ಒಟ್ಟು 1868 ಕಡೆಗಳಲ್ಲಿ , 112 ದಾಸರು , 1531 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಬೇಡಲಿ ನಿನ್ನ ಹರಿಯೆ ಪಏನ ಬೇಡಲಿ ನಿನ್ನ ಚಂಚಲ ಕಠಿಣನ |ಮಾನದಿಂದ ಮೋರೆ ಓರೆಮಾಡುವನ ಅ.ಪಕರುಳಹರಕನ - ಏನ ಬೇಡಲಿ |ತಿರಿದು ತಿಂಬುವನ ||ಕೊರಳಗೊಯ್ಕ ಅರಣ್ಯ ತಿರುಗವನ ಮೊ - |ಸರು ಬೆಣ್ಣೆ ಕದ್ದು ತಿಂಬವನ 1ವಾಸಶೂನ್ಯನ - ಬೇಡಲೇನು ಕತ್ತಿ - |ಬೀಸಿ ಸವರುವನ ||ಕಾಸುವೀಸವನೆಲ್ಲ ಮೀಸಲು ಮಾಡಿಟ್ಟು |ಕೇಸಕ್ಕಿ ಉಂಡುಂಡು ವಾಸಿಸುವನ2ಬೇಡಿದರೆ ಕೊಡನ - ಮೋರೆನೋಡಿ |ಭಿಡೆಯ ಹಿಡಿಯದವನ |ಬಡವರ ಕರೆತಂದು ಅಡಿಗೆ ಸೇರಿಸಿಕೊಂಡ |ಒಡೆಯ ಪುರಂದರವಿಠಲದೊರೆಯ 3
--------------
ಪುರಂದರದಾಸರು
ಏನು ಮರುಳಾದೆಯೇ ಎಲೆ ರುಕ್ಮಿಣಿ |ಹೀನಕುಲ ಗೊಲ್ಲ ಶ್ರೀ ಗೋಪಾಲಗೆ ಪಹಾಸಿಕಿಲ್ಲದೆ ಪೋಗಿ ಹಾವಿನೊಳು ಪವಡಿಸಿದ |ಹೇಸಿಕಿಲ್ಲದೆ ಕರಡಿಯನುಕೂಡಿದ||ಗ್ರಾಸಕಿಲ್ಲದೆ ಪೋಗಿ ದಾಸನ ಮನೆಯಲುಂಡ |ದೋಷಕಂಜದೆಮಾನವಶಿರವ ತರಿದವಗೆ1ಕುಂಡಗೋಳಕರ ಮನೆ ಕುಲದೈವವೆನಿಸಿದನು |ಮಂಡೆಬೋಳಾದವರ ಮನೆದೈವವು ||ಹಿಂಡುಗೋವಳರೊಳಗೆ ಹಿರಿಯ ಗೋವಳನೀತ |ಭಂಡಾಟಗಾರನಿವ ಭುವನದೊಳಗೆಲ್ಲ 2ಒಬ್ಬರಲಿ ಪುಟ್ಟಿದನು ಒಬ್ಬರಲಿ ಬೆಳೆದನು |ಒಬ್ಬರಿಗೆ ಮಗನಲ್ಲ ಭುವನದೊಳಗೆ ||ಅಬ್ಬರದ ದೈವಸಿರಿ ಪುರಂದರವಿಠಲನ |ಉಬ್ಬುಬ್ಬಿ ಮರುಳಾದೆ ಉತ್ಸಾಹದಿಂದ 3
--------------
ಪುರಂದರದಾಸರು
ಒಗತನದೊಳು ಸುಖವಿಲ್ಲ ಒಲ್ಲೆಂದರೆ ನೀ ಬಿಡೆಯಲ್ಲಜಗದೊಳುಹಗರಣಮಿಗಿಲಾಯಿತು ಪನ್ನಂಗನಗನಗರ ನಿವಾಸಮೂರು ಬಣ್ಣಿಗೆಯ ಮನೆಗೆ ಮೂರೆರಡು ಭೂತಗಳುಐದುಮಂದಿ ಭಾವನವರು ಐದುಮೈದುನರು ಕೂಡಿಆರಾರು ಎರಡುಸಾವಿರ ದಾರಿಲಿ ಹೋಗಿ ಬರುವರುಒಬ್ಬ ಬೆಳಕು ಮಾಡುವ ಮತ್ತೊಬ್ಬ ಕತ್ತಲೆಗೈಸುವಆರುಹತ್ತರ ಮೂಲದಿ ಆರುಮಂದಿ ಬಿಡದೆ ಎನ್ನಹಡೆದ ತಾಯಿ ಮಾಯದಿ ಹಿಡಿದು ಬದುಕು ಮಾಡಿಸುವಳುಅತ್ತೆ ಅತ್ತಿಗೆಯು ಎನ್ನ ಸುತ್ತಮುತ್ತ ಕಾದುಕಟ್ಟಿಮನೆಯೊಳು ನಾಳಿನ ಗ್ರಾಸಕ್ಕನುಮಾನ ಸಂದೇಹವಿಲ್ಲನಿನ್ನ ಹೊಂದಿ ಇಷ್ಟು ಬವಣೆಯನ್ನು ಬಡಲೀ ಜನರು
--------------
ಗೋಪಾಲದಾಸರು
ಒಂದೇ ಕೂಗಳತೆ | ಕೈಲಾಸಕ್ಕೆ |ಒಂದೇ ಕೂಗಳತೆ ಪಬಾಲ ಮಾರ್ಕಾಂಡೇಯ ಕಾಲಪಾಶದಿ ಸಿಕ್ಕಿ |ಗೋಳಿಟ್ಟು ಸ್ತುತಿಸಲಾ ನೀಲಕಂಧರನಾ ||ಶೂಲಪಾಣಿಯು ಕಲ್ಲ ಲಿಂಗದಿ ಮೈದೋರಿ |ಕಾಲನ ಮುರಿದೆತ್ತಿ | ಬಾಲನ ಸಲಹಿz À 1ಶಿವನ ಅರ್ಧ ಪ್ರಹರದಿ ಒಲಿಸಿಕೊಳ್ಳುವೆನೆಂದು |ಪವನಾತ್ಮಜನು ಗದೆಯನಂಬರಕ್ಕೆಸೆದು ||ಭುವನದಿ ಸ್ತುತಿಸುತ್ತ ಶಿರಒಡ್ಡಿನಿಂದಿರೆ |ತವಕದಿಂದೈತಂದು ಶಿವನು ಭೀಮನ ಕಾಯ್ದ 2ಚರರನಟ್ಟಿದನೇ ರತ್ನಾಂಗದ ಶಿವನಿಗೆ |ಕರೆಯ ಪೋದನೇ | ಕನ್ಯನೆಂಬ ಚಂಡಾಲ ||ಬರದೋಲೆ ಕಳುಹಿಸಿ ಕೊಟ್ಟಾಳೆ ನರ್ಮದೆ |ಸ್ಮರಿಸಿದಾಕ್ಷಣ ಗೋವಿಂದನಸಖಬರುವರೇ 3
--------------
ಗೋವಿಂದದಾಸ
ಕಡಲದಾಟಿದ ಬಲುಧೀರನೆ ಬಂದುಒಡಲ ಹೊಕ್ಕವರಿಗುದಾರನೆ ಪ.ಬಿಡದೆ ಭಕ್ತರ ಕೈಯವಿಡಿದು ರಕ್ಷಿಸುವ ಎನ್ನೊಡೆಯ ಹನುಮರಾಯ ಅಡವಿಯನಿಲಯಅ.ಪ.ದೃಢದಿಂದ ಲಂಕೆಯ ಪೊಕ್ಕನೆ ದೇವಮೃಡನಿಂದ ಪೂಜೆಗೆ ತಕ್ಕನೆಪೊಡವಿಯ ಮಗಳನು ಕಂಡನೆ ಕಿತ್ತುಗಿಡ ವನಗಳ ಫಲ ಉಂಡನೆಅಡಿಗಡಿಗೊದಗಿದ ಕಿಡಿಗೇಡಿ ರಕ್ಕಸರ್ಹೊಡೆದು ಪುರವನೆಲ್ಲ ಕಿಡಿಗಂಜಿಸಿದ ಧೀರ 1ತಡೆಯದೆ ಸುದ್ದಿಯ ತಂದನೆ ಜಗದೊಡೆಯ ರಾಮನ ಮುಂದೆ ನಿಂದನೆಪಿಡಿದೆತ್ತಿ ತರುಗಿರಿ ಪೊತ್ತನೆ ಕಪಿಗಡಣಕ್ಕೆ ಒಬ್ಬನೆ ಕರ್ತನೆಜಡಧಿ ದಾರಿಯಕಟ್ಟಿನಡೆದು ರಾವಣನೆದೆಒಡೆಗುದ್ದಿಕಾಳಗಜಡಿದುಮಾಡಿಸಿದೆ2ಪೆಡಕಿಲಾಸನವಿತ್ತು ದಾತಗೆತುಷ್ಟಿಬಡಿಸಿದೆ ಶ್ರೀರಘುನಾಥಗೆಕಡುವೇಗ ಸಂಜೀವ ಸಲಿಸಿದೆ ನೊಂದುಪುಡಿವಟ್ಟ ಕಟಕವ ನಿಲಿಸಿದೆಬಡವರಾಧಾರಿ ನಿನ್ನಡಿಗೆರಗುವೆ ಲೇಸಕೊಡು ಪ್ರಸನ್ವೆಂಕಟ ಒಡೆಯನನಿಲಯ3
--------------
ಪ್ರಸನ್ನವೆಂಕಟದಾಸರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು
ಕರುಣಿಸೊ ಕರುಣಾಸಾಗರ ನರಹರಿಯೆ ನಿನ್ನಚರಣದಾಚರಣೆಗೆಚ್ಚರಾದರನು ಪ.ಮನ ಮಲಿನವ ತೊಳೆದನುದಿನ ದೃಢದೊಳುಜ್ಞಾನ ಭಕ್ತಿ ವಿರಕ್ತಿಯ ಘನಾಸಕ್ತಿಯಮನಗಂಡು ಮುದವಂತರೆನಿಸಿ ನಾಮಾಮೃತಉಣಬಲ್ಲ ಪೂತಾಂಗ ಮಾನಿಸರ ಸಂಗ 1ಸಭ್ಯರ ದೂಷಣ ಕೇಳುಬ್ಬಸ ಶ್ರವಣಕೆಇಬ್ಬರ ಕಲಹದಿ ಶಬ್ದಗುಂದಿಅಬ್ಜನಾಭನ ಬಿರುದುಬ್ಬುಬ್ಬಿ ಸುಖವೇರಿಕೊಬ್ಬಿ ಕುಣಿವ ಶಂಲಬ್ಧರೂಳಿಗವ 2ವೃಂದಾವನದಲಿ ಮುಕುಂದನಾಲಯದಮುಂದಾ ದಿಗಿದಿಗಿತ ವಾದ್ಯವಂದನಿಂದತಂದೆ ಪ್ರಸನ್ನವೆಂಕಟೇಂದ್ರ ನಿನ್ನ ಮುದ್ರಾಂಕಹೊಂದುವ ಜನುಮವ ಆನಂದಮುನಿಮತವ 3
--------------
ಪ್ರಸನ್ನವೆಂಕಟದಾಸರು
ಕಲ್ಲುಸಕ್ಕರೆ ಕೊಳ್ಳಿರೊ - ನೀವೆಲ್ಲರು |ಕಲ್ಲುಸಕ್ಕರೆ ಕೊಳ್ಳಿರೊ ಪ.ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು |ಫುಲ್ಲನಾಭಕೃಷ್ಣನ ದಿವ್ಯನಾಮವೆಂಬಅ.ಪಎತ್ತ ಹೇರುವುದಲ್ಲ ಹೊತ್ತು ಮಾರುವುದಲ್ಲ |ಒತ್ತೊತ್ತಿ ಗೋಣಿಯ ತುಂಬುವುದಲ್ಲ ||ಎತ್ತ ಹೋದರು ಮತ್ತೆ ಸುಂಕವು ಇದಕಿಲ್ಲ |ಹತ್ತೆಂಟು ಸಾವಿರಕೆ ಬೆಲೆಯಿಲ್ಲದಂತಹ 1ನಷ್ಟಬೀಳುವುದಲ್ಲ ನಾಶವಾಗುವುದಲ್ಲ |ಕಟ್ಟಿ ಇಟ್ಟರೆ ಮತ್ತೆ ಕೆಡುವುದಲ್ಲ ||ಎಷ್ಟು ದಿನವಿಟ್ಟರೂ ಕೆಟ್ಟು ಹೋಗುವುದಲ್ಲ |ಪಟ್ಟಣದೊಳಗೊಂದು ಲಾಭವೆನಿಸುವಂಥ 2ಸಂತೆಪೇಟೆಗೆ ಹೋಗಿ ಶ್ರಮಪಡಿಸುವುದಲ್ಲ |ಎಂತು ಮಾರಿದರದಕಂತವಿಲ್ಲ ||ಸಂತತ ಪುರಂದರವಿಠಲನ ನಾಮವ |ಎಂತು ನೆನೆಯಲು ಪಾಪ ಪರಿಹಾರವಲ್ಲದೆ 3
--------------
ಪುರಂದರದಾಸರು
ಕಾಶಿ ಪಿತಾಂಬರ ಕೈಯಲಿ ಕೊಳಲು |ಪೂಸಿದ ಶ್ರೀಗಂಧ ಮೈಯಲಿ ||ಲೇಸಾದ ಪುಷ್ವಮಾಲಿಕೆ ಹಾಕಿದ-ನಮ್ಮ-|ವಾಸುದೇವಹರಿಬಂದ ಕಾಣಿರೇನೆ? 2ಕರದಲಿ ಕಂಕಣ ಬೆರಳಲಿ ಉಂಗುರ |ಕೊರಳಲಿ ಹಾಕಿದ ಹುಲಿಯುಗರಮ್ಮ ||ಅರಳೆಲೆ ಕನಕಕುಂಡಲ ಕಾಲಲಂದಿಗೆ-ನಮ್ಮ-|ಉರಗಶಯನ ಬಂದ ಕಾಣಿರೇನೆ? 3ಹದಿನಾರು ಸಾವಿರ ಗೋಪಸ್ತ್ರೀಯರ ಕೂಡಿ |ಚದುರಂಗ-ಪಗಡೆಯನಾಡಿದನ ||ಮದನಮೋಹನರೂಪ ಎದೆಯಲ್ಲಿ ಕೌಸ್ತುಭ-ನಮ್ಮ |ಮಧುಸೂದನ ಬಂದ ಕಾಣಿರೇನೆ? 4ತೆತ್ತೀಸಕೋಟಿ ದೇವತೆಗಳು ಕೂಡಿ |ಹತ್ತವತಾರವ ಧರಿಸಿದನ ||ಸತ್ಯಭಾಮೆಯ ಅರಸ ಶ್ರೀ ಪುರಂದರವಿಠಲ |ನಿತ್ಯೋತ್ಸವ ಬಂದ ಕಾಣಿರೇನೆ? 5
--------------
ಪುರಂದರದಾಸರು
ಕೃಷ್ಣ ನಿನ್ನಂಥ ಕೂಸೆಲ್ಲಿ ಕಾಣೆ ಜಗದಿ ಹೊರಗೆದೃಷ್ಟಿ ತಾಕೀತು ಹೋಗಬೇಡೆಂದು ಎಷ್ಟು ಹೇಳಲಿ ಮಗನೆ ಪ.ಗೊಲ್ಲತೀರೆಳೆ ಮಕ್ಕಳ ಗುಣವ ನೋಡಬಾರದೊಹೊಲ್ಲತನ ಬೇಡ ಮನೆ ಹೊಂದಿರೊ ಅಯ್ಯಫುಲ್ಲಲೋಚನ ನೀಯೆನ್ನ ಪ್ರಾಣದ ಪದಕವಯ್ಯಪಳ್ಳಿಯ ಗೋಪರೈದಾರೆ ಪುಟ್ಟ ನಿನ್ನ್ಯೆತ್ತ ನೋಡಲೊ 1ತರಳರಂಗಿ ಕುಲಾಯವ ತೊಟ್ಟು ನಿಂತಿಹರು ಕಂಡ್ಯಹಿರಿಯ ಗುಮ್ಮಗಂಜುವೆ ಹೆದರಿ ಕಂಡ್ಯಬರಿಮೈಯಾ ಬಿಸಿಲೊಳು ಬಾಡಿತೊ ಮಂಗಳ ಮುಖಬರಿದೆ ಬೊವ್ವ ಕಚ್ಚದೇನೊ ಬೆಟ್ಟದ ಭಾಗ್ಯನಿಧಿಯ 2ಕಂದ ಬರಲೆಂದುಣದೆ ಕುಳಿತಿಹನೊ ನಿಮ್ಮಯ್ಯಹೊಂದಳಿಗೆ ಪಾಯಸ ಹಸನಾಗಿದೆಅಂದದಿ ಸಕ್ಕರೆ ತುಪ್ಪ ಅನುಗೂಡಿಸುಣಿಸುವೆತಂದೆ ಪ್ರಸನ್ನವೆಂಕಟ ನಿನಗೆ ಹಸಿವೆ ಮರೆದೆಯೊ 3
--------------
ಪ್ರಸನ್ನವೆಂಕಟದಾಸರು
ಕೃಷ್ಣ ಮಂತ್ರವ ಜಪಿಸೊ - ಏ ಮನುಜ |ಕೃಷ್ಣ ಮಂತ್ರವ ಜಪಿಸೊ ಪ.ವೈಷ್ಣವೋತ್ತಮನಾಗಿ ವಿಷ್ಣುವೆ ಗತಿಯೆಂದು ಅಪಜಪತಪಾನುಷ್ಟಾನ ಸ್ನಾನಕ್ಕೆ ಈ ಮಂತ್ರ |ಕಪಟಬುದ್ದಿಗಳನ್ನು ಕಟ್ಟುವ ಮಂತ್ರ ||ಉಪದೇಶದಲಿ ಜ್ಞಾನಕೊಟ್ಟು ಸಲಹುವ ಮಂತ್ರ |ಸುಪವಿತ್ರ ಮಾಡಿ ಸ್ವರ್ಗ ಸೂರೆಗೊಡುವ ಮಂತ್ರ 1ಸಕಲ ಸಾಧನೆಗಳಿಗೆ ಸಾರಭೂತದ ಮಂತ್ರ |ನಿಖಿಳ ದೇವರಿಗೆಲ್ಲ ಸಾಕ್ಷಿ ಭೂತದ ಮಂತ್ರ ||ಭಕುತಿಯಲಿ ದ್ರೌಪದಿಯ ಭಜಿಸಿದ ಈ ಮಂತ್ರ |ಮುಕುತಿಯ ಕೊಟ್ಟು ಜನರ ಪೋಷಿಸುವ ಮಂತ್ರ 2ಭಾವಿಸಲಣುರೇಣು ಪರಿಪೂರ್ಣವಾದ ಮಂತ್ರ |ಜೀವಗಳಿಗೆಲ್ಲ ಸಂಜೀವ ಮಂತ್ರ ||ಪಾವನ ಮಾಡಿ ಪಾಲಿಪುದೀ ಮಂತ್ರ |ದೇವ ಪುರಂದರವಿಠಲ ಮಹಾ ಮಂತ್ರ 3
--------------
ಪುರಂದರದಾಸರು
ಕೃಷ್ಣನಾಮಾಮೃತ ರುಚಿಕರವೆಲ್ಲವುಶ್ರೇಷ್ಠ ಭಕ್ತರಿಗಲ್ಲದೇದುಷ್ಟಮಾನವಮತಿಹೀನಗೆಪೇಳಲು ಇಷ್ಟವಾಗಲು ಬಲ್ಲುದೇ ಪಗುಡಶೈಲದಲಿ ಲಿಂಬೆ ಬೀಜ ಪ್ರತಿಷ್ಠಿಸೆಫಲವು ಮಧುರವಹುದೆ ಗುಡುಗುಮೋಡಕೆ ಮಯೂರವು ಕುಣಿದಂತೆಕುಕ್ಕುಟ ನೋಡಿ ಕುಣಿವುದೆ ಸುಡುವಗ್ನಿಯಲಿಬೀಜಬಿತ್ತಿ ನೀರೆರೆದರೇ ಗಿಡವಾಗಿ ಶೋಭಿಪುದೇಪೊಡವಿಯೊಳಗೆ ಲಕ್ಷ್ಮೀಯೊಡೆಯನಚರಿತೆಯ ಮೂಢಮಾನವಬಲ್ಲನೇ 1ವೀಣೆಯ ನುಡಿಸುತ್ತ ಗಾಯನ ಹಾಡಲುಕೋಣಗೆ ಹಿತವಹುದೆ ಸಾಣೆಕಲ್ಲನುಬಿಸಿನೀರಿನೊಳಿಟ್ಟರೆ ಮೇಣದಂತಾಗುವುದೇಜಾಣತನದಿ ವೇದ ಓದಿದ ಹೊಲೆಯನುಬ್ರಾಹ್ಮಣನೆನಿಸುವನೆ ಕ್ಷೋಣಿಯೊಳಗೆವಾಸುದೇವನ ಚರಿತೆಯ ಹೀನಮತಿಯು ಬಲ್ಲನೆ 2ಕೋಗಿಲೆ ಸಾಕಿದ ಕಾಗೆಯ ಮರಿ ತನ್ನ ರಾಗದಿಮೋಹಿಪುದೇ ನಾಗರಹಾವಿಗೆ ಹಾಲೆರೆದರೆನಿತ್ಯವಿಷವ ನೀಗಿಸಿಕೊಂಬುದೇ ಭೋಗದಾಸೆಯಸ್ತ್ರೀಗೆ ವಿಟನ ಮೇಲಲ್ಲದೇ ಯೋಗಿಯೊಳ್ಹಿತವಹುದೇ ಸಾಗರಶಯನ ಗೋವಿಂದನಮಹಿಮೆಯಭೋಗಾಸಕ್ತನು ಬಲ್ಲನೇ 3
--------------
ಗೋವಿಂದದಾಸ
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೃಷ್ಣಲೀಲೆಅಕ್ಕ ನಂದಗೋಪನ ಅರಮನೆಯೊಳಗೊಬ್ಬ |ಅಕ್ರೂರ ಬಂದನಂತೆ ಪಹೊಕ್ಕು ಬಳಕೆಯಿಲ್ಲ ಹೊಸಬನು ಇವನಂತೆ |ಇಕ್ಕೋ ಬಾಗಿಲ ಮುಂದೆ ಈಗ ರಥವ ಕಂಡೆ ಅ.ಪಮಧುರಾ ಪಟ್ಟಣವಂತೆ ಮಾವನ ಮನೆಯಂತೆ |ನದಿಯ ದಾಟಲುಬೇಕಂತೆ ||ಎದುರು ಅರಿವಿಲ್ಲದಂತೆ ಏನೆಂಬೆ ಏಣಾಕ್ಷಿ |ಉದಯದಿ ಪಯಣವಂತೆ 1ಒಳ್ಳೆ ವೇಳೆಗಳಂತೆ ಬಿಲ್ಲುಹಬ್ಬಗಳಂತೆ |ಎಲ್ಲಾ ಬೀದಿ ಸಿಂಗರವಂತೆ ||ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆ |ಅಲ್ಲೆ ತಾಯ್ತಂದೆಗಳ ಕಾಲಿಗೆ ನಿಗಳವಂತೆ 2ಮತ್ತೆ ಪಾಂಡವರಂತೆ ಮೋಹದ ಸೋದರರಂತೆ |ಅತ್ತೆಯ ಮಕ್ಕಳಂತೆ ||ಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆ |ಚಿತ್ತಜನಯ್ಯನ ಚಿತ್ತ ಎರಡಾಯ್ತಂತೆ 3ಅಲ್ಲಿ ಪುಟ್ಟಿದನಂತೆ ಅರಸನಳಿಯನಂತೆ |ಇಲ್ಲಿಗೆ ಬಂದನಂತೆ ||ಕಳ್ಳಕಪಟನಂತೆ ಎಂದಿಗೂ ಹೀಗಂತೆ |ನಿಲ್ಲದೆ ಯಶೋದೆಗೆ ಕಣ್ಣ ನೀರಂತೆ 4ತಾಳಲಾರೆವು ನಾವು ಪುರಂದರವಿಠಲನ |ಕಾಣದೆ ನಿಲಲಾರೆವೆ ||ಕಾಲದಲೊಂದಾಗಿ ಕಾಮಿನಿಯರು ಕೂಡಿ |ಆಲಸ್ಯವಿಲ್ಲದೆ ಆಣೆಯಿಡುವ ಬನ್ನಿ
--------------
ಪುರಂದರದಾಸರು
ಕೇಶವ ಬಾ ನಾರಾಯಣ ಬಾ ಬಾಮಾಧವಬಾ ಮಧುಸೂದನ ಬಾಪಗೋವಿಂದ ಬಾ ಬಾ ಗೋಪಾಲ ಬಾ ಬಾಗೋವರ್ಧನ ಗಿರಿಧಾರಿಯೆ ಬಾ ಅ.ಪರಂಗನೆ ಅಂದಿಗೆ ಗೆಜ್ಜೆಯಕಟ್ಟಿಚುಂಗುಬಿಟ್ಟು ರುಮಾಲನೆ ಸುತ್ತಿಶೃಂಗಾರದ ಹಾರ ಪದಕಗಳ್ಹಾಕಿಅಂಗಳದೊಳಗಾಡಲು ಕಳುಹುವೆನು 1ಚಂಡು ಬುಗುರಿ ಗೋಲಿ ಗಜ್ಜುಗ ಹರಿಯೆಗುಂಡು ಬಿಂದಲಿನಿಟ್ಟಿ ಕರದಲಿ ಕೊಡುವೆಹಿಂಡುಗೋಪಾಲರ ಕೂಡಿಸುವೆಪುಂಡರಿಕಾಕ್ಷನೆ ಪಾಲಿಸು ದೊರೆಯೆ 2ಹಸುಳೆ ನಿನಗೆ ಹೊಸ ಬೆಣ್ಣೆಯ ನೀವೆಬಿಸಿ ಬಿಸಿ ಕಡುಬು ಕಜ್ಜಾಯವ ಕೊಡುವೆಶಶಿಮುಖಿಯರ ಕೂಡಾಡದಿರೆನುವೆಮೊಸರು ಬೆಣ್ಣೆ ಪಾಲ್ಸಕ್ಕರೆ ಕೊಡುವೆ 3ಜರದವಲ್ಲಿ ಅಲಂಕರಿಸುತ ನಲಿವೆಪರಿಪರಿ ಗೆಳೆಯರ ಕೂಡಿಸಿ ಕೊಡುವೆಮುರಳಿ ನುಡಿಸೆನ್ನುತಕರಮುಗಿವೆಪರಮಾತ್ಮನೆ ಜಗನ್ಮೋಹನ ಹರಿಯೆ 4ಕಮಲಭವೇಂದ್ರಾದ್ಯಮರರು ಪೊಗಳೆಕಮಲಪುಷ್ಪ ಮಲ್ಲಿಗೆ ಮಳೆ ಕರೆಯೆಕಮಲನಾಭ ವಿಠ್ಠಲ ಶ್ರೀಹರಿಯೆಶ್ರಮ ಪರಿಹರಿಸೆನ್ನುತ ಪ್ರಾರ್ಥಿಸುವೆ 5
--------------
ನಿಡಗುರುಕಿ ಜೀವೂಬಾಯಿ