ಒಟ್ಟು 4045 ಕಡೆಗಳಲ್ಲಿ , 127 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ
ಪ್ರಾಣ ನರಹರಿವಿಠಲ | ಪಾಲಿಸೋ ಇವನಾ ಪ ಕಾಣೆನೋ ನಿನ್ಹೊರತು | ಅನ್ಯರನು ಹರಿಯೇ ಅ.ಪ. ಮಧ್ವಮತದೀಕ್ಷೆಯಲಿ | ಶ್ರದ್ಧೆಯುಳ್ಳವನಿವನುಬುದ್ಧಿ ಪೂರ್ವಕ ಶಾಸ್ತ್ರ | ದಧ್ಯಯನದಾಶೇ |ವೃದ್ಧಿಗೈಸುತ ಅದಕೆ | ಅದ್ವಾನ ವೆಸಗುತಲಿಹದ್ದುವಹ ಪೊರೆ ಇವನ | ಮಧ್ವಾಂತರಾತ್ಮ 1 ವೇದಾಂತ ವೇದ್ಯಹರಿ | ಪಾದಭಜನೆಯ ನಿತ್ತುಮೋದಮುನಿ ಸನ್ಮತವ | ಭೋದ ಚಾತುರ್ಯಆದರಿಸಿ ಇವಗಿತ್ತು | ಸಾಧನವಗೈಸೊ ಹರಿಬಾದರಾಯಣ ದೇವ | ಪ್ರಾರ್ಥಿಸುವೆ ನಿನ್ನಾ 2 ಸರ್ವಜ್ಞ ಸರ್ವೇಶ | ಸ್ವಾತಂತ್ರ ಪುರುಷನೆಸರ್ವಾಂತರಾತ್ಮಕನೆ | ನಿರ್ವಿಕಾರಾಖ್ಯಾಅದ್ವೆತತ್ರಯದಲ್ಲಿ | ಸರ್ವ ಸಾದನವಿರುವಸದ್ವಾರ್ತೆ ತಿಳಿಸಿವಗೆ | ಶರ್ವ ಸುರವಂದ್ಯಾ 3 ಧ್ಯಾನೊ ಪಾಸನೆ ತಿಳಿಸಿ | ಮೌನಿಗಳ ಸನ್ಮಾರ್ಗಜ್ಞಾನಿಯೆಂದೆನಿಸಿವನ | ಹೇ ನಾರಸಿಂಹ |ಮಾನಾಭಿ ಮಾನಗಳ | ನಾನಾಸುದ್ವಂದ್ವಗಳಶ್ರೀನಿವಾಸನೆ ತಾಳ್ವ | ಮನಧೈರ್ಯವೀಯೋ 4 ಗುರ್ವಂತರಾತ್ಮಗುರು | ಗೋವಿಂದ ವಿಠಲನೆದರ್ವಿಜೀವಿಯ ಹೃದಯ | ಗಹ್ವರದಿ ನಿನ್ನಾ |ಚೆಲ್ವರೂಪವ ಕಂಡು | ಭವವನುತ್ತರಿಪಂಥಹವಣೆ ಒದಗಿಸೊ ಎಂದು | ಪ್ರಾರ್ಥಿಸುವೆ ದೇವಾ 5
--------------
ಗುರುಗೋವಿಂದವಿಠಲರು
ಪ್ರಾಣ ನಿನ್ನಂಘ್ರಿ ಸಿರಿರೇಣು ಕಾಣು ಯೋನಿಯಲಿ ಬಂದೆ ನೊಂದೆ ಗುರುವೆ ನೀನೆ ಗತಿಯೊ ಪ ಭರತ ಭಾರತಿರಮಣ ಭಾರತ ಪ್ರತಿಪಾದ್ಯ ಭರದಿಂದಲಿ ಎನ್ನಭಾರ ವಹಿಸುವ ಭರಣ ಭಾರದ್ವಾಜಾತ್ಮಜ ಭಾರಭಂಗಾ 1 ಗತಿ ಅಗತಿ ಗಮನಗರ್ಭ ಸ್ವರ್ಗ ನರಕ ಈ ಕ್ಷಿತಿ ಲೋಕಾಂತದಲ್ಲಿ ಬಳಲಿ ಮತಿಯ ಕಾಣದೇ ಮಂತ್ರಿ ರಾಜ ಮಹಾತತುವೇಶ ಬಲವತ್ವ್ಸರೂಪ2 ಪಂಚಾಹುತಿಯಲಿ ಹಾಕದಿರೋ ಜೀವೇಶ ಸಂಚಿತಾವಳಿ ಸರ್ವನಾಶಾ ಪಂಚದ್ವಾರದಲಿ ಶ್ರೀ ಹರಿಯ ಪೂಜಿಪ ಪುಣ್ಯ ಸಂಚಕನೆ ಪುರುಷಾಕಾರನೀಯೋ 3 ಅಪೂಪ ಬಹುರೂಪ ಹರಿಚಾಪ ಪ್ರತಾಪ ಕಪಿಕುಲಾಂಬುಜ ದಿನಪ ಸುರಪ ರಿಪು ವಿಪಿನಕಾಲ ಮಹಾ ಗುಪುತ ವ್ಯಾಪ್ತ ಸುಪ್ತಿ ಸ್ವಪನ ಜಾಗೃತಕಾರ್ಯಫಲದಾ4 ರಾಜಿಸುವ ರಾಗವಿದೂರಾ ವಾಜಿರೂಪ ವಾಶಿಷ್ಟ ವಂದ್ಯಾ ವರದಾ ಮಜ್ಜಗದ್ಗುರು ಮುಖ್ಯ ಪ್ರಾಣಾ 5 ಪೂರ್ವೋತ್ತರಂಗ ಸಂಧಿ ಸಂಧಾನ ವಿಶಿಷ್ಟಾ ಈರ್ವ ಸ್ಥಾನದಲಿ ನೀನೇ ಸರ್ವದಲಿ ಧ್ಯಾನವನು ಇತ್ತು ಪಾಲಿಸು ನಿತ್ಯ ಮೂರ್ತಿ 6 ಮಾನವ ರೂಪಾ ಮಾನಾಭಿಮಾನಿಗಳೊಡಿಯಾ ಆನಂದತೀರ್ಥಪದ ಭಕ್ತ ಅನಾಥಬಂಧು ವೈರಾಗ್ಯ 7 ಸಮಸ್ತ ಪರಮಾಣು ತಿಳಿಸೋ ಸಾಮ ಸೂರ್ಯಸ್ಥಿತನೆ ಸೂತ್ರಾ8 ಇಪ್ಪತ್ತೆರಡು ಸ್ಥಾನದಲಿ ಪ್ರಭುವೆ ಜಗ ದಪ್ಪ ಚತುರದ್ವಾರವಾಸ ಅಪ್ರತಿಮಲ್ಲ ಶ್ರೀ ವಿಜಯವಿಠ್ಠಲನ್ನ ಅಪ್ಪಿಕೊಂಡು ಮೆರೆದ ಧೀರಾ 9
--------------
ವಿಜಯದಾಸ
ಪ್ರಾಣ ಬಿಟ್ಟು ನಾನಿರಲಾರೆ ಪ ನಿನ್ನ ಪಿಡಿದು ರಘು ರನ್ನದಶಾಸ್ಯ- ನನ್ನೆ ಸವಿದು ದಾನವ ಕುಲಬೇರಾ- ವನ್ನೆ ಕಿತ್ತಿ ಜಾನಕಿಯನೆ ತಂದಾ ನಿನ್ನುಳಿದಿನ್ನುಂಟೆ ಮನ್ನಿಸಿ ಕೇಳ್ವರು ಕುನ್ನಿಯ ಮಾನವರೇನು ಬಲ್ಲರು 1 ವಿಕ್ರಮ ಭೀಮನೆನಿಸಿ ದ್ವಾಪರದಿ ದುರುಳ ಮಲ್ಲರ ಭೂ- ಚಕ್ರಕಪ್ಪಳಿಸಿ ಬಕನನ್ನೇಕ- ಚಕ್ರಾಖ್ಯನಗರದಿ ಹಿಂಡಿ ಬಿಸÀುಟೆ ಕುರು- ಚಕ್ರವರ್ತಿಯ ಕುಲವಳಿದೀ 2 ಶ್ರೀಶಾನುಜ್ಞದಿ ಧರೆಯೋಳವತರಿಸಿ ಈಶಮಧ್ವನೆಂಬಭಿದಾನವ ವಹಿಸಿ ದೋಷೆನಿತಿಲ್ಲದ ಮತವನೆ ಸೃಜಿಸಿ ಈಶ ನಿನ್ನಾಣೆ ಜಗದುದ್ಧಾರ ಮಾಡಿದಿ ದಾಸನಹುದೋ ನೀ ನರಸಿಂಹವಿಠಲನ 3
--------------
ನರಸಿಂಹವಿಠಲರು
ಪ್ರಾಣ ಸಂಕರುಷಣಭವ ಜಗತ್ರಾಣ ಮುಖ್ಯಪ್ರಾಣ ಪ ತೃಣಜೀವರಾದಿ ಜಂಗಮಜಡದೊಳು ಪೂರ್ಣನಹುದೊ ಶ್ರೀಹರಿಪ್ರೇರಣೆಯಿಂದ ಅ.ಪ ಪ್ರಾಣ ನಿನ್ನಿಂದಲೆ ಸರ್ವರತ್ರಾಣ ಪ್ರವೃತ್ತಿಯೂ ನಿನ್ನಯ ಆಣತಿಯಂತಿರ್ಪುದಯ್ಯಾ ಮುಖ್ಯ ಪ್ರಾಣನೆ ತ್ರಿವಿಧಜೀವರೊಳನವರತದಿ ನೀ ನೆಲೆಸಿ ಏನೇನು ಮಾಳ್ಪಕರ್ಮಂಗಳೆಲ್ಲವು ನಿನ್ನಿಂದೈಯ್ಯಾ ಪ್ರಾಣೋಪಾನವ್ಯಾನೋದಾನಸಮಾನರ ತ್ರಾಣ ನಿನ್ನದೊ ಮುಖ್ಯಪ್ರಾಣದೇವನೆ ಪ್ರಾಣಿಗಳಲಿ ಪಂಚಪ್ರಾಣರೂಪದಲಿಹೆ ಪ್ರಾಣಿಕಾರ್ಯಕ್ಕೆಲ್ಲ ನೀನಾಧಾರನೋ 1 ಸ್ಥೂಲಶರೀರದೊಳು ಪಾಯೂಪಸ್ಥದಿ ಸ ಕಲಮಲಗಳಾದ್ಯಪಸರಣಾದಿಗಳಿಂದ ರಕ್ಷಣೆ ಎಲ್ಲಪಾನನಿಂದಲಿ ಮಾಡಿಸಬಲ್ಲೆ ಮುಖನಾಸಿಕನೇತ್ರದಿ ಎಲ್ಲಶ್ವಾಸಾದಿಗಳಾಡಿಸಬಲ್ಲೆ ಕಾಲಕಾಲಕುಶ್ವಾಸಪ್ರಣಯದಿಂದಲಿ ಎಲ್ಲಕಾಲದೊಳು ಪ್ರಾಣನೆಂಬರೋ ಎಲ್ಲ ಜೀವರೊಳು ನಿಂತು ನಡೆವೆ ಶ್ರೀ- ನಲ್ಲನಾಜ್ಞೆಯಂತನುವರ್ತಿಸುವೆಯೊ 2 ಎಪ್ಪತ್ತೆರಡು ಸಾವಿರವಿಹ ನಾಡಿ ಒಡಗೂಡಿ ಅನುದಿನ ಇಪ್ಪ ಈ ಜಡದೇಹವನೇ ನೋಡಿ ವ್ಯಾಪಿಸಿ ವ್ಯಾನನಿಂದ ರಸಗಳಾ ನಾಡಿಗೆ ಕೊಂಡೋಡಿ ತಪ್ಪದೆ ನಾಡಿಕಾರ್ಯವನೆಲ್ಲ ಕ್ರಮದಿ ಮಾಡಿ ಒಪ್ಪೆ ಉದಾನಸುಷುಮ್ನನಾಡಿಯೊ ಒಪ್ಪಿಸುವೆ ಸುಖದುಃಖಫಲವನು ಪಾಪಪುಣ್ಯದಂತೆ ಜೀವರಿಗೆ ಲೋಕವ ಪ್ರಾಪಿಸಿಕೊಡುವಿಯೊ ಆಜ್ಞೆಯಿಂ 3 ಭುಕ್ತವಾದನ್ನವೆ ಮೊದಲಾದ್ದೆಲ್ಲ ತತ್ತಸ್ಥಳಗಳಿಗೊಯ್ವಪ್ರಯುಕ್ತ ಪ್ರಾಣಾಪಾನರಮಧ್ಯಪ್ರಾದೇಶವಾದ ನಾಡಿಯಲಿದ್ದ ಸಮಾನವಾಯುವಿಂ ಶಕ್ತಿಯಸಕಲಾವಯವಕೀವ ಶಕ್ತಿಯಿಲ್ಲದತ್ಯಲ್ಪಜೀವರಿಗೆ ಶಕ್ತಿಯಿತ್ತು ಜ್ಞಾನೇಂದ್ರಿಯ ವೃತ್ತಿಯ ವ್ಯಕ್ತಮಾಡಿ ಫಲವಿತ್ತು ಪೊರೆವೆಯೋ ಮುಕ್ತರೊಡೆಯನಿಗೆ ಅತ್ಯಂತ ಹಿತಕರ 4 ಪ್ರಾಣಾ ನೀ ಬಾಹ್ಯಾದಿತ್ಯನೊಳಿದ್ದು ಅಧ್ಯಾತ್ಮನೆನಿಸಿ ಕಣ್ಣೀನೊಳಾದಿತ್ಯನಲಿ ಬಂದು ಅಧಿಭೂತನೆನಿಸಿ ಕಣ್ಣೀನಭಿಮಾನಿಪ್ರಾಣನ ಸೇರಿ-ಅಧಿದೈವವೆಂದು ಎಣಿಪರೊ ಈ ವಿಧ ತ್ರಯಗತನೆಂದು ತೃಣ ಮೊದಲಾದ ಸರ್ವಜೀವರ ಪ್ರಾಣಪಂಚರೊಳು ಮುಖ್ಯಪ್ರಾಣನೆ ಫಣಿಗಿರೀಶ ಶ್ರೀ ವೆಂಕಟೇಶನ- ಪ್ಪಣೆಯಂತೆ ನೀ ನಿಯಾಮಕನಾಗಿಹೆ 5
--------------
ಉರಗಾದ್ರಿವಾಸವಿಠಲದಾಸರು
ಪ್ರಾಣದೇವನೆ ನಿನ್ನ ಧ್ಯಾನಿಸದೆ ಮನದಿ ಬಲು ಹೀನನಾದೆನೊ ಲೋಕದಿ ಪ ಪಾದ ಧ್ಯಾನಮಾಡುವ ಮುಖ್ಯ- ಪ್ರಾಣನೀನೆಂದು ಮನಸಾರ ಪೂಜಿಸದೆ ಶ್ರೀ ಅ.ಪ ಶರಧಿ ಬಂಧಿಸಿ ದಶಶಿರನಳಿದ ಪಾದ ಸ್ಮರಣೆ ಮಾಡುತಲಿ ನಿತ್ಯ ಧರಣಿಸುತೆಯಳ ತಂದು ಪರಮ ಸಂಭ್ರಮದಿಂದ ಮೆರೆವದೇವನ ಸ್ಮರಿಸುತ ನರರೂಪದಿಂದ ದಶರಥನ ಪುರದಲಿ ನಿಂತ ಪರಮಾತ್ಮನಿಗೆ ನಮಿಸುತ ಸುರರು ಸ್ತುತಿಸಲು ಪರಮಹರುಷದಿಂದಾಲಿಸುತ ಹರಿಯ ಮೆಚ್ಚಿಪ ನಮ್ಮ ಗುರುಪವಮಾನ ಶ್ರೀ 1 ಅಂದು ಆ ಬಕನ ಭಯದಿಂದ ಸಜ್ಜನರೆಲ್ಲ ಕುಂದಿರಲು ಭಯವ ಹರಿಸಿ ಅಂಧಕನ ಸುತನ ಬಂಧಿಸುತ ರಣದೊಳಗೆ ಯದು- ನಂದನಗೆ ಪ್ರೀತಿ ಪಡಿಸಿ ಕೊಂದು ಬಿಸುಡಲು ಜರಾಸಂಧನನು ವಸುದೇವ ಕಂದ ನೋಡುತಲಿ ಸುಖಿಸಿ ಇಂದಿರಾರಮಣ ಮುಕುಂದನನು ಪೂಜಿಸುವ ಸುಂದರ ಭೀಮ ನಿಸ್ಸೀಮನಹುದೆಂದು ಶ್ರೀ2 ಪತಿತ ಸಂಕರದಿಂದ ಮತವೆಲ್ಲ ಕೆಡಲು ಶ್ರೀ- ಪತಿಯ ಧ್ಯಾನವು ಮಾಡುತ ಯತಿ ಶಿರೋಮಣಿಯಾಗಿ ಶ್ರುತಿ ಸ್ಮøತಿಗಳಣಿ ಮಾಡಿ ಹಿತವ ಜನರಿಗೆ ತೋರುತ ಎಸೆವ ಘನಗಿರಿಯಲ್ಲಿ ಅಸದಳ ಹನುಮರೆಂ- ದೆಸೆದು ಮಿಗೆ ಶೋಭಿಸುತಲಿ ವಾರಿ ದಡದಲಿ ಕಮಲನಾಭ ವಿಠ್ಠಲನ ಸ್ಮರಿಸಿ ಧೀರ ಹನುಮಂತನಪಾರ ಮಹಿಮನೆಂದು ವನಗಿರಿಯ ಗುಹೆಗಳಲಿ ಹನುಮಂತನೆಂದೆನುತ ಎಣಿಸಲಳವಲ್ಲವೋ ಘನಪರಾಕ್ರಮಿ ಮುಖ್ಯ 3
--------------
ನಿಡಗುರುಕಿ ಜೀವೂಬಾಯಿ
ಪ್ರಾಣನಾಥನೆ ನಿನ್ನ ತುತಿಯ ಮಾಡಲು ಇನ್ನು ತ್ರಾಣ ಎನಗುಂಟೆ ಗುರುವೆ ಪ ದಾನಿ ಸಿರಪತಿಯ ಭಕುತರ ಶಿಖಾಮಣಿಯೆ ಗುಣಶ್ರೇಣಿ ಎಣೆಗಾಣೆ ಶ್ರುತಿಧಿ ಸ್ಮøತಿಧಿ ಅ.ಪ ನಿಖಿಳ ಜೀವರಿಗೆ ಮಾನಿ ಪುರುಷ ನೀ ಸಕಲ ಮಹದಾಭಿಮಾನೀ ಸುಖರೂಪ ಪುರುಷನಿಗೆ ವಾಯು ಅಗ್ನಿ ಆದಿತ್ಯ ತ್ವಕುರೂಪ ಪುತ್ರನಾದೀ ಮೋದಿ 1 ಕಮಠರೂಪದಿ ಲೋಕಕಾಧಾರ ಸಮನೋ ಆಖಣಾಶ್ಮನೆ ಸುಮನಸರನ್ನ ಪೊರೆವೆ ಬೆರೆವೆ 2 ವಾಸುದೇವವಿಠಲನ್ನ ಸಂತತವು ಶ್ವಾಸಮಂತ್ರದಿ ಸೇವನ ಲೇಸಾಗಿ ಮಾಡುವ ಜೀವರೊಳು ನೀನೇವೆ ದಾಸನ್ನ ಪೊರೆಯೊ ಧೀರ ವೀರ 3
--------------
ವ್ಯಾಸತತ್ವಜ್ಞದಾಸರು
ಪ್ರಾಣಪತಿ ಶ್ರೀನಿವಾಸ ವಿಠಲ ಪೊರೆ ಇವಳ ಪ ಆನತೇಷ್ಟ ಪ್ರದನು | ನೀನೆಂದು ಬಿನ್ನವಿಪೆಜ್ಞಾನ ಗಮ್ಯನೆ ದೇವ | ನೀನಾಗಿ ಪೊರೆಯೋ ಅ.ಪ. ಮಾನ್ಯ ಮಾನದ ಹರಿಯೆ | ಕನ್ಯೆಗಭಯದನಾಗಿಪುಣ್ಯ ಜೀವಿಯ ಸಲಹೆ | ಬಿನ್ನೈಪೆ ನಿನಗೇ |ನಿನ್ಹೊರತು ಜಗದೊಳಗೆ | ಅನ್ಯರನು ಕಾಣೆ ಕಾರುಣ್ಯ ನಿಧಿ ದಾನವಾ | ರಣ್ಯ ದಾವನಲಾ 1 ಭಾವಿಭಾರತಿ ಪತಿಯ | ಸೇವೆಯನೆ ಕೊಂಬಹಯಗ್ರೀವನೆ ನಿನ್ನ ಪದ | ತಾವರೆಯ ದಾಸ್ಯಾ |ಓದಿ ಬೇಡುತ್ತಿಹಳ | ತೀವರದಿ ಕೈ ಪಿಡಿಯೆದೇವ ನಿನ್ನಡಿಗಾನು | ಧಾವಿಸುತ ಬೇಡ್ವೇ 2 ಮಾರುತಾಂತರ್ಗತನೆ | ತಾರತಮ್ಯ ಜ್ಞಾನಮೂರೆರಡು ಭೇದಗಳ | ದಾರಿಯನೆ ತೋರೀ |ಸಾರತಮ ನೀನು ನಿ | ಸ್ಸಾರ ಜಗವೆಂತೆಂಬ ಚಾರುಮತಿಯನೆ ಇತ್ತು | ಪಾರು ಮಾಡಿವಳಾ 3 ವಿಷಯಗಳ ಅನುಭವದಿ | ಎಸೆವ ನಿನ್ನಯ ಸ್ಮರಣೆಹಸನಾಗಿ ನೀನಿತ್ತು | ಕೆಸರ ಕಳೆಯೋ |ಕುಶಲ ಕ್ಲೇಶಾದಿ ನಿ | ನ್ನೊಶವೆಂಬ ಧೃಡವಿರಲಿಬಿಸಜಾಕ್ಷ ಶ್ರೀರಾಮ | ಪ್ರಸರಿಸೋ ಜ್ಞಾನ 4 ದೇವ ದೇವೇಶ ಗುರು | ಸಾರ್ವಬೌಮರ ಪಾಲಶ್ರೀವರನೆ ಸರ್ವಜ್ಞ | ದುರ್ವಿಬಾವ್ಯಾ |ನೀವೊಲಿಯುತಿವಳಿನ್ನು | ಸಾರ್ವ ಕಾಲದಿ ಪೊರೆಯೊಗೋವಳರ ಪಾಲ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಣಪತೇ ಗುರುವರೇಣ್ಯಾಗ್ರಗಣ್ಯ ಪ ಕಾಣೇ ನಿನಗೆ ಸರಿಜಾಣರ ತ್ರಿಜಗದೊಳು ಅ.ಪ ರಾಮಕೃಷ್ಣ ವೇದವ್ಯಾಸ ನೀ ಮೂರವತಾರದಿ ಪ್ರೇಮದಿ ಮಾಡಿದೆ ನಿಷ್ಕಾಮ ಮಾರ್ಗಸ್ಥಾಪಕನೆ 1 ಧಾರಾಳವಾಗಿ ನಿಲ್ಲಿಸಿ ಕ್ರೂರರೆದೆಯವೊಡೆದೆ 2 ನಿನ್ನ ನಂಬಾದವ ಬನ್ನಬಡುವ ಭವದಿ ಚೆನ್ನಗುರುರಾಮವಿಠಲನ್ನ ಮಚ್ಚಿಸಿದೆ ಧೀರಾ 3
--------------
ಗುರುರಾಮವಿಠಲ
ಪ್ರಾಣರಾಯನೆ ನಿನಗೆಣೆಯುಂಟೆ ಪಾಲಿಪ ಕ ರುಣಾಶಾಲಿಗಳನ್ನು ಪಣೆಗಣ್ಣ ಮೊದಲಾದಮರ ಗಣದೊಳು ಇನ್ನು ನಾ ಕಾಣೆ ಮುನ್ನ ಪ ಗುಣನಿಧಿಯೆ ಎಣಿಯಿಲ್ಲ ನಿನ್ನಯ ಅಣು ಮಹಘನರೂಪ ಕ್ರಿಯಗಳು ಕ್ಷಣಬಿಡದೆ ನೀನಖಿಳಜೀವರ ತ್ರಿ- ಗುಣ ಕಾರ್ಯವ ಗೈವೆ ಮುಖ್ಯ ಅ.ಪ ಕರ್ಮ ಜೀವರೊಳು ನೀನೆಸಗಿ ತೋರ್ಪುದೆ ಧರ್ಮ ನಾನರಿಯೆ ಪ್ರತಿ ಕರ್ಮ ಎನ್ನನುಭವಕೆ ತಂದಿಡುವುದೇ ನಿನ್ನ ಧರ್ಮ ನಾ ಕಾಣೆ ಮರ್ಮ ಜನುಮ ಕೋಟಿಗಳಿಂದಲಿ ಅನುಸರಿಸಿ ಬಂದಿಹ ಎನ್ನ ಕರ್ಮವ ಅನಿಲದೇವ ನಿನ್ನಿಂದ ಅಲ್ಲದೆ ಎನಿತು ಇತರನಿಮಿಷರು ಮಾಳ್ವರು ಜ್ಞಾನದಾಯಕ ನೀನೆ ಎನ್ನಯ ಮನದಲಿಹ ಜಂಜಡವ ಕಳೆದು ಹೀನಕರ್ತನು ತಾನು ಅಲ್ಲದೆ ನೀನೆ ಸರ್ವರ ಕರ್ತನೆಂಬುವ ಜ್ಞಾನಿ ಧ್ಯಾನ ಸ್ಮರಣೆಯನು ಸಾನುರಾಗದಿ ಇತ್ತು ನಿನ್ನ ಮತಾನುಗರಲ್ಲನವರತ ಇಡು ಅನೇಕ ಜನುಮಜನುಮಾಂತರದೊಳು 1 ಶ್ವಾಸನಾಮಕ ನೀನು ಜಗದೀಶ ನೀ ಜೀ- ವೇಶ ಸರ್ವಶಕ್ತಾನು ನೀ ತಾಸಿಗೊಂಭೈನೂರು ಶ್ವಾಸಗಳನ್ನು ಈ ಶರೀರದಿ ಜೀವರಿಂ ದೆಸಗುವೆಯೊ ನೀನು ಉಸುರಲೇನಿನ್ನು ವಾಸುದೇವಗೆ ಪ್ರೀತನಾಗಿ ಅ- ಶೇಷತತ್ತ್ವಕ್ಕೀಶನಾಗಿಹೆ ವಾಸವಾದಿಗಳೆಲ್ಲರೊಳು ಇನ್ನು ಈಸುಭಾಗ್ಯವು ಕಾಣಲಿಲ್ಲ ಏಸುಕಾಲಕು ನೀನೇ ಗತಿಯೆಂದು ಈಶ ಶೇಷ ಖಗೇಶ ಪ್ರಮುಖರು ದಾಸರಾಗಿಹಗರಯ್ಯ ಬಿಡದೆ ದೇಶಕಾಲಗಳಲ್ಲಿ ನಿನ್ನೊಳು ಸೂಸುವಾ ಅತಿಭಕುತಿಯಿಂದಲಿ ಈಶ ತಪದಲಿ ನಿನ್ನ ಮೆಚ್ಚಿಸೆ ಶೇಷಪದವಿಯ ಕೊಟ್ಟು ಶ್ರೀಶ- ನ ಶಯನಸೇವೆ ಸಂಪದವನಿತ್ತೆ 2 ಭಕುತ ಜನರ ಬಂಧೂ ಶ್ರೀಹರಿಗೆ ನೀ ಪ್ರಥ- ಮಾಂಗನಹುದೆಂದೂ ಈ ಸಕಲ ಜಗದಾ ಚೇಷ್ಟಪ್ರದನೆಂತೆಂದೂ ನೀನೆ ಭಗವತ್ಕಾರ್ಯಸಾಧಕನೆಂದೂ ಸಾರುತಿದೆ ಶ್ರುತಿ ಇಂದೂ ಲೋಕಮಾತೆಗೆ ನಮಿಸಿ ದಶಶಿರ ನಂದನನ ಸಂಹರಿಸಿ ಮಹದಾನಂದ ನೀ ವನವ ಭಂಗಿಸಿ ರಘುನಂದನಗೆ ಮುದದಿಂದ ವಂದಿಸಿ ನೊಂದ ದೃ- ಪದನಂದನೇಯಳಾ- ನಂದಪಡಿಸಲು ಕೊಂದೆ ಕೌರವ ವೃಂದವೆಲ್ಲವ ಸವರಿ ನಂದನಂದನಿಗಾನಂದ ಪಡಿಸಿದೆ ಇಂದಿರೇಶ ಶ್ರೀ ವೇಂಕಟೇಶನೆ ಎಂದಿಗೂ ಪರದೈವವೆಂದು ಬಂದು ಬೋಧೆಯನಿತ್ತ ಆ- ನಂದತೀರ್ಥ ನೀ ಸಮರ್ಥಾ3
--------------
ಉರಗಾದ್ರಿವಾಸವಿಠಲದಾಸರು
ಪ್ರಾಣಲಿಂಗ ಲಕ್ಷ್ಮಣನ ಮಂಗೀಶಾ ಪುಣ್ಯ ಸ್ಥಾಣು ಸರ್ವಾತ್ಮಕ ನೀನೆ ಮಂಗೀಶಾ ಮಾಣದೆನ್ನ ಕೈಪಿಡಿದು ಮಂಗೀಶಾ ಇನ್ಯಾ ರ್ಕಾಣೆ ನಿನಗೆ ಸಮನಾಗಿ ಮಂಗೀಶಾ ಪ ಆದಿಗನಾಗಿ ಸಿದ್ಧ ಮಂಗೀಶಾ ನಿನ್ನ ಶೋಧಿಸಿ ಕಂಡವರುಂಟೆ ಮಂಗೀಶಾ ವೇದ ಉಪನಿಷದ ನೀನೇ ಮಂಗೀಶಾ ನಿನ್ನ ಪಾದವ ನೆರೆನಂಬಿರುವೆ ಮಂಗೀಶಾ 1 ರಾಮನ ವಂಶವನೊಲಿದು ಮಂಗೀಶಾ ಬಹು ಪ್ರೇಮದಿಂದ ಸಲಹಿದಯ್ಯಾ ಮಂಗೀಶಾ ನಾಮಕ್ಕೆ ಲಕ್ಷ್ಮಣ ಎನ್ನ ಮಂಗೀಶಾ ನೀನೇ ಸ್ವಾಮಿಯೆಂದು ನಂಬಿದೆನು ಮಂಗೀಶಾ 2 ನಿನ್ನ ಬಲದಿಂದ ಸರ್ವ ಮಂಗೀಶಾ ಸುಖ ವನ್ನು ಪಡೆದೆನು ನಾನು ಮಂಗೀಶಾ ಇನ್ನು ನಿನ್ನೊಳು ಕೂಡಿಸಿಕೊ ಮಂಗೀಶಾ ಮುಂದೆ ಬೆನ್ನನು ರಕ್ಷಿಸಿ ಕಾಯೋ ಮಂಗೀಶ 3 ಯಾರಿಗುಸುರಲಿ ನಾನು ಮಂಗೀಶಾ ಸರ್ವ ಭಾರಕರ್ತೃ ನೀ ಸಲಹೋ ಮಂಗೀಶಾ ದಾರಿಯ ತೋರಿಸೋ ಎನಗೆ ಮಂಗೀಶಾ ನಿನ್ನ ಸೇರಿ ಬದುಕುವೆ ನಾನು ಮಂಗೀಶಾ 4 ಏನೇನರಿಯೆನೆಲೊ ನಾನು ಮಂಗೀಶಾ ನಿನ್ನ ಧ್ಯಾನಿಸಲೊಂದೆ ಬಲ್ಲೆ ಮಂಗೀಶಾ ಹಾನಿ ವೃದ್ಧಿನಿನ್ನದು ಶ್ರೀ ಮಂಗೀಶಾ ಎನ್ನ ಮಾನಾಭಿಮಾನದ ಕರ್ತೃ ಮಂಗೀಶಾ 5 ಅರಿಕೆ ಇಲ್ಲದುಂಟೆ ನಿನಗೆ ಮಂಗೀಶಾ ದುಷ್ಟ ಅರಿಗಳ ಮಾಯಾಜಾಲವು ಮಂಗೀಶಾ ಸ್ಮರನ ದಹಿಸಿದಂತೆ ನೀನು ಮಂಗೀಶಾ ಅವರ ನುರುಹಿ ತೋರೋ ಎನ್ನೊಡೆಯ ಮಂಗೀಶಾ 6 ಬರದು ಬಿನ್ನವಿಸಿದೆ ನಾನು ಮಂಗೀಶಾ ಚಿತ್ತ ವಿರಲಿ ಅಣುಗನ ಮೇಲೆ ಮಂಗೀಶಾ ಸ್ಥಿರದಿ ಕುಶಸ್ಥಲವಾಸಿ ಮಂಗೀಶಾ ಶ್ರೀ ಗುರು ವಿಮಲಾನಂದ ಚೆಲುವ ಮಂಗೀಶಾ 7
--------------
ಭಟಕಳ ಅಪ್ಪಯ್ಯ
ಪ್ರಾಣಾಧಿಕ ಬಾ ಬಾ ನಲವಿಂ ಚಂಡಾಡುವ ಪ. ಶ್ರೀನಾಯಕ ನೀನೈತರಲಾನಾನತೆಯಾನಂದದಿಂ ಅ.ಪ. ಬಿಲ್ಲಾಳುಗಳೊಳು ಕಡುಬಿಲ್ಲಾಳು ಬಲ್ಲಿದ ನೀಂ ಫುಲ್ಲಾಸ್ತ್ರನನಲ್ಲಗಳೆಫುಲ್ಲಸುಮ ಮಾಲೆಯಾಂತು 1 ವಿಕಸಿತ ನಾನಾವಿಧ ಸುಕುಮಾರ ಪುಷ್ಪಂಗಳಿಂ ಸುಖಮೀವ ಕಂತುಕವಂ ಸುಕರದಿಂದಾಲಿಂಗಿಸಿ 2 ಶೇಷಾಚಲಧಾಮ ರಮಾವಾಸಾಶ್ರಿತಪೋಷ ಘನ
--------------
ನಂಜನಗೂಡು ತಿರುಮಲಾಂಬಾ
ಪ್ರಾಣೇಶಗೆ ಮಂಗಳಂ ಮಂಗಳ ವಾಯುಕುಮಾರನಿಗೆ ಜಯಮಂಗಳ ಅಂಗನೆ ಸುತಗೆ ಮಂಗಳ ಭುಜಗಭೂಷಣ ದೇವಗುರುವಿಗೆ ಮಂಗಳ ಭಾರತಿ ರಮಣನಿಗೆ ಪ ತ್ರೇತಾಯುಗzಲ್ಲಿ ಖ್ಯಾತರಾದ ಸುರರ ಘಾತಿಸಿ ಬಡಿದಂಥಾ ವಾತಾತ್ಮಜ ಭೂತಳದೊಳತಿ ಖ್ಯಾತಿಯ ಪಡೆದಂಥ 1 ದ್ವಾಪರದಲಿ ತಾ ಭೂಪ ಭೀಮನಾಗಿ ಗೋಪಾಲಕನ ನಿಜ ದಾಸನಾಗಿ ಪಾಪಿ ಖೂಳರ ಸಂತಾಪವ ಬಡಿಸುತ ಗೋಪಾಲಸಖನ ಪ್ರತಾಪವ ಪೊಗಳಿದಂಥ 2 ದುರುಳ ಮತಗಳೆಲ್ಲ ಮುರಿಯಲೋಸುಗ ಅವಸರದಿಂದಲಿ ಬಂದು ಕಲಿಯುಗದೀ ಶಿರಿವತ್ಸಾಂಕಿತನಿಗೆ ಪರಮಪ್ರಿಯವಾದ ವರಮಧ್ವಮತವನ್ನು ಧರೆಯೊಳು ತಂದಂಥ 3
--------------
ಸಿರಿವತ್ಸಾಂಕಿತರು