ಒಟ್ಟು 4323 ಕಡೆಗಳಲ್ಲಿ , 125 ದಾಸರು , 2943 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಗುರುವರ್ಯ ಜಯಾರ್ಯ ಪ ಶ್ರಿಮದಾನಂದತೀರ್ಥರ ಕಂದ ಶ್ರೀಮದಕ್ಷೋಭ್ಯರ ಕಂದ ಯತೀಂದ್ರ 1 ಪೂರ್ಣಬೋಧ ತೀರ್ಥಾರ್ಣ ವಿಹಾರಿ ಸ್ವರ್ಣ ಪಾತ್ರ ಸುಧಾಕಾರಿ ಉದಾರಿ2 ಶ್ರೀ ನರಹರಿ ಧ್ಯಾನವಿಚಾರಿ ಮೌನಿ ಗುಣಗಣಧಾರಿ ಉದ್ಧಾರಿ3
--------------
ಪ್ರದ್ಯುಮ್ನತೀರ್ಥರು
ಪಾಲಿಸು ನಮ್ಮಮ್ಮ ಮುದ್ದು ಶಾರದೆ ನಮ್ಮ ನಾಲಿಗೆ ಯೊಳು ತಪ್ಪುಬಾರದೆ ನೀಲ ಕುಂತಳೆ ತಾಯೀ ನಿನ್ನ ನಂಬಿದೆ ಕಾಯೆ ಪ ಅಕ್ಷರಾಕ್ಷರ ವಿವೇಕಿಯೇ ನಿಮ್ಮ ಕುಕ್ಷಿಯೊಳೀರೇಳು ಲೋಕವೆ ಸಾಕ್ಷಾತ್ ಸ್ವರೂಪಿಣಿ ಮೋಕ್ಷದಾ ಯಕಿಯೆ ತಾಯೆ ಪಾಲಿಸಮ್ಮಮ್ಮ 1 ಸರ್ವಾಲಂಕಾರ ಮೂರ್ತಿಯ ಚರಣ ಭಜಿ ಸುವೆ ಕೀರ್ತಿಯ ಗುರುಮೂರ್ತಿ ಪರಮಾ ನಂದದೊಳ್ ಪಾಲಿಸಮ್ಮಮ್ಮ 2 ಶೃಂಗಪುರದ ನೆಲೆವಾಸಿಯೆ ನಿಮ್ಮ ಸಂಗೀತ ಶಾಸ್ತ್ರ ವಿಶಾಲಯ ಭೃಂಗ ಕುಂತಳೆ ತಾಯೆ ಭಳಿರೆ ಬ್ರಹ್ಮನರಾಣಿ ಪಾಲಿಸಮ್ಮಮ್ಮ 3
--------------
ಕವಿ ಪರಮದೇವದಾಸರು
ಪಾಲಿಸು ಪರಮಪಾವನ ಪದ್ಮಾವತೀರಮಣ ಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ. ಪಾಹಿಪಾರ್ಥಸಾರಥಿಅ.ಪ. ಮದನಜನಕ ಮಹಿಮಾಂಬುಧಿ ನಿನ್ನ ಪದಕಮಲವ ನಾ ಸ್ಮರಿಸದೆ ಎನ್ನ ಮದಮುಖತನವನು ಒದರುವದೆನ್ನ ಪದುಮನಾಭ ರಕ್ಷಿಸು ನೀ ಮುನ್ನ ಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧ ಉದುಭವಿಸುವುದು ನಿಜವೇ ಭಕ್ತವಾತ್ಸಲ್ಯ ಇದಕೆ ನೀ ಊನ ತರುವೆ ಸಾಕು ಈ ಮರವೆ ಒದಗಿಸು ಸರ್ವಮನಸಿನೊಳ್ ಪುದು- ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ- ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತ ಮಧುಸೂದನ ಮಂದರಗಿರಿಧರ ನೀ- ರದ ನಿಭ ನಿರ್ಮಲ ನಿಜರೂಪ ಗುಣ ಸದನಾಚ್ಯುತ ರವಿಕುಲದೀಪ ನಿರ- ವಧಿ ಆನಂದ ರಸಾಲಾಪ ಬುಧಜನೋಪಲಾಲಿತ ಲೀಲಾಯತ ಉದಧಿಶಾಯಿ ಮಾನದ ಮಧುಸೂದನ1 ನಾಮಸ್ಮರಣೆಯೆ ನರಕೋದ್ಧಾರ ನೇಮವಿಲ್ಲೆಂಬುದು ನಿನ್ನ ವಿಚಾರ ಸಾಮಾರ್ಥದ ಗುಣಕೆಲ್ಲನುಸಾರ ಪಾಮರ ಮನಕಿದು ಈ ಗುಣಭಾರ ಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿ ಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬ ಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊ ಸಾಮಗಾನಲೋಲ ಸುಜನ ಸ್ತೋಮ ಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬ ತಾಮಸ ಪರಿಹರಿಸಿ ಜ್ಞಾನೋದಯದ ಸದಾನಂದ ಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆ ನೀ ಮಾಡುವುದೆಲ್ಲವು ಸಹಜ ಗುಣ ಧಾಮಾಶ್ರಿತ ನಿರ್ಜರಭೂಜ ಸುಜನ ಸ್ತೋಮಾರ್ಕಾಮಿತ ವಿಭ್ರಾಜ ಶ್ರೀಮಚ್ಛೇಷಾಚಲ ಮಂದಿರ ಸು- ತ್ರಾಮಾರ್ಚಿತ ಸದ್ರಾಮ ಶ್ರೀರಾಮ2 ಉಡುವ ಸೀರೆಯ ಸೆಳೆಯಲು ದ್ರುಪಜೆಯ ಕೊಡಲಿಲ್ಲವೆ ಬಹುವಸನ ಸಂತತಿಯ ಹಿಡಿಯವಲಕ್ಕಿಗೆ ದ್ವಾರಕ ಪತಿಯ ಕಡು ಸರಾಗವಾಯ್ತಿಂದಿನ ಪರಿಯ ಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನ ಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟ ಕೊಡು ದಯವಿಟ್ಟು ಮುದದಿ ಕರುಣಾವುದಧಿ ಕಡುಲೋಭಿತನ ಬಿಡು ಮಹರಾಯ ಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತ ಕರ್ಮ ವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯ ಒಡೆಯ ಶ್ರೀ ಲಕ್ಷ್ಮೀನಾರಾಯಣ ನಡುನೀರೊಳು ಕೈಬಿಡುವೆಯ ನೀ ತೊಡಕೊಂಡ ಬಿರುದೇನಯ್ಯ ಈ ಕಡು ಕೃಪಣತನ ಸಾಕಯ್ಯ ಪೊಡವಿಯೊಳಗೆ ಪಡುತಿರುಪತಿಯೆಂಬ ದೃಢಕಾರ್ಕಳದೊಡೆಯ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಪಾಲಿಸು ಪಾರ್ವತಿ ತನಯನೆ ಫಾಲಚಂದ್ರಯುತನೆ ಕಾಲ ಸಂಭಾವನಲೋಲುಪ ವಾರಿಜಾಸ್ಯನುತನೆ ಪ ಸುಜನ ಗಜವದನಾ ಸುರಕುವಲಯ ದಿನಕರ ಧೂರ್ಜಟಿಸುತ ಗಣಪ 1 ಕಾಮಿತ ಫಲಗಳ ಪಡೆಯಲು ಸುಜನರು ನೇಮದಿ ಪೂಜಿಪರು ಸಾಮಜ ವದನನೆ ಭಕ್ತರಭೀಷ್ಟವÀ ಪ್ರೇಮದಿ ಕರುಣಿಸುತ 2 ಗಾನಲೋಲ ವರತಾಂಡವ ಪ್ರೀತನೆ ಕೋಮಲಾಂಗ ಸತತಂ ಧೇನುನಗರ ಸಂರಕ್ಷಣ ದಕ್ಷನೆ ಸಾನುರಾಗದಲನಿಶಂ 3 ಇಂದ್ರಾದಿ ದಿವಿಜರೆಲ್ಲ ಕುಂದುತ್ತ ದೈತ್ಯ ಭಯದಿಂ ಸುಂದರಿ ನಿನ್ನ ಭಜಿಸೆ ನಿಂದೆಲ್ಲರನ್ನು ಪೊರೆದೆÀ 4 ಕಮಲಾಕ್ಷಿ ವಿಮಲಪಾಣಿ ಕಮಲಾಪ್ತ ಮುಖ್ಯರಮಣೆ ಸುಮಶೋಭಮಾನವೇಣಿ ಕಮನೀಯ ದಿವ್ಯಪಾಣಿ 5 ಶಾಕಿನಿರೂಪೆ ದೇವಿ ಲೋಕೈಕ ವೀರ್ಯ ಧೈರ್ಯ ಬೇಕಾದ ವರಗಳಿತ್ತು ಶ್ರೀಕಾರ ಶಕ್ತಿಯೆನ್ನ 6 ಜ್ಞಾನವು ಮೌನ ಜಯವುಂ ಧ್ಯಾನ ಸುಮಂಗಲತ್ವಂಮಾನ ಸುಪುತ್ರ ಹಿತಮಂ ಧೇನು ಪುರೀಶೆ ಕೊಟ್ಟು 7
--------------
ಬೇಟೆರಾಯ ದೀಕ್ಷಿತರು
ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಪಾಲಿಸು ಶ್ರೀಹರಿಯೆ ಯದುಭೂಮಿಪತಿಯೆ ಪ ಬಾಲಾರ್ಕ ಸಮಮುಖ ಲೋಲ ಮುರಳೀಧರ ಅ.ಪ. ನಂದ ನಂದನ ದಿವ್ಯ ಸುಂದರ ರೂಪನೆ ಬಂಧುರಾಲಕ ವರ ಮಂದಹಾಸನೆ 1 ಗೋಪ ಸುಂದರೀಗಣ ದೀಪವಿರಾಜಿತ ತಾಪಿಂಛ ಪಲ್ಲವ ನೂಪುರ ಶೋಭಿತ2 ಕಾಳೀಯ ಮರ್ದನ ನೀಲಾಂಬುದ ಪ್ರಭ ನಾಳೀಕಾನನ ಚಿತ ಲೋಲಾಕ್ಷಿ ಚಿತ್ತನೆ3 ಭವ ಭಂಗ ಮಾನುಷ ವೇಷ ಶೃಂಗಾರ ಶೋಭಿತ ಭೃಂಗಾಲಕಾರ್ಚಿತ 4 ಧೇನುನಗರ ದೊರೆ ಸಾನುರಾಗದಿ ಪೊರೆ ಗಾನ ವಿನೋದ ಹರೆ ಭಾನುಸನ್ನಿಭ ಶೌರೆ 5
--------------
ಬೇಟೆರಾಯ ದೀಕ್ಷಿತರು
ಪಾಲಿಸೆ ಎನ್ನ ನಾಮಗಿರಿಯಮ್ಮ ಹರಿಗುರುಗಳ ಕೃಪಾಬಲ ಎನ್ನಲ್ಲಿರುವಂತೆ ಪ ಕರುಣದಿ ನೋಡೆ ನಾಮಗಿರಿಯಮ್ಮ ಇಂದಿರೆ ಎನ್ನ ಸುಖಿಯನ್ನೆ ಮಾಡೆ ವಾರಿಜಮುಖಿ ನರಪಾಲಾಧಮರ ದುರ್ಮುಖವ ನೋಡಿಸದಂತೆ 1 ಸುಖಚಿದಾಕಾರೆ ಎನ್ನ ಮನೆಗೆ ದಯವಿಟ್ಟು ಬಾರೆ ನಾರೆಯರಲ್ಲಿ ಸರಿ ನಿನಗಾರೆ ಪಂಕಜನೇತ್ರೆ ಕಿಂಕರನೆಂದು ಆತಂಕ ಬಿಡಿಸೆ ತಾಯೆ 2 ಚರಣಾರವಿಂದ ಸೇವಕನಲಿ ಕೃಪೆಯಿಟ್ಟು ಮಂದಹಾಸದೆ ಬಂದು ಸುಖಬುದ್ಧಿಯಿಂದ ಇಂದಿರಾದೇವಿ ಚಂದ್ರವದನೆ ಎನ್ನ ಮಂದಿರದೊಳಗಿದ್ದು 3 ಶ್ರಿತ ಸುರಧೇನು ದೇವಿ ನೀನೆಂದು ಇಂದಿರೆ ಇಷ್ಟುಪೇಕ್ಷೆ ನಿಂಗೇನು ಕಷ್ಟಗಳೆಲ್ಲ ನಷ್ಟವಾಗುವ ಪರಿ ದೃಷ್ಟಿ ಎನ್ನೊಳಗಿಟ್ಟು 4 ನರಹರಿ ಜಾಯೆ ನಾಮಗಿರಿಯಮ್ಮ ಬಂದು ನೀ ಕಾಯೇ ಪೇಳುವುದೇನು ಸರ್ವಜ್ಞ ತಾಯೇ ವಾರಿಜಮುಖಿ ನಿಜ ವರ್ಣಾಶ್ರಮಧರ್ಮ ಚ್ಯುತಿ ಎಂದೂ ಬರದಂತೆ 5
--------------
ವಿದ್ಯಾರತ್ನಾಕರತೀರ್ಥರು
ಪಾಲಿಸೆನ್ನ ಪಾರ್ವತೀಶ ಫಾಲಲೋಚನ ಲಾಲಿಸೆನ್ನ ನುತಿಯ ದೇವ ಕಾಲಕಂಧರ ಪ ಪುಲ್ಲನಯನ ಚಲ್ವವದನ ಮಲ್ಲಿಕಾರ್ಚಿತ ಬಿಲ್ವ ಪಲ್ಲವಾದಿಪ್ರಿಯನೆ ಶೈಲಜಾಪತೆ 1 ವಿನುತ ಪಂಕಜಪ್ರಿಯ ಸಂಕಟಾದ್ರಿ ದೇವರಾಜ ಲೋಕಪಾಲಕ 2 ಪಾಹಿ ಪಾಹಿ ಕಾಲಕಾಲ ಮೋಹನಾಶಕ ಸ್ನೇಹದಿಂದಲೆನ್ನ ಬಿಡದೆ ವಾಮದೇವನೆ 3 ಧಾನವಾಂತಕಾದಿ ಹೃದಯ ಜೀವ ರೂಪನೆ ಕಮಲ ಭಾನುರೂಪನೆ 4
--------------
ಬೇಟೆರಾಯ ದೀಕ್ಷಿತರು
ಪಾಲಿಸೆನ್ನ ಪಾವ9ತೀಶನೆ | ಮಹಾನುಭಾವ | ನೀಲಕಂಠ ರುಂಡಮಾಲನೆ ಪ ಪಾಲಿಸೆನ್ನ ಭವದೊಳಿಂದು | ಬಾಲಚಂದ್ರಧರನೆ ಬಂದು | ಕಾಲಕಾಲ ದುರಿತಜಾಲ | ಮೂಲನಾಶಗೈದುವೊಲಿದು ಅ.ಪ. ಅಂತರಾತ್ಮನಖಿಲ ಪೋಷಣ | ಕಪಾಲಧರ ದು-| ರಂತ ಮಹಿಮ ತ್ರಿಗುಣ ಕಾರಣ || ಸಂತಸುಜನ ಚಿಂತಿತಾಥ9 | ಭವಾಬ್ಧಿ ಪೋತ | ಅಂತಕಾಂತನಖಿಲ ಭುವನ | ಕ್ರಾಂತಾನಂತ ಮಹಿಮ ದೇವ 1 ಭುಜಗಾಭರಣ ಅಜಸುರಾಚಿ9ತ | ತ್ರಿಶೂಲಧಾರ| ಸುಜನ ಬಂಧು ಮುಕ್ತಿದಾಯಕ || ತ್ರಿಜಗದೀಶ ತ್ರಿಪುರನಾಶ | ರಜತಶೈಲವಾಸ ಭಕ್ತ | ನಿಜಮನೋರಥಾಬ್ಧಿ ಚಂದ್ರ | ಭಜಿಸುವೆ ಚರಣಾರವಿಂದ 2 ಆದಿಮಧ್ಯಾಂತರಾತ್ಮನೆ | ಜಗನ್ನಿವಾಸ | ವೇದವೇದ್ಯ ಸುಜನಸೇವ್ಯನೆ || ಆದಿಮಾಯೆಯಾದಿಮೂಲ | ಆದಿಪುರುಷ ಶ್ರೀನಿವಾಸ | ಸಾದರದೊಳೆನ್ನ ಕಾಯ್ದು | ಮೋದದಿಂದ ಸಲಹೊ ದೇವ 3
--------------
ಸದಾನಂದರು
ಪಾಲಿಸೆನ್ನ ಶ್ರೀಲೋಲ ಕೃಪಾಳು ಪ ಬಾಲಕನುಕ್ತಿಯ ಲಾಲಿಸಿ ಕೇಳೀ ಅ.ಪ ಕಾರಾಗಾರ ಶರೀರದಾಯಗಳ ದಾರಾ[ಧಿ]ಪತ್ಯದ ದಾರಿಯನಿ[ತು]ಗಳ1 ಆರುಮಂದಿ ಬಲುಶೂರರು ಖಳರು ಚೋರರು ಚಿತ್ತವ ಹಾರಿಸುತಿಹರು 2 ತನುಸಂಬಂಧದ ಜನರರ್ಥಿಯಲಿ ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ ಈ ಪರಿಮೋಚನ ಶ್ರೀಪತಿ ಹೇಗೆ 4 ಕರುಣದಿ ಶ್ರೀಪುಲಗಿರಿಯೊಳಿರುವನೆ ಶರಣರಪೊರೆಯುವ ವರದ ವಿಠಲನೆ 5
--------------
ವೆಂಕಟವರದಾರ್ಯರು
ಪಾಲಿಸೆನ್ನ ಶ್ರೀಲೋಲ ಕೃಪಾಳೋ ಬಾಲಕನುಕ್ತಿಯ ಲಾಲಿಸಿ ಕೇಳೋ ಪ ಕಾರಾಗಾರ ಶರೀರದಯುಗಳ ದಾರಾಪತ್ಯದ ದಾರಿಯನಿಗಳ 1 ಚಿತ್ತವ ಹಾರಿಸುತಿಹರು 2 ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ | ಈ ಪರಿಮೋಚನ ಶ್ರೀಪತಿ ಹೇಗೆ 4 ಶರಣರ ಪೊರೆಯುವ ವರದವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೆನ್ನನು ಪದ್ಮಪತ್ರ ವಿಶಾಲಲೋಚನೆ ಜಾಹ್ನವಿಶೈಲಜಾತಾಭಗಿನಿಮಂಗಳೆ ಮೂಲಮಂತ್ರ ಸ್ವರೂಪಿಣಿ ಪ ಹರನ ಜಡೆಯಿಂದಿಳಿದು ಬ್ರಹ್ಮನ ಕರದ ಪಾತ್ರೆಯೊಳ್ನೆಲೆಸಿದೆಸುರರ ಸಂರಕ್ಷಿಸಲು ಭರದಿಂ ಸ್ವರ್ಗಲೋಕವ ಸಾರಿದೆಧರೆಯ ಭಾರವ ತೊಳೆಯಲಲ್ಲಿಂ ಭರದಿ ಸುರಗಿರಿಗೈದಿದೆಹರುಷದಲಿ ಹಿಮಗಿರಿಯ ಶೃಂಗದಿ ಪರಿದು ಪಾವನ ಮಾಡಿದೆ1 ವರ ಭಗೀರಥ ತರಲು ಕಾಶಿಯ ಪುರವರದಿ ನೀ ನೆಲಸಿದೆಥರಥರದ ಪ್ರಾಕಾರ ಮಣಿಗೋಪುರದ ಸಾಲೊಳಗೊಪ್ಪಿದೆನರರು ಮಾಡಿದ ಪಾಪರಾಶಿಯ ತೊಳೆದು ಪಿತೃಗಳ ಸಲಹಿದೆಹರಿಗೊಲಿದು ಮಣಿಕರ್ಣಿಕಾಖ್ಯೆಯ ಧರಿಸಿ ಜಗದೊಳು ತೋರಿದೆ 2 ಜಾಹ್ನವಿ ನಮ್ಮನುಅರ್ತಿಯಿಂ ಸಲಹೆಂಬ ಸ್ತ್ರೀಯರ ಮೊತ್ತವನು ನಾ ಕಂಡೆನು 3 ಚಾರುಮಣಿ ಕೋಟೀರಕುಂಡಲಿ ಹಾರಮಣಿಮಯ ನೂಪುರೆವೀರಮುದ್ರಿಕೆ ಕಡಗ ಕಂಕಣದಿಂದಲೊಪ್ಪುವ ಶ್ರೀಕರೆಹಾರ ಪದಕ ಸಮೂಹ ಕಾಂಚೀದಾಮ ವೈಭವ ಭಾಸುರೆಭೂರಿ ಮರಕತ ರತ್ನಮಾಲ್ಯ ಕೇಯೂರ ಭೂಷಣ ಭಾಸ್ವರೆ 4 ಆಣಿ ಮುತ್ತಿನ ಮೂಗುತಿಯು ಕಟ್ಟಾಣಿ ಗುಂಡಿನ ಸರಗಳುಮಾಣಿಕವು ಬಿಗಿದಿರ್ದ ರಾಗಟೆ ಚೌರಿ ಪೊಸ ಬಾವಲಿಗಳುಕ್ಷೋಣಿ ಗತಿಶಯವಾದ ಮುತ್ತಿನ ಮಲಕು ಮೋಹನ ಸರಗಳು ಕಲ್ಯಾಣಿ ಗಂಗಾದೇವಿಗೆಸೆದವು ಪರಿಪರಿಯ ಭೂಷಣಗಳು 5 ಕಾಲಸರಪಣಿ ಉಂಗುರವು ಅಣಿವೆಟ್ಟು ಪಿಲ್ಲಿಯ ಸಾಲ್ಗಳುಮೇಲೆನಿಪ ವೊಡ್ಯಾಣ ಕಿಂಕಿಣಿ ಗೆಜ್ಜೆಮೊಗ್ಗೆಯ ಸರಗಳುತೋಳಬಳೆ ಭುಜಕೀರ್ತಿ ಹಿಂಬಳೆ ಚಳಕೆಮಣಿದೋರೆಗಳು (?)ಮೇಲೆ ರಂಜಿಪ ನಿಮ್ಮ ನೋಡಿ ಕೃತಾರ್ಥವಾಯ್ತೀಕಂಗಳು 6 ಜಾಹ್ನವಿ ನಿರ್ಮಲೆರಂಗದುದ್ಘತರಂಗ ಶ್ರೀಕರ ಪಾವನೀಕೃತ ಭೂತಲೆಭಂಗಿತಾಮಯಸಂಘೆ ಮಂಗಲಸೂತ್ರಯುತ ಕಂಠೋಜ್ವಲೆಮಂಗಲಾತ್ಮಿಕೆ ಮಹಿತೆ ಕರುಣಾಪಾಂಗೆ ಶರದಿಂದೂಜ್ವಲೆ 7
--------------
ಕೆಳದಿ ವೆಂಕಣ್ಣ ಕವಿ
ಪಾಲಿಸೆನ್ನನು ಶ್ರೀಲಕುಮಿವರ ಭೂಲೋಲಕಾರ್ಪರ ದೊಳು ಪಿಪ್ಪಲತರು ಸುಮಂದಿರ ಪ ಬಾಲತನದಿ ಜನಕನ ಬಹು ಕೀಳುನುಡಿಗಳನು ಸಹಿಸಿದ ಬಾಲಗೊಲಿದ ನರಹರಿಯೆ ಕೃಪಾಳೊ ನಿಮ್ಮಯ ಕಾಲಿಗೆರಗುವೆ ಅ.ಪ ಸಾಲಿಗ್ರಾಮದಿ ನೆಲಸಿ ತರುವರ ಮೂಲದಿ ಸೇವಿಪರ ಪಾಲಿಸಲೋಸುಗ ನಿರಂತರ ಕಾಲಕಾಲಗಳಲ್ಲಿ ಬಿಡದೆ ವಾಲಗ ಕೈಕೊಳ್ಳುತ ಮೆರೆವ ಕಾಳಿಯಮದನನೆ ತವಪದ ಕೀಲಾಜದಲಿ ಭಕುತಿಯ 1 ಮಂದಜಾಸನಾದಿ ಸುರಗಣ ವಂದಿತ ಸುಚರಣ ದ್ವಂದ್ವ ಭಜಕ ವೃಂದಪೋಷಣ ಸಿಂಧುಶಯನವಂದಿಪೆ ಭವ ಬಂಧ ಬಿಡಿಸ್ಯಾನಂದಗರಿವ ಮಂದಿರದಲಿ ತಂದುತೋರಿಸಿ2 ನಾರದಾದಿ ಮುನಿ ಸುವರ್ಣಿತ ಉದಾರ ಚರಿತ ನಾರಾಯಣ ಮುನಿಸು ಪೂಜಿತ ಧಾರುಣಿಯೊಳು ಘೋರ ಕೃಷ್ಣಾತೀರ ಸಂಸ್ಥಿತ ಸೇರಿದ ಭಕುತರಿಗೆ ತ್ರಿದಶ ಭೂರುಹ ಸಿರಿನರಸಿಂಹನೆ 3
--------------
ಕಾರ್ಪರ ನರಹರಿದಾಸರು
ಪಾಲಿಸೆಮ್ಮನು ವೆಂಕಟೇಶಾ ನಂಬಿದೆ ನಿನ್ನ ಪಾದಾ ಸಲಹೋ ಗಿರೀಶಾ ಪಾಲಿಸು ಪನ್ನಗಾ ಚಲವಾಸಾ ಪಾಲಿಸುವ ನ್ನ ಸರ್ವೇಶಾ ಪ ಅನುದಿನ ಕೊಂಡಾಡುವೆನಾ ಪತಿತ ಪಾವನ ನೀನೇಗತಿಯೆಂದು ನಂಬಿದೆ ಸನ್ಮತಿಯ ಪಾಲಿಸು ದೇವಾ ಅಹಿಗಿರಿ ನಿಲಯಾ 1 ಕರಣಶುದ್ಧನ ಮಾಡಿ ಕರೆದುಕೋ ಯನ್ನನು ಕರುಣಾಕರ ವೆಂಕರಾಯಾ ಜೀಯಾ2 ಅಗಣಿತ ಸರಿಯಾರು ನಿನಗೇ ಮೂಲೋಕದ ದೊರೆಯೇ 3 ಕರೆಕರೆ ಸಂಸಾರದೀ ಕೊರಗುತ್ತ ಮರುಗುತ್ತಲಿಹೆ ಭರದೀ ಕಣ್ದೆರೆದು ನೋಡೆಮ್ಮನು ಕನಕಾದ್ರಿಗೊಡೆಯಾ4 ಅರ್ಥಿಯಿಂದಲಿ ನಿನ್ನ ಬಲು ಪರಿಯಿಂದಲಿ ನುತಿಪೆನಾ ಸತ್ಯ ಮೂರುತಿ ನೀನೆ ಹತ್ತಿರ ಕರೆದು ಸಲಹೋ 5 ಹಿಂದೆ ಪ್ರಹ್ಲಾದನ ನುಡಿಯಾ ಕೇಳಿ ನೀ ಕಂಬದಿಂದೊಡೆದು ಬಂದೆ ಅಂಧಕಾರದಿ ಮುಳುಗಿ ಮುಂದೆ ಕಾಣದಲಿರುವೆ ಒಡೆಯ ಇಂದಿರೆ ರೆಮಣಾ 6 ವರವ ಕೊಡುವೇ ಇಷ್ಟಾರ್ಥಗಳ ಕೊಡುವೆ ವೆಂಕಟವಿಠಲಾ 7
--------------
ರಾಧಾಬಾಯಿ
ಪಾಲಿಸೈ ವಿಶಾಲಗುಣಭರಿತ ನಿನ್ನಯ ಚರಿತ ಕಾಲಭೈರವ ನುತಿಪೆ ನಾ ಸತತ ಕಾಲಕಲ್ಪಿತ ಲೀಲೆಯರಿತು ಸು- ಶೀಲತನವನು ಮೆರೆಯಲೋಸುಗ ಸ್ಥೂಲಸೂಕ್ಷ್ಮಾಕೃತಿಯ ಧರಿಸಿದ ಮೂಲಿಕಾ ಶ್ರೀನಿವಾಸ ಭೈರವ 1 ಪರಮಪಾವನ ಕ್ಷೇತ್ರದಲ್ಲಿರುತ ಐತಂದು ಮತ್ತಾ- ವೀರ ಶ್ರೀರಾಮನ ಸೇತು ನೋಡುತ್ತ ಧರೆಯ ಸಂಚರಿಸುತ್ತ ಬರುತಿರೆ ಮಿರುಪ ಶೇಷಾಚಲ ನಿರೀಕ್ಷಿಸಿ ಭರದಿ ಗಿರಿಮೇಲಡರಿ ಶ್ರೀಶನ ಚರಣಕಾನತನಾಗಿ ಸ್ತುತಿಸಿದೆ 2 ಸುರವರೇಶನು ನಿನಗೆ ಪ್ರೀತಿಯಲಿ ಮಂತ್ರತ್ವದಲ್ಲಿ ಇರಿಸಿ ಮೆರೆಸಿದೆ ಕೀರ್ತಿಕರವಲ್ಲಿ ತ್ವರಿತದಿಂ ನೀನೆಲ್ಲ ದೇಶದ ಪರಿಪರಿಯ ಕಾಣಿಕೆಯ ತರಿಸುತ ಹರಿಯ ದರುಶನಗೈವ ಮೊದಲೆ ಹರುಷದಿಂದಲಿ ಪೂಜೆಗೊಂಬುವೆ 3 ಶರಣರನು ನೀ ಕಾಯ್ವೆ ಮಮತೆಯಲಿ ಅಲ್ಲಲ್ಲಿರುತಲಿ ಧರಿಸಿ ಮೃದುತರವಾದ ವಾಕ್ಯದಲಿ ಕರೆಸಿ ಒಬ್ಬೊಬ್ಬರ ವಿಚಾರಿಸಿ ಸರಸದಿಂದಲಿ ಪೊಗಳಿಕೊಳ್ಳುತ ನರರ್ಗೆ ಸೋಂಕಿದೆ ಭೂತಪ್ರೇತದ ಭಯಗಳನು ಪರಿಹರಿಸಿ ಪಾಲಿಪೆ 4 ಭೂತಳದೊಳಧಿಕವಾಗಿರ್ಪ ಕಾರ್ಕಳಕಧಿಪ ಖ್ಯಾತ ವೆಂಕಟಪತಿಗೆ ಸಖಿಯಷ್ಪ ಖ್ಯಾತಿಯಿಂ ದೊರೆಯಿದಿರಿನಲಿ ಸಂ- ನಿಧಿಸನ್ನುತನಾಗಿ ಮೆರೆದಿಹೆ ಓತು ಕರುಣದೊಳೊಲಿದು ಪಾಲಿಪ ದಾತ ಲಕ್ಷ್ಮೀನಾರಾಯಣಾಪ್ತನೆ 5
--------------
ತುಪಾಕಿ ವೆಂಕಟರಮಣಾಚಾರ್ಯ