ಒಟ್ಟು 4031 ಕಡೆಗಳಲ್ಲಿ , 123 ದಾಸರು , 2537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತ ಜನೋದ್ಧಾರನ್ಯಾರೋ ದೇವನ್ಯಾರೋ ಪ ನಿಜಮುಕ್ತಿ ದಾಯಕನೆ ಕೇಶವ ಪಾದತೋರೋ ಅ.ಪ ಭಕ್ತಿ ಜ್ಞಾನ ವಿಚಾರಕೆನ್ನನು ಹೊಕ್ತಿಗೊಳಿಸೆಂತೆಂದು ಬೇಡುವೆ ಶಕ್ತಿರೂಪನು ತಾಳಿ ತಿರುಗಿ ವಿ ರಕ್ತನಾದಾಂತ ಪರಾತ್ಮನೆ 1 ಬಾಲಕೃಷ್ಣನೆ ಬಾರೊ ಭಕ್ತನು ಶೀಲ ಗೋಕುಲಪಾಲ ಶ್ರೀಹರಿ ಆಲಿಸೆನ್ನಯ ಬಿನ್ನಪದ ನಿಜ ನೀಲಮೇಘಶ್ಯಾಮ ರಂಗಾ 2 ಧರಣಿ ಚೆನ್ನಪುರೀಶ ನಿಮ್ಮಯ ಚರಣ[ಧೂಳಿಯ]ಕುರುಹು ತೋರಿದ ಗುರುವು ತುಲಶೀರಾಮನೆ ನಿಜ ಪರಮತತ್ವವಿಲಾಸ ದೇವ 3
--------------
ಚನ್ನಪಟ್ಟಣದ ಅಹೋಬಲದಾಸರು
ಭಕ್ತ ಮಂದಾರಿಣಿ ಭವಭಯನಿವಾರಿಣಿ ಭಕ್ತಿಮುಕ್ತಿ ಪ್ರದಾಯಿನಿ ತ್ರಿಭುವನೈಕ ಜನನಿ ಪ. ಭುವನತ್ರಯಮೋಹಿನಿ ಭಾನುಕೋಟಿಪ್ರಕಾಶಿನಿ ಭೂರಿಭೂಭುಜ ಸೌಭಾಗ್ಯದಾಯಿನಿ ಪಾಹಿಮಾಂ ಜನನಿ ಅ.ಪ. ಸಾಮಜಾಧಿಪಗಾಮಿನಿ ಕಾಮಿತಾರ್ಥಪ್ರದಾಯಿನಿ ರಾಮಣೀಯ ಸ್ವರೂಪಿಣಿ ಕಾಮಜನನಿ ಕಲುಷವಿಭಂಜಿನಿ 1 ಕನಕವಸನೆ ಕವಿಮನೊಲ್ಲಾಸಿನಿ ಸುಮನಸವರ ಪರಿತೋಷಿಣಿ ಕೋಮಲತರ ಕೋಕಿಲ ಮೃದುಭಾಷಿಣಿ 2 ಕಮಲ ಬಾಂಧವ ವಂಶ ಸಂಭವ ರಾಮಚಂದ್ರ ಸುಪ್ರೇಮಾಕಾಂಕ್ಷಿಣಿ 3 ವನಜ ಸಂಭವ ಸನ್ನುತೆ ಕನಕಭೂಷಣ ಭೂಷಿತೆ ಅನಿಲನಂದನ ಸೇವಿತೇ ಘನಕರುಣಾರಸಾನ್ವಿತೇ 4 ಅನಘ ಸದ್ಗುಣಭೂಷಿತೆ ಅನಿಮಿಷಾಧಿಪ ಪೂಜಿತೆ ಜನಕ ಭೂಪತಿ ಪೋಷಿತೇ ಘನಶೇಷಾದ್ರೀಶ ದಯಿತೆ5
--------------
ನಂಜನಗೂಡು ತಿರುಮಲಾಂಬಾ
ಭಕ್ತವತ್ಸಲ ಭವಭಯ ಹರನೆ ಭಕ್ತಿ ಮುಕ್ತಿದ ಪರಿಪಾಲಿಸು ಧೀರನೆ ಪ. ಪ್ರತಿದಿನ ಉದಯಾರಂಭಿಸಿ ನಾ ಮಾಡುವ ಪಾಪ ತತಿಗಳನೆಲ್ಲವ ಭಸಿತಗೈಸಿ ಪತಿತಪಾವನ ಪರಮಾತ್ಮನ ರೂಪ ಶ್ರೀ- ಪಾದ ಸಂಸ್ಮøತಿಯಿತ್ತು ಕರುಣಿಸು 1 ವರದೇಶ ನಿನ್ನಯ ಚರಣಾರವಿಂದವ ಶರಣೆಂದು ನಂಬಿದ ನರರಿಗಿನ್ನು ಪುರುಷಾರ್ಥಗಳ ಸೇರಿ ಬರುವರಾಶ್ಚರಿಯವೆ ಕರಿರಾಜಗೊಲಿದ ಶ್ರೀಕರಮೂರ್ತಿ ದಯವಾಗು 2 ಘೋರ ಸಂಸೃತಿ ಪಾರಾವಾರ ದಾಟಿಸಲು ಬೇರಾರಿಲ್ಲ ನಿಜ ದಾಸೋದ್ಧಾರ ಹರೆ ವಾರಿಜಾಂಬಕ ವೆಂಕಟಾಚಲನಾಯಕ ಗಾರುಮಾಡದೆ ಬೇಗ ಬಾರೋ ಹೃತ್ಕಮಲದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಕ್ತವತ್ಸಲ ಭಾರಕರ್ತಾ | ಕರುಣವಂತ ನಿತ್ಯ ನಿರ್ಮಲ ಸರ್ವ ಶಕ್ತ | ಶಾಂತಾತ್ಮಕ ಪ. ಸುತ್ತ ವಿರಜೆ ಉನ್ಮತ್ತ ಮುಕ್ತರ ನೃತ್ಯ ಗೀತೆ ವೈಚಿತ್ರದೋಲಗವು ಇತ್ತಂಡದಿ ಮೈಹತ್ತಿ ಕುಳಿತ ಸತಿಯ ರೆತ್ತಲಿತ್ತ ಬಂದ ಚಿತ್ರ ಮಹಿಮ ಹೇ ಅ.ಪ. ವಿಹಂಗ ಗಮನ ತು- ರಂಗರೂಪನೆ ಅಂತರಂಗದಿ ನೆಲಸಿ ಸು- ಸಂಗದಿಂದಲಿ ಲಿಂಗ ಭಂಗಗೈಸುತ ಜ- ನ್ಮಂಗಳ ಕಡೆ ಮಾಡು ರಂಗ ಕರುಣಾಪಾಂಗ ಇಂಗಡಲಳಿಯನೆ ತುಂಗ ಮಹಿಮ ನರ- ಸಿಂಗ ನಿನ್ನಯ ಚರಣಂಗಳ ತೋರಿಸೋ ಭಂಗಪಡುವೆ ಭವಹಿಂಗಿಸಿ ಪೊರೆ ಕಾ- ಳಿಂಗ ಮಥನ ಯದುಪುಂಗವ ಕರುಣಿ 1 ಗತಿ ನೀನೆ ಎಂದು ಶ್ರೀಪತಿ ನಿನ್ನ ಮೊರೆಹೊಕ್ಕೆ ಹಿತದಿಂದ ಕಾಯೊ ದ್ರೌಪದಿಯ ಕಾಯ್ದಂಥ ದೈವ ಚ್ಯುತದೂರ ಮುಕ್ತರ ಸ್ತುತಿಪ್ರಿಯ ಶ್ರೀ ವಾಯು- ಪಾದ ಪ್ರತಿ ಕಾಣೆ ನಿನಗೆಣೆ ಕರ್ಮ ಸು- ಪಥ ಕಾಣೆನು ಗತಿಯಿಲ್ಲದೆ ಶ್ರೀ- ಪತಿ ಕೃಪೆ ಮಾಡುತ ತತುವ ಮಾನಿಗಳ ಕೃತಿ ತಿಳಿಸುತ ನಿನ ತುತಿಸುವ ಮತಿಕೊಡು 2 ಗೋಪಿಕಂದನೆ ಬಾಲರೂಪಧಾರಕ ಮಧ್ವ- ರಪಾರ ಸ್ತುತಿ ಕೇಳಿ ಗೋಪೀಚಂದನದಿ ಬಂದು ಪರಿ ನಿಂತ ದೇವಪತಿ ಜನಗಳ ಪೊರೆದು ಕಾಪಾಡುವ ಕರ್ತ ಗೋಪಾಲಕೃಷ್ಣವಿಠ್ಠಲ ಶ್ರೀಪದ್ಮಜಮುಖ ಸುರಾಪ ಧರೇಂದ್ರರು ತಾಪಸಿಗಳೂ ನಿನ್ನ ವ್ಯಾಪಾರ ತಿಳಿಯದೆ ಗೋಪ್ಯಾದಿ ನುತಿಸಿ ಸ್ವರೂಪ ಯೋಗ್ಯತೆಯಂತೆ ವ್ಯಾಪಕ ನಿನ್ನಯ ರೂಪವ ಕಾಂಬರು 3
--------------
ಅಂಬಾಬಾಯಿ
ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ ಬಹು ಪರಾಕೆಲೊ ಮುರಾರಿ ಪ. ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು ಶಕ್ತಿ ಹೀನನಾಗಿ ಏಳದಂತಾಗಿದೆ ಮತ್ತಾರಿಗಳವಲ್ಲ ಮಂದರಾದ್ರಿಧರನೆ ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1 ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2 ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ ಚೆಂಡಾಡಿದ ಚಿನ್ಮಯರೂಪ ನೀನು ದಿಂಡರಿದು ದುರಳರನು ದುರಿತಗಳ ಪರಿಹರಿಸಿ ಪುಂಡರೀಕಾಕ್ಷ 3 ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4 ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು ನಿನ್ನನೆ ನಂಬಿದವಳಿಗಿಂತ ಉನ್ನತವಾದ ಕಂಟಕವು ಬಂದಿದೆ ಕಾಯೊ ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತಿಯಲಿ ನಡೆವರಿವರೇ ಸುಗುಣರೊ ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಪ ಉದಯದಲೆದ್ದು ಉನ್ನತ ಸ್ವರದಿಂದ ಹರಿ ಪದವೇ ಗತಿ ಎನುತಾ ಎಲ್ಲ ಕಾಲಕೆ ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ 1 ಭಾಗವತ ಮಿಕ್ಕ ಪುರಾಣಾದಿ ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ 2 ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ ಭೇದ ಪೇಳುವದು ಬಿಡೆನೆಂಬೊ ಸೊಲ್ಲು ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ 3 ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ ಭಾವದಲಿ ಗುಣಿಸದೆ ನಿಕ್ಕರಿಸೀ ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ 4 ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ ಅನ್ಯಗಂಧಗಳಿಗೆ ಇಂಬುಗೊಡದೇ ಧನ್ಯರಾಗಿದ್ದವರ ಕರುಣ ಸಂಪಾದಿಸಿ ಪುಣ್ಯಭೂಮಿಯನು ಹಾರೈಸುವ ನಿತ್ಯಾ 5 ಅವೈಷ್ಣವನು ಹರಿ ಎಂದು ನುಡಿವಡೆ ತಾನು ಅವನಂತೆ ಸ್ಮರಿಸದೇ ಸುಮ್ಮನಿದ್ದೂ ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ ನಿತ್ಯ 6 ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು ರಾಶೆಯನು ಮಾಡಿ ನರರಾಶ್ರೈಸದೆ ಏಸೇಸು ವಿಪತ್ತು ಗುಣ ಮೇಲಟ್ಟಿದರು ನಿತ್ಯ 7 ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ 8 ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು ಮುಕುತಿ ನರಕವೆಂಬ ಯೋಚನ್ಯಾಕೆ ಸಿರಿ ವಿಠ್ಠಲನಲ್ಲಿ ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ 9
--------------
ವಿಜಯದಾಸ
ಭಗವಂತನ ಸಂಕೀರ್ತನೆ ಏನಿದು ರೂಪ ಶ್ರೀ ನರಹರೆ ಪ ಏನಿದು ರೂಪವೋ ಮನಸಿಜನಯ್ಯನೇ ನೆನಿಸಿದವರ ಹೃದ್ವನಜದೊಳ್ ಮೆರೆವುದೂ ಅ.ಪ ಮಾರನ ಪಿತನೆಂದು ಕರೆಸಿ ಕೊಂಬುವನಿಗೆ ಮೋರೆಯೊಳ್ ಮೂರು ಕಣ್ಣುಗಳ ಧರಿಸಿರುವುದು 1 ಪರಮ ಶಾಂತನೆಂದು ಮೆರೆಯುವೀ ಶ್ರುತಿಯೊಳು ಕ್ರೂರ ರೂಪದಿಂದ ನರರಿಗೆ ತೋರ್ಪುದು 2 ವರ ವೈಜಯಂತಿಯ ಕೊರಳೊಳ್ ಧರಿಸುವಗೆ ಕರುಳ ಹಾರವ ಧರಿಸಿ ವರ ಶಬ್ದ ಮಾಳ್ವೊದು 3 ನಾನೇ ದೇವರು ಮತ್ತು ಅನ್ಯರಿಲ್ಲೆಂಬುವ ಕನಕ ಕಶ್ಯಪ ಮುಖ್ಯ ದನುಜರ ಸೀಳ್ವುದು 4 ತರಳ ಕರದಾಕ್ಷಣದಿ ವರ ವೈಕುಂಠವ ಬಿಟ್ಟು ನರಹರಿ ಎನಿಸಿ ನೀ ಭರದಿ ಬಂದಿರುವುದು 5
--------------
ಪ್ರದ್ಯುಮ್ನತೀರ್ಥರು
ಭಗವಂತನ ಸಂಕೀರ್ತನೆÀ ಇಂದಿರಾರಮಣ ಆನಂದಮೂರುತಿ ನಿನ್ನ ವಂದಿಸಿ ಕರಗಳ ಬಂಧಿಸಿ ಬೇಡುವೆ ಪ ಎಂದಿಗೂ ಎನ್ನ ಹೃದಯಮಂದಿರ ಬಿಡದಿರೊ ನಂದಮುನ್ನೀಶ್ವರ ವಂದಿತ ಚರಣನೆ ಅ.ಪ ಕೃತಿರಮಣನೇ ಮುನಿಸತಿಯು ಶಾಪದಿ ಶಿಲಾ ಕೃತಿಯಾಗಿರಲು ಶ್ರೀಪತಿಯೇ ನೀ ಬಂದು ರತಿಪತಿಪಿತನೆ ಯುವತಿಯನ್ನೆ ಮಾಡಿದ ಪತಿತಪಾವನ ನೀನಲ್ಲವೇನೊ ಹರಿಯೆ 1 ನಾಕರಾಜನ ಸುತನು ಕಾಕರೂಪದಿ ಬಂದು ಏಕಾಂತದೊಳು ಅವಿವೇಕವ ಮಾಡಲು ಶ್ರೀಕಾಂತ ತೃಣದಿಂದ ಭೀಕರಿಸಿ ಮೂರು ಲೋಕ ಸುತ್ತಿಸಿ ಅವನ ನೀ ಕಾಡಿದೆ ಹರಿಯೆ 2 ಮತ್ತು ಗಜೇಂದ್ರನಾಪತ್ತು ಪರಿಹರಿಸಿ ಉತ್ತಮ ಪದವವಗಿತ್ತು ರಕ್ಷಿಸಿದೆ ಭಕ್ತವತ್ಸಲ ಎನ್ನ ಕುತ್ತುಗಳನು ನೀ ಚಿತ್ತಕೆ ತರದೇ ಸದ್ವøತ್ತನೆಂದೆನಿಸೈ 3 ನೇತ್ರವೆಂಬುದು ನಾರಿಗಾತ್ರದೊಳಿರುವುದು ಶ್ರೋತ್ರವು ಗೀತವ್ರಾತದೊಳಿಹುದು ಚಿತ್ತ ವಿಷಯ ಭೋಗಾಸಕ್ತವು ಗೋಪಿಕಾ ಮಿತ್ರನೇ ಅಂಜಲಿಮಾತ್ರ ನೀನೊಪ್ಪಿಕೋ 4 ವರನಾಮಗಿರಿಲಕ್ಷ್ಮೀನರಸಿಂಹ ಮೂರುತೆ ಚರಣಕಮಲಯುಗ ಸ್ಮರಣೆಯ ಎನಗೆ ಸ್ಥಿರವಾಗಿರುವಂತೆ ವರವಿತ್ತು ಸಲಹೆಲೊ ಪರಮಪುರುಷ ದಿನಕರಕುಲತಿಲಕನೆ 5
--------------
ವಿದ್ಯಾರತ್ನಾಕರತೀರ್ಥರು
ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭಜಿಸಿ ಕೆಟ್ಟವರು ಉಂಟೇ ಭೂಕಾಂತನ ಭಜಿಸಲಾರದೆ ಕೆಟ್ಟರು ಪ ಕುಜನರ ಕಾಲನ ಚರಣವ ನೆನೆದರೆ ಸುಜನರ ಪಾಪವ ಕ್ಷಮಿಸುವ ಪರಿಯ ಅ.ಪ. ತರಳ ಧೃವನಿಗೊಲಿದೊ ಸ್ವರಾಜ್ಯವ ಸರಸದಿ ಪಾಲಿಸಿದ ದುರುಳ ರಕ್ಕಸನು ಕಂದನನು ಪೀಡಿಸುವಾಗ ನರಸಿಂಗ ರೂಪದಿ ಪೊರೆದ ಶ್ರೀ ಹರಿಯ 1 ನಿಜ ಭಕ್ತಗೊಲಿದವನ ಅವಳಗಕ್ಷಯವಿತ್ತ ಪರಿಯ 2 ಸುಗ್ರೀವನಿಗೊಲಿದೂ ವಾನರ ಭೂಪ ವಾಲಿಯನೂ ತರಿದೂ ಪೊರೆದ ಕೇಶವನ 3
--------------
ಕರ್ಕಿ ಕೇಶವದಾಸ
ಭಜಿಸಿ ಧನ್ಯನಾದೆ ನಾನು ಭುಜಗಶಯನನಂಘ್ರಿಯನ್ನು ಪ ಕುಸುಮ ತರಲು ಸರಸಿಧುಮುಕಿ ಮೊಸಳೆಬಾಯಿಗೆ ಸಿಲುಕಿ ಕರಿಯು ಕಂಟಕ ಗೆಲಿದು ಅಸಮಸೌಖ್ಯ ಪೊಂದಿದ್ದು ಕೇಳಿ 1 ಪಾಪಿ ಕುರುಪನೋಲಗದಲ್ಲಿ ದ್ರೌಪದಿಗೊದಗಿಬರಲು ಭಂಗ ಆಪತ್ತು ಗೆಲಿದಳೆಂಬುದ ಕೇಳಿ 2 ಇಳೆಯೊಳ್ಪತಿಯ ಶಾಪದಿಂದ ಶಿಲೆಯ ರೂಪದಿ ಬಿದ್ದ ಯುವತಿ ಗೊಲಿದು ಪಾವನಾಂಗಿಯೆನಿಸಿ ಕುಲಕೆ ತಂದ ಸುದ್ದಿ ಕೇಳಿ 3 ತ್ಯಜಿಸಿ ತನ್ನ ಬ್ರಹ್ಮಕುಲವ ಕುಜಕುಲದ ನಾರಿಗೆ ಕೆಟ್ಟ ಅಜಮಿಳನ ಅಂತ್ಯಕ್ಕೆ ಒದಗಿ ನಿಜಪದವಿ ನೀಡಿದ್ದು ಕೇಳಿ 4 ಅಂಬುಧಿನಿಲಯ ಅಸಮ ಮಹಿಮ ಕಂಬುಕಂಧರಮಿತ್ರ ಭಕುತ ಬೆಂಬಲ ಶ್ರೀರಾಮ ಪ್ರಭುವೆ ನಿನ್ನ ನಂಬಿದವರ ಸಂಭ್ರಮ ಕೇಳಿ 5
--------------
ರಾಮದಾಸರು
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಜಿಸು ಮನವೆ ಭಜಿಸು ಮನವೆ ಅಜ ಸುರ ಮುನಿ ವಂದಿತ ಪಾದ ಪೂಜಿಸು ನಿಜಸ್ವರೂಪ ನಿತ್ಯ ಸುಜನ ಮನೋಹರನ 1 ಪರಮಪುರುಷ ಪರಂಜ್ಯೋತಿ ಪಾರಾವಾರ ಹರಿಗೋಪಾಲ ಕರುಣಾಕೃಪಾಲ ಮೂರುತಿ ಸ್ವಾಮಿ ಸಿರಿಲೋಲನ 2 ಅತೀತ ಗುಣಾನಂತಮಹಿಮ ಪತಿತಪಾವನ ಪೂರ್ಣ ಸತತ ಸದೋದಿತ ಪಾದ ಅತಿಶಯಾನಂದನ3 ಅವ್ಯಕ್ತ ಅವಿನಾಶ ಸು ದಿವ್ಯ ಸುಪವಿತ್ರದಾಗರ ಘವಘವಿಸುವ ದಿವ್ಯ ತೇಜ ರವಿಕೋಟಿ ಕಿರಣನ 4 ಅನಾಥಬಂಧು ಅನುದಿನ ಅಣುರೇಣು ತೃಣಪೂರ್ಣ ಪ್ರಾಣದೊಡೊಯ ಮಹಿಪತಿ ದೀನದಯಾಳುನಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜಿಸುವರ ಭಾಗ್ಯವೆ ಭಾಗ್ಯ ಭುವನದಲಿತ್ರಿಜಗದೊಡೆಯನು ರಾಮಕೃಷ್ಣ ರೂಪಿನಲಿರಲು ಪಶ್ರುತಿ 'ಧಿತ ನಿಯಮಗಳ ಮಾಡಿ ತದನಂತರದಿಶತಸಹಸ್ರರಿಗೊರೆದು ಕಾವ್ಯ ಪಾಠವನುಶ್ರುತಿಗಗೋಚರ ಕೃಷ್ಣ ಪಾದಪೂಜೆಯ ನಿತ್ಯಜಿತಮನಸ್ಕದಿ ರಚಿಸಿ ನಲಿವ ಮೂರ್ತಿಯನು 1ವೇದಾಂತ ಶಾಸ್ತ್ರವನು ವೇದ'ತ್ತುಗಳಿಂಗೆವಾದಗುಟ್ಟದ ತೆರದಲುಪದೇಶಗೈದುವೇದಶಾಸ್ತ್ರಾರ್ಥವನು ಸಾದರದಿ ಸಕಲರಿಗೆಬೋಧಿಸುವ ಸಂಸಾರಸಾಗರೋತ್ತಾರರನು2ರಾಮಾವತಾರದಲಿ ರಾಮನೆಂದೇ ನಾಮವಾಮೇಲೆ ದ್ವಾಪರದಿ ರಾಮ ಕೃಷ್ಣರೆಂದುನಾಮವೆರಡವರಿಂಗೆ ತನುವೆರಡು ಬಳಿಕೀಗರಾಮಕೃಷ್ಣನಾಮದಲಿ ಕಲಿಯುÀಗದಿ ಜನಿಸಿರಲು 3ಅವತಾರವೆಂಬುದುಪಚಾರವಲ್ಲಿದು ಕೇಳಿಭವನ ಪ್ರತಿಬಿಂಬ ಶ್ರೀ ಶಂಕರಾಚಾರ್ಯಭವದೂರ ಗುರುಮೂರ್ತಿ ಕೃತ ಗ್ರಂಥ ವ್ಯಾಖ್ಯಾನಕಿವರೆಂದು ಆನಂದ ಘನ ಸ್ವಪ್ನವಾಗಿರಲು 4ಅಜನ ಭಜನೆಯಲಜನು ತ್ರಿಜಗರಕ್ಷಾರ್ಥದಲಿಅಜನ ಪೌತ್ರತ್ವದಲಿ ನಿಜಸತಿಯ ನೆವದಿತ್ರಿಜಗ ಕಂಟಕ ರಾವಣನ ಮುರಿದು ಭಜಕರಿಗೆಅಜ ಪದ' ಮೊದಲಾಗಿ ಕೊಟ್ಟ ರಾಮನನು 5ಭೂ'ು ಭಾರವನಿಳುಹಲೆಂದು ನೇಮವ ಧರಿಸಿರಾಮನನುಜನು ತಾನು ಕೃಷ್ಣನೆಂದೆನಿಸಿಭೀಮ ಘಲುಗುಣ ಧರ್ಮ ಮುಖದಿ ಕೌರವ ಪಡೆಯಭೂ'ುಯಲಿ ನೆಲೆಗೊಳಿಸಿದಮಲ ಮೂರ್ತಿಯನು 6ಧರೆಗಧಿಕವೆಂದೆಂಬ ದೃಷದಪುರದಲಿ ನಿಂದುಶರಣಾಗತರ ಸಲ' ಮ'ಮೆಗಳ ಮೆರೆದುತಿರುಪತಿಯ ವೆಂಕಟನ ಪ್ರತಿಬಿಂಬ ಗುರುವರ್ಯಪರವಾಸುದೇವ ಶ್ರೀ ರಾಮಕೃಷ್ಣಾರ್ಯರನು 7ಓಂ ಪುಣ್ಯಾಯ ನಮಃ
--------------
ತಿಮ್ಮಪ್ಪದಾಸರು