ಒಟ್ಟು 2117 ಕಡೆಗಳಲ್ಲಿ , 117 ದಾಸರು , 1524 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಕೊಳಲಿಗೆ ಮೋಹಿಸಿ ನಿನ್ನ ಕೊಳಲಿಗೆಅನ್ಯ ವಿಷಯಜರಿದುಬಂದರೆ ಇನ್ನು ಯಾತಕೆ ಬಂದಿರೆÉಂದಿಪ.ಅತ್ಯಂತ ಕಾಳ ರಾತ್ರಿಯೊಳುಮತ್ತೆ ಬಂದ ಬಾಲೆಯರಿಗೆಉತ್ತಮ ಉತ್ತಮವ ನೋಡಿಮತ್ತೆ ಮನೆಗೆ ಪೋಗಿರೆಂದಿ 1ಪ್ರೀತಿ ಪತಿಗಳ ಬಿಟ್ಟು ನೀವುಯಾತಕಿಲ್ಲೆ ಬಂದಿರೆಂದಿಮಾತುಗಳನು ಆಡಿ ಪೋಗಿರಿಘಾತುಕ ಪುರುಷನಯ್ಯ ಕೃಷ್ಣ 2ಭರದಿ ಬಂದ ಬಾಲೆಯರಿಗೆತಿರುಗಿ ಪೋಗಿರೆಂದು ನುಡಿದಿಕರಗಲಿಲ್ಲ ಕಠಿಣ ಹೃದಯಕರೆವರ್ಹ್ಯಾಂಗ ಪತಿಗಳವರ 3ಜಾರರಾಜ ನಿನಗೆ ಒಂದೂತೋರದಿದ್ದ ಭಾವವೇನುಯಾರ್ಯಾರ ಅಂಜಿಕೆ ಇಲ್ಲವೆಂದುನಾರಿಯರಿಗೆ ಖಿನ್ನ ಬಡಿಸಿದೆಲ್ಲೊ 4ಇಂದುರಾಮೇಶ ಬಿಟ್ಟರೆÉ ನೀನುಹೊಂದೋದಿಲ್ಲ ಪತಿಗಳ ಘನ್ನಚಂದಾಗಿ ಬೆರಿಯೆ ಚಕೋರನ್ನಇನ್ನರೆ ರಮಿಸಿದೆಲ್ಲೊ ಚನ್ನ 5
--------------
ಗಲಗಲಿಅವ್ವನವರು
ನಿನ್ನ ಮಹಿಮೆಯನಾರು ಬಲ್ಲರುಚಿನ್ಮಯಾತ್ಮಕನಂತರೂಪನೆಮುನ್ನೆ ಕಮಲಜ ನಿನ್ನ ನಾಭಿಯೊಳುನ್ನತೋನ್ನತದಿಘನ್ನ ತಪವಂಗೈದು ಕಾಣನುಇನ್ನು ಶ್ರುತಿಸ್ಮøತಿ ಅರಸಿ ಅರಿಯವುಪನ್ನಗೇಂದ್ರನು ಪೊಗಳಲರಿಯ ಪ್ರಸನ್ವೆಂಕಟನೆ 1ಹರಿಯೆ ತ್ರಿದಶರ ದೊರೆಯೆ ಭಕುತರಸಿರಿಯೆ ದಿತಿಜರರಿಯೆಅನವರತಮರೆಯದಿಹ ಅಜಹರಯತೀಶ್ವರರರಿಯರಿನ್ನುಳಿದಇರವು ಮನುಜ ನಾನರಿಯಲಾಪೆನೆಪೊರೆಯೊ ಬಿಡದೆ ಪ್ರಸನ್ವೆಂಕಟಗಿರಿಯರಸ ಜಗದೆರೆಯ ಸುರವರವರಿಯ ಮಾಸಹನೆ 2ನಾಗರಿಪುಗಮನಾಗಭೃತಶುಭನಾಗಪಾಕ್ಷಘನಾಗಮನಿಗಮನಾಗಪತಿ ವದನೈಕಸ್ತುತ ಸುಗುಣ ಗುಣಾರ್ಣವನೆನಾಗಹರಸಖ ನಾಗಘನಮಣಿನಾಗಗ್ರಸಿತಭಾ ನಾಗದ್ವಿಟಮುಖನಾಗಧರನುತ ನಾಗಮದಹ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನಿನ್ನದೋ ನಿಖಿಲ ನಿನ್ನದೋಕುನ್ನಿ ಮನುಜರಾಧೀನೇನಿಲ್ಲ ಶ್ರೀಹರಿ ಪನೀನಿಟ್ಟ ರವಿಶಶಿಗಳುಹರಿನೀನಿಟ್ಟ ದಶದಿಕ್ಕುಗಳುಹರಿನೀನಿಟ್ಟ ಅಗ್ನಿಜ್ಯೋತಿಗಳುಹರಿನೀನಿಟ್ಟ ನದಿತಟಗಳು ಅಹನೀನಿಟ್ಟ ಚಳಿಗಾಳಿ ನೀಕೊಟ್ಟ ಮಳೆಬೆಳೆನೀನಿಟ್ಟ ಉತ್ಪತ್ತಿ ಸ್ಥಿತಿಲಯ ಸಕಲವು 1ನಿನ್ನ ಅಡಿಯೆ ಮಹಾಕ್ಷೇತ್ರಹರಿನಿನ್ನ ನುಡಿಯೆ ವೇದಮಂತ್ರಹರಿನಿನ್ನ ದೃಢವೆ ಸತ್ಯಯಾತ್ರೆಹರಿನಿನ್ನ ಬೆಡಗು ಸ್ಮ್ರತಿಶಾಸ್ತ್ರ ಅಹನಿನ್ನ ಅರಿವೆನಿತ್ಯನಿನ್ನ ಮರವೆಮಿಥ್ಯನಿನ್ನ ಕರುಣ ಎಲ್ಲ ಪ್ರಾರಬ್ಧಗಳ ಗೆಲವು 2ನಿನ್ನ ನಾಮವೆ ಕ್ಷೇಮಕವುಹರಿನಿನ್ನ ನಾಮವೆ ಭವಗೆಲವುಹರಿನಿನ್ನ ನಾಮವೆ ಚಾರುಪದವುಹರಿನಿನ್ನ ನಾಮದ ಬಲವೆ ಬಲವುಹರಿನಿನ್ನ ನಾಮ ಗಾಯತ್ರಿ ನಿನ್ನ ನಾಮತಾರಕನಿನ್ನ ನಾಮ ಭಕ್ತಿ ಯುಕ್ತಿ ಎನ್ನಯ್ಯ ಶ್ರೀರಾಮ 3
--------------
ರಾಮದಾಸರು
ನಿನ್ನಯ ಬಲವೊಂದಿದ್ದರೆ ಸಾಕಯ್ಯ ಸೀತಾನಾಥ ಮಿಕ್ಕಅನ್ಯರ ಬಲವಿನ್ನ್ಯಾಕೆ ಬೇಕಯ್ಯ ಸೀತಾನಾಥ ಪತನ್ನ ಮುಖವ ಕಂಡ ಜನರಿಂ ಕೇಳ್ವುದಕಿಂತ ಸೀತಾನಾಥತನು ಉನ್ನತವಾದಂಥ ಕನ್ನಡ್ಯೊಂದೇ ಸಾಕೊ ಸೀತಾನಾಥತನ್ನಿಷ್ಟಗರೆವಂಥ ಸುರಧೇನೊಂದೆ ಸಾಕೊ ಸೀತಾನಾಥ ಮತ್ತುಇನ್ನು ಬನ್ನಬಡುತಾನಂತಾಕಳ್ಯಾಕೊ ಸೀತಾನಾಥ 1ವರಹೆಣ್ಣು ಹೊನ್ನು ಮಣ್ಣಿನಕಿಂತ ಸೀತಾನಾಥಸ್ಥಿರ ಸ್ಮರಿಸಿದ್ದನ್ನೀವಂಥ ಸುರತರೊಂದೆ ಸಾಕೊ ಸೀತಾನಾಥಪರಮಚಿಂತಾಮಣಿಯ ಸಾಧ್ಯವೊಂದೆ ಸಾಕೊ ಸೀತಾನಾಥಪರಿಪರಿಮಂತ್ರ ತಂತ್ರದಿ ಸಿದ್ಧಿಗಳ್ಯಾಕೊ ಸೀತಾನಾಥ2ಪಾಮರ್ಹಲವು ಬಂಧುಬಳಗ ಬಲದಕಿಂತ ಸೀತಾನಾಥ ಮಹಾಸ್ವಾಮಿಪ್ರೇಮವೆಂಬ ಪರುಷವೊಂದೆ ಸಾಕೊ ಸೀತಾನಾಥಕಾಮಿಸ್ಹಲವು ದೈವ ಭಜಿಸಲಿನ್ಯಾತಕೊ ಸೀತಾನಾಥ ಶ್ರೀರಾಮ ನಿಮ್ಮಯ ನಿಜ ಧ್ಯಾನವೊಂದೆ ಬೇಕೊ ಸೀತಾನಾಥ 3
--------------
ರಾಮದಾಸರು
ನೀಚ ಮಾನವರಿಗೆಸಿರಿ ಬಂದರೇನು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಈಚಲ ಮರ ದಟ್ಟ ನೆರಳಾದರೇನು ಪ.ನಾಚಿಕಿಲ್ಲದ ನರರು ಬಾಗಿದರೇನುಹೀಚಿನೊಳಿಹ ಫಲ ಹಣ್ಣಾದರೇನು ಅಪಹೊಲೆಯರೊಳು ಪದುಮಿನಿ ಹೆಣ್ಣು ಹುಟ್ಟಿದÀರೇನುಮೊಲೆಯ ತೊರೆಯದ ನಾಯಿ ಈದರೇನುಕಳಹೀನ ಕಾಮಿನಿಗೆ ಕಾಂತಿ ಹೆಚ್ಚಿದರೇನುಬಿಲದೊಳಗೆ ಸರ್ಪ ಹೆಡೆಯೆತ್ತಿದರೇನು ? 1ಕೋತಿಯ ಮೈಯೊಳುಭಾಂಡ ತುಳಕಲೇನುಹೋತಿನ ಗಡ್ಡವು ಹಿರಿದಾದರೇನುಯಾತಕೂ ಬಾರದ ಬದುಕು ಬಾಳಿದ್ದರೇನುರೀತಿಯಿಲ್ಲದ ನೆರೆಯ ಸ್ನೇಹವಿನ್ನೇನು 2ರಕ್ಷಣೆಯಿಲ್ಲದ ರಾಜ ರಾಜಿಸಲೇನುಭಿಕ್ಷೆ ಹುಟ್ಟದ ಊರು ತುಂಬಿದ್ದರೇನುಲಕ್ಷ್ಯವಿಲ್ಲದವಗೆ ಲಕ್ಷ್ಯ ಬಂದರೇನುಪಕ್ಷಪಾತವಿಲ್ಲದವನ ಅಶ್ರಯವಿನ್ನೇನು 3ಫಣಿಯ ಮಸ್ತಕದ ಮೇಲೆ ಮಣಿಯ ಮಿಂತಲೇನುಉಣಿಸಿ ದಣಿಸದ ಧನಿಯಿದ್ದರೇನುಋಣಗೇಡಿ ಮಕ್ಕಳ ರಟ್ಟೆ ಬಲಿತರೇನುಕ್ಷಣಚಿತ್ತವಿಲ್ಲದವನ ಸ್ಮರಣೆಯು ಇನ್ನೇನು 4ಸಾಕಲಾರದಾತನ ಸತಿಯ ಮೋಹವೇನುಜೊತೆ ಮಾಡದಾ ಹಣ ಗಳಿಸದರೇನುಕಾಕುಮಾನವರ ಸೇವೆ ಮಾಡಿದರೇನುಬೇಕೆಂದು ಭಜಿಸಿರೋ ಪುರಂದರವಿಠಲನ 5
--------------
ಪುರಂದರದಾಸರು
ನೀನಲ್ಲದನ್ಯರೆ ಸಲಹಲು ಕಾಯೊ |ಜಾನಕೀಪತಿ ದೂತ ಹನುಮಂತ ಪಗುರುವೆ ನಿನ್ನಯಪಾದಭಜಿಸುವರನ್ನ |ಧರೆಯೊಳು ಬನ್ನಬಡಿಸುವೋರೆ ||ಗಿರಿಸುತ ನೀ ಗತಿಯೆನಲಾಗ ಬೇಗ |ಪೊರೆದೆಯಾತನ ಜಲಧಿಯೊಳಿಟ್ಟು1ರವಿಜಶಕ್ರಜನಿಂದ ಬಳಲುತ ಬಂದು |ಪವನ ಪಾಲಿಪುದೆನ್ನಲಾಕ್ಷಣ ||ಭುವನೇಶನಿಂದ ವಾಲಿ ಕೊಲ್ಲಿಸಿ ಕಾಳೀ |ಧವಸುಗ್ರೀವನ ಭಯ ಬಿಡಿಸಿದೆ2ತಂದೆ ಪ್ರಾಣೇಶ ವಿಠ್ಠಲನಿಗೆ ನಿನಗಂ |ದುಂಟಿಂದಿಲ್ಲೇ ಈ ಮಹಿಮೆಯು ||ಬಂದದುರಿತನಿವಾರಣ ಮಾಡಿ ದಯ-ದಿಂದ ಪಾಲಿಸೋ ನಿನ್ನ ದಾಸರ 3
--------------
ಪ್ರಾಣೇಶದಾಸರು
ನೀನೇಯೆಂದು ಮರೆ ಹೊಕ್ಕೆನೋ ರಂಗ |ದೀನ ಜನರ ಪಾಲಿಪ ದಯಾಸಾಗರ ಪಉತ್ತಮ ದ್ವಿಜರು ಮನೆಗೆ ಬರಲು |ಪ್ರತ್ಯುತ್ಥಾನವ ಕೊಡದಲೆ ಉ ||ನ್ಮತ್ತತನದಿ ಬಹು ಪಾಪವ ಗಳಿಸಿದೆ |ಚಿತ್ತಜಜನಕನೆ ದೋಷನಗ ಕುಲಿಶ 1ಪಾತ್ರರ ಸಂಗಡ ಕ್ಷೇತ್ರಗಳ |ಯಾತ್ರೆ ಚರಿಸದೆ ನಿರರ್ಥಕದಿ ||ಗಾತ್ರವ ಬೆಳಸಿದೆ ರುಕ್ಮಿಣೀವರನೆ ವಿ- |ಧಾತೃ ಕರಾರ್ಚಿತ ಕುಂದನೆಣಿಸದಿರು 2ಸ್ನಾನ ಸಂಧ್ಯಾವಂದನೆ ಬಿಟ್ಟು |ಜ್ಞಾನಿಗಳಾದವರನು ಹಳಿವೆನು ||ಧ್ಯಾನಿಪೆ ಸರ್ವದಾ ಪರರ ಕೇಡನು |ಏನೆಂಧೇಳಲಿ ಯನ್ನಯ ಅವಗುಣ 3ಮರೆತಾದರೂ ಹರಿಯೆಂದೊಮ್ಮೆ |ಸ್ಮರಿಸಿದವರ ದುರ್ಗುಣಗಳನು ||ಪೊರೆವನೆಂಬ ನಿನ ಬಿರುದುಕೇಳಿಪದ |ಸರಸಿಜಕೆರಗಿದೆ ಕರುಣಿಸೋ ಮಾಧವ 4ಪುಸಿಯಲ್ಲವೋ ಇದು ಅಜಾಮಿಳ |ಪೆಸರಾಗಿಹ ಪಾಪಿಷ್ಠರೊಳು ||ವಶ ಮೀರಿ ಸುತನ ಕರೆಯಲಾಕ್ಷಣ |ಪೋಷಿಸಿದೆ ತ್ವರದಿ ಶ್ರೀ ಪ್ರಾಣೇಶ ವಿಠ್ಠಲಾ 5
--------------
ಪ್ರಾಣೇಶದಾಸರು
ನೀಲಮೇಘಶ್ಯಾಮರಾಮನಿಖಿಳಲೋಕ ಕ್ಷೇಮಧಾಮ ಪ.ಪಾಲಿಸೊಲಿದು ಹನುಮಪ್ರೇಮಪಾವನಾತ್ಮ ಸೀತಾರಾಮ ಅ.ಪ.ಸತ್ಯಸಂಕಲ್ಪಾನುಸಾರಚಿತ್ತಚಿನ್ಮಯಾತ್ಮ ಶ್ರೀಧರನಿತ್ಯಮುಕ್ತ ಪುಣ್ಯನಾಮಪ್ರತ್ಯಗಾತ್ಮ ಪೂರ್ಣಕಾಮ 1ಕಮಲನಾಭ ರವಿಶತಾಭಸುಮನಸಾರ್ಚಿತಾಂಘ್ರಿಶೋಭಅಮಿತವಿಕ್ರಮ ಸಮರಭೀಮಶಮಲಶಮನ ಸಾರ್ವಭೌಮ 2ಶಾರದೇಂದುಸನ್ನಿಭಾನನಮಾರುತಿಹೃದಯೈಕಸದನಧೀರಲಕ್ಷ್ಮಿನಾರಾಯಣಸೂರಿಜನೋದ್ಧರಣನಿಪುಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೆಚ್ಚಿಕೆಯಿಲ್ಲದ ದೇಹ ನಂಬಬೇಡಿರೊ ಗಡಅಚ್ಯುತಾನಂತನ ಪಾದದಿಂಬು ಬೇಡಿರೊ ಪ.ದಿನಪನುದಯದಲೆದ್ದು ನಿತ್ಯಕರ್ಮವಜರಿದುದೀನ ವೃತ್ತಿಯಲಿ ಧನವನೊದಗಿಸಿದಿರೊವಿನಯವಿಲ್ಲದೆ ವೈವಸ್ವತನ ಭಟರೊಯ್ವಾಗಮನಸಿನ ಹವಣು ಸಂಗಡ ಬಾಹದೆ 1ಅರಿಯಾರು ವರ್ಗಾಳಿಗೊಳಗಾಗಿ ಸತಿಸುತರಪರಕಿಂದಧಿಕರೆಂದು ಬಗೆವರೇನೊಕರುಣವಿಲ್ಲದೆ ಯಾತನೆಗೆ ಪೊಗಿಸಿ ಬಡಿವಾಗತರುಣಿ ಸಂಪದವಾಗ ಸಹಾಯವಾಹದೆ 2ಮುನ್ನೇಸು ಜನ್ಮಗಳ ವೃಥಾ ಕಳೆದೆಯಲ್ಲದೆ ಪ್ರಸನ್ನವೆಂಕಟನ ಪದವಿಡಿಯಲಿಲ್ಲಚೆನ್ನಾಗಿ ಮರುತಮತವಿಡಿದು ನಡೆದರೆ ನಿಮ್ಮಮನ್ನಿಸಿ ಗತಿಗೊಡದಿಹನೆ ರಂಗ ನೋಡಿ 3
--------------
ಪ್ರಸನ್ನವೆಂಕಟದಾಸರು
ನೋಡುವ ಬನ್ನಿರಯ್ಯ ಪಕಾವೇರಿಯ ಭವಹಾರಿಯ |ಮುಕ್ತಿಕಾರಿಯ ನೋಡುವ ಬನ್ನಿರಯ್ಯ ಅ.ಪಮಾತೆಯ ನುತಜನಜಾತೆಯ ಹರಿಮನಃ |ಪ್ರೀತೆಯ ಭುವನವಿಖ್ಯಾತೆಯ ||ನೀತಿಯುನ್ನತಕರದಾತೆಯ ಶಿವನ ಸಂ-|ಭೂತೆಯ ನೋಡುವ ಬನ್ನಿರಯ್ಯ 1ಬಂದು ಸಕಲ ಮುನಿವೃಂದ ನೆರರೆಯೆ ವಿೂಯ-|ಲಂದು ನಾರದಮುನಿ ಪೊಗಳುತಿರೆ ||ಸಂದೇಹವಿಲ್ಲ ನೋಡಿದಡೆ ಮುಕುತಿಯಹು-|ದೆಂದರೆ ಮುಳುಗಲದೇತಕಯ್ಯ? 2ಅರ್ಕಚಂದ್ರವಹ್ನಿಪುಷ್ಕರದೊಳು ಮಿಂದು |ಚಕ್ರತೀರ್ಥದೊಳಗೋಲಾಡಿ ||ಗಕ್ಕನೆ ಸದ್ಗತಿಯಹುದೆಂದು ಮನೆಗಳ |ಕಕ್ಕುಲತೆಯ ಬಿಟ್ಟು ನಡೆಯಿರಯ್ಯ 3ಕಂಡರೆ ಸಕಲಪಾತಕಪರಿಹಾರ, ಪಡೆ-|ದುಂಡರೆ ದುರಿತ-ದುರ್ಜನ ದೂರವು ||ಕೊಂಡಾಡಿದವರಿಗನಂತ ಫಲವು ನೀ-|ರುಂಡರೆ ಭವಬಂಧ ಮೋಕ್ಷವಯ್ಯ 4ಗಂಗೆ-ಯಮುನೆಗೆ ಹೋದಡೆ ಮೂರೈದುದಿ-|ನಂಗಳಿಗಹುದು ಮುಕುತಿಯೆಂದಡೆ ||ಹಿಂಗದೆ ಕಾವೇರಿಯ ನೋಡಿದಾಕ್ಷಣ ಪಾ-|ಪಂಗಳಿರದೋಡಿ ಪೋಪುವಯ್ಯ 5ಯಾಗಾದಿ ಸ್ವರ್ಗಯೋಗದಿ ಪೊಕ್ಕು ಕಾಶಿಯೊಳು |ಆಗಲೆ ತನುವ ಬಿಡಲು ಮುಕುತಿ |ಭೋಗಿಶಯನನ ದಿನದಲಿ ಕಾವೇರಿಗೆ |ಹೋಗಿ ಮಿಂದವರಿಗಿದೇ ಗತಿಯಯ್ಯ 6ಕಾವೇರಿಯ ಗಾಳಿ ಸೋಕಿದ ದೇಶದೊ-ಳಾವಾವ ಮನುಜರು ಸುಕೃತಿಗಳೇ ||ಕಾವೇರಿಯ ತೀರವಾಸಿಗಳಿಗೆ ಮಕ್ತಿಆಹೋದು ಸಂದೇಃವಿಲ್ಲವಯ್ಯ 7ಆವಾವ ಜನ್ಮಕರ್ಮಂಗಳು ಸವೆವರೆಕಾವೇರಿಯ ಕಾಡು ಸುಖಬಾಳಿರೈ ||ಶ್ರೀವರ ಸ್ವಾಮಿ ಶ್ರೀಪುರಂದರವಿಠಲನಸೇವೆಯೊಳನುದಿನವಿಪ್ಪುದಯ್ಯ 8
--------------
ಪುರಂದರದಾಸರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದುನ್ಯಾಯದ ನುಡಿ ನರಲೀಲೆಗಿದು ಪ.ಮಾಯಾತೀತ ಮನೋಭವತಾತ ಪರಾಯಣ ತವಗುಣನಾನೆಂತರಿವೆನುಅ.ಪ.ಬಲಿಯನು ಮೆಟ್ಟಿದಬಾಂಬೊಳೆಪುಟ್ಟಿದಪಾದಶ್ರೀದಚೆಲುವೆ ರಮಾಕರನಳಿನಾಶ್ರಯಕರಮಾದಜಲಜಭವಾದಿ ಸುರಾಳಿಗಳರ್ಚಿಪಸುಲಲಿತ ತವ ಪದದೊಲವೆಂತರಿವೆನು 1ಶರಣಾಗತಜನ ದುರಿತನಿವಾರಣ ನೀನು ಇನ್ನೇನುತರುಣೀಮಣಿಯಳ ಸೆರೆಯನು ಬಿಡಿಸುವದಿನ್ನುಕರುಣಾಕರ ನಿನ್ನ ಸ್ಮರಿಸುವಳನುದಿನಸ್ಥಿರಚರಜೀವಾಂತರ ಪರಿಪೂರ್ಣನೆ2ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರಈಕ್ಷಿಸು ಕರುಣಾಕಟಾಕ್ಷದಿ ಪೂರ್ವದಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು
ಪಾರ್ವತಿ ಜಗದ್ಭರಿತೇ ಮಹೇಶ್ವರಿ |ಶರ್ವನಂಗನೆ ಖ್ಯಾತೆ ಪಸರ್ವ ಸ್ವತಂತ್ರೆಶರ್ವಾಣಿಕಾಳಾಹಿವೇಣಿ |ಸರ್ವಜನರ ಮದ | ಗರ್ವ ನಿವಾರಿಣಿ ಅ. ಪಸೃಷ್ಟಿಪಾಲಿನಿ ಗೌರೀ ಸರ್ವೇಶ್ವರಿ |ದುಷ್ಟಮರ್ದನ ಕಾರಿ |ಇಷ್ಟದಾಯಕಿಭವ| ಕಷ್ಟನಿವಾರಿಣಿಶಿಷ್ಟಪಾಲಿನಿ ಬೆಟ್ಟದ ಕಲಿಗೆ ಭವಾನಿಯೆ 1ಅಘನಾಶಿನಿ ದೇವೀ ಕಾತ್ಯಾಯಿನಿ |ಸುಗುಣರ ಸಂಜೀವಿ |ನಗೆಮೊಗವನು ತೋರಿ | ಸುಗುಣನೆಂದಿನಿಸೆನ್ನ |ಅಗಲಬೇಡವೋ ತಾಯೇ ಮುಗಿವೆನು ಕರವಾ 2ಪರಮಪಾವನೆ ನಿನ್ನಾ | ಭಕ್ತಿಯೊಳೀಗಾ |ಸ್ಮರಿಸಲರಿಯೆ ಮುನ್ನಾ |ತರಳಷಣ್ಮುಖನಂತೆ |ಪರಸಿ ರಕ್ಷಿಸೆ ಎನ್ನ | ಭರದಿ ಗೋವಿಂದನದಾಸನಿಗೊಲಿದು ||ಪಾರ್ವತಿ|| 3
--------------
ಗೋವಿಂದದಾಸ
ಪಾಲಿಸು ಪರಮೇಶಾ ಪಾಪವಿನಾಶಾಪಾಲಿಸು ಪಾರ್ವತೀಶಾಫಾಲಲೋಚನಫಣಿಭೂಷಣ ನತಜನಪಾಲನೆ ಪಾಪವಿಹಾರಣ ಕಾರಣ ಪನಿತ್ಯನಿರ್ಮಲ ಚಿತ್ತನೀಕ್ಷಿಸೋ ಎನ್ನನಿತ್ಯತೃಪ್ತನೆ ಖ್ಯಾತ ನಿತ್ಯನಂದನೆನೀಲಕಂಧರಶಶಿಧರನಿರ್ಮಲರಜತಾದ್ರಿ ನಿಲಯನೆ ವಿಲಯನೆ 1ಅಂಬಾ ವರದೇವ ಜಯ ಜಯವಿಶ್ವಕು-ಟುಂಬಿಲ ಸದ್ಭಾವಲಂಬೋದರ ಗುಹಜನಕ ಸದಾಶಿವನಂಬಿದೆ ಸಲಹೊ ಪ್ರಸೀತ ಸತ್ಪಾತ್ರ 2ಆಗಮಶ್ರುತಿಸಾರ ಭಕ್ತರಭವರೋಗಶೋಕವಿದೂರಯೋಗಿಗಳ ಹೃದಯ ಸಂಚಾರನೆ ಭವಬಂಧನೀಗಿಸು ಗೋವಿಂದ ದಾಸನ ಪೋಷನೆ 3
--------------
ಗೋವಿಂದದಾಸ
ಪಾಲಿಸು ಲೋಕಾ | ಪಾಲ ಶ್ರೀಲೋಲಾ |ಪಾಲಯಾಚ್ಯುತ ವನಮಾಲ ಗೋಪಾಲಾ ಪಅಗಣಿತಮಹಿಮಾ | ಆಶ್ರಿತದಾತಾ |ಆಘಹರನಗಧರ| ಆತ್ಮಾಭಿರಾಮಾ 1ಶಾಂತ ಸ್ವರೂಪಾ | ನಿಶ್ಚಿಂತ ನಿರಾಮಯ |ಅಂತ್ಯರಹಿತ | ರಮಾಕಾಂತ ಪ್ರಖ್ಯಾತಾ 2ನಂದನ ನಂದಾ | ನಂದ ಮುಕುಂದಾ |ಸುಂದರಮೂರ್ತಿ|ಗೋವಿಂದದಾಸನ ವಂದ್ಯ 3
--------------
ಗೋವಿಂದದಾಸ