ಒಟ್ಟು 2782 ಕಡೆಗಳಲ್ಲಿ , 120 ದಾಸರು , 1941 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸನ್ಹಿಂಗದವನ ಬಲುಮಡಿ ಮೀಸಲ್ಯಾಕೆ ಆಸೆಬಿಡದವನ ಹರಿದಾಸತ್ವವ್ಯಾಕೆ ಪ ಚಿತ್ತಶುದ್ಧಯಿಲ್ಲದವನ ತತ್ವ ಉಪದೇಶವ್ಯಾಕೆ ಕುತ್ತಿಗೆಯ ಕೊಯ್ವವನ ಭಕ್ತಿಭಾವ್ಯಾಕೆ ಹೆತ್ತವರ ಬಯ್ವವನ ಸತ್ಯರೊಡನಾಟವ್ಯಾಕೆ ಉತ್ತಮರ ಹಳಿವವನ ನಿತ್ಯನೇಮವ್ಯಾಕೆ 1 ಭೇದಕಡಿಯದವನ ಪರಸಾಧನೆಯು ಯಾತಕ್ಕೆ ವಾದಬಿಡದವನ ಸುವೇದ ಓದ್ಯಾಕೆ ಕ್ರೋಧದೊಳುರುಳುವನ ಸಾಧುತ್ವ ಯಾತಕ್ಕೆ ಜಾದುಗಾರನ ಸುಬೋಧವದು ಯಾಕೆ 2 ನಾನೆಂಬುದಳಿಯವ ಜ್ಞಾನಭೋದ್ಯಾಮೃತವ್ಯಾಕೆ ಹೀನಗುಣ ಬಿಡದವನ ಮೌನತ್ವವ್ಯಾಕೆ ದೀನರನು ಬಾಧಿಪರ ದಾನಧರ್ಮವು ಯಾಕೆ ನಾನಾ ಬಯಕ್ಯುಳ್ಳವನ ಧ್ಯಾನವು ಯಾಕೆ 3 ಕುಟಿಲತ್ವ ಸುಡದವನ ಜಟೆ ಕೌಪೀನ್ಯಾತಕೆ ಸಟೆಬೊಗಳಿ ಬದುಕುವನ ಪಟ್ಟೆನಾಮವ್ಯಾಕೆ ದಿಟವರಿಯದಧಮನ ನಿಟಿಲದಲಿ ಭಸಿತ್ಯಾಕೆ ದಿಟ್ಟೆಯರಿಗೆ ಸೋಲುವನ ಹಠಯೋಗವ್ಯಾಕೆ 4 ಯತಿಗಳನು ನಿಂದಿಪನ ಸ್ಮøತಿಶಾಸ್ತ್ರ ಯಾತಕ್ಕೆ ಸತಿಗಳುಕಿ ನಡೆಯುವನ ಅತಿಜಾಣ್ಮೆ ಯಾಕೆ ಸತತ ಖಲು ಕುಹಕನಲಿ ಅತಿಸ್ನೇಹ ಯಾತಕೆ ಕ್ಷಿತಿಯೊಳ್ ಶ್ರೀರಾಮನ ನುತಿಸದವನ್ಯಾಕೆ 5
--------------
ರಾಮದಾಸರು
ವಾಸಿಷ್ಠ ಕೃಷ್ಣ ವಿಠಲ | ನೀ ಸಲಹೊ ಇವನಾ ಪ ಮೇಶ ಮಧ್ವೇಶ ನಿನ್ನಡಿಯ | ದಾಸ್ಯವನುಆಶಿಸುವ ಭಕ್ತಗೆ ಪ | ರಾಶರಾತ್ಮಜ ಒಲಿದೂ ಅ.ಪ. ವೇದವ್ಯಾಸನೆ ನಿನ್ನ ಆದರದಿ ಧಾನಿಸುತಮೋದದಲಿ ಶ್ರುತತತ್ವ | ಪಾದಾರ್ಪಣೆನ್ನೇ |ನೀದಯದಿ ಮರೆಯಾಗಿ | ತೋರ್ದೆ ಗುರು ಬಿಂಬವನುವೇದಾಂತ ವೇದ್ಯ ಹರಿ | ಹೃದಯ ಗಹ್ವರದೀ 1 ಕ್ಲೇಶಗಳ ದಹಿಸಿ ಸ | ರ್ವೇಶ ಸದ್ಭೋದಗಳಲೇಸಾಗಿ ಅರುಹುತಲಿ | ಶ್ರೀತ ಕೈ ಪಿಡಿಯೋ |ತೋಷ ಕ್ಲೇಶಂಗಳು ರ | ಮೇಶ ನಿನ್ನಿಂದೆಂಬಭಾಸುರದ ಜ್ಞಾನ ಪ್ರ | ಕಾಶ ಕೊಡು ಇವಗೆ 2 ಮೋದ ಅದ್ವೈತ ಪಾದ ನಂಬಿಹನೋ 3 ಪರಿ ಲೀಲೆಗಳ ತೋರಿ ಇವನಲ್ಲೀಪರಿಹರಿಸೊ ಭವಬಂಧ | ಮರುತಾಂತರಾತ್ಮಕನೆಎರಗಿ ತವ ಪದದಲ್ಲಿ | ಮೊರೆಯ ಬಿದ್ದವಗೇ 4 ಸಾವಧಾನದಿ ಧ್ಯಾನ | ಭಾವ ವೃದ್ಧಿಯಗೈಸಿದೇವ ತವ ರೂಪವನು | ಆವ ಹೃದ್ಗುಹಡೀಓವಿ ಕಾಂಬುವ ಹದನ | ನೀವೊಲಿದು ಪಾಲಿಪುದುಗೋವುಗಳ ಪಾಲ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿಗ್ರಹವನು ನಿಲಿಸೊ ವೆಂಕಟ ಗಗ- ಪ ನಾಗ್ರಕ್ಕೆ ಬೆಳೆದು ಗಂಗೆಯ ಪಡೆವ ನಿನ್ನ ಅ.ಪ. ಕುಂಡಲ ತೇಜ ಚೆನ್ನ ಗಂಡಸ್ಥಳದಿ ತೂಗಿ ಪೊಳೆವ ನಿನ್ನ1 ಉರದಲ್ಲಿ ಶ್ರೀ ವತ್ಸಧರಿಸಿ ಮೆರೆವ ನಿನ್ನ 2 ಕುಕ್ಷಿಯೊಳಗೆ ಲಕ್ಷ ಲೋಕವನಡಗಿಸಿ ಅ- ಪೇಕ್ಷೆಯಿಂ ಸುಜನರ ರಕ್ಷಿಸುವ ನಿನ್ನ3 ನಖದೊಳನಂತ ಬ್ರಹ್ಮಾಂಡವನಡಗಿಸಿ ಮಕ್ಕಳಾಟಿಕೆಯಂತೆ ಮರುಳುಮಾಡುವ ನಿನ್ನ4 ಉತ್ಪತ್ತಿ ಸ್ಥಿತಿ ಲಯ ಕಾರಣಕರ್ತ, ಜ- ಗತ್ಪತಿ ವಿಜಯವಿಠ್ಠಲ ವೆಂಕಟ 5
--------------
ವಿಜಯದಾಸ
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಜಯದಾಸರ ಸ್ತೋತ್ರ ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ- |ಗ್ವಿಜಯ ಮಾಡಿ ಸುಜನರನ್ನು ಪೊರೆವನನುದಿನ ಪ ದಾಸಪ್ಪನೆಂಬ ನಾಮದಿಂದ ಕರೆಸುತ ಉದರ ಗೋಸುಗದಿ ಪರರ ಬಳಿಯ ಆಶ್ರಿಸುತ ||ಯೇಸುಪರಿಯ ಬಡತನವು ಸೋಸಿ ದಣಿವುತ |ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ 1 ನಿತ್ಯ ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ ||ರಾಶಿ ರಾಶಿ ಜನರ ಕೂಡಿ ದೇಶ ಚರಿಸುತ ಮ್ಯಾಲೆಕಾಶಿ ಬಿಟ್ಟು ಸೇತು ರಾಮೇಶನ್ನ ಹುಡುಕುತ 2 ತಿರುಗಿ ತಿರುಗಿ ಚೀಕಲಾಪರಿಗೆ ಬಂದನು ಕಂಡುಗುರುತು ಹಿಡಿದು ಆ ಕ್ಷಣದಿ ಕರೆದು ವೈದ್ಯರು ||ಪರಮ ಸಂತೋಷದಿಂದ ಭರಿತರಾದರು ಮೈನೆರೆದ ಶೋಭನಾದಿಗಳನು ತ್ವರಿತ ಮಾಡ್ದರು 3 ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ ಹತ್ತು ಎಂಟು ಗ್ರಾಮವನ್ನು ವತ್ತಿ ಆಳುತಾ ||ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳುತ ಯಿನ್ನುಎತ್ತ ಸೇರಲೆಂದು ಭಾಗೀರಥಿಗೆ ಹೋಗುತ 4 ಕಾಶಿಯೊಳಗೆ ಮಲಗಿರಲು ಸ್ವಪ್ನ ಕಂಡರು ಪುರಂದರ-ದಾಸರೇವೆಂಬುದು ವ್ಯಾಸ ಕಾಶಿಗೊಯ್ದರು ||ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು ವಿಜಯ ದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು 5 ಕನಸಿನೊಳಗೆ ದೇವರ ದರುಶನಾಗುತ ಶ್ರೀ-ಮನಸಿಜನ ಪಿತನ ದಯವು ಘನ ಘನಾಗುತ ||ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗನೆನಿಸಿದಾಕ್ಷಣದಲಿ ಮುಖದಿ ಕವಿತ ಹೊರಡುತಾ 6 ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು ಏನುಹತ್ತು ಜನರಿಗೆ ಪೇಳಿದ ವಾಕ್ಯ ಸತ್ಯವೆಂದರು ||ಸುತ್ತು ಮುತ್ತು ನೂರಾರು ದಾಸರು ನೆರೆದರು ಆನಿಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು 7 ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ-ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ ||ರಾತ್ರಿ ಹಗಲು ವಿಜಯ ವಿಠ್ಠಲನೆಂದು ಪಾಡುತ ಜನರಶ್ರೋತ್ರಿಯಿಂದ್ರಿಯಗಳ ಉದ್ಧಾರ ಮಾಡುತ 8 ಪೂರ್ತಿ ಜ್ಞಾನದಿಂದ ಕರ್ಮವೆಲ್ಲ ಕಡಿದರು ಸ-ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು ||ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು ಶ್ರೀಸತ್ಯರಮಣ ಕೇಶವ ವಿಠಲನ್ನ ಕಂಡರು9
--------------
ಕೇಶವವಿಠ್ಠಲರು
ವಿಜಯದಾಸರ ಸ್ತೋತ್ರ ಪದಗಳು ಪರಮ ಹರುಷವಾಯಿತು ವಿಜಯರಾಯಗುರುಗಳಂಘ್ರಿಯನೆ ಕಂಡು ಪ ಪರಿಪರಿ ಜನುಮದ ಥರಥರದಘಗಳುತಿರುಗಿ ನೋಡದಲೇವೆ ತೆರಳಿ ಪೋದವು ಯಿಂದು ಅ.ಪ. ಕಾನನದೊಳು ತಿರುಗಿ ತನ್ನ ಮಾತಿ-ಯಾನು ಕಾಣದೆ ಚಿಂತಿಸಿ ||ಧೇನಿಸಿ ಅರಸಲಾಕ್ಷಣದೊಳಗವಳ ವತ್ಸತಾನು ಕೂಗಲು ಕಾಮಧೇನು ಒದಗಿದಂತೆ 1 ತರಣಿಯ ಕಿರಣದಿಂದ ತಪಿಸಿನೆರ ಬಾಯ ಬಿಡವುತ ಬಪ್ಪರನ ||ಕರವ ಪಿಡಿದು ಸುರತರುವಿನಡಿಯಲ್ಲಿ ಕು-ಳ್ಳಿರಿಸಿ ಕುಡಿಯೆ ದಿವ್ಯ ಸರಸಿಯನಿತ್ತಂತೆ 2 ಧನವ ಪೋಗಾಡಿ ಕೊಂಡು ನರನು ಬಲುಮನ ಕ್ಲೇಶದಿಂದಿರಲು ||ಘನ ಮಹಿಮನೆ ನಮ್ಮ ಮೋಹನ ವಿಠಲ-ವನ ಕೈಯ್ಯೊಳಗ ಚಿಂತಾಮಣಿಯನುಯಿತ್ತಂತೆ 3
--------------
ಮೋಹನದಾಸರು
ವಿಠ್ಠಲ ಪಾಂಡುರಂಗ ಬಂದೆನೊ ನಿನ್ನ ಬಳಿಗೆ ನಾನು ಪ ಹರಿಪೂಜೆ ಮರದಿಹುದು ಧರೆಯೊಳು ನರಪೂಜೆ ಪಿರಿದಿಹುದು ಹರಿಜನ ಪರಿಯರೆದು ವಿಷಯಕೆ ಹರಿವುದು ಮನಸರಿದು ದುರಿತ ಜಲಧಿಯೊಳು ನರಜಲಚರಂಗಳು ಮರೆದು ನಿನ್ನ ಸದಾ ಸುರಿವವು ಭವಸುಖ1 ಒಡಲಿಗೆ ಇಡುತಿಹರು ಷಡುರಸದನ್ನ ಮಡದಿಸುತರು ನುಡಿದುದೆ ಕೊಡುತಿಹರು ಪೊಡವಿಯೊಳ್ಳಡುಸುಖ ಬಡುತಿಹರು ವಡನೆ ಹರಿಗಿಡದೆ ಜಡಮತಿಯೆನಿಪರು 2 ಸೊಕ್ಕು ಸೋಂಕಿತೆನಗೆ ಕಕ್ಕಸಬಡುತಿಹೆನಡಿಗಡಿಗೆ ಮಕ್ಕಳ ಮೋಹದೊಳಿಗೆ ಶಿಕ್ಕಿ ನಾ ಬಳಲುವೆ ಕಡೆವರೆಗೆ ಧಿಕ್ಕಾರವೀ ಜನ್ಮ ನರಸಿಂಹ ವಿಠಲ ಸೊಕ್ಕದೇ ಭವದೊಳು ನೆಕ್ಕದೆ ನಿನ್ನ ನಾಮ 3
--------------
ನರಸಿಂಹವಿಠಲರು
ವಿಧಿ ನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯ- ಲ್ಲದಲರಿಯರೇನೊಂದು ಹರಿಭಕ್ತರು ಪ ಮಿಂದದ್ದೆ ಗಂಗಾದಿ ತೀರ್ಥಗಳು ಸಾಧುಗಳು ಬಂದದ್ದೆ ಪುಣ್ಯ ಕಾಲವುಗಳು ಅವರು ನಿಂದದ್ದೆ ಗಯ ವಾರಣಾಸಿ ಕುರುಕ್ಷೇತ್ರಗಳು ಬಂದು ಪೋಗಲು ಅದುವೆ ರಾಜಬೀದಿ 1 ಕಂಡು ಕಂಡದ್ದೆಲ್ಲ ಕಮಲನಾಭನ ಮೂರ್ತಿ ಮಂಡಿಸಿದ ಶಯನ ದಂಡಪ್ರಣಾಮ ತಂಡತಂಡದ ಕ್ರಿಯೆಗಳೆಲ್ಲ ಹರಿ ಪೂಜೆಗಳು ಮಂಡೆ ಬಾಗಿಸಿ ಸಮಿಪ ಶರಣ ಜನಕೆ 2 ನಡೆವ ನಡೆಯೆಲ್ಲ ಲಕ್ಷ ಪ್ರದಕ್ಷಿಣೆ ಮತ್ತೆ ನುಡಿವ ನುಡಿಯೆಲ್ಲ ಗಾಯಿತ್ರಿ ಮಂತ್ರ ಒಡೆಯ ಶ್ರೀಕಾಂತನ್ನ ಅಡಿಗಡಿಗೆ ಸ್ಮರಿಸುತಿಹ ದೃಢ ಪ್ರಜ್ಞರೇಂಗೈಯ್ಯಲದುವೆ ಮರ್ಯಾದೆ 3
--------------
ಲಕ್ಷ್ಮೀನಾರಯಣರಾಯರು
ವಿಪರೀತ ಮತಿವಂತೆ ಸರಸ್ವತಿಯೆ ನಿನ್ನ ಕೃಪೆ ಬಯಸಿ ಭಜಿಸುವೆನು ಸಫಲನೆನಿಸೆನ್ನ ಪ ಶುಂಭಾರಾವಣಗಿತ್ತ ಮತಿಯೆನಗೆ ಬೇಡಮ್ಮ ಗುಂಭದಿಂ ವಿಭೀಷಣಗೆ ಕೊಟ್ಟ ಮತಿ ನೀಡು ಕುಂಭಕರ್ಣನಿಗಿತ್ತ ಮತಿ ಕನಸಿನಲಿ ಬೇಡ ಕುಂಭಿನಿಯೊಳ್ಹನುಮನಂಥ ಮತಿ ನೀಡಿ ಸಲಹು 1 ಕೀಲ ಮಾರೀಚಗಿತ್ತ ಕೀಳಮತಿ ನೀಡದಿರು ಪಾಲಿಸು ಜಟಾಯುನಂಥ ಶೀಲಮತಿಯೆನಗೆ ವಾಲಿಗೆ ನೀನಿತ್ತ ಜಾಳುಮತಿ ನೀಡದೆ ಸುಗ್ರೀವಗಿತ್ತ ಮೇಲುಮತಿ ನೀಡು 2 ಮೂಡಣಾಧಿಪನಂತೆ ಕೇಡುಮತಿ ನೀಡದೆ ರೂಢಿಯೊಳ್ಕರಿಯಂಥ ಗಾಢಮತಿ ನೀಡು ನೀಡದಿರು ಶಶಿಯಂಥ ಖೋಡಿ ದುರ್ಮತಿಯನು ನಾಡಿನಲಿ ಧ್ರುವನಂತೆ ಮಾಡುದಯ ಸುಮತಿ 3 ದುರುಳ ಕೌರವನಂತೆ ಕಿರಿಮತಿಯ ಕೊಡಬೇಡ ಪರಮ ಪಾಂಡವರಂಥ ಖರೆಮತಿಯ ನೀಡು ಧರೆಯೊಳ್ಜಯದ್ರಥನಂತೆ ನರಿಮತಿಯ ಕೊಡದಿರು ವರ ವಿದುರನಂತೆ ಬಲು ನಿರುತಮತಿ ನೀಡು 4 ಮರವೆ ಮತಿ ಒಲ್ಲೆನೌ ಹರಿಯ ನಿಜ ದಾಸರಂಥ ಸ್ಥಿರತಿಮತಿಯ ನೀಡು ಹರಣ ಪೋದರು ಬಿಡದೆ ವರದ ಶ್ರೀರಾಮನಡಿ ಅರಿವಿಟ್ಟು ಭಜಿಸುವಪಾರಮತಿ ನೀಡು 5
--------------
ರಾಮದಾಸರು
ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ
ವಿಶೇಷ ಕೀರ್ತನೆಗಳು ಮುಟ್ಟಬೇಡಿ ಮುಟ್ಟಬೇಡಿ ಮುರಹರನ ಭಕ್ತರನು ಪ. ಭ್ರಷ್ಟರಾಗದಿರಿಯೆಂದು ಕಟ್ಟು ಮಾಡಿದ ಯಮನು ಅ.ಪ. ಹರಿನಾಮ ಪಾರಾಯಣ ನಿರುತರಾಗಿರುತಿಹರ ಹರಿದಾಸರಾ ದಾಸ್ಯದೋಳಿರುತಿಹರಂ 1 ಗುರುಹಿರಿಯರಾಣತಿಗೆ ಶಿರಬಾಗಿ ನಡೆವವರ ವರಸತ್ಯಸಂಧರ ಹರಿಶರಣರ 2 ಪತಿಪಾದ ಸೇವಾನಿರತೆಯಾಗಿಹ ಸತಿಯ ಪತಿಗತಿಯನನುಸರಿಪ ಸುಗುಣ ಸುವ್ರತೆಯ ಪತಿಹಿತೆಯಾಗಿ ಹಿತಬಾಂಧವರ ಮಾನಿಸುವ ಸತೀಸಾಧ್ವಿಯರ ಶ್ರೀಪತಿ ಶರಣೆಯರ 3 ಘಾಸಿ ಪಡೆಯುವಿರೆಂzವ ಯಮಧರ್ಮ ನಯದಿಂದ4
--------------
ನಂಜನಗೂಡು ತಿರುಮಲಾಂಬಾ
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶ್ವಕ್ಕೆ ಪ್ರಿಯ ಗುರುವರ್ಯ | ಕಾಯೊವಿಶ್ವಪ್ರಿಯಾಭಿಧ ಯತಿವರ್ಯ ಪ ಧೃತ - ವಿಶ್ವದೊಳಗಾವೆಲ್ಲಿ ನಿಮಗೆಣೆ | ಸುಸ್ವಭಾವ ವಿರಾಗಭೂಷಣವಿಶ್ವ ವಾಯುಪದಾರ್ಹವಂಶಜ ಹ್ರಸ್ವಗೈವುದು ಎನ್ನಕರ್ಮ ಅ.ಪ. ದಿವಿಜ | ಧೃತ | ಅಶ್ವಗ್ರೀವನ ಪಾದರಜ |ವಿಶ್ವ ಗುರು ಮಧ್ವಾರ್ಯ ಶಾಸ್ತ್ರದ | ನಿಸ್ವನವ ನಿಮ್ಮಿಂದ ಕೇಳಲುವಿಷ್ಟಕುದೇಶಗಳ ಸಜ್ಜನ | ಸತ್ವರದಿ ಉಡಪಿಯನೆ ಸಾರ್ದರು 1 ಸ್ವಪ್ನ ವೃಂದಾವನಾಖ್ಯಾನ | ನಿಮ್ಮ | ಗೊಪ್ಪಿದ ಶಿಷ್ಯರ್ಗೆ ಬೋಧನ |ಅಪ್ಪಂದದಲಿ ಮಾಡ್ದ ಕಾರಣ | ಅದು | ಒಪ್ಪಿತು ಬಹು ವಿಧ ಪ್ರಕರಣ ||ಸ್ವಪ್ನ ದ್ರಷ್ಟ್ರು ದ್ವಿಜವರೇಣ್ಯರೆ | ಅಪ್ಪ ಅಶ್ವಗ್ರೀವ ದೇವನಕೃಪ್ಪೆಯಿಂದಲಿ ಜಾತಿ ಸ್ಮøತಿಯನು | ಅಪ್ಪಿವ್ಯಕ್ತಿಯ ಜ್ಞಾನವಿತ್ತಿರಿ 2 ಮಧ್ಯವಾಟ ಪುರಟ ಸಂಪುಟ | ತಂದು | ವಿದ್ಯುಕ್ತ ಹಯಮೊಗ ನಿಕಟ |ಸದ್ಯ ಸ್ಥಾಪಿಸಿ ರಜತ ಪೀಠ | ದಲ್ಲಿ | ಪರ್ಯಾಯ ಗೈದೆಯೊ ಪಟುಭಟ ||ಆಯ್ ಗುರು ರಾಜೋಕ್ತಿಯಂದದಿ |ಕಾರ್ಯಳು ಬಹು ಭಾವಿ ನಡೆಸಿದೆಆರ್ಯ ಭಾವೀ ಇಂದ್ರ ಪದದಲಿ | ಯೋಗ್ಯರೆನಿಸಿದ ಯೋಗಿವರ್ಯ 2 ಮಾರ್ಗಣ ವಿಶ್ವ ಪ್ರಿಯಾರ್ಯ 4 ಭವ | ಭಯವನೆ ಕಳೆವುದು ರಾಯ |ದಯವನಧಿ ಕರುಣವನೆ ದೊರಕಿಸಿ | ಜಯ ಗುರು ಗೋವಿಂದ ವಿಠಲನದ್ವಯ ಪದಾಂಬುಜ ತೋರಿ ಸಲಹೊ | ವಿಯದಧಿಪ ಪದ ಪೊಂದುವವನೆ 5
--------------
ಗುರುಗೋವಿಂದವಿಠಲರು
ವಿಷಯ ಸುಖ ಕ್ಷಣಭಂಗುರ ಕೊನೆಯಲಿಯಿದು ದುಃಖರೂಪ ಪೂರ್ಣಶಾಂತಿ ದೊರಕದು ಈ ಪ ಮೋಹದಿಂದ ಬಯಸುತಿರುವ ಇಹಪರಲೋಕಗಳ ಸುಖವು ನಾಶವಂತ ಕೊನೆಯಲೊಮ್ಮೆ ಕ್ಲೇಶದಾಯಕವು ತಿಳಿಯೈ 1 ಪರಮಸೌಖ್ಯ ಆತ್ಮರೂಪ ಅರಿತುಕೊಂಡು ನಿನ್ನೊಳಗೆ ಮರುಳಾಗದೆ ವಿಷಯಸುಖಕೆ ಗುರುಶಂಕರನಡಿ ಸೇವಿಸು 2
--------------
ಶಂಕರಭಟ್ಟ ಅಗ್ನಿಹೋತ್ರಿ