಡುತಲಿ ಘಾಸಿ ಮಾಡದೆ ದೋಷರಾಶಿಯ ಕಳೆಯುತಲಿ ಪೋಷಿಸಿ ತ್ರಿಜಗದೀಶನೆ ಈ ಭವ ಪಾದವ ಖಂಡಿಸಿ ವಾಸುಕಿಶಯನ 2 ಮನಸಿಜಾರಿಯಂ ಘನಸಂಕಟದಿಂದ ಕನಿಕರದಿಂ ಕಾಯ್ದಿ ದನುಜಕುಲವನು ಹಣಿದು ಸುರರಿಗೆ ಘನಸೌಖ್ಯವನ್ನಿತ್ತಿ ತನುಮನ ಧನದಿಂ ನೆನೆಯುವ ಭಕುತರ ನೆನವಿಗೆ ಸಿಲುಕದಿ ಚಿನುಮಯ ರಾಮ 3
--------------
ರಾಮದಾಸರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಪರದೈವ ಚತುರ್ದಶ ಲೋಕಕೆ | ಉರಗನ ಮುಂಡಿಕೆ ತುಳುಕಿ ಪೇಳುವೆ ನಾನು ಪ ಮುನಿಗಳೆಲ್ಲ ನೆರೆದು ಸದ್ವರವ ಮಾಡುತಲಿ | ಮನ ಬಂದ ಹಾಗೆ ಅರ್ಪಿಸುತಿರಲು | ಮುನಿ ನಾರದನು ಕೇಳೆ ಭೃಗು ಮುನಿಯನು ಕಳುಹಿ | ವನಜನಾಭನೆ ದೈವವೆಂದು ನಿರ್ಣೈಸಿದರು1 ದುರ್ವಾಸ ಮುನಿಪಗೆ ಚಕ್ರ ಎಡೆಗೊಂಡಿರಲು | ಅಜ ಗಿರೀಶಾ || ಗೀರ್ವಾಣರಾದ್ಯರು ಪರಿಹರಿಲಾರದಿರೆ | ಸರ್ವೋತ್ತಮನೆ ಒಬ್ಬ ಹರಿಯೆಂದು ಸಾರಿದರು 2 ಕರಿ ಬಾಧೆಯನು ಬಡುತಲಿ | ಕಾವವಾತನೆ ದೈವ ಎಂದು ಕೂಗೆ || ನಾವು ತಾವು ಎಂದು ಎಲ್ಲರು ಸುಮ್ಮನಿರೆ | ತಾವ ಕಾಕ್ಷನೆ ಕಾಯ್ದಾ ಪರದೇವತೆ ಎಂದು 3 ಹÀಯಮುಖನು ವೇದಗಳು ಕದ್ದೌಯೆ ಸಕಲರು | ಭಯಬಿದ್ದು ನಿತ್ರಾಣರಾಗಿರಲು || ಜಯದೇವಿ ರಮಣನು ವೇದವನು ತಂದು ಜಗ | ತ್ರಯಕೆ ಒಡೆಯನೆನೆಸಿಕೊಂಡ ಪರನೆಂದು 4 ಮೊದಲು ನಿರ್ಣಯವಾಗಿ ಇರಲಿಕ್ಕೆ ಮಂದಮತಿ | ಮದಡ ಮನುಜರೆಲ್ಲ ನೆಲೆಗಾಣದೆ || ಮದನ ಪಿತ ವಿಜಯವಿಠ್ಠಲನ ಒಲಿಸಿಕೊಳ್ಳದೆ | ಮದ ಗರ್ವದಲಿ ನುಡಿದು ನರಕದಲ್ಲಿ ಬೀಳುವರೂ5
--------------
ವಿಜಯದಾಸ
ಹರಿಕಥಾಮೃತಸಾರದ ಫಲಶ್ರುತಿ ಶ್ರೀ ಮದಶ್ವಗ್ರೀವನೊಲುಮೆಗೆ ಧಾಮರೆನಿಪ ಶ್ರೀ ವಾದಿರಾಜರುಪ್ರೇಮದಲ್ಲಿ ಜಗನ್ನಾಥದಾಸರ ಸ್ವಪ್ನದಲಿ ಬಂದುಶ್ರೀ ಮನೋರಮನರಿಪ ತತ್ವ ಸು ಸೌಮನದ ಮಾಲಿಕೆಯನಿತ್ತು-ದ್ದಾಮ ಗ್ರಂಥವ ರಚಿಸಿರೆನುತಲಿ ನುಡಿದ ಕಾರಣದೀ ಪ ಭಾಗವತ ಗಾರುಡ ಭವಿಷ್ಯೋತ್ತರ ಪುರಾಣಚಾರು ವಿಷ್ಣು ರಹಸ್ಯ ಪಂಚರಾತ್ರಾಗಮ ವಾಯುಸಾರ ಗುರವೃತ್ಪ್ರವೃತ್ತವು ಈರ ಸಂಹಿತಾದಿತ್ಯವಾಗ್ನೇಯಪಾರ ರಸಗಳ ತೋರ್ಪ ಶ್ರೀ ಗುರು ಮಧ್ವ ಶಾಸ್ತ್ರದಲೀ 1 ಸಾರ ಕ್ರೋಢೀಕರಿಸಿ ದೀನೋ-ದ್ಧಾರಗೋಸುಗ ಹರಿಕಥಾಮೃತ ಸಾರವನು ರಚಿಸೀಸ್ಥೈರ್ಯ ಮಾನಸದಿಂದ ಭಾವೀ ಭಾರತೀಪತಿ ವಾದಿರಾಜರಭೂರಿ ತೋಷಕೊಪ್ಪಿಸುತಲಾಪಾರ ಮುದ ಪಡೆದೂ 2 ಸಾಸಿರಾರ್ಥಗಳೊಂದು ಪದಕವಕಾಶವಿರುವೋ ಶ್ರೀದ ವಿಷ್ಣುಸಾಸಿರದ ನಾಮವನು ಯೋಚಿಸಿ ಇಹರು ಗ್ರಂಥದಲೀಈಸು ರಹಸ್ಯವನರಿತು ಪಠಪಗೆ ಏಸು ದೂರವೊ ಮುಕ್ತಿಬರಿದಾ-ಯಾಸ ಬಟ್ಟುದರಿಂದ ಫಲವೇನಿಲ್ಲವೀ ಜಗದೀ 3 ಹ ಯೆನಲು ಹರಿಯೊಲಿಯುವನು ತಾ ರಿ ಯೆನಲು ರಿಕ್ತತ್ವ ಹರಿಸುವಕ ಯೆನಲು ಕತ್ತಲೆಯೆಂಬಾಜ್ಞಾನವನು ಪರಿಹರಿಪಾಥಾ ಯೆನಲು ಸ್ಥಾಪಿಸುವ ಜ್ಞಾನ ಮೃಯೆನಲು ಮೃತಿಜನಿಯ ಬಿಡಿಸುವತ ಯೆನಲು ಹರಿ ತನ್ನ ಮೂರ್ತಿಯ ತೋರುವನು ನಿತ್ಯಾ 4 ಸಾ ಯೆನಲು ಸಾಧಿಸುವ ಮುಕ್ತೀ ರ ಯೆನಲು ರತಿಯಿತ್ತು ರಮಿಪನುಕಾಯ ವಾಙ್ಮನದೆಂಟು ಅಕ್ಕರ ನುಡಿದರದರೊಳಗೇಶ್ರೀಯರಸು ವಿಶ್ವಾದಿ ಅಷ್ಟೈಶ್ವರ್ಯ ರೂಪದಿ ನಿಂತು ತಾ ಪರ-ಕೀಯನೆನಿಸದೆ ಇವನ ಮನದೊಳು ರಾಜಿಪನು ಬಿಡದೇ 5 ಅನಿರುದ್ಧ ಧರ್ಮವು ದೊರಕಿಸುವ ಪರಮ್ಹರುಷದಲ್ಲಿ ಸ-ತ್ವರ ಕಥಾಯೆನೆ ಕೃತಿರಮಣನರ್ಥಗಳ ಹನಿಗರೆವಾವರ ಅಮೃತಯೆನಲಾಗ ಶ್ರೀ ಸಂಕರುಷಣನು ಕಾಮವನು ಯೋಜಿಪಸರಸ ಸಾರೆನೆ ವಾಸುದೇವನು ಮೋಕ್ಷ ಕೊಡುತಿಪ್ಪಾ 6 ನಿತ್ಯ 7 ಚಾರುತರದೀ ಹರಿಕಥಾಮೃತ ಸಾರಕೃತ ಋಷಿ ಭಾರದ್ವಾಜರುಸಾರ ಹೃದಯದಿ ನಿಂತು ಸಕಲ ಸು ಶಾಸ್ತ್ರದಾಲೋಕಾಸಾರಿ ಸಾರಿಗೆ ಮಾಡಿ ಮಾಡಿಸಿ ಸೂರೆಗೊಟ್ಟಾನಂದ ಚಿನ್ಮಯಪಾರವಾರಾಶಯನ ಶ್ರೀ ಕಮಲಾಪತಿ ವಿಠಲಾ 8
--------------
ಕಮಲಪತಿವಿಠ್ಠಲರು
ಹರಿತ್ರಿವಿಕ್ರಮ ವ್ಯಾಸವಿಠಲ | ಪೊರೆ ಇವಳಾ ಪ ದುರಿತ ದುಷ್ಕøತವೆಲ್ಲ | ದೂರಮಾಡುತಲೀ ಅ.ಪ. ಸಾರ | ಪಠಿಸೆಂದು ಪೇಳ್ದಾ 1 ವರುಷ ಪೈಂಗಳ ಪುಷ್ಯ | ಆರಾಧನೆಯದಿನದಿಗುರುಗಳನು ಕಂಡೀಕೆ | ಅವರೆ ಇವರೆಂದುಭರದಿ ನಿಶ್ಚಯಿಸುತಲಿ | ಹರಿದಾಸ್ಯ ಕಾಂಕ್ಷಿಸುತಗುರುವೆಂದು ಎನ್ನ ಬಳಿ | ಪ್ರಾರ್ಥಿಸುತ್ತಿಹಳಾ 2 ಕಂಸಾರಿ ಕಳೆದು ಭವಸಂಸಕ್ತಳಾಗಿಸದೆ | ಉದ್ದರಿಸೊ ಇವಳಾಶಂಸಿಸೀ ತವಪಾದ | ಪಾಂಸುವನೆ ಧರಿಸಿ ನಿ-ಸಂಶಯದಿ ತವದಾಸ್ಯ | ಸಿದ್ದಿಸೊ ಹರಿಯೇ 3 ಪತಿತ ಪಾವನ ರಂಗ | ಪತಿವ್ರತೆಗೆ ಸುಜ್ಞಾನಭಕ್ತಿ ಹರಿಗುರುಗಳಲಿ | ಇತ್ತು ಅಧಿಕಧಿಕಾವತ್ತಿ ಬಹ ವಿಘ್ನಗಳ | ಹತ್ತಿಕ್ಕಿ ಪೊರೆಯೆಂದುಅರ್ಥಿಯಲಿ ಬಿನೈಪೆ | ಮರುತಂತರಾತ್ಮ 4 ದರ್ವಿ ಜೀವಿಯ ಪೊರೆಯೊ | ದುರ್ವಿಭಾವ್ಯನೆ ಹೃದಯಗಹ್ವರದಿ ತವರೂಪ | ತೋರ್ವ ಮನಮಾಡೀಸರ್ವತ್ರ ತವನಾಮ | ದಿವ್ಯ ಸಂಸ್ಕøತಿ ಈಯೊಸರ್ವೊತ್ತಮನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿದಾಸನಾದರೆ ಹ್ಯಾಂಗಿರಲಿ ಬೇಕು ನರಲೋಕದ ಚಿಂತೆ ಬಿಟ್ಟುಕೊಡಬೇಕು ಪ ಇಂದ್ರಿಯಗಳನ್ನೆಲ್ಲ ಗ್ರಹಿಸಬೇಕು ಬಂದದೆಲ್ಲ ಬರಲಿ ಈಗಲೇ ಎನಬೇಕು ಅಂದವರು ಎನಗೆ ಬಂಧುಗಳು ಎನಬೇಕು 1 ಸ್ನಾನವನು ಬಿಟ್ಟು ಹರಿಕಥೆಯ ಕೇಳಲಿ ಬೇಕು ಮಾನಾಭಿಮಾನಕ್ಕೆ ಹರಿತಾನೆ ಎನಬೇಕು ಏನಾದರಾಗಲಿ ಸುಖಬಡಲಿಬೇಕು 2 ಇರಳು ಹಗಲು ಹರಿಸ್ಮರಣೆ ಮಾಡಲಿ ಬೇಕು ಪರಲೋಕದ ಗತಿ ಬಯಸಬೇಕು ಗುರುಹಿರಿಯರಿಗೆ ವಂದನೆಯ ಮಾಡಲಿ ಬೇಕು ದುರುಳರನ ಕಂಡರೆ ದೂರಾಗಬೇಕು 3 ತಾವರೆಮಣಿ ತುಲಸಿಸರವ ಧರಿಸಲಿಬೇಕು ಭಾವಶುದ್ಧನಾಗಿ ತಿರುಗಬೇಕು ಕೋವಿದರೆ ಸಂಗಡ ಕೂಡ್ಯಾಡುತಿರಬೇಕು ಪಾವಕನಂತೆ ಇಂಪವ ಕಾಣಬೇಕು 4 ಅನ್ನಪಾನಾದಿಗಳಿಗವಸರ ಬೀಳದಿರಬೇಕು ಕಣ್ಣಿದ್ದು ಕುರುಡನೆಂದೆನಿಸಬೇಕು ಚೆನ್ನಾಗಿ ವಾಯುಮತದಲ್ಲಿ ನಿಂದಿರಬೇಕು ತನ್ನೊಳಗೆ ತಾ ತಿಳಿದು ನಗುತಲಿರಬೇಕು 5 ಬಿಂಬ ಮೂರುತಿಯ ಹೃದಯದಲಿ ನಿಲಿಸಲಿ ಬೇಕು ಡಂಭಕ ಭಕುತಿಯ ಜರಿಯ ಬೇಕು ಡಿಂಬುವನು ದಂಡಿಸಿ ವ್ರತವ ಚರಿಸಲಿ ಬೇಕು ನಂಬಿ ನರಹರಿಪಾದವೆನುತ ಸಾರಲಿ ಬೇಕು6 ಹರಿಯಿಲ್ಲದನ್ಯತ್ರ ದೈವವಿಲ್ಲೆನ ಬೇಕು ಮರುತನೆ ಜಗಕೆ ಗುರುವೆನಲಿ ಬೇಕು ಪುರಂದರದಾಸರೇ ದಾಸರೆಂದನ ಬೇಕು ಸಿರಿ ವಿಜಯವಿಠ್ಠಲನ ಸ್ಮರಣೆ ಮಾಡಲಿ ಬೇಕು 7
--------------
ವಿಜಯದಾಸ
ಹರಿದಾಸರ ಸ್ತುತಿ ಆನಂದ ಸಾಗರದ ಸೌಖ್ಯವೇಂ ನುತಿಪೆ ಪ. ಆನಂದ ಶ್ರೀ ಗುರುಗಳತಿ ಕೃಪೆಯೊಳಿತ್ತ ಅ.ಪ. ಗಾನಲೋಲನ ಮಹಿಮೆ ಜ್ಞಾನ ಬೋಧನೆಯಿಂದ ನಾನಾಪ್ರಕಾರದಿಂ ವರ್ಣಿಸುತಲಿ ಮಾನಿನಿಯ ಮನದ ಶೋಕಾಗ್ನಿ ಶಾಂತಿಯಗೈಸಿ ಮಾನಸದಿ ನಲಿವಂತೆ ಮಮತೆಯೊಳು ಪೊರೆದ 1 ರಾಮಚಂದ್ರನ ಮಹಿಮೆ ನೇಮದಿಂದಲಿ ಪಠಿಸೆ ಸೋಮಕಳೆ ಪೌರ್ಣಿಮ ಸ್ಥಿರವಾರದಿ ಕಾಮಧೇನುವು ಎನುತ ಕರೆದು ಮುದವಿತ್ತು 2 ಕಲುಷ ಲಿಂಗದ ಕಳೆಯ ಕಳೆದು ಚಂದ್ರನೊಳಿಟ್ಟು ಅ- ನಿಲ ಭಾರತಿಯರ ವ್ಯಾಪಾರ ತಿಳಿಸಿ ಜಲಜಾಕ್ಷ ಗೋಪಾಲಕೃಷ್ಣವಿಠ್ಠಲ ಮನದಿ ನೆಲಸಿ ಮುಕ್ತಿಯ ಕೊಡುವ ಮಾರ್ಗ ತೋರಿದರು3
--------------
ಅಂಬಾಬಾಯಿ
ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ